ಸತೀಶ್‌ ನೀನಾಸಂಗೆ ಹುಟ್ಟುಹಬ್ಬದ ಸಂಭ್ರಮ - Vistara News

ಬೆಂಗಳೂರು

ಸತೀಶ್‌ ನೀನಾಸಂಗೆ ಹುಟ್ಟುಹಬ್ಬದ ಸಂಭ್ರಮ

ನಟ ​ ನೀನಾಸಂ ಸತೀಶ್​ ಇಂದು 36ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಬಹುಮುಖ ಪ್ರತಿಭೆಯ ಸತೀಶ್‌ ಚಿತ್ರ ನಿರ್ಮಾಣ ಸಾಹಸಕ್ಕೂ ಕೈ ಹಾಕಿದ್ದಾರೆ.

VISTARANEWS.COM


on

Sathish ninasam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಈ ಮಂಡ್ಯ ಹೈದನಿಗೆ ( Sathish ninasam ) ಬಹು ಬೇಡಿಕೆ ಇದೆ. ತಕದಿಮಿಥಾ, ಸಿಲ್ಲಿ ಲಲ್ಲಿ ಮತ್ತು ಯೋಗರಾಜ ಭಟ್‌ ನಿರ್ದೇಶನದ ಪರಮಪದ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ನಂತರ 2008ರಲ್ಲಿ ಸಿನಿಮಾ ರಂಗ ಪ್ರವೇಶಿಸಿದರು. ಮನಸಾರೆ, ಪಂಚರಂಗಿ, ಲೈಫು ಇಷ್ಟೇನೆ ಸಿನಿಮಾಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಬಳಿಕ 2013ರಲ್ಲಿ ತೆರೆಕಂಡ ʼಲೂಸಿಯಾʼ ಚಿತ್ರದಲ್ಲಿ ನಾಯಕನಾಗಿ ಬೆಳೆದರು.

ಈ ಸಿನೆಮಾ ಸತೀಶ್ ವೃತ್ತಿ ಜೀವನದಲ್ಲಿ ಟರ್ನಿಂಗ್ ಪಾಯಿಂಟ್ ಆಯಿತು. ಈ ಚಿತ್ರಕ್ಕೆ ಅನೇಕ ಪ್ರಶಸ್ತಿಗಳು ಲಭಿಸಿದವು. ಈ ಸಿನಿಮಾದ ಯಶಸ್ವಿನಿಂದಾಗಿ ಇವರಿಗೆ ಹಲವು ಚಿತ್ರಗಳಲ್ಲಿ ನಾಯಕ ನಟನಾಗಿ ನಟಿಸುವ ಅಕಾಶ ಲಭಿಸಿದವು. ಇವರೀಗ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.

Sathish ninasam
Sathish ninasam

ಹಾಗೆಯೇ, ಚಿತ್ರ ನಿರ್ಮಾಣಕ್ಕೂ ಇವರು ಕೈ ಹಾಕಿದ್ದಾರೆ. ಸತೀಶ್ ಪಿಕ್ಚರ್ ಹೌಸ್ ಪ್ರಾರಂಭಿಸಿದ್ದಾರೆ. ಈ ಬ್ಯಾನರ್‌ನಡಿ “ರಾಕೆಟ್ʼ ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ.

ಲೂಸಿಯಾ, ರಾಕೆಟ್, ಕ್ವಾಟ್ಲೆ ಸತೀಶ, ಅಯೋಗ್ಯ, ಚಂಬಲ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರ “ಅಯೋಗ್ಯʼ ಸಿನಿಮಾ ಹಿಟ್‌ ಆಗಿತ್ತು. ಇವರ ನಟನೆಯ ಅಭಿನಯಕ್ಕೆ SIIMA ಪ್ರಶಸ್ತಿ, ಫಿಲ್ಮ್‌ಫೇರ್ ವಿಮರ್ಶಕರ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ದೊರಕಿವೆ. ಇಂದು ಅವರ ಹುಟ್ಟುಹಬ್ಬ. ಅಭಿಮಾನಿಗಳು ಹಾಗೂ ಚಿತ್ರರಂಗದ ಕಲಾವಿದರು ಸತೀಶ್​​ ನೀನಾಸಂಗೆ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:KGFನಿಂದ ಕನ್ನಡ ಚಿತ್ರರಂಗ ಕಲಿಯಬೇಕಾದ 7 ಪಾಠಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

Murder Case: ಅಂಜಲಿ ಅವರು ವೀರಾಪೂರ ಓಣಿಯಲ್ಲಿರುವ ತಮ್ಮ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿ ಮನೆಗೇ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದಾನೆ ಎಂದು ಗೊತ್ತಾಗಿದೆ.

VISTARANEWS.COM


on

woman murder case
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು (Stabbing) ಮತ್ತೊಬ್ಬ ಯುವತಿಯನ್ನು ಕೊಲೆ (Woman Murder Case) ಮಾಡಲಾಗಿದೆ. ಇದು ಕೂಡ ಪಾಗಲ್‌ ಭಗ್ನಪ್ರೇಮಿಯ ಕೃತ್ಯವಾಗಿದೆ. ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಈ ಕೊಲೆಯೂ ಘಟಿಸಿದೆ. ಕೊಲೆಗೆ ಕೆಲ ದಿನಗಳ ಮುನ್ನ ಆರೋಪಿ, ಯುವತಿಗೆ “ನೇಹಾ ಹಿರೇಮಠ ಥರ ಮಾಡ್ತೀನಿ” ಎಂದು ಬೆದರಿಸಿದ್ದ ಎಂದು ಗೊತ್ತಾಗಿದೆ.

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಂಜಲಿ ಅಂಬಿಗೇರ (20) ಕೊಲೆಯಾಗಿರುವ ಯುವತಿ. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದಾನೆ ಎಂದು ಗೊತ್ತಾಗಿದೆ. ಬೆಳಗಿನ ಜಾವ 5.30ಕ್ಕೆ ಅಂಜಲಿ ಅವರು ವೀರಾಪೂರ ಓಣಿಯಲ್ಲಿರುವ ತಮ್ಮ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿ ಮನೆಗೇ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ಪ್ರತಿಭಟಿಸಿದರೂ ಅವರ ಎದುರೇ ಇರಿದಿದ್ದಾನೆ.

ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.

ಕೊಲೆಪಾತಕಿ ಗಿರೀಶ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿಯ ಯುವತಿ ನೇಹಾ ಹಿರೇಮಠ ಅವರನ್ನು ಪಾಗಲ್‌ ಪ್ರೇಮಿ ಫಯಾಜ್‌ ಕಾಲೇಜ್‌ ಕ್ಯಾಂಪಸ್‌ನಲ್ಲಿಯೇ ಕಳೆದ ತಿಂಗಳು ಕೊಚ್ಚಿ ಕೊಲೆ ಮಾಡಿದ್ದ. ಇದು ಲವ್‌ ಜಿಹಾದ್‌ ಪ್ರಕರಣ ಎಂದು ರಾಜಾದ್ಯಂತ ತೀವ್ರ ಪ್ರತಿಭಟನೆ, ರಾಜಕೀಯ ಕೆಸರೆರಚಾಟಗಳಿಗೆ ಕಾರಣವಾಗಿತ್ತು.

ಆಯ ತಪ್ಪಿ ಬಿದ್ದು ಕಾರ್ಮಿಕ ಸಾವು

ವಿಜಯಪುರ: ಎನ್‌ಟಿಪಿಸಿ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರೊಬ್ಬರು ಆಯ ತಪ್ಪಿ 133 ಅಡಿ ಮೇಲಿಂದ ಕೆಳಗೆ ಬಿದ್ದು (Labor death) ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲೆಯ ಕೂಡಗಿ ಬಳಿಯಿರುವ ಎನ್‌ಟಿಪಿಸಿ ಘಟಕದಲ್ಲಿ ದುರಂತ ನಡೆದಿದೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಮೇಲಿಂದ ಬಿದ್ದು ಸಾವು ಸಂಭವಿಸಿದೆ. ಕಿಶನ್ ಕುಮಾರ್ ಭಾರಧ್ವಾಜ್ (33) ಮೃತಪಟ್ಟ ಕಾರ್ಮಿಕ. ಉತ್ತರ ಪ್ರದೇಶ ಮೂಲದ ಇವರು ಎನ್‌ಟಿಪಿಸಿ ಘಟಕದಲ್ಲಿ ಹೆಲ್ಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿನ್ನೆ ಸಂಜೆ ಘಟನೆ ನಡೆದಿದ್ದು, ವಿಜಯಪುರ ಖಾಸಗಿ ಆಸ್ಪತ್ರೆಗೆ ಕಾರ್ಮಿಕನ ಮೃತ ದೇಹ ರವಾನಿಸಲಾಗಿದೆ.

ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಆಗ್ರಹಿಸಿ ಕೂಡಗಿ ಎನ್‌ಟಿಪಿಸಿ ಘಟಕದ ಎದುರು ಬೆಳಿಗ್ಗೆಯಿಂದಲೇ ಕಾರ್ಮಿಕರು ಪ್ರತಿಭಟನೆ ಆರಂಭಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಬೆಂಕಿ ಆಕಸ್ಮಿಕದಲ್ಲಿ ಮನೆ ಭಸ್ಮ

ಕಲಬುರಗಿ: ವಿದ್ಯುತ್ ಶಾರ್ಟ್ ಸರ್ಕೀಟ್ (Short circuit) ಪರಿಣಾಮ ಕಲಬುರಗಿ ತಾಲ್ಲೂಕಿನ ಆಲಗೂಡ ಗ್ರಾಮದಲ್ಲಿ ಮನೆಯೊಂದು (Fire mishap) ಹೊತ್ತಿ ಉರಿದಿದೆ. ರೈತ ಸೈಬಣ್ಣ ಎನ್ನುವವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ.

ಮನೆಯಲ್ಲಿದ್ದ 20 ಸಾವಿರ ನಗದು ಹಣ, 7-8 ತೊಲೆ ಚಿನ್ನಾಭರಣ, ದವಸಧಾನ್ಯ ಹಾಗೂ ಗೃಹೋಪಯೋಗಿ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮನೆ ಸರ್ವನಾಶವಾದ ಹಿನ್ನೆಲೆಯಲ್ಲಿ ಸೈಬಣ್ಣ ಕುಟುಂಬ ಅತಂತ್ರವಾಗಿದೆ. ಕಲಬುರಗಿ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ, ಮನೆಕೆಲಸದಾಕೆ ಬಂಧನ

ಬೆಂಗಳೂರು: ಕನ್ನಡದ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ (Chaya Singh) ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಛಾಯಾಸಿಂಗ್ ಅವರ ತಾಯಿ ಚಮನಲತಾ ಅವರ ಬಸವೇಶ್ವರನಗರದ ನಿವಾಸದಲ್ಲಿ ಕಳ್ಳತನ ನಡೆದಿತ್ತು. 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಇದೀಗ ಮನೆಯಲ್ಲಿ ಕಳ್ಳತನ ಮಾಡಿರುವುದು ಮನೆಕೆಲಸದಾಕೆ ಎಂಬುವುದು ತಿಳಿದುಬಂದಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ನಟಿಯ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವಾಗಿದ್ದ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಳು. ಇದೀಗ ಆಕೆಯ ಕಳ್ಳತನ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಛಾಯಾ ಸಿಂಗ್ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಛಾಯಾ ಸಿಂಗ್ ಪ್ರಸ್ತುತ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ ನಾಯಕಿ ಭೂಮಿಕಾ ಪಾತ್ರಧಾರಿಯಾಗಿ ನಟಿಸುತ್ತಿದ್ದಾರೆ. ಇನ್ನು ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್ ಸಿನಿಮಾದಲ್ಲಿ ಛಾಯಾ ಸಿಂಗ್ ಅಭಿನಯಿಸಿದ್ದು, ಈ ವರ್ಷಾಂತ್ಯದಲ್ಲಿ ಸಿನಿಮಾ ತೆರೆ ಕಾಣಲಿದೆ.

ಇದನ್ನೂ ಓದಿ | Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

Continue Reading

ವೈರಲ್ ನ್ಯೂಸ್

Viral video: ʼಅಸಹ್ಯಕರ!ʼ ಬೆಂಗಳೂರಿನ ರಸ್ತೆಗಳ ಕಸದ ವಿಡಿಯೋ ಪೋಸ್ಟ್‌ ಮಾಡಿದ ಕಿರಣ್ ಮಜುಂದಾರ್ ಶಾ

Viral video: ಈ ಕಸದ ರಾಶಿಯನ್ನು ತ್ವರಿತವಾಗಿ ಕ್ಲೀನ್‌ ಮಾಡಿಸುವಂತೆ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಕರೆ ನೀಡಿದ್ದಾರೆ. ಅವರು ಮಾಡಿದ ಪೋಸ್ಟ್‌ನಲ್ಲಿ ಕಸದ ರಾಶಿಯಿಂದ ತುಂಬಿದ ಹೊರ ವರ್ತುಲ ರಸ್ತೆಯ ವಿಡಿಯೋ ಕಂಡುಬಂದಿದೆ. ಈ ದೃಶ್ಯವನ್ನು “ಅಸಹ್ಯಕರ” ಎಂದು ಕರೆದಿರುವ ಬಯೋಕಾನ್ ಮುಖ್ಯಸ್ಥೆ, “ಕೊಳಕು ಅವ್ಯವಸ್ಥೆಯನ್ನು ತ್ವರಿತವಾಗಿ ತೆರವುಗೊಳಿಸುವಂತೆ” ಬಿಬಿಎಂಪಿಗೆ ಕೋರಿದ್ದಾರೆ.

VISTARANEWS.COM


on

viral video garbage bengaluru roads
Koo

ಬೆಂಗಳೂರು: ರಾಜಧಾನಿ ಮೂಲದ ಖ್ಯಾತ ಬಿಟಿ ಕಂಪನಿ ಬಯೋಕಾನ್ (Biocon)‌ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ (Kiran Mazumdar Shaw) ಅವರು ಮಂಗಳವಾರ ಬೆಂಗಳೂರಿನ ರಸ್ತೆಗಳ (Bengaluru Roads) ಪಕ್ಕದ ಕಸದ ರಾಶಿಗಳ (garbage) ವಿಡಿಯೋಗಳನ್ನು ತಮ್ಮ ಸೋಶಿಯಲ್‌ ಮೀಡಿಯಾ (Social media) ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಬಿಬಿಎಂಪಿಗೆ (BBMP) ಮುಜುಗರ ಸೃಷ್ಟಿಸಿದ್ದಾರೆ. ಈ ವಿಡಿಯೋ ಈಗ ವೈರಲ್‌ (Viral video) ಆಗಿದೆ.

ಈ ಕಸದ ರಾಶಿಯನ್ನು ತ್ವರಿತವಾಗಿ ಕ್ಲೀನ್‌ ಮಾಡಿಸುವಂತೆ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಕರೆ ನೀಡಿದ್ದಾರೆ. ಅವರು ಮಾಡಿದ ಪೋಸ್ಟ್‌ನಲ್ಲಿ ಕಸದ ರಾಶಿಯಿಂದ ತುಂಬಿದ ಹೊರ ವರ್ತುಲ ರಸ್ತೆಯ ವಿಡಿಯೋ ಕಂಡುಬಂದಿದೆ. ಈ ದೃಶ್ಯವನ್ನು “ಅಸಹ್ಯಕರ” ಎಂದು ಕರೆದಿರುವ ಬಯೋಕಾನ್ ಮುಖ್ಯಸ್ಥೆ, “ಕೊಳಕು ಅವ್ಯವಸ್ಥೆಯನ್ನು ತ್ವರಿತವಾಗಿ ತೆರವುಗೊಳಿಸುವಂತೆ” ಬಿಬಿಎಂಪಿಗೆ ಕೋರಿದ್ದಾರೆ.

“ಅಸಹ್ಯಕರ ನೋಟ. @BBMPSWMSplComm ಈ ಕೊಳಕು ಅವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ತ್ವರಿತವಾಗಿ ಕಾರ್ಯನಿರ್ವಹಿಸಬೇಕಾಗಿದೆ” ಎಂದು ಅವರು ಮೂಲ ವೀಡಿಯೊವನ್ನು ಟ್ವೀಟ್ ಮಾಡಿ Xನಲ್ಲಿ ಬರೆದಿದ್ದಾರೆ. ಕಿರಣ್‌ ಶಾ ಅವರ ಪೋಸ್ಟ್‌ಗೆ ತೀಕ್ಷ್ಣವಾದ ಕಾಮೆಂಟ್‌ಗಳು ಎಕ್ಸ್‌ನಲ್ಲಿ ಬಳಕೆದಾರರಿಂದ ಬಂದಿವೆ. ವೀಡಿಯೊ ಈಗ ವೈರಲ್ ಆಗುತ್ತಿದೆ. ಅನೇಕ X ಬಳಕೆದಾರರು ತಕ್ಷಣದ ಕ್ರಮಕ್ಕಾಗಿ ಕರೆ ನೀಡಿದ್ದಾರೆ.

ಹಲವಾರು ಜನರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಂತಹ ದೃಶ್ಯವು ಇತರ ನಗರಗಳಲ್ಲಿಯೂ ದುರದೃಷ್ಟವಶಾತ್ ಸಾಮಾನ್ಯವಾಗಿದೆ ಎಂದಿದ್ದಾರೆ ಕೆಲವರು. ಆದಾಗ್ಯೂ, ನಾಗರಿಕರು ಮೂಲಭೂತ ನಾಗರಿಕ ಪ್ರಜ್ಞೆಯನ್ನು ಹೊಂದಿರಬೇಕು ಮತ್ತು ಬೀದಿಗಳನ್ನು ಸ್ವಚ್ಛವಾಗಿಡಲು ಪ್ರಯತ್ನಿಸಬೇಕು ಎಂದು ಕೆಲವರು ಹೇಳಿದ್ದಾರೆ.

“ಇನ್ನೂ ನಾಚಿಕೆಗೇಡಿನ ಸಂಗತಿಯೆಂದರೆ ಹೆಚ್ಚಿನ ಅನಿವಾಸಿಗಳು, ಕಾನ್ಸುಲೇಟ್‌ಗಳು, ಮಂತ್ರಿಗಳು, ಬಿಬಿಎಂಪಿಯ ಉನ್ನತ ಅಧಿಕಾರಿಗಳು ಸಹ ಈ ಪ್ರದೇಶದಲ್ಲಿಯೇ ಇರುತ್ತಾರೆ ಮತ್ತು ಅವರು ಪ್ರತಿದಿನ ಈ ಮಾರ್ಗದಲ್ಲಿ ಪ್ರಯಾಣಿಸುತ್ತಾರೆ! ಇಂತಹ ಕೊಳಕು ಅಭ್ಯಾಸಗಳನ್ನು ಪ್ರದರ್ಶಿಸುವ ಮೂಲಕ ನಾವು ನಮ್ಮ ನಗರವನ್ನು ಮಾತ್ರವಲ್ಲದೆ ನಮ್ಮ ರಾಷ್ಟ್ರವನ್ನೂ ಸಹ ಹತಾಶಗೊಳಿಸುತ್ತಿದ್ದೇವೆ” ಎಂದಿದ್ದಾರೆ ಬಳಕೆದಾರರೊಬ್ಬರು.

ಮತ್ತೊಬ್ಬರು, “ಪ್ರತಿಯೊಂದು ಮೊದಲ ಹಂತದ ಹಾಗೂ ಎರಡನೇ ಹಂತದ ನಗರಗಳಲ್ಲಿ ಇದು ಇಂದು ಕಾಣಬರುವ ದುರಂತ ಸನ್ನಿವೇಶ. ಸಾರ್ವಜನಿಕ ಕಸದ ತೊಟ್ಟಿಗಳಿಲ್ಲ. ಆದ್ದರಿಂದ ಜನರು ತಮಗಿಷ್ಟ ಬಂದ ಕಡೆ ಕಸ ಎಸೆಯುತ್ತಾರೆ. ನಾಗರಿಕ ಸಂಸ್ಥೆಗಳು ಸಾರ್ವಜನಿಕ ಕಸದ ಬುಟ್ಟಿಗಳನ್ನು ಸ್ಥಾಪಿಸಲು, ಬಳಸಲು ಮತ್ತು ನಿರ್ವಹಿಸಲು ಮುಂದಾಗದ ಹೊರತು ಇದು ಮುಂದುವರಿಯುತ್ತದೆ” ಎಂದಿದ್ದಾರೆ.

“ಬೆಂಗಳೂರಿನ ಪ್ರತಿಯೊಂದು ಪ್ರದೇಶವೂ ಈ ರೀತಿಯ ರಸ್ತೆಗಳನ್ನು ಹೊಂದಿದೆ. ಮೊದಲು ಜನರಿಗೆ ಶಿಕ್ಷಣ ನೀಡಬೇಕು ಮತ್ತು ಶಿಕ್ಷೆ ನೀಡಬೇಕು” ಎಂದಿದ್ದಾರೆ ಮತ್ತೊಬ್ಬರು. “ಮೆಟ್ರೋ ನಿಲ್ದಾಣಗಳು, ಡಿವೈಡರ್‌ಗಳ ಬಳಿ ಜನರು ತ್ಯಾಜ್ಯವನ್ನು ಎಸೆಯುವುದನ್ನು ನಾನು ಗಮನಿಸಿದ್ದೇನೆ. ಇದು ರಾತ್ರಿ ಸಮಯದಲ್ಲಿ ನಡೆಯುತ್ತದೆ. ಈ ಸ್ಥಳಗಳಲ್ಲಿ ಪದೇ ಪದೆ ಕಸ ಸುರಿಯುವವರನ್ನು ಗುರುತಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದರ ಜೊತೆಗೆ ಅಪರಾಧಿಗಳಿಗೆ ಭಾರಿ ದಂಡ ವಿಧಿಸಬೇಕಾಗಿದೆ” ಎಂದು ಮತ್ತೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Prajwal Revanna Case: ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿದೆ.‌ ಎಲ್ಲಿಂದ, ಯಾವಾಗ ಸಂಸದ ಆಗಮಿಸಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Prajwal Revanna Case
Koo
VISTARA-EXCLUSIVE

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಎಸ್‌ಐಟಿ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಇಂದೇ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಹೌದು, ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ (Vistara Exclusive) ಲಭ್ಯವಾಗಿದೆ.‌ ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ನಾಳೆ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಇಂದು ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬಂದ ಕೂಡಲೇ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ್ದು, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ | HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು. ಇದೀಗ ಅವರು ಇಂದೇ ದೇಶಕ್ಕೆ ಆಗಮಿಸುವ ಮಾಹಿತಿ ಲಭ್ಯವಾಗಿದೆ.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎನ್ನಲಾಗಿದೆ.

ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

HD Revanna Released first reaction after release will be acquitted of all charges

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Released) ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ರೇವಣ್ಣ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಇದನ್ನೂ ಓದಿ | HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Continue Reading

ಉಡುಪಿ

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, 7 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (Karnataka Weather Forecast) ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಮತ್ತು ಮೈಸೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಳೆಯು ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ.

ಇದನ್ನು ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು ಗಂಟೆಗೆ 40-50 ಕಿ.ಮೀ ಇರಲಿದೆ. ಹೀಗಾಗಿ ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dolly Dhananjay Kotie Cinema Kannada
ಸ್ಯಾಂಡಲ್ ವುಡ್7 mins ago

Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

terror module
ದೇಶ12 mins ago

Terror Module Bust: ಪಂಜಾಬ್‌ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ನಾಲ್ವರು ಅರೆಸ್ಟ್‌

woman murder case
ಕ್ರೈಂ16 mins ago

Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

Rashmika Mandanna Reacts To India Decade of Growth Amid Lok Sabha Polls
ಟಾಲಿವುಡ್35 mins ago

Rashmika Mandanna: ʻನಮೋʼ ಸಾಧನೆಗೆ ಕಿರಿಕ್‌ ಬ್ಯೂಟಿ ರಶ್ಮಿಕಾ ಕ್ಲೀನ್‌ ಬೋಲ್ಡ್‌!

Job Alert
ಉದ್ಯೋಗ46 mins ago

Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

viral video garbage bengaluru roads
ವೈರಲ್ ನ್ಯೂಸ್1 hour ago

Viral video: ʼಅಸಹ್ಯಕರ!ʼ ಬೆಂಗಳೂರಿನ ರಸ್ತೆಗಳ ಕಸದ ವಿಡಿಯೋ ಪೋಸ್ಟ್‌ ಮಾಡಿದ ಕಿರಣ್ ಮಜುಂದಾರ್ ಶಾ

Stone pelting
ದೇಶ1 hour ago

Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

Crowd Funding
ದೇಶ1 hour ago

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

copper mine lift collapse
ಪ್ರಮುಖ ಸುದ್ದಿ2 hours ago

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ14 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202416 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202420 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ20 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು22 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌