Basavaraj Bommai : ಜನರು ಜಾಗೃತರಾಗಿದ್ದಾರೆ; ಉಚಿತ ಕೊಡುಗೆಗಳನ್ನು ಯಾರೂ ನಂಬುವುದಿಲ್ಲ: ಕಾಂಗ್ರೆಸ್‌ ಘೋಷಣೆಗೆ ಸಿಎಂ ಬೊಮ್ಮಾಯಿ ಟೀಕೆ - Vistara News

ಪ್ರಮುಖ ಸುದ್ದಿ

Basavaraj Bommai : ಜನರು ಜಾಗೃತರಾಗಿದ್ದಾರೆ; ಉಚಿತ ಕೊಡುಗೆಗಳನ್ನು ಯಾರೂ ನಂಬುವುದಿಲ್ಲ: ಕಾಂಗ್ರೆಸ್‌ ಘೋಷಣೆಗೆ ಸಿಎಂ ಬೊಮ್ಮಾಯಿ ಟೀಕೆ

ಸಚಿವ ವಿ. ಸೋಮಣ್ಣ ಅವರು ಹಾಗೂ ಯಲಹಂಕ ಶಾಸಕ ಎಸ್‌.ಆರ್.‌ ವಿಶ್ವನಾಥ ಅವರು ಜನೋಪಯೋಗಿ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಶ್ಲಾಘಿಸಿದರು.

VISTARANEWS.COM


on

basavaraj-bommai-inaugurates residential sceme in yelahanka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಲ್ಲರನ್ನೂ ಎಲ್ಲ ಸಮಯದಲ್ಲೂ ಮೋಸ ಮಾಡಲು ಸಾಧ್ಯವಿಲ್ಲ. ಉಚಿತವಾಗಿ ನೀಡುತ್ತೇವೆ ಎಂದು ಹೇಳಿದರೆ ಜನರು ನಂಬುವುದಿಲ್ಲ ಎಂದು ಕಾಂಗ್ರೆಸ್‌ ಇತ್ತೀಚೆಗೆ ಮಾಡಿರುವ ಘೋಷಣೆಗಳ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪರೋಕ್ಷ ಟೀಕೆ ಮಾಡಿದ್ದಾರೆ.

ಯಲಹಂಕ ತಾಲ್ಲೂಕಿನ ಅಗ್ರಹಾರಪಾಳ್ಯದಲ್ಲಿ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ ಲೋಕಾರ್ಪಣೆ ಮತ್ತು ವಸತಿಗಳ ಹಸ್ತಾಂತರ ಮಾಡಿ ಮಾತನಾಡಿದರು.

ಬರುವ ದಿನಗಳಲ್ಲಿ ರಾಜ್ಯದಲ್ಲಿ ಮನೆ ಕಟ್ಟುವುದು ಕಷ್ಟವಾಗಲಿದೆ. ಕಂದಾಯ ಕಾಯ್ದೆಯಲ್ಲಿ ಮನೆ ಕಟ್ಟಲು ನಿರ್ದಿಷ್ಟ ರಿಯಾಯಿತಿಗಳಿಲ್ಲ. ಭೂಮಿ ಬೆಲೆ ಹೆಚ್ಚಾಗಲು ಬೇಡಿಕೆ ಹೆಚ್ಚಾಗಿದೆ ಮತ್ತು ನಾವು ಮಾಡಿರುವ ಕಾನೂನುಗಳಿಂದ ಸಾಮಾನ್ಯ ಜನರು ನಿವೇಶನ ಖರೀದಿ ಮಾಡುವ ಪರಿಸ್ಥಿತಿಯಲ್ಲಿಲ್ಲ. ಹೀಗಾಗಿ ಮನೆ ಕಟ್ಟಲು ಅವಕಾಶ ಸಿಗುವಂತೆ ಕಾನೂನಿಗೆ ತಿದ್ದುಪಡಿ ತಂದು, ನಿರ್ಬಂಧಗಳನ್ನು ದೂರಮಾಡಿ ನೇರವಾಗಿ ಕೈಗೆಟುಕುವ ಬೆಲೆಯಲ್ಲಿ ಜಮೀನು ದೊರೆಯುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ವಸತಿಗಾಗಿಯೇ ಜಮೀನು ಪಡೆಯಲು, ಮನೆ ಕಟ್ಟಲು ಎಲ್ಲಾ ಕಾನೂನನ್ನು ಸರಳೀಕರಣ ಮಾಡಲಾಗುವುದು.‌ ಹಾಗಾದಾಗ ಬಡವರಿಗೆ ಮನೆ ಹಾಗೂ ನಿವೇಶನ ನೀಡಬಹುದು ಎಂದರು.

3 ಲಕ್ಷಕ್ಕಿಂತ ಹೆಚ್ಚು ನಿವೇಶನಗಳನ್ನು ಸೋಮ್ಮಣ್ಣ ಅವರು ರಾಜ್ಯದಲ್ಲಿ ನೀಡಿರುವುದು ದಾಖಲೆ. ಪ್ರಗತಿಪರ ಚಿಂತನೆ ಮಾಡಿದಾಗ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ನಮ್ಮ ಸರ್ಕಾರ ಸಮಸ್ಯೆಯನ್ನು ಬಿಟ್ಟು ಹೋಗುವುದಿಲ್ಲ‌ , ಪರಿಹಾರ ಕೊಟ್ಟು ಜನರಿಗೆ ಎಲ್ಲಾ ರೀತಿಯ ಸೌಲಭ್ಯ ನೀಡುವ ಕೆಲಸ ಮಾಡಲಿದೆ. ತಾನು ಹಾಗೂ ತನ್ನ ಕುಟುಂಬ ಒಂದು ಸೂರಿನಡಿ ಗೌರವದಿಂದ ಬದುಕಬೇಕೆನ್ನುವುದು ಪ್ರತಿ ಮನುಷ್ಯನ ಆಸೆ. ಮನುಷ್ಯ ಮಾತ್ರವಲ್ಲದೇ ಪಕ್ಷಿಗಳು ಒಂದು ಗೂಡು ಕಟ್ಟಿ, ಸಂಸಾರ ಮಾಡುವುದು ಕಾಣುತ್ತೇವೆ. ಪಕ್ಷಿಗಳಿಗೆ ಇರುವ ಸೌಭಾಗ್ಯ ಮನುಷ್ಯರಿಗೂ ಇರಬೇಕು.
ಬೃಹತ್ ಪ್ರಮಾಣದಲ್ಲಿ ಬೆಳೆಯುತ್ತಿರುವ ನಾಗರಿಕತೆಯಲ್ಲಿ ಬಡವರಿಗೆ ಪುಟ್ಟ ಮನೆ ಕಟ್ಟಿ ಕೊಡುವ ಅವಕಾಶವನ್ನು ಸಮಾಜ ದೊಡ್ಡ ಪ್ರಮಾಣದಲ್ಲಿ ಮಾಡಬೇಕು. ಸರ್ಕಾರ ಈ ಕೆಲಸ ಮಾಡಬೇಕು ಎಂದರು.

ನಾವು ಜನರಿಗೆ ಏನು ಮಾಡಲು ಸಾಧ್ಯವಿದೆ ಎಂಬ ಸತ್ಯವನ್ನು ಹೇಳಬೇಕು. ಜನರನ್ನು ಭ್ರಮಾಲೋಕದಲ್ಲಿಡುವ ಪ್ರಯತ್ನ ಈಗಲೂ ನಡೆಯುತ್ತಿದೆ. ಆದರೆ, ಜನಪ್ರತಿನಿಧಿಗಳು ಜನರು ಬುದ್ದಿವಂತರಿದ್ದಾರೆ, ಜಾಗೃತರಾಗಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು. ಸುಳ್ಳು ಭರವಸೆ ಕೊಟ್ಟು ಜನರನ್ನು ದಾರಿ‌ತಪ್ಪಿಸುವ ಕೆಲಸ ಮಾಡಬಾರದು. ಎಲ್ಲಾ ಸಮಯದಲ್ಲಿ ಎಲ್ಲರನ್ನೂ ಮೋಸ ಮಾಡಲು ಸಾಧ್ಯವಿಲ್ಲ ಎಂದು ಅರ್ಥಮಾಡಿಕೊಳ್ಳಬೇಕು. ಎಲ್ಲಾ ಉಚಿತವಾಗಿ ನ್ಯೂಡುತ್ತೇವದ್ ಎಂದರೆ ಯಾರೂ ನಂಬುವುದಿಲ್ಲ. ಜನರ ತೆರಿಗೆಯ ಮೂಲಕ ಬರುವ ಹಣವನ್ನು ಎಲ್ಲಿ ಉಪಯೋಗಿಸಬೇಕು, ದೀನದಲಿತರಿಗೆ ವಿಶೇಷವಾಗಿರುವ ಕಾರ್ಯಕ್ರಮ ರೂಪಿಸಬೇಕು. ಜನಪ್ರಿಯತೆಗಾಗಿ, ಅಧಿಕಾರಕ್ಕೆ ಬರಬೇಕೆಂದು ಹತಾಶರಾಗಿ ಇಡೀ ವ್ಯವಸ್ಥೆಯನ್ನು ನಾವು ಕೆಡಿಸುವ ಲೆಕ್ಕದಲ್ಲಿ ಜವಾಬ್ದಾರಿ ಇದ್ದವರು ಮಾತನಾಡಬಾರದು. ಜನರು ಎಲ್ಲವನ್ನೂ ಅರ್ಥಮಾಡಿಕೊಳ್ಳುತ್ತಾರೆ ಎಂದರು.

5 ಲಕ್ಷ ಮನೆಗಳು ಅಂತಿಮ ಹಂತದಲ್ಲಿ
ಘೋಷಣೆಗಳು ಬಹಳಷ್ಟು ಆಗುತ್ತವೆ‌. ಅದಕ್ಕೆ ಹಣ ಮೀಸಲಿಡಬೇಕು. ಆರು ವರ್ಷಗಳ ಹಿಂದೆ 15 ಲಕ್ಷ ಮನೆ ಕಟ್ಟುವುದಾಗಿ ಘೋಷಣೆಯಾಯಿತು. ಹಿಂದಿನ ಸರ್ಕಾರ ಚುನಾವಣೆ ಸಂದರ್ಭದಲ್ಲಿ 15 ಲಕ್ಷ ಮನೆ ಘೋಷಣೆ ಮಾಡಿದರು. ಅದಕ್ಕೆ ಹಣ ಮೀಸಲಿಡದೇ ಹೋದರು‌. 15 ಸಾವಿರ ಕೋಟಿ ರೂ. ಅಗತ್ಯವಿದ್ದರೆ, 3 ಸಾವಿರ ಕೋಟಿ ಮೀಸಲಿಟ್ಟರು. ಅಗತ್ಯವಿರುವಷ್ಟು ಮನೆಗಳನ್ನು ಕಟ್ಟಲು ಸಾಧ್ಯವಾಗಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಗತ್ಯ ಅನುದಾನ ಒದಗಿಸಿ ಸುಮಾರು 10 ಲಕ್ಷ ಮನೆಗಳನ್ನು ಕಟ್ಟುವ ಗುರಿ ಹೊಂದಿ ಇಂದು 5 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಕೊನೆಯ ಹಂತದಲ್ಲಿ ಇದ್ದೇವೆ ಎಂದರು.

5 ಲಕ್ಷ ಮನೆಗಳ ನಿರ್ಮಾಣ
ಸೋಮಣ್ಣ ಅವರು ವಸತಿ ಸಚಿವರಾದ ನಂತರ ಗೃಹ ನಿರ್ಮಾಣ ಕ್ಕೆ ಒಂದು ರೂಪುರೇಷೆ ನೀಡಿ, ಬಾಕಿ ಇರುವ ಮನೆಗಳ ನಿರ್ಮಾಣ ವಾಗಬೇಕು. ಆಯ್ಕೆಯಾಗಿದ್ದ ಅನರ್ಹರನ್ನು ತೆಗೆಯಲು ವಿಶೇಷ ಸಾಫ್ಟವೇರ್ ಅಳವಡಿಸಿದ್ದರು. ಗ್ರಾಮೀಣ ಪ್ರದೇಶದ ಮನೆಗಳ ನಿರ್ಮಾಣಕ್ಕೆ ಕೈಗೊಂಡು ಈ ವರ್ಷ 5 ಲಕ್ಷ ಮನೆಗಳ ನಿರ್ಮಾಣ ಮಾಡಿ ಅಂತಿಮ ಹಂತಕ್ಕೆ ತಂದಿದ್ದಾರೆ ಎಂದು ಶ್ಲಾಘಿಸಿದರು.

ಯಲಹಂಕದಲ್ಲಿ ಒಟ್ಟು 900 ಮನೆ
ನಾನು ಮುಖ್ಯಮಂತ್ರಿಯಾದ ಬಳಿಕ ಸುಮಾರು 5 ಲಕ್ಷ ಮನೆಗಳ ಮಂಜೂರಾತಿ ಮಾಡಿದ್ದು, 4 ಲಕ್ಷ ಗ್ರಾಮೀಣ ಪ್ರದೇಶದಲ್ಲಿ ಹಾಗೂ 1 ಲಕ್ಷ ನಗರದಲ್ಲಿ ಮಂಜೂರಾತಿ ನೀಡಿದ್ದು, ಫಲಾನುಭಾವಿಗಳ ಆಯ್ಕೆಯಾಗಿ ಪ್ರಗತಿಯಲ್ಲಿದೆ. ನಾವು ಹೇಳಿದಂತೆ ನಡೆಯುತ್ತಿದ್ದೇವೆ. ಬೆಂಗಳೂರಿನಲ್ಲಿ ಒಂದು ಲಕ್ಷ ಮನೆಗಳನ್ನು ನಿರ್ಮಾಣ ಮಾಡಬೇಕೆಂದು ಏಳು ವರ್ಷಗಳಿಂದ ಪ್ರಯತ್ನ ಮಾಡಿದರೂ ಸಾಧ್ಯವಾಗಿರಲಿಲ್ಲ. ತರಾತುರಿಯಲ್ಲಿ ಘೋಷಣೆ ಮಾಡಲಾಗಿತ್ತು. ಜಮೀನು ಇದೆಯೋ ಇಲ್ಲವೋ ಎಂದು ಯೋಚಿಸಲಿಲ್ಲ. ಮನೆಗಳನ್ನು ನಾವು ಆಕಾಶದಲ್ಲಿ ಕಟ್ಟಲಾಗುವುದಿಲ್ಲ
ಭೂಮಿಯ ಮೇಲೆ ಕಟ್ಟಬೇಕು. ಆದರೆ ಭೂಮಿಯೇ ಇಲ್ಲದೇ ಮನೆ ಕಟ್ಟುತ್ತೇವೆ ಎಂದು ಚುನಾವಣಾ ಘೋಷಣೆ ಮಾಡಿದರು.ಇಂದಿಗೂ ನಾವು 50 ಸಾವಿರ ಮನೆಗಳಿಗೆ ಸ್ಥಳವನ್ನು 492 ಎಕರೆ ಭೂಮಿಯನ್ನು ಬೇರೆ ಬೇರೆ ಪ್ರದೇಶಗಳಲ್ಲಿ ಪಡೆದು ನಿರ್ಮಾಣ ಪೂರ್ಣಗೊಳ್ಳುವ ಹಂತದಲ್ಲಿದೆ.

ಮೊದಲ ಹಂತದ 20 ಸಾವಿರ ಮನೆಗಳನ್ನು ಈಗ ಹಂಚಿಕೆ ಮಾಡಲಾಗುತ್ತಿದೆ. ಅದರಲ್ಲಿ 5 ಸಾವಿರ ಮನೆಗಳನ್ನು ಇಂದು ಹಂಚಿಕೆ ಮಾಡುತ್ತಿದ್ದು, ಯಲಹಂಕದಲ್ಲಿ ಒಟ್ಟು 900 ಮನೆಗಳನ್ನು ನೀಡಲಾಗುತ್ತಿದೆ. ಸುಮಾರು 5-6 ಕ್ಷೇತ್ರಗಳಲ್ಲಿ ಇಂದು ಮನೆಗಳ ಹಂಚಿಕೆಯಾಗುತ್ತಿದೆ. ಹಂತಹಂತವಾಗಿ 50 ಸಾವಿರ ಮನೆಗಳನ್ನು ಹಸ್ತಾಂತರ ಮಾಡುವ ಗುರಿ ಇದೆ. ಕಲ್ಲಿನ ಕ್ವಾರಿಯ ಒಳಗೆ ಮನೆಗಳನ್ನು ಕಟ್ಟುವುದಾಗಿ ಜಾಗ ತೋರಿಸಿದ್ದರು. ಇಷ್ಟು ಅಪ್ರಮಾಣಿಕವಾಗಿ ನಾವು ನಡೆದುಕೊಂಡರೆ ಜನರು ಮೆಚ್ಚುತ್ತಾರಾ ? ಇರುವ ವಿಚಾರವನ್ನು ಇದ್ದಂತೆ ಹೇಳಿ ಅದಕ್ಕೆ ಪರಿಹಾರ ಪಡೆದು ಮುಂದೆ ಹೋಗಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪದಲ್ಲಿ ನೀಡಲಾಗುತ್ತಿದೆ ಎಂದರು.

ಇದನ್ನೂ ಓದಿ : Amit Shah | ದೆಹಲಿಗೆ ಹೊರಡುವ ಮುನ್ನ ವಿ. ಸೋಮಣ್ಣ ಮನೆಯಲ್ಲಿ ಉಪ್ಪಿಟ್ಟು, ಕೇಸರಿಬಾತ್‌, ಬಜ್ಜಿ ಸವಿದ ಅಮಿತ್‌ ಶಾ

ಜನೋಪಯೋಗಿ ಶಾಸಕರು
ವಿಶ್ವನಾಥ ಅವರು ಜನೊಪಯೋಗಿ ಶಾಸಕರು. ಅನೇಕ ಶಾಸಕರು ಜನಪ್ರಿಯರಾಗಿದ್ದಾರೆ. ಜನರ ಪರ ಕೆಲಸ ಮಾಡುವವರು ಮಾತ್ರ ಜನೋಪಯೋಗಿ ಶಾಸಕರಾಗುತ್ತಾರೆ. ಬೆಂಗಳೂರಿನ ಅಭಿವೃದ್ದಿ ಮಾಡುವ ಹಿನೆಗಾರಿಗೆ ಅವರಿಗಿದೆ. ಬಿಡಿಎ ಅಧ್ಯಕ್ಷ ಸ್ಥಾನದ ಪ್ರಭಾವವನ್ನು ಯಲಹಂಕದ ಅಭಿವೃದ್ಧಿಗೆ ಬಳಸುತ್ತಿದ್ದಾರೆ. ವಿಶ್ವನಾಥ ಶಾಸಕರಾದ ಮೇಲೆ ಯಲಹಂಕ ಚಿತ್ರಣವೇ ಬದಲಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶ ಎರಡನ್ನೂ ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಮುಂದಿನ 20 ವರ್ಷಗಳಲ್ಲಿ ಆಗುವ ಕೆಲಸವನ್ನು ಈಗಲೇ ಮಾಡಿದ್ದಾರೆ ಎಂದರು.

ವಸತಿ ಕ್ರಾಂತಿ ರಾಜ್ಯದಲ್ಲಿ ವೇಗವಾಗಿ ಆಗಲಿ ಎಂದ ಮುಖ್ಯಮಂತ್ರಿಗಳು ಮನೆ ಪಡೆದ ಎಲ್ಲಾ ಫಲಾನುಭವಿಗಳಿಗೆ ಅಭಿನಂದನೆಗಳನ್ನು ತಿಳಿಸಿದರು. ವಸತಿ ಸಚಿವ ವಿ.ಸೋಮಣ್ಣ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಶಾಸಕ ಸಿದ್ದು ಸವದಿ, ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಮಾಜಿ ಶಾಸಕ ನಾಗರಾಜ್, ವಸತಿ ಇಲಾಖೆ ಕಾರ್ಯದರ್ಶಿ ಡಾ. ಜೆ.ರವಿಶಂಕರ್, ಬೆಂಗಳೂರು ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Congress Guarantee: ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ಜಾರಿಯಾದಾಗಿನಿಂದ ಈವರೆಗೆ ಬಳಕೆಯಾಗಿರುವ ಅನುದಾನದ ಮಾಹಿತಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

VISTARANEWS.COM


on

Congress Guarantee
Koo

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮೇ 20ಕ್ಕೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಸರ್ಕಾರದ ಸಾಧನೆಗಳ ಬಗ್ಗೆ ಕೈ ನಾಯಕರು ಸ್ಮರಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು (Congress Guarantee) ಜಾರಿ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಪಂಚ ಗ್ಯಾರಂಟಿಗಳು ಜಾರಿಯಾದಾಗಿನಿಂದ ಈವರೆಗೆ ಬಳಕೆಯಾಗಿರುವ ಅನುದಾನದ ಮಾಹಿತಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಲ್ಲಿ 5 ಕೆಜಿ ಅಕ್ಕಿಯ ಜತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ತಲಾ 170 ರೂ. ನೀಡುವ ʼಅನ್ನಭಾಗ್ಯ ಯೋಜನೆʼ, ಮನೆ ಯಜಮಾನಿಗೆ ಮಾಸಿಕ 2000 ರೂ. ಮಾಸಾಶನ ನೀಡುವ ʼಗೃಹ ಲಕ್ಷ್ಮಿ ಯೋಜನೆʼ, ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್‌ ಒದಗಿಸುವ ʼಗೃಹ ಜ್ಯೋತಿ ಯೋಜನೆʼ, ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ʼಶಕ್ತಿ ಯೋಜನೆʼಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಇನ್ನು ಐದನೇ ಗ್ಯಾರಂಟಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂ., ಡಿಪ್ಲೊಮಾ ಮಾಡಿದವರಿಗೆ 1500 ರೂ. ನೀಡುವ ಯುವ ನಿಧಿ ಯೋಜನೆ ಅನುಷ್ಠಾನದ ಹಂತದಲ್ಲಿದೆ.

ಇದನ್ನೂ ಓದಿ | Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇನ್ನೊಬ್ಬ ಎಸ್‌ಪಿಪಿ ನೇಮಕ; ಹೈಕೋರ್ಟ್‌ನಲ್ಲಿ ವಾದಕ್ಕೆ ಸಜ್ಜಾದ ಸರ್ಕಾರ

ಗ್ಯಾರಂಟಿಗಳಿಗೆ ಆಗಿರುವ ವೆಚ್ಚ

ಗ್ಯಾರಂಟಿ ಯೋಜನೆಗಳು ಜಾರಿಯಾದಾಗಿನಿಂದ ಮೇ 19ರವರೆಗೆ ಬಳಕೆಯಾಗಿರುವ ಅನುದಾನದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ 23,098 ಕೋಟಿ ರೂ., ಗೃಹಜ್ಯೋತಿ ಯೋಜನೆಗೆ 10,207 ಕೋಟಿ ರೂ., ಶಕ್ತಿ ಯೋಜನೆಗೆ 4,054 ಕೋಟಿ ರೂ., ಅನ್ನ ಭಾಗ್ಯ ಯೋಜನೆಗೆ 7,364 ಕೋಟಿ ರೂ. ಹಾಗೂ ಯುವ ನಿಧಿ ಯೋಜನೆಗೆ 93 ಕೋಟಿ ರೂ. ವೆಚ್ಚವಾಗಿದೆ. ಶಕ್ತಿ ಯೋಜನೆಯಲ್ಲಿ 211.5 ಕೋಟಿ ಟ್ರಿಪ್‌ಗಳಲ್ಲಿ ಮಹಿಳೆಯರು ಸರ್ಕಾರಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ.

ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು: ಸಿಎಂ

ಕಾಂಗ್ರೆಸ್‌ ಸರ್ಕಾರ 1 ವರ್ಷದ ಪೂರೈಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ ಎಂದು ತಿಳಿಸಿದ್ದಾರೆ.

ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ. ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದು.

ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆ ಎಂದು ಹೇಳಿದ್ದಾರೆ.ʼ

ಇದನ್ನೂ ಓದಿ | Reservation in Outsourcing: ಇನ್ನು ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ; ಸಿದ್ದರಾಮಯ್ಯ ಸರ್ಕಾರದ ಮಹತ್ವದ ಆದೇಶ

ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ದಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

ಅಭಿವೃದ್ಧಿ ಮತ್ತು ಜನರ ಕಲ್ಯಾಣವನ್ನೇ ಮೂಲಮಂತ್ರವಾಗಿಟ್ಟುಕೊಂಡಿರುವ ನಮ್ಮ ಸರ್ಕಾರವು ಒಂದು ವರ್ಷದ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದೆ. ಈ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ನಾಡಿನ ಅಭಿವೃದ್ಧಿಯ ರಥವನ್ನು ಸಮಾನವಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ನುಡಿದಂತೆ ನಡೆಯುತ್ತಿರುವ ನಮಗೆ ನಿಮ್ಮ ಬೆಂಬಲ – ಸಹಕಾರ ಮುಂದೆಯೂ ಇರಲಿ ಎಂದು ಆಶಿಸುತ್ತಾ, ಈ ಒಂದು ವರ್ಷದ ಅವಧಿಯಲ್ಲಿ ನಮ್ಮ ಕೆಲವು ಪ್ರಮುಖ ಸಾಧನೆಗಳನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Continue Reading

ದೇಶ

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

Rahul Gandhi: ಇದಕ್ಕೆ ನಿದರ್ಶನ ಎಂಬಂತೆ, ರಾಯ್‌ಬರೇಲಿಯ ಗ್ರಾಮವೊಂದರಲ್ಲಿ ಜನರು ರಾಹುಲ್‌ ಗಾಂಧಿ ಅವರ ಎದುರು ಜೈ ಶ್ರೀರಾಮ್‌ ಎಂಬುದಾಗಿ ಘೋಷಣೆ ಕೂಗಿದ್ದಾರೆ. ಇದನ್ನು ಕೇಳುತ್ತಲೇ ರಾಹುಲ್‌ ಗಾಂಧಿ ಅವರು ಕೈ ಮುಗಿದು ಗ್ರಾಮದಿಂದ ತೆರಳಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ.

VISTARANEWS.COM


on

Rahul Gandhi
Koo

ರಾಯ್‌ಬರೇಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕೇರಳದ ವಯನಾಡು ಜತೆಗೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲೂ ಕಣಕ್ಕಿಳಿದಿದ್ದಾರೆ. ಸೋನಿಯಾ ಗಾಂಧಿ ಅವರು ಸ್ಪರ್ಧಿಸುತ್ತಿದ್ದ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಇನ್ನು ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿಯಲ್ಲಿ ಅಬ್ಬರದ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ, ರಾಹುಲ್‌ ಗಾಂಧಿ ಅವರಿಗೆ ಹಲವೆಡೆ ಜನ ಜೈ ಶ್ರೀರಾಮ್‌ (Jai Shri Ram) ಎಂದು ಘೋಷಣೆ ಕೂಗಿ ಸ್ವಾಗತಿಸುತ್ತಿದ್ದಾರೆ.

ಇದಕ್ಕೆ ನಿದರ್ಶನ ಎಂಬಂತೆ, ರಾಯ್‌ಬರೇಲಿಯ ಗ್ರಾಮವೊಂದರಲ್ಲಿ ಜನರು ರಾಹುಲ್‌ ಗಾಂಧಿ ಅವರ ಎದುರು ಜೈ ಶ್ರೀರಾಮ್‌ ಎಂಬುದಾಗಿ ಘೋಷಣೆ ಕೂಗಿದ್ದಾರೆ. ಇದನ್ನು ಕೇಳುತ್ತಲೇ ರಾಹುಲ್‌ ಗಾಂಧಿ ಅವರು ಕೈ ಮುಗಿದು ಗ್ರಾಮದಿಂದ ತೆರಳಿದ್ದಾರೆ. ರಾಯ್‌ಬರೇಲಿಯ ಮತ್ತೊಂದು ಕಡೆಯೂ ರಾಹುಲ್‌ ಗಾಂಧಿ ಅವರಿಗೆ ಜೈ ಶ್ರೀ ರಾಮ್‌ ಎಂದು ಘೋಷಣೆ ಕೂಗಿ ಜನ ಸ್ವಾಗತಿಸಿದ್ದಾರೆ. ಈ ಎರಡೂ ವಿಡಿಯೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಹನುಮಾನ್‌ ದೇಗುಲಕ್ಕೆ ಭೇಟಿ

ರಾಯ್‌ಬರೇಲಿಯಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ತೆರಳಿದ ರಾಹುಲ್‌ ಗಾಂಧಿ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ವಿಡಿಯೊ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇನ್ನೂ ಕೆಲವೊಬ್ಬರು, ಅವಸರ ಅವಸರದಲ್ಲಿ ಪೂಜೆ ಮಾಡುವುದು, ದೇವರ ಮೇಲೆ ಪೂಜಾ ಸಾಮಗ್ರಿಗಳನ್ನು ಎಸೆಯುವುದು ನೋಡಿದರೆ ಇವರು ಎಂತಹ ಹಿಂದು ಎಂಬುದು ಗೊತ್ತಾಗುತ್ತದೆ ಎಂಬುದಾಗಿ ಟೀಕಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್‌ ಬಹಿಷ್ಕರಿಸಿದ ಕಾರಣ ಕಾಂಗ್ರೆಸ್‌ ನಾಯಕರ ಎದುರು ಸಾರ್ವಜನಿಕರು, ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್‌ ಎಂಬುದಾಗಿ ಘೋಷಣೆ ಕೂಗುತ್ತಾರೆ. ಅದೇ ರೀತಿ, ರಾಹುಲ್‌ ಗಾಂಧಿ ಅವರ ಎದುರು ಕೂಡ ಜನ ಜೈ ಶ್ರೀರಾಮ್‌ ಎಂಬುದಾಗಿ ಕೂಗಿದ್ದಾರೆ. 2004ರಿಂದ ಸೋನಿಯಾ ಗಾಂಧಿ ಅವರು ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರು. ಅವರೀಗ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕಾರಣ ಅವರ ಪುತ್ರ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿಯಲ್ಲಿ ನಾಮಪತ್ರ ಕೂಡ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

Continue Reading

ದೇಶ

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

AAP Funds: 2014ರಿಂದ 2022ರ ಅವಧಿಯಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಬೇರೆ ದೇಶಗಳಿಂದ 7.08 ಕೋಟಿ ರೂ. ದೇಣಿಗೆ ಹರಿದುಬಂದಿದೆ. ಆದರೆ, ಇಷ್ಟು ಹಣ ಸ್ವೀಕರಿಸಲು ಆಪ್‌ ಎಫ್‌ಸಿಆರ್‌ಎ ನಿಯಮಗಳನ್ನು ಪಾಲಿಸಿಲ್ಲ. ಪಕ್ಷಕ್ಕೆ ಅಮೆರಿಕ, ಕೆನಡಾ, ಆಸ್ಟ್ರೇಲಿಯಾ ಸೇರಿ ಹಲವು ದೇಶಗಳಿಂದ ನಿಯಮಗಳನ್ನು ಪಾಲಿಸದೆಯೇ ದೇಣಿಗೆ ಪಡೆಯಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ಇ.ಡಿ ಮಾಹಿತಿ ನೀಡಿದೆ.

VISTARANEWS.COM


on

AAP Funds
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೆಹಲಿಯಲ್ಲಿರುವ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಾರ್ಟಿಗೆ (AAP) 2014ರಿಂದ 2022ರ ಅವಧಿಯಲ್ಲಿ ಬೇರೆ ಬೇರೆ ದೇಶಗಳಿಂದ 7.08 ಕೋಟಿ ರೂ. ದೇಣಿಗೆ (AAP Funds) ಹರಿದುಬಂದಿದೆ. ಆದರೆ, ದೇಣಿಗೆ ಸ್ವೀಕರಿಸುವಾಗ ಆಮ್‌ ಆದ್ಮಿ ಪಕ್ಷವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (FCRA) ನಿಯಮಗಳನ್ನು ಉಲ್ಲಂಘಿಸಿದೆ” ಎಂದು ಜಾರಿ ನಿರ್ದೇಶನಾಲಯವು (E.D) ಮಾಹಿತಿ ನೀಡಿದೆ. ಇದು ಈಗ ಪಕ್ಷ ಹಾಗೂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಹೊಸ ಸಂಕಷ್ಟ ತಂದಿದೆ.

ವಿದೇಶಿ ದೇಣಿಗೆ ನಿಯಮಗಳನ್ನು ಆಪ್‌ ಪಾಲಿಸದ ಕುರಿತು ಕೇಂದ್ರ ಗೃಹ ಸಚಿವಾಲಯಕ್ಕೆ ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “2014ರಿಂದ 2022ರ ಅವಧಿಯಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಬೇರೆ ದೇಶಗಳಿಂದ 7.08 ಕೋಟಿ ರೂ. ದೇಣಿಗೆ ಹರಿದುಬಂದಿದೆ. ಆದರೆ, ಇಷ್ಟು ಹಣ ಸ್ವೀಕರಿಸಲು ಆಪ್‌ ಎಫ್‌ಸಿಆರ್‌ಎ ನಿಯಮಗಳನ್ನು ಪಾಲಿಸಿಲ್ಲ. ಪಕ್ಷಕ್ಕೆ ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್‌, ಸೌದಿ ಅರೇಬಿಯಾ, ಕುವೈತ್‌, ಒಮಾನ್‌ ಸೇರಿ ಹಲವು ದೇಶಗಳಿಂದ ಆಪ್‌ ನಿಯಮ ಉಲ್ಲಂಘಿಸಿ ದೇಣಿಗೆ ಸ್ವೀಕರಿಸಿದೆ” ಎಂದು ತಿಳಿಸಿದ್ದಾರೆ.

2021ರಲ್ಲೇ ವಿಚಾರಣೆ ನಡೆದಿತ್ತು

ವಿದೇಶಗಳಿಂದ ದೇಣಿಗೆ ಪಡೆಯುವಾಗ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆಯೇ 2021ರ ಸೆಪ್ಟೆಂಬರ್‌ನಲ್ಲಿ ಆಪ್‌ ನಾಯಕ ಪಂಕಜ್‌ ಕುಮಾರ್‌ ಅವರ ವಿಚಾರಣೆ ನಡೆಸಲಾಗಿತ್ತು. ಈಗ, ಆಪ್‌ಗೆ ದೇಣಿಗೆ ನೀಡಿದವರ ಕುರಿತು ತಪ್ಪು ಮಾಹಿತಿ ನೀಡಲಾಗಿದೆ. ದೇಣಿಗೆ ನೀಡಿದವರ ಮಾಹಿತಿಯನ್ನು ಮರೆಮಾಚಲಾಗಿದೆ ಎಂಬುದು ಸೇರಿ ಹಲವು ಆರೋಪಗಳನ್ನು ಇ.ಡಿ ಮಾಡಿದೆ. ಇದರ ಕುರಿತು ಕೇಂದ್ರ ಗೃಹ ಸಚಿವಾಲಯವು ಯಾವ ತೀರ್ಮಾನ ತೆಗೆದುಕೊಳ್ಳಲಿದೆಯೋ ಕಾದು ನೋಡಬೇಕಿದೆ.

ದೆಹಲಿ ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜೈಲುಪಾಲಾಗಿದ್ದರು. ಅವರೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಜೂನ್‌ 2ರಂದು ಮತ್ತೆ ಜೈಲು ಸೇರಲಿದ್ದಾರೆ. ಆಪ್‌ನ ಹಲವು ಸಚಿವರು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನು ರಾಜ್ಯಸಭೆಯ ಆಪ್‌ ಸದಸ್ಯೆ ಸ್ವಾತಿ ಮಾಲಿವಾಲ್‌ ಅವರ ಮೇಲೆ ಹಲ್ಲೆ ನಡೆಸಿದ ಕಾರಣ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ ಅವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ಆಪ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಉದ್ಯಮಿಗಳಿಂದ 200 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಸುಕೇಶ್‌ ಚಂದ್ರಶೇಖರ್‌, ಆಮ್‌ ಆದ್ಮಿ ಪಕ್ಷಕ್ಕೆ 60 ಕೋಟಿ ರೂ.ಗಳನ್ನು ದೇಣಿಗೆ ನೀಡಿರುವುದಾಗಿ 2022ರಲ್ಲಿ ಹೇಳಿದ್ದ. ಸುಕೇಶ್‌ ಚಂದ್ರಶೇಖರ್‌ ಬಿಜೆಪಿಯ ವಕ್ತಾರನಂತೆ ಮಾತನಾಡುತ್ತಿದ್ದು, ಜೈಲಿನಿಂದ ಬಿಡುಗಡೆಯಾದ ಬಳಿಕ ಆ ಪಕ್ಷ ಸೇರಬಹುದು ಎಂದು ಆಮ್‌ ಆದ್ಮಿ ಈ ಹಿಂದೆ ಟೀಕಿಸಿತ್ತು.

ಇದನ್ನೂ ಓದಿ: Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Continue Reading

ದೇಶ

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Postal Ballot: ಛತ್ತೀಸ್‌ಗಢದ ಬಿಲಾಸ್‌ಪುರ ನಿವಾಸಿಯಾದ ಸರಳ ಶ್ರೀವಾಸ್ತವ ಪರ ಹಿರಿಯ ವಕೀಲ ಗೌರವ್‌ ಅಗರ್ವಾಲ್‌ ವಾದ ಮಂಡಿಸಿದರು. “ಮಹಿಳೆಯು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಚುನಾವಣೆ ಆಯೋಗದ ನಿಯಮಗಳ ಪ್ರಕಾರ ಮಹಿಳೆಯು ಅಂಚೆ ಮತದಾನ ಮಾಡಲು ಅರ್ಹರು” ಎಂದು ಹೇಳಿದರು.

VISTARANEWS.COM


on

Postal Ballot
Koo

ನವದೆಹಲಿ: ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಕಾರಣ ಲೋಕಸಭೆ ಚುನಾವಣೆಯಲ್ಲಿ ಹಕ್ಕು ಚಲಾಯಿಸಲು ಅಂಚೆ ಮತದಾನಕ್ಕೆ (Postal Ballot) ಅವಕಾಶ ಮಾಡಿಕೊಡಬೇಕು ಎಂದು ಛತ್ತೀಸ್‌ಗಢದ 78 ವರ್ಷದ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ನಿರಾಕರಿಸಿದೆ. ಇದರಿಂದಾಗಿ, ಅನಾರೋಗ್ಯವಿದ್ದರೂ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂಬ ಹಂಬಲ ಹೊಂದಿದ್ದ ಸರಳ ಶ್ರೀವಾಸ್ತವ ಎಂಬ ಅಜ್ಜಿಗೆ ನಿರಾಸೆಯಾದಂತಾಗಿದೆ.

ಛತ್ತೀಸ್‌ಗಢದ ಬಿಲಾಸ್‌ಪುರ ನಿವಾಸಿಯಾದ ಸರಳ ಶ್ರೀವಾಸ್ತವ ಪರ ಹಿರಿಯ ವಕೀಲ ಗೌರವ್‌ ಅಗರ್ವಾಲ್‌ ವಾದ ಮಂಡಿಸಿದರು. “ಮಹಿಳೆಯು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಚುನಾವಣೆ ಆಯೋಗದ ನಿಯಮಗಳ ಪ್ರಕಾರ ಮಹಿಳೆಯು ಅಂಚೆ ಮತದಾನ ಮಾಡಲು ಅರ್ಹರು” ಎಂದು ಹೇಳಿದರು. ಆದರೆ, ನ್ಯಾಯಮೂರ್ತಿಗಳಾದ ಬೆಲಾ ಎಂ. ತ್ರಿವೇದಿ ಹಾಗೂ ಜಸ್ಟಿಸ್‌ ಪಂಕಜ್‌ ಮಿತ್ತಲ್‌ ಅವರಿದ್ದ ಪೀಠವು ಅರ್ಜಿಯನ್ನು ತಿರಸ್ಕರಿಸಿತು.

“ಬಿಲಾಸ್‌ಪುರದಲ್ಲಿ ಮೇ 7ರಂದೇ ಮತದಾನ ಮುಕ್ತಾಯಗೊಂಡಿದೆ. ಮತದಾನ ಮುಗಿದು ಹಲವು ದಿನಗಳ ನಂತರ ಅಂಚೆ ಮತದಾನಕ್ಕೆ ಅವಕಾಶ ನೀಡಬೇಕು ಎಂದರೆ ಆಗುವುದಿಲ್ಲ. ಇಂತಹ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಮೊದಲೇ ಅರ್ಜಿ ಸಲ್ಲಿಸಬೇಕು. ಅಂಚೆ ಮತದಾನಕ್ಕೆ ಹಲವು ಪ್ರಕ್ರಿಯೆಗಳಿವೆ. ಅವುಗಳೆಲ್ಲವೂ ಸಮಯಕ್ಕೆ ಅನುಸಾರವಾಗಿ ಆಗಬೇಕು. ಅಷ್ಟಕ್ಕೂ, ಭಾರತದಲ್ಲಿ ಪ್ರತಿಯೊಬ್ಬರಿಗೂ ಮನೆಯಲ್ಲಿ ಕುಳಿತೇ ಮತದಾನ ಮಾಡುವ ಉಮೇದಿ ಇದೆ” ಎಂದು ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು.

ಸರಳ ಶ್ರೀವಾಸ್ತವ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರು ಹಾಸಿಗೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಚೆ ಮತದಾನದ ಮೂಲಕವಾದರೂ ಹಕ್ಕು ಚಲಾಯಿಸಬೇಕು ಎಂದು ಬಯಸಿದ್ದರು. ಇದೇ ಕಾರಣಕ್ಕಾಗಿ ಅವರು ಏಪ್ರಿಲ್‌ 29ರಂದೇ ಛತ್ತೀಸ್‌ಗಢ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮೇ 6ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಮಹಿಳೆಯ ಅರ್ಜಿಯನ್ನು ತಿರಸ್ಕರಿಸಿತ್ತು. ಈಗ ಸುಪ್ರೀಂ ಕೋರ್ಟ್‌ ಕೂಡ ಅರ್ಜಿಯನ್ನು ತಿರಸ್ಕರಿಸಿದೆ. ಒಟ್ಟಿನಲ್ಲಿ, ಯುವಕರೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡದ, ಜಾಗೃತಿ ಮೂಡಿಸಿದರೂ ಕೇಳದಂತಹ ಸಂದರ್ಭದಲ್ಲಿ, ಮನೆಯಿಂದಲಾದರೂ ಹಕ್ಕು ಚಲಾಯಿಸಬೇಕು ಎಂದು ಸುಪ್ರೀಂ ಕೋರ್ಟ್‌ ಮೊರೆ ಹೋದ ಅಜ್ಜಿಯ ಆಶಯವಂತೂ ಒಳ್ಳೆಯದೇ ಆಗಿತ್ತು ಎಂಬುದರಲ್ಲಿ ಎರಡು ಮಾತಿಲ್ಲ.

ಇದನ್ನೂ ಓದಿ: Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Continue Reading
Advertisement
Congress Guarantee
ಪ್ರಮುಖ ಸುದ್ದಿ10 mins ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ33 mins ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ41 mins ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ1 hour ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ2 hours ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ2 hours ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ2 hours ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ2 hours ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Siddaramaiah government performance is zero says BY Vijayendra
ರಾಜಕೀಯ2 hours ago

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

Nutrition Alert
ಆರೋಗ್ಯ3 hours ago

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌