Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ - Vistara News

ಬೆಂಗಳೂರು

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

VISTARANEWS.COM


on

Bengaluru News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡಿನ್ನರ್‌ ಮುಗಿಸಿ ಬರುತ್ತಿದ್ದ ಪ್ರೇಮಿಗಳಿಗೆ ಕಿರಾತಕರು ಅಡ್ಡ ಹಾಕಿ, ಬಳಿಕ ಯುವಕನ ಕುತ್ತಿಗೆ ಚಾಕು ಇಟ್ಟು ಯುವತಿ ಮೇಲೆ ಅತ್ಯಾಚಾರ ನಡೆಸಿದ್ದರು. ಇದೀಗ ಆ ಆರೋಪಿಗಳಿಗೆ 10 ವರ್ಷಗಳ ನಂತರ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 2014ರ ಏಪ್ರಿಲ್ 11ರಂದು ಪ್ರೇಮಿಗಳಿಬ್ಬರು ಎಂ.ಜಿ ರೋಡ್‌ನಲ್ಲಿ ಡಿನ್ನರ್ ಮುಗಿಸಿ ಪುಲಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ (Bengaluru News) ನೇತಾಜಿ ರಸ್ತೆಯಲ್ಲಿ ಮಧ್ಯರಾತ್ರಿ 12:30ರ ಸಮಯಲ್ಲಿ ಕಾರಿನಲ್ಲಿ ಕುಳಿತಿದ್ದರು. ಈ ವೇಳೆ ಕಾಮುಕರ ದಂಡು ಅವರನ್ನು ಸುತ್ತುವರಿದು ಕಾರು ಏರಿಕೊಂಡಿದ್ದರು.

ಶೇಕ್ ಹೈದರ್, ಸೈಯದ್ ಶಫಿಕ್, ಮಹಮ್ಮಸ್ ಹಫೀಜ್, ಶೋಯಬ್ @ ಶೇಖ್ ಕಲ್ವಾನ ಕಾರಿನಲ್ಲಿ ಪ್ರೇಮಿಗಳು ಇದ್ದರೆ, ಮಹಮ್ಮದ್ ಇಸಾಕ್ ಎಂಬಾತ ಕಾಮುಕರ ಕಾರನ್ನು ಫಾಲೋ ಮಾಡಿದ್ದ. ಬಳಿಕ ರಾತ್ರಿಯಿಡಿ ಸಂತ್ರಸ್ತೆ ಕಾರಿನಲ್ಲೇ ಪುಲಕೇಶಿ ನಗರ ಸುತ್ತಾಡಿದ್ದರು. ಕಾರಿನಲ್ಲಿ ಆ ಯುವತಿಗೆ ಇನ್ನಿಲ್ಲದ ಚಿತ್ರಹಿಂಸೆ ನೀಡಿದ್ದರು. ಕೊನೆಗೆ ಕಾಮುಕರ ಗುಂಪಿನ ನಾಯಕ ಶೇಕ್ ಹೈದರ್ ಆಜ್ಞೆಯಂತೆ ಸಂತ್ರಸ್ತೆಯ ಸ್ನೇಹಿತನನ್ನು ಕಾರಿನಿಂದ ಇಳಿಸಿದ್ದರು.

ಸೈಯದ್ ಶಫಿಕ್, ಹಫಿಜ್, ಶೋಯಬ್ ಆ ಯುವಕನ ಕುತ್ತಿಗೆಗೆ ಚಾಕು ಹಿಡಿದು ಕೊಂಡಿದ್ದರು. ಕಾರಿನಲ್ಲಿದ್ದ ಶೇಕ್ ಹೈದರ್ ನಾನು ಹೇಳಿದ ಹಾಗೆ ಕೇಳದಿದ್ದರೆ ನಿನ್ನ ಹುಡುಗನನ್ನು ಕೊಲೆ ಮಾಡುತ್ತೇನೆ ಎಂದು ಯುವತಿಗೆ ಬೆದರಿಕೆ ಹಾಕಿದ್ದ. ನಂತರ ಯುವತಿ ಮೇಲೆ ಮೃಘೀಯ ರೀತಿ ವರ್ತಿಸಿದ್ದ. ತನ್ನ ಕಣ್ಣ ಮುಂದೆಯೇ ತನ್ನ ನಂಬಿ ಬಂದ ಪ್ರೇಯಸಿ ಮೇಲೆ ಕಾಮುಕರು ಪಿಶಾಚಿಗಳಂತೆ ಎಗರಿದ್ದರೂ ಏನು ಮಾಡಲು ಆಗದೆ ಅಸಯಾಕನಾಗಿದ್ದ.

ಯುವತಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ 50 ಸಾವಿರ ರೂ. ಗೆ ಡಿಮ್ಯಾಂಡ್ ಮಾಡಿದ್ದರು. ಹಣ ನೀಡದಿದ್ದಾಗ ಹುಡುಗನ ಕೈಯಲ್ಲಿದ್ದ ವಾಚ್‌ನ ಕಿತ್ತುಕೊಂಡು ಹೋಗಿದ್ದರು. ಈ ಘಟನೆ ಸಂಬಂಧ ಪುಲಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೊದಲಿಗೆ ಅಂದಿನ ಇನ್‌ಸ್ಪೆಕ್ಟರ್‌ ಸರಿಯಾದ ಸೆಕ್ಷನ್ ಹಾಕಿಲ್ಲ ಎಂದು ಸಸ್ಪೆಂಡ್ ಕೂಡ ಆಗಿದ್ದರು. ಇದಾದ ನಂತರ ಅಂದಿನ ಪುಲಕೇಶಿ ನಗರ ಉಪವಿಭಾಗ ಎಸಿಪಿ ನೂರುಲ್ಲ ಶರೀಫ್ ತನಿಖೆ ನಡೆಸಿ ನ್ಯಾಯಲಯಕ್ಕೆ ಐವರು ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಕಾರಿನಲ್ಲಿ ಸಿಕ್ಕ ಆರೋಪಿಯ ತಲೆಕೂದಲು ಮತ್ತು ವೀರ್ಯದ ಕರುಹುಗಳು ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿತ್ತು. ಆರೋಪಿಗಳು ರಾಜಕೀಯ ಪ್ರಭಾವ ಹೊಂದಿದ್ದರು. ಆದರೆ ಇದ್ಯಾವುದಕ್ಕೂ ಮಣಿಯದ ಪೊಲೀಸರು ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದರು. ಸದ್ಯ ಆರೋಪಿಗಳ ಪೈಕಿ ಎ1 ಆರೋಪಿ ಶೇಕ್ ಹೈದರ್‌ಗೆ ಜೀವಾವಧಿ ಶಿಕ್ಷೆ 31 ಸಾವಿರ ದಂಡ ಹಾಗೂ ಎ2 ಸೈಯದ್ ಶಫಿಕ್ 10 ವರ್ಷ ಸಜೆ 23 ಸಾವಿರ ದಂಡ, ಎ3 ಮೊಹಮ್ಮದ್ ಹಫೀಜ್‌ಗೆ 3500 ದಂಡ, ಎ4 ಶೋಯಬ್ ಗೆ 1 ವರ್ಷ ಸಜೆ ಹಾಗೂ 3500 ದಂಡ ಹಾಗೂ ಎ5 ಮಹಮ್ಮದ್ ಇಸಾಕ್‌ಗೆ 6 ತಿಂಗಳ ಸಜೆ ಹಾಗೂ 3000 ದಂಡ ವಿಧಿಸಿ 57ನೇ ಸಿಸಿಹೆಚ್ ನ್ಯಾಯಾಲಯ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಪ್ರಮುಖ ಸುದ್ದಿ

Actor Darshan : ದರ್ಶನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌; ನ.8ರಂದು ನವಗ್ರಹ ಸಿನಿಮಾ ರೀ-ರಿಲೀಸ್‌

Actor Darshan : ನಟ ದರ್ಶನ್ ಜೈಲಿನಲ್ಲಿದ್ದರೂ ಹಳೆಯ ಸಿನಿಮಾಗಳು ಥಿಯೇಟರ್​ಗಳಲ್ಲಿ ಸೌಂಡ್ ಮಾಡುತ್ತಿವೆ. ಇತ್ತೀಚೆಗಷ್ಟೇ ದರ್ಶನ್ ಅಭಿನಯದ ಕರಿಯ, ಶಾಸ್ತ್ರಿ ಹಾಗೂ ಪೊರ್ಕಿ ಸಿನಿಮಾಗಳನ್ನು ಮರು ಬಿಡುಗಡೆಗೊಂಡಿತ್ತು. ಇದೀಗ ನವಗ್ರಹ ಸಿನಿಮಾ ರೀ ರಿಲೀಸ್‌ಗೆ ಡೇಟ್‌ ಫಿಕ್ಸ್‌ ಆಗಿದೆ.

VISTARANEWS.COM


on

By

actor darshan
Koo

ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ಬೆನ್ನು ನೋವಿನಿಂದ ಒದ್ದಾಡುತ್ತಿರುವುದನ್ನು ಕಂಡು ಬೇಸರದಲ್ಲಿರುವ ಅಭಿಮಾನಿಗಳಿಗೆ ಕೊನೆಗೂ ಗುಡ್‌ ನ್ಯೂಸ್‌ ಸಿಕ್ಕಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟರಲ್ಲೇ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ರಿಲೀಸ್ ಆಗ್ಬೇಕಿತ್ತು. ಆದರೆ ಇದೀಗ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಬಂಧಿಯಾಗಿದ್ದಾರೆ.

ದಾಸನ ಸಿನಿಮಾ ರೀ-ರಿಲೀಸ್, ಡೇಟ್ ಅನೌನ್ಸ್

ನಟ ದರ್ಶನ್ ಜೈಲಿನಲ್ಲಿದ್ದರೂ ಹಳೆಯ ಸಿನಿಮಾಗಳು ಥಿಯೇಟರ್​ಗಳಲ್ಲಿ ಸೌಂಡ್ ಮಾಡುತ್ತಿವೆ. ಈ ವರ್ಷ ‘DEVIL THE HERO’ ಸಿನಿಮಾವನ್ನು ನೋಡಬೇಕು ಎಂಬುದು ದರ್ಶನ್ ಅಭಿಮಾನಿಗಳ ಆಸೆ ಆಗಿತ್ತು. ಆದರೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ದರ್ಶನ್ ಜೈಲು ಸೇರಿದ ಬಳಿಕ ಆ ಸಿನಿಮಾದ ಕೆಲಸಕ್ಕೆ ಬ್ರೇಕ್​ ಬಿತ್ತು. ಹಾಗಾಗಿ ದೊಡ್ಡ ಪರದೆ ಮೇಲೆ ದರ್ಶನ್ ಹೊಸ ಸಿನಿಮಾ ತೆರೆಕಾಣಲಿಲ್ಲ. ಈ ಸಂದರ್ಭದಲ್ಲಿ ಅಭಿಮಾನಿಗಳು ದರ್ಶನ್​ ಅವರನ್ನು ಬಹಳ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಅವರ ಈ ಹಿಂದಿನ ಹಿಟ್ ಸಿನಿಮಾಗಳನ್ನು ಮತ್ತೆ ತೆರೆಗೆ ತರಲಾಗುತ್ತಿದೆ. ಇತ್ತೀಚೆಗಷ್ಟೇ ದರ್ಶನ್ ಅಭಿನಯದ ಕರಿಯ, ಶಾಸ್ತ್ರಿ ಹಾಗೂ ಪೊರ್ಕಿ ಸಿನಿಮಾಗಳನ್ನು ಮರು ಬಿಡುಗಡೆಗೊಂಡಿತ್ತು.

Actor darshan
Actor darshan

‘ನವಗ್ರಹ’ ಸಿನಿಮಾ ಹಿಟ್‌ ಆದ ನಂತರ ಸಿನಿಮಾದ ಸೀಕ್ವೆಲ್‌ ಬರಲಿದೆ ಅಂತ ಹೇಳಲಾಗಿತ್ತಾದರೂ ಕೊನೆವರೆಗೂ ಈ ಸಿನಿಮಾದ ಸೀಕ್ವೆಲ್‌ ಬರಲೇ ಇಲ್ಲ. ಇದೊಂದು ವಿಷಯ ಡಿ ಬಾಸ್‌ ಫ್ಯಾನ್ಸ್‌ ಅಲ್ಲಿ ನಿರಾಶೆ ಉಂಟು ಮಾಡಿತ್ತು. ಕೆಲವು ದಿನಗಳ ಹಿಂದೆ, ‘ನವಗ್ರಹ’ ಸಿನಿಮಾ ರೀ ರಿಲೀಸ್‌ ಮಾಡಬೇಕೆಂದು ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಅಭಿಯಾನವನ್ನು ಸ್ಟಾರ್ಟ್‌ ಮಾಡಿದ್ದರು. #WeWantNavagrahaReRelease ಎಂಬ ಹ್ಯಾಶ್‌ಟ್ಯಾಗ್‌ ಬಳಸುವ ಮೂಲಕ ಈ ಟ್ರೆಂಡ್‌ ಅನ್ನು ವೈರಲ್‌ ಆಗಿತ್ತು. ಇದೀಗ ಮತ್ತೆ ಈ ಸಿನಿಮಾ ನೋಡೋ ಆಸೆಯಿಂದ ಅಭಿಮಾನಿಗಳು ಚಿತ್ರದ ರೀ ರಿಲೀಸ್‌ಗಾಗಿ ಪಟ್ಟು ಹಿಡಿದಿದ್ದಾರೆ.

ಕುತೂಹಲ ಮೂಡಿಸಿದ ದಿನಕರ್​ ಪೋಸ್ಟ್

‘ನವಗ್ರಹ’ ಕನ್ನಡ ಚಿತ್ರರಂಗದ ಸೂಪರ್ ಹಿಟ್​ ಸಿನಿಮಾ. 2008ರಲ್ಲಿ ತೆರೆಕಂಡ ನಟ ದರ್ಶನ್​​ ಮುಖ್ಯಭೂಮಿಕೆಯ ಈ ಚಿತ್ರ ಸೂಪರ್ ಹಿಟ್​ ಆಗಿತ್ತು. ಬಹುತಾರಾಗಣದ ಈ ಚಿತ್ರ ‘ಅಂಬಾರಿ’ ಕಳ್ಳತನಕ್ಕೆ ಪ್ರಯತ್ನಿಸುವ ಕಥೆಯನ್ನು ಒಳಗೊಂಡಿತ್ತು. ಈ ಸಿನಿಮಾ ರೀ-ರಿಲೀಸ್​ ಆಗುತ್ತಿರುವ ಹಿನ್ನೆಲೆಯಲ್ಲಿ ನಿರ್ದೇಶಕ ದಿನಕರ್ ತೂಗುದೀಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ‘ನನ್ನ ನಿರ್ದೇಶನದ 2ನೇ ಸಿನಿಮಾ ನವಗ್ರಹ. ಕನ್ನಡ ಚಿತ್ರರಂಗದ ಖ್ಯಾತ ಖಳನಾಯಕರ ಮಕ್ಕಳನ್ನು ಒಟ್ಟಿಗೆ ಬೆಳ್ಳಿ ತೆರೆಯ ಮೇಲೆ ತಂದ ಒಂದು ಪ್ರಾಮಾಣಿಕ ಪ್ರಯತ್ನ. 16 ವರ್ಷಗಳ ಹಿಂದೆ ಬಿಡುಗಡೆಯಾಗಿ ನಿಮ್ಮೆಲ್ಲರ ಪ್ರೀತಿ-ಪ್ರೋತ್ಸಾಹದಿಂದ ಇಂದಿಗೂ ಜನಮೆಚ್ಚುಗೆಗೆ ಪಾತ್ರವಾಗಿದೆ. ಅಭಿಮಾನಿಗಳು ಹಾಗೂ ಸಿನಿಪ್ರೇಕ್ಷಕರ ಒತ್ತಾಯದ ಫಲವಾಗಿ ಇದೇ ನವೆಂಬರ್ 8ರಂದು ಮರುಬಿಡುಗಡೆಗೆ ಸಿದ್ಧವಾಗಿದೆ. ಮತ್ತೊಮ್ಮೆ ಬೆಳ್ಳಿಪರದೆಯ ಮೇಲೆ ನೋಡಿ ಆನಂದಿಸಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ನವಗ್ರಹ’ ಸಿನಿಮಾಗೆ ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶನ ಮಾಡಿದ್ದಾರೆ. ದರ್ಶನ್ ಜೊತೆ ತರುಣ್ ಸುಧೀರ್​, ಧರ್ಮ ಕೀರ್ತಿರಾಜ್, ವಿನೋದ್ ಪ್ರಭಾಕರ್​, ಸೃಜನ್ ಲೋಕೇಶ್, ಗಿರಿ ದಿನೇಶ್, ನಾಗೇಂದ್ರ ಅರಸ್​, ವರ್ಷಾ, ಶರ್ಮಿಳಾ ಮಾಂಡ್ರೆ, ಕುರಿ ಪ್ರತಾಪ್, ಡೇರಿಂಗ್ ಸ್ಟಾರ್ ಧರ್ಮ ಸೇರಿದಂತೆ ಅನೇಕರು ನಟಿಸಿದ್ದಾರೆ. ಎ.ವಿ ಕೃಷ್ಣಕುಮಾರ್​ ಕ್ಯಾಮರಾ ಕೈಳಚಕವಿರುವ ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಒದಗಿಸಿದ್ದರು. ಟಿ ಶಶಿಕುಮಾರ್​ ಸಂಕಲನದ ಹೊಣೆ ಹೊತ್ತಿದ್ದರು. ತೂಗುದೀಪ ಪ್ರೊಡಕ್ಷನ್ಸ್ ಅಡಿ ನಿರ್ಮಾಣಗೊಂಡ ಈ ಚಿತ್ರ 2008ರ ನವೆಂಬರ್​​ 7ರಂದು ಚಿತ್ರಮಂದಿರ ಪ್ರವೇಶಿಸಿ ಯಶಸ್ವಿಯಾಗಿತ್ತು. ಇದೀಗ ಅದೇ ದಿದಂದೇ ಮರು ಬಿಡುಗಡೆಗೆ ಸನ್ನದ್ಧವಾಗಿದೆ.

Continue Reading

ಬೆಂಗಳೂರು

Namma Metro : ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಝೀರೋ-ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಲಭ್ಯ

Namma Metro: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ದೇಶನಕ್ಕೆ ಅನುಗುಣವಾಗಿ ಎಜಿಎಸ್ ಟ್ರಾನ್ಸಾಕ್ಟ್ ಟೆಕ್ನಾಲಜೀಸ್ ಲಿಮಿಟೆಡ್ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲಕರ ಮತ್ತು ಅತ್ಯುತ್ತಮ ಸೌಲಭ್ಯ ಒದಗಿಸುವ ಸಲುವಾಗಿ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್‌ಗಾಗಿ ಝೀರೋ ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (ಎನ್‌ಸಿಎಂಸಿ) ಅನಾವರಣಗೊಳಿಸಿದೆ.

VISTARANEWS.COM


on

By

namma Metro
Koo

ಬೆಂಗಳೂರು: ಭಾರತದ ಪ್ರಮುಖ ಸಂಯೋಜಿತ ಓಮ್ನಿಚಾನಲ್ ಪೇಮೆಂಟ್ಸ್ ಪೂರೈಕೆದಾರರಲ್ಲಿ ಒಂದಾಗಿರುವ ಎಜಿಎಸ್ ಟ್ರಾನ್ಸಾಕ್ಟ್ ಟೆಕ್ನಾಲಜೀಸ್ ಲಿಮಿಟೆಡ್ ಮಂಗಳವಾರ ತಾನು ಆರ್‌ಬಿಎಲ್‌ ಬ್ಯಾಂಕ್ ಸಹಭಾಗಿತ್ವದಲ್ಲಿ ಬೆಂಗಳೂರು ಮೆಟ್ರೋ ರೇಲ್ ಕಾರ್ಪೊರೇಷನ್‌ಗಾಗಿ (Namma Metro) ಝೀರೋ-ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (ಎನ್‌ಸಿಎಂಸಿ) ವಿತರಣೆ ಆರಂಭಿಸಿರುವುದಾಗಿ ಘೋಷಿಸಿದೆ. ಸಂಪೂರ್ಣ ಕೆವೈಸಿ ಅಗತ್ಯವಿಲ್ಲದೇ ಇರುವುರಿಂದ ಈ ಕಾರ್ಡ್ ಅನ್ನು ಸಕ್ರಿಯಗೊಳಿಸಬಹುದಾದ್ದರಿಂದ ಬಳಕೆದಾರರಿಗೆ ಎನ್‌ಸಿಎಂಸಿಯನ್ನು ವೇಗವಾಗಿ ವಿತರಿಸಬಹುದಾಗಿದೆ. ಪ್ರಯಾಣಿಕರು ಝೀರೋ-ಕೆವೈಸಿ ಎನ್‌ಸಿಎಂಸಿಗೆ ಗರಿಷ್ಠ ರೂ.2,000 ಅನ್ನು ಟಾಪ್ ಅಪ್ ಮಾಡಬಹುದು. ಈ ಕಾರ್ಡ್ ಅನ್ನು ಮೆಟ್ರೋ, ಬಸ್, ವಾಟರ್ ಮೆಟ್ರೋ, ಪಾರ್ಕಿಂಗ್ ಮತ್ತು ಟೋಲ್‌ನಂತಹ ಎಲ್ಲಾ ಟಚ್ ಪಾಯಿಂಟ್‌ಗಳಲ್ಲಿ ಬಳಸಬಹುದು.

ಎಜಿಎಸ್ ಟ್ರಾನ್ಸಾಕ್ಟ್ 2023ರ ಮಾರ್ಚ್‌ನಿಂದ ಆರ್‌ಬಿಎಲ್‌ ಬ್ಯಾಂಕ್ ಸಹಭಾಗಿತ್ವದಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಶನ್‌ನಲ್ಲಿ ಎನ್‌ಸಿಎಂಸಿ ಅನ್ನು ನೀಡುತ್ತಿದೆ. ಇಂದಿನಿಂದ, ಕಂಪನಿಯು ಬಿಎಂಆರ್‌ಸಿಎಲ್‌ಗೆ ಇಲ್ಲಿಯವರೆಗೆ 57,000ಕ್ಕೂ ಹೆಚ್ಚು ಎನ್‌ಸಿಎಂಸಿಗಳನ್ನು ನೀಡಿದೆ.

ಭಾರತ ಸರ್ಕಾರದ ಒಂದು ಕಾರ್ಡ್ ಒಂದು ದೇಶ ಯೋಜನೆಗೆ ಅನುಗುಣವಾಗಿ ಝೀರೋ- ಕೆವೈಸಿ ಎನ್‌ಸಿಎಂಸಿ ಅನ್ನು ಬಿಡುಗಡೆ ಮಾಡಲಾಗಿದ್ದು, ಈ ಯೋಜನೆಯು ಭಾರತದ ಸಾರಿಗೆ ಕ್ಷೇತ್ರದ ಭವಿಷ್ಯದಲ್ಲಿ ಭಾರಿ ಬದಲಾವಣೆ ಮಾಡುವ ನಿರೀಕ್ಷೆ ಇದೆ. ಪ್ರಸ್ತುತ ಕ್ಲೋಸ್ಡ್-ಲೂಪ್ ಟ್ರಾನ್ಸಿಟ್ ಕಾರ್ಡ್‌ಗಳನ್ನು ಭಾರತದಲ್ಲಿ ಮೆಟ್ರೋ ಅಥವಾ ಬಸ್ ಸಂಚಾರಕ್ಕೆ ನಿರ್ದಿಷ್ಟವಾಗಿ ಬಳಸಲಾಗುತ್ತದೆ. ಆದರೆ ಎನ್‌ಸಿಎಂಸಿಗಳನ್ನು ದೇಶದಾದ್ಯಂತ ಇರುವ ಎಲ್ಲಾ ಎನ್‌ಸಿಎಂಸಿ ಲಭ್ಯ ಇರುವ ಸ್ಥಳಗಳಲ್ಲಿ ಬಳಸಬಹುದಾಗಿದೆ. ಎಜಿಎಸ್ ಟ್ರಾನ್ಸಾಕ್ಟ್ ಟೆಕ್ನಾಲಜೀಸ್‌ನ ಝೀರೋ-ಕೆವೈಸಿ ಎನ್‌ಸಿಎಂಸಿಯು ಗ್ರಾಹಕರಿಗೆ ಕೆವೈಸಿ ವೆರಿಫಿಕೇಷನ್ ತೊಂದರೆಯಿಂದ ಮುಕ್ತಗೊಳಿಸುತ್ತದೆ. ವೇಗವಾಗಿ, ಹೆಚ್ಚು ಅನುಕೂಲಕರ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ವಿವಿಧ ಸಾರಿಗೆ ವಿಭಾಗಗಳಲ್ಲಿ ಅನುಕೂಲಕರ ಮತ್ತು ಸುಲಭ ಪಾವತಿ ಮಾಡುವ ಸೌಲಭ್ಯ ಒದಗಿಸುತ್ತದೆ.

ಎಜಿಎಸ್ ಟ್ರಾನ್ಸಾಕ್ಟ್ ಟೆಕ್ನಾಲಜೀಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ಎಂಡಿ ರವಿ ಬಿ ಗೋಯಲ್ ಮಾತನಾಡಿ , “ನಮ್ಮ ಗ್ರಾಹಕರಿಗೆ ಅನುಕೂಲವಾಗುವಂತಹ ಪಾವತಿ ಸೌಲಭ್ಯ ಒದಗಿಸುವ ಮೂಲಕ ಈ ವಿಭಾಗದಲ್ಲಿ ಮಹತ್ವದ ಪಾತ್ರ ವಹಿಸಲು ನಾವು ಬದ್ಧರಾಗಿದ್ದೇವೆ. ಗ್ರಾಹಕರಿಗೆ ತೊಂದರೆ ಮುಕ್ತ ಮತ್ತು ಸುಲಭವಾದ ಸಾರಿಗೆ ವ್ಯವಸ್ಥೆ ಕಲ್ಪಿಸುವ ಬಿಎಂಆರ್‌ಸಿಎಲ್‌ನ ಯೋಜನೆಗೆ ನೆರವಾಗಲು ನಮಗೆ ಸಂತೋಷ ಇದೆ. ಬೆಂಗಳೂರಿನಲ್ಲಿ ನಾವು ಮೊದಲು ಎನ್‌ಸಿಎಂಸಿ ಅನ್ನು ಬಿಡುಗಡೆ ಮಾಡಿದಾಗಿನಿಂದಲೂ ಅದರ ಸರಳ ಬಳಕೆ ವಿಧಾನ ಮತ್ತು ಸುಲಭವಾಗಿ ಟಾಪ್-ಅಪ್‌ ಮಾಡುವ ಸೌಲಭ್ಯಗಳಿಂದಾಹಿ ಹೆಚ್ಚಿನ ಪ್ರಯಾಣಿಕರು ಆಸಕ್ತಿ ತೋರಿಸಿದ್ದಾರೆ. ಝೀರೋ ಕೆವೈಸಿ ಎನ್‌ಸಿಎಂಸಿಯ ವೇಗದ ವಿತರಣೆ ಮಾಡುವ ಮೂಲಕ ಹೆಚ್ಚು ಗ್ರಾಹಕರಿಗೆ ಅಚ್ಚುಮೆಚ್ಚಿನದಾಗುತ್ತದೆ ಮತ್ತು ಆ ಮೂಲಕ ಎನ್‌ಸಿಎಂಸಿ ಬಳಕೆ ಹೆಚ್ಚಾಗಲಿದೆ ಎಂಬ ನಂಬಿಕೆ ನಮಗಿದೆ’’ ಎಂದು ಹೇಳಿದರು.

ಪ್ರಯಾಣಿಕರು ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿನ ಟಿಕೆಟ್ ಕೌಂಟರ್‌ಗಳಿಂದ ಎಜಿಎಸ್ ಟ್ರಾನ್ಸಾಕ್ಟ್ ಟೆಕ್ನಾಲಜೀಸ್ ವಿತರಣೆ ಮಾಡುವ ಝೀರೋ ಕೆವೈಸಿ ಎನ್‌ಸಿಎಂಸಿಗಳನ್ನು ಖರೀದಿಸಬಹುದು ಮತ್ತು ಅನುಕೂಲಕರವಾಗಿ ಟಾಪ್ ಅಪ್ ಮಾಡಬಹುದು.

Continue Reading

ಬೆಂಗಳೂರು

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Breast cancer : ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌ ಆಯೋಜನೆ ಮಾಡಲಾಗಿತ್ತು.

VISTARANEWS.COM


on

By

Breast Cancer Awareness Month celebrated through bikethon
Koo

ಬೆಂಗಳೂರು: ಸ್ತನಕ್ಯಾನ್ಸರ್‌ (Breast cancer) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಪಿಂಕ್‌ ವುಮೆನ್ಸ್‌ ಶೀರ್ಷಿಕೆಯಡಿ ಬೈಕಥಾನ್‌ ಆಯೋಜಿಸಿತ್ತು. ಸ್ತನಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್‌ ಕೆ.ಆರ್‌. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಸೋಮವಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್‌, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು.

Breast Cancer Awareness Month celebrated through bikethon

180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು. ಇದಷ್ಟೇ ಅಲ್ಲದೆ, ಬೈಕಥಾನ್‌ಗೂ ಮುನ್ನ, ಜುಂಬಾ ಸೆಷನ್‌, ಮೈಕಲ್‌ ಜಾಕ್ಸನ್‌ ಅವರ “ಡೇಂಜರಸ್‌” ಪ್ರೇರಿತಗೊಂಡ ಸ್ಟೆಪ್ಸ್‌ ಹಾಕುವ ಮೂಲಕ ಸ್ತನ ಕ್ಯಾನ್ಸರ್‌ ಆರಂಭಿಕ ಪತ್ತೆಯ ಬಗ್ಗೆ “ಬೀಟ್ ಇಟ್” ಶೀರ್ಷಿಕೆಯ ಫಲಕಗಳನ್ನು ಹಿಡಿದು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಎಚ್‌ಸಿಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್, ಮೆಡಿಕಲ್‌ ಆಂಕೊಲಾಜಿಸ್ಟ್ ಡಾ. ರೋಶನಿ ದಾಸ್‌ಗುಪ್ತ, ಸರ್ಜಿಕಲ್ ಆಂಕೊಲಾಜಿಸ್ಟ್ ಡಾ ಮಹೇಶ್ ಬಂಡೇಮೆಗಲ್ ಈ ಬೈಕಥಾನ್‌ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮನೀಶಾ ಕುಮಾರ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಸ್ತನಕ್ಯಾನ್ಸರ್‌ ಕಾಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಆರಂಭದಲ್ಲಿಯೇ ಈ ಕ್ಯಾನ್ಸರ್‌ನನ್ನು ಪತ್ತೆ ಹಚ್ಚಿದರೆ ಸುಲಭವಾಗಿ ಚಿಕಿತ್ಸೆ ಮೂಲಕ ಗುಣಪಡಿಸಬಹುದು. ನಾವಷ್ಟೇ ಜಾಗೃತರಾದೆ ಸಾಲದು, ನಮ್ಮ ಸುತ್ತಮುತ್ತ ಹಾಗೂ ಗ್ರಾಮೀಣ ಭಾಗದ ಮಹಿಳೆಯರಿಗೂ ಕೂಡ ಈ ಬಗ್ಗೆ ಅರಿವು ಮೂಡಿಸಬೇಕು. ಆಗಷ್ಟೇ ಎಲ್ಲರಿಗೂ ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಲಿದೆ. ಮಹಿಳಾ ಬೈಕರ್ಸ್‌ಗಳು ವಿಶೇಷವಾಗಿ ಬೈಕ್‌ ಸವಾರಿ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಿದ್ದು ಪ್ರಶಂಸನೀಯ ಎಂದರು.

ಮೆಡಿಕಲ್‌ ಆಂಕೊಲಾಜಿಸ್ಟ್ ಡಾ ರೋಶನಿ ದಾಸ್‌ಗುಪ್ತ ಮಾತನಾಡಿ, ಸ್ತನಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸಿದಷ್ಟೂ ಈ ಬಗ್ಗೆ ಭಯಗೊಳ್ಳುವವರ ಸಂಖ್ಯೆಯೂ ಕಡಿಮೆಯಾಗಲಿದೆ. ಜನರು ಈ ಕ್ಯಾನ್ಸರ್‌ನ ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿ, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಈ ರೋಗದಿಂದ ಮುಕ್ತಿಗೊಂಡು ಎಂದಿನಂತೆ ಜೀವನ ನಡೆಸಬಹುದು, ಹೀಗಾಗಿ ಜನರು ಈ ಬಗ್ಗೆ ಹೆಚ್ಚು ಜಾಗೃತರಾಗುವುದು ಒಳಿತು ಎಂದು ಸಲಹೆ ನೀಡಿದರು.

ಸರ್ಜಿಕಲ್ ಆಂಕೊಲಾಜಿಸ್ಟ್ ಡಾ. ಮಹೇಶ್ ಬಂಡೇಮೆಗಲ್ ಮಾತನಾಡಿ, “ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಂದು ಪಿಂಕ್ ಮಹಿಳಾ ಬೈಕ್‌ಥಾನ್ 2024 ನಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಅವಶ್ಯಕತೆ ಹೆಚ್ಚಿದೆ. ಇದರಿಂದಲಾದರೂ ಮಹಿಳೆಯರು ಎಚ್ಚೆತ್ತುಕೊಳ್ಳುತ್ತಾರೆ ಎಂದು ಹೇಳಿದರು.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain
Karnataka rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain
Karnataka rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain
Karnataka rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru
Karnataka rain

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain
Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading
Advertisement
actor darshan
ಪ್ರಮುಖ ಸುದ್ದಿ11 ಸೆಕೆಂಡುಗಳು ago

Actor Darshan : ದರ್ಶನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌; ನ.8ರಂದು ನವಗ್ರಹ ಸಿನಿಮಾ ರೀ-ರಿಲೀಸ್‌

Bengaluru News
ಬೆಂಗಳೂರು29 ನಿಮಿಷಗಳು ago

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ

Dina Bhavishya
ಭವಿಷ್ಯ2 ಗಂಟೆಗಳು ago

Dina Bhavishya : ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರ

Dina Bhavishya
ಭವಿಷ್ಯ1 ದಿನ ago

Dina Bhavishya : ಈ ದಿನ ಹೂಡಿಕೆ ವ್ಯವಹಾರದಿಂದ ದೂರವಿರಿ

Dina bhavishya
ಭವಿಷ್ಯ2 ದಿನಗಳು ago

Dina Bhavishya: ಈ ರಾಶಿಯವರಿಗೆ ಉತ್ಸಾಹದ ವಾತಾವರಣ; ಆಪ್ತರೊಂದಿಗೆ ಪ್ರಯಾಣ ಸಾಧ್ಯತೆ

namma Metro
ಬೆಂಗಳೂರು3 ದಿನಗಳು ago

Namma Metro : ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಝೀರೋ-ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಲಭ್ಯ

Murder Case
ಬೆಂಗಳೂರು ಗ್ರಾಮಾಂತರ3 ದಿನಗಳು ago

Murder Case: ಆನೇಕಲ್‌ನಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ

Dina bhavishya
ಭವಿಷ್ಯ3 ದಿನಗಳು ago

Dina Bhavishya: ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ; ಮಾತಿನಲ್ಲಿ ಹಿಡಿತವಿರಲಿ

Breast Cancer Awareness Month celebrated through bikethon
ಬೆಂಗಳೂರು4 ದಿನಗಳು ago

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Karnataka Rain
ಮಳೆ4 ದಿನಗಳು ago

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌