Atrocity on women : ಹಿಂದು ಮಹಿಳೆಯರನ್ನು ಟಿಎಂಸಿ ಕಚೇರಿಗೆ ಎಳೆದೊಯ್ದು ಅತ್ಯಾಚಾರ? - Vistara News

ಬೆಂಗಳೂರು

Atrocity on women : ಹಿಂದು ಮಹಿಳೆಯರನ್ನು ಟಿಎಂಸಿ ಕಚೇರಿಗೆ ಎಳೆದೊಯ್ದು ಅತ್ಯಾಚಾರ?

Atrocity on Women : ಪಶ್ಚಿಮ ಬಂಗಾಳದ ಸಂದೇಶಖಾಲಿ ಹಳ್ಳಿಯಲ್ಲಿ ನಡೆಯುತ್ತಿರುವ ಟಿಎಂಸಿ ಗೂಂಡಾಗಳ ವಿರುದ್ಧ ರಾಜ್ಯದ ಮಹಿಳಾ ಮೋರ್ಚಾ ಧ್ವನಿ ಎತ್ತಿದೆ. ಪ್ರಕರಣ ಸಮಗ್ರ ತನಿಖೆಗೆ ಆದೇಶಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

VISTARANEWS.COM


on

Atrocity on Woman BJP Mahila Morcha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯ ಸಂದೇಶಖಾಲಿ ಹಳ್ಳಿಯ (SandeshKhali village) ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ (Atrocity on Women) ನಡೆಯುತ್ತಿದ್ದು, ಇದನ್ನು ಕರ್ನಾಟಕ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ (BJP Mahila Morcha State President) ಸಿ. ಮಂಜುಳಾ (C Manjula) ಅವರು ಖಂಡಿಸಿದ್ದಾರೆ. ಅತ್ಯಾಚಾರ ಮತ್ತು ದೌರ್ಜನ್ಯ ಸೇರಿ ಸಮಗ್ರ ವಿಷಯದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇಲ್ಲಿನ ಕೆಲವು ಹಿಂದು ಹೆಣ್ಮಕ್ಕಳನ್ನು ಟಿಎಂಸಿ ಕಚೇರಿಗೆ ಎಳೆದೊಯ್ದು ಅತ್ಯಾಚಾರ (Rape at TMC Office) ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೊದಲಿನಿಂದಲೂ ಹಿಂದೂಗಳ ಮಾರಣಹೋಮಕ್ಕೆ ಪ್ರಸಿದ್ಧ. ಸಂದೇಶಖಾಲಿ ಹಳ್ಳಿಯಲ್ಲಿ ಕಳೆದ ಒಂದು ವಾರದಿಂದ ತಲ್ಲಣ ಸೃಷ್ಟಿಯಾಗಿದೆ. ಈ ಹಳ್ಳಿಯಲ್ಲಿ ಟಿಎಂಸಿ ಪಕ್ಷದ ಮುಸಲ್ಮಾನ ನಾಯಕ ಶೇಖ್ ಷಹಜಹಾನ್ ನ ಅನುಚರರು ಅವರ ಹಳ್ಳಿಗೆ ನುಗ್ಗಿ, ಮನೆಮನೆಯೊಳಗೆ ನುಗ್ಗಿ, ಯವ್ವನಾವಸ್ಥೆಯಲ್ಲಿರುವ, ಸುಂದರ, ಹಿಂದೂ ಮಹಿಳೆಯರನ್ನು ಎಳೆದುಕೊಂಡು ಹೋಗಿ ಅಲ್ಲಿನ ಟಿಎಂಸಿ ಪಕ್ಷದ ಕಚೇರಿಯಲ್ಲಿ ಅತ್ಯಾಚಾರವೆಸಗಿ ನಿರಂತರವಾಗಿ ಬಲಾತ್ಕಾರ ಮಾಡುತ್ತಿದ್ದಾರೆ ಎಂದು ಮಂಜುಳಾ ವಿವರಿಸಿದ್ದಾರೆ.

Atrocity on Woman West Bengal

ಅಲ್ಲಿನ ಅಧಿಕಾರಿಯೊಬ್ಬರ ಸಮ್ಮುಖದಲ್ಲೇ ಇದೆಲ್ಲ ನಡೆಯುತ್ತಿದ್ದು, ಆ ಹಿಂದೂ ಮಹಿಳೆಯರ ಗಂಡಂದಿರಿಗೆ ಇನ್ನು ಮುಂದೆ ಅವರು ಕೇವಲ ಹೆಸರಿಗೆ ಮಾತ್ರ ಅವರ ಪತಿಯಾಗಿದ್ದು ಇನ್ನು ಮುಂದೆ ಅವರು ಮತ್ತು ಅವರ ಮೇಲಿನ ಸಂಪೂರ್ಣ ಹಕ್ಕು, ಅಧಿಕಾರ ಅವರ ಪತಿಗೆ ಇರುವುದಿಲ್ಲ ಎಂದು ಧಮ್ಕಿ ಹಾಕಿ ಹೆದರಿಸಲಾಗಿದೆ ಎಂದು ಅವರು ಗಮನ ಸೆಳೆದಿದ್ದಾರೆ.

ಈ ದುರ್ಘಟನೆಯ ಕುರಿತು ಸಂದೇಶಖಾಲಿ ಹಳ್ಳಿಯ ಹಿಂದೂ ದಲಿತ ಮಹಿಳೆಯರು ಬೀದಿಗಿಳಿದು ಲಾಠಿ ಹಿಡಿದು ಪ್ರತಿಭಟನೆ ಮಾಡುತ್ತಿದ್ದರೂ ಅಲ್ಲಿನ ಪೊಲೀಸ್‌ ಯಾವುದೇ ಕ್ರಮವನ್ನು ಆ ಟಿಎಂಸಿ ನಾಯಕ ಶೇಖ್ ಷಹಜಹಾನ್ ವಿರುದ್ಧ ಯಾವುದೇ ಕಾನೂನು ಕ್ರಮ ತೆಗೆದುಕೊಂಡಿಲ್ಲ. ಅವನು ತಲೆಮರೆಸಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : Lady Lorry Driver : ಇದಪ್ಪಾ woman power; ಬೃಹತ್‌ ಗಾತ್ರದ ಲಾರಿಗಳನ್ನೂ ಸಲೀಸಾಗಿ ಓಡಿಸುವ ಗಟ್ಟಿಗಿತ್ತಿ

Atrocity on woman: ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶ ಮಾಡಲಿ…

ಯಾವ ಮಹಿಳೆ ಬಗ್ಗೆ ಅಂತಃಕರಣ ಇರಬೇಕೋ, ರಕ್ಷಣೆ ಕೊಡುವ ಜವಾಬ್ದಾರಿ ಇರುವಂತಹ ಒಬ್ಬ ಮುಖ್ಯಮಂತ್ರಿಯೇ ಮಹಿಳೆಯರ ಮೇಲಿನ ಅತ್ಯಾಚಾರವನ್ನು ನೊಡುತ್ತ್ತ, ಅತ್ಯಾಚಾರಿಗಳಿಗೆ ರಕ್ಷಣೆ ಕೊಡುತ್ತಿದ್ದಾರೆ ಎಂಬುದು ಅತ್ಯಂತ ಆತಂಕಕಾರಿ ವಿಚಾರ ಮತ್ತು ಖಂಡನಾರ್ಹ ಕೂಡ ಆಗಿದೆ ಎಂದು ಕು. ಸಿ. ಮಂಜುಳಾ ಅವರು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್, ಮಹಿಳಾ ರಕ್ಷಣೆಗಾಗಿ ತಕ್ಷಣವೇ ಮಧ್ಯ ಪ್ರವೇಶ ಮಾಡಬೇಕೆಂದು ಅವರು ಸಿ. ಮಂಜುಳಾ ವಿನಂತಿಸಿದ್ದಾರೆ.

ಟಿಎಂಸಿ ರೌಡಿ ಶೇಖ್‌ ಷಹಜಹಾನ್‌ ಬಂಧನ, ಕ್ರಮಕ್ಕೆ ಆಗ್ರಹ

ಅಲ್ಲಿನ ಮಹಿಳೆಯರಿಗೆ ನ್ಯಾಯ ಸಿಗಬೇಕು. ಟಿಎಂಸಿಯ ರೌಡಿ ಶೇಖ್ ಷಹಜಹಾನ್ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಅವನು ಆ ಹಿಂದೂ ಮಹಿಳೆಯರ ಕೃಷಿಭೂಮಿಯನ್ನು ಅನೈತಿಕವಾಗಿ ಕಸಿದುಕೊಂಡಿರುವುದನ್ನು ಈ ಕೂಡಲೇ ಹಿಂದಿರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಶೇಖ್ ಷಹಜಹಾನ್, ಆ ಹಳ್ಳಿಯ ಹಿಂದೂ, ಪರಿಶಿಷ್ಟ ಜಾತಿ, ಪಂಗಡದ ಹಾಗೂ ಮೀನುಗಾರರ ದಲಿತ ಮಹಿಳೆಯರಿಗೆ ಸೇರಿದ ಕೃಷಿ ಭೂಮಿಯನ್ನು ಕಾನೂನು ಬಾಹಿರವಾಗಿ, ನಕಲಿ ದಾಖಲೆ ಸೃಷ್ಟಿಸಿ, ವಶದಲ್ಲಿ ಇಟ್ಟುಕೊಂಡಿದ್ದಾನೆ. ಇದೇ ಶೇಖ್ ಶಹಜಹಾನ್ ಜನವರಿ ತಿಂಗಳಲ್ಲಿ ಪಶ್ಚಿಮ ಬಂಗಾಳಕ್ಕೆ ಇ.ಡಿ. ಅಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಅವರ ಮೇಲೆ ದಾಳಿ ಮಾಡಿ ಕೊಲ್ಲಲು ಸಂಚು ರೂಪಿಸಿರುತ್ತಾನೆ. ಇದಾದ ನಂತರ ಅವನು ತಲೆಮರೆಸಿಕೊಂಡಿದ್ದಾನೆ. ಅವನಿಗೆ ರಕ್ಷಣೆ ನೀಡುತ್ತಿರುವುದು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಸರ್ಕಾರ ಎಂದು ಆಕ್ಷೇಪಿಸಿದ್ದಾರೆ.

ಮಹಿಳಾ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕ್ರಮಕ್ಕೆ ಆಗ್ರಹ

ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವನನ್ನು ರಕ್ಷಿಸುತ್ತಿದ್ದಾರೆ. ಇದು ಖಂಡನೀಯ. ಆಕೆ ಒಬ್ಬ ಹೆಣ್ಣಾಗಿ ತನ್ನದೇ ರಾಜ್ಯದ ಮಹಿಳೆಯರಿಗೆ ಈ ರೀತಿ ಅನ್ಯಾಯ ನಡೆಯುತ್ತಿದ್ದರೂ ಯಾವುದೇ ಕಾನೂನು ಕ್ರಮ ಜರುಗಿಸದೇ, ಆ ರೌಡಿ ಮುಸಲ್ಮಾನ ನಾಯಕನಿಗೆ ರಕ್ಷಣೆ ಕೊಡುತ್ತಿರುವುದು ಅತ್ಯಂತ ಖಂಡನೀಯ ಹಾಗೂ ಪ್ರಜಾಪ್ರಭುತ್ವದ ದೌರ್ಭಾಗ್ಯವಾಗಿದೆ. ಇದು ಅತ್ಯಂತ ದುರದೃಷ್ಟಕರ. ಕಳೆದ ವಾರದಿಂದ ಆ ಹಳ್ಳಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಇಷ್ಟಾದರೂ ಮಮತಾ ಬ್ಯಾನರ್ಜಿ ಅಲ್ಲಿಗೆ ಭೇಟಿ ನೀಡಿಲ್ಲ, ಹಿಂದೂ ಮಹಿಳೆಯರನ್ನು ಮಾತನಾಡಿಸಿಲ್ಲ ಎಂದು ಮಂಜುಳಾ ಅವರು ಆಕ್ಷೇಪಿಸಿದ್ದಾರೆ.

ಇಂಥ ಅತ್ಯಾಚಾರಿ, ಅನಾಚಾರಿಗಳನ್ನು ರಕ್ಷಿಸುತ್ತಿರುವ ಬಂಗಾಳದ ಮಹಿಳಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ನಡೆ ಮತ್ತು ಆಡಳಿತವೈಖರಿಯನ್ನು ತೀವ್ರವಾಗಿ ಖಂಡಿಸುವುದಾಗಿ ಅವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

MEIL: ಕೈಗಾ ಪರಮಾಣು ವಿದ್ಯುತ್‌ ಉತ್ಪಾದನೆ ಯೋಜನೆ ಜಾರಿ ಅವಕಾಶ ಗಿಟ್ಟಿಸಿದ ಎಂ.ಇ.ಐ.ಎಲ್‌

MEIL: ನ್ಯೂಕ್ಲಿಯರ್‌ ಪವರ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (ಎನ್‌ಪಿಸಿಐಎಲ್‌) ಶುದ್ಧ ಮತ್ತು ಸುರಕ್ಷಿತ ಅಣು ವಿದ್ಯುತ್‌ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದು, ರಾಜ್ಯದ ಕೈಗಾ ಸ್ಥಾವರದಲ್ಲಿ 2×700 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆ ಯೋಜನೆ ರೂಪಿಸಿದೆ. ಇದಕ್ಕಾಗಿ ಎನ್‌ಪಿಸಿಎಲ್‌ ತನ್ನ ಈವರೆಗಿನ ಬೃಹತ್‌ ಮೊತ್ತ ಎನ್ನಬಹುದಾದದ 12,799 ಕೋಟಿ ರೂ.ಗಳ ಟೆಂಡರ್‌ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ದೇಶದ ಪ್ರಖ್ಯಾತ ಮೂಲಸೌಕರ್ಯ ಸಂಸ್ಥೆ ಎಂ.ಇ.ಐ.ಎಲ್‌ ಈ ವಿದ್ಯುತ್‌ ಸ್ವಾವಲಂಬಿ ನಿರ್ಮಾಣ ಟೆಂಡರ್‌ ಅನ್ನು ತನ್ನದಾಗಿಸಿಕೊಂಡಿದೆ.

VISTARANEWS.COM


on

MEIL got the opportunity to implement Kaiga nuclear power generation project
Koo

ಬೆಂಗಳೂರು: ನ್ಯೂಕ್ಲಿಯರ್‌ ಪವರ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (MEIL) ಶುದ್ಧ ಮತ್ತು ಸುರಕ್ಷಿತ ಅಣು ವಿದ್ಯುತ್‌ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದು, ರಾಜ್ಯದ ಕೈಗಾ ಸ್ಥಾವರದಲ್ಲಿ 2×700 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆ ಯೋಜನೆ ರೂಪಿಸಿದೆ.

ಇದಕ್ಕಾಗಿ ಎನ್‌ಪಿಸಿಎಲ್‌ ತನ್ನ ಈವರೆಗಿನ ಬೃಹತ್‌ ಮೊತ್ತ ಎನ್ನಬಹುದಾದ 12,799 ಕೋಟಿ ರೂ.ಗಳ ಟೆಂಡರ್‌ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ದೇಶದ ಪ್ರಖ್ಯಾತ ಮೂಲಸೌಕರ್ಯ ಸಂಸ್ಥೆ ಎಂ.ಇ.ಐ.ಎಲ್‌ ಈ ವಿದ್ಯುತ್‌ ಸ್ವಾವಲಂಬಿ ನಿರ್ಮಾಣ ಟೆಂಡರ್‌ ಅನ್ನು (Bengaluru News) ತನ್ನದಾಗಿಸಿಕೊಂಡಿದೆ.

ಅಣುಶಕ್ತಿ ಇಲಾಖೆಯ ಅಧೀನದಲ್ಲಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ ಪಿಸಿಐಎಲ್) ನಡೆಸುವ ಎಂಜಿನಿಯರಿಂಗ್, ಸಂಗ್ರಹಣೆ ಮತ್ತು ನಿರ್ಮಾಣ (ಇಪಿಸಿ) ಗುತ್ತಿಗೆಗೆ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಎಂಇಐಎಲ್) ಅತ್ಯಂತ ಕಡಿಮೆ ಬಿಡ್‌ದಾರನಾಗಿ ಹೊರಹೊಮ್ಮಿದೆ. ಈ ಪ್ರತಿಷ್ಠಿತ ಯೋಜನೆಯು ಕರ್ನಾಟಕದ ಕೈಗಾದಲ್ಲಿ ನಿರ್ಮಾಣವಾಗಲಿದ್ದು, ಶುದ್ಧ ಮತ್ತು ವಿಶ್ವಾಸಾರ್ಹ ಪರಮಾಣು ಶಕ್ತಿಯತ್ತ ಭಾರತದ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲಿಗೆ ಸಾಕ್ಷಿಯಾಗಲಿದೆ.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ಗುಣಮಟ್ಟ ಮತ್ತು ವೆಚ್ಚ ಆಧಾರಿತ ಆಯ್ಕೆ (ಕ್ಯೂಸಿಬಿಎಸ್) ವಿಧಾನವನ್ನು ಪರಿಚಯಿಸುವುದರೊಂದಿಗೆ ಈ ಯೋಜನೆಯು ಮಹತ್ವ ಪಡೆದುಕೊಂಡಿದ್ದು, ಈ ಕಠಿಣ ಯೋಜನೆ ಜಾರಿಗೆ ತಾಂತ್ರಿಕ ಪರಿಣಿತಿ ಮತ್ತು ಕಡಿಮೆ ವೆಚ್ಚದ ವಿದ್ಯುತ್‌ ಉತ್ಪಾದನೆ ಹಾದಿ ಸುಗಮಗೊಳಿಸಲಿದೆ.

ಟೆಂಡರ್ ಪ್ರಕ್ರಿಯೆಯು ಮೇ 2023ರಲ್ಲಿ ಪ್ರಾರಂಭವಾಯಿತು, ತಾಂತ್ರಿಕ ಬಿಡ್ ಅಕ್ಟೋಬರ್ 2023 ರಲ್ಲಿ ತೆರೆಯಲ್ಪಟ್ಟಿತು. ಅತ್ಯಂತ ಸ್ಪರ್ಧಾತ್ಮಕ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ದೇಶದ ಪ್ರಮುಖ ಮೂಲ ಸೌಕರ್ಯ ಸಂಸ್ಥೆಗಳಾದ ಬಿಎಚ್ಇಎಲ್, ಎಲ್ ಅಂಡ್‌ ಟಿ ಮತ್ತು ಎಂಇಐಎಲ್ ಆಸಕ್ತಿ ತೋರಿಸಿತ್ತು. ಎಂಇಐಎಲ್ 12,799.92 ಕೋಟಿ ರೂ.ಗಳ ಕನಿಷ್ಠ ಬಿಡ್ ಸಲ್ಲಿಸುವ ಮೂಲಕ ತನ್ನ ಅಸಾಧಾರಣ ತಾಂತ್ರಿಕ ಸಾಮರ್ಥ್ಯ ಮತ್ತು ವೆಚ್ಚ-ದಕ್ಷತೆಯನ್ನು ಪ್ರದರ್ಶಿಸುವ ಮೂಲಕ ಅತ್ಯಂತ ಕಡಿಮೆ ಬಿಡ್‌ದಾರನಾಗಿ ಹೊರಹೊಮ್ಮುವ ಮೂಲಕ ನಿರ್ಮಾಣ ಕಾರ್ಯದ ಜವಾಬ್ದಾರಿ ವಹಿಸಿಕೊಂಡಿದೆ.

“ಈ ಒಪ್ಪಂದವು ಎಂಇಐಎಲ್‌ಗೆ ಮಹತ್ವದ ಯೋಜನೆ ಜತೆಗೆ ಪರಮಾಣು ಇಂಧನ ಕ್ಷೇತ್ರದ ಪ್ರವೇಶಕ್ಕೆ ಸಮರ್ಥ ವೇದಿಕೆಯಾಗಿದೆ ” ಎಂದು ಎಂಇಐಎಲ್ ನಿರ್ದೇಶಕ ಸಿ.ಎಚ್.ಸುಬ್ಬಯ್ಯ ಹೇಳಿದ್ದಾರೆ.

ಇದನ್ನೂ ಓದಿ: Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

“ಉತ್ಕೃಷ್ಟತೆ ಮತ್ತು ನಾವೀನ್ಯತೆಗೆ ಹೆಸರುವಾಸಿಯಾಗಿರುವ ಎಂಇಐಎಲ್‌ ಈ ಯೋಜನೆ ಮೂಲಕ ದೇಶದ ಶುದ್ಧ ಇಂಧನ ಪರಿಹಾರ ಮತ್ತು ಸ್ವಾವಲಂಬನೆಗೆ ಕೊಡುಗೆ ನೀಡಲು ಉತ್ಸುಕವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Continue Reading

ಕರ್ನಾಟಕ

DK Shivakumar: ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್

DK Shivakumar: ಬಿಜೆಪಿ ರೈತರ ವಿರೋಧಿ ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM DK Shivakumar statement about milk price hike
Koo

ಬೆಂಗಳೂರು: ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿರುಗೇಟು ನೀಡಿದರು.

ವಿಧಾನಸೌಧದ ಆವರಣದಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಹಾಲಿನ ದರ ಏರಿಕೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಹಾಲಿನ ದರಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ ಬೆಲೆಗೆ ಹಾಲು ನೀಡಲಾಗುತ್ತಿದೆ ಎಂದರು.

ಬೆಲೆ ಏರಿಕೆ ಹಣ ರೈತರಿಗೆ ಹೋಗುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷರು ಹೇಳಿದ್ದಾರೆ ಎಂದು ಕೇಳಿದಾಗ, “ಕೆಎಂಎಫ್ ಎಂದರೆ ರೈತರು, ಅದು ರೈತರ ಒಕ್ಕೂಟ. ಯಾರು ಏನಾದರೂ ವಿವಾದ ಮಾಡಲಿ, ಪರವಾಗಿಲ್ಲ. ನನ್ನ ಪ್ರಕಾರ ಹಾಲಿನ ದರ ಇನ್ನೂ ಹೆಚ್ಚಳ ಮಾಡಬೇಕಿತ್ತು. ರೈತರು ತಮ್ಮ ಹಸುಗಳನ್ನು ಮಾರಿಕೊಳ್ಳುವ ದುಸ್ಥಿತಿಯಲ್ಲಿ ಇದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಎಷ್ಟಿದೆ ಎಂದು ತಿಳಿದು, ಆಮೇಲೆ ಮಾತಾಡಲಿ. ರೈತರನ್ನು ಬದುಕಿಸುವ ಕೆಲಸ ಮಾಡಲಿ” ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು: ವಿರೋಧ ಪಕ್ಷದ ನಾಯಕನಾಗಬೇಕು ಎಂಬುದು ರಾಹುಲ್ ಗಾಂಧಿ ಅವರ ಬಯಕೆಯಲ್ಲ. ಇದು ಜನರ ಬಯಕೆ. ನಮ್ಮ ಮನವಿಯನ್ನು ಒಪ್ಪಿ ವಿರೋಧ ಪಕ್ಷದ ನಾಯಕ ಜವಾಬ್ದಾರಿ ವಹಿಸಿಕೊಂಡ ರಾಹುಲ್ ಗಾಂಧಿ ಅವರಿಗೆ ದೇಶದ ಜನರ ಪರವಾಗಿ, ಇಂಡಿಯಾ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗೆ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಈ ತೀರ್ಮಾನ ನಾವು ಸ್ವಾಗತಿಸುತ್ತೇವೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ತೀರ್ಮಾನ ಕೈಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಒತ್ತಡ ಹಾಕಿದ ಇಂಡಿಯಾ ಮೈತ್ರಿಕೂಟ ನಾಯಕರಿಗೆ ಅಭಿನಂದನೆಗಳು. ಈ ದೇಶದ ರಕ್ಷಣೆ ಹಾಗೂ ಜನರ ಹಿತ ಕಾಯಲು ಇಂಡಿಯಾ ಮೈತ್ರಿಕೂಟ ಹೋರಾಟ ಮಾಡಲಿದೆ ಎಂದರು.

ಇದನ್ನೂ ಓದಿ: Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

ಹೆಚ್ಚುವರಿ ಡಿಸಿಎಂ ಬೇಡಿಕೆ ಚರ್ಚೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಕೇಳಿ. ಈ ಬಗ್ಗೆ ಉತ್ತರ ನೀಡಲು ಅವರೇ ಸೂಕ್ತ ವ್ಯಕ್ತಿ ಎಂದು ತಿಳಿಸಿದರು.

Continue Reading

ಬೆಂಗಳೂರು

HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

HD Kumaraswamy: ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಮಂತ್ರಿ ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ. ಆ ಮಹಾಪುರುಷರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಹೃದಯದಲ್ಲಿ ಗೌರವ ಎನ್ನುವುದು ಇದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

VISTARANEWS.COM


on

Union Minister HD Kumaraswamy latest statement in New Delhi
Koo

ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತೂ ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು.

ನವದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ ಎಂದರು.

ಕೆಂಪೇಗೌಡರ ಜಯಂತಿಗೆ ನನಗೆ ಆಹ್ವಾನ ಇಲ್ಲ, ಆಹ್ವಾನ ಪತ್ರಿಕೆಯಲ್ಲಿ ಹೆಸರೂ ಹಾಕಿಲ್ಲ ಎಂದು ನೀವು ಕೇಳಿದಿರಿ ಎನ್ನುವ ಕಾರಣಕ್ಕೆ ನಾನು ಮಾತಾಡಬೇಕಾಯಿತು. ನನ್ನ ಹೃದಯದಲ್ಲಿ ನಾಡಪ್ರಭುಗಳು ಇದ್ದಾರೆ. ಅವರು ಕಾರ್ಯಕ್ರಮಕ್ಕೆ ಕರೆಯದಿರುವುದಕ್ಕೆ ನನಗೆ ಬೇಸರವಿಲ್ಲ, ನಾನು ಈ ವಿಚಾರಕ್ಕೆ ಮಹತ್ವ ಕೊಡುವುದಿಲ್ಲ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ನಾನು ಯಾವಾಗಲೂ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿ ಎಂದು ಹೇಳುವುದಿಲ್ಲ. ಪ್ರೀತಿಯಿಂದ ಕರೆದರೆ ಹೋಗುತ್ತೇನೆ. ನಾನು ಈಗ ದೆಹಲಿಯಲ್ಲಿ ಸಂಸತ್ ಕಲಾಪದಲ್ಲಿ ಭಾಗಿಯಾಗಿದ್ದೇನೆ. ನಾಳೆಯ ದಿನ ರಾಷ್ಟ್ರಪತಿಗಳು ಸಂಸತ್ತಿನ ಜಂಟಿ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅವರು ಕರೆದಿದ್ದರೂ ಹೋಗಲು ಆಗುತ್ತಿರಲಿಲ್ಲ ಎಂದರು. ನಾನು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆದಾಗಲೂ ಆ ನಗರಕ್ಕೆ ಕೊಡುಗೆ ಕೊಟ್ಟಿದ್ದೇನೆ. ಕೆಂಪೇಗೌಡರ ಹಿರಿಮೆಗೆ ಧಕ್ಕೆ ಆಗದ ರೀತಿಯಲ್ಲಿ ಕೆಲಸ ಮಾಡಿದ್ದೇನೆ. ಕೆಂಪೇಗೌಡರಿಗೆ ಯಾವ ರೀತಿ ಗೌರವ ಸಲ್ಲಿಸಬೇಕೋ ಹಾಗೆ ನಡೆದುಕೊಂಡಿದ್ದೇನೆ ಎಂದು ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

ಕೆಂಪೇಗೌಡರ ಜಯಂತಿಯನ್ನು ಬೇರೆ ಬೇರೆ ರೀತಿಯಲ್ಲಿ ಜನರು ಆಚರಣೆ ಮಾಡುತ್ತಾರೆ. ಸರ್ಕಾರ ಬೇರೆ ರೀತಿಯಲ್ಲಿ ಆಚರಣೆ ಮಾಡುತ್ತದೆ. ದೇವನಹಳ್ಳಿ ಸೇರಿ ರಾಜ್ಯದ ಅನೇಕ ಭಾಗಗಳಲ್ಲಿ ಮನೆ ಮನೆಯಲ್ಲೂ ನಾಡಪ್ರಭುಗಳ ಭಾವಚಿತ್ರ ಇಟ್ಟು ಪೂಜೆ ಮಾಡಿ ಜಯಂತಿಯನ್ನು ಆಚರಣೆ ಮಾಡುತ್ತಾರೆ. ನಾನು ಸಹ ದೆಹಲಿಯಲ್ಲಿಯೇ ಕೆಂಪೇಗೌಡರನ್ನು ಸ್ಮರಣೆ ಮಾಡುತ್ತೇನೆ ಎಂದರು.

ಕೆಂಪೇಗೌಡರು ಕಟ್ಟಿಸಿದ ಕೆರೆಗಳನ್ನು ರಕ್ಷಿಸಿ

ಬೆಂಗಳೂರು ನಗರದ ಬಗ್ಗೆ ಇಂದು ವಿಶ್ವದಲ್ಲೇ ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣ ಕೆಂಪೇಗೌಡರು. ಅವರು ಕಟ್ಟಿರುವ ಕೆರೆಗಳನ್ನು ಈಗಿನ ದಿನಗಳಲ್ಲಿ ಸ್ವಾರ್ಥಕ್ಕೆ ಕೆಲವರು ನುಂಗಿದ್ದಾರೆ. ಈಗಲಾದರೂ ಆ ಕೆರೆಗಳನ್ನು ಕಾಪಾಡುವ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಮೇಕೆದಾಟು ಕಟ್ಟಬೇಕು, ಕುಡಿಯುವ ನೀರು ತರುತ್ತೇವೆ ಎಂದೆಲ್ಲಾ ಹೇಳುತ್ತಾರೆ. ಆದರೆ, ನಗರದ ಜಲಮೂಲಗಳಾಗಿದ್ದ ಕೆರೆಗಳನ್ನು ನುಂಗಿ ನೀರು ಕುಡಿದಿದ್ದಾರೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಈಗಲೇ ಕುಡಿಯಲು ನೀರಿಲ್ಲದೆ ಜನರು ಬೆಂಗಳೂರಿನಲ್ಲಿ ಪರದಾಡುವ ಪರಿಸ್ಥಿತಿ ಇದೆ. 15 ವರ್ಷವಾದ ಮೇಲೆ ಬೆಂಗಳೂರಿನ ಸ್ಥಿತಿ ಏನಾಗುತ್ತದೋ ಗೊತ್ತಿಲ್ಲ. ಈ ಸರಕಾರ ನ್ಯಾಯಯುತವಾಗಿ ಕೆಂಪೇಗೌಡರ ಜಯಂತಿ ಆಚರಣೆ ಮಾಡೋದಾದರೆ ಆ ಕೆರೆಗಳನ್ನು ರಕ್ಷಣೆ ಮಾಡುವಂತಹ ಕೆಲಸ ಮಾಡಲಿ. ಮಳೆ ನೀರನ್ನು ಸರಿಯಾಗಿ ಬಳಸಿಕೊಳ್ಳುವತ್ತ ಚಿಂತನೆ ಮಾಡಲಿ. ಇಷ್ಟು ಮಾಡಿದರೆ ನಾನು ಸರ್ಕಾರಕ್ಕೆ ಸಲ್ಯೂಟ್ ಮಾಡುತ್ತೇನೆ ಎಂದು ಕೇಂದ್ರ ಸಚಿವರು ಹೇಳಿದರು.

ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಬಿಜೆಪಿ ಅಭ್ಯರ್ಥಿ ಅಂತಲ್ಲ, ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಒಮ್ಮತವಾಗಿ ಸ್ಪರ್ಧೆ ಮಾಡಲಿದ್ದಾರೆ. ಇನ್ನೂ ಸಾಕಷ್ಟು ಸಮಯ ಇದೆ. ನಾವು ನಿರ್ಧಾರ ಮಾಡುತ್ತೇವೆ. ಮೈತ್ರಿ ಅಭ್ಯರ್ಥಿ ಅಲ್ಲಿ ಸ್ಪರ್ಧೆ ಮಾಡುತ್ತಾರೆ. ಬಿಜೆಪಿ -ಜೆಡಿಎಸ್ ಎನ್ನುವ ವಿಚಾರ ಅಲ್ಲಿ ಬರೋದೇ ಇಲ್ಲಾ. ಮೈತ್ರಿ ಅಭ್ಯರ್ಥಿ ಸ್ಪರ್ಧೆ ಮಾಡುತ್ತಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು ಇದ್ದರು.

ಇದನ್ನೂ ಓದಿ: Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

Continue Reading

ಪ್ರಮುಖ ಸುದ್ದಿ

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Kempegowda Jayanti: ರಾಜ್ಯ ಸರ್ಕಾರದಿಂದ ಆಚರಿಸುವ ಕೆಂಪೇಗೌಡ ಜಯಂತಿಗೆ ಒಕ್ಕಲಿಗ ಸಮುದಾಯದ ಹಿರಿಯ ನಾಯಕರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ. ಇದು ಒಕ್ಕಲಿಗ ಸಮುದಾಯಕ್ಕೆ ಅವಮಾನದ ವಿಚಾರವಾಗಿದೆ.

VISTARANEWS.COM


on

kempegowda Jayanti
Koo

ಬೆಂಗಳೂರು: ಕೆಂಪೇಗೌಡ ಜಯಂತಿ (Kempegowda Jayanti) ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಒಕ್ಕಲಿಗ ಸಂಘ ತಿರುಗಿಬಿದ್ದಿದೆ. ಸರ್ಕಾರದ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿ ರಾಜ್ಯ ಒಕ್ಕಲಿಗರ ಸಂಘ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಪತ್ರಿಕಾ ಪ್ರಕಟಣೆಯಲ್ಲಿ ಏನಿದೆ?

ರಾಜ್ಯ ಸರ್ಕಾರದ ವತಿಯಿಂದ ಜೂನ್‌ 27ರಂದು ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯನ್ನು ಆಚರಿಸುತ್ತಿರುವುದು ಸಂತೋಷದ ವಿಚಾರ. ಆದರೆ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಹಿರಿಯ ನಾಯಕರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ. ಇದು ಒಕ್ಕಲಿಗ ಸಮುದಾಯಕ್ಕೆ ಅವಮಾನದ ವಿಚಾರವಾಗಿದೆ. ಸರ್ಕಾರದ ಈ ಧೋರಣೆಯನ್ನು ಒಕ್ಕಲಿಗರ ಸಮುದಾಯ ಮತ್ತು ರಾಜ್ಯ ಒಕ್ಕಲಿಗರ ಸಂಘವು ತೀವ್ರ ಖಂಡಿಸುತ್ತದೆ ಎಂದು ಸಂಘ ತಿಳಿಸಿದೆ.

ಇದನ್ನೂ ಓದಿ | Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

CM Siddaramaiah

ಬೆಂಗಳೂರು: ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ಅವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೆ. ವಿಪಕ್ಷ ನಾಯಕರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಅವರಿಗೆ ಅಭಿನಂದನೆ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಹೇಳಿದರು.

ಹಾಲಿನ ಉತ್ಪಾದನೆ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ

ಹಾಲಿನ ದರ ಹೆಚ್ಚಾಗಿಲ್ಲ. ಕಳೆದ ವರ್ಷ ಇದೇ ವೇಳೆಗೆ ಹಾಲಿನ ಉತ್ಪಾದನೆ 90 ಲಕ್ಷ ಲೀಟರ್ ಇತ್ತು. ಈಗ 99 ಲಕ್ಷ ಲೀಟರ್‌ಗಿಂತ ಹೆಚ್ಚಾಗಿದೆ. ರೈತರಿಂದ ನಾವು ಹಾಲು ಪಡೆಯಬೇಕಾಗಿದ್ದು, ಅದನ್ನು ಮಾರಾಟ ಮಾಡಬೇಕಿದೆ. ಅರ್ಧ ಲೀಟರ್ ಪ್ಯಾಕೆಟ್‌ನಲ್ಲಿ 50 ಮೀ.ಲೀ ಹೆಚ್ಚು ಮಾಡಿದ್ದು, ಅದಕ್ಕೆ ತಗಲುವ 2.10 ರೂ.ಗಳನ್ನು ಪ್ರಮಾಣಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ ಎಂದು ಪುನರುಚ್ಚರಿಸಿದರು. ಮಾರುಕಟ್ಟೆ ಅಗತ್ಯವಿದೆ, ಹಾಲಿನ ಬೆಲೆ ಹೆಚ್ಚು ಮಾಡಿಲ್ಲ. ಹಾಲು ಹೆಚ್ಚು ಉತ್ಪಾದನೆಯಾಗಿರುವುದನ್ನು ಹೆಚ್ಚು ನೀಡಿ ಅದಕ್ಕೆ ತಕ್ಕದರವನ್ನಷ್ಟೇ ನಿಗದಿ ಮಾಡಲಾಗಿದೆ ಎಂದರು.

ಹಾಲಿನ ದರ ಏರಿಕೆಯಾಗಿಲ್ಲ: ಕಾಫಿ, ಟೀ ದರಗಳ ಹೆಚ್ಚಳ ಸಲ್ಲದು

ಹೋಟೆಲ್ ಮಾಲೀಕರ ಸಂಘದವರು ಸಭೆ ಸೇರಿ ಕಾಫಿ‌, ಟೀ ದರಗಳನ್ನು ಹೆಚ್ಚಿಸಲಾಗುವುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅವರು ಹೇಗೆ ಹೆಚ್ಚಿಸುತ್ತಾರೆ, ಹಾಲಿನ ಬೆಲೆ ಏರಿದ್ದರೆ ಮಾತ್ರ ಹೆಚ್ಚಿಸಬೇಕು ಎಂದರು.

ಇದನ್ನೂ ಓದಿ | CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

ರೈತರಿಂದ ಹಾಲು ಕೊಳ್ಳಬೇಕು

ಹೆಚ್ಚಾಗಿ ಉತ್ಪಾದನೆಯಾಗಿರುವ ಹಾಲನ್ನು ರೈತರಿಂದ ಕೊಳ್ಳಬೇಕೆ ಹೊರತು ಚೆಲ್ಲಲಾಗುವುದಿಲ್ಲ. ಕೊಳ್ಳುವವವರಿಗೆ ಹಾಲು ಹೆಚ್ಚಾಗಿ ದೊರೆಯುತ್ತಿದ್ದು ಜನ ಹಾಲನ್ನು ಕೊಳ್ಳಬೇಕು ಎಂದರು. ಇದೇ ವೇಳೆ ಸಂಸದರ ಸಭೆಗೆ ದೆಹಲಿಗೆ ತೆರಳುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹೋಗುವಾಗ ಹೇಳುತ್ತೇನೆ ಎಂದರು.

Continue Reading
Advertisement
DCM Dk shivakumar statement in bagilige bantu sarkara sevege irali sahakara programme in channapattana
ಕರ್ನಾಟಕ26 mins ago

DK Shivakumar: ಸರ್ಕಾರಿ ಅಧಿಕಾರಿಗಳು ಗುಲಾಮರೆಂದ ಮಾಜಿ ಶಾಸಕ; ಕ್ಷಮೆ ಕೇಳಿದ ಡಿ.ಕೆ. ಶಿವಕುಮಾರ್

MEIL got the opportunity to implement Kaiga nuclear power generation project
ಕರ್ನಾಟಕ33 mins ago

MEIL: ಕೈಗಾ ಪರಮಾಣು ವಿದ್ಯುತ್‌ ಉತ್ಪಾದನೆ ಯೋಜನೆ ಜಾರಿ ಅವಕಾಶ ಗಿಟ್ಟಿಸಿದ ಎಂ.ಇ.ಐ.ಎಲ್‌

DCM DK Shivakumar statement about milk price hike
ಕರ್ನಾಟಕ38 mins ago

DK Shivakumar: ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್

Union Minister HD Kumaraswamy latest statement in New Delhi
ಬೆಂಗಳೂರು42 mins ago

HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

NEET UGC NET Exam irregularities protest demanding investigation
ರಾಯಚೂರು46 mins ago

Raichur News: ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ; ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

kempegowda Jayanti
ಪ್ರಮುಖ ಸುದ್ದಿ52 mins ago

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Sam Pitroda
ಪ್ರಮುಖ ಸುದ್ದಿ56 mins ago

Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ

ECE V/S CSE
ಶಿಕ್ಷಣ1 hour ago

ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?

Vijayalakshmi Darshan
ಕರ್ನಾಟಕ2 hours ago

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Monsoon Rain Boots Fashion
ಫ್ಯಾಷನ್2 hours ago

Monsoon Rain Boots Fashion: ಮಕ್ಕಳ ಮಾನ್ಸೂನ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್‌ ಬೂಟ್ಸ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌