BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಬಾಕಿದಾರರಿಗೆ ಗುಡ್ ನ್ಯೂಸ್, ಬಾಕಿ ಪಾವತಿಗೆ ಸೆ.30ರವರೆಗೆ ಅವಧಿ ವಿಸ್ತರಣೆ - Vistara News

ಬೆಂಗಳೂರು

BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಬಾಕಿದಾರರಿಗೆ ಗುಡ್ ನ್ಯೂಸ್, ಬಾಕಿ ಪಾವತಿಗೆ ಸೆ.30ರವರೆಗೆ ಅವಧಿ ವಿಸ್ತರಣೆ

BBMP Property Tax: ಇದೀಗ 2 ತಿಂಗಳವರೆಗೆ ಒಟಿಎಸ್ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಸೂಚನೆಯಂತೆ ವಿಸ್ತರಣೆ ಮಾಡಲಾಗಿದೆ.

VISTARANEWS.COM


on

BBMP Property Tax Hike postpone
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ಮಹಾನಗರಪಾಲಿಕೆಯ (BBMP) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿ ಬಾಕಿ (BBMP Property Tax) ಉಳಿಸಿಕೊಂಡಿರುವವರಿಗೆ ಬಿಬಿಎಂಪಿ ಸಿಹಿ ಸುದ್ದಿ ನೀಡಿದೆ. ಒನ್ ಟೈಮ್ ಸೆಟಲ್ ಮೆಂಟ್‌ಗೆ (One time Settlement) ಕಾಲಾವಕಾಶವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.

ಒಟಿಎಸ್ ಮೂಲಕ ತೆರಿಗೆ ಪಾವತಿಗೆ ಸೆಪ್ಟೆಂಬರ್ 30ರ ತನಕ ಅವಕಾಶ ನೀಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಮಹಾನಗರಪಾಲಿಕೆ ಅಧಿಕೃತ ಆದೇಶ ಹೊರಡಿಸಿವೆ. ಈ ಹಿಂದೆ ಜುಲೈ 31ರ ತನಕ ಮಾತ್ರ ಡೆಡ್‌ಲೈನ್ ನೀಡಿದ್ದರು. ತೆರಿಗೆದಾರರಿಂದ ವಿಸ್ತರಣೆಗೆ ಮನವಿ ಹಿನ್ನೆಲೆಯಲ್ಲಿ ಒಂದು ತಿಂಗಳ ವಿಸ್ತರಣೆ ಚಿಂತನೆ ನಡೆದಿತ್ತು.

ಇದೀಗ 2 ತಿಂಗಳವರೆಗೆ ಒಟಿಎಸ್ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಸೂಚನೆಯಂತೆ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 30ರ ತನಕ ಆಸ್ತಿ ತೆರಿಗೆ ಬಾಕಿ ಪಾವತಿಗೆ ಅವಕಾಶ ಕೊಟ್ಟ ಪಾಲಿಕೆ, ತದನಂತರ ವಿಸ್ತರಣೆ ಇಲ್ಲ ಎಂದಿದೆ. ಒಟಿಎಸ್‌ ಅವಕಾಶದಲ್ಲಿ ತೆರಿಗೆ ಮೇಲಿನ ಸಂಪೂರ್ಣ ಬಡ್ಡಿ ಮನ್ನಾ, ಜೊತೆಗೆ ದಂಡದಲ್ಲಿ ಶೇ.50ರಷ್ಟು ರಿಯಾಯಿತಿಯನ್ನು ಪಾಲಿಕೆ ನೀಡಿದೆ.

ಬೆಂಗಳೂರು ನಗರ ಅಭಿವೃದ್ಧಿಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾರ್ಚ್‌ನಲ್ಲಿ ತೆರಿಗೆ ಸಂಗ್ರಹವನ್ನು ಸುಗಮಗೊಳಿಸಲು ಮತ್ತು ಆದಾಯವನ್ನು ಹೆಚ್ಚಿಸಲು ಹೊಸ ಆಸ್ತಿ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸಿದ್ದರು. ಎಂದಿಗೂ ತೆರಿಗೆ ಪಾವತಿಸದ ಆಸ್ತಿ ಮಾಲೀಕರಿಗೆ ಒಂದು ಬಾರಿ ಪರಿಹಾರದ ಆಯ್ಕೆಯನ್ನು ಅವರು ಈ ಯೋಜನೆಯ ಅಡಿಯಲ್ಲಿ ಘೋಷಿಸಿದ್ದರು.

ಆಸ್ತಿ ಮಾಲೀಕರಿಗೆ ಪರಿಹಾರ ನೀಡಲು ಬೆಂಗಳೂರಿನಲ್ಲಿ ಬಾಕಿ ಉಳಿದಿರುವ ಆಸ್ತಿ ತೆರಿಗೆ ಪಾವತಿ ವಿಂಡೋವನ್ನು ಈ ವರ್ಷ ಏಪ್ರಿಲ್ 30ರಿಂದ ಜುಲೈ 31ರವರೆಗೆ ವಿಸ್ತರಿಸಲಾಗಿತ್ತು. ಜುಲೈ 31ರ ಗಡುವು ಮೀರಿದ ಬಳಿಕ ಅವಧಿ ವಿಸ್ತರಣೆಗೆ ತೆರಿಗೆ ಪಾವತಿ ಬಾಕಿದಾರರಿಂದ ಒತ್ತಾಯ ಬಂದಿತ್ತು.

ಹೆಚ್ಚು ಬಾಕಿ ಯಾವ ವಲಯದ್ದು?

ಮಹದೇವಪುರ ವಲಯವು 60,000ಕ್ಕೂ ಹೆಚ್ಚು ಆಸ್ತಿಗಳೊಂದಿಗೆ ಮುಂಚೂಣಿಯಲ್ಲಿದ್ದು, ಒಟ್ಟು 124.23 ಕೋಟಿ ರೂ. ಬಾಕಿಯನ್ನು ಹೊಂದಿದೆ. ಬೊಮ್ಮನಹಳ್ಳಿ 45,381 ಆಸ್ತಿಗಳಿಂದ 71.10 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಕಿಅಂಶಗಳ ಪ್ರಕಾರ ಏಪ್ರಿಲ್ 1 ರಿಂದ ಜುಲೈ 29 ರ ನಡುವೆ 184.77 ಕೋಟಿ ರೂ. ಮೊತ್ತದ 1,07,344 ಆಸ್ತಿಗಳ ಆಸ್ತಿ ತೆರಿಗೆ ಪಾವತಿಸಲಾಗಿದೆ.

ಒಟ್ಟು 282.59 ಕೋಟಿ ರೂ. ಮೊತ್ತದ 16,904 ಆಸ್ತಿಗಳನ್ನು ಒಳಗೊಂಡ ಪರಿಷ್ಕರಣೆ ಪ್ರಕರಣಗಳು 2024ರ ಜುಲೈ 29ರವರೆಗೆ ಬಾಕಿ ಉಳಿದಿವೆ ಎಂದು ಅಂಕಿ ಅಂಶಗಳಿಂದ ಬಹಿರಂಗವಾಗಿದೆ. ಬಿನ್ನಿಪೇಟೆ, ಬಸವನಗುಡಿ, ಹನುಮಂತನಗರ ಮತ್ತು ಜಯನಗರದಂತಹ ಪ್ರದೇಶಗಳನ್ನು ಒಳಗೊಂಡಿರುವ ಪಶ್ಚಿಮ ವಲಯವು ಅತಿ ಹೆಚ್ಚು ಬಾಕಿ ಉಳಿಸಿಕೊಂಡಿದೆ. ಇವು ಒಟ್ಟು ಸೇರಿ 3,474 ಆಸ್ತಿ ಪ್ರಕರಣಗಳನ್ನು ಒಳಗೊಂಡಿವೆ.

“ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುತ್ತಿರುವವರಿಗೆ ತೊಂದರೆಯಾಗದ ರೀತಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲಾಗುವುದು. ಒಂದು ವೇಳೆ ಯಾರಾದರೂ ಹೆಚ್ಚಿಗೆ ಹಣ ಪಾವತಿ ಮಾಡಿದ್ದರೆ, ಮುಂದಿನ ಬಾರಿ ಆಸ್ತಿ ತೆರಿಗೆ ಪಾವತಿ ವೇಳೆ ಅದನ್ನು ವಜಾಗೊಳಿಸಲಾಗುವುದು. ಈ ವಿಚಾರದಲ್ಲಿ ಅನಗತ್ಯವಾಗಿ ಗಾಬರಿಯಾಗುವುದು ಬೇಡ” ಎಂದು ಡಿಕೆ ಶಿವಕುಮಾರ್ ಹೇಳಿ‌ದ್ದರು.

ಇದನ್ನೂ ಓದಿ: BBMP Property Tax: ಆಸ್ತಿ ತೆರಿಗೆ ಒನ್‌ ಟೈಮ್‌ ಸೆಟ್ಲ್‌ಮೆಂಟ್‌ಗೆ ಮತ್ತೆ 1 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಿದ ಬಿಬಿಎಂಪಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Gold Rate Today: ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಹೀಗಿದೆ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,425 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,009 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,400 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,250 ಮತ್ತು ₹ 6,42,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,072 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,090 ಮತ್ತು ₹ 7,00,900 ತಲುಪಿದೆ.

VISTARANEWS.COM


on

gold rate today
Koo

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸತತವಾಗಿ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 9) ಚಿನ್ನದ ದರ ಕೊಂಚ ಹೆಚ್ಚಾಗಿದೆ.(Gold Rate Today). ಮಂಗಳವಾರದಿಂದ ಬೆಲೆ ಸತತವಾಗಿ ಇಳಿಕೆಯಾಗುತ್ತಿರುವುದರಿಂದ ಗ್ರಾಹಕರ ಮೊಗದಲ್ಲಿ ನಗು ಮೂಡಿಸಿತ್ತು. ಆದರೆ ಇಂದು ಬೆಂಗಳೂರಿನಲ್ಲಿ 1 ಗ್ರಾಂ 22 ಕ್ಯಾರಟ್‌ ಚಿನ್ನದ ದರದಲ್ಲಿ 75ರೂ. ಮತ್ತು 24 ಕ್ಯಾರಟ್‌ ಚಿನ್ನಕ್ಕೆ 82ರೂ. ಹೆಚ್ಚಾಗಿದೆ

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,425 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,009 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,400 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,250 ಮತ್ತು ₹ 6,42,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,072 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,090 ಮತ್ತು ₹ 7,00,900 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,440₹ 7,024
ಮುಂಬೈ₹ 6,425₹ 7,009
ಬೆಂಗಳೂರು₹ 6,425₹ 7,009
ಚೆನ್ನೈ₹ 6,425₹ 7,009

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 80.75 ಹಾಗೂ 8 ಗ್ರಾಂಗೆ ₹ 646 ಇದೆ. 10 ಗ್ರಾಂ ₹ 807.50 ಹಾಗೂ 1 ಕಿಲೋಗ್ರಾಂ ₹ 80,750 ಬೆಲೆ ಬಾಳುತ್ತದೆ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

ಇದನ್ನೂ ಓದಿ: Actor Darshan:  ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟ ಚಲನಚಿತ್ರ ವಾಣಿಜ್ಯ ಮಂಡಳಿ

Continue Reading

ಬೆಂಗಳೂರು

UGCET 2024: ಯುಜಿಸಿಇಟಿ ಮೊದಲ ಅಣಕು ಸೀಟು ಹಂಚಿಕೆ ಫಲಿತಾಂಶ ಇಂದು ಸಂಜೆ 6 ಗಂಟೆಗೆ ಪ್ರಕಟ

UGCET 2024: ಯುಜಿಸಿಇಟಿ ಮೊದಲ ಅಣಕು ಸೀಟು ಹಂಚಿಕೆ ಫಲಿತಾಂಶ ಶುಕ್ರವಾರ ಸಂಜೆ 6 ಗಂಟೆಗೆ ಪ್ರಕಟಗೊಳ್ಳಲಿದೆ. ಜತೆಗೆ ಯುಜಿಸಿಇಟಿ, ಯುಜಿನೀಟ್‌ ವಿವಿಧ ಕಂಡಿಕೆಗಳಡಿ ಕ್ಲೇಮ್ ಮಾಡಿದವರಿಗೆ ಆ.9ರವರೆಗೆ ದಾಖಲೆ ಪರಿಶೀಲನೆ ಮಾಡಿಸಿಕೊಳ್ಳಬೇಕು.

VISTARANEWS.COM


on

By

UGCET 2024
Koo

ಬೆಂಗಳೂರು: ಯುಜಿಸಿಇಟಿ 2024ರ (UGCET 2024) ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶವನ್ನು ಆಗಸ್ಟ್ 9ರ ಸಂಜೆ 6ಗಂಟೆ‌ ನಂತರ ಕೆಇಎ (KEA) ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಈ ಕುರಿತು ಕೆಇಎ ಟ್ವೀಟ್‌ (ಎಕ್ಸ್‌) ಮೂಲಕ ತಿಳಿಸಿದೆ.

ಇಂಜಿನಿಯರಿಂಗ್ (Engineering) ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ (UGCET 2024) ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಿರುವ ಸಿಇಟಿ ರ‍್ಯಾಂಕಿಂಗ್ (CET Ranking) ಅಭ್ಯರ್ಥಿಗಳಿಗೆ ಇಂದು (August 9) ಸಂಜೆ 6 ಗಂಟೆಗೆ ಅಣಕು ಸೀಟು ಹಂಚಿಕೆ (Mock Seat Sharing) ಫಲಿತಾಂಶ ಪ್ರಕಟಗೊಳ್ಳಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಕುರಿತು ಅಪ್‌ಡೇಟ್‌ ನೀಡಲಿದೆ.

ಅಭ್ಯರ್ಥಿಗಳಿಗೆ ತಮ್ಮ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿತ್ತು. ಇಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜುಗಳ ಆಯ್ಕೆ ಆಪ್ಷನ್‌ ಮೂಲಕ ನಡೆದಿದೆ. ಇಂದು ಅಣಕು ಸೀಟು ಹಂಚಿಕೆ ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಲಾಗಿತ್ತು. ಜು.30ರಂದು ಕೊನೆಯಾಗಲಿದ್ದ ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ವಿಸ್ತರಿಸಲಾಗಿತ್ತು. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿತ್ತು. ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಇದನ್ನೂ ಓದಿ: Karnataka Weather : ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

ವಿವಿಧ ಕಂಡಿಕೆಗಳಡಿ ಕ್ಲೇಮ್ ಮಾಡಿದವರಿಗೆ ಆ.9ರವರೆಗೆ ದಾಖಲೆ ಪರಿಶೀಲನೆ

ಅರ್ಹತಾ ಕಂಡಿಕೆಗಳಾದ ಬಿ, ಸಿ, ಡಿ, ಐ, ಜೆ, ಕೆ, ಎಲ್, ಎಂ, ಎನ್- ಕ್ಲೇಮ್ ಮಾಡಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರು ನಿಗದಿತ ದಿನಾಂಕಗಳಂದು ದಾಖಲೆಗಳ ಪರಿಶೀಲನೆಗೆ ಹಾಜರಾಗದೇ ಇದ್ದರೆ ಅಂತಹವರು ಆಗಸ್ಟ್ 9ರವರೆಗೆ ಕೆಇಎ ಕಚೇರಿಗೆ ಖುದ್ದು ಹಾಜರಾಗಿ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳದೇ ಇದ್ದಲ್ಲಿ ಅಂತಹವರು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹರಾಗುವುದಿಲ್ಲ.

ಸಿಇಟಿ ಪರಿಶೀಲನಾ ಅರ್ಜಿಯೇ ಸಾಕು

ಈ ಮೇಲ್ಕಂಡ ಕಂಡಿಕೆಗಳಲ್ಲಿ ದಾಖಲೆಗಳ ಪರಿಶೀಲನೆ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಆಯಾ ದಿನವೇ ಪರಿಶೀಲನಾ ಪತ್ರ (ವೆರಿಫಿಕೇಷನ್ ಸ್ಲಿಪ್) ನೀಡಿದ್ದು, ಅದನ್ನೇ ಯುಜಿನೀಟ್ ಪ್ರವೇಶಕ್ಕೂ ಬಳಸಬಹುದು. ಯುಜಿಸಿಇಟಿ ಅರ್ಜಿಗೆ ಯುಜಿನೀಟ್ ರೋಲ್ ಸಂಖ್ಯೆಯನ್ನು ಲಿಂಕ್ ಮಾಡಬೇಕು ಮತ್ತು ಅರ್ಜಿ ಪ್ರತಿಯನ್ನು ಮುದ್ರಣ ಮಾಡಿಕೊಳ್ಳಬೇಕು. ಅಂತಹವರು ಯುಜಿನೀಟ್ ವೆರಿಫಿಕೇಷನ್ ಸ್ಲಿಪ್ ಡೌನ್ ಲೋಡ್ ಮಾಡಿಕೊಳ್ಳುವ ಅಗತ್ಯ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಯುಜಿಸಿಇಟಿ ವೆರಿಫಿಕೇಷನ್ ಸ್ಲಿಪ್ ನಲ್ಲಿ ಮುದ್ರಿತವಾಗಿರುವ ಸೀಕ್ರೆಟ್ ಕೀ ಮತ್ತು ಅರ್ಜಿ ಸಂಖ್ಯೆಯನ್ನೇ ನಮೂದಿಸಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಇಚ್ಛೆಗಳನ್ನು (ಆಪ್ಷನ್) ದಾಖಲಿಸಬಹುದು. ಇದಕ್ಕೆ ಸದ್ಯದಲ್ಲೇ ಪೋರ್ಟಲ್ ಅನ್ನು ತೆರೆಯಲಾಗುವುದು. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್ ಗೆ ಭೇಟಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Dengue Fever: ಡೆಂಗ್ಯುವಿಗೆ ಬೆಂಗಳೂರಿನಲ್ಲಿ ಹೆಡ್‌ ಕಾನ್ಸ್‌ಟೇಬಲ್‌ ಬಲಿ, 11ಕ್ಕೇರಿದ ಸಾವಿನ ಸಂಖ್ಯೆ

Dengue Fever: ರಾಜ್ಯದಲ್ಲಿ ಇದುವರೆಗೂ 10 ಜನ ಡೆಂಗ್ಯೂಗೆ ಬಲಿಯಾಗಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ನಾಲ್ವರು, ಶಿವಮೊಗ್ಗದಲ್ಲಿ ಇಬ್ಬರು, ಹಾಸನದಲ್ಲಿ ಇಬ್ಬರು, ಧಾರವಾಡ ಮತ್ತು ಹಾವೇರಿಯಲ್ಲಿ ಒಂದೊಂದು ಸಾವಾಗಿದೆ.

VISTARANEWS.COM


on

dengue fever death bangalore
Koo

ಬೆಂಗಳೂರು: ರಾಜಧಾನಿಯಲ್ಲಿ (Bangalore) ಡೆಂಗ್ಯು ಜ್ವರದಿಂದ (Dengue Fever) ಬಳಲುತ್ತಿದ್ದ ಹೆಡ್ ಕಾನ್‌ಸ್ಟೇಬಲ್ (Head Constable) ಒಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ, ಬೆಂಗಳೂರಿನಲ್ಲಿ ಡೆಂಗ್ಯುವಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದೆ. ರಾಜ್ಯದಲ್ಲಿ ಇದುವರೆಗೆ 11 ಮಂದಿ ಡೆಂಗ್ಯು ಜ್ವರದಿಂದ (Dengue Death) ಮೃತಪಟ್ಟಿದ್ದಾರೆ.

ಇನ್‌ಫ್ಯಾಂಟ್ರಿ ರಸ್ತೆಯ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ CCRB (ಸಿಟಿ ಕ್ರೈಂ ರೆಕಾರ್ಡ್ಸ್ ಬ್ಯೂರೋ) ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮಶೇಖರ್, ಡೆಂಗ್ಯು ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.

ರಾಜ್ಯದಲ್ಲಿ (Karnataka) ಡೆಂಗ್ಯೂ (Dengue fever) ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಇಲ್ಲಿಯವರೆಗೂ ರಾಜ್ಯದಲ್ಲಿ 19,923 ಡೆಂಗ್ಯೂ ಪ್ರಕರಣ ದಾಖಲಾಗಿ 20 ಸಾವಿರ ಸನಿಹದತ್ತ ಮುನ್ನುಗ್ಗುತ್ತಿದೆ. ರಾಜ್ಯದಲ್ಲಿ ಇದುವರೆಗೂ 10 ಜನ ಡೆಂಗ್ಯೂಗೆ ಬಲಿಯಾಗಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ನಾಲ್ವರು, ಶಿವಮೊಗ್ಗದಲ್ಲಿ ಇಬ್ಬರು, ಹಾಸನದಲ್ಲಿ ಇಬ್ಬರು, ಧಾರವಾಡ ಮತ್ತು ಹಾವೇರಿಯಲ್ಲಿ ಒಂದೊಂದು ಸಾವಾಗಿದೆ. ಜೊತೆಗೆ ಪ್ರತಿನಿತ್ಯ ಮೂನ್ನೂರರ ಸನಿಹಕ್ಕೆ ಕೇಸ್ ದಾಖಲಾಗುತ್ತಿವೆ. ಮಂಗಳವಾರ 259 ಡೆಂಗ್ಯೂ ಕೇಸ್ ದಾಖಲಾಗಿವೆ. ಬೆಂಗಳೂರು, ಧಾರವಾಡ, ಹಾವೇರಿ ಸೇರಿದಂತೆ ಎಂಟಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎರಡಂಕಿಯಲ್ಲಿ ಕೇಸ್ ದಾಖಲಾಗುತ್ತಿದೆ.

ಆರೋಗ್ಯ ಸಚಿವರ ಸೂಚನೆ

ರಾಜ್ಯದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು (Dengue Fever) ಕಂಡುಬಂದಿರುವ 10 ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಉಪನಿರ್ದೇಶಕರು ತೆರಳಿ ಭೇಟಿ ನೀಡಿ, ಮೇಲ್ವಿಚಾರಣೆ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜತೆ ಕಳೆದ ವಾರ ಸಭೆ ನಡೆಸಿದ್ದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ಸೂಚನೆ ನೀಡಿದರು.

ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಇಷ್ಟರೊಳಗೆ ಡೆಂಗ್ಯೂ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಮುಖ ಕಂಡುಬರಬೇಕಿತ್ತು. ಪ್ರಕರಣಗಳು ವರದಿಯಾಗುತ್ತಿರುವುದನ್ನು ನೋಡಿದರೆ ಇನ್ನೂ ಎರಡು ತಿಂಗಳು ನಾವು ಅಲರ್ಟ್ ಆಗಿರಬೇಕು. ಹೀಗಾಗಿ ಜಿಲ್ಲಾಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಹಕಾರ ನೀಡಿ ಡೆಂಗ್ಯೂ ಹತೋಟಿಗೆ ತರುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮ ಅಭಿಯಾನದ ರೀತಿಯಲ್ಲಿ ನಡೆಯಬೇಕು. ಜನರಲ್ಲಿ ಡೆಂಗ್ಯೂ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಆದರೆ ಡೆಂಗ್ಯೂ ಹತೋಟಿಗೆ ತರುವ ಕ್ರಮಗಳು ಸ್ಥಳದಲ್ಲಿ ಅನುಷ್ಠಾನಗೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಶೇಷವಾಗಿ ಆರೋಗ್ಯ ಇಲಾಖೆಯ ಉಪ ನಿರ್ದೇಶಕರ ಮಟ್ಟದ ಅಧಿಕಾರಿಗಳು ಡೆಂಗ್ಯೂ ಹೆಚ್ಚಿರುವ ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಟಿ ಮೇಲ್ವಿಚಾರಣೆ ನಡೆಸುವಂತೆ ಸಚಿವರು ಸೂಚನೆ ನೀಡಿದರು. ಕೇವಲ ಭೇಟಿ ಕೊಡುವುದಲ್ಲ. ಎರಡು ಮೂರು ದಿನಗಳವರೆಗೆ ಸ್ಥಳದಲ್ಲೇ ಇದ್ದು ಮಾನಿಟರ್ ಮಾಡಬೇಕು. ಸ್ಥಳದಲ್ಲಿ ಡೆಂಗ್ಯೂ ನಿಯಂತ್ರಣ ಕ್ರಮಗಳು ಅನುಷ್ಠಾನ ಆಗುತ್ತಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಇದನ್ನೂ ಓದಿ: Dengue Fever: ಡೆಂಗ್ಯೂ ಜ್ವರ ಕಡಿಮೆ ಆದ ಮೇಲೆ ಎಚ್ಚರ ತಪ್ಪಿದರೆ ಪ್ರಾಣಾಪಾಯ!

Continue Reading

ಪ್ರಮುಖ ಸುದ್ದಿ

CM Siddaramaiah: ಇಂದು ಮೈಸೂರಿನಲ್ಲಿ ಜನಾಂದೋಲನ ಸಮಾವೇಶ: ದೋಸ್ತಿಗಳ ವಿರುದ್ಧ ಅಬ್ಬರಿಸಲಿದೆ ಸಿದ್ದರಾಮಯ್ಯ ಪಡೆ, ʼಸಂಚುʼ ಕೃತಿ ಬಿಡುಗಡೆ

ಸುಮಾರು 4 ಲಕ್ಷಕ್ಕೂ ಅಧಿಕ ಜನರನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ (CM Siddaramaiah) ಕೈ ಪಡೆ ಸೇರಿಸಲು ನಿರ್ಧಾರ ಮಾಡಿದ್ದು, ದೋಸ್ತಿಗಳ ವಿರುದ್ಧ ʼಸಂಚುʼ ಎಂಬ ಹೆಸರಿನ ಪುಸ್ತಕವನ್ನು ಬಿಡುಗಡೆ ಮಾಡಲೂ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಬಿಜೆಪಿ-ಜೆಡಿಎಸ್‌ ನಡೆಸುತ್ತಿರುವ ಪಾದಯಾತ್ರೆಗೆ (BJP-JDS Padayatra) ಟಕ್ಕರ್‌ ನೀಡಲು ಮೈಸೂರಿನಲ್ಲಿ ಇಂದು ಆಯೋಜಿಸಲಾಗಿರುವ ಬೃಹತ್‌ ಜನಾಂದೋಲನ ಸಮಾವೇಶಕ್ಕೆ (Mysore Janandolana Samavesha) ನಗರ ಸಜ್ಜಾಗಿದೆ. ಸುಮಾರು 4 ಲಕ್ಷಕ್ಕೂ ಅಧಿಕ ಜನರನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ (CM Siddaramaiah) ಕೈ ಪಡೆ ಸೇರಿಸಲು ನಿರ್ಧಾರ ಮಾಡಿದ್ದು, ದೋಸ್ತಿಗಳ ವಿರುದ್ಧ ʼಸಂಚುʼ ಎಂಬ ಹೆಸರಿನ ಪುಸ್ತಕವನ್ನು ಬಿಡುಗಡೆ ಮಾಡಲೂ ಸಿದ್ಧತೆ ಮಾಡಿಕೊಂಡಿದೆ.

ಜನಾಂದೋಲನ ಸಮಾವೇಶದ ವೇದಿಕೆ ಮೇಲೆ ಸುಮಾರು 200 ಜನ ಕೂರಲು ವ್ಯವಸ್ಥೆ ಮಾಡಲಾಗಿದೆ. ಎಡ ಮತ್ತು ಬಲ ಭಾಗದಲ್ಲಿ ಮಾಜಿ ಶಾಸಕರು ಹಾಗೂ ಪರಿಷತ್ ಸದಸ್ಯರು ಕೂರಲು ವ್ಯವಸ್ಥೆ ಮಾಡಲಾಗಿದ್ದು, ಮಳೆ ಬಂದರೂ ಕಾರ್ಯಕ್ರಮ ಯಶಸ್ವಿಯಾಗಲು ಜರ್ಮನ್ ಪೆಂಡಾಲ್ ಅಳವಡಿಸಲಾಗಿದೆ. ʼಸಿದ್ದರಾಮೋತ್ಸವʼ ರೀತಿಯಲ್ಲಿಯೇ ಕಾರ್ಯಕ್ರಮ ಮಾಡಲಾಗುತ್ತಿದೆ.

ಜನಾಂದೋಲನ ಸಮಾವೇಶವನ್ನು ಸಿಎಂ ವೈಯಕ್ತಿಕ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಇಂದಿನ ಸಮಾವೇಶದಲ್ಲಿ 2 ಲಕ್ಷಕ್ಕೂ ಅಧಿಕ ಜನ ಸೇರಿಸಲಿದ್ದಾರೆ ಎಂದು ಭಾವಿಸಲಾಗಿದೆ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರದಿಂದ ಹೆಚ್ಚು ಜನ ಬರುವ ಸಾಧ್ಯತೆ ಇದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ, ಡಿಸಿಎಂ, ಸಚಿವರು ಶಾಸಕರು, ಎಂಎಲ್ಸಿಗಳು ಭಾಗವಹಿಸಲಿದ್ದಾರೆ.

ಜನಾಂದೋಲನ ಸಮಾವೇಶದ ಅಜೆಂಡಾ

ವಿಪಕ್ಷಗಳ ವಿರುದ್ಧ ದಾಖಲೆ ಸಮೇತ ಮಾತನಾಡುವುದು, ಮುಡಾದಲ್ಲಿ ಮಾಜಿ ಸಿಎಂ ಎಚ್ ಡಿ ದೇವೇಗೌಡ (HD Deve gowda) ಫ್ಯಾಮಿಲಿ ಖರೀದಿಸಿದ ಆಸ್ತಿಗಳ ಬಗ್ಗೆ ಮಾಹಿತಿ ಕೊಡುವುದು, ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಕಾಲದಲ್ಲಿ ಆದ ನಿವೇಶನ ಹಂಚಿಕೆ, ಕುಮಾರಸ್ವಾಮಿ ವಿರುದ್ಧ ಇರೋ ಪ್ರಕರಣಗಳ ಬಗ್ಗೆ ದಾಖಲೆ ಸಮೇತ ಮಾತನಾಡುವುದು, ಮುಡಾದಲ್ಲಿ ಸಿದ್ದರಾಮಯ್ಯ ಪಾತ್ರ ಇಲ್ಲ ಅನ್ನೋದನ್ನ ಹೇಳುವುದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸುವುದು, ರಾಜ್ಯಪಾಲರು ಈ ಹಿಂದೆ ಯಾವೆಲ್ಲ ಪ್ರಕರಣಗಳಲ್ಲಿ ಮೌನ ವಹಿಸಿದ್ದಾರೆ ಅನ್ನೋದನ್ನ ಹೇಳುವುದು, ವಿರೋಧ ಪಕ್ಷಗಳ ನಾಯಕರ ಹಗರಣಗಳ ಬಗ್ಗೆ ಕಿರು ಹೊತ್ತಿಗೆ ಬಿಡುಗಡೆ ಮಾಡುವುದು ಜನಾಂದೋಲನ ಸಮಾವೇಶದ ಅಜೆಂಡಾ ಆಗಿದೆ.

ಇದೇ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ವಿರುದ್ಧ ಕಿರುಹೊತ್ತಿಗೆ ಬಿಡುಗಡೆ ಮಾಡಲಾಗುತ್ತಿದೆ. ಎರಡೂ ಪಕ್ಷಗಳು ಕುಟಿಲ ರಾಜಕಾರಣ ನಡೆಸುತ್ತಿವೆ ಎಂದು ʼಸಂಚು’ ಹೆಸರಿನಲ್ಲಿ ಪುಸ್ತಕ ಬಿಡುಗಡೆ ಮಾಡಲಾಗುತ್ತಿದ್ದು, ಇದು ಮುಡಾ ಪ್ರಕರಣದ ಸಮಗ್ರ ವಿವರ ಮತ್ತು ದಾಖಲೆಗಳನ್ನೊಳಗೊಂಡಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರನ್ನೂ ಒಂದೇ ಕಲ್ಲಲ್ಲಿ ಹೊಡೆಯಲು ಬಿಜೆಪಿ ಕುಟಿಲ ಕಾರಸ್ಥಾನ ನಡೆಸಿದೆ ಎಂದು ʼಸಂಚುʼ ಕೃತಿ ರೂಪಿಸಿರುವ ಸಿಎಂ‌ ಕಾನೂನು ಸಲಹೆಗಾರ ಪೊನ್ನಣ್ಣ ಬರೆದಿದ್ದಾರೆ ಎನ್ನಲಾಗಿದೆ.

ಕಿರುಹೊತ್ತಿಗೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬೊಮ್ಮಾಯಿ, ಹಾಲಿ ಕೇಂದ್ರ ಸಚಿವ ಹೆಚ್‌ಡಿಕೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ಅಕ್ರಮದ ಆರೋಪಗಳ ಕುರಿತು ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ.

ದೇವೇಗೌಡರ ಕುಟುಂಬವೇ ಟಾರ್ಗೆಟ್‌

ಸಮಾವೇಶದ ಉದ್ದೇಶವೇ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ಕುಟುಂಬ ಆಗಿದೆ. ದೇವೇಗೌಡರ ಕುಟುಂಬಸ್ಥರು ಮುಡಾ ಸೈಟ್ ಪಡೆದ ಬಗ್ಗೆ ಕಾಂಗ್ರೆಸಿಗರು ಫ್ಲೆಕ್ಸ್ ಹಾಕಿದ್ದಾರೆ. ನಗರದ ಹಲವು ಭಾಗದ ಸರ್ಕಲ್‌ಗಳಲ್ಲಿ ಫ್ಲೆಕ್ಸ್‌ಗಳ ಅಳವಡಿಕೆ ಮಾಡಲಾಗಿದೆ. 2023ರ ಫೆಬ್ರವರಿ ತಿಂಗಳಿನಲ್ಲಿ ಬಿಜೆಪಿ ನೀಡಿರುವ ಜಾಹೀರಾತನ್ನು ಕಾಂಗ್ರೆಸ್‌ ಬಳಸಿಕೊಂಡಿದೆ. ಕುಮಾರಸ್ವಾಮಿ ಅವರಿಗೆ ಮುಡಾದಿಂದ ಕೊಟ್ಟಿರುವ ಸೈಟ್ ಬಗ್ಗೆ, ಮಾಜಿ ಪ್ರಧಾನಿ ದೇವೇಗೌಡರ 20 ಹೆಸರು ಬರೆದು ಎಷ್ಟು ಅಳತೆಯ ನಿವೇಶನ ಮಂಜೂರಾಗಿದೆ ಎಂಬ ಮಾಹಿತಿ ಫ್ಲೆಕ್ಸ್‌ನಲ್ಲಿದೆ. ಎಚ್‌ಡಿಕೆಯವರೇ ನೀವು ಬೇರೆಯವರ ಬಗ್ಗೆ ಪ್ರಶ್ನಿಸುವ ನೈತಿಕ ಹಕ್ಕು ಉಳಿಸಿಕೊಂಡಿದ್ದೀರಾ ಎಂದು ಫ್ಲೆಕ್ಸ್‌ನಲ್ಲಿ ಪ್ರಶ್ನಿಸಲಾಗಿದೆ.

ಇದನ್ನೂ ಓದಿ: CM Siddaramaiah: ನಾಳೆ ಮೈಸೂರಿನಲ್ಲಿ ಸಿದ್ದರಾಮಯ್ಯ ಅಬ್ಬರ; ʼಜನಾಂದೋಲನ ಸಮಾವೇಶʼ ಮೂಲಕ ದೋಸ್ತಿ ಪಾದಯಾತ್ರೆಗೆ ಟಕ್ಕರ್‌

Continue Reading
Advertisement
Duniya Vijay Bheema Movie Release today
ಸ್ಯಾಂಡಲ್ ವುಡ್9 mins ago

Duniya Vijay: ರಾಜ್ಯಾದ್ಯಂತ `ಭೀಮ’ ಸಿನಿಮಾ ರಿಲೀಸ್; ಬ್ಲಾಕ್‌ ಕೋಬ್ರಾಗೆ ಭರ್ಜರಿ ವೆಲ್‌ಕಮ್‌ ಮಾಡಿದ ಫ್ಯಾನ್ಸ್‌!

gold rate today
ವಾಣಿಜ್ಯ13 mins ago

Gold Rate Today: ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಹೀಗಿದೆ

UGCET 2024
ಬೆಂಗಳೂರು19 mins ago

UGCET 2024: ಯುಜಿಸಿಇಟಿ ಮೊದಲ ಅಣಕು ಸೀಟು ಹಂಚಿಕೆ ಫಲಿತಾಂಶ ಇಂದು ಸಂಜೆ 6 ಗಂಟೆಗೆ ಪ್ರಕಟ

dengue fever death bangalore
ಬೆಂಗಳೂರು19 mins ago

Dengue Fever: ಡೆಂಗ್ಯುವಿಗೆ ಬೆಂಗಳೂರಿನಲ್ಲಿ ಹೆಡ್‌ ಕಾನ್ಸ್‌ಟೇಬಲ್‌ ಬಲಿ, 11ಕ್ಕೇರಿದ ಸಾವಿನ ಸಂಖ್ಯೆ

Paris Olympics
ಕ್ರೀಡೆ44 mins ago

Paris Olympics: ಚೊಚ್ಚಲ ಪ್ರಯತ್ನದಲ್ಲೇ ಒಲಿಂಪಿಕ್ಸ್​ ಪದಕ ಗೆಲ್ಲಲು ಸಜ್ಜಾದ ಅಮನ್‌ ಸೆಹ್ರಾವತ್‌

CM Siddaramaiah
ಪ್ರಮುಖ ಸುದ್ದಿ1 hour ago

CM Siddaramaiah: ಇಂದು ಮೈಸೂರಿನಲ್ಲಿ ಜನಾಂದೋಲನ ಸಮಾವೇಶ: ದೋಸ್ತಿಗಳ ವಿರುದ್ಧ ಅಬ್ಬರಿಸಲಿದೆ ಸಿದ್ದರಾಮಯ್ಯ ಪಡೆ, ʼಸಂಚುʼ ಕೃತಿ ಬಿಡುಗಡೆ

Kannada Serials TRP Demand increased for Ramachari serial Amritdhare is not even in the top 5
ಕಿರುತೆರೆ1 hour ago

Kannada Serials TRP: ʻರಾಮಾಚಾರಿʼ ಧಾರಾವಾಹಿಗೆ ಹೆಚ್ಚಾಯ್ತು ಡಿಮ್ಯಾಂಡ್‌; ಟಾಪ್‌ 5ನಲ್ಲೂ ಇಲ್ಲ ʻಅಮೃತಧಾರೆʼ!

Bangladesh Unrest
ವಿದೇಶ1 hour ago

Bangladesh Unrest: ಬಾಂಗ್ಲಾ ದಂಗೆ ಹಿಂದೆ ಇದ್ಯಾ ಪಾಕ್‌ ISI ಕೈವಾಡ? ಶೇಖ್‌ ಹಸೀನಾ ಪುತ್ರ ಹೇಳಿದಿಷ್ಟು!

Rahul Gandhi
ದೇಶ1 hour ago

Rahul Gandhi: ಸಂಸತ್‌‌ನಲ್ಲಿ ವಕ್ಫ್ ಚರ್ಚೆ ವೇಳೆ ನಿದ್ದೆ ಮಾಡುತ್ತಿದ್ದ ರಾಹುಲ್ ಗಾಂಧಿ! ವಿಡಿಯೊ ವೈರಲ್

Vinesh Phogat
ಕ್ರೀಡೆ1 hour ago

Vinesh Phogat: ವಿನೇಶ್​ರನ್ನು ಪ.ಬಂಗಾಳ ಸಿಎಂ ಮಾಡಿ; ಭಾರತ ರತ್ನ ಕೊಡಿ ಎಂದ ಟಿಎಂಸಿ ನಾಯಕನಿಗೆ ಸವಾಲ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ17 hours ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ19 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ20 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌