Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ - Vistara News

ಬೆಂಗಳೂರು

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

Blast in Bengaluru: ಸ್ಪೋಟದ ಬಳಿಕ ಸಿಕ್ಕ ವಸ್ತುಗಳಿಂದ ಟೈಮರ್ ಅಳವಡಿಕೆ ಮಾಡಲಾಗಿದೆಯೆ ಎಂಬ ಶಂಕೆ ವ್ಯಕ್ತವಾಗಿದೆ. ಬ್ಯಾಗ್ ಇಟ್ಟು ಬ್ಯಾಗಿನ ಒಳಗೆ ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಲಾಗಿದೆ ಎಂಬ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಇದು ಆತಂಕವನ್ನು ಹೆಚ್ಚು ಮಾಡಿದೆ.

VISTARANEWS.COM


on

Blast in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಲ್ಲಿನ ವೈಟ್‌ಫೀಲ್ಡ್‌ನ ಬ್ರೂಕ್‌ ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಿಗೂಢ ಸ್ಫೋಟವು (Blast in Rameshwaram Cafe) ನಾಗರಿಕರನ್ನು ತಲ್ಲಣಗೊಳಿಸಿದೆ. ಸ್ಫೋಟಗೊಂಡ ಸ್ಥಳದಲ್ಲಿ ಬ್ಯಾಟರಿ ಪತ್ತೆಯಾಗಿದ್ದು, ತನಿಖೆಯನ್ನು ಚುರುಕುಗೊಳಿಸಲಾಗಿದೆ. ಈ ನಡುವೆ ಟೈಮರ್ ಇಟ್ಟು ಬಾಂಬ್ ಸ್ಫೋಟ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಸ್ಪೋಟದ ಬಳಿಕ ಸಿಕ್ಕ ವಸ್ತುಗಳಿಂದ ಟೈಮರ್ ಅಳವಡಿಕೆ ಮಾಡಲಾಗಿದೆಯೆ ಎಂಬ ಶಂಕೆ ವ್ಯಕ್ತವಾಗಿದೆ. ಬ್ಯಾಗ್ ಇಟ್ಟು ಬ್ಯಾಗಿನ ಒಳಗೆ ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಲಾಗಿದೆ ಎಂಬ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಇದು ಆತಂಕವನ್ನು ಹೆಚ್ಚು ಮಾಡಿದೆ.

rameshwaram cafe bengaluru incident

ಸ್ಥಳಕ್ಕೆ ಬೆಂಗಳೂರು ನಗರ ಆಯುಕ್ತ ದಯಾನಂದ ದೌಡಾಯಿಸಿದ್ದು, ಅಧಿಕಾರಿಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಎನ್‌ಐಎ, ಎನ್‌ಎಸ್‌ಜಿ ಅಧಿಕಾರಿಗಳು ಸ್ಥಳಕ್ಕಾಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಲಿಂಡರ್ ಬ್ಲಾಸ್ಟ್ ಆಗಿರುವ ಸಾಧ್ಯತೆ ಇಲ್ಲ ಎಂದು ಖಚಿತ ಪಡಿಸಲಾಗಿದೆ. ಜಿಲೇಟಿನ್ ಕಡ್ಡಿಗಳಿಂದ ಸ್ಪೋಟವಾಗಿದೆಯಾ? ಮೈಕ್ರೊ ಓವನ್‌ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿದೆಯಾ ಎಂಬುದನ್ನು ಸಹ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ, ಅಂತಹ ಯಾವುದೇ ಸ್ಫೋಟ ಆಗಿಲ್ಲ ಎಂದು ಹೇಳಲಾಗುತ್ತಿದೆ. ಎಫ್‌ಎಸ್‌ಎಲ್ ಅಧಿಕಾರಿಗಳಿಂದಲೇ ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಬಯಲಾಗಬೇಕಿದೆ. ಇತ್ತ ಪೊಲೀಸರು ಸಿಸಿಟಿವಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಗಾಯಾಳುಗಳ ಸಂಖ್ಯೆ 8ಕ್ಕೆ ಏರಿಕೆ

ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಗಾಯಾಳುಗಳ ಸಂಖ್ಯೆ 8ಕ್ಕೆ ಏರಿಕೆ ಆಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಮೈಕ್ರೋ ಚಿಪ್ ಇಂಡಿಯಾ ಲಿ. ನಲ್ಲಿ ಕೆಲಸ ಮಾಡುತ್ತಿದ್ದ ಐವರು ಮಧ್ಯಾಹ್ನಕ್ಕೆ ಊಟಕ್ಕೆ ಬಂದಿದ್ದರು. ಊಟದ ಸಮಯಕ್ಕೆ ಸ್ಫೋಟಗೊಂಡಿದ್ದು, ಕೈ ತೊಳೆಯುವ ಜಾಗದಿಂದ ಶಬ್ಧ ಕೇಳಿ ಬಂದಿದೆ. ಉತ್ತರ ಭಾರತ ಮೂಲದ ಆಕ್ಸಿಸ್ ಬ್ಯಾಂಕ್ ಉದ್ಯೋಗಿ ಮೋಮಿ ಎಂಬಾಕೆ ಗಾಯಗೊಂಡಿದ್ದಾರೆ. ಫಾರುಕ್ ಹುಸಾಯ್, ದಿಪಾಂಶು ಎಂಬುವವರು ಗಾಯಗೊಂಡಿದ್ದು, ಸ್ವರ್ಣ ನಾರಯಣಪ್ಪ ಗಂಭೀರ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Blast in Bangalore : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಭಾರಿ ಸ್ಫೋಟ; ಐವರು ಗಂಭೀರ

ನವ್ಯಾ (25), ಶ್ರೀನಿವಾಸ್ (67), ನಾಗಶ್ರೀ (25), ಬಾಲಮುರುಳಿ (34), ಮೋನಿ (30), ಶಂಕರ್ (41) ಎಂಬುವವರು ಗಾಯಗೊಂಡ ಕೆಲವರು ಎನ್ನಲಾಗಿದೆ. ಇವರಲ್ಲಿ ನಾಗಶ್ರಿ ಅವರ ಕಣ್ಣಿಗೆ ಏಟಾಗಿದೆ. ಮೋನಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

PGCET 2024 : ಪಿಜಿಸಿಇಟಿಯ ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನವಾಗಿದೆ ಎಂದು ಕೆಇಎ ಮಾಹಿತಿ ನೀಡಿದೆ.

VISTARANEWS.COM


on

By

PGCET 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಎಂಬಿಎ/ ಎಂಸಿಎ / ಎಂಇ / ಎಂ.ಟೆಕ್ / ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಈಗಾಗಲೇ ಅಭ್ಯರ್ಥಿಗಳು (PGCET 2024) ಅರ್ಜಿಯನ್ನು ಸಲ್ಲಿಸಿದ್ದಾರೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು, ಪರೀಕ್ಷಾ ಕೇಂದ್ರಗಳನ್ನು ನಮೂದಿಸಲು ಹಾಗೂ ಅರ್ಜಿಯಲ್ಲಿನ ಮಾಹಿತಿಯನ್ನು ತಿದ್ದುಪಡಿ ಮಾಡಲು ಜೂನ್ 24ರ ಸಂಜೆ 6ರವರೆಗೆ ಅವಕಾಶ ನೀಡಲಾಗಿದೆ.

ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಮಾಹಿತಿ ನೀಡಿದ್ದಾರೆ. ಈ ಮೇಲಿನ ಕಾರ್ಯಗಳನ್ನು ಮಾಡಲು ಅನುಕೂಲವಾಗುವಂತೆ ಪೋರ್ಟಲ್ ಅನ್ನು ತೆರೆಯಲಾಗಿದೆ ಎಂದು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸದೆ ಇರುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ

ಸೋಮವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಶುರು; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ

ಬೆಂಗಳೂರು: ಜೂನ್‌ 24ರಿಂದ ಜುಲೈ 5ರವರೆಗೆ ದ್ವಿತೀಯ ಪಿಯುಸಿ (2nd PUC Exam 3) 3ನೇ ಪೂರಕ ಪರೀಕ್ಷೆಯು (Education News) ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಸರಕಾರಿ ಬಸ್‌ನಲ್ಲಿ ಉಚಿತವಾಗಿ (Free Bus) ಪ್ರಯಾಣಿಸಲು ಕೆಎಸ್‌ಆರ್‌ಟಿಸಿ (KSRTC) ನಿಗಮ ಅನುಮತಿಸಿದೆ.

ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿಯೂ ಬೇರೆ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿದೆ. ಹೀಗಾಗಿ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿನಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಓಡಾಡಲು ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ (2nd PUC Exam 2023) ಅನುವು ಮಾಡಿಕೊಡಲಾಗಿದೆ.

ಪರೀಕ್ಷೆ ನಡೆಯುವ ದಿನದಂದು ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ ತೋರಿಸಿ ಪ್ರಯಾಣಿಸಬಹುದಾಗಿದೆ. ನಿಗಮದ ನಗರ ಹಾಗೂ ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಜತೆಗೆ ಬಸ್‌ಗಳು ತಾವು ಹೋಗುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರ ಇದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೋರಿಕೆ ನಿಲುಗಡೆ ನೀಡಲು ಸೂಚಿಸಿದೆ.

ಈ ಸಂಬಂಧ ನಿಗಮದ ಎಲ್ಲ ಚಾಲಕ/ನಿರ್ವಾಹಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ.

ಇದನ್ನೂ ಓದಿ: Accident News : ಕಂಟಕವಾದ ಕಾರ ಹುಣ್ಣಿಮೆ ಕರಿ ದಿನ; ಎತ್ತು ಬೆದರಿಸಲು ಹೋಗಿ ಮುಗ್ಗರಿಸಿ ಬಿದ್ದ ಜನ್ರು

ದ್ವಿತೀಯ ಪಿಯುಸಿ ಪರೀಕ್ಷೆ -3ರ ವೇಳಾಪಟ್ಟಿ ಹೀಗಿದೆ

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ. ಯಾವ್ಯಾವ ದಿನ ಯಾವ ವಿಷಯಕ್ಕೆ ಪರೀಕ್ಷೆ ನಡೆಯಲಿದೆ ಎಂಬುದರ ಮಾಹಿತಿ ಇಲ್ಲಿದೆ.

ದಿನಾಂಕ- ವಿಷಯ
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ

Actor Darshan: 12 ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಅವರಿಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹನ್ನೆರಡು ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್, ವಿನಯ್, ಪ್ರದೋಶ್ ಮತ್ತು ಧನರಾಜ್‌ನನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ. ಇದರಿಂದ 13 ವರ್ಷಗಳ ನಂತರ ನಟ ದರ್ಶನ್ ಮತ್ತೆ‌ ಜೈಲು ಸೇರುವಂತಾಗಿದೆ.

ರಾಜ್ಯ ಸರ್ಕಾರದ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ವಿಚಾರಣೆ ವೇಳೆ ನಿಮಗೆ ಕಸ್ಟಡಿಯಲ್ಲಿ ಏನಾದರೂ ತೊಂದರೆ ಆಯ್ತಾ ಎಂದು ಆರೋಪಿಗಳನ್ನು ಜಡ್ಜ್‌ ಪ್ರಶ್ನಿಸಿದರು. ಇಲ್ಲ ಸ್ವಾಮಿ, ಯಾವುದೇ ತೊಂದರೆ ಆಗಿಲ್ಲ ಎಂದು ಆರೋಪಿಗಳು ಉತ್ತರಿಸಿದರು. ನಂತರ ರಿಮ್ಯಾಂಡ್ ಅರ್ಜಿಯನ್ನು ಎಸ್‌ಪಿಪಿ ಪ್ರಸನ್ನ ಕುಮಾರ್ ನೀಡಿದರು. ಈ ಹಿಂದೆ ರಂಗನಾಥ್ ರೆಡ್ಡಿ ದರ್ಶನ್ ಪರ ವಕೀಲರಾಗಿದ್ದರು, ಈಗ ಪ್ರವೀಣ್ ತಿಮ್ಮಯ್ಯ ಹೊಸದಾಗಿ ವಕಾಲತ್ತು ವಹಿಸಿದ್ದರು.

ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರೋದಕ್ಕೆ ಸೂಕ್ತ ಸಾಕ್ಷ್ಯಗಳಿವೆ. ಈ ನಾಲ್ಕು ಮಂದಿ ರೇಣುಕಾಸ್ವಾಮಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ. ಇವರಿಗೆ ನೆಲದ ಕಾನೂನಿನ ಮೇಲೆ ಕಿಂಚಿತ್ತು ಗೌರವ ಇಲ್ಲ. ಎ1 ಪ್ರಚೋದನೆಗೆ ದರ್ಶನ್ ಮತ್ತು ಟೀಂ ಒಳಗಾಗಿ ಕೃತ್ಯ ಮಾಡಿದೆ. ಎಲ್ಲರಿಗೂ ಕೊಲ್ಲುವ ಸಮಾನ ಉದ್ದೇಶವೂ ಕಂಡು ಬಂದಿದೆ. ಅದಕ್ಕಾಗಿ ಲಕ್ಷಾಂತರ ರೂಪಾಯಿನ್ನು ಬಳಕೆ ಮಾಡಿದ್ದಾರೆ ಎಂದು ರಿಮ್ಯಾಂಡ್‌ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ಆರೋಪಿಗಳನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಜಡ್ಜ್‌ ಆದೇಶ ನೀಡಿದರು.

ಕೊಲೆ ಕೇಸ್ ಸಂಬಂಧ ಜೂನ್ 11ರಂದು ದರ್ಶನ್‌ ಬಂಧನವಾಗಿತ್ತು. ಮೂರು ಬಾರಿ ದರ್ಶನ್‌ರನ್ನು ಪೊಲೀಸ್ ಕಸ್ಟಡಿಗೆ (12 ದಿನ) ಪಡೆಯಲಾಗಿತ್ತು. ಇದೀಗ ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆಯಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.

2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ‌ ನಟ‌ ದರ್ಶನ್ ಜೈಲು ಸೇರಿದ್ದರು. ಇದೀಗ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನವಾಗಿದ್ದರಿಂದ ಎರಡನೇ ಬಾರಿಗೆ ನಟ ಜೈಲು ಸೇರುತ್ತಿದ್ದಾರೆ.

ಇದನ್ನೂ ಓದಿ | Actor Darshan: ದರ್ಶನ್‌ ತುಂಬ ಮುಗ್ದ, ತಾಯಿ ಕಣ್ಣೀರು ಹಾಕೊಂಡು ಮಗನನ್ನು ಬೆಳೆಸಬೇಕು ಎಂದಿದ್ರು ಎಂದ ಲಹರಿ ವೇಲು!

ಕಸ್ಟಡಿಯಲ್ಲಿ ಎಲ್ಲ 17 ಆರೋಪಿಗಳ ವಿಚಾರಣೆ ಮಾಡಿದ್ದ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು, ಆರೋಪಿಗಳ ಹೇಳಿಕೆ ದಾಖಲಿಸಿಕೊಂಡಿದ್ದರು. ನಂತರ ಕೃತ್ಯಕ್ಕೆ ಸಂಬಂಧಿಸಿದ ಹಲವೆಡೆ ಮಹಜರು ಪ್ರಕ್ರಿಯೆ ನಡೆಸಿ, ಕೊಲೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ, ಸಾಕ್ಷ್ಯ ಸಂಗ್ರಹ ಮಾಡಿದ್ದಾರೆ.

ಆರ್. ಆರ್. ನಗರ ಶೆಡ್ ಬಳಿ ಸಿಸಿಟಿವಿ ದೃಶ್ಯಾವಳಿ, ಮೃತದೇಹ ಪತ್ತೆಯಾದ ಜಾಗ, ಆರೋಪಿಗಳು ಚಲನವಲನ ನಡೆಸಿದ್ದ ಜಾಗಗಳಲ್ಲಿನ ಸಿಸಿಟಿವಿ ಫುಟೇಜ್ ಸಂಗ್ರಹಿಸಿ, ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಸೀಜ್ ಮಾಡಲಾಗಿದೆ. ಇನ್ನು ಈ ಕುರಿತು ಕೃತ್ಯ ನಡೆದ ದಿನ ಆರೋಪಿಗಳ ಸಂಪರ್ಕದಲ್ಲಿದ್ದ ನಟ ಚಿಕ್ಕಣ್ಣ, ದರ್ಶನ್ ಪತ್ನಿ ವಿಜಯಲಕ್ಷ್ಮಿ ಇನ್ನಿತರರ ಹೇಳಿಕೆಯನ್ನೂ ದಾಖಲಿಸಲಾಗಿದೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹತ್ಯೆ ಶ್ವಾನದ ಮೇಲೆ ʻಆನೆʼ ದಾಳಿ ಮಾಡಿದಂತೆ ಎಂದ ರಾಮ್​ ಗೋಪಾಲ್ ವರ್ಮಾ!

ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸಿದ್ದು, ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನೆ ಮಾಡಲಾಗಿದೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ಹಾಗೂ ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ನಡೆಸಲಾಗುತ್ತಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ.

Continue Reading

ಕರ್ನಾಟಕ

DK Shivakumar: ವಾರದೊಳಗೆ ಹೊಸ ಜಾಹೀರಾತು ನೀತಿಯ ಕರಡು ಪ್ರತಿ ಬಿಡುಗಡೆ

DK Shivakumar: ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು. ಕರಡು ಪ್ರತಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM D K Shivakumar statement about new advertising policy
Koo

ಬೆಂಗಳೂರು: ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ನಗರದ ಬಿಬಿಎಂಪಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ಕರಡು ಪ್ರತಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣಗಳು ಇದ್ದ ಕಾರಣಕ್ಕೆ ಕಳೆದ ಒಂದು ವರ್ಷದಿಂದ ಜಾಹೀರಾತು ನೀತಿ ಬಾಕಿ ಉಳಿದಿತ್ತು. ಪ್ರಸ್ತುತ ಸಂಘ, ಸಂಸ್ಥೆಗಳ ಜತೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Heat wave: ಉಷ್ಣ ಮಾರುತಕ್ಕೆ ತತ್ತರಿಸಿದ ಉತ್ತರ ಭಾರತ; ದೇಶಾದ್ಯಂತ 143 ಜನ ಬಲಿ

60 ಅಡಿಗಿಂತ ಹೆಚ್ಚು ಅಗಲ ಇರುವ ರಸ್ತೆಗಳಲ್ಲಿ ‘ಗ್ರೂಪ್ ಪ್ಯಾಕೇಜ್’ ತಯಾರಿಸಿ ಅವಕಾಶ ನೀಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಮೇಲೆ ಜಾಹಿರಾತು ನೀಡಲು ಅವಕಾಶ ನೀಡಲಾಗುವುದು. ಬಿಬಿಎಂಪಿ ಗೆ ತೆರಿಗೆ ನೀಡಿ ಖಾಸಗಿ ಕಟ್ಟಡಗಳು ಬಾಡಿಗೆ ನೀಡಬಹುದು. ಕಟ್ಟಡಗಳ ವಿಸ್ತೀರ್ಣ, ಎತ್ತರಕ್ಕೆ ತಕ್ಕಂತೆ ಯೂನಿಫಾರ್ಮಿಟಿ ತರಲಾಗುವುದು. ಮನಬಂದಂತೆ ಹಾಕಲು ಅವಕಾಶವಿಲ್ಲ. ಫಲಕಗಳನ್ನು ಮಾಡಲು ಯಾವ ಗುಣಮಟ್ಟದ ವಸ್ತು ಬಳಸಬೇಕು ಎಂದು ನಂತರ ತಿಳಿಸಲಾಗುವುದು. ಸರ್ಕಾರದಲ್ಲಿ ಇರುವ ಮೀಸಲಾತಿಗೆ ಅನುಗುಣವಾಗಿ ನೀಡಲಾಗುವುದು. ಪಿಪಿಪಿ ಮಾದರಿಯಲ್ಲಿ ಹಿಂದಿನ ಸರ್ಕಾರ ಒಂದಷ್ಟು ಅವಕಾಶ ನೀಡಿದ್ದು ಕಾನೂನು ಪ್ರಕಾರವಾಗಿ ಇದ್ದರೆ ರಕ್ಷಣೆ ಮಾಡಲಾಗುವುದು. ಏನೂ ಮಾಡದೆ ಇದ್ದವರನ್ನು ಕಾನೂನಿನ ಪ್ರಕಾರ ವಜಾ ಮಾಡಲಾಗುವುದು ಎಂದು ತಿಳಿಸಿದರು.

60 ಅಡಿಗಿಂತ ರಸ್ತೆ ಕಡಿಮೆ ಇದ್ದು, ಕಮರ್ಷಿಯಲ್ ವಲಯ ಎಂದು ಗುರುತಿಸಿದ್ದರೆ ಅಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ ನೀಡಲಾಗುವುದು. ಜನಸಾಂದ್ರತೆ ಹಾಗು ವಹಿವಾಟು ಹೆಚ್ಚಿರುವ ಕಡೆ ಅವಕಾಶ ನೀಡಲಾಗುವುದು. ಸರ್ಕಾರಕ್ಕೆ ಹಣ ಬಾಕಿ ಉಳಿಸಿಕೊಂಡಿರುವ, ದಾವೆ ಹೂಡಿರುವವರಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ನಾವು ಹೇಗೆ ಚುನಾವಣೆಗೆ ನಿಲ್ಲುವಾಗ ಯಾವುದೇ ಬಾಕಿಗಳನ್ನು ಉಳಿಸಿಕೊಳ್ಳದೆ ಇರುತ್ತೇವೆ, ಅದೇ ರೀತಿ ಇಲ್ಲಿ ಭಾಗವಹಿಸುವವರು ಎಲ್ಲಾ ಬಾಕಿಗಳನ್ನು ಕಟ್ಟಬೇಕು ಎಂದು ಹೇಳಿದರು.

ಇದನ್ನೂ ಓದಿ: Gold Rate Today: ಆಭರಣ ಕೊಳ್ಳುವವರಿಗೆ ಬಿಗ್‌ ರಿಲೀಫ್‌; ಇಳಿದ ಚಿನ್ನದ ದರ

ಒಂದಷ್ಟು ಪ್ರಕರಣಗಳು ನ್ಯಾಯಲಯದಲ್ಲಿವೆ ಎಂಬ ಪ್ರಶ್ನೆಗೆ ಉತ್ತರಿಸಿ, “ಆ ಪ್ರಕರಣಗಳಿಗೆ ನಾವು ಏನು ಮಾಡಲು ಆಗುವುದಿಲ್ಲ. ಅಲ್ಲಿ ತೀರ್ಮಾನವಾದ ನಂತರ ಬಗೆಹರಿಸಬಹುದು. ಜತೆಗೆ ನ್ಯಾಯಾಲಯವು ಒಂದಷ್ಟು ಸೂಚನೆಗಳನ್ನು ನೀಡಿತ್ತು ಅದನ್ನು ಗಣನೆಗೆ ತೆಗೆದುಕೊಂಡು ನಿಯಮಗಳನ್ನು ರೂಪಿಸಲಾಗಿದೆ. ಮೆಟ್ರೋ ಒಳಗೆ ಆ ನಿಗಮ ನೋಡಿಕೊಳ್ಳುತ್ತದೆ. ಹೊರಗಡೆ ಪಾಲಿಕೆ ಮತ್ತು ಮೆಟ್ರೋ ಸಹಭಾಗಿತ್ವದಲ್ಲಿ ಪ್ರತ್ಯೇಕ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಇದನ್ನೂ ಓದಿ: Thane Roof Collapse: ಟಿನ್ ರೂಫ್‌ ಬಿದ್ದು ಫುಟ್ಬಾಲ್​ ಆಡುತ್ತಿದ್ದ 9 ಮಕ್ಕಳಿಗೆ ಗಾಯ; 5 ಮಂದಿ ಗಂಭೀರ

ಸುಮಾರು 600 ಕೋಟಿ ಜಾಹೀರಾತು ಹಣ ಬಾಕಿ ಇದೆ ಇದಕ್ಕೆ ಪರಿಹಾರ ಏನು ಎನ್ನುವ ಪ್ರಶ್ನೆಗೆ ಉತ್ತರಿಸಿ, ಎಲ್ಲವನ್ನು ವಸೂಲಿ ಮಾಡಲಾಗುವುದು ಹಾಗೂ ಬಾಕಿ ಉಳಿಸಿಕೊಂಡವರು ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದರು. ವಾರ್ಷಿಕ ಆದಾಯ ಎಷ್ಟು ನಿರೀಕ್ಷೆ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ, ಇನ್ನು ಮಗುನೇ ಹುಟ್ಟಿಲ್ಲ, ಮೊದಲೇ ಬಟ್ಟೆಯನ್ನು ಏಕೆ ಹೊಲೆಸಲಿ ಎಂದು ಮರು ಪ್ರಶ್ನಿಸಿದರು.

Continue Reading

ಶಿಕ್ಷಣ

2nd PUC Exam 3: ಸೋಮವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಶುರು; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ

2nd PUC Exam 3: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ತೋರಿಸಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ (Free Bus) ಪರೀಕ್ಷಾ ಕೇಂದ್ರಕ್ಕೆ ತೆರಳಬಹುದಾಗಿದೆ. ಈ ಸಂಬಂಧ ನಿಗಮವು ಆದೇಶ ಹೊರಡಿಸಿದೆ.

VISTARANEWS.COM


on

By

2nd Puc Exam 3
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ 24ರಿಂದ ಜುಲೈ 5ರವರೆಗೆ ದ್ವಿತೀಯ ಪಿಯುಸಿ (2nd PUC Exam 3) 3ನೇ ಪೂರಕ ಪರೀಕ್ಷೆಯು (Education News) ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಸರಕಾರಿ ಬಸ್‌ನಲ್ಲಿ ಉಚಿತವಾಗಿ (Free Bus) ಪ್ರಯಾಣಿಸಲು ಕೆಎಸ್‌ಆರ್‌ಟಿಸಿ (KSRTC) ನಿಗಮ ಅನುಮತಿಸಿದೆ.

ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿಯೂ ಬೇರೆ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿದೆ. ಹೀಗಾಗಿ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿನಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಓಡಾಡಲು ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ (2nd PUC Exam 2023) ಅನುವು ಮಾಡಿಕೊಡಲಾಗಿದೆ.

ಪರೀಕ್ಷೆ ನಡೆಯುವ ದಿನದಂದು ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ ತೋರಿಸಿ ಪ್ರಯಾಣಿಸಬಹುದಾಗಿದೆ. ನಿಗಮದ ನಗರ ಹಾಗೂ ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಜತೆಗೆ ಬಸ್‌ಗಳು ತಾವು ಹೋಗುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರ ಇದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೋರಿಕೆ ನಿಲುಗಡೆ ನೀಡಲು ಸೂಚಿಸಿದೆ.

ಈ ಸಂಬಂಧ ನಿಗಮದ ಎಲ್ಲ ಚಾಲಕ/ನಿರ್ವಾಹಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ.

ಇದನ್ನೂ ಓದಿ: Accident News : ಕಂಟಕವಾದ ಕಾರ ಹುಣ್ಣಿಮೆ ಕರಿ ದಿನ; ಎತ್ತು ಬೆದರಿಸಲು ಹೋಗಿ ಮುಗ್ಗರಿಸಿ ಬಿದ್ದ ಜನ್ರು

ದ್ವಿತೀಯ ಪಿಯುಸಿ ಪರೀಕ್ಷೆ -3ರ ವೇಳಾಪಟ್ಟಿ ಹೀಗಿದೆ

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ. ಯಾವ್ಯಾವ ದಿನ ಯಾವ ವಿಷಯಕ್ಕೆ ಪರೀಕ್ಷೆ ನಡೆಯಲಿದೆ ಎಂಬುದರ ಮಾಹಿತಿ ಇಲ್ಲಿದೆ.

ದಿನಾಂಕ- ವಿಷಯ
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ಕ್ರೀಡೆ10 mins ago

T20 World Cup 2024: ವಿಂಡೀಸ್​ಗೆ ಆಘಾತ; ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದ ಕಿಂಗ್

PGCET 2024
ಶಿಕ್ಷಣ11 mins ago

PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

The Lion King 30 years influence on fans and actors
ಬಾಲಿವುಡ್11 mins ago

The Lion King: ಆಲ್‌ ಟೈಮ್‌ ಫೇವರೇಟ್‌ ಕಾರ್ಟೂನ್‌ `ದಿ ಲಯನ್ ಕಿಂಗ್’ 30ನೇ ವಾರ್ಷಿಕೋತ್ಸವ

Viral Video
ವೈರಲ್ ನ್ಯೂಸ್15 mins ago

Viral Video: ಕಾರು ತಡೆದ ಟ್ರಾಫಿಕ್‌ ಪೊಲೀಸ್‌ ಕ್ಯಾಬ್‌ ಡ್ರೈವರ್‌ ಮಾಡಿದ್ದೇನು ಗೊತ್ತಾ?

Floods In Assam
ದೇಶ18 mins ago

Floods In Assam: ಭೀಕರ ಪ್ರವಾಹಕ್ಕೆ ನಲುಗಿದ ಅಸ್ಸಾಂ; 37ಕ್ಕೆ ಏರಿದ ಸಾವಿನ ಸಂಖ್ಯೆ

Actor Darshan
ಕರ್ನಾಟಕ20 mins ago

Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ

Swamji Murder
ಪ್ರಮುಖ ಸುದ್ದಿ36 mins ago

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Child Death
ಬೆಳಗಾವಿ42 mins ago

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Shobha Shetty car gift to yashwanth birthday
ಟಾಲಿವುಡ್59 mins ago

Shobha Shetty: ಭಾವಿ ಪತಿಗೆ ಕಾರ್ ಗಿಫ್ಟ್ ನೀಡಿದ ‘ಅಗ್ನಿಸಾಕ್ಷಿ’ ಖ್ಯಾತಿಯ ನಟಿ!

IND vs BAN
ಕ್ರೀಡೆ1 hour ago

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌