Site icon Vistara News

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದ ಪೊಲೀಸ್‌ ಕಮಿಷನರ್‌

Rameswaram cafe bomb blast case No one has been arrested

ಬೆಂಗಳೂರು: ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ (rameshwaram cafe blast) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯು ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಆದರೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ ಸ್ಪಷ್ಟಪಡಿಸಿದ್ದಾರೆ.

ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿದೆ. ಹೀಗಾಗಿ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಜತೆಗೆ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.

ರಾಮೇಶ್ವರಂ ಬ್ರಾಂಚ್‌ಗಳ ಪರಿಶೀಲನೆ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ರಾಮೇಶ್ವರಂ ಮತ್ತೊಂದು ಬ್ರಾಂಚ್‌ಗಳಲ್ಲೂ ಪರಿಶೀಲನೆ ನಡೆಸುತ್ತಿದ್ದಾರೆ. ಇಂದಿರಾನಗರದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಿಸಿಟಿವಿ ದೃಶ್ಯಾವಳಿಯಲ್ಲಿ ಶಂಕಿತರ ಚಲನವಲನ ಇದೇಯಾ ಎಂದು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

ಸಂಶಯ ಬಂದರೆ ಇಲ್ಲಿಗೆ ಕಾಲ್‌ ಮಾಡಿ

ಬೆಂಗಳೂರು: ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ (Blast In Bengaluru) ಬ್ಲಾಸ್ಟ್‌ ಪ್ರಕರಣದ ಬಳಿಕ ಬೆಂಗಳೂರಲ್ಲಿ ಹೈ ಅಲರ್ಟ್ ಆಗಿರುವಂತೆ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚನೆ (rameshwaram cafe blast) ನೀಡಿದ್ದಾರೆ. ಜತೆಗೆ ಜನರು ಇಂತಹ ಸಮಯದಲ್ಲಿ ಆತಂಕಕ್ಕೆ ಒಳಗಾಗದೇ, ಅನುಮಾನಾಸ್ಪದ ವ್ಯಕ್ತಿಯನ್ನು ಕಂಡರೆ, ಯಾವುದಾರೂ ವಸ್ತು ಅಥವಾ ಬ್ಯಾಗ್‌ ಇರುವುದು ಕಂಡರೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ.

ಯಾರ ಮೇಲಾದರೂ ಸಂಶಯ ಬಂದರೆ ಕೂಡಲೇ 122ಗೆ ಸಂಖ್ಯೆಗೆ ಕರೆ ಮಾಡಿ, ಪೊಲೀಸರಿಗೆ ವಿಚಾರವನ್ನು ಮುಟ್ಟಿಸಿ. ನಾವು ನಿಮ್ಮನ್ನು ತ್ವರಿತವಾಗಿ ತಲುಪುತ್ತೇವೆ ಎಂದು ಕರ್ನಾಟಕ ರಾಜ್ಯ ಪೊಲೀಸ್‌ನ ಎಕ್ಸ್‌ ಖಾತೆಯಿಂದ ಮಾಹಿತಿ ನೀಡಿದ್ದಾರೆ.

ದಿ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಬಾಂಬ್‌ ಅನ್ನು ಸ್ಫೋಟಿಸಿರುವುದು ಹಲವು ಅನುಮಾನವನ್ನು ಮೂಡಿಸಿದೆ. ಪಕ್ಕಾ ನುರಿತ ಟೆರರಿಸ್ಟ್‌ಗಳಿಂದಲೇ ಈ ಕೃತ್ಯ ನಡೆದಿರುವ ಶಂಕೆ ಇದೆ. ನಗರ ಪೊಲೀಸರ ಗಮನವನ್ನು ಒಂದೇ ಕಡೆ ಕೇಂದ್ರಿಕೃತವಾಗುವಂತೆ ಈ ರೀತಿ ಹುನ್ನಾರ ಮಾಡಿದ್ದರಾ ಎಂಬ ಪ್ರಶ್ನೆ ಉದ್ಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version