Site icon Vistara News

Bike Accident: ದೊಮ್ಮಸಂದ್ರ ಸಮೀಪ ಶಾಲಾ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

Bike Accident

#image_title

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ದೊಮ್ಮಸಂದ್ರ ಸಮೀಪದ ಇಟ್ಟಂಗೂರು- ಕಲ್ಲಹಳ್ಳಿ ರಸ್ತೆಯಲ್ಲಿ ಶಾಲಾ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ (Bike Accident) ಬುಧವಾರ ಸಂಭವಿಸಿದೆ.

ದೊಮ್ಮಸಂದ್ರ ಗ್ರಾಮದ ಮೋಹಿನುಲ್ಲಾ ಬೇಗ್( 55) ಮೃತರು. ವರ್ತೂರಿನ ಗುಂಜೂರು ಸಮೀಪದ ನಕ್ಷಾ ಅಕಾಡೆಮಿಯ ಶಾಲಾ ಬಸ್‌ ಸಂಜೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಅಪಘಾತ ನಡೆದಿದೆ. ದ್ವಿಚಕ್ರ ವಾಹನಕ್ಕೆ ಶಾಲಾ ಬಸ್ ಡಿಕ್ಕಿಯಾಗಿದ್ದರಿಂದ ಗಂಭೀರವಾಗಿ ಗಾಯಗೊಂಡು ಸವಾರ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಸರ್ಜಾಪುರ ಪೋಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ; ಸುಟ್ಟು ಕರಕಲಾದ ಐಷಾರಾಮಿ ಕಾರುಗಳು

ಬೆಂಗಳೂರು: ಗ್ಯಾರೇಜ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕೋಟ್ಯಂತರ ರೂಪಾಯಿ ಮೌಲ್ಯದ 15 ಐಷಾರಾಮಿ ಕಾರುಗಳು ಬೆಂಕಿಗಾಹುತಿಯಾಗಿರುವ ಘಟನೆ ರಾಮಮೂರ್ತಿನಗರದ ಕಸ್ತೂರಿನಗರದಲ್ಲಿ ನಡೆದಿದೆ.

ಚಾಂದ್ ಪಾಷ, ತಬೇರೇಸ್ ಪಾಷ ಎಂಬುವವರ ಗ್ಯಾರೇಜ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಐಷಾರಾಮಿ ಕಾರುಗಳನ್ನು ರಿಪೇರಿ ಮಾಡುವ ಗ್ಯಾರೇಜ್‌ ಇದಾಗಿದ್ದು, ಬೆಂಕಿ ಕಾಣಿಸಿಕೊಂಡಿದ್ದರಿಂದ 15 ಕಾರುಗಳು ಸುಟ್ಟು ಕರಕಲಾಗಿವೆ. ಗ್ಯಾರೇಜ್‌ನಲ್ಲಿ ಸ್ಟಾರ್ಟರ್ ಕೆಲಸ ಮಾಡುವಾಗ ಬೆಂಕಿ ಕಿಡಿ ಹಾರಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟರು.

ಇದನ್ನೂ ಓದಿ | Road Accident: ಟಂಟಂ ಪಲ್ಟಿಯಾಗಿ ಪ್ರಾಣ ಬಿಟ್ಟ ಶಾಲಾ ಬಾಲಕ; ರಸ್ತೆ ಅಪಘಾತದಲ್ಲಿ ಮೃತಪಟ್ಟ ಬೈಕ್‌ ಸವಾರರು

Exit mobile version