Bengaluru News : ನಾಯಿಗಳನ್ನು ಕೊಂದು ಹೂತಿಟ್ಟರಾ ಅಪಾರ್ಟ್‌ಮೆಂಟ್‌ ನಿವಾಸಿಗಳು! - Vistara News

ಬೆಂಗಳೂರು

Bengaluru News : ನಾಯಿಗಳನ್ನು ಕೊಂದು ಹೂತಿಟ್ಟರಾ ಅಪಾರ್ಟ್‌ಮೆಂಟ್‌ ನಿವಾಸಿಗಳು!

Bengaluru News : ಅಪಾರ್ಟ್‌ಮೆಂಟ್‌ ನಿವಾಸಿಗಳು ಬೀದಿ ನಾಯಿಗಳಿಗೆ ವಿಷ ಹಾಕಿ ಕೊಂದು (Poisoning of dogs) ಬಳಿಕ ಹೂತಿಟ್ಟಿರು ಆರೋಪ ಕೇಳಿ ಬಂದಿದೆ. ಈ ಸಂಬಂಧ ಎಫ್‌ಐಆರ್‌ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

Bengaluru News Poisoning of dogs
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆಯೊಂದು (Bengaluru News) ನಡೆದಿದೆ. ಕೆಲ ಕಿಡಿಗೇಡಿಗಳು ನಾಯಿಗಳಿಗೆ ವಿಷ ಪ್ರಾಶನ (Poisoning of dogs) ಮಾಡಿ ಹತ್ಯೆ ಮಾಡಿದ್ದಾರೆ.

ಪರಪ್ಪನ ಅಗ್ರಹಾರದ ಬಳಿ ಇರುವ ಮಹಾವೀರ್ ರಾಂಚಸ್ ‌ಅಪಾರ್ಟ್‌ಮೆಂಟ್‌ ಸುತ್ತಮುತ್ತ 15ಕ್ಕೂ ಬೀದಿ ನಾಯಿಗಳಿದ್ದವು. ಮಹಾವೀರ್ ರಾಂಚಸ್ ‌ಅಪಾರ್ಟ್‌ಮೆಂಟ್‌ ನಿವಾಸಿಗಳು ಬೀದಿ ನಾಯಿಗಳ ಸ್ಥಳಾಂತರಕ್ಕೆ ಬಿಬಿಎಂಪಿಗೆ ದೂರು ನೀಡಿದ್ದರು. ಆದರೆ ಬೀದಿ ನಾಯಿಗಳನ್ನು ಸ್ಥಳಾಂತರ ಮಾಡಲು ಆಗೋದಿಲ್ಲವೆಂದು ಅಧಿಕಾರಿಗಳು ಹೇಳಿದ್ದರು.

ಅಪಾರ್ಟ್‌ಮೆಂಟ್‌ಗೆ ಭೇಟಿ ನೀಡಿದಾಗ ಅಧಿಕಾರಿಗಳ ಜತೆಗೆ ನಿವಾಸಿಗಳು ಕಿರಿಕ್‌ ತೆಗೆದಿದ್ದರು. ಹೀಗಾಗಿ ಅಪಾರ್ಟ್‌ಮೆಂಟ್‌ ನಿವಾಸಿಗಳ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದರು. ಹೀಗೆ ಕಿರಿಕ್ ಆದ ಕೆಲ ದಿನದಲ್ಲೇ ಎರಡು ಬೀದಿ ನಾಯಿಗಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದವು.

ನಾಯಿಗಳಿಗೆ ಹಿಂಸೆ ಕೊಟ್ಟು ಸಾಯಿಸಲಾಗಿದೆ ಎಂದು ಮತ್ತೊಂದು ದೂರು ದಾಖಲಾಗಿದೆ. ನಾಯಿಗಳನ್ನು ಕೊಂದ ಆರೋಪದಡಿ ಹಾಗೂ ಅಧಿಕಾರಿಗಳ ಜತೆಗೆ ಗಲಾಟೆ ಮಾಡಿದ ಹಿನ್ನೆಲೆಯಲ್ಲಿ ಎರಡು ದೂರುಗಳು ದಾಖಲಾಗಿದೆ. ಇನ್ನೂ ನಾಯಿಗಳನ್ನು ಕೊಂದು ಅಪಾರ್ಟ್‌ಮೆಂಟ್‌ ನಿವಾಸಿಗಳು ಹೂತಿಟ್ಟಿದ್ದರು ಎನ್ನಲಾಗಿದೆ. ಹೀಗಾಗಿ ಮಹಾವೀರ್ ರಾಂಚಸ್ ‌ಅಪಾರ್ಟ್‌ಮೆಂಟ್‌ ನಿವಾಸಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: 220/66/11 ಕೆ.ವಿ ಐ.ಟಿ.ಐ ಸ್ಟೇಷನ್‌ನಲ್ಲಿ 31.5 ಎಂ.ವಿ.ಎ ಶಕ್ತಿ ಪರಿವರ್ತಕ-1 ರ ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜೂ.29 ರಂದು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

VISTARANEWS.COM


on

power outage in many parts of Bengaluru on June 29
Koo

ಬೆಂಗಳೂರು: ನಗರದ 220/66/11 ಕೆ.ವಿ ಐ.ಟಿ.ಐ ಸ್ಟೇಷನ್‌ನಲ್ಲಿ 31.5 ಎಂ.ವಿ.ಎ ಶಕ್ತಿ ಪರಿವರ್ತಕ-1 ರ ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಜೂ.29ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

220/66/11 ಕೆ.ವಿ ಐ.ಟಿ.ಐ ಸ್ಟೇಷನ್‌ನಲ್ಲಿ 31.5 ಎಂ.ವಿ.ಎ. ಶಕ್ತಿ ಪರಿವರ್ತಕ-1ರ ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಜೈ ಭುವನೇಶ್ವರ ಲೇಔಟ್, ದೀಪಾ ಆಸ್ಪತ್ರೆ, ವಿನಾಯಕ ಲೇಔಟ್, ಅಜಿತ್ ಲೇಔಟ್, ಚಿಕ್ಕಬಸವನಪುರ, ಡೀಸೆಲ್ ಲೋಕೊ ಶೆಡ್, ಜಸ್ಟೀಸ್ ಬೀಮಯ್ಯ ಲೇಔಟ್, ಆರ್.ಆರ್. ಟೆಂಪಲ್ ರೋಡ್‌, ಟೆಂಟ್ ರೋಡ್‌, ಕಾವೇರಿ ನಗರ, ಐಟಿಐ ಎಸ್ಟೇಟ್, ಸಿಂಗಾಯನಪಾಳ್ಯ, ಶ್ರೀಶೈಲ ಡೌನ್, ಭಟ್ಟರಹಳ್ಳಿ, ಮೇಡಹಳ್ಳಿ, ಟಿಸಿ ಪಾಳ್ಯ, ಆರ್‌ಎಂಎಸ್ ಕಾಲೋನಿ, ಕೆ.ಆರ್. ಪುರಂ.ದೇವಸಂದ್ರ, ಅಯ್ಯಪ್ಪನಗರ.

ಇದನ್ನೂ ಓದಿ: Airtel Price Hike: ಜಿಯೋ ನಂತರ ಏರ್‌ಟೆಲ್‌ ಡೇಟಾ ಬಳಕೆದಾರರ ಜೇಬಿಗೂ ಕತ್ತರಿ; 21% ದರ ಏರಿಕೆ

ಶಾಂತಿ ನಗರ, ಜಿಂಕೇತಿಮ್ಮನಹಳ್ಳಿ, ವಾರಣಾಸಿ, ಆನೆಪ್ಪ ವೃತ್ತ, ಅಕ್ಷಯನಗರ, ಕೌಡೇನಹಳ್ಳಿ, ಹ್ಯಾಪಿ ಗರ‍್ಡನ್, ಬಿಟಿಐ ಲೇಔಟ್ ನಾರಾಯಣಪುರ, ಕಾವೇರಿ ವಾಟರ್‌ಟ್ಯಾಂಕ್, ನಾಗಪ್ಪ ರೆಡ್ಡಿ ಲೇಔಟ್, ಕೊಂಡಪ್ಪ ರೆಡ್ಡಿ ಲೇಔಟ್, ಉದಯನಗರ, ಎಂಇಜಿ ಲೇಔಟ್, ಪಿಡಬ್ಲ್ಯೂಡಿ ಮುಖ್ಯರಸ್ತೆ, ಸಾಯಿಬಾಬಾ ಲೇಔಟ್, ವೈಟ್ ಹೌಸ್, ಮಡೋನಾ ಶಾಲೆ, ಕೆ.ಆರ್. ಪುರಂ ಸರ್ಕಾರಿ ಕಾಲೇಜು, ಯು.ಬಿ. ಲೇಔಟ್, ಆರ್‌ಎಂಎಸ್ ಕಾಲೋನಿ, ವಿನಾಯಕ ಲೇಔಟ್, ಸಿಲಿಕಾನ್ ಸಿಟಿ ಕಾಲೇಜು, ದೀಪಾ ಆಸ್ಪತ್ರೆ ಪ್ರದೇಶ, ಹಳೆಯ ಆರ್‌ಟಿಒ ಕಚೇರಿ, ಟಿ.ಸಿ. ಪಾಳ್ಯ, ಗಾರ್ಡನ್ ಸಿಟಿ ಕಾಲೇಜು.

ಭಟ್ಟರಹಳ್ಳಿ, ಮೇಡಹಳ್ಳಿ, ಹೊಸ ಆರ್‌ಟಿಒ ಕಚೇರಿ, ಕರುಣಶ್ರೀ ಲೇಔಟ್, ಮಾಸ್ಟರ್ ನಾಗರಾಜು ಲೇಔಟ್, ಸೀ ಕಾಲೇಜು, ಆಲ್ಫಾ ಗಾರ್ಡನ್, ಸ್ವತಂತ್ರ ನಗರ, ರಾಜೇಶ್ವರಿ ಲೇಔಟ್, ಮುನೇಶ್ವರ ಲೇಔಟ್, ಆಲ್ಫಾ ಗಾರ್ಡನ್ ಲೇಔಟ್, ತೆಂಗಿನ ತೋಟ, ಬೆತೆಲ್ ನಗರ, ಬೃಂದಾವನ ಲೇಔಟ್, ಕೆಆರ್‌ಆರ್. ಲೇಔಟ್, ಕೇಂಬ್ರಿಡ್ಜ್ ಲೇಔಟ್, ಕೇಂಬ್ರಿಡ್ಜ್ ಗಾರ್ಡನ್ ಲೇಔಟ್. ಬಿಎಂಟಿಸಿ ಡಿಪೋ, ಡೀಸೆಲ್ ಲೋಕೋ ಶೆಡ್, ಆರ್.ಆರ್. ದೇವಸ್ಥಾನದ ರಸ್ತೆ, ಐಟಿಐ ಭವನ, ನೇತ್ರಾವತಿ ವಿಸ್ತರಣೆ, ದೇವಸಂದ್ರ ಮಸೀದಿ ರಸ್ತೆ, ಕ್ರಿಷ್ಣ ಥಿಯೇಟರ್, ಗಾಯತ್ರಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ಸೃಷ್ಟಿ ಲೇಔಟ್, ಮೇಡಹಳ್ಳಿ, ಕುರುಡು ಸೊನ್ನೆನಹಳ್ಳಿ ರೋಡ್‌, ಹ್ಯಾಪಿ ಗಾರ್ಡನ್, ಮಾನ್ಯತಾ ಲೇಔಟ್, ವಿಂಡ್ ಫ್ಲವರ್ ಲೇಔಟ್, ಸಾಯಿ ಸೆರೆನಿಟಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಎಷ್ಟಿದೆ ದರ?

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

ಬೆಂಗಳೂರು

Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನ 17ನೇ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಸೇರಿ ಒಟ್ಟು 17 ಮಂದಿ ಜೈಲು ಸೇರಿದ್ದಾರೆ. ಈ ಪೈಕಿ ಪ್ರಕರಣದ 17ನೇ ಆರೋಪಿ ನಿಖಿಲ್‌ ನಾಯಕ್‌ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

By

Renukaswamy murder case 17th accused files bail plea
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy Murder) ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ಬರ್ಬರ ಕೊಲೆಯಾದ ಬಳಿಕ ಪ್ರಕರಣದ ಆರೋಪಿಯೊಬ್ಬ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ 17ನೇ ಆರೋಪಿ ನಿಖಿಲ್ ನಾಯಕ್ ಶರಣಾಗಿದ್ದ.

ಒಟ್ಟಾರೆ 17 ಆರೋಪಿಗಳ ಪೈಕಿ ನಿಖಿಲ್‌ ನಾಯಕ್‌ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್‌ನ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಬನ್ನೇರುಘಟ್ಟ ರಸ್ತೆ ಕೆಂಬತ್ತಹಳ್ಳಿ ನಿವಾಸಿ ನಿಖಿಲ್ ನಾಯಕ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ರೇಣುಕಾಸ್ವಾಮಿ ಕೊಲೆ ಬಳಿಕ ಪಟ್ಟಣಗೆರೆ ಶೆಡ್‌ನಿಂದ ಮೃತದೇಹವನ್ನು ಸಾಗಿಸಿದ್ದ ಆರೋಪವಿದೆ.

ಇದನ್ನೂ ಓದಿ: Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!

Renukaswamy murder case 17th accused files bail plea
ಕೊಲೆಯಾದ ರೇಣುಕಾಸ್ವಾಮಿ ಹಾಗೂ ಕೊಲೆ ಕೇಸ್‌ನಲ್ಲಿ ಬಂಧಿತನಾಗಿರುವ ನಿಖಿಲ್‌ ನಾಯಕ್

ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ್ದ ನಿಖಿಲ್‌ ನಾಯಕ್‌

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು. ಅದರಲ್ಲಿ ನಿಖಿಲ್‌ ನಾಯಕ್‌ ಸೇರಿ ರವಿಶಂಕರ್, ಕಾರ್ತಿಕ್, ಕೇಶವ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದರು.

ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿತ್ತು.

ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ ದರ್ಶನ್‌. ದರ್ಶನ್ ಪರ ಒಲವು ತೋರಿದವರ (Actor Darshan) ಸಂಖ್ಯೆ ತೀರಾ ಕಡಿಮೆ. ಇದೀಗ ಹಲವು ನಟ ನಟಿಯರು ದರ್ಶನ್‌ ಪರ ಧ್ವನಿ ಎತ್ತುತ್ತಿದ್ದಾರೆ. ಇದೀಗ ಈ ಸಾಲಿಗೆ ಗಾಯಕಿ ಡಾ.ಶಮಿತಾ ಮಲ್ನಾಡ್ (dr shamitha malnad) ಸೇರ್ಪಡೆಯಾಗಿದ್ದಾರೆ. ʻʻಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು. ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾʼʼಎಂದು ಬರೆದುಕೊಂಡಿದ್ದಾರೆ. ಇದೀಗ ಅವರ ಪೋಸ್ಟ್‌ ವೈರಲ್‌ ಆಗುತ್ತಿದೆ.

ʻʻಮನಸೇ ಮನಸೇ,,, ಸೋಲೋ ಗೆಲುವೋ, ನೋವೋ ನಲಿವೋ, ಏಳೋ ಬೀಳೋ,,ಕಲ್ಲೋ ಮುಳ್ಳೋ ಜೀವನದ ಹಾದಿ ಸುಲಭವಲ್ಲ.. ಯಶಸ್ಸಿನ ಹಾದಿ ಸುಗಮವಲ್ಲ… ಹಸಿವು, ಅವಮಾನ, ನೋವುಂಡು ಯಶಸ್ಸು ಗಳಿಸಿದ ಹೆಸರು
ದರ್ಶನ್ ತೂಗುದೀಪ.. ಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು,, ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾ…. ಅವರ ಅಭಿನಯ, ಭೇದವಿಲ್ಲದ ಪ್ರೀತಿ, ಸರಳತೆ, ಸ್ನೇಹ ಅಭಿಮಾನದ ಸಿಹಿ ಉಂಡವರು ನಾವು, ಅಭಿಮಾನಿಯಾಗಿ ಸಿನಿಮಾ ಅಭಿನಯ ನೋಡಿ ಅತ್ತು, ನಕ್ಕು, ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದವರು ನಾವು,, ಆರಡಿ ದೇಹವ ಮೂರಡಿ ಬಗ್ಗಿಸಿ ತಗ್ಗಿ ನಮ್ಮೊಂದಿಗೆ ವಿನಯದಿ ಮಾತಾಡುವಾಗ ಹೆಮ್ಮೆ ಪಟ್ಟವರು ನಾವು,,, ತಪ್ಪಾಗಿದೆಯೋ ಇಲ್ಲವೋ ಏನಾಗಿದೆ ಎಂದು ಅರಿಯದವರು ನಾವು.. ಹಣಕ್ಕೆ ಬಗ್ಗದೆ ಪ್ರೀತಿಗೆ ಬಗ್ಗಿದವರು ಅವರು,,, ತಪ್ಪಾಗಿದ್ದರೆ ನ್ಯಾಯಾಂಗವಿದೆ, ಕಾನೂನಿದೆ,,,
ಶಿಕ್ಷೆ ಇದೇʼʼಎಂದು ಬರೆದುಕೊಂಡಿದ್ದಾರೆ.

ʻʻ ಅಕಾಲ ನಿಧನರಾದ ಶ್ರೀ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ,,, ಅವರ ಕುಟುಂಬ ಹಾಗೂ ಹಲವು ನೊಂದ ಕುಟುಂಬಗಳಿಗೆ ನಮ್ಮೆಲ್ಲರ ಸಾಂತ್ವನ ,, ನೆರವು, ಆಸರೆ, ನ್ಯಾಯ ಬೇಕಿದೆ,, ಹಾಗೆ ಸೋಶಿಯಲ್ ಮೀಡಿಯಾವನ್ನು ದಯವಿಟ್ಟು ಒಳಿತಿಗೆ ಉಪಯೋಗಿಸಿ,, ಎಲ್ಲರ ಮೇಲೆ ಗೌರವವಿರಲಿ,, ಕಾಮೆಂಟ್ಸ್, ಪೋಸ್ಟ್, ಮೇಲೆ ಹಿಡಿತವಿರಲಿ,,
ದರ್ಶನ್ ಅಣ್ಣಾ,, ಕನ್ನಡದ ಕುಟುಂಬ,, ಚಲನಚಿತ್ರದ ಕುಟುಂಬ ನಮ್ಮ ಕುಟುಂಬ,, ಕಲಾವಿದರ ಕುಟುಂಬ,, ಏನೇ ಆದರೂ ನಮ್ಮ ಮನೆಯವರ ಜೊತೆ ನಾವು ಯಾವಾಗ್ಲೂ ಜೊತೆ ಇರುತ್ತೇವೆ,, ಅಲ್ಲವೇ??? ಹಾಗೆ ಪ್ರೀತಿ ಅಭಿಮಾನ ಬದಲಾಗದು,, ತಪ್ಪು ಯಾರು ಮಾಡಿದ್ದರೂ ಶಿಕ್ಷೆ ಆಗಬೇಕು .. ನ್ಯಾಯ ಎಲ್ಲರಿಗೂ ಒಂದೇ,,, ದರ್ಶನ್ ಅವರನ್ನು ಪ್ರೀತಿಸುವ ಎಲ್ಲರಿಗೂ ನೋವಾಗಿದೆ,,ಸಂಕಟವಾಗಿದೆ,, ಇದು ಸಂಯಮ, ತಾಳ್ಮೆ, ಪ್ರಾರ್ಥನೆಯ ಸಮಯ,,
ಸಿಟ್ಟು, ಕೋಪ, ಅಸಹನೆ, ಹತಾಶೆ ದರ್ಶನ್ ಹಾಗೂ ಅವರ ಕುಟುಂಬಕ್ಕೆ ಇನ್ನಷ್ಟು ತೊಂದರೆ ಒಡ್ಡಬಹುದು,,
ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯ ಬೇಕು,,, ಕಾಯೋಣ ,, ಸಮಾಧಾನದಿಂದ..ದರ್ಶನ್ ಅಣ್ಣಾ ಅವರಿಗಾಗಿ ಪ್ರಾರ್ಥಿಸೋಣ, ಹಾರೈಸೋಣ…ʼʼಎಂದು ಬರೆದುಕೊಂಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್‌ (Actor Darshan) ಹಾಗೂ ಸಹಚರರು ಜೈಲುವಾಸದಲ್ಲಿದ್ದಾರೆ. ಇತ್ತ ನಿತ್ಯವೂ ಅಭಿಮಾನಿಗಳು ದರ್ಶನ್‌ (Darshan Fans) ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸುತ್ತಿದ್ದು, ಪೊಲೀಸರಿಗೆ ತಲೆ ಬಿಸಿಯಾಗಿದೆ. 

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Convergence Foundation : ಕನ್ವರ್ಜನ್ಸ್ ಫೌಂಡೇಷನ್ ಸಹಯೋಗದೊಂದಿಗೆ ‘ವ್ಯವಸ್ಥಿತ ಪರಿಣಾಮ ಸೃಷ್ಟಿ’ ಕುರಿತು ಸಂವಾದ

Convergence Foundation:’ವ್ಯವಸ್ಥಿತ ಪರಿಣಾಮಕ್ಕಾಗಿ ಹೂಡಿಕೆಯ ಅವಕಾಶಗಳನ್ನು ಮುಕ್ತಗೊಳಿಸುವ’ ಕುರಿತು ಕನ್ವರ್ಜನ್ಸ್ ಫೌಂಡೇಷನ್‌ನ ಕಾರ್ಯತಂತ್ರ ಮತ್ತು ಹೂಡಿಕೆ ವಿಭಾಗದ ಮುಖ್ಯಸ್ಥ ಪ್ರವೀಣ್ ಖಂಘ್ತಾ ಅವರು ನಡೆಸಿದ ಸಂವಾದ ಗೋಷ್ಠಿಯು ಈ ಸಮ್ಮೇಳನದ ಪ್ರಮುಖ ಅಂಶವಾಗಿತ್ತು.

VISTARANEWS.COM


on

Convergence Foundation
Koo

ಬೆಂಗಳೂರು: ಕನ್ವರ್ಜನ್ಸ್ ಫೌಂಡೇಷನ್ (Convergence Foundation ), ರೋಹಿಣಿ ನಿಲೇಕಣಿ ಫಿಲಾಂತ್ರೋಪೀಸ್, ಸೆಂಟರ್ ಫಾರ್ ಎಕ್ಸ್‌ಪೋನೆನ್ಷಿಯಲ್ ಚೇಂಜ್ ಮತ್ತು ಇಂಡಿಯಾ ಇಂಪ್ಯಾಕ್ಟ್ ಶೆರ್ಪಾಸ್ ಸಹಯೋಗದಲ್ಲಿ, ‘ವ್ಯವಸ್ಥಿತ ಪರಿಣಾಮ ಸೃಷ್ಟಿ’ ಕುರಿತು ಬೆಂಗಳೂರಿನಲ್ಲಿ ಸಮ್ಮೇಳನ ನಡೆಯಿತು. ಅಭಿವೃದ್ಧಿ ಸಾಧಕರು, ಚಿಂತಕರು ವ್ಯವಸ್ಥೆಗಳ ಬದಲಾವಣೆಯ ನಡವಳಿಕೆಗಳು ಮತ್ತು ಸಶಕ್ತಗೊಳಿಸುವಿಕೆಗಳ ಕುರಿತು ಈ ಸಂವಾದದಲ್ಲಿ ಮಾತನಾಡಿದರು.

ರೋಹಿಣಿ ನಿಲೇಕಣಿ ಫಿಲಾಂತ್ರೋಪೀಸ್ ಅಧ್ಯಕ್ಷೆ ರೋಹಿಣಿ ನಿಲೇಕಣಿ ಅವರು ಮಾತನಾಡಿ, “ಎಲ್ಲರನ್ನೂ ಒಳಗೊಳ್ಳುವ ಮತ್ತು ಗಮನಾರ್ಹ ಬಗೆಯಲ್ಲಿ ಸಾಮಾಜಿಕ ಬದಲಾವಣೆ ಬಯಸುವ ಈ ದಶಕವು ಮಾನವ ಇತಿಹಾಸದಲ್ಲಿ ಅತ್ಯಂತ ನಿರ್ಣಾಯಕ . ಭಯಪಡುವುದಕ್ಕಿಂತ ಭಿನ್ನವಾಗಿ ಉತ್ತಮ ಭವಿಷ್ಯ ಸೃಷ್ಟಿಸಲು ಉಜ್ವಲ ಅವಕಾಶಗಳನ್ನು ನಾವು ಹೊಂದಬೇಕು. ಸಮಾಜ, ಸರ್ಕಾರ ಮತ್ತು ಮಾರುಕಟ್ಟೆ ನಡುವಿನ ಘರ್ಷಣೆ ಕಡಿಮೆ ಮಾಡಲು ಮತ್ತು ಪ್ರತಿಯೊಂದರ ನೈಜ ಸಾಮರ್ಥ್ಯ ಪೂರ್ಣವಾಗಿ ಬಳಸಿಕೊಳ್ಳಲು ಬಂಡವಾಳವನ್ನು ಕಾರ್ಯತಂತ್ರವಾಗಿ ಮತ್ತು ತುರ್ತಾಗಿ ನಿಯೋಜಿಸಬೇಕಾಗಿದೆ. ಲೋಕಹಿತ ಬಯಸುವ ವ್ಯಕ್ತಿಗಳು ಮತ್ತು ಪ್ರತಿಷ್ಠಾನಗಳು ಈ ನಿಟ್ಟಿನಲ್ಲಿ ಮುಂದಡಿ ಇಡಬೇಕು. ನಾವೆಲ್ಲ ದೊಡ್ಡ ಮಟ್ಟದಲ್ಲಿ ಯೋಚಿಸೋಣ, ವ್ಯವಸ್ಥಿತ ಬದಲಾವಣೆಯಲ್ಲಿ ಹೂಡಿಕೆ ಮಾಡುವ ವ್ಯಕ್ತಿಗಳ ಜೊತೆ ಚೆನ್ನಾಗಿ ಕೆಲಸ ಮಾಡಲು ಪಣತೊಡೋಣ” ಎಂದರು.

‘ವ್ಯವಸ್ಥಿತ ಪರಿಣಾಮಕ್ಕಾಗಿ ಹೂಡಿಕೆಯ ಅವಕಾಶಗಳನ್ನು ಮುಕ್ತಗೊಳಿಸುವ’ ಕುರಿತು ಕನ್ವರ್ಜನ್ಸ್ ಫೌಂಡೇಷನ್‌ನ ಕಾರ್ಯತಂತ್ರ ಮತ್ತು ಹೂಡಿಕೆ ವಿಭಾಗದ ಮುಖ್ಯಸ್ಥ ಪ್ರವೀಣ್ ಖಂಘ್ತಾ ಅವರು ನಡೆಸಿದ ಸಂವಾದ ಗೋಷ್ಠಿಯು ಈ ಸಮ್ಮೇಳನದ ಪ್ರಮುಖ ಅಂಶವಾಗಿತ್ತು. ಗೋಷ್ಠಿಯಲ್ಲಿ ವೆಡ್ಡಿಸ್ ಫೌಂಡೇಷನ್‌ನ ಸಿಇಒ ಮುರುಗನ್ ವಾಸುದೇವನ್, ತಮಾರಾ ಲೈಸರ್ ಎಕ್ಸ್‌ಪೀರಿಯನ್ಸ್‌ನ ಸಿಇಒ ಮತ್ತು ನಿರ್ದೇಶಕಕಾದ ಶ್ರುತಿ ಶಿಬುಲಾಲ್, ಜನಾಗ್ರಹ ಸಿಇಒ ಶ್ರೀಕಾಂತ್ ವಿಶ್ವನಾಥನ್ ಮತ್ತು ಗಿವ್ ಇಂಡಿಯಾದ ಸಿಇಒ ಸುಮಿತ್ ತಯಲ್ ಅವರು ಪಾಲ್ಗೊಂಡಿದ್ದರು.

ಕನ್ವರ್ಜನ್ಸ್ ಫೌಂಡೇಷನ್‌ನ ಕಾರ್ಯನಿರ್ವಾಹಕ ಪಾಲುದಾರ ಬಿಕ್ರಮ ದೌಲೆತ್ ಸಿಂಗ್ ಮಾತನಾಡಿ, ʼವ್ಯವಸ್ಥಿತ ಪ್ರಭಾವಕ್ಕಾಗಿ ಹೂಡಿಕೆಯನ್ನು ಮುಕ್ತವಾಗಿ ಬಳಸುವ ತುರ್ತು ಅಗತ್ಯ ಒತ್ತಿಹೇಳುತ್ತಾ, “ವ್ಯವಸ್ಥೆ ಬದಲಾವಣೆ ವಿಧಾನವು ಪರಿವರ್ತಕ ಬದಲಾವಣೆಗೆ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿದೆ. ಹೂಡಿಕೆಯ ಮೇಲೆ ಗರಿಷ್ಠ ಲಾಭ ಬಯಸುವ ದಾನಿಗಳು ಅಳೆಯಬಹುದಾದ ಮತ್ತು ಸುಸ್ಥಿರ ಫಲಿತಾಂಶಗಳನ್ನು ಸಾಧಿಸಲು ಸರ್ಕಾರಗಳ ಜೊತೆಗೆ ಸಹಕರಿಸುವ ಸಂಸ್ಥೆಗಳನ್ನು ಬೆಂಬಲಿಸಲು ಆದ್ಯತೆ ನೀಡಬೇಕು. ದಾನಿಗಳು ಮತ್ತು ವ್ಯವಸ್ಥೆಯ ಸಮನ್ವಯಕಾರರು ತಮ್ಮ ಸಾಮೂಹಿಕ ಪ್ರಭಾವವನ್ನು ಗರಿಷ್ಠಗೊಳಿಸಲು ಯಾವ ಪ್ರಯತ್ನಗಳನ್ನು ಮಾಡಬೇಕು ಎಂಬುದನ್ನು ಕಲಿಯಲು, ಪ್ರತಿಬಿಂಬಿಸಲು ಮತ್ತು ನಿರಂತರವಾಗಿ ಜೋಡಿಸಲು ಇದು ನಿರ್ಣಾಯಕವಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ: Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

ಪುಸ್ತಕ ಬಿಡುಗಡೆ

ಸಮ್ಮೇಳನದಲ್ಲಿ ಸಂಜಯ್ ಪುರೋಹಿತ್ ಅವರ ಪುಸ್ತಕ, ʼಥಿಂಕ್ ಬುಕ್‌ ಸರಣಿಯ ಮೂರನೇ ಕಂತು, ʼಥಿಂಕ್ ಸಸ್ಟೇನ್ʼ ಬಿಡುಗಡೆ ಮಾಡಲಾಯಿತು. ಈ ಪುಸ್ತಕವನ್ನು ರೋಹಿಣಿ ನಿಲೇಕಣಿ ಅವರು ಬಿಡುಗಡೆ ಮಾಡಿದರು. ಜೊತೆಗೆ ಥಿಂಕ್ ಸ್ಕೇಲ್ ಮತ್ತು ಥಿಂಕ್ ಸ್ಪೀಡ್, ಥಿಂಕ್ ಸಸ್ಟೇನ್ ಪರಿಣಾಮಕಾರಿ ಪರಿವರ್ತನೆಗೆ ಕಾರಣವಾಗುವ ಬದಲಾವಣೆಯನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ. ಈ ಥಿಂಕ್ ಬುಕ್‌ ಕೃತಿಗಳು ದೊಡ್ಡ ಪ್ರಮಾಣದಲ್ಲಿ ಪ್ರಭಾವ ಸಾಧಿಸಲು ನೆರವಾಗಲಿವೆ.

ಲೇಖಕ, ಸಿಇಒ ಮತ್ತು ಸೆಂಟರ್ ಫಾರ್ ಎಕ್ಸ್‌ಪೋನೆನ್ಷಿಯಲ್ ಚೇಂಜ್‌ನ ಮುಖ್ಯ ಮೇಲ್ವಿಚಾರಕ ಸಂಜಯ್ ಪುರೋಹಿತ್ ಅವರು ಸಮ್ಮೇಳನದಲ್ಲಿ ಮಾತನಾಡಿ “ಇದು ನವೀನ ಸ್ಥಳವಾಗಿದ್ದು, ಗಮನಾರ್ಹ ಬದಲಾವಣೆಯ ಪ್ರಯಾಣ ಕಾರ್ಯಗತಗೊಳಿಸಲು ವ್ಯವಸ್ಥೆಯ ಸಮನ್ವಯಕಾರರು, ವೈವಿಧ್ಯಮಯ ಸಶಕ್ತಗೊಳಿಸುವವರು ಮತ್ತು ಪ್ರಭಾವಶಾಲಿಗಳನ್ನು ಒಗ್ಗೂಡಿಸಲಿದೆ. ಈ ಬದಲಾವಣೆಯ ಈ ಅಲೆಗಳನ್ನು ಪ್ರೇರೇಪಿಸಲು ನಾವೆಲ್ಲರೂ ಒಗ್ಗೂಡಬೇಕಾಗಿದೆ ಎಂದು ಹೇಳಿದರು.

Continue Reading

ಕ್ರೈಂ

Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!

Actor Darshan: ತಾನು ಹಲ್ಲೆ ಮಾಡಿಲ್ಲ ಎಂದ ದರ್ಶನ್‌, ಆ ಐವತ್ತು ನಿಮಿಷದ ಸೀಕ್ರೆಟ್ ಸಿಸಿಟಿವಿಯಿಂದ ರಿವೀಲ್ ಆದ ಬಳಿಕ ನಿಜ ಒಪ್ಪಿಕೊಂಡಿದ್ದಾನೆ. ಪಟ್ಟಣಗೆರೆ ಶೆಡ್‌ಗೆ ಸಂಜೆ 4.30ಕ್ಕೆ ವಿನಯ್ ಜೊತೆಗೆ ಎಂಟ್ರಿಯಾಗಿದ್ದ ದರ್ಶನ್, ಶೆಡ್‌ನಿಂದ ತೆರಳಿದ್ದು 5.20ಕ್ಕೆ ಎಂದು ಗೊತ್ತಾಗಿದೆ.

VISTARANEWS.COM


on

Renuka swamy Murder case actor darshan
Koo

ಬೆಂಗಳೂರು: ಪಟ್ಟಣಗೆರೆ ಶೆಡ್‌ನಲ್ಲಿ (Pattanagere Shed) ನಡೆದ ರೇಣುಕಾ ಸ್ವಾಮಿ ಹತ್ಯೆಯ (Renuka Swamy Murder) ವಿವರಗಳು ಇನ್ನೂ ಒಂದೊಂದಾಗಿ ಹೊರಬೀಳುತ್ತಿವೆ. ʼಕೇವಲ ಒಂದೆರಡು ನಿಮಿಷ ಅಲ್ಲಿದ್ದು ಹೊರಬಿದ್ದೆʼ ಎಂದು ಮೊದಲು ಹೇಳಿಕೆ ನೀಡಿದ್ದ ನಟ ದರ್ಶನ್‌ (Actor Darshan), ಬರೋಬ್ಬರಿ 50 ನಿಮಿಷ ಅಲ್ಲಿದ್ದು ರೇಣುಕಾ ಸ್ವಾಮಿಯನ್ನು ಟಾರ್ಚರ್‌ ಮಾಡಿದ್ದು ಬಯಲಾಗಿದೆ. ಬೆಲ್ಟ್‌, ದೊಣ್ಣೆಗಳಿಂದ ಥಳಿಸಿ, ಬೂಟುಗಾಲಿನಿಂದ ಒದ್ದು ದರ್ಶನ್‌ ಕ್ರೌರ್ಯ ಮೆರೆದಿದ್ದಾನೆ.

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ, ಆತನ ಮೇಲೆ ಡಿ ಹಂತಕ ಪಡೆ ಎಷ್ಟು ಸಮಯ ದಾಳಿ‌ ಮಾಡಿತು ಎಂಬ ವಿವರಗಳು ಸಿಸಿಟಿವಿ ರೆಕಾರ್ಡಿಂಗ್‌ ಮೂಲಕ ಹೊರಬಿದ್ದಿವೆ. ತಾನು ಹಲ್ಲೆ ಮಾಡಿಲ್ಲ ಎಂದ ದರ್ಶನ್‌, ಆ ಐವತ್ತು ನಿಮಿಷದ ಸೀಕ್ರೆಟ್ ಸಿಸಿಟಿವಿಯಿಂದ ರಿವೀಲ್ ಆದ ಬಳಿಕ ನಿಜ ಒಪ್ಪಿಕೊಂಡಿದ್ದಾನೆ. ಪಟ್ಟಣಗೆರೆ ಶೆಡ್‌ಗೆ ಸಂಜೆ 4.30ಕ್ಕೆ ವಿನಯ್ ಜೊತೆಗೆ ಎಂಟ್ರಿಯಾಗಿದ್ದ ದರ್ಶನ್, ಶೆಡ್‌ನಿಂದ ತೆರಳಿದ್ದು 5.20ಕ್ಕೆ ಎಂದು ಗೊತ್ತಾಗಿದೆ.

ರೇಣುಕಾ ಸ್ವಾಮಿ ಮೇಲೆ ನಿರಂತರ 30 ನಿಮಿಷ ಕಾಲ ದರ್ಶನ್‌ ಹಲ್ಲೆ ಮಾಡಿದ್ದ. ನಟನ ಕ್ರೌರ್ಯ ಸಿನಿಮಾ ಮಾದರಿಯಲ್ಲಿಯೇ ಇತ್ತು. ಬೆಲ್ಟ್‌ ಬಿಚ್ಚಿ ಮುಖ ಮೂತಿ ನೋಡದೆ ಬಾರಿಸಿದ್ದ. ʼಅಲ್ಲಿನ ಫೋಟೋ ಕಳಿಸ್ತೀಯಾ?ʼ ಎಂದು ಪ್ರಶ್ನಿಸುತ್ತ ಕಾಲಿನಿಂದ ಮರ್ಮಾಂಗಕ್ಕೆ ಬೂಟ್‌ ಕಾಲಿನಲ್ಲಿ ತುಳಿದಿದ್ದ. ಮನೆಯಿಂದ ಪೊಲೀಸ್‌ ಲಾಠಿ ತರಿಸಿಕೊಂಡು ಅದರಿಂದ ಥಳಿಸಿದ್ದ. ರೇಣುಕಾಸ್ವಾಮಿಯನ್ನು ಅಲ್ಲಿ ನಿಂತಿದ್ದ ವಾಹನಗಳ ಮೇಲೆ ಎತ್ತಿ ಬಿಸಾಡಿದ್ದ. ದರ್ಶನ್‌ ಆರ್ಭಟಕ್ಕೆ ಅಲ್ಲಿದ್ದ ವಾಹನಗಳೇ ಶೇಕ್ ಆಗಿದ್ದವು.

ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಕಳುಹಿಸಿದ್ದ ಮೆಸೇಜ್ ಗ್ಯಾಂಗ್‌ ಓಪನ್ ಮಾಡಿಕೊಂಡಿತ್ತು. ಆತ ಕಳುಹಿಸಿದ್ದ ಮೆಸೆಜ್ ಓದಲು ಹೇಳಿದ್ದ ಪವನ್‌ಗೆ ಹೇಳಿದ್ದ ದರ್ಶನ್, ಪವನ್ ಅವುಗಳನ್ನು ಒಂದೊಂದಾಗಿ ಜೋರಾಗಿ ಓದುತ್ತಾ ಇದ್ದಂತೆ. ಆ ಮೆಸೇಜ್‌ ಓದುತ್ತಿದ್ದ ಟೋನ್‌ನಲ್ಲಿಯೇ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದ್ದ.

ತನಿಖೆ ಸಂದರ್ಭದಲ್ಲಿ, ಮೊದಮೊದಲು ಎರಡೇಟು ಹೊಡೆದು ಹಣ ಕೊಟ್ಟು ಹೊರಟೆ ಎಂದಿದ್ದ ದರ್ಶನ್. ಆದರೆ ದಚ್ಚು ಐವತ್ತು ನಿಮಿಷ ಶೆಡ್‌ನಲ್ಲಿದ್ದ ಮಾಹಿತಿ ಕಲೆ ಹಾಕಿದ್ದ ಪೊಲೀಸರು ಕೊನೆಗೆ ಸಾಕ್ಷಿ ಮುಂದೆ ಇಟ್ಟು ವಿಚಾರಣೆ ನಡೆಸಿದಾಗ, ಅಷ್ಟೂ ಹೊತ್ತೂ ಹಲ್ಲೆ ಮಾಡಿರುವುದಾಗಿ ಸತ್ಯ ಒಪ್ಪಿಕೊಂಡಿದ್ದಾನೆ. ದರ್ಶನ್ ಹಲ್ಲೆ ಮಾಡಿರುವುದಾಗಿ ಪವಿತ್ರಾ ಗೌಡ ಕೂಡ ಹೇಳಿಕೆ ನೀಡಿದ್ದಾಳೆ.

ಪಟ್ಟಣಗೆರೆ ಶೆಡ್‌ಗೆ ಹೋಗೋಲ್ಲ ಎನ್ನುತ್ತಿರುವ ವಾಹನ ಮಾಲೀಕರು!

ರೇಣುಕಾ ಸ್ವಾಮಿ (Renuka Swamy Murder) ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ಬರ್ಬರ ಕೊಲೆಯಾದ ಬಳಿಕ, ಪಟ್ಟಣಗೆರೆಯ ವಾಹನ ಶೆಡ್‌ (Pattanagere Shed) ಕಡೆ ಸುಳಿದಾಡಲು ವಾಹನ ಮಾಲಿಕರು ಅಂಜುತ್ತಿದ್ದಾರೆ. ಇಲ್ಲಿ ಸಾಲ ಬಾಕಿ (Loan default) ಉಳಿಸಿಕೊಂಡಿರುವವರ ವಾಹನಗಳನ್ನು ಸೀಜ್‌ (Seize) ಮಾಡಿ ತಂದಿಡಲಾಗುತ್ತಿದೆ. ಈಗ ಈ ವಾಹನಗಳನ್ನು ಬಿಡಿಸಿಕೊಳ್ಳಲು ಕೂಡ ಯಾರೂ ಈ ಶೆಡ್‌ ಕಡೆ ತಲೆ ಹಾಕುತ್ತಿಲ್ಲ.

ಸಾಲ ಬಾಕಿ ಉಳಿಸಿಕೊಂಡ ಪರಿಣಾಮ ಪಟ್ಟಣಗೆರೆ ಶೆಡ್‌ ಪಾಲಾಗಿರುವ ವಾಹನಗಳ ಮಾಲೀಕರಿಗೆ ಈಗ ಪಟ್ಟಣಗೆರೆಯ ಶೆಡ್ ಭಯವೇ ಹೆಚ್ಚಾಗಿದೆ. ರೇಣುಕಾ ಸ್ವಾಮಿ ಕೊಲೆಯ ನಡೆದ ತಾಣ ಹಾಗೂ ಅದರ ಬರ್ಬರತೆ ಇವರ ಕೈಕಾಲು ನಡುಗುವಂತೆ ಮಾಡಿದೆ. ʼನೋ ಆರ್ಗ್ಯುಮೆಂಟ್, ಓನ್ಲಿ ಸೆಟಲ್‌ಮೆಂಟ್‌ʼ ಎನ್ನುತ್ತ ಗಪ್‌ಚುಪ್‌ ಆಗಿ ಹಣ ಕಟ್ಟಿ ಬಿಡಿಸಿಕೊಂಡು ಬರುತ್ತಿದ್ದಾರೆ. ಇದರ ಆಸುಪಾಸಿನಲ್ಲಿ ಓಡಾಡುವವರು ಸಹ, ʼಇದೇ ಆ ಶೆಡ್‌ʼ ಎಂದು ಮಾತಾಡಿಕೊಳ್ಳುತ್ತ ಶೆಡ್ಡನ್ನು ನೋಡುತ್ತ ಬಿರಬಿರನೆ ಸಾಗುತ್ತಾರೆ!

ಪಟ್ಟಣಗೆರೆ ಶೆಡ್‌ಗೆ ಹೋಗಿ ವಾಹನ ಬಿಡಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಮಾಲೀಕರು ಕೆಲವೆಡೆ ಬ್ಯಾಂಕ್‌ಗೆ ಹೋಗಿ ಹಣ ಕಟ್ಟಿ, ʼನೀವೇ ವಾಹನ ತಂದುಕೊಡಿʼ ಎಂದೂ ಬ್ಯಾಂಕ್‌ನವರಿಗೆ ಮನವಿ ಮಾಡುತ್ತಿದ್ದಾರಂತೆ. ನಾವು ಶೆಡ್‌ಗೆ ಹೋಗಲ್ಲ‌ ಸರ್, ನೀವೆ ಹೋಗಿ ಎಂದು ದುಂಬಾಲು ಬೀಳುತ್ತಿದ್ದಾರೆ! ʼʼಕ್ರೂರವಾಗಿ ಸತ್ತವರು ದೆವ್ವಗಳಾಗುತ್ತಾರಂತೆ. ಅವರ ಆತ್ಮಗಳು ಅಲ್ಲೇ ಸುಳಿದಾಡ್ತಾ ಇರುತ್ತಾವಂತೆ, ನಮಗ್ಯಾಕೆ ಬೇಕು ಸಾರ್‌ ಇಲ್ಲದ ಉಪದ್ವ್ಯಾಪʼʼ ಎಂದು ಕೂಡ ಕೆಲವು ಮಾಲೀಕರು ಹೇಳುತ್ತಿದ್ದಾರೆ ಎಂದು ವರದಿಯಾಗಿದೆ.

ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾ ಸ್ವಾಮಿಯನ್ನು ಕೂಡಿಹಾಕಿ ದರ್ಶನ್‌ ಮತ್ತು ಗ್ಯಾಂಗ್‌ ಭೀಕರವಾಗಿ ಹಲ್ಲೆ ನಡೆಸಿತ್ತು. ವಾಹನಗಳಿಗೆ ರೇಣುಕಾ ಸ್ವಾಮಿಯ ತಲೆ ಜಪ್ಪಿ, ದೊಣ್ಣೆಗಳಿಂದ ಥಳಿಸಿ, ಮರ್ಮಾಂಗಕ್ಕೆ ಒದ್ದು ಹಿಂಸಿಸಿತ್ತು. ಈ ಪೀಡನೆಯನ್ನು ತಾಳಲಾರದೆ ರೇಣುಕಾ ಸ್ವಾಮಿ ಜೀವ ಶೆಡ್‌ನಲ್ಲಿಯೇ ಹೋಗಿತ್ತು. ಕೆಲಕಾಲ ಶವವನ್ನು ಶೆಡ್‌ನಲ್ಲೇ ಇಟ್ಟಿದ್ದ ಡಿ ಗ್ಯಾಂಗ್‌, ನಂತರ ಅದನ್ನು ಸುಮನಹಳ್ಳಿ ರಾಜಕಾಲುವೆಗೆ ಎಸೆದಿತ್ತು.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

Continue Reading
Advertisement
ವಿದೇಶ13 mins ago

US Presidential Election: ರಂಗೇರುತ್ತಿದೆ ಅಮೆರಿಕ ಅಧ್ಯಕ್ಷೀಯ ಚುನಾವಣೆ; ಬೈಡೆನ್‌-ಟ್ರಂಪ್‌ ಮುಖಾಮುಖಿ; ಭರ್ಜರಿ ಟಾಕ್‌ ವಾರ್‌

NK Bailu victims to get relief soon says Incharge secretary Ritesh Kumar Singh
ಉತ್ತರ ಕನ್ನಡ20 mins ago

Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ

Viral Video
Latest23 mins ago

Viral Video: ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

power outage in many parts of Bengaluru on June 29
ಬೆಂಗಳೂರು31 mins ago

Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Actor Darshan In Central Jail remembering mother and son
ಸ್ಯಾಂಡಲ್ ವುಡ್41 mins ago

Actor Darshan: ಜೈಲಿನಲ್ಲಿ ದರ್ಶನ್‌ಗೆ ತಾಯಿ, ತಮ್ಮನ ನೆನಪಾಗ್ತಿದೆಯಂತೆ!

bear attack
ಕೊಪ್ಪಳ41 mins ago

Wild Animals Attack : ಕೊಪ್ಪಳದಲ್ಲಿ ಕಂಡ ಕಂಡಲ್ಲಿ ಕರಡಿಗಳ ಹಾವಳಿ

Haveri Accident
ಕರ್ನಾಟಕ52 mins ago

Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

cm siddaramaiah karnataka cm
ಕರ್ನಾಟಕ1 hour ago

Karnataka CM: ಒಕ್ಕಲಿಗ ಆಯ್ತು, ಈಗ ಲಿಂಗಾಯತ ಮುಖ್ಯಮಂತ್ರಿಗೆ ಪಂಚ ಪೀಠ ಶ್ರೀಗಳಿಂದ ಬೇಡಿಕೆ!

Ajinkya Rahane
ಕ್ರೀಡೆ1 hour ago

Ajinkya Rahane: ಕೌಂಟಿ ಕ್ರಿಕೆಟ್​ನತ್ತ ಮುಖ ಮಾಡಿದ ಅಜಿಂಕ್ಯ ರಹಾನೆ

BGauss RUV350
Latest2 hours ago

BGauss RUV350 : ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಆರ್‌ಯುವಿ350 ಬಿಡುಗಡೆ ಮಾಡಿದ ಬಿಗಾಸ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು23 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌