CM Siddaramaiah: ಬುಡಕ್ಕೆ ನೀರು ಬಂದಾಗ ಬಿಜೆಪಿ ನಾಯಕರಿಗೆ ಜಾತಿ ನೆನಪಾಗುತ್ತದೆ! ಸಿದ್ದರಾಮಯ್ಯ ಗೇಲಿ - Vistara News

ಬೆಂಗಳೂರು

CM Siddaramaiah: ಬುಡಕ್ಕೆ ನೀರು ಬಂದಾಗ ಬಿಜೆಪಿ ನಾಯಕರಿಗೆ ಜಾತಿ ನೆನಪಾಗುತ್ತದೆ! ಸಿದ್ದರಾಮಯ್ಯ ಗೇಲಿ

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್‌ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು ʼದಲಿತ ಗುರಾಣಿʼ ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ಎಕ್ಸ್‌(ಟ್ವೀಟ್‌) ನಲ್ಲಿ ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್‌ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು “ದಲಿತ ಗುರಾಣಿ” ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಟೀಕಿಸಿದ್ದಾರೆ.

ಗುರುವಾರ ಈ ಕುರಿತು ಎಕ್ಸ್‌(ಟ್ವೀಟ್‌)ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ರಾಜ್ಯಪಾಲರಿಗೆ ಅವಮಾನವಾಗಿದೆ ಎಂದು ಪ್ರತಿಭಟಿಸುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ನನ್ನ ಕೆಲವು ಸರಳ ಪ್ರಶ್ನೆಗಳಿವೆ ಎಂದಿದ್ದಾರೆ.

ಇದನ್ನೂ ಓದಿ: Gold Rate Today: ಸುವರ್ಣಪ್ರಿಯರಿಗೆ ಸಿಹಿ ಸುದ್ದಿ; ಇಂದೂ ಚಿನ್ನದ ದರದಲ್ಲಿ ಇಳಿಕೆ

ಮೊದಲನೆಯದಾಗಿ, ದಲಿತ ಸಮುದಾಯಕ್ಕೆ ಸೇರಿರುವ ಥಾವರಚಂದ್ ಗೆಹ್ಲೋಟ್‌ ಅವರ ಬಗ್ಗೆ ನಿಮ್ಮಲ್ಲಿ ಅಷ್ಟೊಂದು ಗೌರವ ಮತ್ತು ಅಭಿಮಾನವಿದ್ದರೆ ಕೇಂದ್ರ ಸಚಿವ ಸಂಪುಟದಲ್ಲಿರಬೇಕಾಗಿದ್ದ ಅವರನ್ನು ಇಲ್ಲಿ ತಂದು ‘‘ಪಂಜರದ ಗಿಣಿʼ ಯನ್ನಾಗಿ ಯಾಕೆ ಮಾಡಿದ್ದೀರಿ? ‘‘ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮʼ ಸೇರುವಷ್ಟು ವಯಸ್ಸಾಗದೆ ಇದ್ದರೂ ಅವರ ಸಕ್ರಿಯ ರಾಜಕೀಯ ಜೀವನವನ್ನು ಯಾಕೆ ಮೊಟಕುಗೊಳಿಸಿದಿರಿ ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವ ಸ್ಥಾನದಿಂದ ವಂಚಿತರನ್ನಾಗಿ ಮಾಡಿ, ತಮ್ಮ ರಾಜಕೀಯ ವಿರೋಧಿಗಳ ವಿರುದ್ಧದ ದ್ವೇಷದ ರಾಜಕಾರಣಕ್ಕೆ ದಲಿತ ಸಮುದಾಯದ ನಾಯಕನನ್ನು ದುರ್ಬಳಕೆ ಮಾಡಿಕೊಳ್ಳುವುದು ಆ ಸಮುದಾಯಕ್ಕೆ ಮಾಡುವ ಅನ್ಯಾಯ-ಅವಮಾನ ಅಲ್ಲವೇ? ಬಿಜೆಪಿ ನಾಯಕರೇ, ದಲಿತ ನಾಯಕರೊಬ್ಬರನ್ನು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ? ಎಂದು ಕೇಳಿದ್ದಾರೆ.

ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ. ಕನಿಷ್ಠ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯೊಳಗಿನ ‘ಸಂಘಿ ಮನಸ್ಸು’ ಅದನ್ನು ಸಹಿಸಿಕೊಳ್ಳದೆ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿತು. ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು ಎಂದು ಆರೋಪಿಸಿದ್ದಾರೆ.

ದಲಿತ ಸಮುದಾಯದಕ್ಕೆ ಸೇರಿರುವ ನಮ್ಮ ಪಕ್ಷದ ಈಗಿನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡಿ ಕಲಿಯಿರಿ ಎಂದು ಸಿಎಂ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: IND vs ENG Test Series 2025: ಇಂಗ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿಯನ್ನು ವಿರೋಧಿಸುತ್ತಿರುವ ಮತ್ತು ಜಾತಿ ತಾರತಮ್ಯವನ್ನು ಅಂತರಂಗದಲ್ಲಿ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆಯ ಸೋಗುಹಾಕಿರುವ ನಿಮಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೆ ಥಾವರಚಂದ್ ಗೆಹ್ಲೋತ್ ಅವರ ಮೇಲೆ ಕೆಟ್ಟ ಕೆಲಸ ಮಾಡಲು ರಾಜಕೀಯ ಒತ್ತಡ ಹೇರಲು ಹೋಗದೆ, ಅವರು ಸಂವಿಧಾನದತ್ತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ, ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kannada New Movie: ವಿನೋದ್ ಪ್ರಭಾಕರ್ ಅಭಿನಯದ ʼಬಲರಾಮನ ದಿನಗಳುʼ ಚಿತ್ರ ತಂಡದಿಂದ ಬಿಗ್ ಅನೌನ್ಸ್‌ಮೆಂಟ್!

ಪದ್ಮಾವತಿ ಫಿಲಂಸ್ ನಿರ್ಮಾಣದ “ಆ ದಿನಗಳು” ಖ್ಯಾತಿಯ ಕೆ.ಎಂ. ಚೈತನ್ಯ ನಿರ್ದೇಶನದ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರ “ಬಲರಾಮನ ದಿನಗಳು” ಸಿನಿಮಾ (Kannada New Movie) ಬಗ್ಗೆ ಚಿತ್ರ ತಂಡದಿಂದ ಆಗಸ್ಟ್ 23 ರಂದು ಬಿಗ್ ಅನೌನ್ಸ್‌ಮೆಂಟ್ ಮಾಡಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಪದ್ಮಾವತಿ ಫಿಲಂಸ್ ನಿರ್ಮಾಣದ “ಆ ದಿನಗಳು” ಖ್ಯಾತಿಯ ಕೆ.ಎಂ. ಚೈತನ್ಯ ನಿರ್ದೇಶನದ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರ (Kannada New Movie) ʼಬಲರಾಮನ ದಿನಗಳುʼ ಸಿನಿಮಾ ಬಗ್ಗೆ ಚಿತ್ರ ತಂಡದಿಂದ ಬಿಗ್ ಅನೌನ್ಸ್‌ಮೆಂಟ್ ಮಾಡಲಿದೆ.

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ “ಬಲರಾಮನ ದಿನಗಳು” ಚಿತ್ರವನ್ನು ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ನಿರ್ಮಾಣ‌ ಮಾಡುತ್ತಿದ್ದಾರೆ. “ಆ ದಿನಗಳು” ಖ್ಯಾತಿಯ ಕೆ‌.ಎಂ.ಚೈತನ್ಯ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಇದನ್ನೂ ಓದಿ: Job market: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ; ವರ್ಷಾಂತ್ಯದೊಳಗೆ ಹೊಸಬರ ನೇಮಕಕ್ಕೆ ಮುಂದಾದ ಶೇ. 72ರಷ್ಟು ಕಂಪನಿಗಳು!

ಕೆಲವು ದಿನಗಳ ಹಿಂದಷ್ಟೇ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಈ ಚಿತ್ರದ ಮೊದಲ ಪೋಸ್ಟರ್ ಎಲ್ಲರ ಗಮನ ಸೆಳೆದಿತ್ತು. ಆಗಸ್ಟ್ 23 ರಂದು “ಬಲರಾಮನ ದಿನಗಳು” ಚಿತ್ರದ ಕುರಿತು ಬಿಗ್ ಅನೌನ್ಸ್‌ಮೆಂಟ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಅದೇನಿರಬಹುದೆಂಬ ಕುತೂಹಲ ಅಭಿಮಾನಿಗಳಿಗಿದೆ.

ಇದನ್ನೂ ಓದಿ: Home Remedies: ಮಕ್ಕಳನ್ನು ಕಾಡುವ ಶೀತ-ಕೆಮ್ಮಿಗೆ ಮನೆಯಲ್ಲೇ ಇದೆ ಉಪಶಮನ

ಒಟ್ಟಿನಲ್ಲಿ ಪದ್ಮಾವತಿ ಫಿಲಂಸ್ ನಿರ್ಮಾಣದ, ಕೆ.ಎಂ.ಚೈತನ್ಯ ಹಾಗೂ ವಿನೋದ್ ಪ್ರಭಾಕರ್ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಆರಂಭದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.

Continue Reading

ಕರ್ನಾಟಕ

HD Kumaraswamy: ಕಪ್ಪುಚುಕ್ಕೆ ಇಲ್ಲವೆನ್ನುವ ಸಿದ್ದರಾಮಯ್ಯ ವೈಟ್ನರ್ ಉಜ್ಜಿ ʼಕಪ್ಪುಚುಕ್ಕೆʼ ತೆಗೆದಿದ್ದೇಕೆ?; ಕುಮಾರಸ್ವಾಮಿ ಪ್ರಶ್ನೆ

40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ಸಿಎಂ ಸಿದ್ದರಾಮಯ್ಯನವರೇ, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ʼಎಕ್ಸ್‌ʼ ಖಾತೆಯಲ್ಲಿ ಕಿಡಿಕಾರಿದ್ದಾರೆ. ಮೂಡಾದಲ್ಲಿ ನೀವು, ನಿಮ್ಮ ಸಕುಟುಂಬ ಪರಿವಾರ ಸರ್ಕಾರಿ ಭೂಮಿಯನ್ನು ಹೇಗೆಲ್ಲ ಮುಕ್ಕಿತು ಎನ್ನುವುದಕ್ಕೆ ದಂಡಿದಂಡಿ ದಾಖಲೆಗಳೇ ಇವೆ. ನಿಮ್ಮ ಪಟಾಲಂ ಹೆಲಿಕಾಪ್ಟರ್‌ನಲ್ಲಿ ಕದ್ದು ಸಾಗಿಸಿದ ದಾಖಲೆಗಳು ಸುಳ್ಳಾ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

VISTARANEWS.COM


on

HD Kumaraswamy
Koo

ಬೆಂಗಳೂರು: 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಪ್ರಶ್ನಿಸಿದ್ದಾರೆ.

ಈ ಕುರಿತು ಎಕ್ಸ್‌ (ಟ್ವೀಟ್‌)ನಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ʼʼಸಿದ್ದಕರ್ಮಿ ಸಿದ್ದರಾಮಯ್ಯನವರೇ ನಿಮ್ಮ ವಿರುದ್ಧ ಬಂದ ಮೂಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರದಲ್ಲೇ ಉಳಿದು ಲೂಟಿ ಹೊಡೆಯಬೇಕೆನ್ನುವ ನಿಮ್ಮ ಧನದಾಹದ ಹಪಾಹಪಿಯನ್ನೂ ಅರ್ಥ ಮಾಡಿಕೊಳ್ಳಬಲ್ಲೆ. ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುವ ನಿಮ್ಮ ಪ್ರಾರಬ್ಧ ಎಂಥಾ ಕೀಳುಮಟ್ಟಕ್ಕೆ ಇಳಿದಿದೆ ಎನ್ನುವುದನ್ನೂ ಅರ್ಥ ಮಾಡಿಕೊಂಡಿದ್ದೇನೆ. ಎಷ್ಟೇ ಆದರೂ ನೀವು ಸಕಲ ಕಲೆಗಳ ಸಿದ್ದಕರ್ಮಿ, ಇಂಥ ಗಲೀಜು ಕೆಲಸ ನಿಮಗೆ ಬೆಣ್ಣೆಯಿಂದ ಬಂದ ವಿದ್ಯೆ!ʼʼ ಎಂದು ಗೇಲಿ ಮಾಡಿದ್ದಾರೆ.

ಸಾಯಿ ವೆಂಕಟೇಶ್ವರಕ್ಕೆ 550 ಎಕರೆ ಮಂಜೂರು ಮಾಡಿದ್ದೇನೆ ಎಂದು ಬೊಗಳೆ ಬಿಟ್ಟಿದ್ದೀರಿ. ನನ್ನ ಬರವಣಿಗೆ ಫೋರ್ಜರಿ ಆಗಿದೆ. ಪತ್ರಿಕೆಗಳ ವರದಿಗೆ ನಾನು ಉತ್ತರ ಕೊಡುತ್ತೇನೆ. ಪಲಾಯನವಾದ ನನ್ನ ಜಾಯಮಾನವಲ್ಲ. ಆದರೆ, ಆ ವರದಿಯನ್ನೇ ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ? 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: IND vs ENG Test Series 2025: ಇಂಗ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಮೂಡಾದಲ್ಲಿ ನೀವು, ನಿಮ್ಮ ಸಕುಟುಂಬ ಪರಿವಾರ ಸರ್ಕಾರಿ ಭೂಮಿಯನ್ನು ಹೇಗೆಲ್ಲಾ ಮುಕ್ಕಿತು ಎನ್ನುವುದಕ್ಕೆ ದಂಡಿದಂಡಿ ದಾಖಲೆಗಳೇ ಇವೆ. ನಿಮ್ಮ ಪಟಾಲಂ ಹೆಲಿಕಾಪ್ಟರ್‌ನಲ್ಲಿ ಕದ್ದು ಸಾಗಿಸಿದ ದಾಖಲೆಗಳು ಸುಳ್ಳಾ? ಕಪ್ಪುಚುಕ್ಕೆಯನ್ನು ನಿಮ್ಮ ವೈಟ್ನರ್ ಅಳಿಸೀತಾ ಸಿದ್ದರಾಮಯ್ಯನವರೇ? ನನ್ನ ಸಹಿ ಇಲ್ಲ, ಟಿಪ್ಪಣಿಯೂ ಇಲ್ಲ ಅಂತೀರಿ. ಅಪ್ಪಣೆಯನ್ನಷ್ಟೇ ಕೊಟ್ಟಿದ್ದೀರಿ! 14 ಸೈಟಿಗೆ ₹62 ಕೋಟಿ ಪರಿಹಾರ ಕೇಳಲು ಹೇಳಿದ್ದು ಯಾವ ಟಿಪ್ಪಣಿ? ನಿಮ್ಮದು ನಾಲಿಗೆಯೋ.. ಇನ್ನೇನೋ.. ಆಚಾರವಿಲ್ಲದ ನಾಲಿಗೆ ನನ್ನ ತಟ್ಟೆಯತ್ತ ಚಾಚಿದೆ… ಸತ್ತ ಜೀವದ ರುಚಿ ನೆಕ್ಕಲು ಎಂದು ಎಚ್‌ಡಿಕೆ ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: Kannada New Movie: ಕವೀಶ್ ಶೆಟ್ಟಿ, ಮೇಘಾ ಶೆಟ್ಟಿ ಅಭಿನಯದ ʼಆಪರೇಷನ್ ಲಂಡನ್ ಕೆಫೆʼ ಚಿತ್ರದ ಟೀಸರ್ ರಿಲೀಸ್‌

ಮಿಸ್ಟರ್ ಸಿದ್ದರಾಮಯ್ಯ, ನಾನು ಕಾನೂನು ಪಂಡಿತ, ವಕೀಲ ಎನ್ನುತ್ತೀರಿ. 2011ರಲ್ಲಿ ಸುಪ್ರೀಂ ಕೋರ್ಟ್ SITಗೆ ಕೊಟ್ಟ ಆದೇಶವೇನು ಎಂದು ನಿಮಗೆ ಗೊತ್ತಿಲ್ಲವೇ? ನಾನು ವಕೀಲ.. ನಾನು ವಕೀಲ.. ಎಂದು ಪದೇಪದೆ ಹೇಳಬೇಡಿ ಎಂದು ಹಿಂದೆಯೇ ಸಲಹೆ ಮಾಡಿದ್ದೆ. ಬುದ್ಧಿಗೇಡಿಗಳಿಗೆ ಬುದ್ಧಿವಾದ ರುಚಿಸದು. ರಾಜ್ಯಪಾಲರಿಗೆ SIT ಬರೆದ ಪತ್ರ ಇಟ್ಟುಕೊಂಡು ನೀವು ಹಾರಾಟ ಮಾಡುತ್ತಿದ್ದೀರಿ. ಪತಂಗದ ಹಾರಾಟ ನೋಡಲಿಕ್ಕೆ ಚೆಂದ, ಕೆಳಗಿರುವ ಬೆಂಕಿಜ್ವಾಲೆ ಅದಕ್ಕೆ ಅರಿವಿರುವುದಿಲ್ಲ. ನಿಮ್ಮ ಬಗ್ಗೆ ನನಗೆ ಕನಿಕರವಿದೆ. ನಿಮ್ಮ ಆನಂದ ತಾತ್ಕಾಲಿಕ ಸಿದ್ದರಾಮಯ್ಯನವರೇ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಸುತ್ತಲೂ ಪಟಾಲಂ ಕಟ್ಟಿಕೊಂಡು, ಹೈಕಮಾಂಡ್ ಅನ್ನೇ ಕಾಲಕಸ ಮಾಡಿಕೊಂಡು, ನಂಬಿ ಕೈಹಿಡಿದವರ ಬೆನ್ನಿಗೆ ಚೂರಿ ಹಾಕಿ ಕುರ್ಚಿಗಾಗಿ ಪಾಲಿಟಿಕ್ಸ್ ಮಾಡುವ ನಿಮ್ಮ ದಿಕ್ಕೆಟ್ಟ ದುಸ್ಥಿತಿ ನನಗಿಲ್ಲ ಸಿದ್ದರಾಮಯ್ಯನವರೇ.. ನನ್ನ ರಾಜಕಾರಣ ನಿಮ್ಮಂತೆಯೇ ಹಣಕ್ಕೆ, ಅಧಿಕಾರಕ್ಕೆ ಅಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ನಾನು ನಾನೇ… ‘ಸೋತರೆ ಸೋಲಬೇಕು ಬಾಹುಬಲಿಯಂತೆ..’ ಆ ಮಹಾನ್ ವಿರಾಗಿಯೇ ನನ್ನ ಆದರ್ಶ. 20 ತಿಂಗಳ ಅಧಿಕಾರ,14 ತಿಂಗಳ ಸರ್ಕಾರ ತ್ಯಜಿಸುವಾಗಲೂ ನಾನು ನಿರ್ಭಾವುಕ. ಇದು ನಿಮಗೆ ಸಾಧ್ಯವೇ? ಗೌರವಾನ್ವಿತ ಪ್ರಧಾನಮಂತ್ರಿಗಳ ರಕ್ಷಣೆ ಪಡೆದುಕೊಳ್ಳುವ, ಅವರ ಗೌರವಕ್ಕೆ ಧಕ್ಕೆ ತರುವ ಕೆಲಸ ನಾನೆಂದೂ ಮಾಡಲಾರೆ. ನನ್ನನ್ನು ನಾನು ರಕ್ಷಣೆ ಮಾಡಿಕೊಳ್ಳುವುದೂ ಗೊತ್ತು. ನಿಮ್ಮ ದುಷ್ಟತನದ ಭಕ್ಷಣೆಯೂ ಗೊತ್ತು. ನನ್ನ ಪುರಾಣ ಕಂತುಗಳಲ್ಲಿ ಬರುತ್ತದೆ ಎನ್ನುವ ಸಿದ್ದರಾಮಯ್ಯನವರೇ.. ನಿಮ್ಮ ಹೆಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ. ಸಾವಿರಾರು ಚಾಪ್ಟರುಗಳ ಪ್ಯಾನ್ ಇಂಡಿಯಾ ಸಿನಿಮಾವನ್ನೇ ಮಾಡಬಹುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: Job market: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ; ವರ್ಷಾಂತ್ಯದೊಳಗೆ ಹೊಸಬರ ನೇಮಕಕ್ಕೆ ಮುಂದಾದ ಶೇ. 72ರಷ್ಟು ಕಂಪನಿಗಳು!

ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ನಿಮ್ಮ ‘ಸಿದ್ಧಹಸ್ತ’ ಶಾಮೀಲಾಗಿರುವ ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆಯ ಮುಂದೆ ಕಾನ್ಸ್‌ಟೇಬಲ್‌ಗಳು ಸಾಲುಗಟ್ಟಬೇಕಾಗುತ್ತದೆ ಹುಷಾರ್ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಎಕ್ಸ್‌ (ಟ್ವೀಟ್‌)ನಲ್ಲಿ ಬರೆದುಕೊಂಡಿದ್ದಾರೆ.

Continue Reading

ಮಳೆ

Karnataka Weather: ಅಲೆಗಳ ಅಬ್ಬರಕ್ಕೆ ಅಂಕೋಲಾದಲ್ಲಿ ಕೊಚ್ಚಿ ಹೋದ ಮನೆ; ಭಾರಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬಂಡೆಗಳು

Karnataka Weather Forecast: ಕರಾವಳಿಯಲ್ಲಿ ಅಲೆಗಳ ಅಬ್ಬರ ಜೋರಾಗಿದ್ದರೆ, ಇತ್ತ ಮಲೆನಾಡಿನಲ್ಲಿ ಭಾರಿ ಮಳೆಗೆ (Rain News) ಚಾರ್ಮಾಡಿ ಘಾಟ್‌ನಲ್ಲಿ ಬಂಡೆ ಕಲ್ಲುಗಳು ಧರೆಗುರುಳಿವೆ. ವಿಜಯಪುರ, ವಿಜಯನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

By

Karnataka weather Forecast
Koo

ಕಾರವಾರ: ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಅಲೆಗಳ ಅಬ್ಬರ (Karnataka Weather Forecast) ಜೋರಾಗಿದೆ. ಭಾರೀ ಅಲೆಗಳ ಅಬ್ಬರಕ್ಕೆ (Rain News) ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಹಾರವಾಡದ ತರಂಗಮೇಟ ಪ್ರದೇಶದಲ್ಲಿ ಮನೆಯೊಂದು ಕೊಚ್ಚಿಹೋಗಿದೆ. ಮೀನುಗಾರ ಅಶೋಕ್ ಹರಿಕಂತ್ರ ಎಂಬುವವರ ಮನೆ ಸಮುದ್ರಪಾಲಾಗಿದೆ.

ತರಂಗಮೇಟ ತೀರದ ಸುಮಾರು 200 ಮೀಟರ್ ವ್ಯಾಪ್ತಿಯಲ್ಲಿ ಅಲೆಗಳ ಅಬ್ಬರಕ್ಕೆ ಕಳೆದ ಮೂರು ತಿಂಗಳಿಂದ ಕಡಲಕೊರೆತ ಉಂಟಾಗಿತ್ತು. ಕುಟುಂಬಸ್ಥರು ಎರಡು ತಿಂಗಳ ಹಿಂದೆಯೇ ಮನೆ ಬಿಟ್ಟು ಬೇರೆಡೆ ಉಳಿದುಕೊಂಡಿದ್ದರು. ಇಂದು ಗುರುವಾರ ಅಲೆಗಳ ಅಬ್ಬರಕ್ಕೆ ಮನೆ, ತೆಂಗಿನಮರ ನೀರುಪಾಲಾಗಿದೆ. ಮನೆ, ತೆಂಗಿನಮರ ಕೊಚ್ಚಿಹೋಗುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ತರಂಗಮೇಟ ಕಡಲತೀರಕ್ಕೆ ಹೊಂದಿಕೊಂಡು 30ಕ್ಕೂ ಅಧಿಕ ಮೀನುಗಾರರ ಮನೆಗಳು ಇವೆ. ಕಡಲತೀರಕ್ಕೆ ಅಲೆತಡೆಗೋಡೆ ನಿರ್ಮಿಸುವಂತೆ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್‌ನ ತಪ್ಪಲಿನಲ್ಲಿ ಭಾರಿ ಮಳೆಯಾಗಿದೆ. ಧಾರಾಕಾರ ಮಳೆಗೆ ಚಾರ್ಮಾಡಿಯಲ್ಲಿ ಬಂಡೆಗಳು ಧರೆಗುರುಳಿವೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್‌ನ 8 ಮತ್ತು 9ನೇ ತಿರುವಿನಲ್ಲಿ ಘಟನೆ ನಡೆದಿದೆ.

ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಯಲ್ಲೇ ನೀರು ತುಂಬಿ ಹರಿಯುತ್ತಿದೆ. ಮಳೆ ನೀರಿನ ಜತೆ ರಸ್ತೆಗೆ ಕಲ್ಲುಗಳು ತೇಲಿ ಬಂದಿದೆ. ಗುಡ್ಡ ಕುಸಿದು ರಸ್ತೆ ಮೇಲೆ ಬಂಡೆ ಕಲ್ಲುಗಳು ಉರುಳಿವೆ. ಸ್ಥಳಕ್ಕೆ ಚಾರ್ಮಾಡಿ ಘಾಟಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ‌ ಸಂಚಾರ ಎಂದಿನಂತೆ ಇದ್ದು, ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ.

ಇನ್ನೂ ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಗ್ರಾಮಸ್ಥರ ಕಣ್ಣೆದುರೆ ಮನೆಗೆ ಸಿಡಿಲು ಬಡಿದು, ಮನೆ ಚಾವಣಿ ಸಂಪೂರ್ಣ ಹಾನಿಯಾಗಿ, ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಮಾಳಿಗನಾಡು ಗ್ರಾಮದಲ್ಲಿ ಘಟನೆ ನಡೆದಿದೆ.

ಗ್ರಾಮದ ಸೀತು ಎಂಬುವವರ ಮನೆಗೆ ಸಂಪೂರ್ಣ ಹಾನಿಯಾಗಿದೆ. ಮನೆಯ ಸದಸ್ಯರು ತೋಟದ ಕೆಲಸಕ್ಕೆ ಹೋಗಿದ್ದರಿಂದ ಅವಘಡ ಸಂಭವಿಸಿದಾಗ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಮನೆಯ ಹೆಂಚುಗಳು, ಬಾಗಿಲು ಕಿಟಕಿ ಸುಟ್ಟ ಸ್ಥಿತಿ ತಲುಪಿದೆ.

ಇದನ್ನೂ ಓದಿ: Belgavi News : ಪರಿಹಾರ ನೀಡಲು ವಿಳಂಬ; ಬೆಳಗಾವಿ ಎಸಿ ಕಚೇರಿಯ ಕಂಪ್ಯೂಟರ್, ಪ್ರಿಂಟರ್ ಹೊತ್ತೊಯ್ದ ರೈತರು!

ವಿಜಯಪುರದಲ್ಲಿ ಉಕ್ಕಿ ಹರಿಯುತ್ತಿರುವ ಹಳ್ಳ

ಇತ್ತ ರೋಣಿಹಾಳ ಹಳ್ಳ ಉಕ್ಕಿ ಹರಿಯುತ್ತಿದ್ದು, ಜನರು ಹಳ್ಳದಲ್ಲೆ ಓಡಾಡುತ್ತಿದ್ದಾರೆ. ನಿನ್ನೆ ಬುಧವಾರ ತಡರಾತ್ರಿ ಸುರಿದ ಮಳೆಗೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ರೋಣಿಹಾಳ. ಗರಸಂಗಿ, ಆಸಂಗಿ ಹಳ್ಳಗಳು ಉಕ್ಕಿ ಹರಿದಿದೆ. ಅಪಾಯದ ನಡುವೆಯೂ ಗ್ರಾಮಸ್ಥರು ಜೀವದ ಹಂಗು ತೊರೆದು ಹಳ್ಳ ದಾಟಲು ಯತ್ನಿಸುತ್ತಿದ್ದಾರೆ. ವಿಜಯಪುರ ತಾಲೂಕಿನ ಲೋಗಾಂವಿ ಗ್ರಾಮದಲ್ಲಿ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ. ರಾಜು ಹುನ್ನೂರ್ ಎಂಬುವವರಿಗೆ ಸೇರಿದ ದ್ರಾಕ್ಷಿ ಬೆಳೆ ಭಾರಿ ಮಳೆಗೆ ಬೆಳೆಯ ಕಂಬಗಳು ಹಾಗೂ ದ್ರಾಕ್ಷಿ ಬೆಳೆ ನೆಲಕ್ಕುರುಳಿವೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ದ್ರಾಕ್ಷಿ ಹಾನಿಯಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ರೈತರ ಮನವಿ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ತಡ ರಾತ್ರಿ ಭರ್ಜರಿ ಮಳೆಗೆ ಬಹುತೇಕ ಕಡೆ ರಸ್ತೆಗಳು ಜಲಾವೃತಗೊಂಡಿದ್ದವು. ದಾವಣಗೆರೆ ನಗರ ಹಾಗೂ ಹೊನ್ನಾಳಿ ಪಟ್ಟಣ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಸುರಿದ ಮಳೆಯಿಂದಾಗಿ ಜಮೀನಿಗೆ ನೀರು ನುಗ್ಗಿದೆ. ವಿಜಯನಗರ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೈತರ ಜಮೀನಿ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಭಾರಿ ಮಳೆಗೆ ಬೈಲುವದ್ದಿಗೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ಕೆರೆ ಕೋಡಿ ಬಿದ್ದು ಗುಲಾಬಿ ತೋಟ, ಮೆಣಸಿನಕಾಯಿ ತೋಟ, ಹತ್ತಿ, ಹಾಗೂ ಮೆಕ್ಕೆಜೋಳ ಬೆಳೆದಿದ್ದ ಜಮೀನಿಗೆ ನೀರು ನುಗ್ಗಿದೆ. ಹತ್ತಾರು ಸಾವಿರ ಖರ್ಚು ಮಾಡಿದ್ದ ಬೆಳೆ ಮಳೆಗೆ ಮುಕ್ಕಾಲು ಭಾಗ ಹಾನಿಯಾಗಿದೆ. ಬೆಳೆ ಹಾನಿಯಾಗಿದ್ದಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಗುಲಾಬಿ ಬೆಳೆಗಾರ ಕಂಗಾಲಾಗಿದ್ದಾರೆ. ಪರಿಹಾರಕ್ಕಾಗಿ ಹತ್ತಿ, ಮೆಣಸಿನಕಾಯಿ, ಮೆಕ್ಕೆಜೋಳ ಬೆಳೆದ ರೈತರಿಂದ ಆಗ್ರಹಿಸಿದ್ದಾರೆ.

ಬಿರುಗಾಳಿಗೆ ವಾಲಿದ ಸಿಗ್ನಲ್ ಕಂಬ!

ಬಿರುಗಾಳಿಗೆ ಸಿಗ್ನಲ್‌ ಕಂಬ ವಾಲಿದ ಘಟನೆ ಗದಗ ನಗರದ ಮುಳಗುಂದ ನಾಕಾದ ಸಿಗ್ನಲ್‌ನಲ್ಲಿ ಘಟನೆ ನಡೆದಿದೆ. ವಾಹನಗಳ ಓಡಾಡುವ ಸಂದರ್ಭದಲ್ಲಿ ಕಂಬ ವಾಲಿದ್ದು, ಸವಾರರು ಕಕ್ಕಾಬಿಕ್ಕಿಯಾದರು. ತಕ್ಷಣ ಅಲರ್ಟ್ ಟ್ರಾಫಿಕ್ ಪೊಲೀಸರು ಬ್ಯಾರಿಕೆಡ್ ಹಾಕಿ ಪರ್ಯಾಯ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಸ್ಥಳಕ್ಕೆ ಟ್ರಾಫಿಕ್ ಪಿಎಸ್ಐ ಶಕುಂತಲಾ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಾಳೆಗೂ ಇರಲಿದೆ ಮಳೆ ಅಬ್ಬರ

ನಾಳೆ ಶುಕ್ರವಾರ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ನಿರಂತರ ಗಾಳಿಯ ವೇಗ 40-50 ಕಿ.ಮೀ ಬೀಸುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Kannada New Movie: ಮುಖದಲ್ಲಿ ರಕ್ತ, ಕೈಯಲ್ಲಿ ಲಾಂಗ್; ಮಾಸ್ ಅವತಾರದಲ್ಲಿ ನಿರೂಪ್ ಭಂಡಾರಿ

ನಿರೂಪ್ ಭಂಡಾರಿ ಇದೀಗ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ರಕ್ತಸಿಕ್ತ ಮುಖ, ಕೈಯಲ್ಲಿ ಲಾಂಗ್ ಹಿಡಿದು ನಿರೂಪ್ ಕ್ಯಾಮೆರಾ ಎದುರಿಸಿದ್ದಾರೆ. ಇದು ಯಾವ ಚಿತ್ರಕ್ಕಾಗಿ ಅಂತೀರಾ? ನಿರೂಪ್ ‘ಅತಿಕಾಯʼ ಎನ್ನುವ ಹೊಸ ಸಿನಿಮಾದಲ್ಲಿ (Kannada New Movie) ಕಾಣಿಸಿಕೊಳ್ಳುತ್ತಿದ್ದು ಸಿಕ್ಕಾಪಟ್ಟೆ ರಗಡ್ ಆಗಿ ದರ್ಶನ ಕೊಡಲು ಸಜ್ಜಾಗಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಚಾಕೋಲೆಟ್ ಬಾಯ್, ಲವರ್ ಬಾಯ್ ಗೆಟಪ್‌ನಲ್ಲಿ ಮಿಂಚುತ್ತಿದ್ದ ನಿರೂಪ್ ಭಂಡಾರಿ ಇದೀಗ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ರಕ್ತಸಿಕ್ತ ಮುಖ, ಕೈಯಲ್ಲಿ ಲಾಂಗ್ ಹಿಡಿದು ನಿರೂಪ್ ಕ್ಯಾಮೆರಾ ಎದುರಿಸಿದ್ದಾರೆ. ಇದು ಯಾವ ಚಿತ್ರಕ್ಕಾಗಿ ಅಂತೀರಾ? ನಿರೂಪ್ ‘ಅತಿಕಾಯʼ ಎನ್ನುವ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದು ಸಿಕ್ಕಾಪಟ್ಟೆ ರಗಡ್ ಆಗಿ ದರ್ಶನ ಕೊಡಲು ಸಜ್ಜಾಗಿದ್ದಾರೆ.

ಅಂದಹಾಗೆ ಅತಿಕಾಯ ಸಿನಿಮಾ, ನಾಗರಾಜ್ ಪೀಣ್ಯ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಈ ಹಿಂದೆ ʼಪದೇಪದೇʼ, ʼನಮಕ್‌ಹರಾಮ್ʼ ಮೊದಲಾದ ವಿಭಿನ್ನ ರೀತಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ ನಾಗರಾಜ್ ಪೀಣ್ಯ, ಸಣ್ಣ ಗ್ಯಾಪ್‌ನ ಬಳಿಕ ‘ಅತಿಕಾಯʼನಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಬಾರಿ ಹೊಸ ರೀತಿಯ ಕಥೆ ಸಿದ್ಧಪಡಿಸಿಕೊಂಡು ಅಖಾಡಕ್ಕಿಳಿದಿರುವ ನಾಗರಾಜ್, ಈಗಾಗಲೇ ಮೊದಲ ಹಂತದ ಶೂಟಿಂಗ್ ಮುಗಿಸಿದ್ದಾರೆ. ಮತ್ತೊಂದು ಹಂತದ ಚಿತ್ರೀಕರಣಕ್ಕೆ ಅಣಿಯಾಗುತ್ತಿದೆ ಚಿತ್ರತಂಡ.

ಈವರೆಗೂ ಬೆಂಗಳೂರಿನ ಜನಜಂಗುಳಿ ಪ್ರದೇಶಗಳಲ್ಲೇ ಬಹುತೇಕ ಚಿತ್ರೀಕರಣ ನಡೆಸಲಾಗಿದ್ದು, ನೈಜವಾಗಿ ಮೂಡಿಬರಬೇಕೆಂಬ ಕಾರಣದಿಂದ ರಿಯಲಿಸ್ಟಿಕ್ ಆಗಿಯೇ ಶೂಟ್ ಮಾಡಲಾಗಿದೆಯಂತೆ.

ಇದೀಗ ಚಿತ್ರದ ಫಸ್ಟ್‌ಲುಕ್ ಬಿಡುಗಡೆ ಮಾಡಲಾಗಿದ್ದು, ನಿರೂಪ್ ಮಾಸ್ ಗೆಟಪ್ ಅನಾವರಣಗೊಂಡಿದೆ. ನಿರೂಪ್ ಅವರ ಈ ಲುಕ್ ನೋಡಿ ಸಿನಿ ಅಭಿಮಾನಿಗಳು ಕೂಡ ಅಚ್ಚರಿಗೊಂಡಿದ್ದಾರೆ.

ʼಈ ಚಿತ್ರಕ್ಕಾಗಿ ನಿರೂಪ್ ಭಂಡಾರಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ವರ್ಕೌಟ್ ಮಾಡಿ ದೇಹ ದಂಡಿಸಿದ್ದಾರೆ. ಪಾತ್ರಕ್ಕಾಗಿ ಗೆಟಪ್ ಸಹ ಬದಲಾಯಿಸಿಕೊಂಡಿದ್ದಾರೆ. ಅವರು ಈವರೆಗೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ‘ಅತಿಕಾಯʼ ಮೂಲಕ ಎಂಟ್ರಿ ಕೊಡಲಿದ್ದಾರೆ ಎಂಬುದು ವಿಶೇಷ. ಡೈಲಾಗ್ ಡೆಲಿವರಿ ಕೂಡ ಭಿನ್ನವಾಗಿರಲಿದೆ. ಒಟ್ಟಾರೆ ಅವರು ಔಟ್ ಆಂಡ್ ಔಟ್ ಬದಲಾದ ರೂಪದಲ್ಲಿ ಕಾಣಸಿಗುತ್ತಾರೆ. ಸಿನಿಮಾ ಕೂಡ ತುಂಬಾ ರಗಡ್ ಆಗಿರಲಿದೆʼ ಎಂದು ವಿವರಿಸುತ್ತಾರೆ ನಿರ್ದೇಶಕ ನಾಗರಾಜ್ ಪೀಣ್ಯ.

ಇದನ್ನೂ ಓದಿ: IND vs ENG Test Series 2025: ಇಂಗ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಉದಯಲೀಲ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಶ್ರೀನಿವಾಸ್ ಪಿ. ಬಾಬು ಸಂಕಲನ, ಸತೀಶ್ ಆರ್ಯನ್ ಸಂಗೀತ ಸಂಯೋಜಿಸುತ್ತಿದ್ದಾರೆ.

Continue Reading
Advertisement
Viral Video
Latest8 mins ago

Viral Video: ಸೈಕಲ್‌ ಮೇಲೆ ಶಾಲೆಗೆ ಹೋಗುತ್ತಿದ್ದ ಮಕ್ಕಳಿಬ್ಬರಿಗೆ ವಿದ್ಯುತ್‌ ಶಾಕ್‌; ಕ್ಯಾಮೆರಾದಲ್ಲಿ ಸೆರೆಯಾಯ್ತು ಘೋರ ದೃಶ್ಯ

Viral Video
ಸಿನಿಮಾ18 mins ago

Viral Video: ‘ಶೀಲಾ ಕಿ ಜವಾನಿ’ ಹಾಡಿಗೆ ಸಖತ್ ಆಗಿ ಸೊಂಟ ಬಳುಕಿಸಿದ ಬೆಡಗಿ! ವಿಡಿಯೊ ನೋಡಿ

Kannada New Movie
ಬೆಂಗಳೂರು22 mins ago

Kannada New Movie: ವಿನೋದ್ ಪ್ರಭಾಕರ್ ಅಭಿನಯದ ʼಬಲರಾಮನ ದಿನಗಳುʼ ಚಿತ್ರ ತಂಡದಿಂದ ಬಿಗ್ ಅನೌನ್ಸ್‌ಮೆಂಟ್!

HD Kumaraswamy
ಕರ್ನಾಟಕ25 mins ago

HD Kumaraswamy: ಕಪ್ಪುಚುಕ್ಕೆ ಇಲ್ಲವೆನ್ನುವ ಸಿದ್ದರಾಮಯ್ಯ ವೈಟ್ನರ್ ಉಜ್ಜಿ ʼಕಪ್ಪುಚುಕ್ಕೆʼ ತೆಗೆದಿದ್ದೇಕೆ?; ಕುಮಾರಸ್ವಾಮಿ ಪ್ರಶ್ನೆ

MonkeyPox
ಆರೋಗ್ಯ40 mins ago

MonkeyPox: ತೀವ್ರಗೊಳ್ಳುತ್ತಿದೆ ಮಂಕಿ ಪಾಕ್ಸ್; ಮತ್ತೊಮ್ಮೆ ಲಾಕ್‌ಡೌನ್ ಘೋಷಣೆ?

Monsoon Fashion
ಫ್ಯಾಷನ್42 mins ago

Monsoon Fashion: ಟೀನೇಜ್‌ ಹುಡುಗಿಯರ ಮಾನ್ಸೂನ್‌ ಸ್ಟೈಲಿಂಗ್‌‌‌ಗೆ ಸಾಥ್‌ ನೀಡುತ್ತಿರುವ 3 ಫ್ಯಾಷನ್‌ ವೇರ್ಸ್

Home Remedies For Cough And Cold
ಆರೋಗ್ಯ50 mins ago

Home Remedies: ಮಕ್ಕಳನ್ನು ಕಾಡುವ ಶೀತ-ಕೆಮ್ಮಿಗೆ ಮನೆಯಲ್ಲೇ ಇದೆ ಉಪಶಮನ

kolkata Doctor murder case
ದೇಶ1 hour ago

Kolkata Doctor Murder Case: ಟ್ರೈನಿ ವೈದ್ಯೆ ಕೊಲೆ ಪ್ರಕರಣ- ಪ್ರಧಾನಿ ಮೋದಿಗೆ ದಿಢೀರ್‌ ಪತ್ರ ಬರೆದ ಮಮತಾ ಬ್ಯಾನರ್ಜಿ

rishab shetty
ಸಿನಿಮಾ1 hour ago

Rishab Shetty : ಕಂಬಳ ಬಳಿಕ ಕಾಂತಾರ- 2ನಲ್ಲಿ ಕಳರಿ ಪಯಟ್ಟು ಪ್ರದರ್ಶನಕ್ಕೆ ಸಜ್ಜಾದ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ

Viral Video
Latest1 hour ago

Viral Video: ಶವಾಗಾರದಲ್ಲಿ ಶವಗಳ ಪಕ್ಕದಲ್ಲೇ ಲೈಂಗಿಕ ಕ್ರಿಯೆ! ಸಂಚಲನ ಮೂಡಿಸಿದೆ ಈ ವಿಡಿಯೊ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌