Blast in Bengaluru : ರಾಮೇಶ್ವರಂ ಕೆಫೆಯಲ್ಲಿ ಬಾಂಬಿಟ್ಟವನು ಹೀಗಿದ್ದಾನೆ ನೋಡಿ, ರೇಖಾಚಿತ್ರ ರಿಲೀಸ್ - Vistara News

ಬೆಂಗಳೂರು

Blast in Bengaluru : ರಾಮೇಶ್ವರಂ ಕೆಫೆಯಲ್ಲಿ ಬಾಂಬಿಟ್ಟವನು ಹೀಗಿದ್ದಾನೆ ನೋಡಿ, ರೇಖಾಚಿತ್ರ ರಿಲೀಸ್

Blast in Bengaluru : ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಬಾಂಬಿಟ್ಟ ಆರೋಪಿಯ ರೇಖಾಚಿತ್ರವನ್ನು ಕಲಾವಿದ ಹರ್ಷ ಎಂಬವರು ಬಿಡುಗಡೆ ಮಾಡಿದ್ದಾರೆ.

VISTARANEWS.COM


on

Blast-in-Bengaluru-rekha-chitra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾರ್ಚ್‌ 1ರಂದು ಬೆಂಗಳೂರಿನ ವೈಟ್‌ ಫೀಲ್ಡ್‌ನ ಸಮೀಪದ ಬ್ರೂಕ್‌ ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಬಾಂಬ್‌ ಇಟ್ಟ (Blast in Bengaluru) ದುಷ್ಕರ್ಮಿ, ಟೋಪಿವಾಲಾ ಬಾಂಬರ್‌ನ (Topiwala Bomber) ಪತ್ತೆಗೆ‌ ಸುಳಿವು ನೀಡುವವರಿಗೆ ರಾಷ್ಟ್ರೀಯ ತನಿಖಾ ದಳ (National Investigation Agency-NIA) 10 ಲಕ್ಷ ರೂ. ಬಹುಮಾನ ಘೋಷಣೆ (Rupees 10 lakhs prize) ಮಾಡಿದೆ. ಅದರ ಬೆನ್ನಿಗೇ ಹರ್ಷ ಎಂಬ ಕಲಾವಿದರೊಬ್ಬರು ಆ ದುಷ್ಟ ಹೇಗಿರಬಹುದು ಎಂಬ ಬಗ್ಗೆ ರೇಖಾಚಿತ್ರಗಳನ್ನು ರಚಿಸಲಾಗಿದೆ. ಅದರ ಜತೆಗೆ ಆತ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ದಾಖಲಾದ ಒಂದು ಚಿತ್ರವೂ ಬಿಡುಗಡೆಯಾಗಿದೆ. ಈ ಚಿತ್ರಗಳು ಆರೋಪಿಯ ಚಹರೆಗೆ ಸಂಬಂಧಿಸಿ ಸಾಕಷ್ಟು ಸುಳಿವುಗಳನ್ನು ನೀಡುತ್ತಿದೆ. ಹೀಗಾಗಿ ಈ ಕಿರಾತಕನ ಬಂಧನದ ಕ್ಷಣಗಳು ಹತ್ತಿರವಾಗುತ್ತಿರುವುದು ಖಚಿತವಾಗಿದೆ.

ಘಟನೆ ನಡೆದು ಏಳು ದಿನಗಳೇ ಕಳೆದರೂ ಆರೋಪಿಯನ್ನು ಸೆರೆ ಹಿಡಿಯಲು ಪೊಲೀಸ್‌ ಇಲಾಖೆ ಮತ್ತು ಎನ್‌ಐಎ ವಿಫಲವಾಗಿದೆ. ಇದಕ್ಕೆ ಮುಖ್ಯ ಕಾರಣ. ಆರೋಪಿ ಟೋಪಿ ಧರಿಸಿದ್ದು, ಮಾಸ್ಕ್‌ ಹಾಕಿಕೊಂಡಿದ್ದು ಮತ್ತು ಎಲ್ಲೂ ಸಿಸಿಟಿವಿ ಕ್ಯಾಮೆರಾಗಳಿಗೆ ಮುಖ ಕಾಣಿಸದೆ ಇದ್ದದ್ದು. ಅದರ ಜತೆಗೆ ಆತ ಹೋಟೆಲ್‌ಗೆ ಬಂದು ಬಾಂಬಿಟ್ಟು ಹೋದ ಬಳಿಕ ಒಂದು ಗಂಟೆಗಿಂತಲೂ ಹೆಚ್ಚು ಹೊತ್ತು ಸಮಯಾವಕಾಶ ಸಿಕ್ಕಿದ್ದರಿಂದ ಆತ ದೂರ ಹೋಗಿ ತಪ್ಪಿಸಿಕೊಳ್ಳಲು ಅವಕಾಶವಾಗಿದೆ ಎನ್ನಲಾಗಿದೆ.

ಹೀಗಾಗಿ ಆತ ಎಲ್ಲಿದ್ದಾನೆ ಎಂಬ ಬಗ್ಗೆ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಎನ್‌ಐಎ ಪ್ರಯತ್ನ ನಡೆಸಿದೆ. ದುಷ್ಕರ್ಮಿಗಳ ಸುಳಿದು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ಆರೋಪಿ ಸುಳಿವು ನೀಡುವವರು ಎನ್.ಐ.ಎ ನ ಈ ನಂಬರ್ ಗೆ ಸಂಪರ್ಕಿಸಬಹುದು ಎಂದು 080289510999-89042441100 ನಂಬರನ್ನು ನೀಡಿದೆ. ಮಾಹಿತಿ ನೀಡಿದ ಬಾತ್ಮೀದಾರರ ಮಾಹಿತಿ ಗೌಪ್ಯತೆ ಕಾಪಾಡಲಾಗುವುದು ಎಂದು ಭರವಸೆ ನೀಡಿದೆ.

Blast in Bengaluru Bomber topilwala

ರೇಖಾ ಚಿತ್ರ ಬಿಡುಗಡೆ ಮಾಡಿದ ಆರ್ಟಿಸ್ಟ್‌ ಹರ್ಷ

ಈ ನಡುವೆ ಕಲಾವಿದ ಹರ್ಷ ಎಂಬವರು ಶಂಕಿತನ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಸಿಸಿ ಟಿವಿ ದೃಶ್ಯಾವಳಿಗಳು ಮತ್ತು ಎನ್‌ಐಎ ಬಿಡುಗಡೆ ಮಾಡಿದ ಚಿತ್ರವನ್ನು ಅದರಿಸಿ ಆತ ನಿಜವಾಗಿಯೂ ಹೇಗಿರಬಹುದು ಎಂಬ ಮುಖ ಚಿತ್ರವನ್ನು ಬಿಡಿಸಿದ್ದಾರೆ.

Blast in Bengaluru

ಈ ನಡುವೆ ಎನ್‌ಐಎ ಚೆನ್ನೈನಲ್ಲಿ ‌ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದೆ. ಅದರ ನಡುವೆ ಪ್ರಸಕ್ತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಲಷ್ಕರ್‌ ಇ ತಯ್ಬಾ ಜತೆ ಸಂಪರ್ಕ ಹೊಂದಿರುವ ಟಿ. ನಜೀರ್‌ನ ವಿಚಾರಣೆ ನಡೆಸಲಾಗಿದೆ. ಆತನ ಜತೆ ಸಂಪರ್ಕ ಹೊಂದಿರುವ ಇನ್ನೂ ಕೆಲವರನ್ನು‌ ಎನ್‌ಐಎ ವಿಚಾರಣೆ ನಡೆಸಿದೆ. ಆದರೆ, ಇನ್ನೂ ಸರಿಯಾದ ಮಾಹಿತಿ ಸಿಕ್ಕಿಲ್ಲ.

ಬಸ್‌ನಲ್ಲಿ ಪ್ರಯಾಣಿಸುವಾಗ ಸೆರೆಯಾದ ಚಿತ್ರ ಬಿಡುಗಡೆ

ಈ ನಡುವೆ, ಶಂಕಿತ ಉಗ್ರ ರಾಮೇಶ್ವರಂ ಕೆಫೆಗೆ ಬಸ್‌ ಮೂಲಕ ಬರುತ್ತಿದ್ದಾಗ ಸೆರೆಯಾದ ಚಿತ್ರಗಳನ್ನೂ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಆತನ ಮುಖಚಹರೆ ಸ್ವಲ್ಪ ಮಟ್ಟಿಗೆ ಸ್ಪಷ್ಟವಾಗಿ ಕಾಣಿಸುತ್ತದೆ. ಇದರ ನಡುವೆ ಕುಂದಲಹಳ್ಳಿ ರಸ್ತೆಯಲ್ಲೇ ನಡೆದು ಬಂದಿರುವ ದೃಶ್ಯವೂ ಸಿಕ್ಕಿದೆ.

ಇದನ್ನೂ ಓದಿ : Blast in Bengaluru : ಬಾಂಬ್‌ ಸ್ಫೋಟ ನಡೆದ ರಾಮೇಶ್ವರಂ ಕೆಫೆ ಮಾ. 9ಕ್ಕೆ ರಿಓಪನ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Hassan Pen Drive Case: ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

Hassan Pen Drive Case: ಈ ಪ್ರಕರಣದಲ್ಲಿ ವಿಡಿಯೊದಲ್ಲಿದ್ದ ಯಾವೊಬ್ಬ ಸಂತ್ರಸ್ತೆ ಸಹ ಸರ್ಕಾರದ ಬಳಿ ಬಂದು ದೂರು ಕೊಟ್ಟಿಲ್ಲ. ಮಹಿಳಾ ಆಯೋಗವು ನೀಡಿದ ವಿಡಿಯೊ ಸಾಕ್ಷ್ಯವನ್ನು ಇಟ್ಟುಕೊಂಡು ಕ್ರಮ ಕೈಗೊಂಡಿದೆ. ಇದಕ್ಕಿಂತ ಮೊದಲು ಮಹಿಳಾ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯ ಅವರಿಗೆ ಏಪ್ರಿಲ್‌ 25ರಂದು ಪತ್ರ ಬರೆಯುತ್ತಾರೆ. ಕೊನೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಎಸ್‌ಐಟಿ ತನಿಖೆಗೆ ಪ್ರಕರಣವನ್ನು ಕೊಡಲಾಗುತ್ತದೆ ಎಂದು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಏಪ್ರಿಲ್‌ 28ರಂದು ಬೆಂಗಳೂರಿನಲ್ಲಿ ಕುಳಿತುಕೊಂಡು ಮಹಿಳೆಯೊಬ್ಬಳಿಂದ ದೂರನ್ನು ಬರೆಸಿಕೊಂಡು ಟೈಪ್‌ ಮಾಡಿಸಿಕೊಂಡು ಆ ಪ್ರಕರಣವನ್ನು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

VISTARANEWS.COM


on

State government conspiracy behind Prajwal Hassan Pen Drive Case says HD Kumaraswamy
Koo

ಹುಬ್ಬಳ್ಳಿ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದಲೇ ಖೆಡ್ಡಾ ತೋಡಲಾಗಿದೆ. ಇದರ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಇದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದಲ್ಲಿ ವಿಡಿಯೊದಲ್ಲಿದ್ದ ಯಾವೊಬ್ಬ ಸಂತ್ರಸ್ತೆ ಸಹ ಸರ್ಕಾರದ ಬಳಿ ಬಂದು ದೂರು ಕೊಟ್ಟಿಲ್ಲ. ಮಹಿಳಾ ಆಯೋಗವು ನೀಡಿದ ವಿಡಿಯೊ ಸಾಕ್ಷ್ಯವನ್ನು ಇಟ್ಟುಕೊಂಡು ಕ್ರಮ ಕೈಗೊಂಡಿದೆ. ಇದಕ್ಕಿಂತ ಮೊದಲು ಮಹಿಳಾ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯ ಅವರಿಗೆ ಏಪ್ರಿಲ್‌ 25ರಂದು ಪತ್ರ ಬರೆಯುತ್ತಾರೆ. ಕೊನೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಎಸ್‌ಐಟಿ ತನಿಖೆಗೆ ಪ್ರಕರಣವನ್ನು ಕೊಡಲಾಗುತ್ತದೆ ಎಂದು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಏಪ್ರಿಲ್‌ 28ರಂದು ಬೆಂಗಳೂರಿನಲ್ಲಿ ಕುಳಿತುಕೊಂಡು ಮಹಿಳೆಯೊಬ್ಬಳಿಂದ ದೂರನ್ನು ಬರೆಸಿಕೊಂಡು ಟೈಪ್‌ ಮಾಡಿಸಿಕೊಂಡು ಆ ಪ್ರಕರಣವನ್ನು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪವನ್ನು ಮಾಡಿದರು.

ಆ ಸಂತ್ರಸ್ತೆಯನ್ನು ಯಾರು ಬೆಂಗಳೂರಿಗೆ ಕರೆದುಕೊಂಡು ಬಂದರು? ಇನ್ನು ದೂರಿನ ಅನ್ವಯ ನೋಡುವುದಾದರೆ ಆ ಹೆಣ್ಣು ಮಗಳು 2012-13 ರಲ್ಲಿ ರೇವಣ್ಣ ಮನೆಯಲ್ಲಿ ಕೆಲಸಕ್ಕೆ ಇದ್ದಳು. ಜತೆಗೆ ಆಕೆ ಸಂಬಂಧಿ ಸಹ ಆಗಿದ್ದಳು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ಈ ಘಟನೆ ನಡೆದಿರುವುದು 5 – 6 ವರ್ಷಗಳ ಹಿಂದೆ ನಡೆದಿರುವುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಾಗಾದರೆ, ಈ ಐದಾರು ವರ್ಷ ಕಂಪ್ಲೇಂಟ್‌ ಕೊಡದೆ ದೂರುದಾರರು ಏನು ಮಾಡುತ್ತಿದ್ದರು? ಈಗ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ 5 ದಿನ ಬಾಕಿ ಇರುವಾಗ ಬಿಡುಗಡೆ ಮಾಡಿದ್ದರ ಹಿಂದಿನ ಉದ್ದೇಶ ಏನು? ಇದರ ಹಿಂದೆ ಯಾವ ಮಹಾನ್‌ ನಾಯಕರು ಇದ್ದಾರೆ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಹಾಗಂತ ಈ ಪೆನ್‌‌ ಡ್ರೈವ್ ಬಿಡುಗಡೆಯಾದ ಬಳಿಕ ಯಾರೂ ಎಲ್ಲಿಯೂ ಪ್ರತಿಭಟನೆಯನ್ನು ಮಾಡಿಸಲಿಲ್ಲ. ಬದಲಾಗಿ ನಮ್ಮ ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಹಿನ್ನಡೆ ತರಲು ಕಸರತ್ತು ಮಾಡಿದ್ದಾರೆ. ಚುನಾವಣೆ ಮುಗಿದ ಮೇಲೆ ಅಂದರೆ ಏಪ್ರಿಲ್‌ 28ರ ಬಳಿಕ 2012-13ರ ಪ್ರಕರಣದ ಕಂಪ್ಲೇಂಟ್‌ ಪಡೆದು, ಎಫ್‌ಐಆರ್‌ ಮಾಡಿ, ಬಳಿಕ ಎಸ್‌ಐಟಿಗೆ ಈಗ ವರ್ಗಾವಣೆ ಮಾಡಿದ್ದಾರೆ. ವಿಪರ್ಯಾಸವೆಂದರೆ ಸಾರ್ವಜನಿಕರಿಂದ ಯಾವುದೇ ದೂರು ಬರದೇ ಎಸ್‌ಐಟಿಯನ್ನು ರಚನೆ ಮಾಡಿದ್ದಾಗಿ ಸಿಎಂ ಸಿದ್ದರಾಮಯ್ಯ ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ನಮ್ಮ ಕುಟುಂಬದ ತೇಜೋವಧೆಯೇ ಇದರ ಉದ್ದೇಶ!

ಈ ಪ್ರಕರಣವನ್ನು ಗಮನಿಸಿದಾಗ ಸರ್ಕಾರಕ್ಕೆ ನಮ್ಮ ಕುಟುಂಬದ ವರ್ಚಸ್ಸನ್ನು ಸಂಪೂರ್ಣವಾಗಿ ನಾಶ ಮಾಡಬೇಕು ಎಂದಿದೆ ಎಂಬುದು ಗೊತ್ತಾಗುತ್ತದೆ. ಇಲ್ಲಿ ಇವರಿಗೆ ಮಹಿಳೆಯರನ್ನು ರಕ್ಷಣೆ ಮಾಡುವುದು ಬೇಕಾಗಿಲ್ಲ. ಈ ಪ್ರಕರಣವನ್ನು ಬಳಸಿಕೊಂಡು ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರನ್ನು ತೇಜೋವಧೆ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಜ್ವಲ್‌ ರೇವಣ್ಣ ಅವರ ಫೋಟೊವನ್ನು ಸೇರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಲಾಗುತ್ತಿದೆ. ಈ ಪ್ರಕರಣ ಸಂಬಂಧ ಮೋದಿ ಅವರು ಉತ್ತರ ಕೊಡಬೇಕು ಎಂದು ಅಭಿಯಾನ ಮಾಡಲಾಗುತ್ತಿದೆ. ಮೋದಿಗೂ ಈ ಕೇಸ್‌ಗೂ ಏನು ಸಂಬಂಧ ಇದೆ? ಅವರ ಪಾತ್ರ ಇದರಲ್ಲೇನಿದೆ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರದ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ; ಇಲ್ಲಿದೆ ಕಂಪ್ಲೀಟ್‌ ವಿಡಿಯೊ!

ಈ ಪ್ರಕರಣ ಹೊರಗೆ ಬಂದಾಗ ಸರ್ಕಾರದ ಭಾಗವಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನನ್ನ ಮೇಲೆ ನಿರಂತರವಾಗಿ ವಾಗ್ದಾಳಿ ಮಾಡುತ್ತಲೇ ಬಂದಿದ್ದಾರೆ. ನಾನು ಈ ಹಿಂದೆ ಹೇಳಿದ್ದ ಪೆನ್‌ಡ್ರೈವ್‌ ಇದೇನಾ ಎಂದು ವ್ಯಂಗ್ಯವಾಗಿ ಕೇಳಿದ್ದಾರೆ. ಆ ಪೆನ್‌ಡ್ರೈವ್‌ ನನ್ನ ಬಳಿ ಇದೆ. ಅದನ್ನು ಯಾವಾಗ ಬಿಡುಗಡೆ ಮಾಡಬೇಕೋ ಆಗ ಮಾಡುತ್ತೇನೆ. ನಾನು ನನ್ನ ಜೀವನದಲ್ಲಿ ಇಂಥ ಪೆನ್‌ಡ್ರೈವ್‌ಗಳನ್ನು ಮಾಡಿಲ್ಲ. ಇಂಥ ಪೆನ್‌ಡ್ರೈವ್‌ಗಳನ್ನು ಮಾಡುವುದು ಅವರ ಸಂಪ್ರದಾಯ. ಅವರು ಈ ಹಿಂದೆ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಹೆಣ್ಣು ಮಕ್ಕಳನ್ನು ಕೂಡಿ ಹಾಕಿಕೊಂಡು ಕೇಸ್‌ ಮಾಡಿದ್ದರಲ್ಲ ಎಂದು ಡಿ.ಕೆ. ಶಿವಕುಮಾರ್‌ ವಿರುದ್ಧ ಕಿಡಿಕಾರಿದರು.

ರಾಕೇಶ್‌ ಸಿದ್ದರಾಮಯ್ಯ ಸಾವಿನ ವೇಳೆ ಏನಾಗಿತ್ತು ಎಂದೂ ಹೇಳುತ್ತೇನೆ: ಎಚ್‌.ಡಿ. ಕುಮಾರಸ್ವಾಮಿ

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರ ಮನೆಯಲ್ಲಿ ನಡೆದಿದ್ದ ವಿಚಾರವನ್ನು ಹೊರಗಡೆ ತರುತ್ತೇನೆ ಎಂದು ರಾಕೇಶ್ ಸಿದ್ದರಾಮಯ್ಯ (Rakesh Siddaramaiah) ಸಾವಿನ ಸಂದರ್ಭದಲ್ಲಿ ನಡೆದ ವಿಚಾರವನ್ನು ಎಚ್‌ಡಿಕೆ ಎಳೆದು ತಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲ ದಾಖಲೆಗಳನ್ನು ನಾವು ಹೊರಗಡೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ನಡೆದ ಘಟನೆ ಏನೇನಾಯಿತು ಎಲ್ಲವೂ ಹೊರಗೆ ಬರಲಿದೆ ಎಂದು ಎಚ್ಚರಿಕೆ ನೀಡಿದರು.

ನಮ್ಮ ಮನೆಯ ಎದುರು ಏಕೆ ಪ್ರತಿಭಟನೆ ಮಾಡುತ್ತೀರಿ. ಇದನ್ನು ಇಷ್ಟಕ್ಕೆ ಬಿಡಲ್ಲ. ಎಲ್ಲ ವಿಷಯವೂ ತನಿಖೆಯಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ‌ಎಚ್‌.ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಕಾಂಗ್ರೆಸ್‌ನವರು ನಮ್ಮ ಮನೆ ಬಳಿ ಬಂದು ಪ್ರತಿಭಟಿಸುತ್ತಿದ್ದಾರೆ. ಮಹಾನುಭಾವನ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಿ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮನೆ ಬಳಿ ಹೋಗಿ ಪ್ರತಿಭಟನೆ ಮಾಡಿ. ಎಚ್‌.ಡಿ. ರೇವಣ್ಣ ಕುಟುಂಬದ ಬಗ್ಗೆ ವಿಷಯವನ್ನು ಕೆದಕಿದ್ದಾರೆ. ನಾನು ಚರ್ಚೆ ಮಾಡಲು ಸಿದ್ಧ. ಪಲಾಯಾನ ಮಾಡುವುದಿಲ್ಲ. ಕಾಂಗ್ರೆಸ್‌ ನಾಯಕ ಮಹಾಪರಾಧ ಮಾಡಿದ್ದಾನೆ. ಎಷ್ಟು ತಿಂಗಳ ಹಿಂದೆ ಆ ಮಹಾನ್‌ ನಾಯಕನಿಗೆ ಗೊತ್ತಿತ್ತು. ಪೆನ್‌ಡ್ರೈವ್‌ ಯಾರು ಸರಬರಾಜು ಮಾಡಿದರು ಎಲ್ಲವೂ ಗೊತ್ತಿದೆ. ಈ ಮಹಾನ್‌ ನಾಯಕನ ನಡವಳಿಕೆಯ ಬಗ್ಗೆಯೂ ಚರ್ಚಿಸೋಣ. ನಿನ್ನೆ ಹಾಸನ ಜಿಲ್ಲಾಧಿಕಾರಿ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸರ್ಕಾರದ ಹುನ್ನಾರ ಅಡಗಿದೆ ಎಂದು ಕಿಡಿಕಾರಿದರು.

ಹಲವು ವಿಷಯಗಳಿವೆ, ಎಲ್ಲವನ್ನೂ ಹೇಳುವೆ

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ಹಲವು ವಿಷಯಗಳಿವೆ. ಅದನ್ನು ನಾನು ಹೇಳುತ್ತೇನೆ. ಮಹಾನ್‌ ನಾಯಕ ಮಹಿಳೆಯರ ಬದುಕನ್ನು ಬೀದಿಗೆ ತಂದಿದ್ದಾನೆ. ಇದರ ಬಗ್ಗೆಯೂ ನಾವು ಚರ್ಚೆ ಮಾಡಬೇಕಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.

ಮಾತೃ ಶಕ್ತಿ ಪರ ನಿಲ್ಲುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಮಿತ್‌ ಶಾ ಅವರು ಪ್ರಜ್ವಲ್‌ ರೇವಣ್ಣ ಬಗ್ಗೆ ಚರ್ಚೆ ಮಾಡಿಲ್ಲ. ಪ್ರಜ್ವಲ್‌ ವಿರುದ್ಧದ ಕ್ರಮ ತೆಗೆದುಕೊಳ್ಳುವ ವಿಷಯವನ್ನು ನಮಗೆ ಬಿಟ್ಟಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

ನಿಮ್ಮ ಜತೆ ನಾವಿದ್ದೇವೆ

ತಪ್ಪಾಗಿದ್ದರೆ ಶಿಕ್ಷೆಯಾಗಬೇಕೆಂದು ನಾನೇ ಹೇಳಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ಏನಾಗಬೇಕೆಂದು ಚರ್ಚಿಸುತ್ತೇವೆ. ಈ ಬಗ್ಗೆ ಯಾರೂ ಗಾಬರಿಯಾಗಬೇಡಿ, ಆತಂಕ ಬೇಡ. ಯಾವುದೇ ಮಹಿಳೆಯರಿಗೆ ಅನ್ಯಾಯವಾದರೂ ಧ್ವನಿ ಎತ್ತುತ್ತೇವೆ. ನಿಮ್ಮ ಜತೆ ಎಚ್.ಡಿ. ದೇವೇಗೌಡ ಹಾಗೂ ನಾವು ಇದ್ದೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಅಭಯ ನೀಡಿದರು.

Continue Reading

ಕರ್ನಾಟಕ

Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

Karnataka Weather: ರಾಜ್ಯದಲ್ಲಿ ಮೇ 5ರವರೆಗೆ ರಣ ಬಿಸಿಲು ಮುಂದುವರಿಯಲಿದ್ದು, ಎಲ್ಲ ಜಿಲ್ಲೆಗಳಲ್ಲೂ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ದಿನೇದಿನೆ ತಾಪಮಾನ (Temperature) ಏರಿಕೆಯಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ (Karnataka Weather) ವರದಿಯಾಗುತ್ತಿದ್ದು, ರಾಯಚೂರಿನಲ್ಲಿ ಸೋಮವಾರ, ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ 45.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿರುವುದು ಕಂಡುಬಂದಿದೆ.

ಏ.29ರ ಬೆಳಗ್ಗೆ 8.30 ರಿಂದ ಏ.30 ಬೆಳಗ್ಗೆ 8.30ರವರೆಗೆ ರಾಜ್ಯದ ಜಿಲ್ಲಾವಾರು ಗರಿಷ್ಠ ತಾಪಮಾನ ನೋಡುವುದಾದರೆ, ರಾಯಚೂರಿನಲ್ಲಿ 45.6 ಡಿಗ್ರಿ ಸೆ. ದಾಖಲಾಗಿದೆ. ಕೊಡಗಿನಲ್ಲಿ 38.6 ಡಿಗ್ರಿ ಸೆ. ತಾಪಮಾನ ದಾಖಲಾಗಿದ್ದು, ಇದು ಎಲ್ಲ ಜಿಲ್ಲೆಗಳಿಗಿಂತ ಕಡಿಮೆಯಾಗಿದೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ 39.8 ಡಿಗ್ರಿ ಸೆ. ಹೊರತುಪಡಿಸಿ, ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆ. ಮೀರಿದೆ.

ನಾಳೆ ಚಿಕ್ಕಮಗಳೂರು, ಕೊಡಗು, ಮೈಸೂರು ಸೇರಿ ವಿವಿಧೆಡೆ ಮಳೆ

ಇನ್ನು ಮೇ 1ರಂದು ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜ್ಯದಾದ್ಯಂತ ಮೇ 5ರವರೆಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮೇ 6ರಂದು ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಮೇ 7ರಂದು ಕೂಡ ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ನಾಲ್ಕು ದಿನ ಶಾಖದ ಅಲೆಯ ಎಚ್ಚರಿಕೆ

ಮೇ 1 ರಿಂದ ಮೇ 4ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ (ಬಯಲು ಪ್ರದೇಶ), ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ) ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಗಳು ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮೇ 4 ರವರೆಗೆ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನು ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

ಇನ್ನು ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 24°C ಇರುವ ಸಾಧ್ಯತೆ ಇದೆ.

Continue Reading

ಕರ್ನಾಟಕ

Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

Fortis Hospital: ಪಾರ್ಕಿನ್ಸನ್‌ನಿಂದ ಉಂಟಾಗುವ ನರಮಂಡಲದ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಥೆರಪಿಗಾಗಿ ಬೆಂಗಳೂರಿನ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಪಾರ್ಕಿನ್ಸನ್‌ ಮತ್ತು ಡೀಪ್‌ ಬ್ರೇನ್‌ ಸ್ಟಿಮುಲೇಷನ್‌ (ಡಿಬಿಎಸ್) ಎನ್ನುವ ಪ್ರತ್ಯೇಕ ಕ್ಲಿನಿಕ್‌ನ ಉದ್ಘಾಟನೆ ನಡೆದಿದೆ. ಈ ಕುರಿತ ವರದಿ ಇಲ್ಲಿದೆ.

VISTARANEWS.COM


on

Fortis Hospital Launches Deep Brain Stimulation DBS Clinic to Treat Parkinson Disease
Koo

ಬೆಂಗಳೂರು: ಪಾರ್ಕಿನ್ಸನ್‌ನಿಂದ ಉಂಟಾಗುವ ನರಮಂಡಲದ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಥೆರಪಿಗಾಗಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ (Fortis Hospital) ಪಾರ್ಕಿನ್ಸನ್‌ ಮತ್ತು ಡೀಪ್‌ ಬ್ರೇನ್‌ ಸ್ಟಿಮುಲೇಷನ್‌ (ಡಿಬಿಎಸ್) ಎನ್ನುವ ಪ್ರತ್ಯೇಕ ಕ್ಲಿನಿಕ್‌ ಪ್ರಾರಂಭಿಸಲಾಗಿದೆ.

ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ರಾಜಕುಮಾರ್ ದೇಶಪಾಂಡೆ, ನೂತನ ಕ್ಲಿನಿಕ್‌ ಅನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇಂದು ಸಾಕಷ್ಟು ಜನರು ವಯಸ್ಸಾದ ಬಳಿಕ ಪಾರ್ಕಿನ್ಸನ್‌ ಕಾಯಿಲೆಗೆ ತುತ್ತಾಗುತ್ತಿದ್ದಾರೆ, ಇದಕ್ಕೆ ಸೂಕ್ತ ಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ ಈಗಾಗಲೇ ಪರಿಚಯಿಸಿದೆ, ಆದರೆ ಕೆಲವರಿಗೆ ಚಿಕಿತ್ಸೆಗಿಂತ ಹೆಚ್ಚಾಗಿ ಕೆಲವು ದೈಹಿಕ ಅಭ್ಯಾಸಗಳ ಮೂಲಕವೂ ಪಾರ್ಕಿನ್ಸನ್‌ನ ಲಕ್ಷಣಗಳಾದ ಕೈ-ಕಾಲು ನಡುಕ ಇತರೆ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಾಧ್ಯವಾಗಲಿದೆ. ಇದಕ್ಕಾಗಿಯೇ ಪ್ರತ್ಯೇಕ ಕ್ಲಿನಿಕ್‌ ತೆರೆದಿದ್ದೇವೆ. ಇದರ ಜತೆಗೆ, ಡೀಪ್‌ ಬ್ರೇನ್ ಸ್ಟಿಮ್ಯುಲೇಶನ್ (ಡಿಬಿಎಸ್‌) ಚಿಕಿತ್ಸೆಯೂ ದೊರೆಯಲಿದೆ. ಡೀಪ್‌ ಬ್ರೇನ್ ಸ್ಟಿಮ್ಯುಲೇಶನ್ ಪಾರ್ಕಿನ್ಸನ್‌ ಸಮಸ್ಯೆಗೆ ಚಿಕಿತ್ಸೆಯ ಭಾಗ ಎಂದು ವಿವರಿಸಿದರು.

ಇದನ್ನೂ ಓದಿ: Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ಡಾ. ರಘುರಾಮ್ ಜಿ. ಮಾತನಾಡಿ, ಪಾರ್ಕಿನ್ಸನ್‌ ಕಾಯಿಲೆಯಿಂದ ಕೈ-ಕಾಲುಗಳಲ್ಲಿ ನಡುಕ, ತಲೆಯಲ್ಲಿ ನಡುಕ, ಸ್ನಾಯುಗಳ ಬಿಗಿತ, ಚಲನೆಯ ನಿಧಾನತೆ, ಖಿನ್ನತೆ ಮತ್ತು ಭಾವನಾತ್ಮಕ ಬದಲಾವಣೆಗಳು ಸೇರಿದಂತೆ ಸಾಕಷ್ಟು ಸಮಸ್ಯೆಗಳು ಕಂಡು ಬರುತ್ತವೆ. ಇಂತಹ ಕಾಯಿಲೆಗೆ ಕೆಲವೊಮ್ಮೆ ಚಿಕಿತ್ಸೆಗಿಂತ ಥೆರಪಿ ಮುಖ್ಯವಾಗಲಿದೆ.

ಹೀಗಾಗಿ ಡೀಪ್‌ ಬ್ರೇನ್‌ ಸ್ಟಿಮುಲೇಷನ್‌ ಥೆರಪಿಗೆ ಇಲ್ಲಿ ಅವಕಾಶ ನೀಡಲಾಗಿದೆ. ವಯಸ್ಸಾದವರು ಈ ರೀತಿಯ ಕಾಯಿಲೆ ಹೊಂದಿದ್ದರೆ, ಈ ಥೆರಪಿ ತೆಗೆದುಕೊಳ್ಳಬಹುದು. ಈ ಕ್ಲಿನಿಕ್‌ ವಾರದ ದಿನಗಳಲ್ಲಿ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 3:00 ರವರೆಗೆ ತೆರೆದಿರಲಿದೆ. ಇಂದು ಉದ್ಘಾಟನೆಗೊಂಡ ಕ್ಲಿನಿಕ್‌ನಲ್ಲಿ ಮಾನಸಿಕ ಆರೋಗ್ಯ ತಜ್ಞರು ಮತ್ತು ಯೋಗ ತರಬೇತುದಾರರು, ಮಾನಸಿಕ ಯೋಗಕ್ಷೇಮ ಮತ್ತು ಯೋಗ ಅಭ್ಯಾಸಗಳ ಕುರಿತು ಸೆಷನ್‌ಗಳನ್ನು ನಡೆಯಲಿದೆ ಎಂದರು.

ಇದನ್ನೂ ಓದಿ: Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

ಕಾರ್ಯಕ್ರಮದಲ್ಲಿ ಫೋರ್ಟಿಸ್ ಆಸ್ಪತ್ರೆಯ ನರವಿಜ್ಞಾನದ ಹೆಚ್ಚುವರಿ ನಿರ್ದೇಶಕ ಡಾ.ಗುರುಪ್ರಸಾದ್ ಹೊಸೂರ್ಕರ್, ಫೋರ್ಟಿಸ್ ಹಾಸ್ಪಿಟಲ್ಸ್ ಬೆಂಗಳೂರಿನ ಬಿಸಿನೆಸ್ ಹೆಡ್ ಅಕ್ಷಯ್ ಒಲೆಟಿ ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Hassan Pen Drive Case: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ; ಪ್ರಜ್ವಲ್‌, ರೇವಣ್ಣಗೆ ಎಸ್‌ಐಟಿ ನೋಟಿಸ್‌

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣದ ತನಿಖೆಗಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ತನಿಖೆ ಆರಂಭಿಸಿರುವ ಎಸ್‌ಐಟಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌.ಡಿ.ರೇವಣ್ಣಗೆ ನೋಟಿಸ್‌ ನೀಡಿದ್ದಾರೆ.

VISTARANEWS.COM


on

Hassan Pen Drive case
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣ (Hassan Pen Drive Case) ದೇಶಾದ್ಯಂತ ಸದ್ದು ಮಾಡುತ್ತಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಇದೀಗ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸಿಆರ್‌ಪಿಸಿ 41a ಅಡಿಯಲ್ಲಿ ಎಸ್‌ಐಟಿಯಿಂದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಎಚ್. ಡಿ. ರೇವಣ್ಣಗೆ ನೋಟಿಸ್ ನೀಡಲಾಗಿದೆ.

ಎಸ್ಐಟಿ ಸದಸ್ಯ, ತನಿಖಾಧಿಕಾರಿ ಎಸ್‌ಪಿ ಸೀಮಾ‌ ಲಾಟ್ಕರ್ ಅವರ ಮುಂದೆ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಎಚ್‌.ಡಿ. ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ ನೊಟೀಸ್ ತಲುಪಿಸಿದ್ದು, ಹೊಳೆನರಸೀಪುರದಲ್ಲಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌.ಡಿ.ರೇವಣ್ಣ ವಿರುದ್ಧ ಏ.28ರಂದು ಹೊಳೆನರಸೀಪುರ ಠಾಣೆಯಲ್ಲಿ ಮನೆಗೆಲಸದಾಕೆ ದೂರು ನೀಡಿದ್ದಳು. ಈ ಸಂಬಂಧ ವಿಚಾರಣೆಗಾಗಿ ಇದೀಗ ನೋಟಿಸ್‌ ನೀಡಲಾಗಿದೆ.

ಪ್ರಜ್ವಲ್‌ ಕೇಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ; 3 ದಿನದಲ್ಲಿ ವರದಿ ಕೊಡಲು ಡಿಜಿಗೆ ಪತ್ರ

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಆಯೋಗ (National Commission for Women) ಎಂಟ್ರಿ ಕೊಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರು ದಿನದೊಳಗೆ ವರದಿ ನೀಡುವಂತೆ ಕರ್ನಾಟಕ ಪೊಲೀಸ್‌ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಮಹಿಳಾ ಆಯೋಗವು ಸುಮೊಟೊ ಕೇಸ್‌ ದಾಖಲು ಮಾಡಿಕೊಂಡಿದೆ. ಜತೆಗೆ ಡಿಜಿಗೆ ಪತ್ರ ಬರೆದು ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಮಹಿಳಾ ಆಯೋಗದ ಸದಸ್ಯರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಡಿಕೆಶಿ

ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತಮ್ಮ ಮೇಲೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ನಿರಾಕರಣೆ ಮಾಡಿದ್ದಾರೆ. ಪೆನ್‌ಡ್ರೈವ್‌ ಹೊರಬಿಡುವಂತಹ ಚಿಲ್ಲರೆ ಕೆಲಸವನ್ನು ನಾನಂತೂ ಮಾಡಲ್ಲ. ಚುನಾವಣೆಯಲ್ಲಿ ಫೇಸ್ ಮಾಡುತ್ತೇನೆ. ನಾನು ಪೆನ್ ಡ್ರೈವ್ ಇದೆ ಎಂದು ಹೆಸರಿಸುವುದಿಲ್ಲ. ಅಸೆಂಬ್ಲಿಗೆ ಬನ್ನಿ ಎಂದು ಕರೆದಿದ್ದೇನೆ‌ ಎಂದು ಸವಾಲು ಹಾಕಿದರು.

ಬೆಂಗಳೂರಿನಲ್ಲಿ ದಿಢೀರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾವು ನಮ್ಮ ಪೊಲಿಟಿಕಲ್ ಟೂರ್ ಬಗ್ಗೆ ಮೀಟಿಂಗ್ ಮಾಡಿದ್ದೇವೆ. ಯಾರು ಎಲ್ಲಿ ಪ್ರಚಾರ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಎಲ್ಲಿ ಭಾಗಿಯಾಗಬೇಕು, ನಾನು ಎಲ್ಲಿ ಭಾಗಿಯಾಗಬೇಕು ಎಂದು ಚರ್ಚೆ ಮಾಡಿದ್ದೇವೆಯೇ ವಿನಃ ಪೆನ್ ಡ್ರೈವ್ ವಿಚಾರದ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ನೆನಸಿಕೊಳ್ಳದೆ ಸ್ಫೂರ್ತಿ ಇರಲ್ಲ. ಕುಮಾರಸ್ವಾಮಿ ಅವರ ಭಾಷಣ ಕೇಳಿದ್ದೇನೆ. ಪ್ರಜ್ವಲ್‌ನನ್ನು ನನ್ನ ಮಗ ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಅವರ ಕುಟುಂಬದ ಕುಡಿ. ನೂಲಿನಂತೆ ಸೀರೆ ಎಂದು ಡಿಕೆಶಿ ವ್ಯಂಗ್ಯವಾಡಿದರು.

ಹಳೆ ವಿಡಿಯೋ ಎಂದು ಪ್ರಜ್ವಲ್‌ ತಂದೆ ಎಚ್‌.ಡಿ. ರೇವಣ್ಣ ಹೇಳಿದ್ದಾರೆ. ಅಂದರೆ ಅವರು ಒಪ್ಪಿಕೊಂಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಸಂಬಂಧ ದೇವರಾಜೇಗೌಡ ಅಮಿತ್ ಶಾಗೆ ಪತ್ರ ಬರೆದಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

10 ದಿನದ ಮುಂಚೆ ದೂರು ಕೊಡಬೇಕಿತ್ತು

ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಮಹಿಳೆಯರ ರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಉಡುಪಿಯಲ್ಲಿ ಪೋಟೊ ಹಿಡಿದು ಅಂತಾರಾಷ್ಟ್ರೀಯ ಮಹಿಳಾ ಆಯೋಗ ಕಳುಹಿಸಿದರು. ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ. ಅವರ ಕುಟುಂಬದವರು ಹೌದೋ ಇಲ್ಲವೋ ನೀವು ಹೇಳಬೇಕು. ವಾರ ಹತ್ತು ದಿನದ ಮುಂಚೆ ದೂರು ಕೊಟ್ಟಿದ್ದರೆ ಕ್ರಮ ತೆಗೆದುಕೊಳ್ಳುತ್ತಿದ್ದೆವು. ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಬಳಿಕ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಮಿತ್ ಶಾ ಅವರು ಮೈಸೂರಿಗೆ ಬಂದಾಗ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್ ಕೊಡಬೇಡಿ ಎಂದು ಹೇಳಿದ್ದರು. ಆದರೆ, ಕೊನೆಗೆ ಏಕೆ ಕೊಟ್ಟರು? ಅಮಿತ್‌ ಶಾ ಬೇಡವನ್ನೆಲು ಏನು ಕಾರಣ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಎಚ್‌ಡಿಕೆ ವಿರುದ್ಧ ಏಕವಚನ ಪ್ರಯೋಗ

ಪಕ್ಷದಿಂದ ವಜಾ ಮಾಡಲಿ, ಒಳಗೆ ಇಟ್ಟುಕೊಳ್ಳಲಿ‌. ಅದೆಲ್ಲ ಕಣ್ಣು ಒರೆಸುವ ನಾಟಕ. ಈ ಅಮಾನತಿನ ಬಗ್ಗೆ ರಾಜಕಾರಣದಲ್ಲಿ ನನಗೂ ಗೊತ್ತಿದೆ. ನನ್ನ ವಿರುದ್ಧ ಮೊದಲು ಪ್ರತಿಭಟನೆ ಮಾಡಲಿ. ಕುಮಾರಸ್ವಾಮಿ ಯಾವ ಕರೆ ಕೊಡುತ್ತೀಯೋ ಕೊಡು‌. ಕರೆ ಕೊಡಬೇಕು ನೀನು‌. ನೀನು ಕೊಡಲಿ ಅಂತನೇ ಹೇಳುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಎಚ್‌.ಡಿ. ಎಂದರೆ ಏನು? ಕುಟಂಬ ಅಲ್ಲವೆಂದರೆ ಹೇಗೆ?

ಈಗ ಪ್ರಜ್ವಲ್‌ ರೇವಣ್ಣ ಅವರು ತಮ್ಮ ಕುಟುಂಬ ಅಲ್ಲ ಅಂತ ಹೇಳಿದರೆ ಹೇಗೆ ಒಪ್ಪಲು ಆಗುತ್ತದೆ? ಎಚ್‌.ಡಿ. ಎಂದರೆ ಏನು? ಎಚ್ ಡಿ ರೇವಣ್ಣ ಎಂದರೆ ಹೊಳೆನರಸೀಪುರ ದೇವೇಗೌಡರ‌ ಮಗ ಎಂದಲ್ಲವೇ? ಎಚ್.ಡಿ. ಕುಮಾರಸ್ವಾಮಿ ಅಂದರೂ ಹಾಗೇ ಎಂದು ಡಿಕೆಶಿ ಹೇಳಿದರು.

ಭಗವಂತ ಇದನ್ನು ಕ್ಷಮಿಸಲ್ಲ

ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಮರ್ಯಾದೆ ಹೋಗುತ್ತದೆ. ಇವರ ಚಟಕ್ಕೆ ವಿಡಿಯೊ ಮಾಡಿಕೊಂಡು ಪದೇ ಪದೆ ಬರಬೇಕು ಎಂದು ಪೀಡಿಸುತ್ತಾರೆ. ಭಗವಂತ ಇದನ್ನು ಕ್ಷಮಿಸಲ್ಲ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಯಾರು ಜತೆಗೆ ಇದ್ದರು? ಯಾರು ಯಾರಿಗೆ ಕರೆ ಮಾಡಿದರು ಎಂದು ಅವರನ್ನೇ ಕೇಳಿ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಬಿಜೆಪಿಯವರ ಸ್ಟ್ಯಾಂಡ್ ಹೇಳಲಿ

ಈ ವಿಚಾರದಲ್ಲಿ ಬಿಜೆಪಿಯವರ ಸ್ಟ್ಯಾಂಡ್ ಹೇಳಬೇಕು. ಪ್ರಲ್ಹಾದ್‌ ಜೋಶಿ, ಸುನೀಲ್ ಕುಮಾರ್, ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ ಯಾಕೆ ಮಾತನಾಡುತ್ತಿಲ್ಲ. ಅವರ ಪಾರ್ಟಿಯವರು ನೋಡಿಕೊಳ್ಳುತ್ತಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್ ಹೇಳುತ್ತಾರೆ. ಅಶೋಕ್ ಬೆನ್ನು ಮೂಳೆ ಇಲ್ಲದ ನಾಯಕ ಎಂದು ಡಿ.ಕೆ. ಶಿವಕುಮಾರ್‌ ಕಿಡಿಕಾರಿದರು.

ಬಿಜೆಪಿಯವರು ಸ್ವಲ್ಪ ಪ್ರಾಬ್ಲಮ್ ಇದೆ ಎಂದು ಹೇಳಿದ್ದರು ಬ್ರದರ್. ಐ ವಿಲ್ ಟೇಕ್ ಕೇರ್ ಎಂದು ದೊಡ್ಡವರು ಹೇಳಿದ್ದಾರೆ ಬ್ರದರ್ ಎಂಬುದಾಗಿ ಹೇಳಿದ್ದಾರೆ ಎಂದು ಕುಮಾರಸ್ವಾಮಿ ಶೈಲಿಯಲ್ಲೇ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

Continue Reading
Advertisement
labour Day
ಪ್ರಮುಖ ಸುದ್ದಿ2 mins ago

Labour Day : ಮೇ 1ರಂದೇ ಕಾರ್ಮಿಕ ದಿನ ಆಚರಿಸುವುದು ಯಾಕೆ? ರಜೆ ಕೊಡಲು ಶುರು ಮಾಡಿದ್ದು ಯಾವಾಗ?

Parliament Flashback
Lok Sabha Election 20248 mins ago

Parliament Flashback: 1996ರಲ್ಲಿ ಬಿಜೆಪಿ ಮೊದಲ ಬಾರಿ ಕೇಂದ್ರದಲ್ಲಿ ಸರ್ಕಾರ ನಡೆಸಿದ್ದು ಹೇಗೆ?

Viral Video
ವೈರಲ್ ನ್ಯೂಸ್24 mins ago

Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

Prime Minister Narendra Modi wrote a letter to former CM Basavaraj Bommai
ಕರ್ನಾಟಕ30 mins ago

Lok Sabha Election 2024: ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ಮೋದಿ; ಕೊಟ್ಟ ಟಾಸ್ಕ್‌ ಏನು?

Labour Day 2024
ದೇಶ31 mins ago

Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

State government conspiracy behind Prajwal Hassan Pen Drive Case says HD Kumaraswamy
ಕ್ರೈಂ34 mins ago

Hassan Pen Drive Case: ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

Karnataka Weather
ಕರ್ನಾಟಕ54 mins ago

Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

IPL 2024
ಪ್ರಮುಖ ಸುದ್ದಿ1 hour ago

IPL 2024 : ಗುಜರಾತ್​ ಟೀಮ್​ನಲ್ಲಿ ಬುಮ್ರಾ 2.0; ಕನ್ನಡಿಗನ ಬೌಲಿಂಗ್​ ಶೈಲಿ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​

Rescue of a boy who drowned at Malpe beach Two boys die after taking bath in Sindagi
ಕ್ರೈಂ1 hour ago

Malpe Beach: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ; ಸಿಂದಗಿಯಲ್ಲಿ ಸ್ನಾನಕ್ಕೆಂದು ಬಾವಿಗಿಳಿದಿದ್ದ ಬಾಲಕರಿಬ್ಬರ ಸಾವು

Fortis Hospital Launches Deep Brain Stimulation DBS Clinic to Treat Parkinson Disease
ಕರ್ನಾಟಕ1 hour ago

Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ17 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌