Bengaluru Power Cut: ತುರ್ತು ನಿರ್ವಹಣಾ ಕೆಲಸ; ಜೂ.25ರಂದು ಬೆಂಗಳೂರಿನಲ್ಲಿ ವಿದ್ಯುತ್‌ ಕಡಿತ - Vistara News

ಬೆಂಗಳೂರು

Bengaluru Power Cut: ತುರ್ತು ನಿರ್ವಹಣಾ ಕೆಲಸ; ಜೂ.25ರಂದು ಬೆಂಗಳೂರಿನಲ್ಲಿ ವಿದ್ಯುತ್‌ ಕಡಿತ

Bengaluru Power Cut: ವಾರದ ಆರಂಭದಲ್ಲೇ ಜನತೆಗೆ ಬೆಸ್ಕಾಂ ಕರೆಂಟ್‌ ಶಾಕ್‌ (Power Cut) ಕೊಟ್ಟಿದೆ. ಜೂನ್‌ 25ರಂದು ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಹಾಗಾದರೆ ಯಾವ ಯಾವ ಏರಿಯಾದಲ್ಲಿ ಕರೆಂಟ್‌ ಇರುವುದಿಲ್ಲ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

bengaluru power cut
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜೂ.25ರಂದು ವಿದ್ಯುತ್‌ ಕಡಿತದಿಂದಾಗಿ ಬೆಂಗಳೂರಿಗರು ಕತ್ತಲೆಯಲ್ಲಿ (Bengaluru Power Cut) ಇರಬೇಕಾಗುತ್ತದೆ. ಮಂಗಳವಾರ ಬೆಳಗ್ಗೆ 10:30ರಿಂದ ಮಧ್ಯಾಹ್ನ 3:30ರವರಗೆ ಹೆಚ್.ಬಿ.ಆರ್ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ಬೆಸ್ಕಾಂ ಕೈಗೆತ್ತಿಕೊಂಡಿದೆ. ಹೀಗಾಗಿ ಬೆಂಗಳೂರಿನ ಅರ್ಧಪಾಲು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಹೀಗಿವೆ

ಎಚ್‌.ಬಿ.ಆರ್‌ನ 1, 2 ಮತ್ತು 3ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್‌ ಕಾಲೋನಿ, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆಯಲ್ಲಿ ಕರೆಂಟ್‌ ಇರುವುದಿಲ್ಲ.

ಜತೆಗೆ ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ. ಎಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್‌ನಗರ, 5ನೇ ಬ್ಲಾಕ್, ಎಚ್‌.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಎಚ್.ಕೆ.ಬಿ.ಕೆ ಕಾಲೇಜ್, 4 ಮತ್ತು 5ನೇ ಎಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೈಸ್‌ನಲ್ಲೂ ವ್ಯತ್ಯಯವಾಗಲಿದೆ.

ಇದನ್ನೂ ಓದಿ: UGCET 2024: ಯುಜಿಸಿಇಟಿಗೆ ಜೂನ್ 25ರಿಂದ ಆಫ್‌ಲೈನ್ ವೆರಿಫಿಕೇಶನ್‌; ಈ ಅಭ್ಯರ್ಥಿಗಳು ಮಾತ್ರ ಹಾಜರಾಗಬೇಕಿಲ್ಲ!

ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಎಚ್.ಆರ್.ಬಿ.ಆರ್. 3ನೇ ಬ್ಲಾಕ್,ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ ಸ್ಟ್ರೀಟ್‌, ಎ.ಕೆ.ಕಾಲೋನಿ, ಎಚ್.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟರ್ಸ್‌, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ,ಬಿ.ಎಮ್.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮೇನ್ ರೋಡಿನಲ್ಲಿ ಕರೆಂಟ್‌ ಇರುವುದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

KEA Updates : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌ ಆಗಿದೆ. ಸೀಟು ಸಿಗದವರು/ ಚಾಯ್ಸ್‌ ದಾಖಲಿಸದವರಿಗೆ ಸೆ.30ರಿಂದ ಆಪ್ಷನ್‌ ಎಂಟ್ರಿಗೆ ಅವಕಾಶ ಕಲ್ಪಿಸಲಾಗಿದೆ.

VISTARANEWS.COM


on

By

KEA UGCET 2024
Koo

ಬೆಂಗಳೂರು: ದ್ವಿತೀಯ ಪಿಯುಸಿ ಮೂರನೇ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಯುಜಿಸಿಇಟಿ-24 (UGCET 2024) ಎರಡನೇ ಮುಂದುವರಿದ ಸುತ್ತಿನಲ್ಲಿ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Updates) ಅವಕಾಶ ಕಲ್ಪಿಸಿದ್ದು, ಶನಿವಾರದಿಂದಲೇ ಆದ್ಯತಾ ಕ್ರಮದಲ್ಲಿ ಆಪ್ಷನ್ಸ್‌ಗಳನ್ನು ದಾಖಲಿಸಲು ವೆಬ್‌ಸೈಟ್‌ ನಲ್ಲಿ ಲಿಂಕ್‌ ಬಿಡುಗಡೆ ಮಾಡಿದೆ.

ಇದಲ್ಲದೆ, ಮೊದಲ ಎರಡೂ ಸುತ್ತುಗಳಲ್ಲಿ ಆಪ್ಷನ್‌ಗಳನ್ನು ದಾಖಲು ಮಾಡದವರು ಹಾಗೂ ಹಂಚಿಕೆಯಾದ ಸೀಟಿಗೆ ಯಾವುದೇ ಛಾಯ್ಸ್‌ ನೀಡದವರು ಹಾಗೂ ಇದುವರೆಗೂ ಯಾವುದೇ ಸೀಟು ಹಂಚಿಕೆಯಾಗದವರಿಗೂ ಆಪ್ಷನ್ಸ್‌ ದಾಖಲಿಸಲು ಸೆ.30ರಿಂದ ಅ.4ರವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಶನಿವಾರ ತಿಳಿಸಿದ್ದಾರೆ.

ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಅ.7ರಂದು ಮತ್ತು ಅಂತಿಮ ಫಲಿತಾಂಶವನ್ನು ಅ.8ರಂದು ಪ್ರಕಟಿಸಲಾಗುವುದು. ಶುಲ್ಕ ಪಾವತಿ, ಪ್ರವೇಶ ಪತ್ರ ಡೌನ್‌ ಲೋಡ್‌ ಮಾಡಿಕೊಳ್ಳಲು ಅ.9ರಿಂದ 14ರವರೆಗೆ ಅವಕಾಶ ನೀಡಲಾಗುವುದು. ಅ.15, ಕಾಲೇಜಿಗೆ ವರದಿ ಮಾಡಿಕೊಳ್ಳಲು ಕೊನೆ ದಿನ ಎಂದು ಪ್ರಸನ್ನ ವಿವರಿಸಿದ್ದಾರೆ.

30ರೊಳಗೆ ಸಲ್ಲಿಸಿ:

3ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಅಂಕಗಳ ಮಾಹಿತಿಯನ್ನು ಪಿಯುಸಿ ಇಲಾಖೆಯಿಂದ ನೇರವಾಗಿ ಪಡೆದು, ಅದರ ಆಧಾರದ ಮೇಲೆ ಸಿಇಟಿ ರ‍್ಯಾಂಕ್‌ ನೀಡಲಾಗಿದೆ. ಇತರೆ ಬೋರ್ಡ್ ಗಳಿಂದ 12ನೇ ತರಗತಿಯನ್ನು ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಕೂಡ ತಮ್ಮ ಅಂಕಪಟ್ಟಿ ಮತ್ತು 2024ನೇ ಸಾಲಿನ ಸಿಇಟಿ ಪ್ರವೇಶ ಪತ್ರವನ್ನು ಸೆ.30ರೊಳಗೆ ಪ್ರಾಧಿಕಾರಕ್ಕೆ ಸಲ್ಲಿಸಿ ರ್ಯಾಂಕ್‌ ಪಡೆದು, ಆಪ್ಷನ್‌ ದಾಖಲಿಸಬಹುದು.

ಎಚ್ಚರಿಕೆಯಿಂದ ಆಪ್ಷನ್ಸ್‌ ದಾಖಲಿಸಿ ಇಲ್ಲದಿದ್ದರೆ ಐದು ಪಟ್ಟು ದಂಡ

ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆ ನಂತರ ಅಭ್ಯರ್ಥಿಗಳಿಗೆ ಯಾವುದೇ ಛಾಯ್ಸ್‌ಗಳನ್ನು ದಾಖಲಿಸಲು ಅವಕಾಶ ಇರುವುದಿಲ್ಲ. ಹೀಗಾಗಿ ಸೀಟು ಸಿಕ್ಕ ನಂತರ ಪ್ರವೇಶ ಪಡೆಯಬೇಕು. ಒಂದು ವೇಳೆ ಪ್ರವೇಶ ಪಡೆಯದಿದ್ದರೆ ಸರ್ಕಾರ ನಿಗದಿಪಡಿಸಿರುವ ಎಂಜಿನಿಯರಿಂಗ್‌ ಶುಲ್ಕದ ಐದು ಪಟ್ಟು ದಂಡ ಕಟ್ಟಬೇಕಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಎಚ್ಚರಿಕೆಯಿಂದ ಆಪ್ಷನ್ಸ್‌ ದಾಖಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಮೊದಲ ಮತ್ತು ಎರಡನೇ ಸುತ್ತಿನಲ್ಲಿ ತಮಗೆ ದೊರೆತಿರುವ ಸೀಟು ರದ್ದುಪಡಿಸಿಕೊಳ್ಳಲು ಅ.3ರ ಬೆಳಿಗ್ಗೆ 11ರವರೆಗೆ ಅವಕಾಶ ನೀಡಲಾಗಿದೆ. ಅಂತಹವರಿಗೆ ಐದು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ವಿವರಿಸಿದರು. ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆ ಇನ್ನು ಮುಂದೆ ಪ್ರತ್ಯೇಕವಾಗಿ ನಡೆಯಲಿದ್ದು, ಸದ್ಯದಲ್ಲೇ ಅದರ‌ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ವಿವರಿಸಿದರು.

Continue Reading

ಬೆಂಗಳೂರು

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Street Dogs‌ : ಬೀದಿ ನಾಯಿಗಳಿಗೆ ಆಹಾರ ವ್ಯವಸ್ಥೆ ಮಾಡಲು ಹೊಸ ಯೋಜನೆ ಜಾರಿಗೆ ಕ್ರಮವಹಿಸಲಾಗುವುದು ಎಂದು ಬಿಬಿಎಂಪಿ ಪಶುಸಂಗೋಪನಾದ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

VISTARANEWS.COM


on

By

BBMP plans to make arrangements for food in areas where stray dogs do not get food
Koo

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ (Street dogs) ಆಹಾರ ಸಿಗದಂತಹ ಪ್ರದೇಶದಲ್ಲಿ ಆಹಾರದ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಬಿಬಿಎಂಪಿಯ ಪಶುಸಂಗೋಪನಾ ವಿಭಾಗದಿಂದ ಪ್ರಾಯೋಗಿಕವಾಗಿ ಹೊಸ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಪಶುಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

ಬೀದಿನಾಯಿಗಳ ಅಟ್ಯಾಕ್‌ಗೆ ಕಾರಣ ಹಸಿವು?

ನಗರದಲ್ಲಿ ಅನೇಕ ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರವೂ ಸಹ ಸಿಗದಿರುವುದು ಪಾಲಿಕೆಯ ಗಮನಕ್ಕೆ ಬಂದಿದೆ. ಇದರಿಂದ ಬೀದಿ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ಬೀದಿ ನಾಯಿಗಳು ಸಾರ್ವಜನಿಕರಿಗೆ ಕಚ್ಚುವ ಪ್ರಕರಣಗಳು ಕಂಡಬರುತ್ತಿದ್ದು, ಅದನ್ನು ನಿಂಯಂತ್ರಿಸಬೇಕಿದೆ. ಆದ್ದರಿಂದ ನಾಯಿಗಳಿಗೆ ಸರಿಯಾಗಿ ಆಹಾರ ಸಿಗುವಂತೆ ಮಾಡಲು ಪಾಲಿಕೆಯು ಪ್ರಾಣಿ ಪಾಲಕರು, ಪೌರಕಾರ್ಮಿಕರು, ಹೋಟೆಲ್ ಮಾಲಿಕರು, ಆರೋಗ್ಯ ವಿಭಾಗದ ಸಿಬ್ಬಂದಿ ಹಾಗೂ ಇತರೆ ಆಸಕ್ತರೊಂದಿಗೆ ಸಮನ್ವಯ ಸಾಧಿಸಿ ಇದನ್ನು ಮಾಡಲಾಗುತ್ತಿದೆ.

BBMP plans to make arrangements for food in areas where stray dogs do not get food
BBMP plans to make arrangements for food in areas where stray dogs do not get food

ಯೋಜನೆಯ ಜಾರಿ ವಿಧಾನ

ಪ್ರಾಣಿಗಳಿಗೆ ಆಹಾರ ನೀಡುವ ಪ್ರಾಣಿ ಪ್ರಿಯರ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು. ನಂತರ ಪೌರ ಕಾರ್ಮಿಕರು ಮತ್ತು ಖಾಸಗಿ ಹೋಟೆಲ್ ಮಾಲಿಕರನ್ನು ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಿ ಆಹಾರ ನೀಡುವ ಸ್ಥಳಗಳನ್ನು ಗುರುತಿಸಿ ಬೀದಿ ನಾಯಿಗಳಿಗೆ ಸರಿಯಾಗಿ ಆಹಾರ ಸಿಗುವಂತೆ ಮಾಡುವುದು. ಅದಾದ ಬಳಿಕ ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಆಯ್ದ ಸ್ಥಳಗಳಲ್ಲಿ ಅನುಷ್ಟಾನಗೊಳಿಸಿ ಎಲ್ಲಾ ಪಾಲುದಾರರ ಪ್ರತಿಕ್ರಿಯೆಯನ್ನು ಸಂಗ್ರಹಿಸಲಾಗುವುದು. ಯೋಜನೆ ಯಶಸ್ವಿಯಾದಲ್ಲಿ ಪಾಲಿಕೆಯ ಎಲ್ಲಾ ವಾರ್ಡ್ಗಳಲ್ಲಿ ಈ ಅಭಿಯಾನವನ್ನು ಅನುಷ್ಟಾನಗೊಳಿಸುವುದು ಎಂದು ಆಯಕ್ತರು ಮಾಹಿತಿ ನೀಡಿದ್ದಾರೆ.

ವಿವರವಾದ ಯೋಜನೆಯ ಶೀಘ್ರ ಬಿಡುಗಡೆ:

ಸಮುದಾಯದ ಪ್ರಾಣಿಗಳಿಗೆ ಉತ್ತಮ ಸಹಾಯ ಮಾಡಲು ಕೇರ್‌ಟೇಕರ್‌ಗಳನ್ನು ಬಲಪಡಿಸುವುದರ ಜೊತೆಗೆ, ಪ್ರಾಣಿಗಳ ಸಂರಕ್ಷಣೆ ಕಾರ್ಯಾಚರಣೆ ಹಾಗೂ ಶಸ್ತ್ರಚಿಕಿತ್ಸಾ ನಂತರದ ಆರೈಕೆ, ವೈದ್ಯಕೀಯ ಮೇಲ್ವಿಚಾರಣೆಗೆ ಅಗತ್ಯವಿರುವ ಸಂದರ್ಭಗಳಲ್ಲಿ ಪ್ರತ್ಯೇಕ ವಲಯಗಳಲ್ಲಿ ರಕ್ಷಣೆ ಮತ್ತು ಚೇತರಿಸಿಕೊಳ್ಳುವಿಕೆಯನ್ನು ಬೆಂಬಲಿಸುವ ಸಾಮರ್ಥ್ಯವನ್ನು ಪಾಲಿಕೆ ನಿರ್ಮಿಸುತ್ತಿದೆ. ಈ ಕುರಿತು ವಿವರವಾದ ಯೋಜನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು.

ಪ್ರಾಣಿ ಪಾಲಕರು ನೋಂದಣಿ ಮಾಡಿಕೊಳ್ಳಿ:

ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಯಿಗಳಿಗೆ ಆಹಾರ ನೀಡುತ್ತಿರುವ ಪ್ರಾಣಿ ಪಾಲಕರು ಪಾಲಿಕೆ ಪಶುಸಂಗೋಪನಾ ಇಲಾಖೆಯಿಂದ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಪಶಸಂಗೋಪನೆ ವಿಬಾಗದ ಸಾಮಾಜಿಕ ಜಾಲತಾಣವಾದ X, Facebook ಮತ್ತು Instagram (@bbmp_animalhusbandry) ಪುಟಗಳಲ್ಲಿ ನೋಂದಣಿಯ ಮಾಡಿಕೊಳ್ಳುವ ಲಿಂಕ್ ಅನ್ನು ನೀಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆಯನ್ನು ಯಶಸ್ವಿಗೊಳಿಸಲು ಪಾಲಿಕೆ ಜೊತೆ ಕೈಜೋಡಿಸುವಂತೆ ಎಲ್ಲಾ ಸಮುದಾಯ ಪ್ರಾಣಿ ಪಾಲಕರಲ್ಲಿ ಕೋರಲಾಗಿದೆ.

ನೋಂದಣಿ ಕಡ್ಡಾಯವಲ್ಲ:

ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ಪಾಲಕರ ನೋಂದಣಿಯು 2ನೇ ಅಕ್ಟೋಬರ್ 2024 ರಿಂದ ಪ್ರಾರಂಭವಾಗಲಿದ್ದು, 31ನೇ ಅಕ್ಟೋಬರ್ 2024ರವರೆಗೆ ನೊಂದಣಿಯಾಗಲು ಅವಕಾಶವಿರುತ್ತದೆ. ಪ್ರಾಣಿ ಪಾಲಕರ ನೋಂದಣಿ ಕಡ್ಡಾಯವಾಗಿರುವುದಿಲ್ಲ. ಈ ನೋಂದಣಿಯು ಅಭಿಯಾನವನ್ನು ಯೋಜಿಸಲು ಮತ್ತು ಅದನ್ನು ಸಮರ್ಥನೀಯವಾಗಿ ಡೇಟಾಬೇಸ್ ರಚಿಸುವ ದೃಷ್ಟಿಯಿಂದ ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ.

ಪಾಲಿಕೆ ಜೊತೆ ಕೈ ಜೋಡಿಸಿ:

ಬೀದಿ ನಾಯಿಗಳಿಗೆ ಆಹಾರ ನೀಡುವ ಅಭಿಯಾನದ ಮೂಲಕ, ನಾಗರೀಕರಲ್ಲಿ ಸಹಾನುಭೂತಿಯ ಅರ್ಥವನ್ನು ಹಾಗೂ ಪ್ರಾಣಿಗಳೊಂದಿಗಿನ ಸಹಬಾಳ್ವೆಯ ಅನುಕೂಲವನ್ನು ಮನವರಿಕೆ ಮಾಡಲು Coexisting Champion ಆಗಿ ಪಾಲಿಕೆ ಜೊತೆ ಕೈ ಜೋಡಿಸಲು ಕೋರುತ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸ್ಥಳೀಯರು ತಮ್ಮ ಪ್ರದೇಶದಲ್ಲಿ ಸಮುದಾಯದ ಪ್ರಾಣಿಗಳ ಆರೈಕೆಯ ಸಾಮಾಜಿಕ ಕಾಳಜಿಯ ಕಾರ್ಯವನ್ನು ಕೈಗೊಳ್ಳಲು ಪ್ರೋತ್ಸಾಹಿಸಲು ಕೋರಿದೆ.

1533ಗೆ ಕರೆ ಮಾಡಿ:

ಬೀದಿ ನಾಯಿಗಳಿಗೆ ಸಂಬಂಧಿಸಿದಂತೆ ಪಾಲಿಕೆಯ ಪಶಸಂಗೋಪನಾ ವಿಭಾಗದಿಂದ ಸಾಕಷ್ಟು ಉಪ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಾಗರೀಕರಿಗೆ ಅಗತ್ಯವಿರುವ ಯಾವುದೇ ಸಹಾಯಕ್ಕಾಗಿ ಬಿಬಿಎಂಪಿ ಸಹಾಯವಾಣಿ ಸಂಖ್ಯೆಯಾದ 1533 ಗೆ ಸಂಪರ್ಕಿಸಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

VISTARANEWS.COM


on

By

Cm Siddaramaiah
Koo

ಬೆಂಗಳೂರು: ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನೆ ಮಾಡಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತೀರ್ಮಾನ ಮಾಡಿದ್ದಾರೆ. ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ದೆಹಲಿಯಿಂದ ವಾಪಸ್‌ ಆಗಿದ್ದು, ಎರಡು ಪ್ರತ್ಯೇಕ ಅಪೀಲು ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಸಿಎಂ ಪರ ವಕೀಲರು ಸೋಮವಾರ ದ್ವಿಸದಸ್ಯ ಪೀಠದ ಮುಂದೆ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಏಕಸದಸ್ಯ ಪೀಠದ ಆದೇಶದಲ್ಲಿ ಕೆಲ ವಿಚಾರಗಳ ಬಗ್ಗೆ ಅಪೀಲು ಸಲ್ಲಿಸಲಿದ್ದಾರೆ.

ಮತ್ತೊಂದು ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ವಿರುದ್ಧ ಅಪೀಲು ಅರ್ಜಿ ಅಲ್ಲಿಸಲಿದ್ದಾರೆ. ಜುಲೈ ಒಂದು 2024 ರಿಂದ ಹೊಸ ಕಾನೂನು ಬಂದಿದೆ. ಬಿಎನ್ಎಸ್ಎಸ್ ಅಡಿಯಲ್ಲಿ ವಿಚಾರಣೆ ಆಗಬೇಕು. ಹಳೆಯ ಸಿಪಿಆರ್ಪಿ ಐಪಿಸಿಯಲ್ಲಿ ಆರೋಪಿಗೆ ರಕ್ಷಣೆ ಕಡಿಮೆ ಇದೆ. ಹೀಗಾಗಿ ಬಿಎನ್ಎಸ್ಎಸ್ ಅಡಿಯಲ್ಲಿ ತನಿಖೆಗೆ ಆದೇಶ ಮಾಡಬೇಕಿತ್ತು. ಆದರೆ ನ್ಯಾಯಲಯದ ಹಳೆಯ ಕಾನೂನು ಪ್ರಕಾರ ಮಾಡಿರುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ವಕೀಲರು ಅಪೀಲು ಸಲ್ಲಿಕೆ ಮಾಡಲಿದ್ದಾರೆ. ಅರ್ಜಿ ತೀರ್ಮಾನ ಆಗುವವರೆಗೂ ಮುಡಾ ತನಿಖೆಗೆ ಸಿದ್ದರಾಮಯ್ಯ ತಡೆ ಕೋರಲಿದ್ದಾರೆ.

ಸಿಎಂ ವಿರುದ್ಧದ ತನಿಖೆಗೆ ನಾಲ್ಕು ತಂಡಗಳ ರಚನೆ

ಸಿದ್ದರಾಮಯ್ಯ ವಿರುದ್ಧದ ಎಫ್ಐಆರ್ ದಾಖಲು‌ ಹಿನ್ನೆಲೆಯಲ್ಲಿ ತನಿಖೆಗೆ ನಾಲ್ಕು ತಂಡಗಳ ರಚನೆ ಮಾಡಲಾಗಿದೆ.
ಎಸ್‌ಪಿ ಉದೇಶ್, ಡಿವೈಎಸ್‌ಪಿ ಎಸ್.ಮಾಲತೀಶ್, ಚಾಮರಾಜನಗರ ಡಿವೈಎಸ್‌ಪಿ ಮ್ಯಾಥ್ಯೂ ಥಾಮಸ್ ಹಾಗೂ ಇನ್‌ಸ್ಪೆಕ್ಟರ್‌ ಒಳಗೊಂಡ ತನಿಖಾ ತಂಡ ಇದಾಗಿದೆ. ಎಲ್ಲಾ ಅಧಿಕಾರಿಗಳ ಜತೆ ಎಸ್‌ಪಿ ಸಭೆ ನಡೆಸಿದ್ದು, ಕೋರ್ಟ್‌ನಿಂದ ನೀಡಿರುವ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದೂರಿನಲ್ಲಿ ಅಡಕವಾಗಿರುವ ದಾಖಲೆಗಳನ್ನು ಇನ್ನು ಒಂದೆರಡು ದಿನಗಳ ಕಾಲ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಪ್ರತಿಯೊಬ್ಬ ಅಧಿಕಾರಿಗಳ ಕೆಲಸವನ್ನು ವಿಂಗಡಣೆ ಮಾಡಿಕೊಳ್ಳಲಿದ್ದಾರೆ. ಸದ್ಯಕ್ಕೆ ಎಲ್ಲ ದಾಖಲೆಗಳನ್ನು ಓದಿಕೊಂಡು ಪಾಯಿಂಟ್ಸ್ ಮಾಡಿಕೊಳ್ಳುತ್ತಿದ್ದಾರೆ.

ಏನಿದು ಮುಡಾ ಪ್ರಕರಣ?

ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೇ ದೂರು ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದಿತ್ತು. ಟಿ.ಜೆ. ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಯಾಕೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್​ ನೋಟಿಸ್ ನೀಡಿದ್ದರು. ಸಿದ್ದರಾಮಯ್ಯಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಆದರೆ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪ್ರದೀಪ್ ಕುಮಾರ್ ಎಸ್.ಪಿ, ಟಿ.ಜೆ. ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಅರ್ಜಿಗಳನ್ನು ಸಲ್ಲಿಸಿದ್ದರು.

ಮೈಸೂರಿನ ಸ್ನೇಹಮಯಿ ಕೃಷ್ಣ, ಸಿಎಂ ವಿರುದ್ಧ ಮತ್ತೂಂದು ದೂರು ಸಲ್ಲಿಸಿದ್ದರು. ಅಕ್ರಮ ಭೂ ಡಿನೋಟಿಫಿಕೇಶನ್‌ಗೆ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆಂದು ಆರೋಪಿಸಿದ್ದರು. ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ ಬಂದಿದ್ದು, ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ ಕೇಳಿ ಬಂದಿದೆ.

VISTARANEWS.COM


on

By

Mahalaya Amavasya on Gandhi Jayanti Poultry Association demands withdrawal of ban on sale of meat
Koo

ಬೆಂಗಳೂರು: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆಯ (Mahalaya Amavasya 2024) ಪಿತೃಪಕ್ಷ ಹಬ್ಬ ಬರುತ್ತಿದೆ. ಗಾಂಧಿ ಜಯಂತಿ ಹಿನ್ನೆಲೆ ಅಂದು ಮಾಂಸ ಮಾರಾಟ ನಿಷೇಧ ಇದೆ. ಹೀಗಾಗಿ ವಿಶೇಷ ಸಂದರ್ಭ ಎಂದು ಪರಿಣಗಣಿಸಿ ಮಾಂಸ ಮಾರಾಟ ನಿಷೇಧ ಆದೇಶ ಹಿಂಪಡೆಯುವಂತೆ ಕರ್ನಾಟಕ ಪೌಲ್ಟ್ರಿ ಅಸೋಸಿಯೇಶನ್ ಅಧ್ಯಕ್ಷ ಕೆ ಎನ್ ನಾಗರಾಜ್ ಒತ್ತಾಯಿಸಿದ್ದಾರೆ.

ಮಹಾಲಯ ಅಮಾವಾಸ್ಯೆಯ ಹಬ್ಬದ ದಿನದಂದು ರಾಜ್ಯದ ಕೋಟ್ಯಂತರ ಜನರು, ಮಾಂಸಾಹಾರ ಸಿದ್ಧಪಡಿಸಿ ತಮ್ಮ ಹಿರಿಯರಿಗೆ ಎಡೆ ಇಟ್ಟು, ಪೂಜೆ ಮಾಡಿ ಬಂಧು ಬಳಗ, ಸ್ನೇಹಿತರೊಂದಿಗೆ ಊಟ ಮಾಡುವ ಪದ್ಧತಿ ಇದೆ. ಈ ಬಾರಿ ಅದೇ ದಿನದಂದು ಗಾಂಧಿ ಜಯಂತಿ ಇರುವುದರಿಂದ ಈ ಬಗ್ಗೆ ಪರಿಶೀಲಿಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಅ.2 ರಂದು ರಾಜ್ಯಾದ್ಯಂತ ಗಾಂಧಿ ನಡಿಗೆ

“ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಕ್ಟೋಬರ್ 2 ರಂದು ರಾಜ್ಯಾದ್ಯಂತ ‘ಗಾಂಧಿ ನಡಿಗೆ’ ಹಾಗೂ ‘ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಶಿವಕುಮಾರ್ ಅವರು “ಕಾರ್ಯಕ್ರಮದ ಮೊದಲ ಭಾಗವಾಗಿ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು 1 ಕಿ. ಮೀ. ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತಾ ಪ್ರತಿಜ್ಞಾ ಸ್ವೀಕಾರ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ ಜಿಲ್ಲಾ, ತಾಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬೆಂಗಳೂರಿನಲ್ಲಿಯೂ ಬರುವ ಬುಧವಾರ ಬೆಳಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು” ಎಂದು ತಿಳಿಸಿದರು.

500 ಶಾಲಾ ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ

“ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರ ಜನ್ಮದಿನವೂ ಒಂದೇ ದಿನ ಆಗಿರುವ ಕಾರಣ ಇಬ್ಬರ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಗುವುದು. ನಂತರ ನಡಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಾಗೂ ಬೆಂಗಳೂರಿನ 500 ಶಾಲಾ, ಕಾಲೇಜು ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ, ಗಾಂಧಿ ಅವರ ಆದರ್ಶವನ್ನು ಯುವ ಪೀಳಿಗೆಗೆ ತಲುಪಿಸಲು ಈ ಕಾರ್ಯಕ್ರಮ ರೂಪಿಸಿದೆ” ಎಂದರು.

ಶ್ವೇತ ವಸ್ತ್ರ ಧರಿಸಿ ನಡಿಗೆ

“ಜಿಲ್ಲಾ ಕೇಂದ್ರದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ. ಈ ನಡಿಗೆ ವೇಳೆ ಬಿಳಿ ವಸ್ತ್ರ, ಗಾಂಧಿ ಟೋಪಿ ಧರಿಸಿ ಹೆಜ್ಜೆ ಹಾಕುವಂತೆ ಮನವಿ ಮಾಡಲಾಗುವುದು. ಗಾಂಧಿ ಜಯಂತಿಯನ್ನು ವಿಶಿಷ್ಟವಾಗಿ ಆಚರಣೆ ಮಾಡುತ್ತಿದ್ದು, ಇಡೀ ವರ್ಷ ಗಾಂಧೀಜಿ ಅವರ ಆಚಾರ ವಿಚಾರವನ್ನು ಯುವ ಪೀಳಿಗೆಗೆ ತಿಳಿಸಲು ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತ್ಯೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರತಿಜ್ಞಾ ವಿಧಿಗಾಗಿ ಆ್ಯಪ್ ಮೂಲಕ ನೋಂದಣಿ

ಪ್ರತಿಜ್ಞಾ ವಿಧಿ ತೆಗೆದುಕೊಳ್ಳಲು ಒಂದು ಆ್ಯಪ್ ಸಿದ್ಧಪಡಿಸಲಾಗಿದ್ದು, ಈಗಾಗಲೇ 35 ಸಾವಿರ ಮಂದಿ ಈ ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಪ್ರತಿಜ್ಞಾ ವಿಧಿ ಪಡೆದವರಿಗೆ ಆನ್‌ಲೈನ್‌ನಲ್ಲೇ ಪ್ರಮಾಣಪತ್ರ ನೀಡಲಾಗುವುದು. ಇದು ಮೊದಲ ಹಂತದ ಕಾರ್ಯಕ್ರಮವಾಗಿದ್ದು, ಇಡೀ ವರ್ಷ ಬೇರೆ ಬೇರೆ ಕಾರ್ಯಕ್ರಮ ಮಾಡಲಾಗುವುದು. ನಂತರ ಪಕ್ಷದ ವತಿಯಿಂದ ನಡೆಯುವ ಕಾರ್ಯಕ್ರಮವನ್ನು ಮಧ್ಯಾಹ್ನ 12 ಗಂಟೆ ನಂತರ ಬೆಂಗಳೂರಿನ ಭಾರತ ಜೋಡೋ ಭವನದಲ್ಲಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇನ್ನೂ ಬೆಂಗಳೂರಿನ ರಸ್ತೆಗಳು ಗುಂಡಿಮುಕ್ತವಾಗಿವೆಯೇ ಎಂದು ಕೇಳಿದಾಗ, “ಸಂಪೂರ್ಣವಾಗಿ ಗುಂಡಿ ಮುಚ್ಚಲಾಗಿದೆ ಎಂದು ನಾನು ಹೇಳುವುದಿಲ್ಲ. ನಾನು ಕೆಲವು ಭಾಗಗಳಲ್ಲಿ ರಸ್ತೆ ಗುಂಡಿ ನೋಡಿದ್ದೇನೆ. ಅಧಿಕಾರಿಗಳು ದಾಖಲೆ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ನಾನು ಈ ಬಗ್ಗೆ ಈಗ ಏನು ಹೆಚ್ಚಿಗೆ ಹೇಳುವುದಿಲ್ಲ. ಮತ್ತೊಂದು ಸುತ್ತಿನ ಪರಿಶೀಲನೆ ಮಾಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರವಾಗಿ ಮತ್ತೊಮ್ಮೆ ವಿವರವಾಗಿ ಮಾತನಾಡುತ್ತೇನೆ” ಎಂದು ತಿಳಿಸಿದರು.

ಸಿಎಂ ವಿರುದ್ಧ ಎಫ್ಐಆರ್ ಪದೇ ಪದೇ ಚರ್ಚೆ ಬೇಡ

ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಈಗಾಗಲೇ ಸಾಕಷ್ಟು ಮಾತನಾಡಿದ್ದೇನೆ. ನಮ್ಮ ಎಐಸಿಸಿ ಅಧ್ಯಕ್ಷರು ಈ ಬಗ್ಗೆ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಪದೇ ಪದೆ ಈ ಬಗ್ಗೆ ಚರ್ಚೆ ಮಾಡಲು ಬಯಸುವುದಿಲ್ಲ” ಎಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
KEA UGCET 2024
ಬೆಂಗಳೂರು22 ನಿಮಿಷಗಳು ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ45 ನಿಮಿಷಗಳು ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

BBMP plans to make arrangements for food in areas where stray dogs do not get food
ಬೆಂಗಳೂರು2 ಗಂಟೆಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು2 ಗಂಟೆಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು3 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು4 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು5 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು6 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ7 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Fraud Case
ಬೆಂಗಳೂರು7 ಗಂಟೆಗಳು ago

Fraud Case : ಆನ್‌ಲೈನ್ ಜಾಬ್, ಹೂಡಿಕೆ ಹೆಸರಲ್ಲಿ ವಂಚನೆ; ಕನ್ನ ಹಾಕಿದ ಕೋಟಿ ಹಣ ಚೈನಾ ವ್ಯಾಲೆಟ್‌ಗೆ ರವಾನೆ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌