BJP Karnataka: ದೇಶದ ಅಭಿವೃದ್ಧಿಯ ಪಯಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು: ಬಿ.ವೈ. ವಿಜಯೇಂದ್ರ - Vistara News

ಬೆಂಗಳೂರು

BJP Karnataka: ದೇಶದ ಅಭಿವೃದ್ಧಿಯ ಪಯಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು: ಬಿ.ವೈ. ವಿಜಯೇಂದ್ರ

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಅವರಿಗೆ ವಿವಿಧ ಮೋರಚಾಗಳ ಸಮಾವೇಶದ ಹೊಣೆ ನೀಡಲಾಗಿದ್ದು, ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ.

VISTARANEWS.COM


on

bjp-karnataka-vice president BY Vijayendra speech
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದ ಅಭಿವೃದ್ಧಿಯ ಪಯಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು ಎಂದು ಬಿಜೆಪಿ (BJP Karnataka) ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಮಹದೇವಪುರದ ಶಂಕರ್ ಕಣ್ಣಿನ ಆಸ್ಪತ್ರೆ ಮುಂಭಾಗದ ಕುಂದಲಹಳ್ಳಿ ಗೇಟ್ ಸಿಗ್ನಲ್ ಮೈದಾನದಲ್ಲಿ ಇಂದು ನಡೆದ ಬಿಜೆಪಿ ಮಹಿಳಾ ಮೋರ್ಚಾ ಬೆಂಗಳೂರು ಕೇಂದ್ರ ಜಿಲ್ಲಾ ಸಮಾವೇಶದಲ್ಲಿ ಅವರು ಮಾತನಾಡಿದರು.

ನಮ್ಮ ಪ್ರಧಾನಿ ಮೋದಿಜಿ ಅವರು ಆಡಿದ್ದನ್ನೇ ಮಾಡಿ ತೋರಿಸಿದವರು. ದೇಶದ ಮೊದಲ ಪ್ರಜೆ ಇವತ್ತು ಮಹಿಳೆ ಎಂದು ಹೇಳಲು ನಮಗೆ ಹೆಮ್ಮೆ ಇದೆ. ದೇಶಕ್ಕೆ ಹಲವು ವರ್ಷಗಳಿಂದ ಬಜೆಟ್ ಕೊಟ್ಟವರೂ ಮಹಿಳೆ ನಿರ್ಮಲಾ ಸೀತಾರಾಮನ್ ಎನ್ನಲು ಹೆಮ್ಮೆ ಪಡುತ್ತೇವೆ.

ಮಹಿಳೆಯರು ಸಾಧಿಸಿದ ಪ್ರಗತಿಯ ಮಟ್ಟದಿಂದ ಸಮುದಾಯದ ಪ್ರಗತಿಯನ್ನು ಅಳೆಯಬೇಕಾಗುತ್ತದೆ ಎಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಇದೇ ಹಿನ್ನೆಲೆಯಲ್ಲಿ ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜಿ ಅವರು ಮಹಿಳೆಯರು ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಆಗುವುದಾಗಿ ಕನಸನ್ನು ಹೊತ್ತು ದೇಶದ ಅಭಿವೃದ್ಧಿಗೆ 17-18 ಗಂಟೆ ದುಡಿಯುತ್ತಿದ್ದಾರೆ.

2014ವರೆಗೆ 10 ವರ್ಷ ಆಡಳಿತ ನಡೆಸಿದ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ, ದೇಶವನ್ನು ಭ್ರಷ್ಟಾಚಾರದ ಸುಳಿಗೆ ಸಿಲುಕಿಸಿದರು. ಸಾವಿರಾರು ಕೋಟಿ ಮೊತ್ತದ ಭ್ರಷ್ಟಾಚಾರ ನಡೆದಿತ್ತು ಎಂದ ಅವರು, ಭ್ರಷ್ಟಾಚಾರದ ಕೂಸನ್ನು ಹುಟ್ಟಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದರು.

ಇದನ್ನೂ ಓದಿ: BY Vijayendra: ಬಿಎಸ್‌ವೈ ಇಲ್ಲದೆ ರಾಜ್ಯದಲ್ಲಿ ಬಿಜೆಪಿಗೆ ಚುನಾವಣೆ ಎದುರಿಸುವುದು ಸವಾಲು ಎಂದ ಪುತ್ರ ವಿಜಯೇಂದ್ರ

ಬೆಂಗಳೂರು ಕೇಂದ್ರ ಲೋಕಸಭಾ ಸಂಸದ ಪಿ.ಸಿ. ಮೋಹನ್‌ ಮಾತನಾಡಿ, ಭಾರತವು ವಿಶ್ವದಲ್ಲಿ ಐದನೇ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಪ್ರಮುಖ ಕಾರಣ ದೇಶದ ಮಹಿಳೆಯರು ಎಂದರು.

ಮಾಜಿ ಸಚಿವ ಅರವಿಂದ ಲಿಂಬಾವಳಿ, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಮುಖಂಡರಾದ ಮಾಳವಿಕಾ ಅವಿನಾಶ್, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ, ಮಹಿಳಾ ಮೋರ್ಚಾ ಬೆಂಗಳೂರು ಕೇಂದ್ರ ಜಿಲ್ಲೆ ಅಧ್ಯಕ್ಷೆ ರೇಖಾ ಕೆ. ಗೋವಿಂದ್ ಮತ್ತಿತರರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

DK Shivakumar: ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿದವರ ಮೇಲೆ ಕಠಿಣ ಕ್ರಮ; ಡಿ.ಕೆ.ಶಿವಕುಮಾರ್

DK Shivakumar: ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದಂತೆ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ. ಚನ್ನಗಿರಿ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ಪ್ರತ್ಯೇಕ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ ನಡೆಯುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಈ ವಿಚಾರದಲ್ಲಿ ಸರ್ಕಾರ ನಿಲುವು ಅಚಲವಾಗಿದೆ. ಗೃಹಸಚಿವರು ಈಗಾಗಲೇ ನಿರ್ದೇಶನ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM DK Shivakumar latest statement in Bengaluru
Koo

ಬೆಂಗಳೂರು: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದಂತೆ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ. ಚನ್ನಗಿರಿ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ಪ್ರತ್ಯೇಕ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ ನಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಈ ವಿಚಾರದಲ್ಲಿ ಸರ್ಕಾರ ನಿಲುವು ಅಚಲವಾಗಿದೆ. ಗೃಹಸಚಿವರು ಈಗಾಗಲೇ ನಿರ್ದೇಶನ ನೀಡಿದ್ದಾರೆ ಎಂದರು.

ಇದನ್ನೂ ಓದಿ: Kiccha Sudeep: ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ; ಇವರನ್ನು ನೋಡಲು ಜನವೋ ಜನ!

ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಒಂದು ತಿಂಗಳು ಪೂರೈಸಿದ್ದು, ಎಸ್ಐಟಿ ತನಿಖೆ ಎಲ್ಲಿಯವರೆಗೆ ಬಂದಿದೆ ಎಂಬ ವಿಚಾರವಾಗಿ ಕೇಳಿದಾಗ, “ತನಿಖೆ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ದೇಶದ ಒಳಗಾಗದರೆ ರಾಜ್ಯ ಸರ್ಕಾರ ಏನು ಬೇಕಾದರೂ ಕ್ರಮಕೈಗೊಳ್ಳಬಹುದು. ವಿದೇಶದ ವಿಚಾರಕ್ಕೆ ಬಂದಾಗ ಕೇಂದ್ರ ಸರ್ಕಾರ ಹೆಚ್ಚು ಕಾರ್ಯಪ್ರವೃತ್ತವಾಗಬೇಕು. ನಮ್ಮ ಗೃಹಸಚಿವರು ಈ ಪ್ರಕರಣ ತನಿಖೆಯನ್ನು ನಿಭಾಯಿಸುತ್ತಿದ್ದಾರೆ”ಎಂದು ಹೇಳಿದರು.

ಪರಿಷತ್ ಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ತೆರಳುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಪಕ್ಷದ ಅಧ್ಯಕ್ಷನಾಗಿ ಹೋಗುವುದು ನನ್ನ ಕರ್ತವ್ಯ. ಹೀಗಾಗಿ ಹೋಗುತ್ತೇನೆ ಎಂದರು.

ಇದನ್ನೂ ಓದಿ: Virat Kohli: ಐಪಿಎಲ್​ 2024ರ ಸಾಧನೆ ಕುರಿತು ಹೇಳಿಕೆ ನೀಡಿದ ವಿರಾಟ್ ಕೊಹ್ಲಿ

ಇನ್ನು ಪ್ರಧಾನಮಂತ್ರಿಗಳು ವಾಸ್ತವ್ಯ ಹೂಡಿದ್ದ ಮೈಸೂರಿನ ಹೊಟೇಲ್ ಬಿಲ್ 85 ಲಕ್ಷ ಮೊತ್ತದ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಯಾಗಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, “ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.

Continue Reading

ಕರ್ನಾಟಕ

Karnataka Congress: ಈ ದೇಶವನ್ನು ಅಭಿವೃದ್ಧಿಗೊಳಿಸಿದ್ದು ನೆಹರೂ ಹೊರತು ಮೋದಿಯಲ್ಲ: ಸಿದ್ದರಾಮಯ್ಯ ಪ್ರತಿಪಾದನೆ

Karnataka Congress: ಪ್ರಧಾನಿ ಮೋದಿಯವರಿಗೆ ಬಿಜೆಪಿ, ಎನ್‌ಡಿಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಅವರ ಸೋಲು ಮೋದಿಯವರನ್ನು ಈ ಮಟ್ಟಕ್ಕೆ ಮಾಡಿಟ್ಟಿದೆ ಎಂದು ವ್ಯಂಗ್ಯವಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು, ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.

VISTARANEWS.COM


on

Nehru laid the foundation for the countrys development says CM Siddaramaia
Koo

ಬೆಂಗಳೂರು: ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Karnataka Congress) ಬಣ್ಣಿಸಿದರು.

ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ದಿ. ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ನೆಹರೂ ಅವರು ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಬೇಕು ಎನ್ನುವ ಬದ್ಧತೆ ಉಳ್ಳವರಾಗಿದ್ದರು. ಆಗ ಮಾತ್ರ ವಿಶ್ವದ ಅಭಿವೃದ್ಧಿ ಸಾಧ್ಯ ಎನ್ನುವ ನಂಬಿಕೆ ಹೊಂದಿದ್ದರು ಎಂದು ವಿವರಿಸಿದರು.

ಇದನ್ನೂ ಓದಿ: IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

ನೆಹರೂ ಇತಿಹಾಸಕಾರರೂ ಆಗಿದ್ದರು. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು. ಅಂಬೇಡ್ಕರ್ ಅವರ ಮಾತಿನಂತೆ, ಇತಿಹಾಸ ಗೊತ್ತಿದ್ದವರು ಮಾತ್ರ ದೇಶದ ಭವಿಷ್ಯ ರೂಪಿಸಬಲ್ಲರು. ನೆಹರೂ ಈ ಕೆಲಸ ಮಾಡಿ ದೇಶವನ್ನು ಕಟ್ಟಿ ಬೆಳೆಸಿದರು ಎಂದು ಉದಾಹರಣೆಗಳ ಸಮೇತ ವಿವರಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಅನಕ್ಷರತೆ, ಬಡತನ, ನಿರುದ್ಯೋಗ ವ್ಯಾಪಕವಾಗಿತ್ತು. ಆರ್ಥಿಕ ಚೈತನ್ಯ ಇರಲಿಲ್ಲ. ಹಳ್ಳಿಗಳು ಸಂಕಷ್ಟದಲ್ಲಿದ್ದವು. ಈ ಎಲ್ಲಕ್ಕೂ ಪರಿಹಾರವಾಗಿ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಜೀವನದುದ್ದಕ್ಕೂ ಶ್ರಮಿಸಿದರು. ದೇಶವನ್ನು ವೈಜ್ಞಾನಿಕ, ಆಧುನಿಕತೆ ಆಧಾರದಲ್ಲಿ ನಿರ್ಮಿಸುತ್ತಾ ಭಾರತೀಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ನಿರಂತರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದರು ಎಂದು ತಿಳಿಸಿದರು.

ಭಾರತವನ್ನು ಇಡೀ ವಿಶ್ವದಲ್ಲಿ ಅತಿದೊಡ್ಡ ಮತ್ತು ಸದೃಢ ಪ್ರಜಾಪ್ರಭುತ್ವ ದೇಶವನ್ನಾಗಿ ರೂಪಿಸಿದ್ದು ನೆಹರೂ. ದೇಶದಲ್ಲಿರುವ ಬಹುತೇಕ ಅಣೆಕಟ್ಟುಗಳು ಆಗಿದ್ದು ನೆಹರೂ ಅವಧಿಯಲ್ಲಿ. ಕಾಂಗ್ರೆಸ್ ಏನೂ ಮಾಡಿಲ್ಲ ಎನ್ನುವ ನರೇಂದ್ರ ಮೋದಿ ಇವತ್ತಿನವರೆಗೂ ಒಂದೇ ಒಂದು ಅಣೆಕಟ್ಟನ್ನಾಗಲೀ, ಸಾರ್ವಜನಿಕ ಉದ್ದಿಮೆಯನ್ನಾಗಲಿ ಸ್ಥಾಪಿಸಲಿಲ್ಲ. ಇವರಿಗೆ ನೆಹರೂ ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Accident News : ಈಜಲು ಕೆರೆಗೆ ಜಿಗಿದ ಬಾಲಕ ಮೃತ್ಯು; ಬಸ್‌ ಡಿಕ್ಕಿಗೆ ಬೈಕ್‌ನಲ್ಲಿದ್ದ ರೈತರಿಬ್ಬರು ಸಾವು

ನೆಹರೂ ಮತ್ತು ಭಾರತೀಯರು ಬ್ರಿಟಿಷರ ವಿರುದ್ಧ ಹೋರಾಡುತ್ತಾ ಜೈಲು ವಾಸ ಅನುಭವಿಸುತ್ತಿದ್ದಾಗ ಆರ್‌ಎಸ್‌ಎಸ್‌ ಮತ್ತು ಸಂಘ ಪರಿವಾರ ಬ್ರಿಟೀಷರ ವಿರುದ್ಧ ನೆಪಕ್ಕೂ ಸೊಲ್ಲೆತ್ತಲಿಲ್ಲ. ಇವರು ಈಗ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಇರುವ ನಮಗೆ ದೇಶಭಕ್ತಿಯ ಪಾಠ ಮಾಡುತ್ತಾ ನಗೆಪಾಟಲಿಗೀಡಾಗಿದ್ದಾರೆ ಎಂದರು.

ಮೋದಿಗೆ ಸೋಲು ಖಚಿತವಾಗಿದೆ

ಪ್ರಧಾನಿ ಮೋದಿಯವರಿಗೆ ಬಿಜೆಪಿ, ಎನ್‌ಡಿಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಅವರ ಸೋಲು ಮೋದಿಯವರನ್ನು ಈ ಮಟ್ಟಕ್ಕೆ ಮಾಡಿಟ್ಟಿದೆ ಎಂದು ಸಿಎಂ ವ್ಯಂಗ್ಯವಾಡಿದರು.

ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು, ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ ಎಂದರು.

ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ

ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಸಂವಿಧಾನದ ಆಶಯಗಳಲ್ಲಿ ದೇಶವನ್ನು ಮುನ್ನಡೆಸುವುದು ಕಾಂಗ್ರೆಸ್ ಪಕ್ಷ ಮಾತ್ರ. ನೆಹರೂ, ಇಂದಿರಾಗಾಂಧಿ ಅವಧಿಯಲ್ಲಿ ಭೂ ಸುಧಾರಣೆ ಮಾಡಿದರು‌. ಕೈಗಾರಿಕೆಗಳನ್ನು ಸ್ಥಾಪಿಸಿದರು. ಈಗ ಬಿಜೆಪಿ ಇದಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದೆ. ರೈತರಿಂದ ಭೂಮಿ ಕಿತ್ತುಕೊಳ್ಳುವುದು, ದೇಶದ ಕೈಗಾರಿಕೆಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಬಿಜೆಪಿಯ ಸಾಧನೆಯಾಗಿದೆ ಎಂದರು.

ಇದನ್ನೂ ಓದಿ: Virat Kohli: ಐಪಿಎಲ್​ 2024ರ ಸಾಧನೆ ಕುರಿತು ಹೇಳಿಕೆ ನೀಡಿದ ವಿರಾಟ್ ಕೊಹ್ಲಿ

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ .ಶಿವಕುಮಾರ್, ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮಾಜಿ ಸಚಿವೆ ರಾಣಿ ಸತೀಶ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

PM Narendra Modi: ಪ್ರಧಾನಿ ಮೋದಿ ಉಳಿದುಕೊಂಡಿದ್ದ ಹೋಟೆಲ್ ಬಿಲ್ ಪಾವತಿಸಲು ರಾಜ್ಯ ಸರ್ಕಾರ ನಿರ್ಧಾರ; ಎಷ್ಟು ಖರ್ಚಾಗಿತ್ತು?

PM Narendra Modi: 2023ರ ಏಪ್ರಿಲ್‌ನಲ್ಲಿ ಮೈಸೂರಿನಲ್ಲಿ ಆಯೋಜಿಸಿದ್ದ “ಹುಲಿ ಯೋಜನೆ – 50” ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ವೇಳೆ ಖಾಸಗಿ ಹೋಟೆಲ್‌ನಲ್ಲಿ ಪ್ರಧಾನಿ ಮೋದಿ ಅವರು ವಾಸ್ತವ್ಯ ಹೂಡಿದ್ದರು. ಹೋಟೆಲ್‌ನ ಬಾಕಿ ಬಿಲ್‌ ಪಾವತಿಸಲು ರಾಜ್ಯ ಸರ್ಕಾರ ಮುಂದಾಗಿದೆ.

VISTARANEWS.COM


on

PM Narendra Modi
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಉಳಿದುಕೊಂಡಿದ್ದ ಹೋಟೆಲ್ ಬಿಲ್ ಪಾವತಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. 2023ರ ಏಪ್ರಿಲ್‌ನಲ್ಲಿ ಮೈಸೂರಿನಲ್ಲಿ ಆಯೋಜಿಸಿದ್ದ “ಹುಲಿ ಯೋಜನೆ – 50” ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ವೇಳೆ ಖಾಸಗಿ ಹೋಟೆಲ್‌ನಲ್ಲಿ ಪ್ರಧಾನಿ ಮೋದಿ ಅವರು ವಾಸ್ತವ್ಯ ಹೂಡಿದ್ದರು. ಅದಕ್ಕಾಗಿ ಸುಮಾರು 80 ಲಕ್ಷ ರೂಪಾಯಿ ಬಿಲ್ ಆಗಿತ್ತು. ಹೀಗಾಗಿ ಬಾಕಿ ಬಿಲ್ ಪಾವತಿಸಲು ಪರಿಸರ ಮತ್ತು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ.

ಒಂದು ವರ್ಷದಿಂದಲೂ ಹೋಟೆಲ್‌ನ ಬಾಕಿ ಬಿಲ್ ಪಾವತಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಜಟಾಪಟಿ ನಡೆಯುತ್ತಿತ್ತು. ಬಿಲ್‌ ಪಾವತಿಸಬೇಕು ಎಂದು ಇವರ ಮೇಲೆ ಅವರು, ಅವರ ಮೇಲೆ ಇವರು ಹೇಳಿಕೊಂಡು ಬಂದಿದ್ದರು. ಆದರೆ, ಹೋಟೆಲ್ ಮಾಲೀಕ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಬಾಕಿ ಬಿಲ್ 80 ಲಕ್ಷ ರೂ. ಪಾವತಿಸಲು ಪರಿಸರ ಮತ್ತು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ.

ಬಾಕಿ ಬಿಲ್‌ ಪಾವತಿಗೆ ಕೇಂದ್ರ- ರಾಜ್ಯ ಸರ್ಕಾರದ ನಡುವೆ ಜಟಾಪಟಿ

ಕಳೆದ ವರ್ಷ ಏಪ್ರಿಲ್‌ನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ವತಿಯಿಂದ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 (Tiger Project 50) ಕಾರ್ಯಕ್ರಮಕ್ಕಾಗಿ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಆತಿಥ್ಯಕ್ಕೆ ಸಂಬಂಧಪಟ್ಟಂತೆ 6.33 ಕೋಟಿ ರೂಪಾಯಿ ವೆಚ್ಚವಾಗಿತ್ತು ಎನ್ನಲಾಗಿತ್ತು. ಇದರಲ್ಲಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3 ಕೋಟಿ 33 ಲಕ್ಷ ರೂಪಾಯಿ ಬಾಕಿ ಬರಬೇಕಿದೆ. ಇದರಲ್ಲಿ ಖಾಸಗಿ ಹೋಟೆಲ್‌ ಬಿಲ್‌ (Hotel Bill) ಕೂಡಾ ಇದೆ. ಆದರೆ, ಇದರ ವೆಚ್ಚವನ್ನು ಯಾರು ಹೊರುವುದು? ಎಂಬುದೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಜಟಾಪಟಿಗೆ ಕಾರಣವಾಗಿತ್ತು.

ಇದನ್ನೂ ಓದಿ | Narendra Modi: 10 ವರ್ಷ ಬಲಿಷ್ಠ ಪ್ರತಿಪಕ್ಷ ಇರಲಿಲ್ಲ ಎಂಬುದೇ ನೋವು ತಂದಿದೆ; ಮೋದಿ ಬೇಸರ

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ್ದೇ (National Tiger Conservation Authority) ಹೊಣೆ ಎಂದು ರಾಜ್ಯ ಅರಣ್ಯ ಇಲಾಖೆ (Karnataka State Forest Department) ಹೇಳಿತ್ತು. ಬಿಲ್ ಬಾಕಿ ಬಗ್ಗೆ ಪ್ರತಿಕ್ರಿಯಿಸಿದ್ದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ (Ishwar Khandre) ಅವರು, ಪ್ರಧಾನಿ ಮೋದಿ (PM Modi) ಆತಿಥ್ಯ ವೆಚ್ಚಕ್ಕೆ ಸಂಬಂಧಪಟ್ಟಂತೆ ಇರುವ ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದ್ದರು.

Rs 6 crore spent on hosting PM Modi visit to Bandipur Centre and state departments tussle over bill arrears

2023ರ ಏಪ್ರಿಲ್‌ನಲ್ಲಿ “ಹುಲಿ ಯೋಜನೆ – 50” ಕಾರ್ಯಕ್ರಮವನ್ನು ನಡೆಸಲಾಗಿತ್ತು. ಆದರೆ, ಆ ಸಮಯದಲ್ಲಿ ವಿಧಾನಸಭಾ ಚುನಾವಣೆ ಇದ್ದಿದ್ದರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿತ್ತು. ಹೀಗಾಗಿ ರಾಜ್ಯ ಸರ್ಕಾರ ಭಾಗಿ ಆಗಿರಲಿಲ್ಲ. ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ. ಇದು ಸಂಪೂರ್ಣ ಎನ್.ಟಿ.ಸಿ.ಎ. ಕಾರ್ಯಕ್ರಮವಾಗಿತ್ತು ಎಂದು ಈಶ್ವರ ಖಂಡ್ರೆ ತಿಳಿಸಿದ್ದರು.

ಎನ್.ಟಿ.ಸಿ.ಎ. ಖರ್ಚಿನ ಹೊಣೆ ಹೊತ್ತಿತ್ತು

ದೇಶದ ಪ್ರಧಾನಿಯವರು ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಆತಿಥ್ಯ ನಿರ್ವಹಣೆಗಾಗಿ ಸ್ಥಳೀಯವಾಗಿ ರಚಿಸಲಾಗಿದ್ದ ಸಮಿತಿಯಲ್ಲಿ ನಮ್ಮ ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು. ವಾಸ್ತವವಾಗಿ ಈ ಕಾರ್ಯಕ್ರಮಕ್ಕೆ ಆಗುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಎನ್.ಟಿ.ಸಿ.ಎ. ಹೇಳಿತ್ತು ಎಂದು ಈಶ್ವರ ಖಂಡ್ರೆ ವಿವರಿಸಿದ್ದರು.

Rs 6 crore spent on hosting PM Modi visit to Bandipur Centre and state departments tussle over bill arrears

ಕಾರ್ಯಕ್ರಮಕ್ಕೆ ಆಗಿರುವ ವೆಚ್ಚ 6.33 ಕೋಟಿ ರೂಪಾಯಿ ಆಗಿದೆ. ಈ ಪೈಕಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3 ಕೋಟಿ 33 ಲಕ್ಷ ರೂಪಾಯಿ ಬಾಕಿ ಬರಬೇಕಿದೆ. ಇದರಲ್ಲಿ ರಾಡಿಸನ್ ಬ್ಲೂ ಆತಿಥ್ಯ ವೆಚ್ಚ ಸುಮಾರು 80 ಲಕ್ಷ ರೂ. ಸೇರಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದರು.

ಇದನ್ನೂ ಓದಿ | Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

ಪತ್ರ ಬರೆದರೂ ಬಾಕಿ ಹಣ ನೀಡಿಲ್ಲ

ಈ ಬಗ್ಗೆ ನಮ್ಮ ಇಲಾಖೆಯ ಅಧಿಕಾರಿಗಳು ಹಲವು ಬಾರಿ ಪತ್ರ ಬರೆದಿದ್ದರೂ, ಫೋನ್ ಮಾಡಿದ್ದರೂ ಎನ್.ಟಿ.ಸಿ.ಎ. (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಈ ಬಾಕಿ ಹಣ ನೀಡಿಲ್ಲ. ಈಗ ವಿಷಯ ತಮ್ಮ ಗಮನಕ್ಕೆ ಬಂದಿದ್ದು, ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸುವುದಾಗಿ ಈಶ್ವರ ಖಂಡ್ರೆ ಹೇಳಿದ್ದರು. ಆದರೆ, ಇದೀಗ ರಾಜ್ಯ ಸರ್ಕಾರವೇ ಬಾಕಿ ಬಿಲ್‌ ಪಾವತಿಸಲು ನಿರ್ಧಾರ ಮಾಡಿದೆ.

Continue Reading

ಬೆಂಗಳೂರು

Karnataka Congress: ಬೂತ್ ಮಟ್ಟದಲ್ಲಿ ‘ಕಾಂಗ್ರೆಸ್ ಕುಟುಂಬ’ ಕಾರ್ಯಕ್ರಮ; ಪಕ್ಷ ಬಲವರ್ಧನೆಗೆ ಡಿ.ಕೆ.ಶಿ ಪ್ಲ್ಯಾನ್‌

Karnataka Congress: ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಎಂಬ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಜೂನ್ 1ರಂದು ಪಕ್ಷದ ಪದಾಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ತಿಳಿಸಿದ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರತಿ ಬೂತ್‌ನಲ್ಲಿ 50 ಸದಸ್ಯರನ್ನು ಸೇರಿಸಬೇಕು. ಆ ಬೂತ್ ಹಾಗೂ ಹಳ್ಳಿಗಳಲ್ಲಿ ಏನೇ ಕಾರ್ಯಕ್ರಮ ಮಾಡಿದರೂ ಆ 50 ಮಂದಿಯನ್ನು ಸೇರಿಸಿ ತೀರ್ಮಾನ ಮಾಡಬೇಕು. ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಬೇಕು ಎಂದು ಹೇಳಿದ್ದಾರೆ.

VISTARANEWS.COM


on

Congress Kutumba programme to strengthen organization at booth level says DCM DK Shivakumar
Koo

ಬೆಂಗಳೂರು: ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ ರೂಪಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (Karnataka Congress) ತಿಳಿಸಿದರು.

ನಗರದ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಸೋಮವಾರ ನಡೆದ ಮಾಜಿ ಪ್ರಧಾನಿ ದಿ. ಜವಾಹರ್‌ ಲಾಲ್‌ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೂನ್ 1ರಂದು ಪಕ್ಷದ ಪದಾಧಿಕಾರಿಗಳ ಸಭೆ ಕರೆದಿದ್ದು, “ಕಾಂಗ್ರೆಸ್ ಕುಟುಂಬ” ಎಂಬ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಪ್ರತಿ ಬೂತ್‌ನಲ್ಲಿ 50 ಸದಸ್ಯರನ್ನು ಸೇರಿಸಬೇಕು. ಆ ಬೂತ್ ಹಾಗೂ ಹಳ್ಳಿಗಳಲ್ಲಿ ಏನೇ ಕಾರ್ಯಕ್ರಮ ಮಾಡಿದರೂ ಆ 50 ಮಂದಿಯನ್ನು ಸೇರಿಸಿ ತೀರ್ಮಾನ ಮಾಡಬೇಕು. ಆಮೂಲಕ ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಬೇಕು. ಯಾರು ಎಷ್ಟೇ ದೊಡ್ಡ ನಾಯಕರಾಗಿದ್ದರೂ ಅವರು ಈ ಜವಾಬ್ದಾರಿ ತೆಗೆದುಕೊಂಡು ಈ ಕಾಂಗ್ರೆಸ್ ಕುಟುಂಬವನ್ನು ಬೆಳೆಸಲೇಬೇಕು. ಇದಕ್ಕೆ ನೀವು ಸಜ್ಜಾಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Gold Rate Today: 22K ಚಿನ್ನದ ಬೆಲೆ ಗ್ರಾಂಗೆ ₹25 ಏರಿಕೆ; 24K ಬಂಗಾರದ ಬೆಲೆ ಎಷ್ಟು ಏರಿದೆ ಗಮನಿಸಿ

ತಿಂಗಳಿಗೊಮ್ಮೆ ಸಿಎಂರಿಂದ ಕಾರ್ಯಕರ್ತರ ಭೇಟಿ

ನಾನು ಹಾಗೂ ಮುಖ್ಯಮಂತ್ರಿಗಳು ಈ ಬಗ್ಗೆ ಚರ್ಚೆ ಮಾಡಿದ್ದು, ಪ್ರತಿ ತಿಂಗಳು ಒಂದು ದಿನ ಕಾಂಗ್ರೆಸ್ ಕಚೇರಿಯಲ್ಲಿ ಕೂತು ಕಾರ್ಯಕರ್ತರನ್ನು ಭೇಟಿ ಮಾಡುವ ಕೆಲಸ ಮಾಡಲಿದ್ದೇವೆ. ಇದನ್ನು ಸರಿಯಾದ ವ್ಯವಸ್ಥೆ ಮೂಲಕ ಆಯೋಜಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಕೇವಲ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪಕ್ಷದ ಸದಸ್ಯತ್ವ ಹೊಂದಿರುವವರಿಗೆ ಮಾತ್ರ ಅವಕಾಶ ನೀಡಲಾಗಿರುತ್ತದೆ. ಇನ್ನು ಮಂತ್ರಿಗಳು ವಾರ ಮುಂಚಿತವಾಗಿ ದಿನಾಂಕ ನಿಗದಿ ಮಾಡಿ ಕಾರ್ಯಕರ್ತರನ್ನು ಭೇಟಿ ಮಾಡಬೇಕು ಎಂದರು.

ಎಷ್ಟೋ ಬಾರಿ ಕಾರ್ಯಕರ್ತರು ನಮ್ಮನ್ನು ಭೇಟಿ ಮಾಡಲು ದೂರದ ಊರುಗಳಿಂದ ಬರುತ್ತಾರೆ. ಆದರೆ ನಾವು ಅವರನ್ನು ಭೇಟಿ ಮಾಡಲು ಆಗುವುದಿಲ್ಲ. ಪ್ರಮುಖರನ್ನೇ ಮೊದಲು ಕರೆದು ಮಾತನಾಡಿಸುತ್ತೇವೆ. ಇದರಿಂದ ನಮಗೂ ಮುಜುಗರವಾಗುತ್ತದೆ. ನಮ್ಮನ್ನು ವಿಧಾನಸೌಧದಲ್ಲಿ ಕೂರಿಸಿದವರ ಜತೆ ನಮಗೆ ಮಾತನಾಡಲು ಆಗುವುದಿಲ್ಲ. ಈ ಅನುಭವ ನನಗೂ ಆಗಿದೆ. ಹೀಗಾಗಿ ಈ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Landslide: ಪಪುವಾ ನ್ಯೂಗಿನಿಯಾದಲ್ಲಿ ಭೂಕುಸಿತ; ಜೀವಂತ ಸಮಾಧಿಯಾದವರ ಸಂಖ್ಯೆ 2000ಕ್ಕೆ ಏರಿಕೆ

ನಾವು ನಮ್ಮ ದೇವಾಲಯವಾಗಿರುವ ಕಾಂಗ್ರೆಸ್ ಕಚೇರಿಗೆ ಮೊದಲ ಆದ್ಯತೆ ನೀಡಬೇಕು. ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೆ ಮುಂದಿನ ಒಂದು ವರ್ಷದಲ್ಲಿ ಅಡಿಪಾಯ ಹಾಕುತ್ತೇವೆ. ಇನ್ನು ರೇಸ್‌ಕೋರ್ಸ್ ರಸ್ತೆಯ ಕಚೇರಿಯ ಕಟ್ಟಡ ತೆರವುಗೊಳಿಸಿ ಹೊಸದಾಗಿ ನಿರ್ಮಾಣ ಮಾಡುತ್ತೇವೆ ಎಂದ ಅವರು, ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಈ ಕೆಲಸ ಆರಂಭವಾಗಿವೆ ಎಂದರು.

ಎಲ್ಲರೂ ಒಟ್ಟಾಗಿ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆ ಎದುರಿಸಬೇಕು. ನಮ್ಮ ಪಕ್ಷ ಆರಕ್ಕೆ ಆರು ಕ್ಷೇತ್ರಗಳಲ್ಲಿ ಗೆಲ್ಲಬೇಕು. ಆ ಮೂಲಕ ಮೇಲ್ಮನೆಯಲ್ಲಿ ನಮಗೆ ಬಹುಮತ ಸಿಗಬೇಕು. ಆಗ ಮಾತ್ರ ಬಿಲ್‌ಗಳು ಪಾಸಾಗುತ್ತವೆ ಎಂದರು.

ನೆಹರೂ ಅವರು ಕಾಂಗ್ರೆಸ್ ಪಕ್ಷದ ಶಕ್ತಿ

ನೆಹರೂ ಅವರ ಹೆಸರೇ ಕಾಂಗ್ರೆಸ್ ಪಕ್ಷ ಹಾಗೂ ಕಾರ್ಯಕರ್ತರಿಗೆ ಒಂದು ಸ್ಫೂರ್ತಿ. ಈ ದೇಶದಲ್ಲಿ ಸಂವಿಧಾನದ ಅಡಿಯಲ್ಲಿ ನಾವು ಕೆಲಸ ಮಾಡುತ್ತಿದ್ದು ಇದಕ್ಕೆ ಭದ್ರ ಅಡಿಪಾಯ ಹಾಕಿದ್ದು ನೆಹರೂ ಅವರು. ಈ ಇತಿಹಾಸ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: IPL 2024 : ಇದು ಕೂಡ ವಿಶೇಷ; ಕೆಕೆಆರ್​ ಕಪ್​ ಗೆದ್ದ ಮರುದಿನವೇ ಮೊದಲ ಟ್ರೋಫಿಯ 12ನೇ ವಾರ್ಷಿಕೋತ್ಸವ

ಬಿಜೆಪಿ ನಾಯಕರು ಇತಿಹಾಸ ತಿರುಚಲು, ಅವರ ಹೆಸರನ್ನು ಇತಿಹಾಸ ಪುಟಗಳಿಂದ ತೆಗೆಯಲು ಬಹಳ ಪ್ರಯತ್ನ ಮಾಡುತ್ತಿದ್ದಾರೆ. ಅವರು ಇನ್ನು ಎರಡ್ಮೂರು ಜನ್ಮ ಎತ್ತಿ ಬಂದರೂ ನೆಹರೂ ಅವರ ಸಾಧನೆ ತೆಗೆದು ಹಾಕಲು ಸಾಧ್ಯವಿಲ್ಲ ಎಂದರು.

Continue Reading
Advertisement
DCM DK Shivakumar latest statement in Bengaluru
ಕರ್ನಾಟಕ25 seconds ago

DK Shivakumar: ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿದವರ ಮೇಲೆ ಕಠಿಣ ಕ್ರಮ; ಡಿ.ಕೆ.ಶಿವಕುಮಾರ್

Nehru laid the foundation for the countrys development says CM Siddaramaia
ಕರ್ನಾಟಕ3 mins ago

Karnataka Congress: ಈ ದೇಶವನ್ನು ಅಭಿವೃದ್ಧಿಗೊಳಿಸಿದ್ದು ನೆಹರೂ ಹೊರತು ಮೋದಿಯಲ್ಲ: ಸಿದ್ದರಾಮಯ್ಯ ಪ್ರತಿಪಾದನೆ

Karan Johar announces Dhadak 2
ಬಾಲಿವುಡ್18 mins ago

Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

snake bite in chikkamagaluru
ಕ್ರೈಂ19 mins ago

Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು

PM Narendra Modi
ಕರ್ನಾಟಕ23 mins ago

PM Narendra Modi: ಪ್ರಧಾನಿ ಮೋದಿ ಉಳಿದುಕೊಂಡಿದ್ದ ಹೋಟೆಲ್ ಬಿಲ್ ಪಾವತಿಸಲು ರಾಜ್ಯ ಸರ್ಕಾರ ನಿರ್ಧಾರ; ಎಷ್ಟು ಖರ್ಚಾಗಿತ್ತು?

IPL 2024
ಪ್ರಮುಖ ಸುದ್ದಿ33 mins ago

IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

Prajwal revanna Case
ಕರ್ನಾಟಕ35 mins ago

Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌!

Munawar Faruqui gets married for second timeʼ Munawar Faruqui gets married for second timeʼ
ಬಾಲಿವುಡ್48 mins ago

Munawar Faruqui: ಮತ್ತೊಂದು ಮದುವೆಯಾದರಾ ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ?

Congress Kutumba programme to strengthen organization at booth level says DCM DK Shivakumar
ಬೆಂಗಳೂರು56 mins ago

Karnataka Congress: ಬೂತ್ ಮಟ್ಟದಲ್ಲಿ ‘ಕಾಂಗ್ರೆಸ್ ಕುಟುಂಬ’ ಕಾರ್ಯಕ್ರಮ; ಪಕ್ಷ ಬಲವರ್ಧನೆಗೆ ಡಿ.ಕೆ.ಶಿ ಪ್ಲ್ಯಾನ್‌

Virat kohli
ಪ್ರಮುಖ ಸುದ್ದಿ59 mins ago

Virat Kohli: ಐಪಿಎಲ್​ 2024ರ ಸಾಧನೆ ಕುರಿತು ಹೇಳಿಕೆ ನೀಡಿದ ವಿರಾಟ್ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು24 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌