Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌ - Vistara News

ಬೆಂಗಳೂರು

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Bengaluru Airport : ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ 2 ದಶಲಕ್ಷ ಚದರ ಅಡಿ ಪ್ರದೇಶದ ಬಿಸಿನೆಸ್ ಪಾರ್ಕ್ ತೆರೆಯಲು ಮೊದಲ ಹೆಜ್ಜೆ ಇಟ್ಟಿದೆ.

VISTARANEWS.COM


on

ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ಅಂಗ ಸಂಸ್ಥೆಯಾದ (Bengaluru Airport) ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ನ ಮಹತ್ವಾಕಾಂಕ್ಷಿ ಯೋಜನೆಯಾದ “ಬಿಸಿನೆಸ್‌ ಪಾರ್ಕ್‌” ತೆರೆಯಲು 2 ದಶಲಕ್ಷ ಚದರ ಅಡಿ ಪ್ರದೇಶವನ್ನು ತನ್ನದಾಗಿಸಿಕೊಳ್ಳುವ ಮೂಲಕ ಈ ಯೋಜನೆಯತ್ತ ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ.

ಜಾಗತಿಕ ಸಾಮರ್ಥ್ಯ ಕೇಂದ್ರ (ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್,ಜಿಸಿಸಿ) ಗಳಲ್ಲೇ ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿಸುವ ಗುರಿಯನ್ನು ಹೊಂದಲಾಗಿದ್ದು, ಇದರ ಭಾಗವಾಗಿ ಬೃಹತ್‌ ಬಿಸಿನೆಸ್‌ ಪಾರ್ಕ್‌ ತೆರೆಯಲಾಗುತ್ತಿದೆ. ಇದರಿಂದ ಒಟ್ಟು 3.5 ಲಕ್ಷ ಉದ್ಯೋಗ ಸೃಷ್ಟಿಗೆ ಹಾಗೂ ಆರ್ಥಿಕತೆಗೆ 50 ಶತಕೋಟಿ ಡಾಲರ್‌ ಕೊಡುಗೆ ನೀಡಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (BLR ವಿಮಾನ ನಿಲ್ದಾಣ) ಆವರಣದ್ಲಲಿರುವ ಬೆಂಗಳೂರು ವಿಮಾನ ನಿಲ್ದಾಣ ನಗರವನ್ನು ವಿಶ್ವ ದರ್ಜೆಯ ಮಿಶ್ರ-ಬಳಕೆಯ ತಾಣವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ವಿಮಾನ ನಿಲ್ದಾಣ ನಗರದಲ್ಲಿ ಪ್ರಮುಖವಾಗಿ ವ್ಯಾಪಾರ, ಉದ್ಯಾನವನಗಳು, ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳು, ಸಂಶೋಧನೆ ಮತ್ತು ಅಭಿವೃದ್ಧಿ (ಆರ್ & ಡಿ) ಕೇಂದ್ರಗಳು ಮತ್ತು ವಿವಿಧ ಮನರಂಜನಾ ಹಾಗೂ ಆತಿಥ್ಯ ತಾಣಗಳು ತಲೆಯೆತ್ತಲಿದೆ. ಈ ನಗರವು ಸುಸ್ಥಿರ, ಸ್ಮಾರ್ಟ್, ಆಕರ್ಷಕ ನಗರಾಭಿವೃದ್ಧಿಯಿಂದ ಅಂತಾರಾಷ್ಟ್ರೀಯ ಹೆಬ್ಬಾಗಿಲಾಗಿ ಈ ನಗರ ಕಾರ್ಯನಿರ್ವಹಿಸಲು ಸಿದ್ಧವಾಗುತ್ತಿದೆ.

Construction of Business Park of Bangalore Airport City Limited a subsidiary of Bangalore International Airport Limited

ಈ ಬ್ಯುಸಿನೆಸ್ ಪಾರ್ಕ್ ಅನ್ನು 17.7 ಎಕರೆಗಳಲ್ಲಿ ನಿರ್ಮಿಸಲಾಗುತ್ತಿರುವ ಈ ಬಿಸಿನೆಸ್ ಪಾರ್ಕ್, ನಾಲ್ಕು ಬ್ಲಾಕ್‌ಗಳನ್ನು ಒಳಗೊಂಡಿದ್ದು, ಪ್ರತಿ ಬ್ಲಾಕ್‌ 0.5 ಮಿಲಿಯನ್ ಚದರ ಅಡಿ ನಗರ ಅರಣ್ಯದೊಳಗೆ ಮೂಡಿಬರಲಿದೆ. ಬಯೋಫಿಲಿಕ್ ವಿನ್ಯಾಸವು ಸೊಂಪಾದ ಉದ್ಯಾನಗಳು, ಬಾಲ್ಕನಿಗಳು ಮತ್ತು ಹಸಿರಿನಿಂದ ಕೂಡಿರುವ ಸ್ಥಳಗಳನ್ನು ಒಳಗೊಂಡಿದ್ದು, ಈ ಮೂಲಕ ವ್ಯಾಪಾರ ವಹಿವಾಟನ್ನು ಇನ್ನಷ್ಟು ಆಸಕ್ತಿದಾಯಗೊಳಿಸುವ ಉದ್ದೇಶವನ್ನು ಹೊಂದಿದೆ.

ಬಿಎಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಸಿಇಒ ರಾವ್ ಮುನುಕುಟ್ಲ ಮಾತನಾಡಿ, “ಬೆಂಗಳೂರು ವಿಶ್ವದ ಜಿಸಿಸಿ ರಾಜಧಾನಿಯಾಗಿ ಬೆಳೆಯುತ್ತಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಾಹನ ಮತ್ತು ಏರೋಸ್ಪೇಸ್‌ ಕ್ಷೇತ್ರದಲ್ಲಿ ಶೇ. 36ರಷ್ಟು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (GCCs) ಬೆಂಗಳೂರು, ಭಾರತದ ಪ್ರಧಾನ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿರುವ 2 ಮಿಲಿಯನ್ ಚದರ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬಿಸಿನೆಸ್ ಪಾರ್ಕ್ ಸಾಕಷ್ಟು ನೆಟ್‌ವರ್ಕಿಂಗ್ ಅವಕಾಶಗಳು, ಸುಧಾರಿತ ಮೂಲಸೌಕರ್ಯಗಳು ಹಾಗೂ ಉನ್ನತ ದರ್ಜೆಯ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.

ಈ ನಮ್ಮ ಯೋಜನೆಯು ಕರ್ನಾಟಕ ರಾಜ್ಯದ ಪ್ರಸ್ತುತ ಜಿಸಿಸಿ ನೀತಿಯೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುವ ಮೂಲಕ, ಬೆಂಗಳೂರನ್ನು ಅಂತಾರಾಷ್ಟ್ರೀಯ ವ್ಯವಹಾರಗಳಿಗೆ ಕೇಂದ್ರಬಿಂದುವಾಗಿಸಲಿದೆ. ವಿಮಾನ ನಿಲ್ದಾಣ ನಗರದ ಒಟ್ಟಾರೆ ಅಭಿವೃದ್ಧಿಯ ಶೇ.52 ರಷ್ಟು ಭಾಗವು ವ್ಯಾಪಾರ ಉದ್ಯಾನವನಗಳ (ಬಿಸಿನೆಸ್ ಪಾರ್ಕ್) ಜಾಲವನ್ನು ಹೊಂದಲಿದ್ದು, ಸಹಯೋಗ ಹಾಗೂ ನಾವಿನ್ಯತೆಗೆ ಪ್ರೋತ್ಸಾಹ ಕೊಡಲಿದೆ.

ಇದನ್ನೂ ಓದಿ: Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

ಮುಂದಿನ ದಿನಗಳಲ್ಲಿ ತಲೆ ಎತ್ತಲಿರುವ ಏರ್‌ಪೋರ್ಟ್ ವೆಸ್ಟ್ ಮೆಟ್ರೋ ನಿಲ್ದಾಣವು ಈ ಬಿಸಿನೆಸ್ ನ ಅತಿ ಸಮೀಪದಲ್ಲಿದ್ದು, ಬೆಂಗಳೂರಿನ ಸಿಟಿ ಸೆಂಟರ್‌ಗೆ ಸಂಪರ್ಕವನ್ನು ಕಲ್ಪಿಸಲಿದೆ. ಇದರಿಂದ ಉದ್ಯೋಗಿಗಳು, ಸಂದರ್ಶಕರಿಗೂ ಸಹ ವೇಗ ಮತ್ತು ಪರಿಸರ ಸ್ನೇಹಿ ಪ್ರಯಾಣವನ್ನು ಒದಗಿಸಲಿದೆ. ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಧಾರಿತ ತಂತ್ರಜ್ಞಾನ ಕೇಂದ್ರವನ್ನು ರೂಪಿಸುತ್ತಿದ್ದು, ಇದರಲ್ಲಿ 3D ಮುದ್ರಣ ಸಂಸ್ಥೆ ಮತ್ತು ಹೈಟೆಕ್ ಕೇಂದ್ರ ಪಾಕಶಾಲೆಗಳು ಸೇರಿದಂತೆ ಹಲವು ನಾವಿನ್ಯತೆಯ ಕೇಂದ್ರಬಿಂದುವಾಗಿರಲಿದೆ ಎಂದರು.

ಈ ನಗರದಲ್ಲಿ ಮನರಂಜನೆ ಮತ್ತು ಆತಿಥ್ಯ ತಾಣಗಳು ತಲೆ ಎತ್ತುತ್ತಿದ್ದು, ವಿಮಾನ ನಿಲ್ದಾಣ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪ್ರಪ್ರಥಮ ಕನ್ಸರ್ಟ್ ಅರೆನಾ, ಸಮಾವೇಶ ಮತ್ತು ಪ್ರದರ್ಶನ ಕೇಂದ್ರಗಳನ್ನು ಸಹ ಈ ಯೋಜನೆ ಒಳಗೊಂಡಿದೆ. ಈಗಾಗಲೇ ಏರ್‌ಪೋರ್ಟ್‌ ಆವರಣದಲ್ಲಿರುವ ಹೋಟೆಲ್‌ ತಾಜ್ ಬೆಂಗಳೂರು ಮತ್ತು ಪ್ರಸ್ತುತ ನಿರ್ಮಾಣ ಹಂತದಲ್ಲಿರುವ 775 ಕೊಠಡಿಗಳ ಕಾಂಬೋ ಹೋಟೆಲ್ (ವಿವಾಂಟಾ & ಜಿಂಜರ್) ಸೇರಿದಂತೆ ಏರ್‌ಪೋರ್ಟ್ ಸಿಟಿಯೊಳಗೆ 5,200 ಹೋಟೆಲ್ ಕೊಠಡಿಗಳನ್ನು ಒಳಗೊಂಡು ಬೃಹತ್‌ ಆತಿಥ್ಯ ತಾಣವಾಗಿ ಹೊರಹೊಮ್ಮಲಿದೆ.

ಏರ್‌ಪೋರ್ಟ್ ಸಿಟಿಯು ಅದ್ಭುತ ವಿನ್ಯಾಸದಿಂದ ರೂಪುಗೊಳ್ಳುತ್ತಿದ್ದು, ಇಡೀ ಆವರಣ ಶಕ್ತಿ-ತಟಸ್ಥವಾಗಿ ಕಾರ್ಯನಿರ್ವಹಿಸಿ, ನವೀಕರಿಸಬಹುದಾದ ಸಂಪನ್ಮೂಲಗಳಿಂದ ನಿರ್ಮಾಣಗೊಳ್ಳುತ್ತಿದ್ದು, ಐಜಿಬಿಸಿ ಯ ಗ್ರೀನ್ ಸಿಟೀಸ್ ಪ್ಲಾಟಿನಂ ಪ್ರಮಾಣೀಕರಣವನ್ನು ಗಳಿಸಿದೆ. ಅಷ್ಟೇ ಅಲ್ಲದೆ, ಬೃಹತ್‌ ಪ್ರಮಾಣದಲ್ಲಿ ಮಳೆನೀರು ಕೊಯ್ಲು ಅಳವಡಿಸಿಕೊಳ್ಳಲಾಗುತ್ತಿದ್ದು , ಇದರಿಂದ ವಿಮಾನ ನಿಲ್ದಾಣ ನಗರದ ನೀರಿನ ಅಗತ್ಯಗಳನ್ನು ಪೂರೈಸಲಿದೆ, ಈ ನಿಟ್ಟಿನಲ್ಲಿ ವಿಶ್ವ ಸಂಸ್ಥೆಯ ಪರಿಸರ ಸ್ನೇಹಿ, ಸುಸ್ಥಿರ ಅಭಿವೃದ್ಧಿ ಮಾರ್ಗದರ್ಶನದ ಜವಾಬ್ದಾರಿ ನಿರ್ವಹಣೆಯ ಧ್ಯೇಯದೊಂದಿಗೆ ಹೊಂದಿಸಲಾಗಿದೆ.

ಇನ್ನು, ಬೆಂಗಳೂರು ವಿಮಾನ ನಿಲ್ದಾಣ ನಗರವು ಅತಿ ನಿರೀಕ್ಷಿತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಬೃಹತ್‌ ಪ್ರಮಾಣದಲ್ಲಿ ವಿಸ್ತರಿಸುತ್ತಿದೆ, ಇದಕ್ಕಾಗಿ ಪ್ರಮುಖ ಅಂತಾರಾಷ್ಟ್ರೀಯ ಸಂಸ್ಥೆಗಳನ್ನು ಆಕರ್ಷಿಸುತ್ತಿದ್ದು, ಇದು ರಾಜ್ಯದ ಶೈಕ್ಷಣಿಕ ಮತ್ತು ಆರೋಗ್ಯ ಮೂಲಸೌಕರ್ಯವನ್ನು ಉನ್ನತೀಕರಿಸಲು ಲೈಫ್ ಸೈನ್ಸಸ್ ಪಾರ್ಕ್ ಅನ್ನು ಸ್ಥಾಪಿಸುತ್ತಿದೆ. BIAL ಅಕಾಡೆಮಿ ಮತ್ತು ಏರ್ ಇಂಡಿಯಾ ಅಕಾಡೆಮಿಯಂತಹ ಸಂಸ್ಥೆಗಳು ಮುಂದಿನ ಪೀಳಿಗೆಯ ವಾಯುಯಾನ ಮತ್ತು ಆತಿಥ್ಯ ವೃತ್ತಿಪರರಿಗೆ ತರಬೇತಿ ನೀಡಲಿವೆ.

ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಸ್ಥಿರ, ನವೀನ ಮತ್ತು ಸಂಪರ್ಕಿತ ನಗರಾಭಿವೃದ್ಧಿಯ ದೃಷ್ಟಿಯನ್ನು ಸಾಕಾರಗೊಳಿಸುತ್ತಿದ್ದು, ಮಿಶ್ರ-ಬಳಕೆಯ ನಗರದ ಯೋಜನೆಗೆ ಜಾಗತಿಕವಾಗಿ ಮಾದರಿಯಾಗಲಿದೆ. ಈ ಪ್ರದೇಶದ ಆರ್ಥಿಕ ಬೆಳವಣಿಗೆಯ ಕೇಂದ್ರಭಾಗದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BLR ವಿಮಾನ ನಿಲ್ದಾಣ) ವಿಶ್ವಾದ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ, ಕಳೆದ ವರ್ಷ 37.5 ದಶಲಕ್ಷ ರನ್ನು ನಿರ್ವಹಿಸಿದೆ. ವಿಮಾನ ನಿಲ್ದಾಣವು 2030 ರ ವೇಳೆಗೆ ತನ್ನ ಸಾಮರ್ಥ್ಯವನ್ನು 90 ದಶಲಕ್ಷ ಪ್ರಯಾಣಿಕರಿಗೆ ವಿಸ್ತರಿಸಲು ಯೋಜಿಸಲಾಗಿದೆ. ಈ ಅಭಿವೃದ್ಧಿ ಬೆಂಗಳೂರಿನ ಪಾತ್ರವನ್ನು ಜಾಗತಿಕ ವ್ಯವಹಾರಗಳಿಗೆ ಮತ್ತು ಸುಧಾರಿತ ಉತ್ಪಾದನೆಗೆ ಪ್ರಮುಖ ಕೇಂದ್ರವಾಗಿ ಮತ್ತಷ್ಟು ಗಟ್ಟಿಗೊಳಿ ಸಲು ಅನುವುಮಾಡಿಕೊಡಲಿದೆ. ವಿಶೇಷವಾಗಿ ಏರೋಸ್ಪೇಸ್ ವಲಯದಲ್ಲಿ, ಏರ್‌ಬಸ್ ಮತ್ತು ಬೋಯಿಂಗ್‌ನಂತಹ ಉದ್ಯಮದ ದೈತ್ಯರು ನಗರದ ನುರಿತ ಉದ್ಯೋಗಿಗಳಿಂದ ಲಾಭ ಪಡೆಯಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
ಪ್ರಮುಖ ಸುದ್ದಿ8 minutes ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ28 minutes ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

Latest21 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

Latest24 hours ago

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

Latest1 day ago

ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಪದಗ್ರಹಣ

Latest2 days ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest3 days ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ3 days ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest3 days ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest3 days ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌