Blast in Bengaluru: ರಾಷ್ಟ್ರಗೀತೆಯೊಂದಿಗೆ ಮರಳಿ ತೆರೆದ ರಾಮೇಶ್ವರಂ ಕೆಫೆ, ಬಿಗಿ ಭದ್ರತೆ; ʻಧೈರ್ಯವಾಗಿರಿʼ ಎಂದ ಗ್ರಾಹಕರು - Vistara News

ಬೆಂಗಳೂರು

Blast in Bengaluru: ರಾಷ್ಟ್ರಗೀತೆಯೊಂದಿಗೆ ಮರಳಿ ತೆರೆದ ರಾಮೇಶ್ವರಂ ಕೆಫೆ, ಬಿಗಿ ಭದ್ರತೆ; ʻಧೈರ್ಯವಾಗಿರಿʼ ಎಂದ ಗ್ರಾಹಕರು

Blast in Bengaluru: ಇಂದು ಮುಂಜಾನೆ ರಾಷ್ಟ್ರಗೀತೆಯೊಂದಿಗೆ ರಾಮೇಶ್ವರಂ ಕೆಫೆಯನ್ನು ಹೋಟೆಲ್ ಮಾಲೀಕ ರಾಘವೇಂದ್ರ ರಾವ್ ಆರಂಭ ಮಾಡಿದರು.

VISTARANEWS.COM


on

rameshwaram cafe 1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯ ವೈಟ್‌ಫೀಲ್ಡ್‌ ಬಳಿಯ ಕುಂದಹಳ್ಳಿಯ ʼರಾಮೇಶ್ವರಂ ಕೆಫೆʼ (Rameshwaram Cafe Blast) ಇಂದು ಮತ್ತೆ ತೆರೆದಿದೆ. ಬಾಂಬ್‌ ಬ್ಲಾಸ್ಟ್‌ (Blast in Bengaluru, bomb Blast) ಬಳಿಕ ಬಂದ್‌ ಆಗಿದ್ದ ಕೆಫೆ ಎಂಟು ದಿನಗಳ ಬಳಿಕ ಇಂದಿನಿಂದ ಮತ್ತೆ ಶುರುವಾಗುತ್ತಿದೆ. ಗ್ರಾಹಕರ ಭರ್ಜರಿ ಸ್ಪಂದನ ವ್ಯಕ್ತವಾಗಿದೆ.

ಕಳೆದ ಶುಕ್ರವಾರ ಮಾರ್ಚ್‌ ಒಂದರಂದು ಮಧ್ಯಾಹ್ನ 12.55ಕ್ಕೆ ಬಾಂಬ್‌ ಬ್ಲಾಸ್ಟ್ ಆಗಿತ್ತು. ಇದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಆರೋಪಿಯ ಜಾಡು ಹಿಡಿದಿರುವ ಪೊಲೀಸರು ತಂಡಗಳನ್ನು ರಚಿಸಿಕೊಂಡು ಪಾತಕಿಯ ಹುಡುಕಾಟದಲ್ಲಿದ್ದಾರೆ. ಈ ನಡುವೆ ಒಂದು ವಾರದಿಂದ ತನಿಖೆ ಮತ್ತಿತರ ಪ್ರಕ್ರಿಯೆಗಳಿಗಾಗಿ ರಾಮೇಶ್ವರಂ ಕೆಫೆ ಬಂದ್ ಆಗಿತ್ತು.

ನಗರ ಪೊಲೀಸರು, ಎನ್ಐಎ ತಂಡ ಕೂಡ ಇಲ್ಲಿ ಬಂದು ಪರಿಶೀಲನೆ ನಡೆಸಿದ್ದರು. ಬಾಂಬ್ ಸ್ಫೋಟದಿಂದಾಗಿ ಪೀಠೋಪಕರಣಕ್ಕೆ ಹಾನಿಯಾಗಿತ್ತು. ಇದೀಗ ಎಲ್ಲವನ್ನು ಸರಿ ಪಡಿಸಿರುವ ಮಾಲೀಕರು ಇಂದಿನಿಂದ ಮತ್ತೆ ರಾಮೇಶ್ವರಂ ಕೆಫೆ ಶುರು ಮಾಡುತ್ತಿದ್ದಾರೆ.

ಕೆಫೆಯನ್ನು ಮೊದಲಿಗಿಂತ ಹೆಚ್ಚಿನ ಭದ್ರತೆಯಲ್ಲಿ ಆರಂಭಿಸುತ್ತಿದ್ದು, ಪ್ರವೇಶಿಸುವಲ್ಲಿ ಹೊಸದಾಗಿ ಮೆಟಲ್‌‌ ಡಿಟೆಕ್ಟರ್ ಅಳವಡಿಕೆ ಮಾಡಿದ್ದಾರೆ. ಸಂಶಯಾಸ್ಪದ ಜನರ ಮೇಲೆ ಹೆಚ್ಚಿನ ನಿಗಾ ಇಡಲಾಗುತ್ತಿದೆ. ಹೂವುಗಳು ಹಾಗೂ ತಳಿರು ತೋರಣಗಳಿಂದ ಕೆಫೆಯನ್ನು ಅಲಂಕರಿಸಲಾಗಿದೆ.

ಬೆಳಗ್ಗೆ 6.30ಕ್ಕೆ ಕೆಫೆ ಆರಂಭವಾಗಿದೆ. ವಿಶೇಷ ಪೂಜೆ, ಹೋಮ ಹವನದ ಬಳಿಕ ಆರಂಭವಾಗುತ್ತಿದೆ. ನಿನ್ನೆಯಿಂದ ಕೆಫೆಯಲ್ಲಿ ವಿಶೇಷ ಪೂಜೆ ಕೂಡ ನೆರವೇರಿತ್ತು. ರಾಷ್ಟ್ರಗೀತೆಯೊಂದಿಗೆ ಕೆಫೆಯನ್ನು ಹೋಟೆಲ್ ಮಾಲೀಕ ರಾಘವೇಂದ್ರ ರಾವ್ ಆರಂಭ ಮಾಡಿದರು.

ಕೆಫೆ ಮರು ಓಪನ್‌ಗೆ ಗ್ರಾಹಕರಿಂದ ಭರ್ಜರಿಯಾಗಿ ರೆಸ್ಪಾನ್ಸ್ ದೊರೆತಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಹೋಟೆಲ್‌ಗೆ ಗ್ರಾಹಕರು ಆಗಮಿಸುತ್ತಿದ್ದಾರೆ. ಕೆಫೆ ಮಾಲೀಕರ ಮೊಗದಲ್ಲಿ ಇದರಿಂದ ಮಂದಹಾಸ ಮೂಡಿದೆ. ಹೋಟೆಲ್‌ಗೆ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಹೋಟೆಲ್ ಪ್ರವೇಶದ್ವಾರದಲ್ಲಿ ಮೆಟಲ್ ಡಿಟೆಕ್ಟರ್‌ ಅಳವಡಿಸಲಾಗಿದ್ದು, ಸೆಕ್ಯೂರಿಟಿಗೆ ಅಂತ ನಿವೃತ್ತಿ ಸೈನಿಕರ ನೇಮಕ ಮಾಡಿಕೊಳ್ಳಲಾಗಿದೆ. ಕೆಫೆ ಸುತ್ತಮುತ್ತ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಗ್ರಾಹಕರ ಬ್ಯಾಗ್ ತಪಾಸಣೆ ಮಾಡಲಾಗುತ್ತಿದೆ. ಹೋಟೆಲ್‌ಗೆ ಆಗಮಿಸಿದ ಗ್ರಾಹಕರ ನಡುವೆ ಬಾಂಬ್ ಸ್ಫೋಟದ ಬಗ್ಗೆ ಚರ್ಚೆ ಕೂಡ ನಡೆಯುತ್ತಿದೆ.

ಕೆಫೆ ಮಾಲೀಕ ರಾಘವೇಂದ್ರ ರಾವ್ ಖುದ್ದು ಗ್ರಾಹಕರ ಬಳಿ ಬಂದು ಮಾತನಾಡಿಸುತ್ತಿದ್ದು, ಗ್ರಾಹಕರಿಗೆ ಧೈರ್ಯ ತುಂಬುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವ ಭರವಸೆ ನೀಡುತ್ತಿದ್ದು, ಗ್ರಾಹಕರಿಂದ ಕೂಡ ಕೆಫೆ ಮಾಲೀಕರಿಗೆ ಧೈರ್ಯ ತುಂಬುವ ಕೆಲಸವಾಗುತ್ತಿದೆ. ʼಧೈರ್ಯವಾಗಿರಿ. ನಾವು ನಿಮ್ಮ ಜೊತೆ ಇದ್ದೇವೆʼ ಎಂದು ಗ್ರಾಹಕರು ಆತ್ಮವಿಶ್ವಾಸ ತುಂಬುತ್ತಿದ್ದಾರೆ.

ಇದನ್ನೂ ಓದಿ: Blast in Bengaluru : NIA ಕಣ್ಣು ಬಳ್ಳಾರಿಯ ನಾಲ್ವರತ್ತ, ಬಾಂಬರ್‌ ಈಗ ಬಂಟ್ವಾಳದತ್ತ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಸಂಬಂಧ ಇಲ್ಲ ಅಂದ್ಮೇಲೆ ಡಿಕೆಶಿ ಹೆಸರು ಏಕೆ ಬಂತು?‌ ಮಾಡೋದೆಲ್ಲ ಮಾಡಿ, ನನಗೆ ಒರೆಸಲು ಹೊರಟಿದ್ದೀರಾ? ಇದಕ್ಕೆಲ್ಲಾ ಸಿದ್ದರಾಮಯ್ಯ ಮಂತ್ರಿ ಮಂಡಲ‌ವೇ ಕಾರಣ. ಮಂತ್ರಿ ಮಂಡಲದಲ್ಲಿ ತಾವೂ ಇದ್ದೀರಿ ಕೃಷ್ಣಬೈರೇಗೌಡರೇ. ನಿಮ್ಮಲ್ಲಿ ಅಲ್ಪ ಸ್ವಲ್ಪ ಇದ್ದಿದ್ದರೆ ಇದೆನ್ನೆಲ್ಲ ಮಾಡೋಕೆ‌ ಬಿಡುತ್ತಿರಲಿಲ್ಲ. ನಮಗೆ ವಿಷ ಹಾಕಿದ್ದಾರೆ ಅಂತ‌ ಕೃಷ್ಣಬೈರೇಗೌಡ ಹೇಳಿದ್ದಾರೆ. ಅವರು ಹಾಸನಾಂಬೆ ಮುಂದೆ ಬರಲಿ ಎಂಬುದಾಗಿ ಎಚ್‌‌ಡಿಕೆ ಸವಾಲು ಹಾಕಿದರು. ಸರ್ಕಾರವನ್ನು ಹಾಸನಾಂಬೆ ಕೆಲವೇ ದಿನಗಳಲ್ಲಿ ಧ್ವಂಸ ಮಾಡಳಿದ್ದಾಳೆ ಎಂದು ಎಚ್.ಡಿ. ಕುಮಾರಸ್ವಾಮಿ ಶಾಪ ಹಾಕಿದ್ದಾರೆ.

VISTARANEWS.COM


on

Prajwal Revanna Case Hasanambe is going to destroy this government HD Kumaraswamy curse
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರುತ್ತಿವೆ. ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಮಾತಿನ ಸಮರಕ್ಕೆ ಬಿದ್ದಿದ್ದಾರೆ. ಇದರ ಜತೆಗೆ ಎಚ್‌ಡಿಕೆ ರಾಜ್ಯ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ. ಅಲ್ಲದೆ, ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ ಎಂದು ಎಚ್‌ಡಿಕೆ ಶಾಪ ಹಾಕಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಲೈಂಗಿಕ ಹಗರಣ ಆಗಿರುವುದನ್ನು ನಾನು ಒಪ್ಪುತ್ತೇನೆ. ಆದರೆ, ಕೃಷ್ಣಬೈರೇಗೌಡ ಸಂತ್ರಸ್ತರಿಗೆ ನ್ಯಾಯ ಹರಣ ಅಂದಿದ್ದಾರೆ. ನಾವು ಯಾರಿಗೆ ನ್ಯಾಯ ಹರಣ ಮಾಡಿದ್ದೇವೆ? ನೀವು ಸಂತ್ರಸ್ತರಿಗೆ ಯಾವ ನ್ಯಾಯ ಕೊಡಿಸಿದ್ದೀರಿ ಹೇಳಿ? ಹೆಣ್ಣು ಮಕ್ಕಳನ್ನು ಹೆದರಿಸಿ ಹೇಳಿಕೆ ಪಡೆಯಲು ಸಜ್ಜಾಗಿದ್ದಾರೆ. ತನಿಖೆ ಸರಿಯಾಗಿ ನಡೆದಿದ್ದರೆ ಇನ್ನೂ ಎಲ್ಲೆಲ್ಲಿಗೋ ಹೋಗಲಿದೆ. ಕೇಸ್‌ನಲ್ಲಿ ಕುಮಾರಸ್ವಾಮಿ ಸೇರಿಕೊಂಡಿದ್ದಾರೆ ಅಂತಾರೆ. ಪೆನ್‌ಡ್ರೈವ್‌ ಎ.ಡಿ. ಕುಮಾರಸ್ವಾಮಿ ಜೇಬಲ್ಲಿದೆ ಅಂತಾರೆ. ನನ್ನ ಬಳಿ ಇರೋದು ಅಶ್ಲೀಲ ಪೆನ್‌ಡ್ರೈವ್‌ ಅಲ್ಲ. ನನ್ನ ಬಳಿಯಿರುವ ಪೆನ್‌ಡ್ರೈವ್‌ ಕೂಡ ಬಿಡುಗಡೆ ಮಾಡುತ್ತೇನೆ. ಒಂದು ಪೆನ್‌ಡ್ರೈವ್‌ ಇಟ್ಟುಕೊಂಡು ರಸ್ತೆಯಲ್ಲಿ ಮಹಿಳೆಯರ ಮಾನ ಹರಾಜು ಹಾಕಿದ್ದಾರೆ ಎಂದು ಕಿಡಿಕಾರಿದರು.

ಕಾರ್ತಿಕ್ ಗೌಡ ನಿರೀಕ್ಷಣಾ ಜಾಮೀನು ರಿಜೆಕ್ಟ್ ಆಗಿದೆ. ಎಸ್‌ಐಟಿ ಇನ್ನೂ ಯಾಕೆ ಕಾರ್ತಿಕ್ ಗೌಡನನ್ನು ಬಂಧನ ಮಾಡಿಲ್ಲ? ರಾಮನಗರ ಶಾಸಕರ ತುಣುಕುವೊಂದನ್ನು ಬಿಟ್ಟಿದ್ದರು. ಶಾಸಕರ ತುಣುಕನ್ನು ಬಿಟ್ಟರು ಎಂದು ಮೂವರನ್ನು ಬಂಧಿಸಿದ್ದಾರೆ. ಈ ಪೆನ್‌ಡ್ರೈವ್ ಪ್ರಕರಣದಲ್ಲಿ ಯಾಕಪ್ಪ ಏನೂ ಆಗಿಲ್ಲ? ಡಿಸಿಎಂ ಡಿ.ಕೆ. ಶಿವಕುಮಾರ್ ಬಗ್ಗೆ ವಕೀಲ ದೇವರಾಜೇಗೌಡ ಮಾತಾಡಿದ್ದಾರೆ. ಸಂಬಂಧ ಇಲ್ಲ ಅಂದ್ಮೇಲೆ ಡಿಕೆಶಿ ಹೆಸರು ಏಕೆ ಬಂತು?‌ ಮಾಡೋದೆಲ್ಲ ಮಾಡಿ, ನನಗೆ ಒರೆಸಲು ಹೊರಟಿದ್ದೀರಾ? ಇದಕ್ಕೆಲ್ಲಾ ಸಿದ್ದರಾಮಯ್ಯ ಮಂತ್ರಿ ಮಂಡಲ‌ವೇ ಕಾರಣ. ಮಂತ್ರಿ ಮಂಡಲದಲ್ಲಿ ತಾವೂ ಇದ್ದೀರಿ ಕೃಷ್ಣಬೈರೇಗೌಡರೇ. ನಿಮ್ಮಲ್ಲಿ ಅಲ್ಪ ಸ್ವಲ್ಪ ಇದ್ದಿದ್ದರೆ ಇದೆನ್ನೆಲ್ಲ ಮಾಡೋಕೆ‌ ಬಿಡುತ್ತಿರಲಿಲ್ಲ. ನಮಗೆ ವಿಷ ಹಾಕಿದ್ದಾರೆ ಅಂತ‌ ಕೃಷ್ಣಬೈರೇಗೌಡ ಹೇಳಿದ್ದಾರೆ. ಅವರು ಹಾಸನಾಂಬೆ ಮುಂದೆ ಬರಲಿ ಎಂಬುದಾಗಿ ಎಚ್‌‌ಡಿಕೆ ಸವಾಲು ಹಾಕಿದರು. ಸರ್ಕಾರವನ್ನು ಹಾಸನಾಂಬೆ ಕೆಲವೇ ದಿನಗಳಲ್ಲಿ ಧ್ವಂಸ ಮಾಡಳಿದ್ದಾಳೆ ಎಂದು ಎಚ್.ಡಿ. ಕುಮಾರಸ್ವಾಮಿ ಶಾಪ ಹಾಕಿದರು.

ಪೆನ್‌ಡ್ರೈವ್ ಪ್ರಕರಣವನ್ನು ಸಿಬಿಐಗೆ ನೀಡಲು ಆಗ್ರಹ

ಪ್ರಕರಣ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿದ್ದೇವೆ. ಸಿಬಿಐ ತನಿಖೆಗೆ ನೀಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಮನವಿ ಮಾಡಿದ್ದೇನೆ. ಇದನ್ನು ರಾಜ್ಯಪಾಲರು ಅಥವಾ ಕೇಂದ್ರ ಮಾಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರವೇ ಸಿಬಿಐ ತನಿಖೆಗೆ ಒಪ್ಪಿಸಬೇಕು. ನ್ಯಾಯಯುತವಾಗಿ ಈ ಪ್ರಕರಣದ ತನಿಖೆ ನಡೆಯಬೇಕು. ನಮ್ಮ ವಕೀಲರ ಮೂಲಕ ನಾವು ವಾದ ಮಾಡುತ್ತೇವೆ. ಎಲ್ಲವನ್ನೂ ಹೈಕೋರ್ಟ್ ತೀರ್ಮಾನ ಮಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

4 ಗೋಡೆ ಮಧ್ಯೆ ಇರುವುದನ್ನು ವಿಶ್ವಕ್ಕೆ ಹಬ್ಬಿಸಿರುವುದು ನೀವು

ಮಾನ ಹರಣ, ಶೀಲ ಹರಣ ಎಂದೆಲ್ಲ ದೊಡ್ಡದಾಗಿ ಹೇಳಿದ್ದೀರಿ. ಪ್ರಜ್ವಲ್ ಕೇಸ್‌ನಲ್ಲಿ ಸರ್ಕಾರದ ನಡಾವಳಿಗಳು ಏನು ಇದೆಯೋ ಗೊತ್ತಾ? ಹಾಸನದಲ್ಲಿ ಮಹಿಳೆ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿ ಆದೇಶ ಮಾಡಿದ್ದೀರಿ. ಮಹಿಳೆಯರ ಮಾನಹರಣ ಆಗಿದ್ದು ನಾಲ್ಕು ಗೋಡೆ ಮಧ್ಯೆ ಇತ್ತು. ಅದನ್ನು ವಿಶ್ವಕ್ಕೆ ಹಬ್ಬುವಂತೆ ಮಾಡಿದ್ದು ಯಾರಪ್ಪ ಕೃಷ್ಣಬೈರೇಗೌಡ? 4 ಗೋಡೆ ಮಧ್ಯೆ ಇರುವುದನ್ನು ವಿಶ್ವಕ್ಕೆ ಹಬ್ಬಿಸಿರುವುದು ನೀವು ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಲೈಂಗಿಕ ದೌರ್ಜನ್ಯವೆಸಗಿದವರನ್ನು ಬಚಾವ್‌ ಮಾಡಲು ಯತ್ನ ಅಂದಿದ್ದೀರಿ. ನಿಮ್ಮ ಸರ್ಕಾರ ಏನು ಮಾಡುತ್ತಿದೆಯಪ್ಪಾ? ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದ್ದರೆ ನೀವು ಏನು ಮಾಡುತ್ತಿದ್ದೀರಿ? ನಿಮ್ಮ ಸರ್ಕಾರದಲ್ಲಿರುವುದು ಘಟಾನುಘಟಿ ನಾಯಕರಲ್ಲವಾ? ನಿಮ್ಮ ಮುಖ್ಯಮಂತ್ರಿ ಲಾಯರ್ ಆಗಿದ್ದಾರೆ. ಹೊಳೆನರಸೀಪುರ ಪ್ರಕರಣದಲ್ಲಿ ಬೇಲಬಲ್ ಸೆಕ್ಷನ್ ಹಾಕಿದ್ದೀರಿ. ನಂತರ ಎಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. ಕಿಡ್ನ್ಯಾಪ್ ಆಗಿದ್ದಾಳೆ ಎನ್ನಲಾದ ಸಂತ್ರಸ್ತೆ ಸರ್ಕಾರದ ಸುಪರ್ದಿಯಲ್ಲೇ ಇದ್ದಾರೆ. ಎಸ್‌ಐಟಿ ವಶದಲ್ಲಿದ್ದರೂ 5 ದಿನದಿಂದ ಏನು ಮಾಡುತ್ತಿದ್ದೀರಿ? ಸಂತ್ರಸ್ತೆ ಕುಟುಂಬಸ್ಥರನ್ನು ಕೂಡ ಕರೆತಂದಿದ್ದೀರಿ. ಬೇಲ್ ಕೊಡಿಸಲು ಹೋದ ಲಾಯರ್‌ರನ್ನು ಕೂಡ ವಶಕ್ಕೆ ಪಡೆದಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಪೆನ್‌ಡ್ರೈವ್ ಪ್ರಕರಣದಲ್ಲಿ ಸತ್ಯಾಸತ್ಯತೆ ಹೊರಗೆ ಬರಲೇಬೇಕು. ಸತ್ಯ ಹೊರಬರಬೇಕೆಂದು ನಿಮಗಿಂದ ನಾನೇ ಹೆಚ್ಚಿನ ಧ್ವನಿ ಎತ್ತುತ್ತೇನೆ. ಡಿಕೆಶಿಯವರೇ ನಾನು ಡೈರೆಕ್ಟರೂ ಇದ್ದೇನೆ, ನಿರ್ಮಾಪಕ ಇದ್ದೇನೆ. ನಾನು ಎಂದಿಗೂ ಆ್ಯಕ್ಟ್ ಮಾಡಿಲ್ಲ. ಆದರೆ, ಆ್ಯಕ್ಟ್ ಮಾಡಿಸಿದ್ದೇನೆ. ನನ್ನನ್ನು ಕಥಾನಾಯಕನನ್ನಾಗಿ ಮಾಡಿದ್ದೀರಿ ಎಂದ ಕುಮಾರಸ್ವಾಮಿ ಆಕ್ರೋಶವನ್ನ ಹೊರಹಾಕಿದರು.

‘ಪ್ರಪಂಚದ ಅತಿ ದೊಡ್ಡ ಲೈಂಗಿಕ ಹಗರಣ’ ಎಂದು ಸಚಿವ ಕೃಷ್ಣ ಬೈರೇಗೌಡರು ನಿನ್ನೆ ಈ ಮಾತನ್ನು ಹೇಳಿದ್ದಾರೆ. ಈ ಪ್ರಕರಣದ ಪ್ರಾಮುಖ್ಯತೆಯನ್ನು ಹಾಳು ಮಾಡುತ್ತಿರುವುದು ಯಾರು? ಚುನಾವಣೆಗೂ ಮುನ್ನ ಪೆನ್‌ಡ್ರೈವ್ ರಿಲೀಸ್ ಮಾಡಿದ್ದು ಯಾರಪ್ಪ? ದೇಶಾದ್ಯಂತ ಸುದ್ದಿಯಾಗುವಂತೆ ಮಾಡಿದವರು ಯಾರಪ್ಪ? ಪೆನ್‌ಡ್ರೈವ್ ಸಂಬಂಧ ಅಮಿತ್ ಶಾ ಅವರನ್ನು ಪ್ರಶ್ನಿಸಿದ್ರಲ್ಲಪ್ಪಾ? ಬಿಜೆಪಿ, ಜೆಡಿಎಸ್ ಮೈತ್ರಿಯ ಬಗ್ಗೆ ಪ್ರಶ್ನಿಸಿ ನಿಲುವು ಕೇಳಿದಿರಿ? ನಿಮಗೆ ಸಂತ್ರಸ್ತರಿಗೆ ನ್ಯಾಯ ಕೊಡಿಸುವುದು ಬೇಕಾಗಿಲ್ಲ. ನಿಮಗೆ ಬೇಕಾಗಿರುವುದು ಬಿಜೆಪಿ, ಜೆಡಿಎಸ್ ಪಕ್ಷದ ವಿಚಾರವಾಗಿದೆ. ಜೆಡಿಎಸ್ ಪಕ್ಷ ಯಾರ ದಯೆಯೂ ಇಲ್ಲ. ನಿಮ್ಮಂತೆ ನಾವು ಎಲ್ಲಿಯೂ ಹೋಗಿ ಕೇಳಿಕೊಂಡಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಪೆನ್‌ಡ್ರೈವ್ ಬಿಡುಗಡೆಯಿಂದ ಯಾರಿಗೆ ಅನ್ಯಾಯವಾಗಿದೆ ಗೊತ್ತಾ? ಕೃಷ್ಣ ಬೈರೇಗೌಡರೇ ನಿಮಗೆ ನಮಸ್ಕಾರ. ನೀವು ರಾಹುಲ್‌ರಂತೆ 400 ಎಂಬ ಸಂಖ್ಯೆಯನ್ನು ಹೇಳಿಲ್ಲ. ಭಾರಿ ಸಂಖ್ಯೆಯಲ್ಲಿ ಎಂಬ ಪದವನ್ನು ಬಳಕೆ ಮಾಡಿದ್ದೀರಿ. ಮೈಸೂರು ಕಾಂಗ್ರೆಸ್‌ ಅಭ್ಯರ್ಥಿ 2,900 ಎಂದು ಮಾತನಾಡಿದ್ದಾನೆ ಎಂದು ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.

ಮಾಧ್ಯಮಗಳ ಮೂಲಕ ಸರ್ಕಾರಕ್ಕೆ ಸಂದೇಶ ಕಳಿಸುವಂತಾಗಿದೆ. ನಿನ್ನೆ ಹಲವು ನಾಯಕರು ಒಕ್ಕಲಿಗ ‘ಕೈ’ ನಾಯಕರಿಂದ ಸುದ್ದಿಗೋಷ್ಠಿ ನಡೆಸಲಾಗಿದೆ. ನಾವು ದಾರಿ ತಪ್ಪಿಸುತ್ತಿದ್ದೇವೆ ಎಂಬಂತೆ ಮಾತನಾಡಿದ್ದಾರೆ. ಈ ಘಟನೆಗೆ ನಾನು ಜಾತಿಯ ರಕ್ಷಣೆ ಪಡೆಯುವುದಕ್ಕೆ ಹೋಗಲ್ಲ. ಪ್ರಜ್ವಲ್‌ ಕೇಸಲ್ಲಿ ನಾನು ಜಾತಿ ರಕ್ಷಣೆ ಪಡೆಯುವುದಕ್ಕೆ ಹೋಗಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ನಾನು ಒಕ್ಕಲಿಗ ನಾಯಕನೆಂದು ಎಲ್ಲೂ ಹೇಳಿಕೊಂಡಿಲ್ಲ. ಒಕ್ಕಲಿಗ ನಾಯಕತ್ವಕ್ಕಾಗಿ ನಾನು ಪೈಪೋಟಿಯನ್ನು ಮಾಡಿಲ್ಲ. ಏನೋ ಡಿ.ಕೆ. ಶಿವಕುಮಾರ್‌ ಜತೆ ಪೈಪೋಟಿ ಎಂದು ಹೇಳಿದ್ದಾರೆ. ನನ್ನ ವಿರುದ್ಧ 150 ಕೋಟಿ ರೂಪಾಯಿಯ ಹಗರಣದ ಆರೋಪ ಮಾಡಿದ್ದರು. ನನ್ನ ವಿರುದ್ಧ ಆರೋಪ ಬಂದಾಗಲೂ ನಾನು ಸದನದಲ್ಲೇ ಹೇಳಿದ್ದೆ. ಶಾಸಕರ ಸಂಖ್ಯಾಬಲವನ್ನು ಬಳಸಿಕೊಳ್ಳುವುದಿಲ್ಲ ಎಂದು ಹೇಳಿದ್ದೆ. ನಾನು ಏಕಾಂಗಿಯಾಗಿ ಹೋರಾಡುವುದಾಗಿ ಹೇಳಿದ್ದೆ. ನಾನು ಹಿಟ್ ಆ್ಯಂಡ್ ರನ್ ಮಾಡುವ ವ್ಯಕ್ತಿಯಲ್ಲ. ಆಗ ಎಲ್ಲರೂ ನನ್ನ ದಾಖಲೆಗಾಗಿ ಕಾಯುತ್ತಿದ್ದರು. ನಾನು ದಾಖಲೆ ಬಿಟ್ಟಾಗ ನನ್ನ ಮೇಲೆ ಒಕ್ಕಲಿಗರನ್ನು ಬಿಟ್ಟಿದ್ದರು. ನಾನು ಆ ದಿನವೂ ಏಕಾಂಗಿಯಾಗಿಯೇ ಹೋರಾಟ ಮಾಡಿದ್ದೇನೆ. ಈಗಲೂ ನಾನು ಏಕಾಂಗಿಯಾಗಿಯೇ ಹೋರಾಟ ಮಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

ಹಾಸನ ರಾಜಕೀಯದಲ್ಲಿ ಇನ್ವಾಲ್ವ್ ಆಗಿಲ್ಲ

ಪ್ರಜ್ವಲ್ ಪ್ರಕರಣದಲ್ಲಿ ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಈ ನೆಲದ ಕಾನೂನಿಗೆ ಪ್ರತಿಯೊಬ್ಬರೂ ತಲೆಬಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಹೇಳಿದ್ದೇನೆ. ನನ್ನ ಹೇಳಿಕೆಯ ಬಗ್ಗೆ ಡಿ.ಕೆ. ಶಿವಕುಮಾರ್‌ ಅವರು ಕೂಡ ಮಾತನಾಡಿದ್ದಾರೆ. ರೇವಣ್ಣ ಕುಟುಂಬ ಬೇರೆ, ಎಚ್‌ಡಿಕೆ ಕುಟುಂಬ ಬೇರೆ ಅಂದಿದ್ದಾರೆ. ನಾನು ಹೇಳಿಕೆ ನೀಡಿದಂತೆ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ. ದೇವೇಗೌಡರ ಮಕ್ಕಳು ಎಲ್ಲರೂ ಬೇರೆ ಬೇರೆಯಾಗಿ ಇದ್ದೇವೆ. ನಾನು ಎಂದಿಗೂ ಹಾಸನ ರಾಜಕೀಯದಲ್ಲಿ ಇನ್ವಾಲ್ವ್ ಆಗಿಲ್ಲ. ಒಮ್ಮೆ ಮಾತ್ರ ಹಾಸನ ಚುನಾವಣೆ ವೇಳೆ ಇನ್ವಾಲ್ವ್ ಆಗಿದ್ದೆ. ನಮ್ಮ ಕಾರ್ಯಕರ್ತನಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ. ಆ ದಿನವೂ ನನ್ನ ಮೇಲೆಯೇ ಗೂಬೆ ಕೂರಿಸಿದ್ದರು. ರೇವಣ್ಣ ಕುಟುಂಬ ಮುಗಿಸಲು ಕುಮಾರಣ್ಣ ಹೊರಟಿದ್ದಾರೆಂದಿದ್ದಾರೆ ಎಂದು ಎಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

Continue Reading

ಹಾಸನ

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

Prajwal Revanna Case: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ, ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ರಾಜ್ಯಪಾಲರಿಗೆ ಇಂದು ಜೆಡಿಎಸ್‌ ನಿಯೋಗವು ದೂರು ನೀಡಿದೆ. ಅಲ್ಲದೆ, 25,000 ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ ಎಂದು ಆರೋಪ ಮಾಡಲಾಗಿದೆ. ಜತೆಗೆ ಡಿಕೆಶಿ ವಜಾಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ನಿರ್ದೇಶನ ನೀಡುವಂತೆಯೂ ಕೋರಲಾಗಿದೆ.

VISTARANEWS.COM


on

Prajwal Revanna Case DK Shivakumar alleged mastermind in 25000 pen drive allotment
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ರಾಜ್ಯ ಸರ್ಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಆದ್ದರಿಂದ ಈ ಕೇಸ್‌ ಅನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜೆಡಿಎಸ್ ರಾಜ್ಯಪಾಲರಿಗೆ ಮನವಿ ಮಾಡಿದೆ.

ಮಹಿಳೆಯರ ಅಶ್ಲೀಲ ವಿಡಿಯೊಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್‌ಗಳನ್ನು ವ್ಯಾಪಕವಾಗಿ ಹಂಚಿಕೆ ಮಾಡಲಾಗಿರುವ ಪ್ರಕರಣದ ಪಿತೂರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ ಆಗಿದ್ದು, ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಬೇಕು ಎಂದು ಜೆಡಿಎಸ್ ರಾಜ್ಯಪಾಲರಲ್ಲಿ ಮನವಿ ಮಾಡಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಪಕ್ಷದ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರಿಗೆ ದೂರು ಸಲ್ಲಿಸಿತು. ಈ ಸಂದರ್ಭದಲ್ಲಿ ಮನವಿ ಪತ್ರದಲ್ಲಿನ ಎಲ್ಲ ಅಂಶಗಳನ್ನು ಕುಮಾರಸ್ವಾಮಿ ಅವರು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟರು.

ವಿಶೇಷ ತನಿಖಾ ತಂಡ ಸರ್ಕಾರದ ಹಿತಕ್ಕೆ ತಕ್ಕಂತೆ ಕೆಲಸ ಮಾಡುತ್ತಿದೆ

ವಿಶೇಷ ತನಿಖಾ ತಂಡ (ಎಸ್‌ಐಟಿ) ಸರಿಯಾಗಿ ತನಿಖೆ ಮಾಡುತ್ತಿಲ್ಲ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿಲ್ಲ. ಇಡೀ ಪ್ರಕರಣವನ್ನು ದಿಕ್ಕು ತಪ್ಪಿಸುವ ರೀತಿಯಲ್ಲಿ ಅದು ನಿರ್ವಹಿಸುತ್ತಿದೆ ಎಂದು ಜೆಡಿಎಸ್ ಗಂಭೀರ ಆಪಾದನೆ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಎನ್ನುವ ವ್ಯಕ್ತಿ ವಿಡಿಯೋ ಹಾಗೂ ಚಿತ್ರಗಳನ್ನು ಪ್ರಜ್ವಲ್ ಅವರ ಮೊಬೈಲ್ ಕದ್ದು ಸೋರಿಕೆ ಮಾಡಿದ್ದಾರೆ. ಕಾರ್ತಿಕ್ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿಯಾಗಿ ಸಂಚು ರೂಪಿಸಿದ್ದರು. ಆದರೆ, ಈವರೆಗೂ ಕಾರ್ತಿಕ್‌ನನ್ನು ಬಂಧಿಸಿಲ್ಲ ಎಂದು ಜೆಡಿಎಸ್ ದೂರಿದೆ.

ಹಾಸನ ಸೇರಿದಂತೆ ರಾಜ್ಯಾದ್ಯಂತ ಪೆನ್ ಡ್ರೈವ್ ಹಂಚಿಕೆ ಮಾಡಿರುವ ಪ್ರಕರಣದ ಆರೋಪಿಗಳ ಬಗ್ಗೆ ದೂರು ದಾಖಲಾಗಿದ್ದರೂ ಈವರೆಗೆ ಬಂಧಿಸಿಲ್ಲ. ಈ ಕೃತ್ಯದಲ್ಲಿ ನವೀನ್ ಗೌಡ ಎಂಬ ವ್ಯಕ್ತಿ ಭಾಗಿಯಾಗಿದ್ದು, ಹಾಸನದಲ್ಲಿ FIR ಆಗಿದ್ದರೂ ಅವನನ್ನು ತನಿಖಾ ತಂಡ ಬಂಧನ ಮಾಡಿಲ್ಲ ಎಂದು ರಾಜ್ಯಪಾಲರಿಗೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಆಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ವಿಡಿಯೊಗಳನ್ನು ಎಲ್ಲೆಡೆ ಸೋರಿಕೆ ಮಾಡಿರುವ ಕಿಡಿಗೇಡಿಗಳನ್ನು ಬಂಧನ ಮಾಡಬೇಕು. ಈ ನಿಟ್ಟಿನಲ್ಲಿ ಎಸ್ ಐಟಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜೆಡಿಎಸ್ ಆಪಾದಿಸಿದೆ.

ರಾಜ್ಯ ಸರ್ಕಾರ ಸಂಪೂರ್ಣ ವಿಫಲ

ಮಹಿಳೆಯರ ಮಾನ ಹಾನಿಗೆ ಕಾರಣವಾಗಿರುವ ಅಶ್ಲೀಲ ವಿಡಿಯೊಗಳ ಹಂಚಿಕೆ ಮಾಡುವುದನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪ್ರಕರಣದಲ್ಲಿ ನೊಂದಿರುವ ಮಹಿಳೆಯರಿಗೆ ಇದರಿಂದ ಬಹಳ ಆಘಾತವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಎಸ್‌ಐಟಿ ನಡೆಸುತ್ತಿರುವ ತನಿಖೆ ಪಾರದರ್ಶಕವಾಗಿಲ್ಲ ಹಾಗೂ ಏಕಪಕ್ಷೀಯವಾಗಿದೆ ಮಾತ್ರವಲ್ಲ, ಪೂರ್ವಾಗ್ರಹ ಪೀಡಿತವಾಗಿದೆ. ನೊಂದ ಮಹಿಳೆಯರ ಅಶ್ಲೀಲ ವಿಡಿಯೊಗಳನ್ನು ತುಂಬಿಸಲಾಗಿದ್ದ ಸುಮಾರು 25 ಸಾವಿರಕ್ಕೂ ಹೆಚ್ಚು ಪೆನ್ ಡ್ರೈವ್‌ಗಳ ಸುರಿಮಳೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ನೇರ ಪಾತ್ರವಿದೆ. ಆ ಪೆನ್ ಡ್ರೈವ್‌ಗಳನ್ನು ಬಸ್ ನಿಲ್ದಾಣ, ಉದ್ಯಾನವನ ಸೇರಿದಂತೆ ಎಲ್ಲ ಸಾರ್ವಜನಿಕ ಪ್ರದೇಶಗಳಲ್ಲಿ ತಂದು ಹಾಕಲಾಗಿದೆ. ಎಂದು ದೂರಿನಲ್ಲಿ ಪ್ರಮುಖವಾಗಿ ಉಲ್ಲೇಖ ಮಾಡಲಾಗಿದೆ.

ವಕೀಲ, ಬಿಜೆಪಿ ಮುಖಂಡ ದೇವರಾಜ್ ಗೌಡ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ನಡೆದಿರುವ ಮೊಬೈಲ್ ಸಂಭಾಷಣೆಯಲ್ಲಿ ಪೆನ್ ಡ್ರೈವ್ ಸಂಚು ಬಹಿರಂಗವಾಗಿದೆ. ರಾಜ್ಯ ಸರ್ಕಾರ ರಚನೆ ಮಾಡಿರುವ ತನಿಖಾ ತಂಡ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುತ್ತಿದೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ವರ್ಚಸ್ಸು ಹಾಳು ಮಾಡಲು ಎಸ್‌ಐಟಿಯನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಜೆಡಿಎಸ್ ನೇರವಾಗಿ ಆರೋಪಿಸಿದೆ.

ಅದರಿಂದ ಈ ಎಸ್‌ಐಟಿಯಿಂದ ಈ ಪ್ರಕರಣದ ಪಾರದರ್ಶಕ, ನ್ಯಾಯಯುತ ತನಿಖೆ ಸಾಧ್ಯವಿಲ್ಲ. ಆದ್ದರಿಂದ ಇಡೀ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸಲು ತಾವು ಮಧ್ಯ ಪ್ರವೇಶ ಮಾಡಬೇಕು ಎಂದು ಜೆಡಿಎಸ್ ರಾಜ್ಯಪಾಲರಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ: BJP Karnataka: ಕಾಂಗ್ರೆಸ್‌ ವಿರುದ್ಧ ಮೊಟ್ಟೆ ವಿಡಿಯೊ; ಬಿಜೆಪಿ ಸೋಷಿಯಲ್‌ ಮೀಡಿಯಾ ಮುಖ್ಯಸ್ಥನ ಬಂಧನ

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ. ದೇವೇಗೌಡರು, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಎಚ್.ಕೆ. ಕುಮಾರಸ್ವಾಮಿ, ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ವೆಂಕಟರಾವ್ ನಾಡಗೌಡ, ಅಲ್ಕೊಡ್ ಹನುಮಂತಪ್ಪ, ಆನಂದ್ ಅಸ್ನೋಟಿಕರ್, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾ ನಾಯಕ್, ಶಾಸಕರಾದ ಕರೆಮ್ಮ ನಾಯಕ್, ರಾಜುಗೌಡ ಪಾಟೀಲ್, ನೇಮಿರಾಜ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಭೋಜೆಗೌಡ, ಮಂಜೇಗೌಡ, ಇಂಚರ ಗೋವಿಂದರಾಜು, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಚೌಡರೆಡ್ಡಿ ತೂಪಲ್ಲಿ, ಡಾ.ಅನ್ನದಾನಿ, ತಿಮ್ಮರಾಯಪ್ಪ, ವೀರಭದ್ರಪ್ಪ ಹಾಲಹರವಿ, ಮಹದೇವು, ಪ್ರಸನ್ನ ಕುಮಾರ್, ಮುನೇಗೌಡ, ಆಂಜಿನಪ್ಪ, ಸೂರಜ್ ನಾಯಕ್ ಸೋನಿ ಮುಂತಾದವರು ನಿಯೋಗದಲ್ಲಿ ಇದ್ದರು.

Continue Reading

ಮಳೆ

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Karnataka Weather Forecast : ವಿವಿಧೆಡೆ ಭಾರಿ ಗಾಳಿ-ಮಳೆಗೆ (Rain News) ಅನಾಹುತಗಳು ಸಂಭವಿಸಿದೆ. ಮಡಿಕೇರಿಯಲ್ಲಿ ಮಳೆ-ಗಾಳಿಗೆ ಕಾರಿನ ಮೇಲೆ ಮರ ಬಿದ್ದು ಜಖಂಗೊಂಡಿದೆ. ಶುಕ್ರವಾರವು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇತ್ತ ಮಳೆಗಾಗಿ ಮಕ್ಕಳಿಗೆ ಮದುವೆ ಮಾಡಿಸಿದ ಪ್ರಸಂಗವು ನಡೆದಿದೆ.

VISTARANEWS.COM


on

By

karnataka weather Forecast
Koo

ಕೊಡಗು/ಕೊಪ್ಪಳ/ಬೆಂಗಳೂರು: ರಾಜ್ಯದ ಹಲವೆಡೆ ಗಾಳಿ ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಗುರುವಾರದಂದು ಕೊಡಗು‌ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ (Karnataka Weather Forecast) ಮಳೆಯಾಗಿದೆ. ಕಳೆದೆರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯ ಸಿಂಚನವಾಗುತ್ತಿದೆ. ಮುಂಜಾನೆ ಮೋಡ‌ ಕವಿದ ವಾತಾವರಣವಿದ್ದು, ಸಂಜೆ‌ ಅಬ್ಬರದೊಂದಿಗೆ ಮಳೆ ಸುರಿಯುತ್ತಿದೆ. ಮಳೆಯಿಂದ ಕೊಡಗಿನ‌ ರೈತರು ಹಾಗೂ ಸಾರ್ವಜನಿಕರ ಮೊಗದಲ್ಲಿ ಮಂದಹಾಸ ಮೂಡಿದೆ. ಮಡಿಕೇರಿ ಸಮೀಪ ನಿಲ್ಲಿಸಿದ್ದ ಕಾರಿನ ಮೇಲೆ ಭಾರಿ ಗಾಳಿ‌ಗೆ ಮರವು ಧರೆಗುರುಳಿದೆ. ಮಡಿಕೇರಿಯ ಸುದರ್ಶನ ಅಥಿತಿಗೃಹದ ಬಳಿ ಘಟನೆ ನಡೆದಿದೆ. ಅದೃಷ್ಟವಶಾತ್‌ ಕಾರಿನೊಳಗೆ ಯಾರು ಇರಲಿಲ್ಲ.

ಇತ್ತ ಕೊಪ್ಪಳ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ. ಬಿಸಿಲನಿಂದ ಕಂಗೆಟ್ಟ ಜನರಿಗೆ ಗಾಳಿ ಸಹಿತ ಮಳೆಯು ಅಬ್ಬರಿಸಿದೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನಲ್ಲಿ ಜೋರಾಗಿ ಮಳೆಯಾಗಿದೆ. ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಏರ್‌ಪೋರ್ಟ್‌ನಲ್ಲೂ ಉತ್ತಮ ಮಳೆಯಾಗಿದೆ. ಬೆಳಗ್ಗೆನಿಂದ ಬಿಸಿಲಿಗೆ ಕಂಗೆಟ್ಟಿದ್ದ ಏರ್‌ಪೋರ್ಟ್‌ ಪ್ರಯಾಣಿಕರು, ಟ್ಯಾಕ್ಸಿ ಚಾಲಕರು ಮಳೆ ಆಗಮನದಿಂದ ಖುಷಿಯಾದರು. ಮಳೆಗೆ ವಾತಾವರಣವು ಕೂಲ್‌ ಆಗಿತ್ತು.

ವಿಜಯನಗರದಲ್ಲಿ ಮಳೆಗೆ ಉರುಳಿದ ಬಾಳೆ ಬೆಳೆ

ಹಂಪಿ ಪರಿಸರದಲ್ಲಿ ಸುರಿದ ಮಳೆಗೆ ಬಾಳೆ ಬೆಳೆ ಉರುಳಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಗಾಳಿ, ಮಳೆಗೆ ಸಾವಿರಾರು ಬಾಳೆಗಿಡಗಳು ನೆಲಕ್ಕುರುಳಿವೆ. ರೈತಾಪಿ ವರ್ಗ ವರ್ಷದ ಮೊದಲ ದೊಡ್ಡ ಮಳೆ ಎಂದೇ ಕೊಂಡಾಡಿದ್ದಾರೆ. ವೆಂಕಟಾಪುರ ಮಾಗಣೆ, ನಿಂಬಾಪುರ, ಬುಕ್ಕಸಾಗರ ಮಾಗಣೆ ಗ್ರಾಮಗಳಲ್ಲಿ ಬಾಳೆ ಬೆಳೆ ನೆಲಕ್ಕೆ ಬಿದ್ದಿದೆ.

ರೈತರು ಹೆಚ್ಚಾಗಿ ಸುಗಂದಿ, ಏಲಕ್ಕಿ, ಸಕ್ಕರೆ ಬಾಳೆಯನ್ನು ಬೆಳೆದಿದ್ದರು. ವೆಂಕಟಾಪುರ ಮಾಗಣೆಯಲ್ಲಿ ಗ್ರಾಮದಲ್ಲಿ ಬಾಳೆಗಿಡಗಳಿಗೆ ಹೆಚ್ಚಿನ ಹಾನಿಯಾಗಿದೆ. ಎಕರೆಗೆ 900 ಗಿಡಗಳು ನೆಟ್ಟಿದರೆ ಕೆಲವೆಡೆ 300 ರಿಂದ 400 ಬಾಳೆ ಗಿಡ ನೆಲಸಮವಾಗಿವೆ. ಕೆಲವೆಡೆ ಎಕೆರೆಗಟ್ಟಲೇ ಗಿಡಗಳು ನೆಲಕ್ಕುರುಳಿವೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಳೆ ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರದ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಇನ್ನೂ ಹಲವು ತಿಂಗಳಿಂದ ತುರ್ತಾ, ಬಸವಣ್ಣ, ರಾಯ ಕಾಲುವೆಗಳಲ್ಲಿ ನೀರಿಲ್ಲದೇ ಬರಿದಾಗಿತ್ತು. ಇದೀಗ ಮಳೆಗೆ ಕಾಲುವೆಗಳಲ್ಲೂ ನೀರು ಹರಿದಿದ್ದು, ರೈತರಲ್ಲೂ ಕೊಂಚ ಸಂತಸಗೊಂಡಿದ್ದಾರೆ.

ತುಮಕೂರಲ್ಲಿ ಮಳೆಗಾಗಿ ಮಕ್ಕಳಿಗೆ ಮದುವೆ

ಕೆಲವೆಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಮಳೆಗಾಗಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಮಳೆಗಾಗಿ ತುಮಕೂರಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ತೀವ್ರ ಬರ ಹಿನ್ನೆಲೆಯಲ್ಲಿ ಬೆಳದಿಂಗಳು ಹಬ್ಬ ಆಚರಣೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಚಿಕ್ಕ ಮಕ್ಕಳಿಗೆ ವಧು-ವರರಂತೆ ಸಿಂಗಾರಿಸಿ, ಅಲಂಕಾರಿಸಿ ಮದುವೆ ಮಾಡಿ ವಿಶೇಷ ಆಚರಣೆ ಮಾಡಿದ್ದಾರೆ. ತುಮಕೂರಿನ ಜಯಪುರ ಬಡಾವಣೆಯಲ್ಲಿ ಘಟನೆ ನಡೆದಿದೆ. ಮಳೆಗಾಗಿ ಜನರು ಹಲವು ಆಚರಣೆಗಳ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: SSLC Result 2024: ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಭಾರಿ ಮಳೆಯೊಂದಿಗೆ ರಭಸವಾಗಿ ಬೀಸಲಿದೆ ಗಾಳಿ

ಮೇ 10ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕೆಲವು ಸ್ಥಳಗಳಲ್ಲಿ ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಕ್ಷಿಣ ಒಳನಾಡಿನಲ್ಲಿ ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಸಿನ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗಲಿದೆ. ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗರಿಷ್ಠ ತಾಪಮಾನವು 2-4 ಡಿ.ಸೆ ಕಡಿಮೆಯಾಗುವ ಸಾಧ್ಯತೆ ಇದೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಗೆ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 34-22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

R Ashok: ಶಾಂತಿಯ ತೋಟವನ್ನು ಹಾಳುಗೆಡವುತ್ತಿರುವುದು ಬಿಜೆಪಿಯಲ್ಲ, ಕಾಂಗ್ರೆಸ್‌: ಆರ್. ಅಶೋಕ್‌ ಆಕ್ರೋಶ

Bengaluru News: ಸ್ಯಾಮ್‌ ಪಿತ್ರೋಡ ಅವರ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸಿದೆ. ವರ್ಣಭೇದ ನೀತಿ ಹಾಗೂ ಬಣ್ಣದ ಕುರಿತು ಮಾತಾಡುವುದು ಕಾಂಗ್ರೆಸ್‌ನ ಡಿಎನ್‌ಎ ಯಲ್ಲೇ ಇದೆ. ಇದಕ್ಕೂ ಮುನ್ನವೇ ಹಿನ್ನೆಲೆ ಗಾಯಕರಾಗಿ ಡಿ.ಕೆ.ಸುರೇಶ್‌ ಈ ಮಾತನಾಡಿದ್ದರು. ಈಗ ದೇಶ ಒಡೆಯುವ, ಛಿದ್ರ ಮಾಡುವ ಮಾತನ್ನು ಪಿತ್ರೋಡಾ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ಸಿದ್ಧಾಂತವನ್ನು ತಿಳಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಆರೋಪಿಸಿದ್ದಾರೆ.

VISTARANEWS.COM


on

Opposition party leader R Ashok latest statement in bengaluru
Koo

ಬೆಂಗಳೂರು: ಕಾಂಗ್ರೆಸ್‌ ನಾಯಕ ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ನಿಂದನೆಯ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ದಕ್ಷಿಣ ಭಾರತದ ಜನರು 5 ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೇ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಅವರು ಶಾಂತಿಯ ತೋಟವನ್ನು ಕದಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಯಾಮ್‌ ಪಿತ್ರೋಡ ಅವರ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸಿದೆ. ವರ್ಣಭೇದ ನೀತಿ ಹಾಗೂ ಬಣ್ಣದ ಕುರಿತು ಮಾತಾಡುವುದು ಕಾಂಗ್ರೆಸ್‌ನ ಡಿಎನ್‌ಎ ಯಲ್ಲೇ ಇದೆ. ಇದಕ್ಕೂ ಮುನ್ನವೇ ಹಿನ್ನೆಲೆ ಗಾಯಕರಾಗಿ ಡಿ.ಕೆ.ಸುರೇಶ್‌ ಈ ಮಾತನಾಡಿದ್ದರು. ಈಗ ದೇಶ ಒಡೆಯುವ, ಛಿದ್ರ ಮಾಡುವ ಮಾತನ್ನು ಪಿತ್ರೋಡಾ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ಸಿದ್ಧಾಂತವನ್ನು ತಿಳಿಸಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Pejawar Swamiji: ದೇವಾಲಯಗಳ ಆಡಳಿತ ಸಂಪೂರ್ಣವಾಗಿ ಹಿಂದೂಗಳಿಗೆ ಒಪ್ಪಿಸಬೇಕು: ಪೇಜಾವರ ಶ್ರೀ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣದ ಗ್ಯಾರಂಟಿಯನ್ನು ನೀಡಿದ್ದಾರೆ. ಹಿಂದೆ ವರ್ಣಭೇದ ನೀತಿಯಿಂದ ಅನೇಕ ಸಾವು ನೋವುಗಳಾಗಿತ್ತು. ನೆಲ್ಸನ್‌ ಮಂಡೇಲ, ಮಹಾತ್ಮ ಗಾಂಧೀಜಿಯಿಂದ ಇದರ ವಿರುದ್ಧ ಹೋರಾಟ ನಡೆದಿತ್ತು. ಆದರೆ ಕಾಂಗ್ರೆಸ್ ಬಣ್ಣದ ಆಧಾರದಲ್ಲಿ ಜನರ ಮನಸ್ಸನ್ನು ಒಡೆದಿದೆ. 5 ಸಾವಿರ ವರ್ಷಗಳ ಇತಿಹಾಸವಿರುವ ನಮ್ಮನ್ನು ಆಫ್ರಿಕಾದವರು ಎಂದಿದ್ದಾರೆ. ಒಕ್ಕಲಿಗರು, ಲಿಂಗಾಯಿತರು, ದಲಿತರಿಗೆ ಕಾಂಗ್ರೆಸ್‌ ಯಾವ ಬಣ್ಣ ಹಚ್ಚುತ್ತದೆ ಎಂದು ಪ್ರಶ್ನೆ ಮಾಡಿದರು.

ಸೋನಿಯಾ ಗಾಂಧಿ ಇಟಲಿಯಿಂದ ಬಂದಿದ್ದರೂ ಅವರನ್ನು ಭಾರತೀಯರೆಂದು ಒಪ್ಪಿಕೊಳ್ಳುವಂತೆ ಕಾಂಗ್ರೆಸ್‌ ನಾಯಕರು ಒತ್ತಾಯಿಸುತ್ತಾರೆ. ಸೋನಿಯಾ ದೇಶದ ಸೊಸೆ ಎಂದು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ಸೋನಿಯಾ, ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ವಾಡ್ರಾ ಯಾವ ದೇಶದಿಂದ ಬಂದಿದ್ದಾರೆ ಎಂದು ಮೊದಲು ತಿಳಿಸಬೇಕು. ನುಡಿದಂತೆ ನಡೆಯುವ ಸಿಎಂ ಸಿದ್ದರಾಮಯ್ಯ ಐದು ಗ್ಯಾರಂಟಿ ಹೇಳುತ್ತಾರೆ. ಈಗ ಬಿಳಿ ಗ್ಯಾರಂಟಿ, ಕಪ್ಪು ಗ್ಯಾರಂಟಿ, ಚೈನೀಸ್‌ ಗ್ಯಾರಂಟಿ, ಅರಬ್ಬಿ ಗ್ಯಾರಂಟಿ, ಆಫ್ರಿಕಾ ಗ್ಯಾರಂಟಿಯನ್ನು ನೀಡಿದ್ದಾರೆ ಎಂದರು.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

ಮಹಾರಾಷ್ಟ್ರದಲ್ಲಿ ಹುಟ್ಟಿದ ಡಾ. ಬಿ. ಆರ್‌. ಅಂಬೇಡ್ಕರ್‌ ಯಾರು, ಗುಜರಾತ್‌ನಲ್ಲಿ ಹುಟ್ಟಿದ ಗಾಂಧೀಜಿ ಯಾರು, ಬೆಂಗಳೂರು ಕಟ್ಟಿದ ಕೆಂಪೇಗೌಡರು ಯಾರು ಎಂದು ‌ಕಾಂಗ್ರೆಸ್ ಹೇಳಬೇಕು. ಈಗಾಗಲೇ ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ನೋಡುತ್ತಿದೆ. ಮೋದಿ ಎಂದರೆ‌ ಕಪಾಳಕ್ಕೆ ಹೊಡಿ ಎಂದವರು ಪಿತ್ರೋಡಾಗೆ ಹೇಗೆ ಹೊಡೆಯುತ್ತಾರೆ ಎಂದು ಪ್ರಶ್ನೆ ಮಾಡಿದರು.

ಸ್ವಂತ ಮಕ್ಕಳಿಗೆ ಹಕ್ಕಿಲ್ಲ

ಹಿಂದೆ ಬ್ರಿಟಿಷರು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾನೂನು ತಂದು ರಾಜ್ಯಗಳನ್ನು ಕಿತ್ತುಕೊಂಡರು. ಅದೇ ರೀತಿ ಈಗಿನ ಕಾಂಗ್ರೆಸ್ ಸ್ವಂತ ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾನೂನು ತರಲು ಮುಂದಾಗಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಲೂಟಿ ಮಾಡಿದ್ದೇವೆ ಎಂದು ಹೇಳಿದ್ದರು. ಅಂತಹ ಲೂಟಿಯ ಸಂಪತ್ತನ್ನು ನರೇಂದ್ರ ಮೋದಿ ಜನರಿಗೆ ನೀಡಲಿದ್ದಾರೆ ಎಂದರು. ದಕ್ಷಿಣ ಭಾರತದವರು ಆಫ್ರಿಕಾದವರು ಎನ್ನುವುದಾದರೆ ಸಿಎಂ ಸಿದ್ದರಾಮಯ್ಯ ಮೊದಲು ಆಫ್ರಿಕಾಗೆ ಹೋಗಿ ಅಲ್ಲಿ ಸಿಎಂ ಆಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

ಮುಖ್ಯಮಂತ್ರಿಗಳೇ ಉತ್ತರಿಸಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಸಿಲರಿ ನೀರು, ಜ್ಯೂಸ್ ಕುಡಿದುಕೊಂಡು ಎಸಿಯಲ್ಲಿ ಕುಳಿತು ಪ್ರಧಾನಿ ನರೇಂದ್ರ ‌ಮೋದಿಗೆ ಪ್ರಶ್ನೆ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಜನರಿಗೆ ನೀರು ನೀಡಿಲ್ಲ, ಹಾಲಿನ ಪ್ರೋತ್ಸಾಹಧನ ನೀಡಿಲ್ಲ, ಆಂಬ್ಯುಲೆನ್ಸ್ ಸಿಬ್ಬಂದಿಗೆ ಸಂಬಳ ನೀಡಿಲ್ಲ, ಬಿಬಿಎಂಪಿ ಗುತ್ತಿಗೆದಾರರಿಗೆ ಬಿಲ್ ಕೊಟ್ಟಿಲ್ಲ, ನೇಹಾ ಹತ್ಯೆಗೆ 120 ದಿನಗಳಲ್ಲಿ ತೀರ್ಪು ಕೊಡುತ್ತೇನೆಂದು ಇನ್ನೂ ತನಿಖೆ ಶುರು ಆಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಒಂದು ದಿನ ರಜೆ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಎಲ್ಲ ಬಗೆಯ ರಜೆ ಪಡೆದು ಮಜಾ ಮಾಡುತ್ತಿದ್ದಾರೆ. ಸದಾ ಕೆಲಸ ಮಾಡುವ ಮೋದಿ ಹಾಗೂ ಕೆಲಸ ಕಳ್ಳ ಸಿಎಂ ಸಿದ್ದರಾಮಯ್ಯ ಅವರ ನಡುವೆ ಎಲ್ಲಿಯ ಹೋಲಿಕೆ ಎಂದು ಅಶೋಕ್‌ ವ್ಯಂಗ್ಯವಾಡಿದರು‌.

Continue Reading
Advertisement
Failed in SSLC Exam Student suicide in mandya
ಮಂಡ್ಯ28 seconds ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌; ನೇಣಿಗೆ ಶರಣಾದ ವಿದ್ಯಾರ್ಥಿ

Ranveer Singh
Latest12 mins ago

Ranveer Singh: 2 ಕೋಟಿ ರೂ. ಮೌಲ್ಯದ ವಜ್ರದ ನೆಕ್ಲೇಸ್ ಧರಿಸಿ ಗಮನ ಸೆಳೆದ ರಣವೀರ್ ಸಿಂಗ್

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ13 mins ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Racial Comments
ಪ್ರಮುಖ ಸುದ್ದಿ19 mins ago

Racist Comment : ಭಾರತದಲ್ಲಿ ನೀಗ್ರೊಗಳಿದ್ದಾರೆ…; ಇದೀಗ ಬಂಗಾಳ ಕಾಂಗ್ರೆಸ್​​ ಅಧ್ಯಕ್ಷರ ಸರದಿ

KL Rahul
ಕ್ರೀಡೆ56 mins ago

IPL 2024 : ಲಕ್ನೊ ತಂಡದ ನಾಯಕನ ಸ್ಥಾನದಿಂದ ರಾಹುಲ್ ಔಟ್​?

Prajwal Revanna Case DK Shivakumar alleged mastermind in 25000 pen drive allotment
ಹಾಸನ59 mins ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

Maldives anti-India stance
ಪ್ರಮುಖ ಸುದ್ದಿ2 hours ago

Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Self Harming Guest lecturer hangs herself to death
ಕರ್ನಾಟಕ2 hours ago

Self Harming: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವು

karnataka weather Forecast
ಮಳೆ2 hours ago

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Dog bite
Latest2 hours ago

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ13 mins ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ59 mins ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ7 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ8 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ8 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ9 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು10 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

ಟ್ರೆಂಡಿಂಗ್‌