BJP Karnataka : ಬಿಜೆಪಿ ಕಾರ್ಯಕಾರಿಣಿ ಆರಂಭ; 28ಕ್ಕೆ 28 ಗೆಲ್ಲಲೇ ಬೇಕು ಎಂದ ಬಿಎಸ್‌ವೈ - Vistara News

ಬೆಂಗಳೂರು

BJP Karnataka : ಬಿಜೆಪಿ ಕಾರ್ಯಕಾರಿಣಿ ಆರಂಭ; 28ಕ್ಕೆ 28 ಗೆಲ್ಲಲೇ ಬೇಕು ಎಂದ ಬಿಎಸ್‌ವೈ

BJP Karnataka : ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭಗೊಂಡಿದೆ. ಇದರಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ್‌ ಅವರು ಲೋಕಸಭೆಯ ಎಲ್ಲ 28 ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದರು.

VISTARANEWS.COM


on

BJP Karnataka BS Yediyurappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಗೆ (Parliament Election 2024) ಸಿದ್ಧವಾಗುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ಮಹತ್ವದ ಬಿಜೆಪಿ ರಾಜ್ಯ ಕಾರ್ಯಕಾರಿಣಿ (BJP State Executive Meeting) ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರಂಭವಾಗಿದೆ (BJP Karnataka). ಕೇಂದ್ರ ಸಚಿವ ಭೂಪೇಂದ್ರ ಯಾದವ್, ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.‌ ಯಡಿಯೂರಪ್ಪ (BS Yediyurappa), ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಮತ್ತು ಇತರ ನಾಯಕರು ಭಾಗವಹಿಸಿದ್ದಾರೆ. ವೇದಿಕೆಯ ಮೇಲೆ ಇಟ್ಟ ಶ್ರೀರಾಮ ಚಂದ್ರನ ಕಂಚಿನ ಮೂರ್ತಿಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಕಾರ್ಯಕಾರಿಣಿ ಸಭೆಯ ಉದ್ಘಾಟನೆ ನಡೆಯಿತು. ನಾಯಕರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

BJP Karnataka  State Executive meet

BJP Karnataka: ಲೋಕಸಭಾ ಸಮರ ದೊಡ್ಡ ಸತ್ವಪರೀಕ್ಷೆ: ಯಡಿಯೂರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಬಿ.ಎಸ್‌. ಯಡಿಯೂರಪ್ಪ ಅವರು, ಮುಂದಿನ ಲೋಕಸಭಾ ಸಮರವು ನಮ್ಮೆಲ್ಲರಿಗೆ ಬಹುದೊಡ್ಡ ತಿರುವಿನ ಸತ್ವ ಪರೀಕ್ಷೆಯಾಗಿದೆ ಎಂದು ಹೇಳಿದರು.

2019ರಲ್ಲಿ 26 ಸ್ಥಾನಗಳನ್ನು ಗೆಲ್ಲಲಾಗಿತ್ತು. ಇದು ಜನರ ಸಂಕಲ್ಪ ಶಕ್ತಿಯಾಗಿತ್ತು. ಈ ಬಾರಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿಯವರಿಗೆ ನಮ್ಮದೇ ಆದ ಕೊಡುಗೆ ನೀಡಬೇಕಿದೆ ಎಂದು ಹೇಳಿದರು.

BJP Karnataka BS Yediyurappa

ಜನರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಕಲಹದಲ್ಲಿ ತೊಡಗಿದೆ. ಇವರ ಕಚ್ಚಾಟದಿಂದ ಅಧಿಕಾರ ಕುಸಿದುಬಿದ್ದಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆಕ್ಷೇಪಿಸಿದರು. ಇದರ ನಡುವೆಯೂ ಅವರು ದುರ್ಮಾರ್ಗದಲ್ಲಿ ಮತ ಗಳಿಸುವ ಕುತಂತ್ರ ನಡೆಸಿದ್ದಾರೆ. ಜನರಿಗೆ ವಾಸ್ತವ ಮನವರಿಕೆ ಮಾಡಿಕೊಡುವ ಸವಾಲು ನಮ್ಮ ಮುಂದಿದೆ ಎಂದು ತಿಳಿಸಿದರು.

BJP Karnataka  BJP Executive Meet

ಜನರು ಈ ಸರಕಾರದ ಬಗ್ಗೆ ಬೇಸತ್ತು ಹಿಡಿಶಾಪ ಹಾಕುತ್ತಿದ್ದಾರೆ. ಈ ಸರಕಾರಕ್ಕೆ ಬರಗಾಲದಲ್ಲಿ ರೈತರ ಕಣ್ಣೀರು ಒರೆಸಲು ಆಗಿಲ್ಲ. ಹೆಣ್ಮಕ್ಕಳ ಮಾನ ರಕ್ಷಿಸಲು ಸಾಧ್ಯವಾಗಿಲ್ಲ. ಅರಾಜಕತೆ ರಾಜ್ಯದಲ್ಲಿ ತಾಂಡವವಾಡುತ್ತಿದೆ. ಇದೆಲ್ಲವನ್ನು ನೋಡುತ್ತ ಸುಮ್ಮನಿರಲು ಅಸಾಧ್ಯ. ಜನರ ಪರವಾಗಿ, ರಾಜ್ಯದ ಪರವಾಗಿ ನಿಂತು ಹೋರಾಟ ಮಾಡೋಣ ಎಂದು ತಿಳಿಸಿದರು.

ಬಿಜೆಪಿಗೆ ಜಗದೀಶ ಶೆಟ್ಟರ್ ಸೇರಿದ್ದು, ನಮಗೊಂದು ದೊಡ್ಡ ಶಕ್ತಿಯನ್ನು ಕೊಟ್ಟಿದೆ. ಅವರಿಗೆ ವಿಶೇಷ ಸ್ವಾಗತ ಎಂದರು. ನೂತನ ರಾಜ್ಯ, ಜಿಲ್ಲಾ ಪದಾಧಿಕಾರಿಗಳನ್ನು ಅವರು ಅಭಿನಂದಿಸಿದರು.

BJP Karnataka  BJP Executive Meet

BJP Karnataka: ಕಾರ್ಯಕಾರಿಣಿಯಲ್ಲಿ ಮಿಂಚಿದ ಜಗದೀಶ್‌ ಶೆಟ್ಟರ್‌

ಬಿವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ನಡೆಯುತ್ತಿರುವ ಮೊದಲ ಕಾರ್ಯಕಾರಿಣಿ ಇದಾಗಿದ್ದು, ಇದಕ್ಕೆ ಎರಡು ದಿನಗಳ ಹಿಂದಷ್ಟೇ ಮರಳಿ ಬಿಜೆಪಿ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕೂಡಾ ಆಗಮಿಸಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾರ್ಯಕಾರಿಣಿ ಸಭೆಗೆ ಆಗಮಿಸುತ್ತಿದ್ದಂತೆಯೇ ಶಾಸಕರು ಮತ್ತು ಕಾರ್ಯಕರ್ತರು ಅವರನ್ನು ಅಭಿನಂದಿಸಲು ಮುಗಿಬಿದ್ದರು. ಶಾಸಕ ಪ್ರಭು ಚೌಹಾಣ್, ಶರಣು ಸಲಗಾರ್ ಅವರು ಶೆಟ್ಟರ್‌ ಕಾಲಿಗೆ ಬಿದ್ದರು. ಶೆಟ್ಟರ್ ಜೊತೆಯಲ್ಲಿ ಶಿಷ್ಯ ಶಂಕರ್ ಪಾಟೀಲ್ ಮುನೇನಕೊಪ್ಪ ಕೂಡಾ ಇದ್ದರು.

ಇದನ್ನೂ ಓದಿ: BJP Karnataka: ಫೆ.9ರಿಂದ ಗ್ರಾಮ ಚಲೋ ಅಭಿಯಾನ; ಹೇಗಿರಲಿದೆ ಕಾರ್ಯತಂತ್ರ?

BJP Karnataka: ಯಾರೆಲ್ಲ ಪ್ರಮುಖ ನಾಯಕರು ಭಾಗಿ

ರಾಜ್ಯ ಕಾರ್ಯಕಾರಿಣಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್, ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್. ಮಾಜಿ ಸಿಎಂಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ಮಾಜಿ ಡಿಸಿಎಂಗಳಾದ ಈಶ್ವರಪ್ಪ, ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ್, ಮಾಜಿ ಸಚಿವ ಸಿ.ಟಿ ರವಿ ಭಾಗವಹಿಸಿದ್ದಾರೆ.

BJP Karnataka  BJP Executive Meet

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್, ಭಗವಂತ ಖೂಬಾ ಅವರೂ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ನಿಕಟ ಪೂರ್ವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್, ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಉಪಸ್ಥಿತರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Prajwal Revanna Case: ಅಪಹರಣಕ್ಕೀಡಾದ ಸಂತ್ರಸ್ತೆಯು ಪ್ರಾಣಭಯದಿಂದ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸದಂತಹ ಸ್ಥಿತಿಗೆ ತಲುಪಿದ್ದಾರೆ. ಎಸ್‌ಐಟಿ ಅಧಿಕಾರಿಗಳ ಭದ್ರತೆ ಇದ್ದರೂ, ಅವರನ್ನು ಬೆಂಗಳೂರಿಗೆ ಕರೆಸಿಕೊಂಡರೂ, ರೇವಣ್ಣ ಕುಟುಂಬಸ್ಥರ ದೌರ್ಜನ್ಯದ ಕುರಿತು ಅವರು ಯಾವುದೇ ಮಾಹಿತಿ ನೀಡಲು ಹಿಂಜರಿಯುತ್ತಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್‌ ರೇವಣ್ಣ (Prajwal Revanna) ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇಡೀ ಪ್ರಕರಣವು ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ತಂದಿದೆ. ಇದರ ಬೆನ್ನಲ್ಲೇ, ಅಪಹರಣಕ್ಕೀಡಾದ ಸಂತ್ರಸ್ತೆಯು ಪ್ರಾಣಭಯದಿಂದ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸದಂತಹ ಸ್ಥಿತಿಗೆ ತಲುಪಿದ್ದಾರೆ.

ಹೌದು, ಎಚ್‌.ಡಿ.ರೇವಣ್ಣ ಸಂಬಂಧಿಯಾದ ಸತೀಶ್‌ ಬಾಬಣ್ಣ ಎಂಬಾತನು ಲೈಂಗಿಕ ದೌರ್ಜನ್ಯಕೀಡಾದ ಸಂತ್ರಸ್ತೆಯನ್ನು ಅಪಹರಿಸಿ, ಹುಣಸೂರಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇರಿಸಿದ್ದು, ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಭದ್ರತೆ ದೃಷ್ಟಿಯಿಂದ ಮಹಿಳೆಯನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅವರು ತನಿಖಾಧಿಕಾರಿಗಳ ಎದುರು ಎಲ್ಲವನ್ನೂ ಹೇಳಲು ಆಗುತ್ತಿಲ್ಲ. ಇದರಿಂದಾಗಿ ಪ್ರಕರಣದಲ್ಲಿ ಮಹತ್ವದ ಪ್ರಗತಿ ಸಾಧಿಸಲು ಎಸ್‌ಐಟಿ ಅಧಿಕಾರಿಗಲು ಹೆಣಗಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂತ್ರಸ್ತೆಯನ್ನು ಅಪಹರಿಸಿ ಇರಿಸಲಾಗಿದ್ದ ಹುಣಸೂರಿನ ತೋಟದ ಮನೆ.

“ನಮ್ಮನ್ನೆಲ್ಲ ಅವರು ಸಾಯಿಸಿಬಿಡ್ತಾರೆ. ನನಗೆ ಭಯವಾಗುತ್ತಿದೆ” ಎಂದಷ್ಟೇ ಮಹಿಳೆಯು ಹೇಳುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಭದ್ರತೆ ಕುರಿತು ಎಷ್ಟು ಹೇಳಿದರೂ ಮಹಿಳೆಯು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಏನಾದರೂ ಮಾಡಿಬಿಡುತ್ತಾರೆ ಎಂಬ ಭಯ ಕಾಡುತ್ತಿದೆ. ಇದರ ಬೆನ್ನಲ್ಲೇ, ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣದ ಕುರಿತು ಕೇಸ್‌ ದಾಖಲಿಸಿದ ಪುತ್ರನಿಗೂ ಜೀವ ಭಯ ಕಾಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಲು ಎಸ್‌ಐಟಿ ಅಧಿಕಾರಿಗಳು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್‌ ಶರಣಾಗತಿ?

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಇದನ್ನೂ ಓದಿ: HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

Continue Reading

ಕರ್ನಾಟಕ

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

Bangalore To Belagavi Train: ಮೇ 6ರಂದು ಬೆಂಗಳೂರಿನಿಂದ ಹುಬ್ಬಳ್ಳಿ- ಧಾರವಾಡ, ಬೆಳಗಾವಿಗೆ ವಿಶೇಷ ರೈಲು ಸಂಚರಿಸಲಿದೆ. ಪ್ರಯಾಣಿಕರು ಈ ವಿಶೇಷ ರೈಲಿನ ಸೌಲಭ್ಯ ಪಡೆದುಕೊಳ್ಳಬಹುದು.

VISTARANEWS.COM


on

Bangalore To Belagavi Train
Koo

ಹುಬ್ಬಳ್ಳಿ: ಮೇ 6ರಂದು ಬೆಂಗಳೂರಿನಿಂದ ಹುಬ್ಬಳ್ಳಿ- ಧಾರವಾಡ, ಬೆಳಗಾವಿಗೆ ವಿಶೇಷ ರೈಲು (Bangalore To Belagavi Train) ಸಂಚರಿಸಲಿದ್ದು, ಪ್ರಯಾಣಿಕರು ಈ ವಿಶೇಷ ರೈಲಿನ ಸೌಲಭ್ಯ ಪಡೆದುಕೊಳ್ಳಬಹುದು ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಸೋಮವಾರ ರಾತ್ರಿ 9.55ಕ್ಕೆ ರೈಲು ನಂ. 07319/07320 ಬೆಂಗಳೂರಿನ ಯಶವಂತಪುರದಿಂದ ಹೊರಟು ತುಮಕೂರು-ಅರಸೀಕೆರೆ-ದಾವಣಗೆರೆ-ಹಾವೇರಿ ಮಾರ್ಗವಾಗಿ ಹುಬ್ಬಳ್ಳಿ-ಧಾರವಾಡಕ್ಕೆ ಬೆಳಗ್ಗೆ 5 ಗಂಟೆಗೆ ತಲುಪಲಿದೆ. ನಂತರ ಗೋಕಾಕ್‌-ಘಟಪ್ರಭಾ-ರಾಯಭಾಗ-ಕುಡಚಿ ಮಾರ್ಗವಾಗಿ ಬೆಳಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ.

ಮೇ 7ರಂದು ರಾತ್ರಿ 9.10ಕ್ಕೆ ಧಾರವಾಡದಿಂದ 9.55ಕ್ಕೆ ಹುಬ್ಬಳ್ಳಿಯಿಂದ ಮರಳಿ ಬೆಂಗಳೂರಿಗೆ ಹೊರಡಲಿದೆ. ಪ್ರಯಾಣಿಕರು ಈ ವಿಶೇಷ ರೈಲಿನ ಸೌಲಭ್ಯ ಪಡೆದುಕೊಳ್ಳಬಹುದು ಎಂದು ತಿಳಿಸಿದೆ.

ಇದನ್ನೂ ಓದಿ | Train Ticket Cancellation: ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಆರ್‌ಎಸಿ ಟಿಕೆಟ್‌ ರದ್ದು ಪಡಿಸಿದರೆ ಇನ್ನು ಮುಂದೆ ಕೇವಲ 60 ರೂ. ಕಡಿತ

ಮಂತ್ರಾಲಯಕ್ಕೆ ಒಂದೇ ದಿನದಲ್ಲಿ ಹೋಗಿ ಬರಬೇಕೆ? ಈ ರೈಲುಗಳಲ್ಲಿ ಹೊರಡಿ

Mantralaya Tour

ಬೆಂಗಳೂರು: ಮಂತ್ರಾಲಯ ಅತ್ಯಂತ ಪ್ರಸಿದ್ಧ ಯಾತ್ರಾಸ್ಥಳ. ಆಂಧ್ರಪ್ರದೇಶ ಮತ್ತು ಕರ್ನಾಟಕದ ಗಡಿಯಲ್ಲಿರುವ ತುಂಗಾಭದ್ರಾ ನದಿಯ ದಡದಲ್ಲಿದೆ. ಇಲ್ಲಿಗೆ ಹೋಗಿ ಶ್ರೀ ಗುರುರಾಘವೇಂದ್ರ ಸ್ವಾಮಿಯ ದರ್ಶನ ಪಡೆಯಲು ಪ್ರತಿಯೊಬ್ಬರೂ ತವಕಿಸುತ್ತಾರೆ. ನೀವು ಒಂದೇ ದಿನದಲ್ಲೂ ಮಂತ್ರಾಲಯಕ್ಕೆ ಹೋಗಿಬರಲು ಸಾಧ್ಯವಿದೆ. ಆದರೆ ಎಲ್ಲಾ ಟ್ರೈನ್‌ಗಳು ಒಂದೇ ದಿನದಲ್ಲಿ ಮಂತ್ರಾಲಯಕ್ಕೆ (Mantralaya Tour) ಹೋಗಿ ಬರಲು ಅನುಕೂಲಕರವಾಗಿಲ್ಲ. ಹಾಗಾಗಿ ಒಂದೇ ದಿನದಲ್ಲಿ ಮಂತ್ರಾಲಯಕ್ಕೆ ಹೋಗಿ ಬರಲು ಯಾವ ಟ್ರೈನ್ ಸೂಕ್ತ ಎಂಬ ಮಾಹಿತಿ ಇಲ್ಲಿದೆ ನೋಡಿ.

ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗಲು ʼಬಸವ ಎಕ್ಸ್ ಪ್ರೆಸ್ʼ ಬಹಳ ಸೂಕ್ತ. ಇದು ಬೆಂಗಳೂರು ಕೆಂಪೇಗೌಡ ರೈಲು ನಿಲ್ದಾಣದಿಂದ ಸಂಜೆ 4.49ಕ್ಕೆ ಹೊರಟು ಮಧ್ಯರಾತ್ರಿ 12.09ಕ್ಕೆ ಮಂತ್ರಾಲಯಕ್ಕೆ ತಲುಪುತ್ತದೆ.

ನಾಂದೇಡ್ ಎಕ್ಸ್ ಪ್ರೆಸ್ ರೈಲು ರಾತ್ರಿ 11.39ಕ್ಕೆ ಹೊರಟು ಬೆಳಗ್ಗೆ 7.09ಕ್ಕೆ ಮಂತ್ರಾಲಯ ತಲುಪುತ್ತದೆ.

ಕರ್ನಾಟಕ ಎಕ್ಸ್ ಪ್ರೆಸ್  ಟ್ರೈನ್ ಕೆಂಪೇಗೌಡ ರೈಲು ನಿಲ್ದಾಣದಿಂದ ಸಂಜೆ 7.20ಕ್ಕೆ ಹೊರಟು ಬೆಳಗಿನ ಜಾವ 2.24ರ ಹೊತ್ತಿಗೆ ಮಂತ್ರಾಲಯ ತಲುಪಲಿದೆ.

ಲಾತೂರ್ ಎಕ್ಸ್ ಪ್ರೆಸ್ ಟ್ರೈನ್ ಯಶವಂತಪುರ ಟ್ರೈನ್ ಸ್ಟೇಷನ್ ನಿಂದ ಸಂಜೆ 7.15ಕ್ಕೆ ಹೊರಟು ಬೆಳಗಿನ ಜಾವ 1.20ಕ್ಕೆ ಮಂತ್ರಾಲಯ ತಲುಪಲಿದೆ.

ಎಲ್ಲೆಲ್ಲಿ ಹೋಗಬಹುದು?

ಈ ಎಲ್ಲಾ ಟ್ರೈನ್ ಗಳು ಮಂತ್ರಾಲಯ ರೋಡ್ ರೈಲ್ವೇ ಸ್ಟೇಷನ್ ತಲುಪುತ್ತದೆ. ಅಲ್ಲಿಂದ ಮಂತ್ರಾಲಯ ಮಠಕ್ಕೆ 15 ಕಿ.ಮೀ ದೂರವಿದೆ. ಹಾಗಾಗಿ ನೀವು  ರೈಲ್ವೇ ಸ್ಟೇಷನ್ ನಿಂದ ಆಟೋ, ಕ್ಯಾಬ್ ಮಾಡಿಕೊಂಡು ಮಂತ್ರಾಲಯದ ಮಠಕ್ಕೆ ತಲುಪಬಹುದು. ಹಾಗೇ ಮಂತ್ರಾಲಯದಲ್ಲಿ ನಿಮಗೆ ವಿಶ್ರಾಂತಿ ಪಡೆಯಲು ರೂಂಗಳ ವ್ಯವಸ್ಥೆ ಇದೆ. ಹಾಗಾಗಿ ನೀವು ರೂಂ ಬುಕ್ ಮಾಡಿ ಅಲ್ಲಿ ಸ್ನಾನಾದಿಗಳನ್ನು ಮುಗಿಸಿ ನಂತರ ರಾಯರ ದರ್ಶನ ಪಡೆಯಬಹುದು. ಅಲ್ಲಿ ರಾಯರ ಬೃಂದಾವನ ದರ್ಶನ ಮಾಡಿ. ಮಂತ್ರಾಲಯದಿಂದ ಸ್ವಲ್ಪ ದೂರದಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ಹೋಗಬಹುದು.

ವಾಪಸ್‌ ಬರಲು ಯಾವ ರೈಲು?:

ಮಂತ್ರಾಲಯದಲ್ಲಿ ರಾಯರ ದರ್ಶನ ಮುಗಿದ ಬಳಿಕ ವಾಪಸ್ ಬೆಂಗಳೂರು ತಲುಪಲು ಮಂತ್ರಾಲಯದಿಂದ ಟ್ರೈನ್ ವ್ಯವಸ್ಥೆ ಇದೆ. ನಾಂದೇಡ್ ಎಕ್ಸ್ ಪ್ರೆಸ್ ರೈಲು ರಾತ್ರಿ 8.45ಕ್ಕೆ ಮಂತ್ರಾಲಯದಿಂದ ಹೊರಟು ಬೆಳಗ್ಗೆ 4 ಗಂಟೆಗೆ ಕೆಂಪೇಗೌಡ ರೈಲು ನಿಲ್ದಾಣವನ್ನು ತಲುಪಲಿದೆ. ಅಲ್ಲದೇ ಉದ್ಯಾನ ಎಕ್ಸ್ ಪ್ರೆಸ್ ರಾತ್ರಿ 8.45ಕ್ಕೆ ಮಂತ್ರಾಲಯ ರೈಲ್ವೇ ಸ್ಟೇಷನ್ ನಿಂದ ಹೊರಟು ಬೆಳಗ್ಗೆ 6 ಗಂಟೆಗೆ ಕೆಂಪೇಗೌಡ ರೈಲು ನಿಲ್ದಾಣ ತಲುಪುತ್ತದೆ.

ಇದನ್ನೂ ಓದಿ:

ಹಾಗಾಗಿ ನೀವು ಈ ರೈಲುಗಳ ಮೂಲಕ ಒಂದೇ ದಿನದಲ್ಲಿ ಮಂತ್ರಾಲಯಕ್ಕೆ ಪ್ರಯಾಣ ಮಾಡಬಹುದು. ರಜಾ ದಿನಗಳಲ್ಲಿ ನಿಮ್ಮ ಕುಟುಂಬದವರು, ಸ್ನೇಹಿತರ ಜೊತೆಯಲ್ಲಿ ಮಂತ್ರಾಲಯದ ರಾಯರ ದರ್ಶನ ಪಡೆಯಬಹುದು.

Continue Reading

ಕರ್ನಾಟಕ

HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

HD Revanna: ಹೊಳೆನರಸಿಪುರದಲ್ಲಿರುವ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಗಣಪತಿ ಹೋಮ ಮಾಡಿಸಲಾಗಿತ್ತು. ಅಲ್ಲದೆ, ನಿರೀಕ್ಷಣಾ ಜಾಮೀನು ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ ಎಂಬುದಾಗಿ ಜ್ಯೋತಿಷಿಯೊಬ್ಬರು ಹೇಳಿದ್ದರು. ಇದರಿಂದಾಗಿ ತುಸು ನಿರಾಳರಾಗಿದ್ದ ಎಚ್‌.ಡಿ.ರೇವಣ್ಣ ಅವರು ಎಚ್‌.ಡಿ.ದೇವೇಗೌಡರ ನಿವಾಸದಲ್ಲಿಯೇ ನಿಶ್ಚಿಂತೆಯಿಂದ ಇದ್ದರು. ಯಾವ ಪ್ರಯತ್ನವೂ ಫಲಿಸಲಿಲ್ಲ. ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸುತ್ತಲೇ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದರು.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಿಐಡಿ ಕಚೇರಿಯಲ್ಲಿ ವೈದ್ಯಕೀಯ ಪರೀಕ್ಷೆ (Medical Test) ನಡೆಸಲಾಗುತ್ತಿದೆ. ಇನ್ನು, ಪ್ರಕರಣದಲ್ಲಿ ಯಾವುದೇ ತೊಂದರೆಯಾಗದಿರಲಿ ಎಂದು ಎಚ್‌.ಡಿ.ರೇವಣ್ಣ ಅವರು ಮಾಡಿಸಿದ ಹೋಮ, ಇವರ ಕುರಿತು ಜ್ಯೋತಿಷಿ ನೀಡಿದ ಭವಿಷ್ಯ ಸುಳ್ಳಾಗಿದೆ. ಅವರು ಯಾವಾಗಲೂ ಹಿಡಿದುಕೊಂಡು ತಿರುಗಾಡುತ್ತಿದ್ದ ನಿಂಬೆ ಹಣ್ಣು ಕೂಡ ಮತ್ತಷ್ಟು ಹುಳಿ ಆಗಿದೆ.

ಹೌದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಯಾವುದೇ ಸಮಸ್ಯೆ ಎದುರಾಗದಿರಲಿ, ಮಗ ಬಚಾವಾಗಲಿ, ಜಾಮೀನು ಸಿಗಲಿ ಎಂಬುದು ಸೇರಿ ಹಲವು ದೃಷ್ಟಿಯಿಂದ ಬುಧವಾರ (ಮೇ 1) ಸಂಜೆ ಹೊಳೆನರಸಿಪುರದಲ್ಲಿರುವ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಗಣಪತಿ ಹೋಮ ಮಾಡಿಸಲಾಗಿತ್ತು. ಅಲ್ಲದೆ, ನಿರೀಕ್ಷಣಾ ಜಾಮೀನು ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ ಎಂಬುದಾಗಿ ಜ್ಯೋತಿಷಿಯೊಬ್ಬರು ಹೇಳಿದ್ದರು. ಇದರಿಂದಾಗಿ ತುಸು ನಿರಾಳರಾಗಿದ್ದ ಎಚ್‌.ಡಿ.ರೇವಣ್ಣ ಅವರು ಎಚ್‌.ಡಿ.ದೇವೇಗೌಡರ ನಿವಾಸದಲ್ಲಿಯೇ ನಿಶ್ಚಿಂತೆಯಿಂದ ಇದ್ದರು. ಜಾಮೀನು ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವೂ ಅವರದ್ದಾಗಿತ್ತು ಎಂದು ತಿಳಿದುಬಂದಿದೆ.

ರೇವಣ್ಣ ಅಂದುಕೊಂಡಂತೆ ಯಾವುದೂ ಆಗಲಿಲ್ಲ. ಸುದೀರ್ಘ ವಾದ-ಪ್ರತಿವಾದ ಆಲಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಚ್‌.ಡಿ.ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಇದಾದ ಕೆಲ ಹೊತ್ತಿನಲ್ಲೇ ಎಚ್‌.ಡಿ.ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಪಡಿಸಿಕೊಂಡರು.

ಸಿಐಡಿ ಕಚೇರಿಯಲ್ಲಿ ಆಂಬುಲೆನ್ಸ್‌, ಅಲ್ಲೇ ವೈದ್ಯಕೀಯ ಪರೀಕ್ಷೆ

ಎಚ್‌.ಡಿ.ರೇವಣ್ಣ ಅವರನ್ನು ವಶಪಡಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು, ಭದ್ರತಾ ದೃಷ್ಟಿಯಿಂದ ಆಂಬುಲೆನ್ಸ್‌ ಹಾಗೂ ವೈದ್ಯರನ್ನೇ ಸಿಐಡಿ ಕಚೇರಿಗೆ ಕರೆಸಿದ್ದಾರೆ. ಭದ್ರತಾ ದೃಷ್ಟಿಯಿಂದಾಗಿ ವೈದ್ಯಕೀಯ ಪರೀಕ್ಷೆಗಾಗಿ ರೇವಣ್ಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯದೆ, ಆಂಬುಲೆನ್ಸ್‌ಅನ್ನು ಸಿಐಡಿ ಕಚೇರಿಗೆ ಕರೆಸಲಾಗಿದೆ. ಆಂಬುಲೆನ್ಸ್‌ನಲ್ಲಿಯೇ ಎಚ್‌.ಡಿ.ರೇವಣ್ಣ ಅವರ ವೈದ್ಯಕೀಯ ತಪಾಸಣೆ ಮಾಡಲಾಗುತ್ತದೆ.

ಪ್ರಜ್ವಲ್‌ ಶರಣಾಗತಿ?

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಇದನ್ನೂ ಓದಿ: HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Continue Reading

ಕರ್ನಾಟಕ

HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

HD Revanna: HD Revanna: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಲು ನಿರಾಕರಿಸಿತು. ಇದಾದ ಕೆಲ ಹೊತ್ತಿನಲ್ಲೇ, ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲಿಯೇ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದರು. ಇದಾದ ಬಳಿಕ ಎಚ್‌.ಡಿ.ಕುಮಾರಸ್ವಾಮಿ ಅವರು ಮಹತ್ವದ ಸಭೆ ನಡಸಿದ್ದು, ಎಚ್‌.ಡಿ.ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗುತ್ತದೆ ಎಂದು ತಿಳಿದುಬಂದಿದೆ.

VISTARANEWS.COM


on

HD Revanna
Koo

ಬೆಂಗಳೂರು: ಮಗ ಪ್ರಜ್ವಲ್‌ ರೇವಣ್ಣ (Prajwal Revanna) ಮಾಡಿದ್ದಾರೆ ಎನ್ನಲಾದ ತಪ್ಪಿಗೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಬಂಧಿತರಾಗಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು (SIT Officials) ವಶಪಡಿಸಿಕೊಂಡಿದ್ದು, ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊಗಳು ವೈರಲ್‌ ಆದ ಬಳಿಕ ವಿದೇಶಕ್ಕೆ ಪರಾರಿಯಾಗಿದ್ದು, ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಈಗ ಎಚ್‌.ಡಿ.ರೇವಣ್ಣ ಅವರನ್ನೂ ಅಮಾನತುಗೊಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸುತ್ತಲೇ ಮಾಜಿ ಸಿಎಂ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಜಿ.ಟಿ.ದೇವೇಗೌಡ ಸೇರಿ ಹಲವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣವು ಜೆಡಿಎಸ್‌ಗೆ ಮುಜುಗರ ತಂದಿದ್ದು, ಮೈತ್ರಿ ಪಕ್ಷವಾದ ಬಿಜೆಪಿಯೂ ಪ್ರಕರಣದಿಂದ ದಿನೇದಿನೆ ಅಂತರ ಕಾಪಾಡಿಕೊಳ್ಳುತ್ತಿದೆ. ಹಾಗಾಗಿ, ಎಚ್‌.ಡಿ.ರೇವಣ್ಣ ಅವರನ್ನೂ ಪಕ್ಷದಿಂದ ಅಮಾನತುಗೊಳಿಸಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗೊಂದು ವೇಳೆ ಅಮಾನತುಗೊಳಿಸಿದರೆ ತಂದೆ-ಮಗ ಇಬ್ಬರೂ ಅಮಾನತಾದಂತಾಗುತ್ತದೆ. ಮುಜುಗರ ತಪ್ಪಿಸಿಕೊಳ್ಳಲು ಕುಮಾರಸ್ವಾಮಿ ಅವರ ಬಳಿ ಇರುವ ಏಕೈಕ ಮಾರ್ಗ ಎಂದರೆ, ಅವರನ್ನು ಅಮಾನತುಗೊಳಿಸುವುದಾಗಿದೆ ಎಂದು ಹೇಳಲಾಗುತ್ತಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್‌ನಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ರೇವಣ್ಣ ಅವರನ್ನು ವಶಪಡಿಸಿಕೊಂಡಿರುವ ಕುರಿತು ಪ್ರಕ್ರಿಯೆ ಮುಗಿಸುವ ಅವರು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಿದ್ದಾರೆ. ಆದಾಗ್ಯೂ, ಬಂಧಿಸಿದ 24 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾದ ಕಾರಣ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆ ಬಳಿಕ ವಿಚಾರಣೆ ನಡೆಸಲಿದ್ದಾರೆ. ಇಲ್ಲವೇ, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ವಲ್‌ ಶರಣಾಗತಿ?

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಇದನ್ನೂ ಓದಿ: HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Continue Reading
Advertisement
HD Revanna
ಕರ್ನಾಟಕ1 hour ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ1 hour ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ1 hour ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ2 hours ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ2 hours ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ2 hours ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ2 hours ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ2 hours ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ3 hours ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ3 hours ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ20 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌