Bhaichung Bhutia : ಬೆಂಗಳೂರಿನಲ್ಲಿ ಶಾಲಾ ಮಕ್ಕಳಿಗೆ ಫುಟ್​ಬಾಲ್​ ತರಬೇತಿ ನೀಡಿದ ಬೈಚುಂಗ್ ಭುಟಿಯಾ - Vistara News

ಕ್ರೀಡೆ

Bhaichung Bhutia : ಬೆಂಗಳೂರಿನಲ್ಲಿ ಶಾಲಾ ಮಕ್ಕಳಿಗೆ ಫುಟ್​ಬಾಲ್​ ತರಬೇತಿ ನೀಡಿದ ಬೈಚುಂಗ್ ಭುಟಿಯಾ

Bhaichung Bhutia : ಬೆಂಗಳೂರಿನ ಆರ್ಕಿಡ್ಸ್​​ ಸ್ಕೂಲ್​ನ ವಿದ್ಯಾರ್ಥಿಗಳಿಗ ಬೈಚುಂಗ್ ಭುಟಿಯಾ ವಿಶೇಷ ತರಬೇತಿ ನೀಡಿದ್ದಾರೆ.

VISTARANEWS.COM


on

orchids school
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಭಾರತದ ಪ್ರಮುಖ ಇಂಟರ್​ನ್ಯಾಷನಲ್​ ಸ್ಕೂಲ್​ ನೆಟ್​ವರ್ಕ್​ ಆಗಿರುವ ಆರ್ಕಿಡ್ಸ್ ದಿ ಇಂಟರ್‌ನ್ಯಾಶನಲ್ ಸ್ಕೂಲ್ ಭಾರತೀಯ ಫುಟ್‌ಬಾಲ್ ದಿಗ್ಗಜ ಭೈಚುಂಗ್ ಭುಟಿಯಾ (Bhaichung Bhutia) ಅವರ ‘ಭೈಚುಂಗ್ ಭುಟಿಯಾ ಫುಟ್‌ಬಾಲ್‌ ಅಕಾಡೆಮಿ ಯೊಂದಿಗೆ ಪಾಲುದಾರಿಕೆ ಪಡೆದುಕೊಂಡಿದೆ. ಈ ಜಂಟಿ ನೇತೃತತ್ವದಲ್ಲಿ ‘ಪವರ್ ಅಪ್ ವಿತ್ ಲೆಜೆಂಡ್ಸ್’ ಸರಣಿಯ ಭಾಗವಾಗಿ, ಜನವರಿ 11 ರಿಂದ ಆರ್ಕಿಡ್‌ನ ಹರಳೂರು ಮತ್ತು ಕಾಡುಗೋಡಿ ಕ್ಯಾಂಪಸ್‌ಗಳಲ್ಲಿ ಫುಟ್‌ಬಾಲ್ ತರಬೇತಿ ಶಿಬಿರಗಳು ನಡೆಯಲಿವೆ. ಅಂತೆಯೇ ಜನವರಿ 13 ರಂದು ಭಾರತೀಯ ಫುಟ್‌ಬಾಲ್‌ತಾರೆ ಭೈಚುಂಗ್ ಭುಟಿಯಾ ಫುಟ್ಬಾಲ್​ ಕೌಶಲಗಳ ಕುರಿತು ಮಾಸ್ಟರ್‌ ಕ್ಲಾಸ್‌ ನಡೆಸಿಕೊಟ್ಟಿದ್ದಾರೆ. ‘ ಇಲ್ಲಿ ತನಕ ಕ್ರೀಡಾ ಐಕಾನ್‌ಗಳಾದ ಮೇರಿ ಕೋಮ್, ಶಿಖರ್ ಧವನ್ ಅವರ ಡಾ ಒನ್ ಸ್ಪೋರ್ಟ್ಸ್ ಅಕಾಡೆಮಿ, ಗೀತಾ ಫೋಗಟ್ ಮತ್ತು ಅಜಂತಾ ಮೆಂಡಿಸ್ ಅವರೊಂದಿಗೆ ಇಲ್ಲಿ ತರಬೇತಿ ಶಿಬಿರ ನಡೆಸಲಾಗಿತ್ತು.

ಈ ಫುಟ್‌ಬಾಲ್ ತರಬೇತಿ ಶಿಬಿರಗಳ ಪ್ರಾಥಮಿಕ ಗುರಿ ಆರ್ಕಿಡ್‌ನ ಯುವ ವಿದ್ಯಾರ್ಥಿಗಳಲ್ಲಿ ಶಿಸ್ತು, ತಂಡದ ಜವಬ್ದಾರಿ, ನಿರ್ಣಯ ತೆಗೆದುಕೊಳ್ಳುವಿಕೆ ಮುಂತಾದ ಕೌಶಲ ಹೆಚ್ಚಿಸುವುದಾಗಿದೆ. ಮೂರು ದಿನಗಳ ಶಿಬಿರವು ಆಟದ ಒಳನೋಟ ಹಾಗೂ ಅಗತ್ಯ ಕೌಶಲ ವೃದ್ಧಿಗೆ ನೆರವಾಗಲಿದೆ.

ಶಿಬಿರದ ಬಗ್ಗೆ ಭೈಚುಂಗ್ ಭುಟಿಯಾ ಮಾತನಾಡಿ, ಫುಟ್‌ಬಾಲ್ ಆಟಗಾರನಾಗಿ ನನಗೆ ಮೈದಾನದ ಗೆಲುವು ಮಾತ್ರ ಮುಖ್ಯವಲ್ಲ. ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುವುದು ನಿಜವಾದ ಗೆಲುವಾಗಿದೆ. ನಾನು ಮಕ್ಕಳಿಗೆ ಮಾಸ್ಟರ್‌ಕ್ಲಾಸ್ ನಡೆಸಲು ಮತ್ತು ಫುಟ್‌ಬಾಲ್‌ನಲ್ಲಿ ನನ್ನ ಕಲಿಕೆಯ ಕೌಶಲಗಳನ್ನು ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ. ಆರ್ಕಿಡ್ಸ್ ದಿ ಇಂಟರ್‌ನ್ಯಾಶನಲ್ ಸ್ಕೂಲ್‌ನ ವಿದ್ಯಾರ್ಥಿಗಳು ಈ ಮಾಸ್ಟರ್‌ಕ್ಲಾಸ್ ಮತ್ತು ಕ್ಯಾಂಪ್‌ಗಳ ಮೂಲಕ, ಮೈದಾನದಲ್ಲಿ ಉತ್ತಮ ಸಾಧನೆ ಮಾಡುವುದಲ್ಲದೆ ತಮ್ಮ ಜೀವನದ ಎಲ್ಲಾ ಅಂಶಗಳಲ್ಲಿ ಕ್ರೀಡಾ ಮನೋಭಾವ ಮತ್ತು ತಂಡ ಮನೋಭಾವವನ್ನು ಬೆಳೆಸಿಕೊಳ್ಳುವುದನ್ನು ನೋಡಲು ಆಶಿಸುತ್ತೇನೆ” ಎಂದರು.

ಇದನ್ನೂ ಓದಿ : ಚಿನ್ನದ ಸರ ಮಾರಿ ಕ್ರಿಕೆಟ್​ ಕಿಟ್​ ಕೊಡಿಸಿದ ತಾಯಿ, ಸಾಲ ಮಾಡಿ ಬ್ಯಾಟ್ ಕೊಡಿಸಿದ ತಂದೆ; ಇದು ಧ್ರುವ್ ಜುರೆಲ್ ಕ್ರಿಕೆಟ್​ ಜರ್ನಿ

ಆರ್ಕಿಡ್ಸ್ ದಿ ಇಂಟರ್ನ್ಯಾಷನಲ್ ಸ್ಕೂಲ್‌ನ ಅಕಾಡೆಮಿಕ್ಸ್‌ ವಿಪಿ ಡಾ ವೇದಾ ಬೈಸಾನಿ ಮಾತನಾಡಿ ಆರ್ಕಿಡ್‌ನಲ್ಲಿ ಯಾವಾಗಲೂ ಕ್ರೀಡೆ ಮತ್ತು ದೈಹಿಕ ಶಿಕ್ಷಣಕ್ಕೆ ಆದ್ಯತೆ ನೀಡುತ್ತೇವೆ. ವಿದ್ಯಾರ್ಥಿಗಳಿಗೆ ಉತ್ಕೃಷ್ಟ ಅನುಭವ ಒದಗಿಸಲು ಅನನ್ಯವಾದ ಅವಕಾಶಗಳನ್ನು ನೀಡುತ್ತೇವೆ. ಬೈಚುಂಗ್ ಭುಟಿಯಾ ಅವರ ಮಾಸ್ಟರ್‌ಕ್ಲಾಸ್ ಸಮಗ್ರ ಶಿಕ್ಷಣದ ಕಡೆಗೆ ನಮ್ಮ ಬದ್ಧತೆಯಾಗಿದೆ ಎಂದು ಹೇಳಿದರು.

ಆರ್ಕಿಡ್‌ನ ಅಕಾಡೆಮಿಕ್ಸ್‌ ಉಪಾಧ್ಯಕ್ಷ ಸಕಿನಾ ಸಕಿನ ಖಾಸಿಮಗ್‌ ಜೈದಿ ಮಾತನಾಡಿ ಈ ಕ್ರೀಡಾ ಸಹಭಾಗಿತ್ವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೇಗೆ ಸಹಕಾರಿ ಎಂಬುದನ್ನು ಮನವರಿಕೆ ಮಾಡಿಕೊಟ್ಟರು. ದಿ ಆರ್ಕಿಸ್‌ನ ವಿದ್ಯಾರ್ಥಿ ಹಿತರಕ್ಷಣೆ ವಿಭಾಗದ ವಿಪಿ ಹರ್ಷ ಗುಪ್ತಾ ಮಾತನಾಡಿ, ವಿದ್ಯಾರ್ಥಿಗಳಿಗೆ ಅತ್ಯುತ್ತಮವಾಗಿದ್ದನ್ನು ನೀಡಲು ಶಾಲೆಯ ಬದ್ಧತೆ ಮತ್ತು ಅದರ ಉಪಕ್ರಮಗಳ ಕುರಿತು ವಿವರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

FIFA World Cup qualifiers: ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ; ಬಲಿಷ್ಠ ಸಂಭಾವ್ಯ ತಂಡ ಪ್ರಕಟಿಸಿದ ಭಾರತ

FIFA World Cup qualifiers: ಭಾರತ ತಂಡ ಮೇ 10ರಿಂದ ಭುವನೇಶ್ವರದಲ್ಲಿ ತರಬೇತಿ ಶಿಬಿರ ಆರಂಭಿಸಲಿದ್ದು, ಜೂನ್ 6ರಂದು ಕೋಲ್ಕತ್ತಾದಲ್ಲಿ ಕುವೈತ್ ವಿರುದ್ಧ ಸೆಣಸಲಿದೆ. ಜೂನ್ 11ರಂದು ದೋಹಾದಲ್ಲಿ ಕತಾರ್ ವಿರುದ್ಧ ಆಡಲಿದೆ. ಆಡಿರುವ ನಾಲ್ಕು ಅಂಕಗಳೊಂದಿಗೆ ಭಾರತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

VISTARANEWS.COM


on

FIFA World Cup qualifiers
Koo

ನವದೆಹಲಿ: ಫಿಫಾ ವಿಶ್ವಕಪ್ ಪೂರ್ವಭಾವಿ ಅರ್ಹತಾ(FIFA World Cup qualifiers) ಸುತ್ತಿನ ಎರಡು ಪಂದ್ಯಗಳಿಗೆ ಭಾರತದ(Indian Football Team) 26 ಮಂದಿಯ ಸಂಭವನೀಯ ಆಟಗಾರರ ಪಟ್ಟಿ ಪ್ರಕಟಗೊಂಡಿದೆ. ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಇಗೊರ್ ಸ್ಟಿಮಾಚ್‌ ಈ ತಂಡವನ್ನು ಪ್ರಕಟಿಸಿದರು. ಐ-ಲೀಗ್ ನ ನಾಲ್ವರು ಆಟಗಾರರು ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕುವೈತ್ ಮತ್ತು ಕತಾರ್ ವಿರುದ್ಧ ಭಾರತ ಪಂದ್ಯವನ್ನಾಡಲಿದೆ.

ಭಾರತ ತಂಡ ಮೇ 10ರಿಂದ ಭುವನೇಶ್ವರದಲ್ಲಿ ತರಬೇತಿ ಶಿಬಿರ ಆರಂಭಿಸಲಿದ್ದು, ಜೂನ್ 6ರಂದು ಕೋಲ್ಕತ್ತಾದಲ್ಲಿ ಕುವೈತ್ ವಿರುದ್ಧ ಸೆಣಸಲಿದೆ. ಜೂನ್ 11ರಂದು ದೋಹಾದಲ್ಲಿ ಕತಾರ್ ವಿರುದ್ಧ ಆಡಲಿದೆ. ಆಡಿರುವ ನಾಲ್ಕು ಅಂಕಗಳೊಂದಿಗೆ ಭಾರತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ ಮೂರನೇ ಸುತ್ತಿಗೆ ಅರ್ಹತೆ ಪಡೆಯಲಿವೆ ಮತ್ತು 2027ರ ಎಎಫ್‌ಸಿ ಏಷ್ಯನ್ ಕಪ್‌ಗೆ ತಮ್ಮ ಸ್ಥಾನವನ್ನು ಕಾಯ್ದಿರಿಸಿಕೊಳ್ಳಲಿವೆ. ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ನಡೆದ ಹಲವು ಫುಟ್ಬಾಲ್​ ಟೂರ್ನಿಯಲ್ಲಿ ಭಾರತ ಉತ್ತಮ ಪ್ರದರ್ಶನ ತೋರಿತ್ತು.

ಐ-ಲೀಗ್‌ನಲ್ಲಿ ಮೊಹಮ್ಮದನ್ ಸ್ಪೋರ್ಟಿಂಗ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಿಜೋರಾಂನ ಫಾರ್ವರ್ಡ್ ಆಟಗಾರ ಡೇವಿಡ್ ಲಾಲ್ಹನ್ಸಂಗಾ, ಐಜ್ವಾಲ್ ಎಫ್‌ಸಿ ತಂಡದ ಲಾಲ್ರಿನ್ಜುವಾಲಾ ಲಾಲ್ಬಿಯಾಕ್ನಿಯಾ, ರಿಯಲ್ ಕಾಶ್ಮೀರ ಕ್ಲಬ್‌ನ ಡಿಫೆಂಡರ್ ಮುಹಮ್ಮದ್ ಹಮ್ಮದ್ ಮತ್ತು ಇಂಟರ್ ಕಾಶಿ ಎಫ್‌ಸಿ ಮಿಡ್ ಫೀಲ್ಡರ್ ಎಡ್ಮಂಡ್ ಲಾಲ್ರಿಂಡಿಕಾ ಸ್ಥಾನ ಪಡೆದ ಆಟಗಾರರಾಗಿದ್ದಾರೆ.

ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

ಸಂಭಾವ್ಯ ತಂಡ


ಗೋಲ್ ಕೀಪರ್‌ಗಳು: ಅಮರಿಂದರ್ ಸಿಂಗ್, ಗುರ್‌ಪ್ರೀತ್‌ ಸಿಂಗ್ ಸಂಧು.

ಡಿಫೆಂಡರ್ಸ್: ಅಮೇಯ ಗಣೇಶ್ ರಣವಾಡೆ, ಜಯ್‌ ಗುಪ್ತಾ, ಲಾಲ್‌ಚುಂಗ್ನುಂಗಾ, ಮೊಹಮ್ಮದ್ ಹಮ್ಮದ್, ನರೇಂದರ್, ನಿಖಿಲ್ ಪೂಜಾರಿ, ರೋಷನ್ ಸಿಂಗ್ ನೌರೆಮ್.

ಮಿಡ್ ಫೀಲ್ಡರ್ಸ್: ಬ್ರೆಂಡನ್ ಫರ್ನಾಂಡಿಸ್, ಎಡ್ಮಂಡ್ ಲಾಲ್ರಿಂಡಿಕಾ, ಇಮ್ರಾನ್ ಖಾನ್, ಇಸಾಕ್ ವನ್ಲಾಲ್ರುವಾಟ್ಫೆಲ್ಲಾ, ಜೀಕ್ಸನ್ ಸಿಂಗ್, ಮಹೇಶ್ ಸಿಂಗ್ ನೌರೆಮ್, ಮೊಹಮ್ಮದ್ ಯಾಸಿರ್, ನಂದಕುಮಾರ್ ಶೇಕರ್, ರಾಹುಲ್ ಕನೋಲಿ ಪ್ರವೀಣ್, ಸುರೇಶ್ ಸಿಂಗ್ ವಾಂಗ್ಜಾಮ್, ವಿಬಿನ್ ಮೋಹನನ್.

ಫಾರ್ವರ್ಡ್ಸ್: ಡೇವಿಡ್ ಲಾ‌ಲ್ಹನ್ಸಂಗಾ, ಜಿತಿನ್ ಮಡತಿಲ್ ಸುಬ್ರಾನ್, ಲಾಲ್ರಿನ್ಜುವಾಲಾ ಲಾಲ್ಬಿಯಾಕ್‌ನಿಯಾ, ಪಾರ್ಥಿಬ್ ಗೊಗೊಯ್, ರಹಿಮ್ ಅಲಿ, ಸುನಿಲ್ ಚೆಟ್ರಿ

Continue Reading

ಕ್ರೀಡೆ

Viral News: ಎಐ ತಂತ್ರಜ್ಞಾನದ ಮೂಲಕ ತಂಡ ಆಯ್ಕೆ ಮಾಡಿ ಟಿ20 ಸರಣಿ ಗೆದ್ದ ಇಂಗ್ಲೆಂಡ್​ ಮಹಿಳಾ ತಂಡ

viral news: ಕೃತಕ ಬುದ್ದಿಮತ್ತೆ ತಂತ್ರಜ್ಞಾನವು ಬಲಿಷ್ಠ ತಂಡದ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿ ನಿರ್ಣಾಯಕ ಅಭಿಪ್ರಾಯಗಳನ್ನು ನೀಡಿತು ಮತ್ತು ಆಸ್ಟ್ರೆಲಿಯಾ ವಿರುದ್ಧದ ಟಿ20 ಸರಣಿಯನ್ನು ಗೆಲ್ಲಲು ಇದು ಸಹಾಯ ಮಾಡಿತು ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

viral news
Koo

ಲಂಡನ್​: ಕೃತಕ ಬುದ್ಧಿಮತ್ತೆ ತಂತ್ರಜ್ಞಾನಕ್ಕೆ (Artificial Intelligence) ಜಗತ್ತೇ ತೆರೆದುಕೊಳ್ಳುತ್ತಿದೆ. ಅದರಲ್ಲೂ, ಕೃತಕ ಬುದ್ಧಿಮತ್ತೆ ಆಧಾರಿತ ಚಾಟ್‌ಜಿಪಿಟಿಯಂತಹ ಚಾಟ್‌ಬಾಟ್‌ಗಳು (ChatBot) ಪ್ರಬಂಧ ಬರೆಯುವುದರಿಂದ ಹಿಡಿದು, ಕೋಡ್‌ ರಚನೆವರೆಗೆ ಛಾಪು ಮೂಡಿಸುತ್ತಿವೆ. ಆಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಪ್ರಾಮುಖ್ಯತೆಯನ್ನು ಇದು ಸಾರುತ್ತಿದೆ. ಇದೀಗ ಈ ತಂತ್ರಜ್ಞಾನವನ್ನು ಇಂಗ್ಲೆಂಡ್​ ಮಹಿಳಾ ಕ್ರಿಕೆಟ್(England women’s cricket team)​ ತಂಡವೂ ಇದರ ಲಾಭ ಪಡೆದಿದೆ.

ಆಡುವ ಹನ್ನೊಂದರ ಬಳಗವನ್ನು ಆರಿಸಲು ಕೃತಕ ಬುದ್ದಿಮತ್ತೆಯನ್ನು (ಎಐ) ಬಳಸುತ್ತಿರುವುದಾಗಿ ತಂಡದ ಮುಖ್ಯ ಕೋಚ್​ ಜಾನ್​ ಲೆವಿಸ್​ ಬಹಿರಂಗಪಡಿಸಿದ್ದಾರೆ. ತಂತ್ರಜ್ಞಾನವು ಬಲಿಷ್ಠ ತಂಡದ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿ ನಿರ್ಣಾಯಕ ಅಭಿಪ್ರಾಯಗಳನ್ನು ನೀಡಿತು ಮತ್ತು ಆಸ್ಟ್ರೆಲಿಯಾ ವಿರುದ್ಧದ ಟಿ20 ಸರಣಿಯನ್ನು ಗೆಲ್ಲಲು ಇದು ಸಹಾಯ ಮಾಡಿತು ಎಂದು ಅವರು ತಿಳಿಸಿದ್ದಾರೆ.

ಲಂಡನ್​ ಮೂಲದ ‘ಪಿಎಸ್​ಐ’ ಕಂಪನಿ ತಯಾರಿಸುವ ತಂತ್ರಜ್ಞಾನವನ್ನು ಬಳಸಿಕೊಂಡು ಈ ಪ್ರಯೋಗ ಮಾಡಲಾಯಿತು(Viral News) ಎಂದು ಲೆವಿಸ್​ ತಿಳಿಸಿದ್ದಾರೆ. ಉತ್ತಮ ಫಾಮ್​ರ್ನಲ್ಲಿರುವ ಇಬ್ಬರು ಆಟಗಾರ್ತಿಯರ ಪೈಕಿ ಒಬ್ಬರನ್ನು ಮಾತ್ರ ಆರಿಸುವ ಸಂಕಷ್ಟದ ಸಮಯದಲ್ಲಿ ಎಐ ನಮಗೆ ಯಶಸ್ವಿಯಾಗಿ ಸಹಾಯ ಮಾಡಿದೆ ಎಂದು ಅವರು​ ಹೇಳಿಕೊಂಡಿದ್ದಾರೆ.

ಕೃತಕ ಬುದ್ಧಿಮತ್ತೆ ಕೌಶಲ ಅಭಿವೃದ್ಧಿಯಲ್ಲಿ ಯಾವ ದೇಶಗಳು ಎಷ್ಟು ಪ್ರಗತಿ ಸಾಧಿಸಿವೆ ಎಂಬ ಕುರಿತು ಅಮೆರಿಕದ ಸ್ಟ್ಯಾನ್‌ಫೋರ್ಡ್‌ ವಿಶ್ವವಿದ್ಯಾಲಯವು ಇತ್ತೀಚೆಗೆ ಎಐ ಇಂಡೆಕ್ಸ್‌ ವರದಿ (AI Index Report 2023) ಪ್ರಕಟಿಸಿತ್ತು. ಜಾಗತಿಕವಾಗಿ ಕೃತಕ ಬುದ್ಧಿಮತ್ತೆ ಕ್ರಾಂತಿ ಸೃಷ್ಟಿಮಾಡುವಲ್ಲಿ ಭಾರತದ ಪಾತ್ರ ಮಹತ್ವದ್ದಾಗಿದೆ ಎಂದೂ ವರದಿಯಲ್ಲಿ ಉಲ್ಲೇಖಿಸಿರುವುದು ಸಕಾರಾತ್ಮಕ ಸಂಗತಿಯಾಗಿದೆ.

ಇದನ್ನೂ ಓದಿ IPL 2024: ಇಂದು ಐಪಿಎಲ್​ನಲ್ಲಿ ಡಬಲ್​ ಹೆಡರ್​ ಪಂದ್ಯ; ಮೊದಲ ಪಂದ್ಯ ಯಾವುದು?

2022ರಲ್ಲಿ ಜಗತ್ತಿನಲ್ಲಿ ಮೂರು ರಾಷ್ಟ್ರಗಳು ಕೃತಕ ಬುದ್ಧಿಮತ್ತೆ ಕೌಶಲ ವೃದ್ಧಿಯಲ್ಲಿ ಅಗ್ರ ಸ್ಥಾನ ಪಡೆದಿವೆ. ಭಾರತವು 3.2 ರೇಟಿಂಗ್‌ನೊಂದಿಗೆ ಅಗ್ರಸ್ಥಾನಿಯಾದರೆ, ಅಮೆರಿಕ 2.2 ಹಾಗೂ ಜರ್ಮನಿ 1.7 ರೇಟಿಂಗ್‌ ಪಡೆದಿವೆ. ನೀತಿ ಆಯೋಗದ ಮಾಜಿ ಸಿಇಒ ಅಮಿತಾಭ್‌ ಕಾಂತ್‌ ಅವರು ಭಾರತದ ಏಳಿಗೆ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ. “ಭಾರತದ ಚಾಣಾಕ್ಷತೆಯು ಜಾಗತಿಕವಾಗಿ ಮಿನುಗುತ್ತಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಭಾರತವು ಜಾಗತಿಕ ಶಿಕ್ಷಣ, ಆರೋಗ್ಯ, ಪೌಷ್ಟಿಕಾಂಶ ಸೇರಿ ಹಲವು ಕ್ಷೇತ್ರಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿದೆ” ಎಂದು ಪೋಸ್ಟ್​ ಮಾಡಿತ್ತು.

ಇಟ್ಟು ಮರೆತು ಹೋದ ವಸ್ತುಗಳನ್ನು ಹುಡುಕಲು ‘ಕೃತಕ ಜ್ಞಾಪಕ ಶಕ್ತಿ’ ಅಭಿವೃದ್ಧಿ!

ಇಟ್ಟಿರುವ ಸಾಮಾನು ಟೈಮ್‌ಗೆ ಸರಿಯಾಗಿ ಕೈಗೆ ಸಿಗುವುದಿಲ್ಲ ಎಂದು ಮನೆಯಲ್ಲಿ ಆಗಾಗ ಹಿರಿಯರು ಮಾತನಾಡಿಕೊಳ್ಳವುದನ್ನು ಕೇಳಿದ್ದೇವೆ. ಇನ್ನು ಆ ಚಿಂತೆ ಇಲ್ಲ ಬಿಡಿ. ಯಾಕೆಂದರೆ, ಸಂಶೋಧಕರು ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ತಂತ್ರಜ್ಞಾನವನ್ನು ಬಳಸಿಕೊಂಡು ರೋಬಾಟ್‌ಗಳು, ವಿಶೇಷವಾಗಿ ಮರೆವಿನ ಕಾಯಿಲೆಯಿಂದ ಬಳಲುತ್ತಿರುವವರಿಗೆ, ಔಷಧಗಳು, ಕನ್ನಡಕ, ಫೋನ್‌ಗಳು ಮತ್ತಿತರ ವಸ್ತುಗಳನ್ನು ಹುಡುಕಿಕೊಡಲು ನೆರವು ನೀಡಲಿವೆ.

ಮೆರೆವು ಕಾಯಿಲೆಯು, ಮೆದುಳಿನ ಕಾರ್ಯನಿರ್ವಹಣೆಯನ್ನು ನಿರ್ಬಂಧಿಸುತ್ತದೆ. ಇದರಿಂದಾಗಿ ಗೊಂದಲ, ನೆನಪು ನಷ್ಟ ಮತ್ತು ಅಂಗವೈಕಲ್ಯವನ್ನು ಉಂಟುಮಾಡುತ್ತದೆ. ಈ ಸ್ಥಿತಿಯನ್ನು ಹೊಂದಿರುವ ಅನೇಕ ಜನರು ದಿನನಿತ್ಯದ ವಸ್ತುಗಳ ಸ್ಥಳವನ್ನು ಪದೇ ಪದೇ ಮರೆತುಬಿಡುತ್ತಾರೆ. ಇದು ಅವರ ಜೀವನದ ಗುಣಮಟ್ಟವನ್ನು ಕುಗ್ಗಿಸುತ್ತದೆ. ಹಾಗಾಗಿ ಆರೈಕೆ ಮಾಡುವವರ ಮೇಲೆ ಹೆಚ್ಚುವರಿ ಹೊರೆಯಾಗುತ್ತದೆ. ಈ ಹೊರೆಯನ್ನು ಕಡಿಮೆ ಮಾಡಲು ಈ ತಂತ್ರಜ್ಞಾನವು ನೆರವು ಒದಗಿಸಲಿದೆ.

Continue Reading

ಕ್ರೀಡೆ

Virat- Anushka: ಕೊಹ್ಲಿ ಮಾಡಿದ ರನೌಟ್​ ಕಂಡು ಆಶ್ಚರ್ಯ ಚಕಿತರಾದ ಅನುಷ್ಕಾ

Virat- Anushka: ಎರಡನೇ ಮಗುವಾದ ಬಳಿಕ ಅನುಷ್ಕಾ ಇದುವರೆಗೂ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ವಿರಾಟ್​ ಕೊಹ್ಲಿಗೆ(Virat Kohli) ಸ್ಫೂರ್ತಿ ನೀಡಲೆಂದೇ ಐಪಿಎಲ್​ನ ದ್ವಿತಿಯಾರ್ಧದ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಇದೀಗ ಅವರು ಸ್ಟೇಡಿಯಂನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು ಪತಿಗೆ ಚಿಯರ್ ಅಪ್ ಮಾಡಿದ್ದಾರೆ.

VISTARANEWS.COM


on

Virat- Anushka
Koo

ಬೆಂಗಳೂರು: ಶನಿವಾರ ನಡೆದ ಗುಜರಾತ್​ ಟೈಟಾನ್ಸ್​ ವಿರುದ್ಧದ ಪಂದ್ಯದ ಆರ್​ಸಿಬಿ 4 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(Virat- Anushka) ಅವರು ಎದುರಾಳಿ ತಂಡದ ಆಟಗಾರ ಶಾರೂಖ್​ ಖಾನ್​ ಅವರನ್ನು ಮಿಂಚಿನ ಎಸೆತದ ಮೂಲಕ ರನೌಟ್​ ಮಾಡಿ ಗಮನಸೆಳೆದರು. ಬುಲೆಟ್​ ಚಿಮ್ಮಿದ ವೇಗದಲ್ಲಿ ರನೌಟ್​ ಮಾಡಿದ್ದನ್ನು ಕಂಡು ಪತ್ನಿ ಅನುಷ್ಕಾ(Anushka Sharma) ದಂಗಾಗಿದ್ದಾರೆ. ಇದರ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video)​ ಆಗಿದೆ.


ಆರಂಭಿಕ ಆಘಾತ ಕಂಡಿದ್ದ ಗುಜರಾತ್​ಗೆ ಶಾರೂಖ್​ ಖಾನ್​ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್​ ಮೂಲಕ ಆಸರೆಯಾಗಿದ್ದರು. 24 ಎಸೆತಗಳಿಂದ 37 ರನ್​ ಗಳಿಸಿ ನಾನ್​ಸ್ಟ್ರೈಕ್​ನಲ್ಲಿದ್ದ ಶಾರೂಖ್ ಇಲ್ಲದ ರನ್​ ಕದಿಯಲು ಯತ್ನಿಸಿದ ವೇಳೆ ಚಿರತೆ ವೇಗದಲ್ಲಿ ಫೀಲ್ಡಿಂಗ್​ ನಡೆಸಿ ಕೊಹ್ಲಿ ಚೆಂಡನ್ನು ನೇರವಾಗಿ ವಿಕೆಟ್​ಗೆ ಎಸೆದು ರನೌಟ್​ ಮಾಡಿದರು. ಒಂದೊಮ್ಮೆ ಕೊಹ್ಲಿ ಈ ರನೌಟ್​ ಮಾಡದಿದ್ದರೆ ಶಾರೂಖ್​ ಆರ್​ಸಿಬಿಗೆ ಅಪಾಯಕಾರಿಯಾಗಿ ಗೋಚರಿಸುವ ಸಾಧ್ಯತೆಯೂ ಇತ್ತು.

ಎರಡನೇ ಮಗುವಾದ ಬಳಿಕ ಅನುಷ್ಕಾ ಇದುವರೆಗೂ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ವಿರಾಟ್​ ಕೊಹ್ಲಿಗೆ(Virat Kohli) ಸ್ಫೂರ್ತಿ ನೀಡಲೆಂದೇ ಐಪಿಎಲ್​ನ ದ್ವಿತಿಯಾರ್ಧದ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಇದೀಗ ಅವರು ಸ್ಟೇಡಿಯಂನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು ಪತಿಗೆ ಚಿಯರ್ ಅಪ್ ಮಾಡಿದ್ದಾರೆ. ಹಿಂದೆ ಅನೇಕ ಬಾರಿ ಅನುಷ್ಕಾ ಮೈದಾನದಲ್ಲಿದ್ದು, ಪತಿ ಕೊಹ್ಲಿಗೆ ಚಿಯರ್ ಅಪ್ ಮಾಡಿದ್ದರು. ಕಳೆದ ಬಾರಿ ಏಕದಿನ ವಿಶ್ವಕಪ್ ಟೂರ್ನಿಯ ವೇಳೆಯೂ ಬಹುತೇಖ ಪಂದ್ಯಗಳಲ್ಲಿ ಅನುಷ್ಕಾ ಅವರು ಕೊಹ್ಲಿಗೆ ಹುರಿದುಂಬಿಸಿದ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿತ್ತು.

ಇದನ್ನೂ ಓದಿ IPL 2024: ಇಂದು ಐಪಿಎಲ್​ನಲ್ಲಿ ಡಬಲ್​ ಹೆಡರ್​ ಪಂದ್ಯ; ಮೊದಲ ಪಂದ್ಯ ಯಾವುದು?

ಗುಜರಾತ್​ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 27 ಎಸೆತಗಳಿಂದ 4 ಸಿಕ್ಸರ್​ ಮತ್ತು 2 ಬೌಂಡರಿ ನೆರವಿನಿಂದ 42 ರನ್​ ಬಾರಿಸಿದರು. ಇದೇ ವೇಳೆ ಮತ್ತೆ ಆರೆಂಜ್​ ಕ್ಯಾಪ್​ ತನ್ನದಾಗಿಸಿಕೊಂಡರು. ಸದ್ಯ ಕೊಹ್ಲಿ 542 ರನ್​ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ಇಂದು ನಡೆಯುವ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಚೆನ್ನೈ ನಾಯಕ ಋತುರಾಜ್​ ಗಾಯಕ್ವಾಡ್(509)​ 34 ರನ್​ ಬಾರಿಸಿದರೆ ಈ ಕ್ಯಾಪ್ ಗಾಯಕ್ವಾಡ್ ಪಾಲಾಗಲಿದೆ.

​ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​​ಸಿಬಿ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಗುಜರಾತ್ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿದ ಕಾರಣ 19.3 ಓವರ್​ಗಳಲ್ಲಿ 147 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆರ್​ಸಿಬಿ ಇನ್ನೂ 38 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ 152 ರನ್ ಬಾರಿಸಿ ಗೆಲವು ಪಡೆಯಿತು.

Continue Reading

ಕ್ರೀಡೆ

IPL 2024: ಇಂದು ಐಪಿಎಲ್​ನಲ್ಲಿ ಡಬಲ್​ ಹೆಡರ್​ ಪಂದ್ಯ; ಮೊದಲ ಪಂದ್ಯ ಯಾವುದು?

IPL 2024: ಪಂಜಾಬ್​-ಚೆನ್ನೈ(PBKS vs CSK) ಮೊದಲ ಪಂದ್ಯದಲ್ಲಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸೆಣಸಾಟಕ್ಕೆ ಇಳಿಯಲಿವೆ. ಇದು ಈ ಆವೃತ್ತಿಯಲ್ಲಿ ಇಲ್ಲಿ ನಡೆಯುವ ಮೊದಲ ಐಪಿಎಲ್(IPL 2024)​ ಪಂದ್ಯವಾಗಿದೆ. ಕಳೆದ ಪಂದ್ಯದಲ್ಲಿ ತವರಿನಲ್ಲೇ 7 ವಿಕೆಟ್​ ಸೋಲಿಗೆ ಪಂಜಾಬ್​ಗೆ ಅವರ ತವರಿನ ಅಂಗಳದಲ್ಲಿ ಸೇಡು ತೀರಿಸಿಕೊಳ್ಳುವುದು ಹಾಲಿ ಚಾಂಪಿಯನ್‌ ಗುರಿಯಾಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಭಾನುವಾರದ ಐಪಿಎಲ್​ನಲ್ಲಿ(IPL 2024) ಡಬಲ್​ ಹೆಡರ್​ ಪಂದ್ಯಗಳು ನಡೆಯಲಿವೆ. ಪಂಜಾಬ್​ ಕಿಂಗ್ಸ್(Punjab Kings)​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ಹಗಲು ಪಂದ್ಯದಲ್ಲಿ ಮುಖಾಮುಖಿಯಾದರೆ, ರಾತ್ರಿಯ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ ಮತ್ತು ಕೆಕೆಆರ್(Kolkata Knight Riders)​ ಸೆಣಸಾಟ ನಡೆಸಲಿವೆ. ಎಲ್ಲ ನಾಲ್ಕು ತಂಡಗಳಿಗೂ ಪ್ಲೇ ಆಫ್​ ಪ್ರವೇಶದ ನಿಟ್ಟಿನಲ್ಲಿ ಇದು ಮಹತ್ವದ ಪಂದ್ಯವಾಗಿದೆ. ಹೀಗಾಗಿ ಪಂದ್ಯಗಳು ತೀವ್ರ ಪೈಪೋಟಿಯಿಂದ ಕೂಡಿರುವ ಸಾಧ್ಯತೆ ಅಧಿಕವಾಗಿದೆ.

ಬ್ಯಾಟಲ್​ ಆಫ್​ ದಿ ಕಿಂಗ್ಸ್​ಗೆ ಚೆನ್ನೈ-ಪಂಜಾಬ್​ ರೆಡಿ


ಪಂಜಾಬ್​-ಚೆನ್ನೈ(PBKS vs CSK) ಮೊದಲ ಪಂದ್ಯದಲ್ಲಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸೆಣಸಾಟಕ್ಕೆ ಇಳಿಯಲಿವೆ. ಇದು ಈ ಆವೃತ್ತಿಯಲ್ಲಿ ಇಲ್ಲಿ ನಡೆಯುವ ಮೊದಲ ಐಪಿಎಲ್(IPL 2024)​ ಪಂದ್ಯವಾಗಿದೆ. ಕಳೆದ ಪಂದ್ಯದಲ್ಲಿ ತವರಿನಲ್ಲೇ 7 ವಿಕೆಟ್​ ಸೋಲಿಗೆ ಪಂಜಾಬ್​ಗೆ ಅವರ ತವರಿನ ಅಂಗಳದಲ್ಲಿ ಸೇಡು ತೀರಿಸಿಕೊಳ್ಳುವುದು ಹಾಲಿ ಚಾಂಪಿಯನ್‌ ಗುರಿಯಾಗಿದೆ.

ಚೆನ್ನೈ(Chennai Super Kings) ತಂಡ ಆರಂಭಿಕ ಪಂದ್ಯಗಳಲ್ಲಿ ಉತ್ತಮ ಬೌಲಿಂಗ್​ ಪ್ರದರ್ಶನದ ಮೂಲಕ ಸತತ ಗೆಲುವು ಸಾಧಿಸಿತ್ತು. ಆದರೆ ಈಗ ಹಿಂದಿನ ಲಯ ಕಳೆದುಕೊಂಡಿದ್ದು ತವರಿನಲ್ಲೇ ಸೋಲಿನ ಅವಮಾನಕ್ಕೆ ಸಿಲುಕಿದೆ. ಬಾಂಗ್ಲಾ ಎಡಗೈ ವೇಗಿ ಮುಸ್ತಫಿಜುರ್​ ರೆಹಮಾನ್​ ಕೂಡ ಟಿ20 ವಿಶ್ವಕಪ್​ಗೆ ಸಿದ್ಧತೆ ನಡೆಸುವ ಸಲುವಾಗಿ ತಂಡ ತೊರೆದಿದ್ದಾರೆ. ಶಾರ್ದೂಲ್​ ಠಾಕೂರ್​ ಕೂಡ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ದೀಪಕ್ ಚಹಾರ್, ರಿಚರ್ಡ್ ಗ್ಲೀಸನ್ ಕೂಡ ದುಬಾರಿಯಾಗುತ್ತಿದ್ದಾರೆ. ಜಡೇಜಾ ಕೂಡ ಸ್ಪಿನ್​ ಮಾಡುತಿಲ್ಲ. ಸದ್ಯಕ್ಕೆ ಪತಿರಾಣ ಮಾತ್ರ ಘಾತಕ ಬೌಲಿಂಗ್​ ನಡೆಸುತ್ತಿದ್ದಾರೆ.

ಇದನ್ನೂ ಓದಿ IPL 2024: ಹ್ಯಾಟ್ರಿಕ್​ ಗೆಲುವು ಸಾಧಿಸಿದ ಆರ್​ಸಿಬಿಯ ಪ್ಲೇ ಆಫ್ ಲೆಕ್ಕಾಚಾರ ಹೇಗಿದೆ?

ಪಂಜಾಬ್​(Punjab Kings) ತಂಡದಲ್ಲಿ ಅನುಭವಿಗಳಾದ ಕಗಿಸೊ ರಬಾಡ, ಅರ್ಶ್​ದೀಪ್​ ಸಿಂಗ್​, ಹರ್ಷಲ್​ ಪಟೇಲ್ ಅವರಂತಹ ಘಾತಕ ಬೌಲರ್​​ ಇದ್ದರೂ ಕೂಡ ಇವರಿಂದ ಇದುವರೆಗೆ ನಿರೀಕ್ಷಿತ ಮಟ್ಟದ ಬೌಲಿಂಗ್ ಪ್ರದರ್ಶನ ಕಂಡುಬಂದಿಲ್ಲ.​ ಪಂಜಾಬ್​ ಗೆದ್ದಿರುವುದು ಬ್ಯಾಟಿಂಗ್​ ಬಲದಿಂದ. ಹೀಗಾಗಿ ಈ ಪಂದ್ಯದಲ್ಲಿಯೂ ಪಂಜಾಬ್​ ಬ್ಯಾಟಿಂಗ್​ ಬಲವನ್ನೇ ನಂಬಿದೆ. ಕಳೆದೊಂದು ವರ್ಷದಿಂದ ತೀವ್ರ ಬ್ಯಾಟಿಂಗ್​ ಬರ ಎದುರಿಸಿದ್ದ ಜಾನಿ ಬೇರ್​ಸ್ಟೋ ಪ್ರಚಂಡ ಫಾರ್ಮ್​ಗೆ ಮರಳಿದ್ದಾರೆ. ಇದು ಪಂಜಾಬ್​ಗೆ ಆನೆ ಬಲ ಬಂದಂತಾಗಿದೆ. ಮಧ್ಯಮ ಕ್ರಮಾಂಕದಲ್ಲಿ ಶಶಾಂಕ್​ ಸಿಂಗ್​ ಮತ್ತು ಅಶುತೋಷ್ ಶರ್ಮಾ ಸಿಡಿಲಬ್ಬರ ಬ್ಯಾಟಿಂಗ್​ ಮೂಲಕ ತಂಡಕ್ಕೆ ನೆರವಾಗಬಲ್ಲರು. ಒಟ್ಟಾರೆಯಾಗಿ ಪಂಜಾಬ್​ಗೆ ಬ್ಯಾಟಿಂಗ್​ಗೇ ಮುಖ್ಯ ಬಲವಾಗಿದೆ.

ಲಕ್ನೋ ಸವಾಲು ಗೆದ್ದೀತೇ ಕೆಕೆಆರ್​


ದಿನದ ಮತ್ತೊಂದು ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಮತ್ತು ಕೆಕೆಆರ್​ ಮುಖಾಮುಖಿಯಾಗಲಿವೆ. ರಾಹುಲ್​ ಪಡೆಗೆ ಇದು ತವರಿನ ಪಂದ್ಯವಾಗಿದೆ. ಸದ್ಯ ಅಂಕಪಟ್ಟಿಯಲ್ಲಿ ಕೆಕೆಆರ್​ 2ನೇ ಸ್ಥಾನಿಯಾಗಿದ್ದರೆ, ಲಕ್ನೋ 3ನೇ ಸ್ಥಾನದಲ್ಲಿದೆ. ಶರವೇಗದ ಎಸೆತಗಾರ ಮಾಯಾಂಕ್​ ಯಾದವ್​ ಟೂರ್ನಿಯಿಂದ ಹೊರಬಿದ್ದಿರುವುದರಿಂದ ಲಕ್ನೋ ಬೌಲಿಂಗ್​ ವಿಭಾಗಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಕೆಕೆಆರ್​ ಎಲ್ಲ ವಿಭಾಗದಲ್ಲಿಯೂ ಬಲಿಷ್ಠವಾಗಿದೆ.

Continue Reading
Advertisement
Viral News
ವೈರಲ್ ನ್ಯೂಸ್6 mins ago

Viral News: ಅಣ್ಣನ ಕತ್ತು ಸೀಳಿದ ತಂಗಿ; ಮೊಬೈಲ್‌ಗಾಗಿ ನಡೀತು ಘೋರ ಕೃತ್ಯ

FIFA World Cup qualifiers
ಕ್ರೀಡೆ27 mins ago

FIFA World Cup qualifiers: ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ; ಬಲಿಷ್ಠ ಸಂಭಾವ್ಯ ತಂಡ ಪ್ರಕಟಿಸಿದ ಭಾರತ

Prajwal Revanna Case HD Revanna mobile phone seized SIT to collect technical evidence
ಕ್ರೈಂ32 mins ago

Prajwal Revanna Case: ಎಚ್.ಡಿ. ರೇವಣ್ಣ ಮೊಬೈಲ್‌ ವಶಕ್ಕೆ? ಟೆಕ್ನಿಕಲ್‌ ಎವಿಡೆನ್ಸ್‌ ಕಲೆ ಹಾಕಲು ಮುಂದಾದ ಎಸ್‌ಐಟಿ!

Prajwal Revanna Case reaction by Harshika Poonacha
ಸಿನಿಮಾ47 mins ago

Prajwal Revanna Case: ವೈರಲ್ ಆಗುತ್ತಿರುವ 2976 ವಿಡಿಯೊಗಳಲ್ಲಿ ಒಂದನ್ನು ನಾನು ನೋಡಿದೆ ಎಂದ ಹರ್ಷಿಕಾ ಪೂಣಚ್ಚ!

Prajwal Revanna Case Women officers say face morphed in video
ಕ್ರೈಂ49 mins ago

Prajwal Revanna Case: ಪ್ರಜ್ವಲ್‌ ವಿಡಿಯೊ ಕೇಸ್‌; ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

arrest
ದೇಶ57 mins ago

ಹಿಂದೂ ಸಂಘಟನೆಯ ನಾಯಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೌಲ್ವಿಯ ಬಂಧನ

108 ambulance
ಬೆಂಗಳೂರು1 hour ago

108 Ambulance : 3 ತಿಂಗಳ ವೇತನ ಬಾಕಿ; ನಾಳೆ ರಾತ್ರಿಯಿಂದಲೇ 108 ಆಂಬ್ಯುಲೆನ್ಸ್‌ ಸೇವೆ ಬಂದ್‌!

Viral Video
ವೈರಲ್ ನ್ಯೂಸ್1 hour ago

Viral Video: ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದೇ ಬಿಟ್ಟ ಜನ; ಶಾಕಿಂಗ್‌ ವಿಡಿಯೋ ವೈರಲ್‌

Prajwal Revanna Case Prajwal likely to arrive in Bengaluru today SIT decides to arrest him at airport
ಕ್ರೈಂ1 hour ago

Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

viral news
ಕ್ರೀಡೆ1 hour ago

Viral News: ಎಐ ತಂತ್ರಜ್ಞಾನದ ಮೂಲಕ ತಂಡ ಆಯ್ಕೆ ಮಾಡಿ ಟಿ20 ಸರಣಿ ಗೆದ್ದ ಇಂಗ್ಲೆಂಡ್​ ಮಹಿಳಾ ತಂಡ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌