BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌ - Vistara News

ಬೆಂಗಳೂರು

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

BBMP Marshals : ಮಾನವೀಯತೆ ಮರೆತ ಬಿಬಿಎಂಪಿ ಮಾರ್ಷಲ್‌ಗಳು, ಬಡಪಾಯಿ ವೃದ್ಧ ವ್ಯಾಪಾರಿ ಮೇಲೆ ದರ್ಪ ತೋರಿದ್ದಾರೆ. ಮಾರಾಟಕ್ಕೆ ತಂದಿದ್ದ ಬ್ಯಾಗ್‌ಗಳನ್ನು ಕಸಿದು ದೌರ್ಜನ್ಯವೆಸಗಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

VISTARANEWS.COM


on

BBMP marshals harass street vendors in Jayanagar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅದೆಷ್ಟೋ ಬಡಪಾಯಿ ವ್ಯಾಪಾರಿಗಳು ಫುಟ್‌ಪಾತ್‌ನಲ್ಲೇ ಜೀವನ ಕಟ್ಟಿಕೊಂಡು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಆದರೆ ಬ್ರ್ಯಾಂಡ್ ಬೆಂಗಳೂರು (Brand Bengaluru) ಹೆಸರಿನಲ್ಲಿ ಬಿಬಿಎಂಪಿ ಮಾರ್ಷಲ್‌ಗಳು (BBMP Marshals) ಬೀದಿ ಬದಿ ವ್ಯಾಪಾರಿಗಳಿಗೆ ಕಿರುಕುಳ ನೀಡುತ್ತಿರುವ ಆರೋಪವು ಮತ್ತೆ ಕೇಳಿ ಬಂದಿದೆ.

ಬೆಂಗಳೂರಿನ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಸುಮಾರು 70 ವರ್ಷದ ವೃದ್ಧರೊಬ್ಬರು ರಸ್ತೆ ಬದಿಯಲ್ಲಿ ಬ್ಯಾಗ್‌ಗಳನ್ನು ಹಿಡಿದು ಮಾರಾಟ ಮಾಡುತ್ತಿದ್ದರು. ಅಲ್ಲಿಗೆ ಬಂದ ಮಾರ್ಷಲ್‌ಗಳು ವ್ಯಾಪಾರ ಮಾಡದಂತೆ ತಡೆದಿದ್ದಾರೆ. ಮಾತ್ರವಲ್ಲದೆ ವೃದ್ಧನಿಂದ ಬ್ಯಾಗ್ ಕಸಿಯಲು ಮುಂದಾಗಿದ್ದಾರೆ.

BBMP marshals harass street vendors
BBMP marshals harass street vendors

ಇದನ್ನೂ ಓದಿ: Tumkur News : ತುಮಕೂರಿನಲ್ಲಿ ಮತ್ತೆ ದುರಂತ; ಬೆಂಕಿ ಕೊಂಡ ಹಾಯುವಾಗ ಕಾಲು ಜಾರಿ ಬಿದ್ದ ಅರ್ಚಕ

ಈ ವೇಳೆ ವೃದ್ಧನ ಅಸಹಾಯಕತೆಯನ್ನು ಕಂಡು ಸ್ಥಳೀಯರು ಸಹಾಯಕ್ಕೆ ಬಂದಿದ್ದಾರೆ. ವೃದ್ಧ ಪರಿ ಪರಿಯಾಗಿ ಕೇಳಿಕೊಂಡು ಅಂಗಾಲಾಚಿದ್ದರೂ ಬಿಬಿಎಂಪಿ ಮಾರ್ಷಲ್‌ಗಳ ಮನಸ್ಸು ಕರಗಲಿಲ್ಲ. ನಿಂತಲ್ಲೇ ನಿಲ್ಲಲ್ಲ, ಓಡಾಡಿಕೊಂಡು ವ್ಯಾಪಾರ ಮಾಡುತ್ತೆನೆ ಸರ್‌.. ಯಾರಿಗೂ ತೊಂದರೆ ಮಾಡಲ್ಲ, ಅವಕಾಶ ಮಾಡಿಕೊಡಿ ಎಂದು ಬಡಪಾಯಿ ಕೇಳಿಕೊಂಡರು, ಮಾರ್ಷಲ್‌ಗಳು ಕ್ಯಾರೆ ಅಂದಿಲ್ಲ.

ಇತ್ತ ಅಲ್ಲೇ ಇದ್ದ ಸ್ಥಳೀಯರು ವೃದ್ಧನನ್ನು ಬಿಡುವಂತೆ ಮನವಿ ಮಾಡಿದರೂ, ಮಾನವೀಯತೆ ಇಲ್ಲದಂತೆ ವೃದ್ಧನ ಕೈಯಲ್ಲಿದ್ದ ಬ್ಯಾಗ್‌ ಕಿತ್ತುಕೊಂಡಿದ್ದಾರೆ ಎನ್ನಲಾಗಿದೆ. ಈ ದೌರ್ಜನ್ಯವನ್ನು ಅಲ್ಲಿದ್ದ ಕೆಲ ಸ್ಥಳೀಯರು ವಿಡಿಯೊ ಮಾಡಿ ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದಾರೆ.

ಬಡಪಾಯಿಗಳ ಮೇಲೆ ಅಧಿಕಾರಿಗಳು ದರ್ಪ ತೋರುತ್ತಾರೆ ಎಂದು ನೆಟ್ಟಿಗೆರು ಕಿಡಿಕಾರಿದ್ದಾರೆ. ಸಾಲಸೋಲ ಮಾಡಿ ಬಂಡವಾಳ ಹಾಕಿ ಮಾಲುಗಳನ್ನು ಖರೀದಿ ಮಾಡುತ್ತಾರೆ. ಬ್ರ್ಯಾಂಡ್‌ ಬೆಂಗಳೂರು ಹೆಸರಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಬಿಬಿಎಂಪಿ ಎತ್ತಂಗಡಿ ಮಾಡಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ವೈರಲ್ ಆಗುತ್ತಿದ್ದು, ಮಾರ್ಷಲ್‌ಗಳ ಈ ನಡೆಗೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Dog Meat: ಅಬ್ದುಲ್‌ ರಜಾಕ್‌ ತರಿಸುವ ಮಾಂಸದ ಮೇಲೆ ಹೆಚ್ಚುತ್ತಿದೆ ಅನುಮಾನ! ಹಲವು ಹೋಟೆಲ್‌ ಮಾಲಿಕರಿಗೆ ನೋಟೀಸ್‌

Dog Meat: ಬೆಂಗಳೂರಿನಲ್ಲಿ ಕೆ.ಜಿ ಕುರಿ ಮಾಂಸ 700-800 ರೂಪಾಯಿ ಇದೆ. ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶದ ಭಾಗದಲ್ಲೂ ಕುರಿ ಮಾಂಸದ ಬೆಲೆ 700 ರೂಪಾಯಿ ಇದೆ. ಹೀಗಿರುವಾಗ, ಅಬ್ದುಲ್ ರಜಾಕ್ ತಂಡ ಆಮದು ಮಾಡುವ ಮಾಂಸದ ಬೆಲೆ 500 ರೂ. ಯಾಕೆ ಎಂಬ ಅನುಮಾನ ಮೂಡಿದೆ.

VISTARANEWS.COM


on

dog meat abdul razak
Koo

ಬೆಂಗಳೂರು: ಬೆಂಗಳೂರಿನಲ್ಲಿ ಕಳಪೆ ಮಾಂಸ (Poor meat) ಉಣಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಗರದ ಹಲವು ಪ್ರತಿಷ್ಠಿತ ಹೋಟೆಲ್, ರೆಸ್ಟೋರೆಂಟ್ (Hotel Owners) ಮಾಲೀಕರಿಗೆ ನೊಟೀಸ್ (Notice) ನೀಡಲಾಗಿದೆ. ಅಬ್ದುಲ್‌ ರಜಾಕ್‌ (Abdul Razak) ಆಮದು ಮಾಡುತ್ತಿರುವುದು ನಾಯಿ ಮಾಂಸ (Dog Meat) ಎಂಬ ಆರೋಪ ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಆರೋಗ್ಯ ಇಲಾಖೆಯ (Health Department) ಅಧಿಕಾರಿಗಳು ಚುರುಕಾಗಿ ಕಾರ್ಯಪ್ರವೃತ್ತರಾಗಿದ್ದಾರೆ.

ಮೊದಲ ಹಂತವಾಗಿ ಒಂಬತ್ತು ಜನ ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನೊಟೀಸ್ ನೀಡಲಾಗಿದೆ. ಇವರು ಅಬ್ದುಲ್ ರಜಾಕ್ ಅವರಿಂದ ಮಾಂಸ ಪಡೆಯುತ್ತಿದ್ದ ಹೋಟೆಲ್‌, ರೆಸ್ಟೋರೆಂಟ್‌ಗಳು. ಈ ಸಂಬಂಧ ವ್ಯವಹಾರದ ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಲಾಗಿದೆ. ನಿನ್ನೆ‌ ಇಬ್ಬರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ಉಳಿದವರು ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ನಿನ್ನೆ‌ ಅಬ್ದುಲ್ ರಜಾಕ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಸೋಮವಾರವೂ ವಿಚಾರಣೆ ಮುಂದುವರಿಯಲಿದೆ. ಡೆಸಿಗ್ನೇಟ್ ಆಫೀಸರ್ ಡಾ. ಜನಾರ್ದನ್ ಅವರಿಂದ ವಿಚಾರಣೆ ನಡೆಯುತ್ತಿದೆ. ನಿನ್ನೆ ಐದಾರು ಗಂಟೆಗಳ ಕಾಲ ಅಬ್ದುಲ್ ರಜಾಕ್ ವಿಚಾರಣೆ ಎದುರಿಸಿದ್ದರು. ಸೋಮವಾರ ಕೂಡ ವಿಚಾರಣೆಗೆ ಬರುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ.

ಯಾಕೆ ಅನುಮಾನ?

ಅಬ್ದುಲ್ ರಜಾಕ್ ತಂಡ ಆಮದು ಮಾಡಿಸಿಕೊಳ್ಳುತ್ತಿರುವ ಮಾಂಸದ ಮೇಲೆ ಅನುಮಾನ ಹೆಚ್ಚಿದ್ದು, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯಿಂದ ತೀವ್ರ ತನಿಖೆಗೆ ಒಳಪಡಲಿದೆ. ಅಬ್ದುಲ್ ರಜಾಕ್ ತಂಡ ಸಪ್ಲೈ ಮಾಡುತ್ತಿದ್ದ ಹೋಟೆಲ್‌ಗಳ ಮಾಹಿತಿ ಸಂಗ್ರಹಿಸಲಾಗಿದೆ.

ಬೆಂಗಳೂರಿನಲ್ಲಿ ಕೆ.ಜಿ ಕುರಿ ಮಾಂಸ 700-800 ರೂಪಾಯಿ ಇದೆ. ರಾಜ್ಯದ ಯಾವ ಜಿಲ್ಲೆಗೆ ಹೋದರೂ 700-800 ರೂಪಾಯಿ ಕೆ.ಜಿ. ಇದೆ. ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶದ ಭಾಗದಲ್ಲೂ ಕುರಿ ಮಾಂಸದ ಬೆಲೆ 700 ರೂಪಾಯಿ ಇದೆ. ಹೀಗಿರುವಾಗ, ಅಬ್ದುಲ್ ರಜಾಕ್ ತಂಡ ಆಮದು ಮಾಡುವ ಮಾಂಸದ ಬೆಲೆ 500 ರೂ. ಯಾಕೆ? 400-500 ರೂಪಾಯಿ ಕೆ.ಜಿಗೆ ಕುರಿ ಮಾಂಸ ಮಾರಾಟ ಮಾಡಲು ಹೇಗೆ ಸಾಧ್ಯ? ಎಂಬ ಪ್ರಶ್ನೆ ಮೂಡಿದೆ.

ಬೆಂಗಳೂರಿನ 108 ಹೋಟೆಲ್‌ಗಳಿಗೆ ರಜಾಕ್‌ ಮಾಂಸ ನೀಡುತ್ತಿದ್ದರು. ಜೈಪುರದಿಂದ ಬೆಂಗಳೂರಿನ ರೈಲು ನಿಲ್ದಾಣಕ್ಕೆ ಮಾಂಸ ಪಾರ್ಸೆಲ್ ಮಾಡಲು ಕೆಜಿಗೆ 8-10 ರೂಪಾಯಿ ಚಾರ್ಜ್ ಆಗುತ್ತದೆ. ರಾಜಸ್ಥಾನದಲ್ಲಿ ಮಾಂಸ ವಧೆ ಮಾಡುವ ಜಾಗದಿಂದ ಜೈಪುರ್ ನಿಲ್ದಾಣಕ್ಕೆ ತರುವ ವಾಹನದ ಬಾಡಿಗೆ, ರೈಲಿಗೆ ಲೋಡ್ ಮಾಡುವ ಕೂಲಿ, ಬೆಂಗಳೂರಿನಲ್ಲಿ ಅನ್‌ಲೋಡ್ ಮಾಡುವ ಕೂಲಿ, ಬೆಂಗಳೂರಿನಲ್ಲಿ ಮಾಂಸ ಸರಬರಾಜು ಮಾಡುವ ಟ್ರಾನ್ಸ್‌ಪೋರ್ಟ್ ಚಾರ್ಜ್- ಎಲ್ಲಾ ವೆಚ್ಚ ಅಂದಾಜು ಸೇರಿ ಕೆ.ಜಿ ಮಾಂಸಕ್ಕೆ 100 ರೂಪಾಯಿ ಹೆಚ್ಚಿಸಬೇಕು. ಹೀಗಿರುವಾಗ ಕೆ.ಜಿ ಮಾಂಸ 400-500 ರೂ. ಹೇಗೆ ಮಾರಾಟ ಮಾಡಲು ಸಾಧ್ಯ?

ಅಂದರೆ ಅಲ್ಲಿಗೆ ಅಬ್ದುಲ್ ರಜಾಕ್ ತಂಡಕ್ಕೆ ಕುರಿ‌ ಮಾಂಸ ಕೆ.ಜಿಗೆ 200 ರೂಪಾಯಿಗೆ ಸಿಗುತ್ತಿದೆಯಾ? ಎಂಬ ಅನುಮಾನ ಮೂಡಿದೆ. ಆದರೆ ಎಲ್ಲೂ ಇಷ್ಟು ಕಡಿಮೆ ಬೆಲೆಗೆ ಮಾಂಸ ಸಿಗಲಾರದು. ಹೀಗಾಗಿ ಇದು ಕಳಪೆ ಮಾಂಸ ಅಥವಾ ನಾಯಿ ಮಾಂಸ ಇರಲೂಬಹುದು ಎಂದು ಕೆಲವರು ತರ್ಕಿಸಿದ್ದಾರೆ.

ತನಿಖೆ ಚುರುಕುಗೊಳಿಸಿದ ಕಾಟನ್ ಪೇಟೆ ಪೊಲೀಸರು

ಮಾಂಸ ಸಾಗಣೆಯ ಬಗ್ಗೆ ಕಾಟನ್‌ಪೇಟೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ರೈಲ್ವೆ ಅಧಿಕಾರಿಗಳಿಗೆ ಪತ್ರ ಬರೆದು ಮಾಹಿತಿ ಕೇಳಿದ್ದಾರೆ. ರೈಲಿನಲ್ಲಿ ಮಾಂಸ ಎಲ್ಲಿಂದ ಬರ್ತಾ ಇತ್ತು? ಎಷ್ಟು ದಿನಗಳಿಗೊಮ್ಮೆ ಬರ್ತಾ ಇತ್ತು? ಯಾವ ಟ್ರೈನ್‌ನಲ್ಲಿ ಯಾರು ತಗೊಂಡು ಬರ್ತಾ ಇದ್ರು? ಯಾವ ಪ್ಲಾಟ್‌ಫಾರಂಗೆ ರೈಲು ಬರ್ತಾ ಇತ್ತು, ಆ ಪ್ಲಾಟ್ ಫಾರಂನ ಸಿಸಿಟಿವಿ ದಾಖಲೆ, ಮಾಂಸ ಬರುವ ಸಮಯದಲ್ಲಿ ಯಾರು ಬಂದು ರಿಸೀವ್ ಮಾಡ್ತಾ ಇದ್ರು ಎಂಬ ಬಗ್ಗೆ ವಿವರ ಕೇಳಲಾಗಿದೆ.

ಮಾಧ್ಯಮಗಳಲ್ಲಿ ಅಬ್ದುಲ್ ರಜಾಕ್ ನಾನೇ ಮಾಂಸ ತರಿಸುತ್ತಿದ್ದುದಾಗಿ ಹೇಳಿಕೊಂಡಿದ್ದರು. ಹಾಗಾಗಿ ಅಬ್ದುಲ್ ರಜಾಕ್‌ಗೆ ನೋಟಿಸ್ ಕೊಟ್ಟು ವಿಚಾರಣೆಗೆ ಕರೆಯಲಾಗಿದೆ. ಅಬ್ದುಲ್ ರಜಾಕ್ ಜೊತೆಗೆ ಕೆಲ ಹೋಟೆಲ್ ಮಾಲೀಕರಿಗೂ ನೊಟೀಸ್ ನೀಡಲಾಗಿದೆ.

ಇದನ್ನೂ ಓದಿ: Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Continue Reading

ಕ್ರೈಂ

Police Firing: ಕೈ ಕಟ್‌ ಮಾಡಿದ ರೌಡಿಗಳ ಕಾಲಿಗೆ ಪೊಲೀಸರ ಗುಂಡೇಟು

Police Firing: ಕಳೆದ ವಾರ ಕನಕಪುರದ ಮಾಳಗಾಳು ಬಡಾವಣೆಯಲ್ಲಿ ಗಲಾಟೆ ನಡೆದಿತ್ತು. ಗಲಾಟೆ ವೇಳೆ ಒಬ್ಬ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕೈ ಕಟ್ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಆರೋಪಿಗಳನ್ನು ಬಂಧಿಸುವಂತೆ ದಲಿತ‌‌ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

VISTARANEWS.COM


on

rowdysheeters police firing
Koo

ರಾಮನಗರ: ಬೆಳ್ಳಂಬೆಳಿಗ್ಗೆ ರೌಡಿಶೀಟರ್‌ಗಳ (Rowdysheeters) ಮೇಲೆ ಕನಕಪುರ ನಗರ ಪೊಲೀಸರು (Kanakapura Police) ಗುಂಡು ಹಾರಿಸಿ (Police Firing) ಬಂಧಿಸಿದ್ದಾರೆ. ವ್ಯಕ್ತಿಯೊಬ್ಬನ ಕೈ ಕತ್ತರಿಸಿ (Assault Case) ಪರಾರಿಯಾಗಿದ್ದ ರೌಡಿಗಳನ್ನು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಕನಕಪುರ ಟೌನ್ ಸಿಪಿಐ ಮಿಥುನ್ ಶಿಲ್ಪಿ ಹಾಗೂ ಪಿಎಸ್ಐ ಮನೋಹರ್ ಅವರಿಂದ ಫೈರಿಂಗ್ ನಡೆದಿದೆ. ಹರ್ಷ ಅಲಿಯಾಸ್ ಕೈಮ, ಕರುಣೇಶ್ ಅಲಿಯಾಸ್ ಕಣ್ಣ ಗಾಯಗೊಂಡ ರೌಡಿಶೀಟರ್‌ಗಳು. ಕಗ್ಗಲೀಪುರದ ವ್ಯಾಲಿ ಸ್ಕೂಲ್ ರೋಡ್ ಬಳಿ ಪೊಲೀಸರಿಂದ ಫೈರಿಂಗ್ ನಡೆದಿದೆ.

ಕಳೆದ ವಾರ ಕನಕಪುರದ ಮಾಳಗಾಳು ಬಡಾವಣೆಯಲ್ಲಿ ಗಲಾಟೆ ನಡೆದಿತ್ತು. ಗಲಾಟೆ ವೇಳೆ ಒಬ್ಬ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕೈ ಕಟ್ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಆರೋಪಿಗಳನ್ನು ಬಂಧಿಸುವಂತೆ ದಲಿತ‌‌ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇಂದು ಮುಂಜಾನೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಹೋಗಿದ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಈ ರೌಡಿಗಳು ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದು ಅವರನ್ನು ಬಂಧಿಸಿದ್ದಾರೆ. ಹಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿ ರಾಜಶೇಖರ್, ಶಿವಕುಮಾರ್ ಎಂಬವರಿಗೂ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ.

ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

ರಾಯಚೂರು: ವಿಚ್ಛೇದಿತ ನರ್ಸ್‌ ಒಬ್ಬಾಕೆಯೊಂದಿಗೆ ಲವ್ವಿ ಡವ್ವಿ (Illicit Relationship) ಹೊಂದಿದ್ದ ಪೊಲೀಸ್‌ ಕಾನ್‌ಸ್ಟೇಬಲ್‌ (Police constable) ಒಬ್ಬಾತನಿಗೆ ಆತನ ಪತ್ನಿ ಕಾನೂನು ಅಸ್ತ್ರದ ಮೂಲಕ ಪಾಠ ಕಲಿಸಲು ಮುಂದಾಗಿದ್ದಾರೆ. ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ.

ಸಿರವಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜ್ ಮಹಮ್ಮದ್ ಎಂಬಾತನ ಮೇಲೆ ಆತನ ಪತ್ನಿಯಿಂದ ಕೇಸು ಬಿದ್ದಿದೆ. ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೇದೆ ಆಗಿರುವ ಪ್ಯಾರಿ ಬೇಗಂ ಎಂಬಾಕೆ ಈತನ ಪತ್ನಿ ಹಾಗೂ ದೂರು ಸಲ್ಲಿಸಿದವರು. ರಾಜ್ ಮಹಮ್ಮದ್ ಮತ್ತು ಪ್ಯಾರಿ‌ ಬೇಗಂ ಪ್ರೀತಿಸಿ ಮದುವೆಯಾದವರು. ಆದರೆ ಇತ್ತೀಚೆಗೆ ರಾಜ್‌ ಮಹಮ್ಮದ್‌ ಇನ್ನೊಬ್ಬ ಮಹಿಳೆ ಜೊತೆಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ.

ಕವಿತಾ ಆಸ್ಪತ್ರೆ ನರ್ಸ್ ಸರಳ ಎಂಬಾಕೆಯ ಜೊತೆ ಸುಮಾರು 4-5 ವರ್ಷಗಳಿಂದ ವಿವಾಹೇತರ ಸಂಬಂಧ ನಡೆಸಿದ್ದ. ಇವರಿಬ್ಬರನ್ನೂ ಮನೆಯೊಂದರಲ್ಲಿ ರೆಡ್ ಹ್ಯಾಂಡ್ ಆಗಿ ಪ್ಯಾರಿ ಬೇಗಂ ಹಿಡಿದಿದ್ದರು. ಬಳಿಕ ಪೊಲೀಸರಿಗೆ ಒಪ್ಪಿಸಿ ಪತಿ ವಿರುದ್ಧವೇ ಎಸ್ಪಿಗೆ ದೂರು ನೀಡಿದ್ದಾರೆ. ಎಸ್‌ಪಿಯನ್ನು ಭೇಟಿ ಮಾಡಿ, ‌ಬಳಿಕ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಾಜ್ ಮಹಮ್ಮದ್, ರಿಜಿಯಾ ಬೇಗಂ, ಮೈಬೂಬ್ ಮತ್ತು ಸ್ಟಾಫ್ ನರ್ಸ್ ಸರಳ ವಿರುದ್ಧ ರಾಯಚೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗರ್ಭಪಾತ, ವರದಕ್ಷಿಣೆ ಕಿರುಕುಳ (Dowry harassment), ಕೊಲೆ ಯತ್ನ (Murder attempt) ಸೇರಿದಂತೆ ಹಲವು ಆರೋಪಗಳನ್ನು ಗಂಡನ ವಿರುದ್ಧ ಪ್ಯಾರಿ ಬೇಗಂ ನೀಡಿದ್ದಾರೆ.

ಇದನ್ನೂ ಓದಿ: Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

Continue Reading

ಪ್ರಮುಖ ಸುದ್ದಿ

Uttara Kannada landslide: ಈಶ್ವರ ಮಲ್ಪೆ ತಂಡಕ್ಕೂ ಸಿಗಲಿಲ್ಲ ಲಾರಿ ಸುಳಿವು; ಅರ್ಜುನನೂ ಕಣ್ಮರೆ

Uttara Kannada landslide: ನೌಕಾಪಡೆ, ಸೇನೆ ಹಾಗೂ ದೆಹಲಿ ತಂಡ ನೀಡಿದ್ದ 4 ಜಾಗಗಳಲ್ಲಿ 3 ಜಾಗದಲ್ಲಿ ಮಲ್ಪೆಯ ಮುಳುಗುತಜ್ಞ ಈಶ್ವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. NDRF, SDRF, ಸ್ಥಳೀಯ ಮೀನುಗಾರರ ಸಹಾಯದಿಂದ ಕಾರ್ಯಾಚರಣೆ ನಡೆದಿದೆ. ಇನ್ನೊಂದು ಜಾಗದ ಪರಿಶೀಲನೆ ಬಾಕಿ ಇದೆ.

VISTARANEWS.COM


on

Uttara Kannada landslide
Koo

ಕಾರವಾರ: ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡಕುಸಿತ (Uttara Kannada landslide, Shiruru Landslide) ಪ್ರಕರಣದಲ್ಲಿ ಜಲಸಮಾಧಿಯಾಗಿರುವ ಲಾರಿ ಹಾಗೂ ಅದರ ಚಾಲಕ ಅರ್ಜುನ ಶೋಧ ಕಾರ್ಯ (Search Operation) ನಿನ್ನೆ ವಿಫಲಗೊಂಡಿದೆ. ಮುಳುಗುತಜ್ಞ ಈಶ್ವರ ಮಲ್ಪೆ ತಂಡಕ್ಕೂ ಇವರ ಪತ್ತೆ ಹಿಡಿಯುವುದು ಸಾಧ್ಯವಾಗಿಲ್ಲ.

ಮುಳುಗುತಜ್ಞರ ಕಾರ್ಯಾಚರಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ನಿನ್ನೆ ಸಂಜೆ ಮಾಹಿತಿ ನೀಡಿದ್ದಾರೆ. ನೌಕಾಪಡೆ, ಸೇನೆ ಹಾಗೂ ದೆಹಲಿ ತಂಡ ನೀಡಿದ್ದ 4 ಜಾಗಗಳಲ್ಲಿ 3 ಜಾಗದಲ್ಲಿ ಮಲ್ಪೆಯ ಮುಳುಗುತಜ್ಞ ಈಶ್ವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. NDRF, SDRF, ಸ್ಥಳೀಯ ಮೀನುಗಾರರ ಸಹಾಯದಿಂದ ಕಾರ್ಯಾಚರಣೆ ನಡೆದಿದೆ. ಇನ್ನೊಂದು ಜಾಗದ ಪರಿಶೀಲನೆ ಬಾಕಿ ಇದೆ. ಸಂಜೆಯಾದ ಹಿನ್ನಲೆ‌ ನಾಳೆ ಉಳಿದ ಒಂದು ಪ್ರದೇಶದ ಪರಿಶೀಲನೆ ನಡೆಯಲಿದೆ ಎಂದಿದ್ದಾರೆ.

ಮೂರು ಜಾಗಗಳಲ್ಲಿ ಪರಿಶೀಲಿಸಿದಾಗ ಕಲ್ಲು, ಮಣ್ಣು, ಮರದ ತುಂಡು ಹೆಚ್ಚಾಗಿ ಪತ್ತೆಯಾಗಿದೆ. ಇವುಗಳನ್ನ ತೆರವುಗೊಳಿಸಿ ಆಳದಲ್ಲಿ ಪರಿಶೀಲನೆ ನಡೆಸಬೇಕಿದೆ. ನೀರಿನ ಹರಿವು 10 ನಾಟ್ಸ್‌ಗಿಂತ ಹೆಚ್ಚಾಗಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ನಾಳೆ ಒಮ್ಮೆ ಕೊನೆಯ ಪ್ರಯತ್ನವನ್ನ ಮಾಡುತ್ತೇವೆ. ಇದುವರೆಗೆ ಪರಿಶೀಲಿಸಿದ ಜಾಗದಲ್ಲಿ ಯಾವುದೇ ಮೆಟಲ್ ಡಿಟೆಕ್ಟ್ ಆಗಿಲ್ಲ. ನಾಳೆ ಪ್ರಮುಖ ಒಂದು ಸ್ಥಳದ ಪರಿಶೀಲನೆ ಇದೆ. ಇದರೊಂದಿಗೆ ನೌಕಾಪಡೆ, ಸೇನೆಯವರು ಸೋನಾರ್ ಡಿಟೆಕ್ಷನ್ ಕೂಡಾ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಕಲ್ಲು, ಮಣ್ಣು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಲಾರಿ ಇದೆ ಎನ್ನಲಾದ ಸ್ಥಳದಲ್ಲಿ ಬೃಹತ್ ಗಾತ್ರದ ಬಂಡೆಗಲ್ಲು ಕಂಡುಬಂದಿದೆ. ಬಂಡೆಗಲ್ಲಿನ ಕೆಳಗೆ ಲಾರಿ ಇರುವ ಸಾಧ್ಯತೆ ಇದೆ. ಈ ಕುರಿತು ಮತ್ತೊಮ್ಮೆ ಸಭೆ ನಡೆಸಿ ನಾಳೆ ಕಾರ್ಯಾಚರಣೆ ಮುಂದುವರೆಸುತ್ತೇವೆ. ನಾವು ಇದುವರೆಗೂ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ ಎಂದೇ ಶೋಧ ನಡೆಸುತ್ತಿದ್ದೇವೆ. ಯಾರೂ ಸಹ ಮೃತಪಟ್ಟಿದ್ದಾರೆ ಎಂದು ನಾವು ಪರಿಗಣನೆ ಮಾಡಿಲ್ಲ. ಸಾಧ್ಯವಾದ ಎಲ್ಲ ಕಡೆ ಕಣ್ಮರೆಯಾಗಿರುವವರಿಗೆ ಶೋಧ ನಡೆಸಲಾಗುತ್ತಿದೆ. ಸಾರ್ವಜನಿಕರು ಸಹ ಯಾವುದೇ ಮಾಹಿತಿ ಸಿಕ್ಕಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಿ ಎಂದು ಶಿರೂರಿನಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಹೇಳಿಕೆ ನೀಡಿದ್ದಾರೆ.

ಈಶ್ವರ ಮಲ್ಪೆ ತಂಡದ ಸದಸ್ಯನಿಗೆ ಗಾಯ

ಕಾರ್ಯಾಚರಣೆಗೆ ಆಗಮಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ತಂಡದ ಓರ್ವ ಸದಸ್ಯನಿಗೆ ಗಾಯವಾಗಿದೆ. ಈಶ್ವರ ಮಲ್ಪೆ ತಂಡದ ದೀಪು ಎನ್ನುವವರು ಸ್ಥಳದಲ್ಲಿ ಡೈವಿಂಗ್ ಕಾರ್ಯಾಚರಣೆ ಮಾಡುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈಶ್ವರ ಮಲ್ಪೆ ಯಾರು?

ಮೂಲತಃ ಈಶ್ವರ್ ಮಲ್ಪೆ ಆಂಬ್ಯುಲೆನ್ಸ್ ಡ್ರೈವರ್ ಆಗಿದ್ದು, ಸಾಕಷ್ಟು ಜನರ ಪ್ರಾಣ ಉಳಿಸಿದ್ದಾರೆ. ನದಿಯ ಆಳಕ್ಕೆ ಇಳಿದು ನಾಪತ್ತೆಯಾದ ಮೃತದೇಹಗಳನ್ನು ಪತ್ತೆ ಹಚ್ಚುವ ಸಾಹಸಿ ಇವರು. ಅದೆಷ್ಟೇ ಆಳವಿರಲಿ, ಅಪಾಯಕಾರಿ ಸ್ಥಳವಿರಲಿ ಅಲ್ಲಿಗೆ ಇಳಿದು ಮೃತದೇಹಗಳನ್ನು ತೆಗೆದಿದ್ದಾರೆ. ಎಂಥದ್ದೇ ಪರಿಸ್ಥಿತಿ ಇದ್ದರೂ ಕರೆ ಬಂದ ತಕ್ಷಣ ಓಡಿ ಬರುತ್ತಾರೆ. ಕಳೆದ ವರ್ಷ ಜುಲೈ 23ರಂದು ಅರಿಶಿನ ಗುಂಡಿ ಜಲಪಾತದಲ್ಲಿ ಭದ್ರಾವತಿ ಮೂಲದ ಶರತ್ ಎಂಬಾತ ಕಾಲು ಜಾರಿ ನೀರಿಗೆ ಬಿದ್ದು ಸೌಪರ್ಣಿಕಾ ನದಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದ. ಮರದ ಬೇರಿಗೆ ಸಿಲುಕಿ ದೇಹ ಅಲ್ಲಿಯೇ ಇತ್ತು. ಆರು ದಿನಗಳ ಬಳಿಕ ಆ ಮೃತದೇಹವನ್ನು ಈಶ್ವರ್ ಮಲ್ಪೆ ಹೊರಕ್ಕೆ ತೆಗೆದಿದ್ದರು.

ಇದನ್ನೂ ಓದಿ: Uttara Kannada Landslide: ಶಿರೂರು ಗುಡ್ಡಕುಸಿತ; ಅರ್ಜುನ್‌ ಶೋಧಕ್ಕೆ ಸಿಎಂ ಸಿದ್ದರಾಮಯ್ಯಗೆ ಪಿಣರಾಯಿ ಮೊರೆ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಹೆಚ್ಚಲಿದೆ ಗಾಳಿ ವೇಗ; ಕರಾವಳಿ, ಮಲೆನಾಡಿನಲ್ಲಿ ಭಯಂಕರ ಮಳೆ

Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಭಾನುವಾರವೂ (Rain News) ಮುಂದುವರಿಯಲಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯು (Karnataka Weather Forecast) ಜನರ ನಿದ್ದೆಗೆಡಿಸಿದೆ. ಅದರಲ್ಲೂ ನದಿ ಪಾತ್ರದ ಜನರು ಗಂಟುಮೂಟೆ ಕಟ್ಟಿಕೊಂಡು ಮನೆ ಖಾಲಿ ಮಾಡಿದ್ದಾರೆ. ಸದ್ಯ ಭಾನುವಾರವೂ ಗಾಳಿ ಜತೆಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಪ್ರತ್ಯೇಕವಾಗಿ ಹಗುರದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

ಬೆಂಗಳೂರಿನಲ್ಲಿ ರಭಸವಾಗಿ ಬೀಸಲಿದೆ ಗಾಳಿ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ

ಆರೆಂಜ್‌ ಅಲರ್ಟ್‌

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಉಡುಪಿ, ಬೀದರ್,ಕಲಬುರಗಿ ಮತ್ತು ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
sunil bose savitha viral news
ವೈರಲ್ ನ್ಯೂಸ್31 seconds ago

Viral News: ಮದುವೆಯೇ ಆಗಿಲ್ಲ ಎಂದ ಚಾಮರಾಜನಗರ ಸಂಸದ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟರು!

Geyser Blast
ತಂತ್ರಜ್ಞಾನ4 mins ago

Geyser Blast: ಬಾಂಬ್‌‌ನಂತೆ ಬ್ಲಾಸ್ಟ್ ಆಗಬಹುದು ಗೀಸರ್! ಮಳೆಗಾಲದಲ್ಲಿ ಈ ಮುನ್ನೆಚ್ಚರಿಕೆ ಇರಲಿ

Mysuru News
ಕ್ರೈಂ24 mins ago

Mysuru News : ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ

Actor Darshan case Police Serve Notice To Siddarudha Who Claimed To Met Darshan
ಸ್ಯಾಂಡಲ್ ವುಡ್28 mins ago

Actor Darshan: ದರ್ಶನ್​ ಭೇಟಿ ಮಾಡಿ, ಯೋಗ, ಧ್ಯಾನ ಹೇಳಿಕೊಟ್ಟೆ ಎಂದ ಸಿದ್ಧಾರೂಢನಿಗೆ ಸಂಕಷ್ಟ! ನೋಟಿಸ್‌ ಕೊಟ್ಟ ಪೊಲೀಸರು!

hd kumaraswamy nanjanagudu
ಪ್ರಮುಖ ಸುದ್ದಿ31 mins ago

HD Kumaraswamy: ಎಚ್‌ಡಿ ಕುಮಾರಸ್ವಾಮಿ ಬಂದರೂ ತೆಗೆಯದ ಪ್ರವಾಸಿ ಮಂದಿರ ಬೀಗ, ಕೇಂದ್ರ ಸಚಿವರಿಗೆ ಅವಮಾನ

RRB Recruitment 2024
ಉದ್ಯೋಗ33 mins ago

RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Paris 2024 Olympics
ಕ್ರೀಡೆ34 mins ago

Paris 2024 Olympics: ಭಾರತೀಯ ಕ್ರೀಡಾಪಟುಗಳಿಗೆ ವಸ್ತ್ರ ವಿನ್ಯಾಸ ಮಾಡಿದ್ದ ತರುಣ್‌ ವಿರುದ್ಧ ಟೀಕೆಗಳ ಸುರಿಮಳೆ

road Accident
ರಾಯಚೂರು49 mins ago

Road Accident : ಕುಡಿದು ಕಾರು ಓಡಿಸಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು ; ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟ

Delhi Floods
ದೇಶ56 mins ago

Delhi Floods: ದೆಹಲಿಯಲ್ಲಿ ಕೋಚಿಂಗ್‌ ಸೆಂಟರ್‌ಗೆ ನುಗ್ಗಿದ ನೀರು; ಮೃತರ ಸಂಖ್ಯೆ 3ಕ್ಕೆ ಏರಿಕೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

dog meat abdul razak
ಕ್ರೈಂ1 hour ago

Dog Meat: ಅಬ್ದುಲ್‌ ರಜಾಕ್‌ ತರಿಸುವ ಮಾಂಸದ ಮೇಲೆ ಹೆಚ್ಚುತ್ತಿದೆ ಅನುಮಾನ! ಹಲವು ಹೋಟೆಲ್‌ ಮಾಲಿಕರಿಗೆ ನೋಟೀಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ22 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ23 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌