Rockline Mall : ರಾಕ್‌ಲೈನ್‌ಗೆ ಬಿಬಿಎಂಪಿ ಶಾಕ್‌; ಬೆಂಗಳೂರಿನ ಮಾಲ್‌ಗೆ ಬೀಗ; ನಿಜ ಸಂಗತಿ ಏನು? - Vistara News

ಬೆಂಗಳೂರು

Rockline Mall : ರಾಕ್‌ಲೈನ್‌ಗೆ ಬಿಬಿಎಂಪಿ ಶಾಕ್‌; ಬೆಂಗಳೂರಿನ ಮಾಲ್‌ಗೆ ಬೀಗ; ನಿಜ ಸಂಗತಿ ಏನು?

Rockline Mall : ರಾಕ್‌ಲೈನ್‌ ವೆಂಕಟೇಶ್‌ ಮಾಲೀಕತ್ವದ ಮಾಲ್‌ಗೆ ಬಿಬಿಎಂಪಿ ಅಧಿಕಾರಿಗಳು ಲಾಕ್‌ ಹಾಕಿದ್ದಾರೆ. 12 ವರ್ಷದಿಂದ 11 ಕೋಟಿ ತೆರಿಗೆ ಬಾಕಿ ಇರಿಸಿದ್ದಾರೆ ಎಂಬ ಕಾರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.

VISTARANEWS.COM


on

Rockline Mall in Bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಇತ್ತೀಚಿನ ಕಾಟೇರ ಸೇರಿದಂತೆ ಸೂಪರ್‌ ಹಿಟ್‌ ಚಿತ್ರಗಳನ್ನು ನೀಡಿರುವ ಸಿನಿಮಾ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ (Rockline Venkatesh) ಒಡೆತನದ ರಾಕ್‌ಲೈನ್‌ ಮಾಲ್‌ಗೆ (Rockline Mall) ಬಿಬಿಎಂಪಿ ಅಧಿಕಾರಿಗಳು (BBMP officials) ಬೀಗ ಜಡಿದಿದ್ದಾರೆ. ಸುಮಾರು 11.51 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡ ಕಾರಣಕ್ಕಾಗಿ ಬುಧವಾರ ಬೆಳ್ಳಂಬೆಳಗ್ಗೆ ಟಿ ದಾಸರಹಳ್ಳಿಯ ಪ್ರಶಾಂತ್‌ ನಗರದಲ್ಲಿರುವ ರಾಕ್‌ಲೈನ್‌ ಮಾಲ್‌ಗೆ ಬೀಗ ಹಾಕಲಾಗಿದೆ. ಆದರೆ, ರಾಕ್‌ ಲೈನ್‌ ವೆಂಕಟೇಶ್‌ ಅವರು ಇದೊಂದು ಅಕ್ರಮವಾಗಿದ್ದು, ತೆರಿಗೆ ವಿಚಾರದಲ್ಲಿ (Tax issue) ಬಿಬಿಎಂಪಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ರಾಕ್‌ಲೈನ್‌ ಮಾಲ್‌ನಲ್ಲಿ ಹೋಟೆಲ್‌, ಶೋರೂಮ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಿವೆ. ಮುಂಜಾನೆಯೇ ಅಧಿಕಾರಿಗಳು ಬೀಗ ಹಾಕಿದ್ದರಿಂದ ಯಾವುದೇ ವ್ಯವಹಾರಗಳು ನಡೆದಿಲ್ಲ. ಈ ಮಾಲ್‌ಗೆ ಸಂಬಂಧಿಸಿ 2011ರಿಂದ 2023ರ ಒಟ್ಟು 11.51 ಕೋಟಿ ರೂ. ತೆರಿಗೆಯನ್ನು ಬಾಕಿ ಇರಿಸಲಾಗಿದೆ. ಇದುವರೆಗೂ ತೆರಿಗೆ ಪಾವತಿಸದ್ದರಿಂದ ಅಧಿಕಾರಿಗಳು ಮಾಲ್‌ಗೆ ಬೀಗ ಹಾಕಿದ್ದಾರೆ ಎಂದು ಹೇಳಲಾಗಿದೆ. ಬಿಬಿಎಂಪಿಯ ದಾಸರಹಳ್ಳಿ ವಲಯದ ಆಯುಕ್ತೆ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತರಾದ ಬಾಲಶೇಖರ್ ದಾಸರಹಳ್ಳಿ ವಲಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾರ್ಷಲ್‌ಗಳ ಉಪಸ್ಥಿತಿಯಲ್ಲಿ ಬೀಗ ಹಾಕಲಾಗಿದೆ

Rockline Mall in Bangalore1

ಇದನ್ನೂ ಓದಿ: Jetlog Pub: ನಟ ದರ್ಶನ್‌ ಅವರೇ ಟಾರ್ಗೆಟ್‌ ಯಾಕೆ? ರಾಕ್‌ಲೈನ್‌ ವೆಂಕಟೇಶ್‌ ಕಿಡಿ

2021ರಲ್ಲಿ ರಾಕ್‌ಲೈನ್‌ ವೆಂಕಟೇಶ್‌ ಮತ್ತು ಪದ್ಮಕುಮಾರಿ ಅವರು ಬಿಬಿಎಂಪಿಗೆ 8.5 ಕೋಟಿ ರೂ.ಗೂ ಅಧಿಕ ಮೊತ್ತದ ತೆರಿಗೆ ವಂಚಿಸಿದ್ದಾರೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ಎನ್ ಆರ್ ರಮೇಶ್‌ ಆರೋಪಿಸಿದ್ದರು. ಬಿಬಿಎಂಪಿಯ ದಾಸರಹಳ್ಳಿ ವಲಯದ ವ್ಯಾಪ್ತಿಯಲ್ಲಿರುವ ರಾಕ್‌ಲೈನ್‌ ಮಾಲ್‌ ಕೇವಲ 48,500 ಚದರ ಅಡಿ ವಿಸ್ತೀರ್ಣ ಇದೆ ಎಂದು ಬಿಬಿಎಂಪಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ಆರು ಮಹಡಿ ಸೇರಿದಂತೆ 1,22,743 ಚದರ ಅಡಿ ವಿಸ್ತಾರದಲ್ಲಿ ಈ ಮಾಲ್ ನಿರ್ಮಾಣಗೊಂಡಿದೆ ಎಂದು ಅವರು ದೂರಿದ್ದರು.

ಈ ಘಟನೆಯ ಬಗ್ಗೆ ರಾಕ್‌ಲೈನ್‌ ವೆಂಕಟೇಶ್‌ ಹೇಳುವುದೇನು?

ರಾಕ್‌ಲೈನ್‌ ಮಾಲ್‌ಗೆ ಸಂಬಂಧಿಸಿ ಬಿಬಿಎಂಪಿ ಮತ್ತು ತಮ್ಮ ಮಧ್ಯೆ ಹಿಂದಿನಿಂದಲೂ ವಿವಾದವಿದೆ. ಇದು ಹೈಕೋರ್ಟ್‌ನಲ್ಲಿ ಒಂದು ಹಂತದಲ್ಲಿ ಇತ್ಯರ್ಥವಾಗಿ ತೆರಿಗೆಯನ್ನು ನಿಗದಿ ಮಾಡಲಾಗಿದೆ. ಹೈಕೋರ್ಟ್‌ನಲ್ಲಿ ನಿಗದಿಪಡಿಸಿದ ಮೊತ್ತವನ್ನು ಪಾವತಿ ಮಾಡಲಾಗುತ್ತಿದೆ. ಆದರೆ, ಬಿಬಿಎಂಪಿಯವರು ತಪ್ಪು ಲೆಕ್ಕಾಚಾರ ನೀಡಿ ತೆರಿಗೆಯನ್ನು‌ ಹೆಚ್ಚು ಮಾಡಿದ್ದಾರೆ. ಇದನ್ನು ಪಾವತಿಸಲು ಸಾಧ್ಯವಿಲ್ಲ. ಈ ಬಗ್ಗೆ ನ್ಯಾಯ ಕೋರಿ ಮತ್ತೆ ಹೈಕೋರ್ಟ್‌ಗೆ ಮೊರೆ ಹೋಗುವುದಾಗಿ ರಾಕ್‌ ಲೈನ್‌ ವೆಂಕಟೇಶ್‌ ವಿಸ್ತಾರ ನ್ಯೂಸ್‌ಗೆ ತಿಳಿಸಿದ್ದಾರೆ.

ನಮ್ಮ ಮಾಲ್‌ ಇರುವುದು ಕೇವಲ ಮೂರು ಮಹಡಿ ಮಾತ್ರ. ಎರಡು ಮಹಡಿಗಳಲ್ಲಿ ವಾಣಿಜ್ಯ ವ್ಯವಹಾರಗಳಿದ್ದರೆ, ಮೂರನೇ ಮಹಡಿಯಲ್ಲಿ ಮಲ್ಟಿಪ್ಲೆಕ್ಸ್‌ ಇದೆ. ನಮ್ಮ ಮಾಲ್‌ನ ಒಟ್ಟು ವಿಸ್ತೀರ್ಣ 48,500 ಅಡಿ ಮಾತ್ರ. ಆದರೆ, ಬಿಬಿಎಂಪಿ ಅಧಿಕಾರಿಗಳು ಕಟ್ಟಡದಲ್ಲಿ ಆರು ಮಹಡಿಗಳಿವೆ ಎಂದು ವಾದಿಸುತ್ತಿದ್ದಾರೆ. ಅವರ ಪ್ರಕಾರ ಕಟ್ಟಡದ ವಿಸ್ತೀರ್ಣ 1,22,743 ಚದರ ಅಡಿ.

ಬಿಬಿಎಂಪಿ ಅಧಿಕಾರಿಗಳು 40 ಅಡಿ ಎತ್ತರ ಇರುವ ಮಲ್ಟಿಪ್ಲೆಕ್ಸ್‌ನ್ನು ನಾಲ್ಕು ಮಹಡಿ ಎಂದು ಲೆಕ್ಕ ತೆಗೆದಿದ್ದಾರೆ. ಇದು ಹೇಗಾಗುತ್ತದೆ? ಮಹಡಿ ಎಷ್ಟಿದೆ ಎನ್ನುವುದನ್ನು ಬಂದು ನೋಡಿ, ಒಟ್ಟು‌ ಫ್ಲೋರ್‌ ಏರಿಯಾವನ್ನು ಗಮನಿಸಿ ತೆರಿಗೆ ಹಾಕಿ ಎನ್ನುವುದು ನಮ್ಮ ವಾದ. ಹೈಕೋರ್ಟ್‌ ಮಧ್ಯಸ್ಥಿಕೆಯಲ್ಲಿ ಜಂಟಿ ಸರ್ವೇ ಮಾಡಿ ತೆರಿಗೆ ನಿಗದಿ ಮಾಡಿದ್ದರೂ ಬಿಬಿಎಂಪಿ ಅಧಿಕಾರಿಗಳು ಆಗಾಗ ತಕರಾರು ತೆಗೆಯುತ್ತಿದ್ದಾರೆ. ಇದನ್ನು ಹೈಕೋರ್ಟ್‌ನಲ್ಲೇ ಪ್ರಶ್ನೆ ಮಾಡುವುದಾಗಿ ರಾಕ್‌ ಲೈನ್‌ ವೆಂಕಟೇಶ್‌ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ‌ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಮಹತ್ವದ ಫರ್ಮಾನು ಹೊರಡಿಸಿದ ಎಚ್‌.ಡಿ. ದೇವೇಗೌಡ!

Prajwal Revanna Case: ‌ವಕೀಲರು ಸೇರಿದಂತೆ ಯಾರೂ ಕೂಡಾ ಈ ಕೇಸ್‌ ಬಗ್ಗೆ ಬಹಿರಂಗವಾಗಿ ಮಾತನಾಡಬಾರದು. ಎಚ್‌.ಡಿ. ರೇವಣ್ಣ ಬಂಧನ ಹಾಗೂ ಮುಂದೆ ಎಸ್‌ಐಟಿ ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನು ಬಂಧನ ಮಾಡಿದ ನಂತರವೂ ಪ್ರತಿಭಟನೆಗಳನ್ನು ಮಾಡಬಾರದು. ಇನ್ನು ರೇವಣ್ಣ ಹಾಗೂ ಪ್ರಜ್ವಲ್ ಪರವಾಗಿ ಹೇಳಿಕೆಗಳನ್ನು ನೀಡಬಾರದು. ದೂರುದಾರರ ವಿರುದ್ಧ ಯಾವುದೇ ಬಹಿರಂಗ ಹೇಳಿಕೆಯನ್ನು ಸಹ ನೀಡಬಾರದು ಎಂದು ಎಚ್.ಡಿ. ದೇವೇಗೌಡರೇ ಕುಟುಂಬದವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

VISTARANEWS.COM


on

Prajwal Revanna Case HD Deve Gowda takes a big decision
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಎಚ್.ಡಿ. ರೇವಣ್ಣ (HD Revanna) ವಿರುದ್ಧದ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸದಲ್ಲಿ ನೀರವ ಮೌನ ಆವರಿಸಿದೆ. ರೇವಣ್ಣ ವಿಚಾರವಾಗಿ ಬಹಿರಂಗವಾಗಿ ಯಾರೂ ಮಾತನಾಡಬಾರದು ಎಂಬ ತೀರ್ಮಾನಕ್ಕೆ ಗೌಡರ ಕುಟುಂಬ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಕೆಲವೊಂದಿಷ್ಟು ಮಹತ್ವದ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.

ವಕೀಲರು ಸೇರಿದಂತೆ ಯಾರೂ ಕೂಡಾ ಈ ಕೇಸ್‌ ಬಗ್ಗೆ ಬಹಿರಂಗವಾಗಿ ಮಾತನಾಡಬಾರದು. ಎಚ್‌.ಡಿ. ರೇವಣ್ಣ ಬಂಧನ ಹಾಗೂ ಮುಂದೆ ಎಸ್‌ಐಟಿ ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನು ಬಂಧನ ಮಾಡಿದ ನಂತರವೂ ಪ್ರತಿಭಟನೆಗಳನ್ನು ಮಾಡಬಾರದು. ಇನ್ನು ರೇವಣ್ಣ ಹಾಗೂ ಪ್ರಜ್ವಲ್ ಪರವಾಗಿ ಹೇಳಿಕೆಗಳನ್ನು ನೀಡಬಾರದು. ದೂರುದಾರರ ವಿರುದ್ಧ ಯಾವುದೇ ಬಹಿರಂಗ ಹೇಳಿಕೆಯನ್ನು ಸಹ ನೀಡಬಾರದು ಎಂದು ಎಚ್.ಡಿ. ದೇವೇಗೌಡರೇ ಕುಟುಂಬದವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮುಜುಗರದಲ್ಲಿ ಜೆಡಿಎಸ್‌ ಮುಖಂಡರು!

ಇನ್ನು ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊವುಳ್ಳ ಪೆನ್‌ಡ್ರೈವ್ ಪ್ರಕರಣದಿಂದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ. ಇನ್ನು ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲೇ ಎಚ್‌.ಡಿ. ರೇವಣ್ಣ ಬಂಧನಕ್ಕೊಳಗಾಗಿರುವು ಅವರಿಗೆ ಮತ್ತಷ್ಟು ಬೇಸರವನ್ನುಂಟು ಮಾಡಿದೆ.

ಇನ್ನು ಈವರೆಗೆ ಬೇರೆ ಎಂಥದ್ದೇ ರಾಜಕೀಯ ಪ್ರಕರಣವಾದರೂ ದೇವೇಗೌಡರ ಮನೆಯಲ್ಲಿ ಪಕ್ಷದ ನಾಯಕರು ಸೇರುತ್ತಿದ್ದರು. ಚುನಾವಣೆ ಗೆಲುವು, ಸೋಲು ಏನೇ ಇದ್ದರೂ ದೇವೇಗೌಡರ ಮನೆಯಲ್ಲಿ ಸೇರಲಾಗುತ್ತಿತ್ತು. ಆದರೆ, ಈ ಪ್ರಕರಣವು ಎಲ್ಲರನ್ನೂ ಇಕ್ಕಟ್ಟಿಗೆ ದೂಡಿದೆ. ಅಲ್ಲದೆ, ಈ ಪ್ರಕರಣವನ್ನು ಯಾವುದೇ ನಾಯಕರೂ ಸಮರ್ಥನೆ ಮಾಡಿಕೊಳ್ಳಲಾರದ ಪರಿಸ್ಥಿತಿಗೆ ಸಿಲುಕಿದ್ದಾರೆ.

ಸದ್ಯಕ್ಕೆ ಯಾವುದೇ ಶಾಸಕರಾಗಲೀ, ಮುಖಂಡರೇ ಆಗಲೀ ದೇವೇಗೌಡರ ಮನೆಯತ್ತ ಸುಳಿಯುತ್ತಿಲ್ಲ. ಖುದ್ದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರೇ ಮಾಧ್ಯಮದಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಭಾನುವಾರ ರಾತ್ರಿ ಹೊತ್ತಿಗೆ ಕುಮಾರಸ್ವಾಮಿ, ಪುತ್ರಿಯರಾದ ಅನಸೂಯ, ಶೈಲಜಾ ಎಲ್ಲರೂ ಗೌಡರ ಮನೆಗೆ ಭೇಟಿ ನೀಡಿ ಹೋಗಿದ್ದಾರೆ.

ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಸಂಬಂಧ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಎಚ್.ಡಿ. ರೇವಣ್ಣ (HD Revanna) ವಿರುದ್ಧದ ಕೇಸ್‌ಗೆ ಸಂಬಂಧಪಟ್ಟಂತೆ ಅವರಿಗೆ ಮುಂದೆ ಇರುವ ಆಯ್ಕೆ ಏನು ಎಂಬ ಪ್ರಶ್ನೆ ಎದುರಾಗಿದೆ. ಅಲ್ಲದೆ, ತನ್ನ ಅಪಹರಣ ಮಾಡಿಸಿದ್ದು ರೇವಣ್ಣ ಅವರೇ ಎಂದು ಸಂತ್ರಸ್ತೆ ಬಾಯಿಬಿಟ್ಟರೆ ಪರಪ್ಪನ ಅಗ್ರಹಾರವೇ ಗತಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಎಚ್.ಡಿ. ರೇವಣ್ಣ ಅವರ ಮುಂದೆ ಇರುವ ಆಯ್ಕೆ ಎಂದರೆ, ಎಸ್ಐಟಿ ಕಸ್ಟಡಿ ಮುಗಿಯುವವರೆಗೂ ತನಿಖೆಯನ್ನು ಎದುರಿಸುವುದಾಗಿದೆ. ಎಸ್ಐಟಿ ಕಸ್ಟಡಿ ಅಂತ್ಯವಾಗುವ ವೇಳೆಗೆ ಜಾಮೀನು ಕೋರಿ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಸಂತ್ರಸ್ತೆಯನ್ನು ನಾನು ಕಿಡ್ನ್ಯಾಪ್‌ ಮಾಡಿಲ್ಲ ಎಂದು ವಾದ ಮಂಡಿಸುವುದು. ಇದಕ್ಕೆ ಪೂರಕ ಸಾಕ್ಷ್ಯಾಧಾರವನ್ನು ಒದಗಿಸಲು ಪ್ರಯತ್ನ ಮಾಡುವುದು. ಈ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸದಂತೆ ಜಾಮೀನು ಪಡೆದು ಬಚಾವ್ ಆಗುವ ಲೆಕ್ಕಾಚಾರಗಳು ಸಹ ನಡೆದಿವೆ. ಹಾಗಾಗಿ ಈಗ ಅಪಹರಣಕ್ಕೊಳಗಾಗಿದ್ದಾರೆ ಎಂಬ ಸಂತ್ರಸ್ತೆಯು ನೀಡುವ ಹೇಳಿಕೆ ಎಚ್.ಡಿ. ರೇವಣ್ಣ ಅವರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಅವರ ಹೇಳಿಕೆ ವಿರುದ್ಧವಾಗಿದ್ದರೆ ರೇವಣ್ಣ ಅವರಿಗೆ ಜೈಲೇ ಗತಿಯಾಗಿದೆ.

ಕೋರ್ಟ್‌ನಲ್ಲಿ ವಿಫಲವಾದರೆ ಜೈಲು ಪಕ್ಕಾ

ಇನ್ನು ಎಚ್‌.ಡಿ. ರೇವಣ್ಣ ಅವರು ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ವಿಫಲರಾದಲ್ಲಿ ಹಾಗೂ ರೇವಣ್ಣ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದೆ ಎಂಬುದಾಗಿ ಕೋರ್ಟ್ ನಿರ್ಧಾರಕ್ಕೆ ಬಂದಲ್ಲಿ ಸದ್ಯಕ್ಕೆ ಜೈಲುವಾಸ ಆಗಲಿದೆ. ಬಳಿಕ ಮೇಲ್ದರ್ಜೆಯ ಕೋರ್ಟ್‌ಗೆ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ – ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ಅಪಹರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

Continue Reading

ಕರ್ನಾಟಕ

Ramana Avatara Movie: ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ; ‘ರಾಮನ ಅವತಾರ’ ಚಿತ್ರ ನಿಷೇಧಿಸಲು ಆಗ್ರಹ!

Ramana Avatara Movie: ʼರಾಮನ ಅವತಾರ’ ಕನ್ನಡ ಚಲನಚಿತ್ರವನ್ನು ನಿಷೇಧಿಸಬೇಕು ಎಂದು ಕರ್ನಾಟಕ ಚಲನಚಿತ್ರ ಮಂಡಳಿಗೆ ಹಿಂದು ಜನಜಾಗೃತಿ ಸಮಿತಿ ಮನವಿ ಮಾಡಿದೆ. ಚಿತ್ರದ ವಿರುದ್ಧ ಹಿಂದುಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ.

VISTARANEWS.COM


on

Ramana Avatara Movie
Koo

ಬೆಂಗಳೂರು: ಕೋಟ್ಯಂತರ ಹಿಂದುಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ ಮಾಡಿರುವ ʼರಾಮನ ಅವತಾರ’ (Ramana Avatara Movie) ಕನ್ನಡ ಚಲನಚಿತ್ರವನ್ನು ನಿಷೇಧಿಸಬೇಕು ಎಂದು ಹಿಂದು ಜನಜಾಗೃತಿ ಸಮಿತಿ ಒತ್ತಾಯಿಸಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್ ಅವರಿಗೆ ಹಿಂದು ಜನಜಾಗೃತಿ ಸಮಿತಿಯ ಶರತ್ ಕುಮಾರ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.

ವಿನಯ ಪಂಪಾಪತಿ ಮತ್ತು ವಿಕಾಸ ಪಂಪಾಪತಿ ನಿರ್ದೇಶನದ ಹಾಗೂ ಅಮ್ರೆಜ್ ಸೂರ್ಯವಂಶಿ ನಿರ್ಮಾಣದ ‘ರಾಮನ ಅವತಾರ’ ಎಂಬ ಕನ್ನಡ ಚಲನಚಿತ್ರ ಮೇ 10 ಕ್ಕೆ ಬಿಡುಗಡೆಗೊಳ್ಳಲಿದ್ದು, ಅದರ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲಿ ಕೋಟ್ಯಂತರ ಹಿಂದುಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ ಮಾಡಲಾಗಿದೆ. ಆದ್ದರಿಂದ ಸಿನಿಮಾದ ಹೆಸರನ್ನು ಬದಲಾಯಿಸಬೇಕು ಮತ್ತು ಅದರಲ್ಲಿನ ರಾಮಾಯಣದ ಅಪಮಾನಾತ್ಮಕ ಸನ್ನಿವೇಶಗಳನ್ನು ತೆಗೆದುಹಾಕಬೇಕೆಂದು ಹಿಂದು ಜನಜಾಗೃತಿ ಸಮಿತಿ ಆಗ್ರಹಿಸಿದೆ.

ರಾಮನ ಅವತಾರ ಚಿತ್ರದಲ್ಲಿ ರಾಮನ ವೇಷದಲ್ಲಿ ನಟ ರಿಷಿ.

ಚಿತ್ರದ ಟ್ರೈಲರ್‌ನಲ್ಲಿ ‘ರಾಮ’ ಹೆಸರಿನ ಚಿತ್ರದ ನಾಯಕ ‘ಯಾವ ಊರಿನ ಜನ ನನ್ನನ್ನು ಊರಿಂದ ಹೊರಗೆ ತಳ್ಳಿದರೋ ಅದೇ ಜನ ನನಗೆ ಗೌರವ ಕೊಡುವ ತನಕ ನಾನು ಇಲ್ಲೇ ಎಲ್ಲದರೂ ರಸ್ತೆಯಲ್ಲಿ ಕಾಲ ಕಳೆಯುತ್ತೇನೆ’ ಎನ್ನುತ್ತಾನೆ, ಇದು ರಾಮಾಯಣ ಧರ್ಮಗ್ರಂಥಕ್ಕೆ ಮಾಡಿದ ಘೋರ ಅಪಮಾನವಾಗಿದೆ. ಚಿತ್ರನಟ ‘ರಾಮನ’ ಹೆಸರಿನಲ್ಲಿ ಚುನಾವಣೆಗೆ ನಿಂತಿರುತ್ತಾನೆ, ಅಲ್ಲಿ ‘ಯಾರ ಮನೆ ಮುಂದೆ ಕಸ ಇದ್ದರೆ ರಾಮನಿಗೆ ಕಾಲ್ ಮಾಡಿ’ ಎಂದು ಕರೆ ನೀಡಲಾಗುತ್ತದೆ. ಇನ್ನು ಚಿತ್ರ ನಾಯಕಿ ರಾಮಾಯಣದಂತೆ ರಾಮನನನ್ನು ಜಿಂಕೆಯ ಚಿತ್ರವಿರುವ ಕಾರಿನ ಹಿಂದೆ ಓಡಿಸಿ ನಂತರ ಅವಳನ್ನು ಕಿಡ್ನ್ಯಾಪ್ ಮಾಡುತ್ತಿರುವಂತೆ ತೋರಿಸಲಾಗಿದೆ. ಅಷ್ಟೇ ಅಲ್ಲದೆ ರಾಮನ ವೇಷದಲ್ಲಿ ಚಿತ್ರದ ನಾಯಕ ಖಳನಾಯಕರೊಂದಿಗೆ ಫೈಟಿಂಗ್ ಮಾಡುತ್ತಿರುವಂತೆ ತೋರಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ | Megha Dhade: ನಮ್ಮ ದೇಶ ಬಿಟ್ಟು ನರಕಕ್ಕೆ ಹೋಗಿ ಎಂದು ರಾಹುಲ್‌ ಗಾಂಧಿ ವಿರುದ್ಧ ʻಬಿಗ್‌ ಬಾಸ್‌ʼ ವಿಜೇತೆ ಆಕ್ರೋಶ!

ಹಿಂದು ಜನಜಾಗೃತಿ ಸಮಿತಿಯ ಶರತ್ ಕುಮಾರ್ ಮಾತನಾಡಿ, ಭಾರತ ಸೇರಿ ವಿಶ್ವಾದ್ಯಂತ ಪ್ರಭು ಶ್ರೀರಾಮನನ್ನು ಪೂಜಿಸಲಾಗುತ್ತಿದೆ. ರಾಮನಿಗಾಗಿ ಸಾವಿರಾರು ಹಿಂದುಗಳು ತಮ್ಮ ಪ್ರಾಣತ್ಯಾಗ ಮಾಡಿ ಭವ್ಯ ರಾಮಮಂದಿರ ಕಟ್ಟಿದ್ದಾರೆ. ಹೀಗಿರುವಾಗ ಈ ಚಿತ್ರದಲ್ಲಿ ಶ್ರೀರಾಮನ ವೇಷವನ್ನು ನಾಯಕನಿಗೆ ತೊಡಿಸಿ, ಪೊಲೀಸರು ಶ್ರೀರಾಮನನ್ನು ಅಟ್ಟಾಡಿಸುವಂತೆ ತೋರಿಸಲಾಗಿದೆ. ಕಾಮಿಡಿ ಚಿತ್ರ ಮಾಡುವ ಗೀಳಿನಲ್ಲಿ ಪವಿತ್ರ ರಾಮಾಯಣ ಮತ್ತು ಪ್ರಭು ಶ್ರೀರಾಮನ ಘೋರ ಅಪಮಾನ ಮಾಡಿರುವುದು ಕಂಡುಬರುತ್ತದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಇದೇ ಕಾರಣಕ್ಕೆ ಈ ಚಲನಚಿತ್ರ ಬಿಡುಗಡೆಯಾಗಲು ವಿರೋಧ ವ್ಯಕ್ತವಾಗಿತ್ತು, ಆದರೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಿರುವಂತೆ ಕಂಡರೂ ಚಿತ್ರದ ಹೆಸರು ಮತ್ತು ಅದರಲ್ಲಿನ ತುಣುಕುಗಳಲ್ಲಿ ಇನ್ನೂ ರಾಮನ ಅಪಮಾನ ಎದ್ದು ಕಾಣಿಸುತ್ತಿದೆ. ಕಾಮಿಡಿ ಚಿತ್ರ ರಚಿಸುವ ಉದ್ದೇಶವಿದ್ದಿದ್ದರೆ ‘ರಾಮನ ಅವತಾರ’ವೆಂದೇ ಏಕೆ ಹೆಸರಿಡಬೇಕಿತ್ತು ? ಇತರ ಪಂಥೀಯರ ಶ್ರದ್ಧಾಸ್ಥಾನಗಳ ಮೇಲೆ ಈ ರೀತಿಯ ಕಾಮಿಡಿ ಚಿತ್ರ ರಚಿಸುವ ಧೈರ್ಯ ತೋರುವರೆ? ಕೀಳುಮಟ್ಟದ ಸಿನಿಮಾ ಪ್ರಚಾರಕ್ಕಾಗಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದು ಭಾರತೀಯ ದಂಡ ಸಂಹಿತೆ 295, 298 ಮತ್ತು 295 A ಪ್ರಕಾರ ಗಂಭೀರ ಅಪರಾಧವಾಗಿದೆ. ಅದಲ್ಲದೇ ಸಿನಿಮಾಟೋಗ್ರಾಫ್ ಆಕ್ಟ್ 1952 ನ ಕಲಂ 5 B ಪ್ರಕಾರ ಇದು ಸೆನ್ಸಾರ್ ಮಂಡಳಿ ನಿಯಮದ ಉಲ್ಲಂಘನೆಯಾಗಿದೆ. ದೇಶದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಸಿನಿಮಾ ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವುದು ನೀತಿ ಸಂಹಿತೆ ಉಲ್ಲಂಘನೆ ಆಗಿದೆ. ಈ ಚಿತ್ರದ ಸೆನ್ಸಾರ್ ಪ್ರಮಾಣ ಪತ್ರ ರದ್ದುಗೊಳಿಸದಿದ್ದರೆ ರಾಜ್ಯಾದ್ಯಂತ ಆಂದೋಲನ ನಡೆಸಲಾಗುವುದು ಎಂದಿದ್ದಾರೆ.

ಈ ಮನವಿಯಲ್ಲಿ ಪ್ರಭು ಶ್ರೀರಾಮನ ಹೆಸರಿನ ಮತ್ತು ರಾಮಾಯಣದ ಸನ್ನಿವೇಶಗಳಿರುವ ಹಿಂದುಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ದೃಶ್ಯಗಳನ್ನು ಚಿತ್ರದಿಂದ ತೆಗೆಯಬೇಕು ಮತ್ತು ‘ರಾಮನ ಅವತಾರ’ ಎಂದರೆ ಜನರಿಗೆ ಇದು ತ್ರೇತಾಯುಗದ ಪ್ರಭು ಶ್ರೀರಾಮನದ್ದೇ ಕಥೆಯೆಂದೆನಿಸುತ್ತದೆ, ಆದರೆ ವಾಸ್ತವದಲ್ಲಿ ಇದು ಕಾಮಿಡಿ ಚಲನಚಿತ್ರವಾಗಿರುವುದರಿಂದ ಚಿತ್ರದ ಹೆಸರು ಬದಲಿಸಬೇಕು ಎಂದು ಆಗ್ರಹಿಸಲಾಗಿದೆ.

ಇದನ್ನೂ ಓದಿ | Rahul Gandhi : ಸುಳ್ಳು ಹರಡಬೇಡಿ, ಸುಮ್ಮನಿರಿ; ರಾಹುಲ್​ ಗಾಂಧಿಗೆ ಬಹಿರಂಗ ಪತ್ರ ಬರೆದು ಕುಟುಕಿದ ಯೂನಿವರ್ಸಿಟಿಗಳ ಕುಲಪತಿಗಳು

ಮನವಿ ಸಲ್ಲಿಕೆ ವೇಳೆ ಹಿಂದು ಜನಜಾಗೃತಿ ಸಮಿತಿಯ ನೀಲೇಶ್ವರ, ನಿರಂಜನ ನಾರಾಯಣಕರ, ಪ್ರಶಾಂತ್ ದಾಸರಹಳ್ಳಿ, ರಾಷ್ಟ್ರೀಯ ಹಿಂದು ಪರಿಷತ್‌ನ ರಾಜ್ಯಾಧ್ಯಕ್ಷ ಸುರೇಶ್ ಗೌಡ, ನಗರ ಜಿಲ್ಲಾಧ್ಯಕ್ಷರಾದ ವಿಕ್ರಂ ಶೆಟ್ಟಿ ಅವರು ಉಪಸ್ಥಿತರಿದ್ದರು.

Continue Reading

ದೇಶ

Innova Crysta: ಇನ್ನೋವಾ ಕ್ರಿಸ್ಟಾ ನೂತನ ಸರಣಿಯ GX+ ಪರಿಚಯಿಸಿದ ಟಿಕೆಎಂ; ವೈಶಿಷ್ಟ್ಯಗಳೇನು? ದರ ಎಷ್ಟು?

Innova Crysta: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇನ್ನೋವಾ ಕ್ರಿಸ್ಟಾ ಸರಣಿಯಲ್ಲಿ ನೂತನ ಗ್ರೇಡ್ GX+ ಅನ್ನು ಪರಿಚಯಿಸಿದ್ದು, ರಿಯರ್ ಕ್ಯಾಮೆರಾ, ಆಟೋ-ಫೋಲ್ಡ್ ಮಿರರ್ಸ್, ಡಿವಿಆರ್, ಡೈಮಂಡ್-ಕಟ್ ಅಲಾಯ್ಸ್, ವುಡನ್ ಪ್ಯಾನೆಲ್ ಮತ್ತು ಪ್ರೀಮಿಯಂ ಫ್ಯಾಬ್ರಿಕ್ ಸೀಟ್ಸ್ ಸೇರಿದಂತೆ ಹಲವಾರು ಅತ್ಯಾಕರ್ಷಕ ಮತ್ತು ಸುಧಾರಿತ ವೈಶಿಷ್ಟ್ಯಗಳನ್ನು ಇದು ಒಳಗೊಂಡಿದೆ. ಇನ್ನೋವಾ ಕ್ರಿಸ್ಟಾ GX+ ಗ್ರೇಡ್ ಐದು ಅತ್ಯಾಕರ್ಷಕ ಬಣ್ಣಗಳಲ್ಲಿ ಲಭ್ಯವಿದ್ದು, ಸೂಪರ್ ವೈಟ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಅವಂತ್-ಗಾರ್ಡೆ ಬ್ರೋನ್ಜ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್ ಮತ್ತು ಸಿಲ್ವರ್ ಮೆಟಾಲಿಕ್ ಬಣ್ಣಗಳಲ್ಲಿ ನೂತನ ವಾಹನ ಹೊರಬರಲಿದೆ.

VISTARANEWS.COM


on

Innova Crysta new grade GX+ introduced by Toyota Kirloskar Motor
Koo

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ಇನ್ನೋವಾ ಕ್ರಿಸ್ಟಾ (Innova Crysta) ಸರಣಿಯಲ್ಲಿ ನೂತನ ಗ್ರೇಡ್ GX+ ಅನ್ನು ಪರಿಚಯಿಸಿದ್ದು, ರಿಯರ್ ಕ್ಯಾಮೆರಾ, ಆಟೋ-ಫೋಲ್ಡ್ ಮಿರರ್ಸ್, ಡಿವಿಆರ್, ಡೈಮಂಡ್-ಕಟ್ ಅಲಾಯ್ಸ್, ವುಡನ್ ಪ್ಯಾನೆಲ್ ಮತ್ತು ಪ್ರೀಮಿಯಂ ಫ್ಯಾಬ್ರಿಕ್ ಸೀಟ್ಸ್ ಸೇರಿದಂತೆ ಹಲವಾರು ಅತ್ಯಾಕರ್ಷಕ ಮತ್ತು ಸುಧಾರಿತ ವೈಶಿಷ್ಟ್ಯಗಳನ್ನು ಇದು ಒಳಗೊಂಡಿದೆ.

ಇನ್ನೋವಾ ಕ್ರಿಸ್ಟಾ GX+ ಗ್ರೇಡ್ ಐದು ಅತ್ಯಾಕರ್ಷಕ ಬಣ್ಣಗಳಲ್ಲಿ ಲಭ್ಯವಿದ್ದು, ಸೂಪರ್ ವೈಟ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಅವಂತ್-ಗಾರ್ಡೆ ಬ್ರೋನ್ಜ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್ ಮತ್ತು ಸಿಲ್ವರ್ ಮೆಟಾಲಿಕ್ ಬಣ್ಣಗಳಲ್ಲಿ ನೂತನ ವಾಹನ ಹೊರಬರಲಿದೆ. ಇನ್ನೋವಾ ಕ್ರಿಸ್ಟಾ GX+ ಗ್ರೇಡ್ 14 ಹೆಚ್ಚುವರಿ ವೈಶಿಷ್ಟ್ಯಗಳನ್ನು ಹೊಂದಿದೆ.

ಇದನ್ನೂ ಓದಿ: Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಸೇಲ್ಸ್-ಸರ್ವೀಸ್-ಯೂಸ್ಡ್ ಕಾರ್ ಬಿಸಿನೆಸ್‌ನ ಉಪಾಧ್ಯಕ್ಷ ಶಬರಿ ಮನೋಹರ್ ಈ ಕುರಿತು ಮಾತನಾಡಿ, ನೂತನವಾಗಿ ಪರಿಚಯಿಸಲಾದ ಇನ್ನೋವಾ ಕ್ರಿಸ್ಟಾ GX+ ಗ್ರೇಡ್ ನಮ್ಮ ಅಸ್ತಿತ್ವದಲ್ಲಿರುವ ಇನ್ನೋವಾ ಕ್ರಿಸ್ಟಾ ಶ್ರೇಣಿಗೆ ಪೂರಕವಾಗಿದೆ. ಹೊಸದಾಗಿ ಪರಿಚಯಿಸಲಾದ ವರ್ಧಿತ ವೈಶಿಷ್ಟ್ಯಗಳು ಮತ್ತು ಮಲ್ಟಿ ಫಂಕ್ಷನಾಲಿಟಿಯ ಮೂಲಕ ಹೆಚ್ಚಿನ ಮೌಲ್ಯವನ್ನು ನೀಡುವ ವಿಷಯದಲ್ಲಿ ಒಂದು ಹೆಜ್ಜೆಯಾಗಿದೆ. ಹೊಸ ಪರಿಚಯವು ಗ್ರಾಹಕರ ವ್ಯಾಪಕ ಪ್ರೇಕ್ಷಕರನ್ನು ಆಕರ್ಷಿಸುವುದನ್ನು ಮುಂದುವರಿಸುತ್ತದೆ ಎಂದು ನಮಗೆ ವಿಶ್ವಾಸವಿದೆ, ಇದರಿಂದಾಗಿ ಭಾರತದ ಅತ್ಯಂತ ಪ್ರೀತಿಯ ಎಂಪಿವಿ ಎಂಬ ಇನ್ನೋವಾ ಪರಂಪರೆಯನ್ನು ಬಲಪಡಿಸುತ್ತದೆ ಎಂದು ತಿಳಿಸಿದ್ದಾರೆ.

ಎಕ್ಸ್ ಶೋರೂಂ ಬೆಲೆ (ಗ್ರೇಡ್ ವಾರು)

Variant Ex Showroom Price (W.E.F 06th May 2024), Innova Crysta GX+ 7s Rs 21,39,000, Innova Crysta GX+ 8s ರೂ. 21,44,000 ಗಳಾಗಿದೆ.

ದೃಢವಾದ ಕಾರ್ಯಕ್ಷಮತೆ

ಇನ್ನೋವಾ ಕ್ರಿಸ್ಟಾ GX+ 2.4 ಲೀಟರ್ ಡೀಸೆಲ್ ಎಂಜಿನ್, ಇಕೋ ಮತ್ತು ಪವರ್ ಡ್ರೈವ್ ಮೋಡ್ , 5 ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಲಭ್ಯವಿದೆ. ಶಕ್ತಿಶಾಲಿ ಜಿಡಿ ಡೀಸೆಲ್ ಎಂಜಿನ್ ಕಡಿಮೆ ಮತ್ತು ಮಧ್ಯಮ ವೇಗದ ಶ್ರೇಣಿಗಳಲ್ಲಿ ಗಣನೀಯ ವರ್ಧಿತ ಟಾರ್ಕ್‌ ಅನ್ನು ಹೊಂದಿದೆ. ಹೆಚ್ಚುವರಿಯಾಗಿ ವಾಹನವು ಪಿಚ್ ಮತ್ತು ಬೌನ್ಸ್ ನಿಯಂತ್ರಣದೊಂದಿಗೆ ಸುಧಾರಿತ ಸಸ್ಪೆಂಷನ್ ಅನ್ನು ಖಚಿತಪಡಿಸುತ್ತಿದ್ದು, ಕ್ಯಾಬಿನ್ ಚಲನೆಯನ್ನು ಕನಿಷ್ಠವಾಗಿರಿಸುತ್ತದೆ ಮತ್ತು ಒರಟಾದ ರಸ್ತೆಗಳಲ್ಲಿ ಸುಗಮ ಸವಾರಿಯನ್ನು ನಿರ್ವಹಿಸುತ್ತದೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಟಫ್ ಎಕ್ಸ್‌ಟೀರಿಯರ್

ಎಕ್ಸ್‌ಟೀರಿಯರ್ ಟಫ್ ಮತ್ತು ಅತ್ಯಾಧುನಿಕತೆಯ ಹೊಂದಾಣಿಕೆಯನ್ನು ಇದು ಹೊಂದಿದ್ದು, ನಯವಾದ ಮತ್ತು ಸಮಕಾಲೀನ ವಿನ್ಯಾಸದೊಂದಿಗೆ ಇನ್ನೋವಾ ಕ್ರಿಸ್ಟಾ ಪ್ರತಿ ಪ್ರಯಾಣದಲ್ಲಿ ಸೊಬಗು ಮತ್ತು ಪರಿಷ್ಕರಣೆಯನ್ನು ನೀಡುತ್ತದೆ. ಇದರ ನಿಖರವಾದ ಪರಿಷ್ಕರಿಸಿದ ಎಕ್ಸ್‌ಟೀರಿಯರ್ ವೈಶಿಷ್ಟ್ಯಗಳಾದ ಬೋಲ್ಡ್ ಫ್ರಂಟ್ ಗ್ರಿಲ್ ಮತ್ತು ಗಟ್ಟಿಮುಟ್ಟಾದ ಬಂಪರ್ ಲುಕ್ ಅನ್ನು ಹೆಚ್ಚಿಸುತ್ತದೆ. ಕಾರ್ಯಕ್ಷಮತೆಯನ್ನು ಹೆಚ್ಚಿಸುವುದಲ್ಲದೆ ರಸ್ತೆಯಲ್ಲಿ ಕಮಾಂಡಿಂಗ್ ಉಪಸ್ಥಿತಿಯನ್ನು ಖಚಿತಪಡಿಸುತ್ತದೆ. ಇನ್ನೋವಾ ಕ್ರಿಸ್ಟಾ GX+ ಅನ್ನು ಮತ್ತಷ್ಟು ಪ್ರತ್ಯೇಕಿಸುವ ಅಂಶವೆಂದರೆ ಅದರ ಭವ್ಯವಾದ ಸಿಲ್ವರ್ ಸರೌಂಡ್ ಪಿಯಾನೋ ಬ್ಲ್ಯಾಕ್ ಗ್ರಿಲ್ ಮತ್ತು ಆಕರ್ಷಕ ಡೈಮಂಡ್-ಕಟ್ ಅಲಾಯ್ಸ್ ವಾಹನದ ಆಕರ್ಷಣೆಯನ್ನು ಹೆಚ್ಚಿಸುತ್ತದೆ.

ಆರಾಮದಾಯಕ ಇಂಟೀರಿಯರ್

ಇನ್ನೋವಾ ಕ್ರಿಸ್ಟಾ GX+ ನ ಇಂಟೀರಿಯರ್ ನವೀನ ವೈಶಿಷ್ಟ್ಯಗಳೊಂದಿಗೆ ಆರಾಮ ಮತ್ತು ಅನುಕೂಲತೆಯಲ್ಲಿ ಉದಾಹರಣೆಯಾಗಿದೆ. ಇತರ ಇನ್ನೋವಾಗಳಂತೆ, ಐಷಾರಾಮಿ ಮತ್ತು ಆರಾಮವು ಹೊಸ ಇನ್ನೋವಾ ಕ್ರಿಸ್ಟಾ GX+ನ ಪ್ರಮುಖ ಅಂಶವಾಗಿದ್ದು ವುಡ್ ಫಿನಿಶ್ ಇಂಟೀರಿಯರ್ ಪ್ಯಾನೆಲ್ಸ್ , ಆಟೋ-ಫೋಲ್ಡ್ ಮಿರರ್ಸ್, ಡಿವಿಆರ್, ಸಾಟಿಯಿಲ್ಲದ ಪರಿಷ್ಕರಣೆ ಮತ್ತು ಕ್ಲಾಸ್ ಅನ್ನು ಹೊಂದಿದೆ.

ಇದನ್ನೂ ಓದಿ: Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

ಸುಧಾರಿತ ಸುರಕ್ಷತಾ ಕೊಡುಗೆಗಳು

ಸುರಕ್ಷತೆಯು ಟೊಯೊಟಾಗೆ ಉನ್ನತ ಆದ್ಯತೆಯಾಗಿದೆ. ಇನ್ನೋವಾ ಕ್ರಿಸ್ಟಾ GX+ ಇದಕ್ಕೆ ಹೊರತಾಗಿಲ್ಲ. ರಿಯರ್ ಕ್ಯಾಮೆರಾ, ಎಸ್‌ಆರ್‌ಎಸ್ ಏರ್ ಬ್ಯಾಗ್ಸ್, ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್ ಮತ್ತು ಹಿಲ್-ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್ ಸೇರಿದಂತೆ ಸಮಗ್ರ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್ (ಎಬಿಎಸ್) ಮತ್ತು ಹೆಚ್ಚಿನ ಸಾಮರ್ಥ್ಯದ GOA ಬಾಡಿ ಸ್ಟ್ರಕ್ಚರ್ ಪ್ರತಿ ಪ್ರಯಾಣದಲ್ಲಿ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ.

Continue Reading

ಕ್ರೈಂ

Prajwal Revanna Case: ‌ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

Prajwal Revanna Case: ‌ಸಂತ್ರಸ್ತೆ ಅಪಹರಣ ಕೇಸ್‌ನಲ್ಲಿ ಎಚ್.ಡಿ. ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ. ಅವರು ಜಾಮೀನಿಗಾಗಿ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಕೋರ್ಟ್‌ನಲ್ಲಿ ವಾದ ಮಂಡಿಸಲು ಅವರ ವಕೀಲರ ತಂಡ ಸಜ್ಜಾಗಿದೆ. ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಸಂತ್ರಸ್ತೆಯನ್ನು ನಾನು ಕಿಡ್ನ್ಯಾಪ್‌ ಮಾಡಿಲ್ಲ ಎಂದು ವಾದ ಮಂಡಿಸುವುದು. ಇದಕ್ಕೆ ಪೂರಕ ಸಾಕ್ಷ್ಯಾಧಾರವನ್ನು ಒದಗಿಸಲು ಪ್ರಯತ್ನ ಮಾಡುವುದು. ಈ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸದಂತೆ ಜಾಮೀನು ಪಡೆದು ಬಚಾವ್ ಆಗುವ ಲೆಕ್ಕಾಚಾರಗಳು ಸಹ ನಡೆದಿವೆ.

VISTARANEWS.COM


on

Rape victim kidnapping in Prajwal Revanna Case What are the options before HD Revanna
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಸಂಬಂಧ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಎಚ್.ಡಿ. ರೇವಣ್ಣ (HD Revanna) ವಿರುದ್ಧದ ಕೇಸ್‌ಗೆ ಸಂಬಂಧಪಟ್ಟಂತೆ ಅವರಿಗೆ ಮುಂದೆ ಇರುವ ಆಯ್ಕೆ ಏನು ಎಂಬ ಪ್ರಶ್ನೆ ಎದುರಾಗಿದೆ. ಅಲ್ಲದೆ, ತನ್ನ ಅಪಹರಣ ಮಾಡಿಸಿದ್ದು ರೇವಣ್ಣ ಅವರೇ ಎಂದು ಸಂತ್ರಸ್ತೆ ಬಾಯಿಬಿಟ್ಟರೆ ಪರಪ್ಪನ ಅಗ್ರಹಾರವೇ ಗತಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಎಚ್.ಡಿ. ರೇವಣ್ಣ ಅವರ ಮುಂದೆ ಇರುವ ಆಯ್ಕೆ ಎಂದರೆ, ಎಸ್ಐಟಿ ಕಸ್ಟಡಿ ಮುಗಿಯುವವರೆಗೂ ತನಿಖೆಯನ್ನು ಎದುರಿಸುವುದಾಗಿದೆ. ಎಸ್ಐಟಿ ಕಸ್ಟಡಿ ಅಂತ್ಯವಾಗುವ ವೇಳೆಗೆ ಜಾಮೀನು ಕೋರಿ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಸಂತ್ರಸ್ತೆಯನ್ನು ನಾನು ಕಿಡ್ನ್ಯಾಪ್‌ ಮಾಡಿಲ್ಲ ಎಂದು ವಾದ ಮಂಡಿಸುವುದು. ಇದಕ್ಕೆ ಪೂರಕ ಸಾಕ್ಷ್ಯಾಧಾರವನ್ನು ಒದಗಿಸಲು ಪ್ರಯತ್ನ ಮಾಡುವುದು. ಈ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸದಂತೆ ಜಾಮೀನು ಪಡೆದು ಬಚಾವ್ ಆಗುವ ಲೆಕ್ಕಾಚಾರಗಳು ಸಹ ನಡೆದಿವೆ. ಹಾಗಾಗಿ ಈಗ ಅಪಹರಣಕ್ಕೊಳಗಾಗಿದ್ದಾರೆ ಎಂಬ ಸಂತ್ರಸ್ತೆಯು ನೀಡುವ ಹೇಳಿಕೆ ಎಚ್.ಡಿ. ರೇವಣ್ಣ ಅವರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಅವರ ಹೇಳಿಕೆ ವಿರುದ್ಧವಾಗಿದ್ದರೆ ರೇವಣ್ಣ ಅವರಿಗೆ ಜೈಲೇ ಗತಿಯಾಗಿದೆ.

ಕೋರ್ಟ್‌ನಲ್ಲಿ ವಿಫಲವಾದರೆ ಜೈಲು ಪಕ್ಕಾ

ಇನ್ನು ಎಚ್‌.ಡಿ. ರೇವಣ್ಣ ಅವರು ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ವಿಫಲರಾದಲ್ಲಿ ಹಾಗೂ ರೇವಣ್ಣ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದೆ ಎಂಬುದಾಗಿ ಕೋರ್ಟ್ ನಿರ್ಧಾರಕ್ಕೆ ಬಂದಲ್ಲಿ ಸದ್ಯಕ್ಕೆ ಜೈಲುವಾಸ ಆಗಲಿದೆ. ಬಳಿಕ ಮೇಲ್ದರ್ಜೆಯ ಕೋರ್ಟ್‌ಗೆ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ – ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ಅಪಹರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

Continue Reading
Advertisement
IPL 2024
ಕ್ರೀಡೆ8 mins ago

IPL 2024 : ಹಳೆ ಸೇಡು; ರಾಹುಲ್ ವಿರುದ್ಧವೇ ತಿರುಗಿಬಿದ್ದ ನವಿನ್​ ಉಲ್ ಹಕ್​

Prajwal Revanna Case HD Deve Gowda takes a big decision
ಕ್ರೈಂ9 mins ago

Prajwal Revanna Case: ‌ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಮಹತ್ವದ ಫರ್ಮಾನು ಹೊರಡಿಸಿದ ಎಚ್‌.ಡಿ. ದೇವೇಗೌಡ!

Ramana Avatara Movie
ಕರ್ನಾಟಕ13 mins ago

Ramana Avatara Movie: ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ; ‘ರಾಮನ ಅವತಾರ’ ಚಿತ್ರ ನಿಷೇಧಿಸಲು ಆಗ್ರಹ!

Lok Sabha Election
ಕರ್ನಾಟಕ19 mins ago

Lok Sabha Election: ನಾಳೆ ವೋಟಿಂಗ್; ನಿಮ್ಮ ‘ಮತ’ ಕಳವಾದರೆ ಏನು ಮಾಡಬೇಕು? ಇಲ್ಲಿದೆ ಉತ್ತರ

farmer commits suicide in Kabbigere Gollarhatti village
ಕರ್ನಾಟಕ23 mins ago

Self Harming: ಕಬ್ಬಿಗೆರೆ ಗೊಲ್ಲರಹಟ್ಟಿಯಲ್ಲಿ ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

All preparations in Yallapur assembly constituency for Lok Sabha election says Ajjappa Sogalada
ಉತ್ತರ ಕನ್ನಡ26 mins ago

Lok Sabha Election 2024: ಲೋಕಸಭಾ ಚುನಾವಣೆಗೆ ಯಲ್ಲಾಪುರದಲ್ಲಿ ಸಕಲ ಸಿದ್ಧತೆ: ಅಜ್ಜಪ್ಪ ಸೊಗಲದ

Innova Crysta new grade GX+ introduced by Toyota Kirloskar Motor
ದೇಶ28 mins ago

Innova Crysta: ಇನ್ನೋವಾ ಕ್ರಿಸ್ಟಾ ನೂತನ ಸರಣಿಯ GX+ ಪರಿಚಯಿಸಿದ ಟಿಕೆಎಂ; ವೈಶಿಷ್ಟ್ಯಗಳೇನು? ದರ ಎಷ್ಟು?

Press Freedom
Latest32 mins ago

Press Freedom: ಚೀನಾ ಸೇರಿದಂತೆ ಈ ದೇಶಗಳು ಪತ್ರಕರ್ತರಿಗೆ ಸುರಕ್ಷಿತವಲ್ಲ

Rape victim kidnapping in Prajwal Revanna Case What are the options before HD Revanna
ಕ್ರೈಂ32 mins ago

Prajwal Revanna Case: ‌ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

Anand Mahindra
ಪ್ರಮುಖ ಸುದ್ದಿ41 mins ago

Anand Mahindra: ತಂದೆ ಸಾವಿನ ಬಳಿಕ ಕಷ್ಟದಲ್ಲಿದ್ದ ಬಾಲಕನ ಶಿಕ್ಷಣಕ್ಕೆ ಆನಂದ್‌ ಮಹೀಂದ್ರಾ ನೆರವು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ16 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌