BJP Karnataka: ದೇಶದ ಅಭಿವೃದ್ಧಿಯ ಪಯಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು: ಬಿ.ವೈ. ವಿಜಯೇಂದ್ರ Vistara News

ಬೆಂಗಳೂರು

BJP Karnataka: ದೇಶದ ಅಭಿವೃದ್ಧಿಯ ಪಯಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು: ಬಿ.ವೈ. ವಿಜಯೇಂದ್ರ

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಅವರಿಗೆ ವಿವಿಧ ಮೋರಚಾಗಳ ಸಮಾವೇಶದ ಹೊಣೆ ನೀಡಲಾಗಿದ್ದು, ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ.

VISTARANEWS.COM


on

bjp-karnataka-vice president BY Vijayendra speech
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದ ಅಭಿವೃದ್ಧಿಯ ಪಯಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು ಎಂದು ಬಿಜೆಪಿ (BJP Karnataka) ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಮಹದೇವಪುರದ ಶಂಕರ್ ಕಣ್ಣಿನ ಆಸ್ಪತ್ರೆ ಮುಂಭಾಗದ ಕುಂದಲಹಳ್ಳಿ ಗೇಟ್ ಸಿಗ್ನಲ್ ಮೈದಾನದಲ್ಲಿ ಇಂದು ನಡೆದ ಬಿಜೆಪಿ ಮಹಿಳಾ ಮೋರ್ಚಾ ಬೆಂಗಳೂರು ಕೇಂದ್ರ ಜಿಲ್ಲಾ ಸಮಾವೇಶದಲ್ಲಿ ಅವರು ಮಾತನಾಡಿದರು.

ನಮ್ಮ ಪ್ರಧಾನಿ ಮೋದಿಜಿ ಅವರು ಆಡಿದ್ದನ್ನೇ ಮಾಡಿ ತೋರಿಸಿದವರು. ದೇಶದ ಮೊದಲ ಪ್ರಜೆ ಇವತ್ತು ಮಹಿಳೆ ಎಂದು ಹೇಳಲು ನಮಗೆ ಹೆಮ್ಮೆ ಇದೆ. ದೇಶಕ್ಕೆ ಹಲವು ವರ್ಷಗಳಿಂದ ಬಜೆಟ್ ಕೊಟ್ಟವರೂ ಮಹಿಳೆ ನಿರ್ಮಲಾ ಸೀತಾರಾಮನ್ ಎನ್ನಲು ಹೆಮ್ಮೆ ಪಡುತ್ತೇವೆ.

ಮಹಿಳೆಯರು ಸಾಧಿಸಿದ ಪ್ರಗತಿಯ ಮಟ್ಟದಿಂದ ಸಮುದಾಯದ ಪ್ರಗತಿಯನ್ನು ಅಳೆಯಬೇಕಾಗುತ್ತದೆ ಎಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಇದೇ ಹಿನ್ನೆಲೆಯಲ್ಲಿ ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜಿ ಅವರು ಮಹಿಳೆಯರು ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಆಗುವುದಾಗಿ ಕನಸನ್ನು ಹೊತ್ತು ದೇಶದ ಅಭಿವೃದ್ಧಿಗೆ 17-18 ಗಂಟೆ ದುಡಿಯುತ್ತಿದ್ದಾರೆ.

2014ವರೆಗೆ 10 ವರ್ಷ ಆಡಳಿತ ನಡೆಸಿದ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ, ದೇಶವನ್ನು ಭ್ರಷ್ಟಾಚಾರದ ಸುಳಿಗೆ ಸಿಲುಕಿಸಿದರು. ಸಾವಿರಾರು ಕೋಟಿ ಮೊತ್ತದ ಭ್ರಷ್ಟಾಚಾರ ನಡೆದಿತ್ತು ಎಂದ ಅವರು, ಭ್ರಷ್ಟಾಚಾರದ ಕೂಸನ್ನು ಹುಟ್ಟಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದರು.

ಇದನ್ನೂ ಓದಿ: BY Vijayendra: ಬಿಎಸ್‌ವೈ ಇಲ್ಲದೆ ರಾಜ್ಯದಲ್ಲಿ ಬಿಜೆಪಿಗೆ ಚುನಾವಣೆ ಎದುರಿಸುವುದು ಸವಾಲು ಎಂದ ಪುತ್ರ ವಿಜಯೇಂದ್ರ

ಬೆಂಗಳೂರು ಕೇಂದ್ರ ಲೋಕಸಭಾ ಸಂಸದ ಪಿ.ಸಿ. ಮೋಹನ್‌ ಮಾತನಾಡಿ, ಭಾರತವು ವಿಶ್ವದಲ್ಲಿ ಐದನೇ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಪ್ರಮುಖ ಕಾರಣ ದೇಶದ ಮಹಿಳೆಯರು ಎಂದರು.

ಮಾಜಿ ಸಚಿವ ಅರವಿಂದ ಲಿಂಬಾವಳಿ, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಮುಖಂಡರಾದ ಮಾಳವಿಕಾ ಅವಿನಾಶ್, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ, ಮಹಿಳಾ ಮೋರ್ಚಾ ಬೆಂಗಳೂರು ಕೇಂದ್ರ ಜಿಲ್ಲೆ ಅಧ್ಯಕ್ಷೆ ರೇಖಾ ಕೆ. ಗೋವಿಂದ್ ಮತ್ತಿತರರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉಡುಪಿ

Karnataka Weather : ಮೈಸೂರು ಸೇರಿ 11 ಜಿಲ್ಲೆಗಳಿಗೆ ಮಳೆ ಅಲರ್ಟ್‌!

Rain News : ದಕ್ಷಿಣ ಒಳನಾಡು ಹಾಗೂ ಮಲೆನಾಡು, ಕರಾವಳಿ ಭಾಗದಲ್ಲಿ ವರುಣ (Karnataka weather Forecast) ಸಕ್ರಿಯನಾಗಿದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಮುಂದುವರಿಯಲಿದೆ.

VISTARANEWS.COM


on

By

Rain News
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ (Karnataka weather Forecast) ಕೆಲವು ಕಡೆಗಳಲ್ಲಿ ಮಳೆಯಾಗಲಿದ್ದು, (Rain News) ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಇರಲಿದೆ. ಬಹುತೇಕ ಜಿಲ್ಲೆಗಳಲ್ಲಿ ಉರಿ ಉರಿ ವಾತಾವರಣ ಇರಲಿದೆ.

ಮೈಸೂರಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಸಾಧಾರಣದೊಂದಿಗೆ ಹಗುರ ಮಳೆ ಸಾಧ್ಯತೆ

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆ ಸುರಿಯಲಿದೆ.

ಮೋಡ ಕವಿದ ವಾತಾವರಣ

ಬೆಂಗಳೂರಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣವಿರಲಿದೆ. ಮಧ್ಯಾಹ್ನ ಬಿಸಿಲು ಇರಲಿದೆ. ಸಂಜೆ ಅಥವಾ ರಾತ್ರಿಯಂದು ಆಯ್ದ ಕಡೆಗಳಲ್ಲಿ ಮಳೆ ಇರಲಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: KGF 3 Actor Yash | ಕೆಜಿಎಫ್​ನ ರಾಕಿ ಭಾಯ್​, ಪಾಂಡ್ಯ ಬ್ರದರ್ಸ್​ ಭೇಟಿ; ಕೆಜಿಎಫ್​ 3 ಟ್ರೆಂಡಿಂಗ್​

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -20 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 19 ಡಿ.ಸೆ
ಗದಗ: 31 ಡಿ.ಸೆ – 17 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 31 ಡಿ.ಸೆ – 19 ಡಿ.ಸೆ
ಬೆಳಗಾವಿ: 31 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

BBMP Works: ಬಿಬಿಎಂಪಿ ಕಾಮಗಾರಿಗಳ ಎಸ್ಐಟಿ ತನಿಖೆ; ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

BBMP Works: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕಾಮಗಾರಿಗಳಲ್ಲಿನ ಅಕ್ರಮ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು.

VISTARANEWS.COM


on

High Court
Koo

ಬೆಂಗಳೂರು: ಬಿಬಿಎಂಪಿ ಕಾಮಗಾರಿಗಳ ಎಸ್ಐಟಿ ತನಿಖೆಗೆ ನೀಡಿದ ಕಾಂಗ್ರೆಸ್ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬಿಜೆಪಿ‌ ಸರ್ಕಾರದ ಅವಧಿಯಲ್ಲಿ ನಡೆದ ಕಾಮಗಾರಿಗಳಲ್ಲಿ (BBMP Works) ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದರಿಂದ ಬಾಕಿ ಬಿಲ್‌ ಹಣ ಬಿಡುಗಡೆಗೂ ಮುನ್ನ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶಿಸಿತ್ತು. ಆದರೆ, ಇದನ್ನು ಪ್ರಶ್ನಿಸಿ ಗುತ್ತಿಗೆದಾರರು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ತಡೆಯಾಜ್ಞೆ ನೀಡಲಾಗಿದೆ.

ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠದಿಂದ ಎಸ್ಐಟಿ ತನಿಖೆಗೆ ತಡೆ ನೀಡಿ ಆದೇಶ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 2019 ರಿಂದ 2023 ಏಪ್ರಿಲ್‌ವರೆಗೆ ನಡೆದಿದ್ದ ಕಾಮಗಾರಿಗಳಲ್ಲಿ ಅಕ್ರಮ ಆರೋಪ ಕೇಳಿಬಂದಿತ್ತು. 15ನೇ ಹಣಕಾಸು ಆಯೋಗದ ಅನುದಾನ, ನಗರೋತ್ಥಾನ ಅನುದಾನ ಮತ್ತು ಬಿಬಿಎಂಪಿ ಅನುದಾನಗಳ ಅಡಿಯಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಬಗ್ಗೆ ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಆದರೆ, ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಗುತ್ತಿಗೆದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆ, ನಿರ್ದಿಷ್ಟ ಗುತ್ತಿಗೆದಾರರನ್ನು ಬಿಟ್ಟು ನಕಲಿ ಗುತ್ತಿಗೆದಾರರಿಗೆ ಹಣ ಪಾವತಿ ಆರೋಪ, ನಕಲಿ ಬಿಲ್ ಸೃಷ್ಟಿ, ಕಾಮಗಾರಿ ನಡೆಸದೆಯೇ ಬಿಲ್‌ ಪಾವತಿ, ಗುಣಮಟ್ಟ ಕಾಪಾಡದಿರುವುದು ಸೇರಿ ಹಲವು ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚಿಸಲಾಗಿತ್ತು.

ಇದನ್ನೂ ಓದಿ | Education News: ಸರ್ಕಾರಿ ಶಾಲೆಗಳ ಬಲವರ್ಧನೆಗೆ 10 ಸೂತ್ರ; ಶಿಕ್ಷಣ ಸಚಿವರಿಗೆ ತಜ್ಞರಿಂದ ಪತ್ರ

MRPಗಿಂತ ಹೆಚ್ಚು ಹಣ ಪಡೆದ ಫ್ಲಿಪ್‌ಕಾರ್ಟ್‌; ಬೆಂಗಳೂರು ಮಹಿಳೆಗೆ ಸಿಕ್ಕಿತು 20,000 ರೂ. ಪರಿಹಾರ!

flipkart shoping

ಬೆಂಗಳೂರು:‌ ಎಂಆರ್‌ಪಿ ರೇಟ್‌ಗಿಂತ ಹೆಚ್ಚಿನ ಹಣವನ್ನು ಗ್ರಾಹಕರಿಂದ ಪಡೆದಿದ್ದ ಫ್ಲಿಪ್‌ಕಾರ್ಟ್‌ಗೆ ಗ್ರಾಹಕರ ನ್ಯಾಯಾಲಯವು 20,000 ರೂ ದಂಡವನ್ನು ವಸೂಲಿ ಮಾಡಿದೆ.

ಬೆಂಗಳೂರಿನ ಪ್ಯಾಲೇಸ್ ಗುಟ್ಟಹಳ್ಳಿಯ ನಿವಾಸಿ ಸೌಮ್ಯಾ.ಪಿ 2019ರ ಅಕ್ಟೋಬರ್‌ನಲ್ಲಿ ಫ್ಲಿಪ್‌ಕಾರ್ಟ್‌ನ ಬಿಗ್ ಬಿಲಿಯನ್ ಡೇಸ್‌ ಸೇಲ್‌ನಲ್ಲಿ ಶಾಂಪುವೊಂದನ್ನು ಆರ್ಡರ್‌ ಮಾಡಿ, ಫೋನ್‌ ಪೇ ಮೂಲಕ 191ರೂ. ಹಣವನ್ನು ಪಾವತಿಸಿದ್ದರು. ಮನೆಗೆ ಬಂದ ಪಾರ್ಸೆಲ್‌ ತೆರೆದು ನೋಡಿದಾಗ ಶಾಕ್‌ ಕಾದಿತ್ತು. ಯಾಕೆಂದರೆ ಶಾಂಪು ಬಾಟೆಲ್‌ ಮೇಲೆ ಎಂಆರ್‌ಪಿ ದರ 95 ಇತ್ತು. ಫ್ಲಿಪ್‌ಕಾರ್ಟ್ ಮೂಲಕ ಗುಜರಾತ್‌ನ ಸೂರತ್‌ನ ಎಚ್ಚಿಕೆ ಎಂಟರ್ಪ್ರೈಸಸ್‌ ಸಂಸ್ಥೆ ಮಾರಿತ್ತು.

ಕೂಡಲೇ ಸೌಮ್ಯ ಫ್ಲಿಪ್‌ಕಾರ್ಟ್‌ ಕಸ್ಟಮರ್‌ ಕೇರ್‌ಗೆ ದೂರು ನೀಡಿದರು.ಆಗ ಆರ್ಡರ್‌ ಮರಳಿಸಿ ರೀಫಂಡ್‌ ಮಾಡುವುದಾಗಿ ಹೇಳಿತ್ತು. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಕ್ರಮವಹಿಸಲಾಗುತ್ತೆ ಎಂಬ ಭರವಸೆ ನೀಡಿತ್ತು. ಆದರೆ ಮಾರಾಟ ಮಾಡಿದ ಸಂಸ್ಥೆಯ ವಿರುದ್ಧ ಯಾವುದೇ ಕ್ರಮಕೈಗೊಳ್ಳದನ್ನು ಸೌಮ್ಯ ಗಮನಿಸಿದ್ದರು.

ಇದನ್ನೂ ಓದಿ | Money Guide: ಪಾರ್ಟ್‌ ಟೈಮ್‌ ಜಾಬ್‌ ಹುಡುಕುತ್ತಿದ್ದೀರಾ? ಇಲ್ಲಿದೆ ವಿಫುಲ ಅವಕಾಶ

ಬಳಿಕ ಸೌಮ್ಯ ಶಾಂತಿನಗರದ ನಾಲ್ಕನೇ ಹೆಚ್ಚುವರಿ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗಕ್ಕೆ ಫ್ಲಿಟ್‌ಕಾರ್ಟ್‌ ಹಾಗೂ ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಮಾಡಿದ್ದ ಗುಜರಾತ್‌ನ ಸೂರತ್‌ನ ಎಚ್ಚಿಕೆ ಎಂಟರ್ಪ್ರೈಸಸ್‌ ಸಂಸ್ಥೆ ವಿರುದ್ಧ ದೂರು ನೀಡಿದರು. ದೂರು ಪರಿಶೀಲಿಸಿದ ಕೋರ್ಟ್‌ ಈ ಸಂಬಂಧ ಗ್ರಾಹಕರ ಪರವಾಗಿ ತೀರ್ಪು ನೀಡಿದೆ. ಮಾತ್ರವಲ್ಲ ಹೆಚ್ಚುವರಿ ಶುಲ್ಕ ಪಡೆದ ಕಾರಣಕ್ಕೆ 20,000 ದಂಡವನ್ನು ವಿಧಿಸಿದೆ.

Continue Reading

ಕರ್ನಾಟಕ

Bike Accident: ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರ ಸವಾರರ ದುರ್ಮರಣ

Bike Accident: ಬೆಂಗಳೂರು ನಗರ ಜಿಲ್ಲೆಯ ಜಿಗಣಿ ಸಮೀಪದ ಮಾದ ಪಟ್ಟಣದ ಬಳಿ ಬೈಕ್‌ ಅಪಘಾತ ನಡೆದಿದೆ.

VISTARANEWS.COM


on

Bike accident
ಬೀರ್ ಸಿಂಗ್ ನಾಯಕ್ ಮತ್ತು ಪೋಕೀರ್ ಚರಣ್ ಪ್ರಧಾನ್
Koo

ಆನೇಕಲ್: ಬೈಕ್‌ನಿಂದ ಬಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಜಿಗಣಿ ಸಮೀಪದ ಮಾದ ಪಟ್ಟಣದ ಬಳಿ ಶನಿವಾರ ನಡೆದಿದೆ. ರಸ್ತೆ ಹಂಪ್ ಗೊತ್ತಾಗದೇ ಸಾಗಿದ್ದರಿಂದ ಬೈಕ್ ಸ್ಕಿಡ್ ಆಗಿ ಅಪಘಾತ (Bike Accident) ಸಂಭವಿಸಿದೆ.

ಒಡಿಶಾ ಮೂಲದ ಕಾರ್ಮಿಕರಾದ ಫೋಕೀರ್ ಚರಣ್ ಪ್ರಧಾನ್ (29), ಬೀರ್ ಸಿಂಗ್ ನಾಯಕ್(24) ಮೃತರು. ಕೆಲಸ ಮುಗಿಸಿಕೊಂಡು ಜಿಗಣಿಯಿಂದ ಇಂಡ್ಲವಾಡಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮಾದಪಟ್ಟಣ ಬಳಿ ರಸ್ತೆ ಹಂಪ್ ಗೊತ್ತಾಗದೆ ಸವಾರ ಬ್ರೇಕ್ ಹಾಕಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಮುಂಭಾಗದಲ್ಲಿ ನಿಂತಿದ್ದ ಬಸ್‌ಗೆ ಬೈಕ್‌ ಡಿಕ್ಕಿಯಾಗಿದೆ. ಇದರಿಂದ ಸವಾರರು ಹಾರಿ ಬಿದ್ದಾಗ ಬಸ್‌ಗೆ ತಲೆ ತಗುಲಿ ಗಂಭೀರ ಗಾಯಗೊಂಡಿದ್ದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

L&t ಕಂಪನಿಯಲ್ಲಿ ಹೆಲ್ಪರ್‌ ಆಗಿ ಫೋಕೀರ್ ಚರಣ್ ಪ್ರಧಾನ್, ಶಕ್ತಿ ಪ್ರೊಸೆಸಿಂಗ್ ಕಂಪನಿಯಲ್ಲಿ ಸಹಾಯಕನಾಗಿ ಬೀರ್ ಸಿಂಗ್ ನಾಯಕ್ ಕೆಲಸಮಾಡುತ್ತಿದ್ದ. ಮೃತ ದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Murder case : ಮಲಗಿದ್ದ ರೈತನ‌ ರುಂಡವನ್ನೇ ಕತ್ತರಿಸಿದ ದುರುಳರು!

ಚಾರ್ಮಾಡಿ ಘಾಟ್‌ನಲ್ಲಿ ಲಾರಿ-ಕಾರ್ ಡಿಕ್ಕಿಯಾಗಿ ಐವರಿಗೆ ಗಾಯ

Accident between lorry and car at Charmadi Ghat

ಚಿಕ್ಕಮಗಳೂರು: ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಐವರು ಗಾಯಗೊಂಡಿರುವುದು ನಡೆದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿಯ ಚಾರ್ಮಾಡಿ ಘಾಟ್‌ನ ತಿರುವಿನಲ್ಲಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಐವರಿಗೆ ಗಾಯಗಳಾಗಿವೆ. ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಚಾರ್ಮಾಡಿ ಘಾಟ್‌ನಲ್ಲಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು, ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು.

ಬಸ್‌ ಪಲ್ಟಿಯಾಗಿ ನಾಲ್ವರ ಸಾವು; ಮದುವೆಗೆ ಹೊರಟಿದ್ದವರು ಮಸಣ ಸೇರಿದರು

bus Accident

ಚಿತ್ರದುರ್ಗ: ಮದುವೆಗೆ ಹೊರಟಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಹೊಸದುರ್ಗ-ಹೊಳಲ್ಕೆರೆ ಮಾರ್ಗದ ಉಗಣೆ ಕಟ್ಟೆ ಬಳಿ ನಡೆದಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ದುರಂತ (Bus Accident) ಸಂಭವಿಸಿದೆ.

ಇದನ್ನೂ ಓದಿ | Someshwara Beach: ದ್ವಿತೀಯ ಪಿಯುಸಿ ಇಬ್ಬರು ವಿದ್ಯಾರ್ಥಿಗಳು ಸೋಮೇಶ್ವರದಲ್ಲಿ ಸಮುದ್ರಪಾಲು

ಹೊಸದುರ್ಗ -ಹೊಳಲ್ಕೆರೆ ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರಿಂದ ನಾಲ್ವರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಳಲ್ಕೆರೆ, ಹೊಸದುರ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸೀಗೆಹಟ್ಟಿಯಿಂದ ದಾವಣಗೆರೆಗೆ ಮದುವೆಯ ಬಸ್ ಹೋಗುತ್ತಿದ್ದಾಗ ಅಪಘಾತ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Techie Death : ಟ್ರಕ್ಕಿಂಗ್‌ನಲ್ಲಿ ಮಿಸ್‌ ಆದವನು ಶವವಾಗಿ ಪತ್ತೆ; 3000 ಅಡಿ ಎತ್ತರದಿಂದ ಹಾರಿ ಆತ್ಮಹತ್ಯೆ!

Missing Case : ಬೆಂಗಳೂರಿನಿಂದ ಟ್ರಕ್ಕಿಂಗ್‌ (Tracking) ಬಂದಿದ್ದ ಯುವಕನ ಶವ ಪತ್ತೆಯಾಗಿದ್ದು, ರಾಣಿಝರಿ ಶಿಖರದ 3000 ಅಡಿ ಎತ್ತರದಿಂದ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ (Techie Death ) ಎಂದು ತಿಳಿದು ಬಂದಿದೆ.

VISTARANEWS.COM


on

By

Techie Bharath Death
Koo

ಚಿಕ್ಕಮಗಳೂರು: ಬೆಂಗಳೂರಿನ ಟೆಕ್ಕಿಯೊಬ್ಬ ಚಿಕ್ಕಮಗಳೂರಿನಲ್ಲಿ ಶವವಾಗಿ (Techie Death ) ಪತ್ತೆಯಾಗಿದ್ದಾನೆ. ಬೆಂಗಳೂರಿನಿಂದ ಟ್ರಕ್ಕಿಂಗ್ ಹೋಗಿದ್ದ ಯುವಕ ಎರಡು ದಿನಗಳಿಂದ (Missing Case) ನಾಪತ್ತೆಯಾಗಿದ್ದ. ಇದೀಗ ರಾಣಿಝರಿ ಶಿಖರದ 3000 ಅಡಿ ಎತ್ತರದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ.

ಬೆಂಗಳೂರು ಮೂಲದ ಇಂಜಿನಿಯರ್ ಭರತ್ ಆತ್ಮಹತ್ಯೆ ಮಾಡಿಕೊಂಡವನು. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ಗುಡ್ಡದಲ್ಲಿರುವ ರಾಣಿಝರಿ ಪಾಯಿಂಟ್‌ನಲ್ಲಿ ಬೈಕ್ ನಿಲ್ಲಿಸಿ ಭರತ್ ನಾಪತ್ತೆಯಾಗಿದ್ದ. ಇನ್ನು ಗುಡ್ಡದ ತುದಿಯಲ್ಲಿ ಆತನ ಟೀ ಶರ್ಟ್, ಸ್ಲಿಪರ್‌ ಜೆತಗೆ ಮೊಬೈಲ್ ಕೂಡ ಪತ್ತೆಯಾಗಿತ್ತು. ಬಿ.ಇ ಮುಗಿಸಿದ್ದ ಭರತ್‌ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.

ಬೆಂಗಳೂರಿನಿಂದ ಹಾರ್ನೆಟ್ ಬೈಕ್‌ನಿಂದ ದುರ್ಗದಹಳ್ಳಿಗೆ ಬಂದಿದ್ದ ಭರತ್ ಅನಂತರ ಕಾಣೆಯಾಗಿದ್ದ. ಇತ್ತ ಭರತ್‌ ಪೋಷಕರು ಮಗನಿಗಾಗಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸಿದ್ದರು. ಬಾಳೂರು ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿಯಿಂದ ಭರತ್‌ಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಆತನ ಮೃತದೇಹವು ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಿದ್ದಾರೆ.

ಇದನ್ನೂ ಓದಿ: Self Harming: ಕೊಡಗು ರೆಸಾರ್ಟ್‌ನಲ್ಲಿ ಮಗುವನ್ನು ಕೊಂದು ತಂದೆ-ತಾಯಿ ಆತ್ಮಹತ್ಯೆ

ನೋಡನೋಡ್ತಿದ್ದಂತೆ ಉರುಳಿದ ಏರ್‌ಟೆಲ್‌ ಟವರ್‌; ಇಲ್ಲಿದೆ ಭಯಾನಕ ವಿಡಿಯೊ!

ಬೆಂಗಳೂರು: ರಾಜಧಾನಿಯಲ್ಲಿ ಹಲವಾರು ಕಟ್ಟಡಗಳ ಮೇಲೆ ನಾನಾ ಕಂಪನಿಗಳಿಗೆ ಸೇರಿದ ಸಾವಿರಾರು ಟವರ್‌ಗಳು (Communication towers) ಇವೆ. ಇವು ಯಾವ ಕ್ಷಣದಲ್ಲಿ ಬೇಕಾದರೂ ಉರುಳಿ ಬೀಳಬಹುದು ಎಂಬ ಆತಂಕ ಎಲ್ಲರನ್ನೂ ಕಾಡುತ್ತದೆ. ಯಾಕೆಂದರೆ, ಎತ್ತರದ ಕಟ್ಟಡಗಳ ಮೇಲ್ಭಾಗದಲ್ಲಿ ಇವುಗಳನ್ನು ಸ್ಥಾಪಿಸಲಾಗಿರುತ್ತದೆ. ಮೊದಲೇ ಕೆಲವು ಕಟ್ಟಡಗಳು ಗಟ್ಟಿಯಾಗಿರುವುದಿಲ್ಲ. ಅಂಥ ಕಟ್ಟಡಗಳ ಮೇಲೆ ಈ ರೀತಿಯ ಟವರ್‌ಗಳನ್ನು ನಿರ್ಮಿಸಲಾಗಿರುತ್ತದೆ. ಹಾಗಾಗಿ ಯಾವಾಗ ಕಿತ್ತುಕೊಂಡು ಹೋಗುತ್ತವೋ ಎಂಬ ಭಯ ಸಹಜವಾಗಿ ಕಾಡುತ್ತದೆ. ಅದರಲ್ಲೂ ಮುಖ್ಯವಾಗಿ ಪಕ್ಕದ ಕಟ್ಟಡದವರು ಭಯಪಡುತ್ತಿರುತ್ತಾರೆ.

ಈ ಭಯ ಶುಕ್ರವಾರ ಬೆಂಗಳೂರಿನಲ್ಲಿ ನಿಜವಾಗಿದೆ. ನೋಡನೋಡುತ್ತಿದ್ದಂತೆಯೇ ಏರ್‌ಟೆಲ್‌ ಕಂಪನಿಗೆ (Airtel Company tower) ಸೇರಿದ ಒಂದು ಟವರ್‌ ನೆಲಕ್ಕೆ (Tower overturns) ಉರುಳಿದೆ. ಆದರೆ, ಅದೃಷ್ಟವಶಾತ್‌ ಯಾವುದೇ ಜೀವಹಾನಿ ಸಂಭವಿಸಲಿಲ್ಲ.

ಈ ಘಟನೆ ನಡೆದಿರುವುದು ಲಗ್ಗೆರೆಯ ಪಾರ್ವತಿ ನಗರದಲ್ಲಿ, ಇಲ್ಲಿ ಮನೆಯೊಂದರ ಮೇಲೆ ಕಬ್ಬಿಣದಿಂದ ನಿರ್ಮಿಸಿದ ಲೊಕೇಷನ್‌ ಟವರನ್ನು ಅಳವಡಿಸಲಾಗಿತ್ತು. ಮೇನ್‌ ರೋಡ್‌ನ ಪಕ್ಕದಲ್ಲೇ ಈ ಕಟ್ಟಡವಿತ್ತು.

ಈ ಟವರ್ ಅಳವಡಿಸಿದ್ದ ಮನೆ ಪಕ್ಕದಲ್ಲಿ ಖಾಲಿ ಸೈಟ್ ಇತ್ತು. ಇದೇ ಸೈಟ್‌ನಲ್ಲಿ ಮನೆ ನಿರ್ಮಾಣಕ್ಕೆ ಮಾಲೀಕ ಮುಂದಾಗಿದ್ದರು. ಹೊಸ ಮನೆ ನಿರ್ಮಾಣದ ಪಾಯಕ್ಕೆಂದು ಜೆಸಿಬಿಯಿಂದ ಮಣ್ಣನ್ನು ತೆಗೆಯಲಾಗುತ್ತಿತ್ತು. ಈವೇಳೆ ಟವರ್ ಇದ್ದ ಮನೆ ಪಾಯಕ್ಕೆ ತೊಂದರೆಯಾಗಿದೆ. ಹೀಗಾಗಿ ಟವರ್‌ನ ಭಾರಕ್ಕೆ ಕಟ್ಟಡದಲ್ಲಿ ಸಂಚಲನ ಉಂಟಾಗಿದೆ. ಈ ವೇಳೆ ಕಬ್ಬಿಣದ ಟವರ್ ನೆಲಕ್ಕಪ್ಪಳಿಸಿದೆ.

ಈ ಟವರ್‌ ಖಾಲಿ ಸೈಟ್‌ ಮತ್ತು ಅದರಾಚೆಯ ಕಟ್ಟಡದ ಮೇಲೆ ಉರುಳಿ ಹಾನಿಯುಂಟು ಮಾಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟವರ್ ಬೀಳುವ ಮುನ್ಸೂಚನೆ ಪಡೆದ ಜನರು ಕೂಡಲೇ ಎಚ್ಚೆತ್ತು ಕಟ್ಟಡದಲ್ಲಿ ವಾಸಿಸುತ್ತಿದ್ದ ಎಲ್ಲರನ್ನೂ ಹೊರ ಕರೆದಿದ್ದರಿಂದ ದೊಡ್ಡ ಅಪಾಯ ತಪ್ಪಿದೆ.. ನಂತರದ ಕೆಲವೇ ಕ್ಷಣಗಳಲ್ಲಿ ಟವರ್ ಕುಸಿದು ಬಿದಿದ್ದು, ಒಂದು ಹಣ್ಣಿನ ಅಂಗಡಿ ಮತ್ತು ಬಂಬು ಅಂಗಡಿಗೆ ಹಾನಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
Madhu Bangarappa Beluru Gopalakrishna
ಅಂಕಣ8 mins ago

ಮೊಗಸಾಲೆ ಅಂಕಣ: ಒಣಗಿದ ಜಿಲ್ಲೆಯಲ್ಲಿ ಜೋಗದ ಬದಲು ಕಚ್ಚಾಟದ ರೋಗ

Rain News
ಉಡುಪಿ8 mins ago

Karnataka Weather : ಮೈಸೂರು ಸೇರಿ 11 ಜಿಲ್ಲೆಗಳಿಗೆ ಮಳೆ ಅಲರ್ಟ್‌!

Vistara Editorial, Let the strengthening government schools
ಕರ್ನಾಟಕ23 mins ago

ವಿಸ್ತಾರ ಸಂಪಾದಕೀಯ: ಸರ್ಕಾರಿ ಶಾಲೆಗಳ ಬಲವರ್ಧನೆಗೆ ತಜ್ಞರ ಸೂತ್ರಗಳು ಜಾರಿಯಾಗಲಿ

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

Sphoorti Salu
ಸುವಚನ2 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

HD Kumaraswamy
ಕರ್ನಾಟಕ7 hours ago

HD Kumaraswamy: ಕಲ್ಲಡ್ಕ ಪ್ರಭಾಕರ ಭಟ್ ಗುಣಗಾನ ಮಾಡಿದ ಎಚ್‌ಡಿಕೆ; ಶ್ರೀರಾಮ ಶಾಲೆ ಕ್ರೀಡೋತ್ಸವದಲ್ಲಿ ಭಾಗಿ

Car accident
ಕರ್ನಾಟಕ7 hours ago

Car Accident: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ನಾಲ್ವರ ದುರ್ಮರಣ

Houses without infrastructure are not completed PMAY houses
ದೇಶ7 hours ago

ಮೂಲಸೌಕರ್ಯ ಒದಗಿಸದ ಮನೆಗಳು ಪೂರ್ಣಗೊಂಡ ಪಿಎಂಎವೈ ಮನೆಗಳಲ್ಲ!

UP Yoddhas vs Telugu Titans
ಕ್ರೀಡೆ7 hours ago

Pro Kabaddi: ಯೋಧಾಸ್​ ಆರ್ಭಟಕ್ಕೆ ಮುಳುಗಿದ ತೆಲುಗು ಟೈಟಾನ್ಸ್‌

Central government bars onion export to curb inflation
ದೇಶ8 hours ago

ಈರುಳ್ಳಿ ರಫ್ತು ನಿಷೇಧ! ಎಥೆನಾಲ್‌ ಉತ್ಪಾದನೆಗೆ ಕಬ್ಬು ಬಳಸುವಂತಿಲ್ಲ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ1 day ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema1 day ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema1 day ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema1 day ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ2 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ3 days ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ3 days ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

ಟ್ರೆಂಡಿಂಗ್‌