Bengaluru News: ಬೆಂಗಳೂರಿನಲ್ಲಿ ನಮ್ಮ ಯಾತ್ರಿ ಕ್ಯಾಬ್‌ ಸೇವೆ ಆರಂಭ - Vistara News

ಬೆಂಗಳೂರು

Bengaluru News: ಬೆಂಗಳೂರಿನಲ್ಲಿ ನಮ್ಮ ಯಾತ್ರಿ ಕ್ಯಾಬ್‌ ಸೇವೆ ಆರಂಭ

Bengaluru News: ಬೆಂಗಳೂರಿನಲ್ಲಿ ನಮ್ಮ ಯಾತ್ರಿ ಸಂಸ್ಥೆಯ ಕ್ಯಾಬ್‌ ಸೇವೆಗೆ ಮಂಗಳವಾರ ಚಾಲನೆ ದೊರೆಯಿತು. ನಮ್ಮ ಯಾತ್ರಿ ಆ್ಯಪ್ ಶೀಘ್ರದಲ್ಲೇ ಅಂತರ-ನಗರ (ಇಂಟರ್-ಸಿಟಿ), ಬಾಡಿಗೆಗಳು ಮತ್ತು ನಿಗದಿತ ರೈಡ್‌ಗಳನ್ನು ಕೂಡ ಒದಗಿಸಲಿವೆ. ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಆ್ಯಪ್ ಸೇವೆ ಲಭ್ಯವಾಗಲಿದೆ. ಇದು ವಿಕಲಚೇತನ ಸ್ನೇಹಿ ಪ್ರಯಾಣ, ಹೆಚ್ಚುವರಿ ಲಗೇಜ್ ಕೊಂಡೊಯ್ಯಲು ಅವಕಾಶ, ಸಾಕುಪ್ರಾಣಿಗಳೊಂದಿಗೆ ಪ್ರಯಾಣ ಮತ್ತು ಪ್ರವಾಸಗಳಂತಹ ವಿಶೇಷ ಸೇವೆಗಳನ್ನೂ ಸಹ ಒದಗಿಸುತ್ತದೆ ಎಂದು ಸಂಸ್ಥೆ ತಿಳಿಸಿದೆ.

VISTARANEWS.COM


on

namma Yatri Cab service started in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಮ್ಮ ಯಾತ್ರಿ (Namma Yatri) ಸಂಸ್ಥೆಯ ಕ್ಯಾಬ್‌ ಸೇವೆಗೆ ಬೆಂಗಳೂರಿನಲ್ಲಿ (Bengaluru News) ಮಂಗಳವಾರ ಚಾಲನೆ ದೊರೆಯಿತು.

ಬೆಂಗಳೂರಿನಲ್ಲಿ ಈಗಾಗಲೇ ಆಟೋ ಸೇವೆ ಮೂಲಕ ಜನಪ್ರಿಯವಾಗಿರುವ ನಮ್ಮ ಯಾತ್ರಿ ಸಂಸ್ಥೆ ಇದೀಗ ಕ್ಯಾಬ್‌ ಸೇವೆಯನ್ನು ಆರಂಭಿಸಿದ್ದು, ನಮ್ಮ ಯಾತ್ರಿ ಅಪ್ಲಿಕೇಶನ್‌ ಮೂಲಕ ಕ್ಯಾಬ್ ಕೂಡ ಬುಕ್ ಮಾಡಬಹುದಾಗಿದೆ.

ಸದ್ಯ 25,000 ಕ್ಯಾಬ್ ಚಾಲಕರನ್ನು ಹೊಂದಿದ್ದು, ಮುಂದಿನ ಆರು ತಿಂಗಳಲ್ಲಿ ಒಂದು ಲಕ್ಷ ಚಾಲಕರನ್ನು ಸೇರಿಸುವ ಗುರಿಯನ್ನು ಹೊಂದಿದೆ. ಶೂನ್ಯ ಕಮಿಷನ್, ಡೈರೆಕ್ಟ್-ಟು-ಡ್ರೈವರ್ ಮಾದರಿಯನ್ನು ಹೊಂದಿದೆ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: IPL 2024: ಜೋಶ್​ನಿಂದ ಬ್ಯಾಟಿಂಗ್​ ನಡೆಸಿ ಕ್ರಿಸ್​ ಗೇಲ್​ ದಾಖಲೆ ಮುರಿದ ಜಾಸ್​ ಬಟ್ಲರ್​

ನಮ್ಮ ಯಾತ್ರಿ ಆ್ಯಪ್ ಆಟೋ ಸೇವೆಯಂತೆಯೇ ಕ್ಯಾಬ್‌ಗಳಲ್ಲಿಯೂ ಪಾರದರ್ಶಕತೆ ಮತ್ತು ದಕ್ಷತೆಗೆ ಆದ್ಯತೆ ನೀಡಲಿದೆ. ಇದು ನಾನ್‌-ಎಸಿ ಮಿನಿ, ಎಸಿ ಮಿನಿ, ಸೆಡಾನ್ ಮತ್ತು ಎಕ್ಸ್‌ಎಲ್‌ (XL) ಕ್ಯಾಬ್ ಒಳಗೊಂಡಂತೆ ಗ್ರಾಹಕರ ವೈವಿಧ್ಯಮಯ ಅಗತ್ಯಗಳನ್ನು ಪೂರೈಸಲಿದೆ.

ನಮ್ಮ ಯಾತ್ರಿ ಆ್ಯಪ್ ಶೀಘ್ರದಲ್ಲೇ ಅಂತರ-ನಗರ (ಇಂಟರ್-ಸಿಟಿ), ಬಾಡಿಗೆಗಳು ಮತ್ತು ನಿಗದಿತ ರೈಡ್‌ಗಳನ್ನು ಕೂಡ ಒದಗಿಸಲಿವೆ. ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಆ್ಯಪ್ ಸೇವೆ ಲಭ್ಯವಾಗಲಿದೆ. ಇದು ವಿಕಲಚೇತನ ಸ್ನೇಹಿ ಪ್ರಯಾಣ, ಹೆಚ್ಚುವರಿ ಲಗೇಜ್ ಕೊಂಡೊಯ್ಯಲು ಅವಕಾಶ, ಸಾಕುಪ್ರಾಣಿಗಳೊಂದಿಗೆ ಪ್ರಯಾಣ ಮತ್ತು ಪ್ರವಾಸಗಳಂತಹ ವಿಶೇಷ ಸೇವೆಗಳನ್ನೂ ಸಹ ಒದಗಿಸುತ್ತದೆ ಎಂದು ಸಂಸ್ಥೆಯು ತಿಳಿಸಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಂಗಳವಾರ ನಮ್ಮ ಯಾತ್ರಿಯ ಕ್ಯಾಬ್ ಸೇವೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ‘ನಮ್ಮ ಯಾತ್ರಿ ಕರ್ನಾಟಕದ ಸ್ವದೇಶಿ ಅಪ್ಲಿಕೇಶನ್ ಆಗಿದೆ. ಅದರ ಸಮುದಾಯ-ಕೇಂದ್ರಿತ ವಿಧಾನ ಮತ್ತು ಚಾಲಕರ ಕಲ್ಯಾಣಕ್ಕಾಗಿ ಕೈಗೊಂಡ ಕ್ರಮಗಳು ಶ್ಲಾಘನೀಯ. ನಾವೀನ್ಯತೆ, ಪಾರದರ್ಶಕತೆ ಮತ್ತು ಎಲ್ಲರನ್ನೂ ಒಳಗೊಳ್ಳುವಿಕೆಗೆ ಅವರ ಬದ್ಧತೆಯನ್ನು ನಾನು ಶ್ಲಾಘಿಸುತ್ತೇನೆ ಮತ್ತು ಅವರಿಗೆ ಯಶಸ್ಸನ್ನು ಬಯಸುತ್ತೇನೆ’ ಎಂದು ತಿಳಿಸಿದರು.

ಇದನ್ನೂ ಓದಿ: UPSC EXAM-2023: ಲಕ್ಷಾಂತರ ರೂಪಾಯಿ ಸಂಬಳವಿದ್ದ ಉದ್ಯೋಗವನ್ನೇ ತೊರೆದಿದ್ದ ಯುಪಿಎಸ್‌ಸಿ ಟಾಪರ್ ಆದಿತ್ಯ ಶ್ರೀವಾಸ್ತವ

ದಿ ಇಂಡಿಯನ್ ಫೆಡರೇಶನ್ ಆಫ್ ಆಪ್ ಬೇಸ್ಡ್ ಟ್ರಾನ್ಸ್‌ಪೋರ್ಟ್ ವರ್ಕರ್ಸ್ (ಐಎಫ್‌ಎಟಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶೇಕ್ ಸಲಾವುದ್ದೀನ್ ಮಾತನಾಡಿ, ನಾವು ನಮ್ಮ ಯಾತ್ರಿಯನ್ನು ಅಭಿನಂದಿಸುತ್ತೇವೆ. ನಮ್ಮ ಚಾಲಕರ ಸಬಲೀಕರಣಕ್ಕಾಗಿ ನೇರ-ಚಾಲಕರಿಗೆ ಹಣವನ್ನು ಯಾವುದೇ ಕಮಿಷನ್ ಇಲ್ಲದೆ ಮತ್ತು ಮುಕ್ತ ಚಲನಶೀಲತೆಯ ವೇದಿಕೆಯನ್ನು ನಮ್ಮ ಯಾತ್ರಿ ಅಭಿವೃದ್ಧಿಪಡಿಸಿದೆ . ಸಮುದಾಯ ಮತ್ತು ನ್ಯಾಯಯುತ ವೇತನ ಮತ್ತು ಪರಸ್ಪರ ಗೌರವವನ್ನು ನಮ್ಮ ಯಾತ್ರಿ ನೀಡುತ್ತದೆ. ಇದು ಚಾಲಕರ ಕಲ್ಯಾಣ ಯೋಜನೆಗಳನ್ನು ವರ್ಧಿಸುತ್ತದೆ ಎಂದು ತಿಳಿಸಿದ್ದಾರೆ. ನಮ್ಮ ಯಾತ್ರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಗಿಜನ್ ಸೆಲ್ವನ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Weather: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಮೇ 3ರವರೆಗೆ ಹೆಚ್ಚಿರಲಿದೆ ಶಾಖದ ಅಲೆಗಳ ತೀವ್ರತೆ!

Karnataka Weather: ಮೇ 3ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Karnataka weather
Koo

ಬೆಂಗಳೂರು: ರಾಜ್ಯದಲ್ಲಿ ಏ.30ರಂದು ಮಂಗಳವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳ ತೀವ್ರತೆ (Heat wave) ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜ್ಯದಾದ್ಯಂತ ಏ.30ರಿಂದ ಮೇ 5ರವರೆಗೆ ಒಣ ಹವೆ ಇರಲಿದೆ. ಅದೇ ರೀತಿ ಮೇ 6ರಂದು ಮಂಡ್ಯ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗರು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

ಶಾಖದ ಅಲೆಯ ಎಚ್ಚರಿಕೆ

ಮೇ 3ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮೇ 3ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಕರ್ನಾಟಕ

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

Murder Case: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ಕೊಲೆ ನಡೆದಿದೆ. ವಿಚ್ಛೇದನ ಪಡೆದು ದೂರವಾಗುತ್ತಾಳೆ ಎಂದು ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿದ್ದಾನೆ.

VISTARANEWS.COM


on

Murder Case
Koo

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿರುವ ಘಟನೆ (Murder Case) ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ನಡೆದಿದೆ. ಹೆಂಡ್ತಿ ತನ್ನನ್ನು ಬಿಟ್ಟು ಬೇರೆಯಾಗುತ್ತಾಳೆ ಎಂದು ಬೇಸರದಿಂದ ಪತಿ ಚಾಕು ಇರಿದು ಕೊಲೆ ಮಾಡಿದ್ದಾನೆ.

ಶಿಯಾಪತ್ ಉನ್ನಿಸ ಕೊಲೆಯಾದ ಮಹಿಳೆ. ನೂರುಲ್ಲಾ ಪತ್ನಿಯ ಕೊಲೆ ಮಾಡಿದ ಗಂಡ. ಆರೋಪಿ ನೂರುಲ್ಲಾನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಗಂಡ-ಹೆಂಡತಿ ವಿಚ್ಛೇದನ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಕಳೆದ ಐದು ದಿನಗಳಿಂದ ಹೆಂಡತಿಯಿಂದ ಗಂಡ ದೂರವಿದ್ದ. ಸೋಮವಾರ ಹೆಂಡತಿ ಉನ್ನೀಸಾ ಮನೆ ಖಾಲಿ ಮಾಡುತ್ತಿದ್ದಳು. ಈ ವೇಳೆ ಏಕಾಏಕಿ ಗಂಡ ಬಂದು ಹೆಂಡತಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆ

ರಾಯಚೂರು: ತಾಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ಇತ್ತೀಚೆಗೆ ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಸುನೀತಾ (26) ಎಂಬ ಯುವತಿಯ ಶವ ಬೆಡ್ ರೂಮ್‌ನಲ್ಲಿ ರಕ್ತ ಸಿಕ್ತವಾಗಿ ಪತ್ತೆಯಾಗಿದೆ.

ಮೃತ ಯುವತಿ ದೇಹದ‌ ಮೇಲೆ ಚಾಕುವಿನಿಂದ ಹಲ್ಲೆ ಗುರುತು ಪತ್ತೆಯಾಗಿದ್ದು, ಒಲ್ಲದ ಮನಸ್ಸಿನಿಂದ ಮದುವೆಗೆ ಒಪ್ಪಿಕೊಂಡಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಮನೆಯವರ ಮದುವೆ‌ ಪ್ರಸ್ತಾಪಕ್ಕೆ‌ ಯುವತಿ ಮನನೊಂದಿದ್ದಳು. ಜತೆಗೆ ತಾಯಿ‌, ಅಣ್ಣನ ಜತೆ ಮನಸ್ತಾಪ ಇತ್ತು. ಇದೇ ಕಾರಣಕ್ಕೆ ಎಷ್ಟೋ ಬಾರಿ ಯುವತಿ ಮನೆ ಬಿಟ್ಟು ಹೋಗಿದ್ದಳಂತೆ. ಮದುವೆ ಪ್ರಸ್ತಾಪದಿಂದ ಮಾನಸಿಕ‌ ಸ್ಥಿಮಿತ ಕಳೆದುಕೊಂಡಿದ್ದ ಸುನೀತಾ, ಏ.26ರಂದು ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಾಯಿ ಮತ್ತು ಅಣ್ಣ ಹೇಳಿದ್ದಾರೆ.

ಆದರೆ, ತಂಗಿಯ ಮರಣದ ಬಗ್ಗೆ ಸಂಶಯ ವ್ಯಕ್ತ ಪಡಿಸಿ ಅಕ್ಕ ದೂರು ದಾಖಲು ಮಾಡಿದ್ದಾಳೆ. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

Continue Reading

ಕರ್ನಾಟಕ

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Murder Case: ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Murder Case
Koo

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ (Murder Case) ಅಂತ್ಯವಾಗಿರುವುದು ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಹಿತಿ(18) ಕೊಲೆಯಾದ ಯುವತಿ. ಪದ್ಮಜಾ (60) ಮಗಳನ್ನು ಕೊಲೆಗೈದ ತಾಯಿ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನು ತಾಯಿ ಪ್ರಶ್ನೆ ಮಾಡಿದ್ದಾಳೆ. ಈ ವಿಚಾರಕ್ಕೆ ತಾಯಿ ಮತ್ತು ಮಗಳ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ಇದೇ ವಿಚಾರಕ್ಕೆ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಸಂಜೆ ಚಾಕುವಿನಿಂದ ಪರಸ್ಪರ ಇರಿದು ಕೊಂಡಿದ್ದರಿಂದ ಮಂಗಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ. ತಾಯಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

ಹೆತ್ತ ತಾಯಿಯ ಮೇಲೆಯೇ ಮಗ ಹಲ್ಲೆ; ಅನ್ನ, ನೀರು ಕೊಡದೆ ಹಿಂಸೆ

ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಹೆತ್ತ ಮಕ್ಕಳಿಗೆ ಚಿತ್ರ ಹಿಂಸೆ ಕೊಟ್ಟಿರೋದನ್ನು ನೋಡಿದ್ದೆವು. ಆದರೆ ಈಗ ಹೆತ್ತ ತಾಯಿಯನ್ನೇ ಹೊಡೆಯುವ ಮೂಲಕ ಮಗ ಅಮಾನವೀಯವಾಗಿ ನಡೆದುಕೊಂಡಿರುವುದು ಕಂಡುಬಂದಿದೆ.

ಚಂದ್ರಮ್ಮ (75) ಹಲ್ಲೆಗೊಳಗಾದವರು. ಮುನಿರತ್ನ (45) ಹಲ್ಲೆ ಮಾಡಿದ ಮಗ. ಕತ್ತರಿಗುಪ್ಪೆಯ ಶ್ರೀನಿವಾಸ ನಗರದಲ್ಲಿ ಘಟನೆ ನಡೆದಿದೆ. ಒಂದು ವರ್ಷದಿಂದ ಮನೆಯ ಹೊರಗಡೆ ತಾಯಿ ಮಲಗಿಸುತ್ತಿದ್ದ ಮಗ, ಆಕೆಗೆ ಸರಿಯಾಗಿ ಊಟ ಕೂಡ ನೀಡದೆ ಹಿಂಸೆ ನೀಡುತ್ತಿದ್ದ. ಕಾರಣ ಕೇಳಿದರೆ ಮೂತ್ರ ವಿಸರ್ಜನೆ ಮಾಡಿಕೊಳ್ಳುತ್ತಿರುವ ಕಾರಣ ಹೊರಗೆ ಮಲಗಿಸುತ್ತಿರುವುದಾಗಿ ಮಗ ಹೇಳಿದ್ದಾನೆ.

ಇವರು ತಿರುಪತಿ ಮೂಲದವರಾಗಿದ್ದು, ಮುನಿರತ್ನ ತನ್ನ ಮದುವೆಗೂ ಮುನ್ನ ತಾಯಿಯನ್ನು ಅಡುಗೆ ಮಾಡಲು ಮನೆಗೆ ಕರೆತಂದಿದ್ದ. ಮದುವೆಯಾದ ಬಳಿಕ ತಾಯಿಯನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ ಎನ್ನಲಾಗಿದೆ. ಬೆಂಗಳೂರಿನ ಕತ್ತರಿಗುಪ್ಪೆಯ ಶ್ರೀನಿವಾಸ ನಗರಕ್ಕೆ ಬಂದು 2 ವರ್ಷವಾಗಿದೆ. ಸೊಸೆ ಸ್ವಂತ ತಾಯಿಯಂತೆ ನೋಡಿಕೊಳ್ಳುತ್ತಿದ್ದಳು. ಆದರೆ ಮಗ ತಾಯಿಗೆ ಚಿತ್ರ ಹಿಂಸೆ ನೀಡುತ್ತಿದ್ದ. ಹೀಗಾಗಿ ಮನೆಯ ಅಂಗಳದಲ್ಲಿ ತಾಯಿ ಇರುತ್ತಿದ್ದಳು.

ಇದನ್ನೂ ಓದಿ | Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

ಸೊಸೆ ತಾಯಿಯನ್ನು ನೋಡಿಕೊಳ್ಳುತ್ತಿದ್ದಳು ಎನ್ನುವ ಕಾರಣಕ್ಕೆ ಹೆಂಡತಿಯ ಜತೆಗೂ ಜಗಳವಾಡುತ್ತಿದ್ದ. 2 ದಿನದ ಹಿಂದೆ ಹೆಂಡತಿ ಜಗಳವಾಡಿ ತವರುಮನೆಗೆ ಹೋಗಿದ್ದಳು. ಹೀಗಾಗಿ ತಾಯಿ ಚಂದ್ರಮ್ಮನ ಮೇಲೆ ಮಗ ಹಲ್ಲೆ ಮಾಡಿದ್ದಾನೆ, 2 ದಿನದಿಂದ ತಾಯಿಗೆ ಅನ್ನ, ನೀರು ನೀಡಿಲ್ಲ. ನಶೆಯಲ್ಲಿ ಇಲ್ಲದ ಸಮಯದಲ್ಲೂ ಇದೆ ಸ್ಥಿತಿಯಲ್ಲಿ ಮುನಿರತ್ನ ಇರುತ್ತಿದ್ದ ಎನ್ನಲಾಗಿದೆ.

Continue Reading
Advertisement
Paris Olympics
ಕ್ರೀಡೆ26 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಭಾರತದ 7 ಶಟ್ಲರ್​ಗಳು; ಕನ್ನಡತಿ ಅಶ್ವಿನಿ ಪೊನ್ನಪ್ಪಗೂ ಅವಕಾಶ

ವಿದೇಶ37 mins ago

Pakistan: “ಭಾರತ ಸೂಪರ್‌ ಪವರ್‌ಪುಲ್‌ ರಾಷ್ಟ್ರ..ಪಾಕಿಸ್ತಾನ ಮಾತ್ರ ಭಿಕ್ಷೆ ಬೇಡ್ತಿದೆ”; ಹೀಗಂದಿದ್ದು ಯಾರು ಗೊತ್ತಾ?

IPL 2024
ಕ್ರೀಡೆ1 hour ago

IPL 2024: ಸೌರವ್ ಗಂಗೂಲಿಯ ಐಪಿಎಲ್​ ದಾಖಲೆ ಮುರಿದ ಫಿಲ್​ ಸಾಲ್ಟ್​

Hassan Pen Drive Case
ಪ್ರಮುಖ ಸುದ್ದಿ1 hour ago

Hassan Pen Drive Case: ಎಸ್‌ಐಟಿಗೆ 18 ಸಿಬ್ಬಂದಿ ನೇಮಕ; ಅಶ್ಲೀಲ ವಿಡಿಯೋದಲ್ಲಿ ಇರುವವರು ಯಾರು?

T20 World Cup 2024
ಕ್ರೀಡೆ2 hours ago

T20 World Cup 2024: ಇಂದು ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟ; ಸಂಭಾವ್ಯ ತಂಡ ಹೀಗಿದೆ

Manipur Violence
ದೇಶ2 hours ago

Manipur Violence:ಮಹಿಳೆಯರ ವಿವಸ್ತ್ರ ಕೇಸ್‌; ಪೊಲೀಸರೆದುರೇ ನಡೆದಿತ್ತು ನೀಚ ಕೃತ್ಯ

taliban writing muniraju
ಕ್ರೈಂ2 hours ago

Taliban Writing: ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

IPL 2024 Points Table
ಕ್ರೀಡೆ2 hours ago

IPL 2024 Points Table: ಡೆಲ್ಲಿ ಕ್ಯಾಪಿಟಲ್ಸ್​ ಸೋಲಿನ ಬಳಿಕ ಹೀಗಿದೆ ಅಂಕಪಟ್ಟಿ

Rohit Sharma Birthday
ಕ್ರೀಡೆ2 hours ago

Rohit Sharma Birthday: ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ಗೆ 37ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ

road accident anekal
ಬೆಂಗಳೂರು ಗ್ರಾಮಾಂತರ3 hours ago

Road Accident: ಪಂಚರ್‌ ಹಾಕುತ್ತಿದ್ದ ಲಾರಿ ಚಾಲಕ ಬೈಕ್‌ ಡಿಕ್ಕಿಯಾಗಿ ಸಾವು, ಹಿಟ್‌ ಆ್ಯಂಡ್‌ ರನ್‌ನಲ್ಲಿ ಯುವಕ ಮೃತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ6 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202422 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202423 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌