Site icon Vistara News

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

Blast in Bengaluru

Rameshwaram Cafe Blast In Bengaluru: NIA Nabs 2 More Suspects

ಬೆಂಗಳೂರು: ಇಲ್ಲಿನ ವೈಟ್‌ಫೀಲ್ಡ್‌ನ ಬ್ರೂಕ್‌ ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಿಗೂಢ ಸ್ಫೋಟವು (Blast in Rameshwaram Cafe) ನಾಗರಿಕರನ್ನು ತಲ್ಲಣಗೊಳಿಸಿದೆ. ಸ್ಫೋಟಗೊಂಡ ಸ್ಥಳದಲ್ಲಿ ಬ್ಯಾಟರಿ ಪತ್ತೆಯಾಗಿದ್ದು, ತನಿಖೆಯನ್ನು ಚುರುಕುಗೊಳಿಸಲಾಗಿದೆ. ಈ ನಡುವೆ ಟೈಮರ್ ಇಟ್ಟು ಬಾಂಬ್ ಸ್ಫೋಟ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಸ್ಪೋಟದ ಬಳಿಕ ಸಿಕ್ಕ ವಸ್ತುಗಳಿಂದ ಟೈಮರ್ ಅಳವಡಿಕೆ ಮಾಡಲಾಗಿದೆಯೆ ಎಂಬ ಶಂಕೆ ವ್ಯಕ್ತವಾಗಿದೆ. ಬ್ಯಾಗ್ ಇಟ್ಟು ಬ್ಯಾಗಿನ ಒಳಗೆ ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಲಾಗಿದೆ ಎಂಬ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಇದು ಆತಂಕವನ್ನು ಹೆಚ್ಚು ಮಾಡಿದೆ.

ಸ್ಥಳಕ್ಕೆ ಬೆಂಗಳೂರು ನಗರ ಆಯುಕ್ತ ದಯಾನಂದ ದೌಡಾಯಿಸಿದ್ದು, ಅಧಿಕಾರಿಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಎನ್‌ಐಎ, ಎನ್‌ಎಸ್‌ಜಿ ಅಧಿಕಾರಿಗಳು ಸ್ಥಳಕ್ಕಾಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಲಿಂಡರ್ ಬ್ಲಾಸ್ಟ್ ಆಗಿರುವ ಸಾಧ್ಯತೆ ಇಲ್ಲ ಎಂದು ಖಚಿತ ಪಡಿಸಲಾಗಿದೆ. ಜಿಲೇಟಿನ್ ಕಡ್ಡಿಗಳಿಂದ ಸ್ಪೋಟವಾಗಿದೆಯಾ? ಮೈಕ್ರೊ ಓವನ್‌ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿದೆಯಾ ಎಂಬುದನ್ನು ಸಹ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ, ಅಂತಹ ಯಾವುದೇ ಸ್ಫೋಟ ಆಗಿಲ್ಲ ಎಂದು ಹೇಳಲಾಗುತ್ತಿದೆ. ಎಫ್‌ಎಸ್‌ಎಲ್ ಅಧಿಕಾರಿಗಳಿಂದಲೇ ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಬಯಲಾಗಬೇಕಿದೆ. ಇತ್ತ ಪೊಲೀಸರು ಸಿಸಿಟಿವಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಗಾಯಾಳುಗಳ ಸಂಖ್ಯೆ 8ಕ್ಕೆ ಏರಿಕೆ

ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಗಾಯಾಳುಗಳ ಸಂಖ್ಯೆ 8ಕ್ಕೆ ಏರಿಕೆ ಆಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಮೈಕ್ರೋ ಚಿಪ್ ಇಂಡಿಯಾ ಲಿ. ನಲ್ಲಿ ಕೆಲಸ ಮಾಡುತ್ತಿದ್ದ ಐವರು ಮಧ್ಯಾಹ್ನಕ್ಕೆ ಊಟಕ್ಕೆ ಬಂದಿದ್ದರು. ಊಟದ ಸಮಯಕ್ಕೆ ಸ್ಫೋಟಗೊಂಡಿದ್ದು, ಕೈ ತೊಳೆಯುವ ಜಾಗದಿಂದ ಶಬ್ಧ ಕೇಳಿ ಬಂದಿದೆ. ಉತ್ತರ ಭಾರತ ಮೂಲದ ಆಕ್ಸಿಸ್ ಬ್ಯಾಂಕ್ ಉದ್ಯೋಗಿ ಮೋಮಿ ಎಂಬಾಕೆ ಗಾಯಗೊಂಡಿದ್ದಾರೆ. ಫಾರುಕ್ ಹುಸಾಯ್, ದಿಪಾಂಶು ಎಂಬುವವರು ಗಾಯಗೊಂಡಿದ್ದು, ಸ್ವರ್ಣ ನಾರಯಣಪ್ಪ ಗಂಭೀರ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Blast in Bangalore : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಭಾರಿ ಸ್ಫೋಟ; ಐವರು ಗಂಭೀರ

ನವ್ಯಾ (25), ಶ್ರೀನಿವಾಸ್ (67), ನಾಗಶ್ರೀ (25), ಬಾಲಮುರುಳಿ (34), ಮೋನಿ (30), ಶಂಕರ್ (41) ಎಂಬುವವರು ಗಾಯಗೊಂಡ ಕೆಲವರು ಎನ್ನಲಾಗಿದೆ. ಇವರಲ್ಲಿ ನಾಗಶ್ರಿ ಅವರ ಕಣ್ಣಿಗೆ ಏಟಾಗಿದೆ. ಮೋನಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version