Bangalore pot holes | ರಸ್ತೆ ಗುಂಡಿ, ಅವೈಜ್ಞಾನಿಕ ಕಾಮಗಾರಿಗೆ ಮತ್ತಿಬ್ಬರು ಬಲಿ - Vistara News

ಬೆಂಗಳೂರು

Bangalore pot holes | ರಸ್ತೆ ಗುಂಡಿ, ಅವೈಜ್ಞಾನಿಕ ಕಾಮಗಾರಿಗೆ ಮತ್ತಿಬ್ಬರು ಬಲಿ

ಬೆಂಗಳೂರನ ರಸ್ತೆ ಗುಂಡಿಗಳು, ಅವೈಜ್ಞಾನಿಕ ರಸ್ತೆ ಕಾಮಗಾರಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

pot holes
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅವೈಜ್ಞಾನಿಕ ರಸ್ತೆ ಕಾಮಗಾರಿ ಹಾಗೂ ರಸ್ತೆಗುಂಡಿಗಳಿಗೆ ರಾಜಧಾನಿಯಲ್ಲಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಬಲಿಯಾಗಿದ್ದಾರೆ.

ರಸ್ತೆ ಗುಂಡಿಗಳನ್ನು ಮುಚ್ಚದೇ ಅಮಾಯಕರ ಪ್ರಾಣ ತೆಗೆಯುತ್ತಿರುವ ಬಿಬಿಎಂಪಿಯ ಉಡಾಫೆಗೆ ಆ.18ರಂದು ಸುಂಕದಕಟ್ಟೆ ಬಳಿ ನಡೆದ ಅಪಘಾತ ನಿದರ್ಶನವಾಗಿದೆ. ರಸ್ತೆ ಗುಂಡಿಗೆ ಚಕ್ರ ಇಳಿದು, ಅಪಘಾತವಾಗಿದ್ದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಾಹನ ಸವಾರ 44 ವರ್ಷದ ಸುಪ್ರೀತ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಗುಂಡಿಯಿಂದಲೇ ನಮ್ಮ ಅಣ್ಣನ ಸಾವಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು, ಇಲ್ಲದಿದ್ದರೆ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದು ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ಸುಪ್ರೀತ್ ಕುಟುಂಬದವರು ದೂರು ನೀಡಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಮಹಿಳೆಯೊಬ್ಬರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ರಸ್ತೆಗೆ ಬಲಿಯಾಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಬಳಿ ಮೆಲ್ಸೇತುವೆಯ ಇಳಿಜಾರಿನಲ್ಲಿ ನಡೆಸಿದ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದಾಗಿ ಅಪಘಾತ ಸಂಭವಿಸಿದೆ. ಆ.22ರಂದು ಗೂಡ್ಸ್ ಆಟೋಗೆ ಲಾರಿ ಗುದ್ದಿದ್ದು, ಗೂಡ್ಸ್ ಆಟೋದಲ್ಲಿದ್ದ ಮಹಿಳೆ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಪ್ರಮೀಳ‌ (42) ಎಂದು ಗುರುತಿಸಲಾಗಿದೆ. ಆಟೋದಲ್ಲಿದ್ದ ಬಾಲಕಿ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ.

ಲಾರಿ ಚಾಲಕನ ಅತಿ ವೇಗವೂ ಅಪಘಾತಕ್ಕೆ ಕಾರಣವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bike Accident | ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಿಎಂಟಿಸಿ ಬಸ್‌ ಅಡಿ ಸಿಲುಕಿ ಬೈಕ್‌ ಸವಾರ ಸ್ಥಳದಲ್ಲೇ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Dog Meat: ನಾಯಿ ಮಾಂಸದ ಗಲಾಟೆ, ಪುನೀತ್‌ ಕೆರೆಹಳ್ಳಿ ಪೊಲೀಸ್‌ ಠಾಣೆಯಲ್ಲೇ ತೀವ್ರ ಅಸ್ವಸ್ಥ

Dog Meat: ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸ ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್‌ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು. ಪೊಲೀಸರು ಮಧ್ಯಪ್ರವೇಶಿಸಿದ್ದು, ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಭದ್ರತೆಯಲ್ಲಿ ಕೋಲ್ಡ್ ಸ್ಟೋರೇಜ್‌ಗೆ ಮಾಂಸ ತುಂಬಿದ ನಾಲ್ಕು ವಾಹನಗಳು ರವಾನೆಯಾಗಿವೆ.

VISTARANEWS.COM


on

puneeth kerehalli dog meat
Koo

ಬೆಂಗಳೂರು: ಶಂಕಿತ ನಾಯಿ ಮಾಂಸದ (Dog Meat) ಪ್ರಕರಣದಲ್ಲಿ ಪೊಲೀಸರು (Bangalore Police) ವಶಕ್ಕೆ ಪಡೆದಿದ್ದ ಹಿಂದೂ ಹೋರಾಟಗಾರ (Hindu activist) ಪುನೀತ್‌ ಕೆರೆಹಳ್ಳಿ (Puneeth Kerehalli) ಪೊಲೀಸ್‌ ಠಾಣೆಯಲ್ಲಿ ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ಸೇರಿಸಲಾಗಿದೆ.

ನಿನ್ನೆ ಸಂಜೆ ಗಲಾಟೆ ನಡೆದಿದ್ದು, ಪುನೀತ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಮಧ್ಯರಾತ್ರಿಯೇ ಅಸ್ವಸ್ಥರಾಗಿದ್ದ ಪುನೀತ್‌ರನ್ನು ಆಸ್ಪತ್ರೆಗೆ ಕರೆತಂದಿರಲಿಲ್ಲ. ಬೆಳಗಿನ ಜಾವ 4:45ಕ್ಕೆ ತೀವ್ರವಾಗಿ ಅಸ್ವಸ್ಥರಾದಾಗ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಸಿ.ಜನರಲ್ ಆಸ್ಪತ್ರೆಯಲ್ಲಿ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸ ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್‌ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು. ಪೊಲೀಸರು ಮಧ್ಯಪ್ರವೇಶಿಸಿದ್ದು, ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಭದ್ರತೆಯಲ್ಲಿ ಕೋಲ್ಡ್ ಸ್ಟೋರೇಜ್‌ಗೆ ಮಾಂಸ ತುಂಬಿದ ನಾಲ್ಕು ವಾಹನಗಳು ರವಾನೆಯಾಗಿವೆ.

ಇದೇ ಸಂದರ್ಭದಲ್ಲಿ, ಬಿಎನ್ಎಸ್ 132 ಆ್ಯಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) ಹಾಗೂ 351 (2) ಸೆಕ್ಷನ್‌ ಆರೋಪದಡಿ ಕಾಟನ್ ಪೇಟೆ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು. ಠಾಣೆಯಲ್ಲಿ ಸುಸ್ತಾಗಿ ಮಲಗಿದ್ದ ಪುನೀತ್‌ನನ್ನು ಸಿಬ್ಬಂದಿಗಳು ಕೆಸಿ ಜನರಲ್‌ ಆಸ್ಪತ್ರೆಗೆ ವ್ಹೀಲ್‌ಚೇರ್‌ನಲ್ಲಿ ಕರೆದೊಯ್ದಿದ್ದು, ಈ ವೇಳೆ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ. ಬೆಳಗಿನ ಜಾವ 4.45ಕ್ಕೆ ತೀವ್ರವಾಗಿ ಅಸ್ವಸ್ಥಗೊಂಡ ಆರೋಪಿಯನ್ನು ಆತುರಾತುರದಲ್ಲಿ ಆಸ್ಪತ್ರೆಗೆ ಕರೆತಂದಿದ್ದಾರೆ.

ಇಂದು ಅಬ್ದುಲ್‌ ರಜಾಕ್‌ ವಿಚಾರಣೆ

ನಾಯಿ ಮಾಂಸ ಸಾಗಾಟ ಆರೋಪದ ಕುರಿತು ಇಂದು ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಅಬ್ದುಲ್ ರಜಾಕ್ ವಿಚಾರಣೆ ಸಾಧ್ಯತೆ ಇದೆ. ನಿನ್ನೆ ವಿಚಾರಣೆಗೆ ಹಾಜರಾಗಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದು, ಈಗಾಗಲೇ ಮಾಂಸದ ಸ್ಯಾಂಪಲ್ ಲ್ಯಾಬ್‌ಗೆ ರವಾನಿಸಲಾಗಿದೆ. ಆರೋಪ ಹಿನ್ನೆಲೆಯಲ್ಲಿ ಮೊದಲು ಯಾವ ಪ್ರಾಣಿಯ ಮಾಂಸ ಎಂಬುದು, ನಂತರ ಮಾಂಸದ ಗುಣಮಟ್ಟದ ಬಗ್ಗೆಯೂ ಪರಿಶೀಲನೆ ನಡೆಯಲಿದೆ.

ಕಾನೂನು ನಿಯಮ ಮೀರಿದ್ದರೆ ಅಬ್ದುಲ್ ರಜಾಕ್‌ಗೆ ಕಾನೂನು ಸಂಕಷ್ಟ ಎದುರಾಗಬಹುದು. ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ತನಿಖೆ ನಡೆಯಲಿದ್ದು, ಆರೋಗ್ಯ ಇಲಾಖೆಯ ಕಾನೂನು ಅಡಿ ಕೂಡ ಅರೆಸ್ಟ್ ಮಾಡಬಹುದು. ನಿಯಮ ಉಲ್ಲಂಘನೆ ಮಾಡಿದ್ದರೆ ಏಳು ವರ್ಷದವರೆಗೆ ಜೈಲು ಶಿಕ್ಷೆ ಸಾಧ್ಯತೆ ಇದೆ.

ಒಟ್ಟು 90 ಥರ್ಮಾಕೋಲ್ ಬಾಕ್ಸ್‌ಗಳನ್ನು ಸೀಜ್ ಮಾಡಲಾಗಿದೆ. ಒಂದೊಂದರಲ್ಲಿ 30ರಿಂದ 40 ಕೆಜಿ ಮಾಂಸ ತರಿಸಲಾಗಿತ್ತು. ಒಂದೊಂದು ಬಾಕ್ಸ್‌ಗಳಲ್ಲಿ ಒಂದೊಂದು ರೀತಿಯ ಮಾಂಸವಿದೆ. ಒಂದು ಬಾಕ್ಸ್‌ನಲ್ಲಿ ತಲೆ, ಮತ್ತೊಂದರಲ್ಲಿ ದೇಹ, ಒಂದೊಂದರಲ್ಲಿ ಕಾಲುಗಳು, ಹೀಗಿದೆ. ಒಟ್ಟು ನಾಲ್ಕು ಟಾಟಾ ಏಸ್‌ಗಳಲ್ಲಿ ಮಾಂಸದ ಬಾಕ್ಸ್ ತರಿಸಲಾಗಿತ್ತು. ಎಲ್ಲವನ್ನೂ ಫ್ರೀಜರ್‌ನಲ್ಲಿ ಸ್ಟೋರ್ ಮಾಡಲಾಗಿದೆ.

ಅಬ್ದುಲ್ ರಜಾಕ್ ಹೇಳಿಕೆ

ಎರಡು ದಿನಕ್ಕೆ ಒಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತದೆ. ಇವತ್ತು ಎರಡು ಸಾವಿರ ಕೆಜಿ ಮಾಂಸ ಬಂದಿದೆ. ಹನ್ನೆರಡು ವರ್ಷದಿಂದ ಈ ವ್ಯವಹಾರ ನಡೀತಿದೆ. ಯಾವುದೇ ಆಹಾರ ಇಲಾಖೆ ಬಂದು ಚೆಕ್ ಮಾಡಲಿ. ರಾಜಸ್ಥಾನದ ಕುರಿಗಳಿಗೆ ಬಾಲ ಇದೇ ರೀತಿ ಇರುತ್ತೆ. ಪುನೀತ್ ಕೆರೆಹಳ್ಳಿ ಅದನ್ನು ನಾಯಿ ಅಂತಿದ್ದಾರೆ. ಹಣ ವಸೂಲಿ ಮಾಡೋಕೆ ಈ ರೀತಿ ಮಾಡ್ತಾ ಇದಾರೆ. ನಾಳೆ ಈ ಬಗ್ಗೆ ಸುದ್ದಿಗೋಷ್ಠಿ ಮಾಡುತ್ತೇವೆ. ಈ ಬಗ್ಗೆ ಪುನೀತ್ ಕೆರೆಹಳ್ಳಿ ವಿರುದ್ಧ ದೂರು ಕೊಡುತ್ತೇವೆ ಎಂದು ಮಾಂಸ ಸಾಗಾಟಗಾರ ಅಬ್ದುಲ್‌ ರಜಾಕ್‌ ಹೇಳಿದ್ದಾರೆ.

ಇದನ್ನೂ ಓದಿ: Dog Meat: ಬೆಂಗಳೂರಿಗೆ ಬಂತು ಟನ್‌ಗಟ್ಟಲೇ ನಾಯಿ ಮಾಂಸ; ಅಬ್ದುಲ್ ರಜಾಕ್ ವಿರುದ್ಧ ಆರೋಪ!

Continue Reading

ಮಳೆ

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ವಾರಾಂತ್ಯದಲ್ಲಿ 7 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಮಧ್ಯಮದೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ (Rain News) ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲೂ ಮಳೆಯಾಗಲಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಜತೆಗೆ ಭಾರಿ ಮಳೆಯೊಂದಿಗೆ 40-50 ಕಿ.ಮೀ ಗಾಳಿಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bengaluru News: ಕನ್ನಡ-ಮಲೆಯಾಳಿ ಸಾಹಿತ್ಯ ಸಮ್ಮೇಳನ ಆಯೋಜಿಸಿ: ಸ್ಪೀಕರ್‌ ಯು.ಟಿ.ಖಾದರ್‌ ಸೂಚನೆ

Bengaluru News: ಕನ್ನಡ ಕಲಿಕಾ ತರಗತಿಗಳಲ್ಲಿ ಕನ್ನಡ ಕಲಿತ ಮಲೆಯಾಳಿ ಭಾಷಿಕರಿಗಾಗಿ ಹಾಗೂ ಕೇರಳದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.

VISTARANEWS.COM


on

Inauguration of Kannada learning classes for Malayali speakers
Koo

ಬೆಂಗಳೂರು: ಕನ್ನಡ ಕಲಿಕಾ ತರಗತಿಗಳಲ್ಲಿ ಕನ್ನಡ ಕಲಿತ ಮಲೆಯಾಳಿ ಭಾಷಿಕರಿಗಾಗಿ ಹಾಗೂ ಕೇರಳದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ (Bengaluru News) ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಲೆಯಾಳಿ ಭಾಷಿಕರಿಗೆ ಕನ್ನಡ ಕಲಿಕಾ ತರಗತಿಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ. ಹೆಚ್ಚು ಭಾಷೆಯನ್ನು ಕಲಿಯುವವರು ಹೆಚ್ಚು ಸಾಧನೆ, ಯಶಸ್ಸು ಪಡೆಯುತ್ತಾರೆ. ನಾವು ಬೇರೆ ರಾಜ್ಯಗಳಿಗೆ ಹೋದಾಗ ಅಲ್ಲಿನ ಭಾಷೆಗೆ ಗೌರವ ಕೊಟ್ಟು ಭಾಷೆ ಕಲಿಯಲು ಮುಂದಾಗಬೇಕು. ಕರ್ನಾಟಕ ರಾಜ್ಯದಲ್ಲಿರುವ ಮಲೆಯಾಳಿ ಭಾಷಿಕರು ಕನ್ನಡ ಭಾಷೆ ಕಲಿಯುತ್ತಿರುವುದು ನಿಮ್ಮ ವ್ಯಕ್ತಿತ್ವ, ಆತ್ಮ ವಿಶ್ವಾಸ ಹೆಚ್ಚಿಸುವ ಜತೆಗೆ ಕರ್ನಾಟಕ ರಾಜ್ಯಕ್ಕೆ ಕೊಡುಗೆ ನೀಡಲು ಮುಂದಾಗಿರುವುದು ಸಂತೋಷದ ವಿಷಯ ಎಂದು ಹೇಳಿದರು.

ಇದನ್ನೂ ಓದಿ: Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

ಮಲೆಯಾಳಿ ಭಾಷಿಕರಿಗೆ ಕನ್ನಡ ಕಲಿಸುವ ಕೆಲಸ ಇಲ್ಲಿಗೆ ನಿಲ್ಲಬಾರದು. ಈ ಯೋಜನೆ ಹೆಚ್ಚು ವಿಸ್ತೃತವಾಗಿ ಪ್ರತಿ ಜಿಲ್ಲೆಗಳಲ್ಲಿರುವ ಅನ್ಯಭಾಷಿಕರಿಗೆ ಕನ್ನಡ ಕಲಿಸುವ ಕೆಲಸ ಪ್ರಾಧಿಕಾರದಿಂದ ಆಗಬೇಕು. ಪ್ರಾಧಿಕಾರದಿಂದ ಆಯೋಜಿಸಿದ್ದ ಕನ್ನಡ ಕಲಿಕಾ ತರಗತಿಗಳಲ್ಲಿ ಕನ್ನಡ ಕಲಿತ ಮಲೆಯಾಳಿ ಭಾಷಿಕರಿಗಾಗಿ ಹಾಗೂ ಕೇರಳದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ಎಸ್. ತಂಗಡಗಿ ಮಾತನಾಡಿ, ಜೀವನ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಭಾಷೆ ತುಂಬಾ ಪ್ರಮುಖವಾದುದು. ಹೆಚ್ಚು ಭಾಷೆ ಕಲಿತಷ್ಟು ವ್ಯಕ್ತಿತ್ವ ವಿಕಾಸನ ಆಗುವುದರೊಂದಿಗೆ ನಮ್ಮಲ್ಲಿನ ಜ್ಞಾನವೂ ಹೆಚ್ಚಾಗುತ್ತದೆ.

ಬೇರೆ ಬೇರೆ ಭಾಷೆಗಳಲ್ಲಿರುವ ಒಳ್ಳೆಯ ವಿಚಾರಗಳು ಕನ್ನಡಿಗರಿಗೆ ಪರಿಚಯವಾಗಬೇಕೆಂಬ ಉದ್ದೇಶದಿಂದ ಹಲವು ಪುಸ್ತಕಗಳನ್ನು ಅನುವಾದ ಮಾಡಿಸಲಾಗಿದೆ. ಕನ್ನಡ ಭಾಷೆಯಿಂದ ಮಲೆಯಾಳಿ ಭಾಷೆಗೆ ಮಲೆಯಾಳಿ ಭಾಷೆಯಿಂದ ಕನ್ನಡ ಭಾಷೆಗೆ ಹೆಚ್ಚೆಚ್ಚು ಕೃತಿಗಳು ಅನುವಾದವಾಗಬೇಕು. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕರಾದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮಾತನಾಡಿ, ಭಾರತದ ಒಕ್ಕೂಟ ವ್ಯವಸ್ಥೆ ಬಹಳ ಬಲಿಷ್ಠವಾಗಿ ಉಳಿಯಲು ರಾಜ್ಯಗಳ ಭಾಷೆಗಳು ಪ್ರಮುಖವಾದುದು. ಭಾಷೆ ದುರ್ಬಲವಾದರೆ ದೇಶದ ಒಕ್ಕೂಟ ವ್ಯವಸ್ಥೆ ದುರ್ಬಲವಾಗುತ್ತದೆ. 2011ರ ಜನಗಣತಿ ಪ್ರಕಾರ ಭಾರತದಲ್ಲಿ 19,509 ತಾಯ್ನುಡಿಗಳಿವೆ. ರಾಜ್ಯದಲ್ಲಿ 230ಕ್ಕೂ ಹೆಚ್ಚು ಭಾಷೆಗಳಿವೆ. ನಾವು ಎಲ್ಲರೂ ಸೇರಿ ರಾಜ್ಯ ಭಾಷೆಯನ್ನು ಬೆಳೆಸಬೇಕು ಅದರ ಜತೆಗೆ ಸಣ್ಣ ಭಾಷೆಗಳನ್ನು ಬೆಳೆಸಬೇಕು ಎಂದರು.

ಇದನ್ನೂ ಓದಿ: Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸುಧಾಕರನ್ ರಾಮಂತಳ್ಳಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ ಮತ್ತು ಮಲೆಯಾಳಂ ಮಿಷನ್ ಕೇರಳ ಸರ್ಕಾರ ಮತ್ತು ಕನ್ನಡ ಕಲಿಕಾ ಯೋಜನೆ ಸಂಚಾಲಕ ಟಾಮಿ ಜೆ. ಅಲುಂಕಲ್ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Dog Meat: ಬೆಂಗಳೂರಿಗೆ ಬಂತು ಟನ್‌ಗಟ್ಟಲೇ ನಾಯಿ ಮಾಂಸ; ಅಬ್ದುಲ್ ರಜಾಕ್ ವಿರುದ್ಧ ಆರೋಪ!

Dog Meat: ಬೆಂಗಳೂರಿನಲ್ಲಿ ನಾಯಿ ಮಾಂಸದ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಹೊರ ರಾಜ್ಯಗಳಿಂದ ಪ್ರತಿ ದಿನ ಬೆಂಗಳೂರಿಗೆ ನಾಯಿ ಮಾಂಸ ಬರುತ್ತಿದೆ ಎನ್ನಲಾಗಿದ್ದು, ಸಾವಿರಾರು ಕೆಜಿ ಶಂಕಿತ ನಾಯಿ ಮಾಂಸವನ್ನು ಮೆಜೆಸ್ಟಿಕ್‌ನಲ್ಲಿ ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Dog meat
Koo

ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆಗುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ನಗರದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಕೆಜಿ ಶಂಕಿತ ನಾಯಿ ಮಾಂಸವನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರ ಜಾಗೃತಿ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಹಲವು ಹಿಂದು ಕಾರ್ಯಕರ್ತರು ದಾಳಿ ನಡೆಸಿದ ವೇಳೆ ಮಾಂಸದ ಪಾರ್ಸೆಲ್‌ಗಳಲ್ಲಿ ನಾಯಿ ಮಾಂಸ (Dog Meat) ಕಂಡುಬಂದಿದೆ. ಇದರಿಂದ ಸ್ಥಳದಲ್ಲಿ‌ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ಮುಸ್ಲಿಂ ಮುಖಂಡ ಅಬ್ದುಲ್‌ ರಜಾಕ್‌ ಎಂಬುವವರಿಂದ ನಾಯಿ ಮಾಂಸ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಈ ಆರೋಪಗಳನ್ನು ಅಬ್ದುಲ್‌ ರಜಾಕ್‌ ಅಲ್ಲಗಳೆದಿದ್ದಾರೆ. ನಾಯಿ ಮಾಂಸದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿಂದು ಸಂಘಟನೆಗಳು ದಾಳಿ ಮಾಡಿದ್ದು, ಈ ವೇಳೆ ಸಾವಿರಾರು ಕೆ.ಜಿ ಮಾಂಸ ಪತ್ತೆಯಾಗಿದೆ. ಆದರೆ, ಎರಡು ದಿನಕ್ಕೊಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತದೆ. ಇವತ್ತು ಎರಡು ಸಾವಿರ ಕೆಜಿ ಮಾಂಸ ಬಂದಿದೆ. ಹನ್ನೆರಡು ವರ್ಷದಿಂದ ಈ ವ್ಯವಹಾರ ನಡೆಯುತ್ತಿದೆ. ಆಹಾರ ಇಲಾಖೆ ಅಧಿಕಾರಿಗಳು ಬೇಕಿದ್ದರೆ ಬಂದು ಚೆಕ್ ಮಾಡಲಿ ಎಂದು ಅಬ್ದುಲ್‌ ರಜಾಕ್‌ ಹೇಳಿದ್ದಾರೆ.

ಮಾಂಸದ ಪಾರ್ಸೆಲ್‌ಗಳಲ್ಲಿ ಪ್ರಾಣಿಯ ಬಾಲ ಉದ್ದವಾಗಿರೋದು ಕಂಡುಬಂದಿದ್ದರಿಂದ, ಕುರಿ ಬಾಲ ಈ ರೀತಿ ಇರುತ್ತದಾ ಎಂದು ಹಿಂದು ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಈ ವೇಳೆ ರಾಜಸ್ಥಾನ ಕುರಿಗಳಿಗೆ ಇದೇ ರೀತಿ ಬಾಲ ಉದ್ದವಾಗಿರುತ್ತೆ, ಅದನ್ನು ನಾಯಿ ಎನ್ನುತ್ತಿದ್ದಾರೆ ಎಂದು ಮುಸ್ಲಿಂ ಮುಖಂಡ ಹೇಳಿದ್ದಾರೆ.

ಪುನೀತ್ ಕೆರೆಹಳ್ಳಿ ಹಣ ವಸೂಲಿ ಮಾಡಲು ಈ ರೀತಿ ಮಾಡುತ್ತಿದ್ದಾರೆ. ನಾಳೆ ಈ ಬಗ್ಗೆ ಸುದ್ದಿಗೋಷ್ಠಿ ಮಾಡುತ್ತೇವೆ. ಅವರ ವಿರುದ್ಧ ದೂರು ನೀಡುತ್ತೇವೆ ಎಂದು ಅಬ್ದುಲ್‌ ರಜಾಕ್‌ ತಿಳಿಸಿದ್ದಾರೆ.

ಆಹಾರ ಸುರಕ್ಷತಾ ಅಧಿಕಾರಿಗಳ ಪರಿಶೀಲನೆ

ಸ್ಥಳಕ್ಕೆ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. 5 ಬಾಕ್ಸ್‌ಗಳಲ್ಲಿ ಇದ್ದ ಕುರಿ ಮಾಂಸದ ಸ್ಯಾಂಪಲ್ ತೆಗೆದುಕೊಂಡಿದ್ದೇವೆ. ಮೇಲ್ನೋಟಕ್ಕೆ ಇದು ಕಳಪೆಯಾಗಿ ತೋರುತ್ತಿದೆ. ಇದನ್ನು ನಾವು ಪ್ರಯೋಗಾಲಯಕ್ಕೆ ಕಳುಹಿಸಿಕೊಡುತ್ತೇವೆ. 14 ದಿನದ ಬಳಿಕ ರಿಪೋರ್ಟ್ ಸಿಗುತ್ತದೆ ಎಂದು ಅಧಿಕಾರಿ ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಹೋಟೆಲ್‌ಗಳಿಗೆ 700-800 ರೂಪಾಯಿಗೆ ಮಾರಾಟ

ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಮೂಲಕ ನಾಯಿ ಮಾಂಸ, ನಗರದ ವಿವಿಧ ಹೋಟೆಲ್‌ಗಳಿಗೆ ಸರಬರಾಜು ಆಗುತ್ತಿದೆ. ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಪ್ಲೈ ಆಗುತ್ತಿದೆ ಎನ್ನಲಾಗಿದೆ. ರಾಜಸ್ಥಾನದಿಂದ ಕುರಿ ಮಾಂಸ ಅಂತ ಹೇಳಿ ನಾಯಿ ಮಾಂಸವನ್ನು ತರಿಸಿ ಇಲ್ಲಿನ ಹೋಟೆಲ್‌ಗಳಿಗೆ 700-800 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಇದು ಒಂದು ದೊಡ್ಡ ದಂಧೆ ಆಗಿದ್ದು, ಅಧಿಕಾರಿಗಳು, ಸಚಿವ ಜಮೀರ್ ಅಹ್ಮದ್ ಎಲ್ಲರೂ ಭಾಗಿ ಆಗಿದ್ದಾರೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿದ್ದಾರೆ.

ಮತ್ತೊಂದೆಡೆ ಕಳೆದೊಂದು ವರ್ಷದಿಂದ 700 ರೂ.ಗಳಿಗಿಂತ ಹೆಚ್ಚಿನ ದರಕ್ಕೆ ಕುರಿ ಹಾಗೂ ಮೇಕೆಯ ಮಟನ್ ಮಾಂಸ ಮಾರಾಟವಾಗುತ್ತಿದೆ. ಆದರೆ, ಬೆಂಗಳೂರಿನ ಶಿವಾಜಿನಗರ ಸೇರಿ ಕಡೆ ಕೆಲ ವ್ಯಾಪಾರಿಗಳು ಪ್ರತಿ ಕೆ.ಜಿ. ಮಾಂಸವನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟು ಕಡಿಮೆ ದರಕ್ಕೆ ಮಾಂಸ ಹೇಗೆ ಸಿಗುತ್ತೆ ಎಂದು ಅನುಮಾನಗೊಂಡ ಮುಸ್ಲಿಂ ವ್ಯಾಪಾರಿಗಳೇ ಅಧಿಕಾರಿಗಳಿಗೆ ದೂರು ನೀಡಿದ್ದರು ಎನ್ನಲಾಗುತ್ತಿದೆ. ಹೀಗಾಗಿ ಕಡಿಮೆ ದರಕ್ಕೆ ನಾಯಿ ಮಾಂಸ ತರಿಸಿಕೊಂಡು ಹೆಚ್ಚಿನ ದರಕ್ಕೆ ಕುರಿ ಮಾಂಸವೆಂದು ಮಾರಾಟ ಮಾಡಲಾಗುತ್ತಿದೆ ಎಂಬ ಅನುಮಾನಗಳು ವ್ಯಕ್ತವಾಗಿವೆ.

ಫಿಶ್ ಎಂದು ಸ್ಟಿಕ್ಕರ್ ಹಾಕಿಕೊಂಡು ಏನು ಪ್ಯಾಕ್ ಮಾಡಿದ್ದಾರೋ ನೋಡಿ, ಕುರಿಯ ಬಾಲ ಇಷ್ಟು ಉದ್ದ ಇರುತ್ತಾ? ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ಎಲ್ಲ ಮಾಂಸ ಆಹಾರ ಗುಣಮಟ್ಟ ಚೆಕ್ ಮಾಡಬೇಕು ಎಂದು ಹಿಂದುಪರ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ವೇಳೆ ಪುನೀತ್‌ ಕೆರೆಹಳ್ಳಿ ಸೇರಿ ಹಲವು ಕಾರ್ಯಕರ್ತರನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದಾರೆ.

Continue Reading
Advertisement
puneeth kerehalli dog meat
ಕ್ರೈಂ3 mins ago

Dog Meat: ನಾಯಿ ಮಾಂಸದ ಗಲಾಟೆ, ಪುನೀತ್‌ ಕೆರೆಹಳ್ಳಿ ಪೊಲೀಸ್‌ ಠಾಣೆಯಲ್ಲೇ ತೀವ್ರ ಅಸ್ವಸ್ಥ

Family Drama Film Review
ಸಿನಿಮಾ16 mins ago

Family Drama Film Review: ಹೊಸ ಅನುಭವ ನೀಡುವ ಫ್ಯಾಮಿಲಿ ಡ್ರಾಮಾ

Michel Phelps ರಾಜಮಾರ್ಗ ಅಂಕಣ
ಅಂಕಣ40 mins ago

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Aadhaar Update
ವಾಣಿಜ್ಯ53 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ1 hour ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ2 hours ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ2 hours ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ2 hours ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ2 hours ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ13 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ14 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ15 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ16 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌