BMTC Vajra ticket price hike | ಬಿಎಂಟಿಸಿ ವಜ್ರ ಬಸ್‌ ಪ್ರಯಾಣದ ಟಿಕೆಟ್‌ ದರ ಏರಿಕೆ - Vistara News

ಪ್ರಮುಖ ಸುದ್ದಿ

BMTC Vajra ticket price hike | ಬಿಎಂಟಿಸಿ ವಜ್ರ ಬಸ್‌ ಪ್ರಯಾಣದ ಟಿಕೆಟ್‌ ದರ ಏರಿಕೆ

ಬಿಎಂಟಿಸಿಯ ಹವಾನಿಯಂತ್ರಿತ ವಜ್ರ ಬಸ್‌ನಲ್ಲಿ ಮಾಸಿಕ ಮತ್ತು ದೈನಿಕ ಟಿಕೆಟ್‌ ಪಾಸ್‌ಗಳ ದರವನ್ನು ಏರಿಸಲಾಗಿದೆ. (BMTC Vajra ticket price hike) ವಿವರ ಇಲ್ಲಿದೆ.

VISTARANEWS.COM


on

bmtc vajra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಎಂಟಿಸಿಯ ವಜ್ರ ಬಸ್‌ ಪ್ರಯಾಣದ ಟಿಕೆಟ್‌ ದರ ಏರಿಕೆಯಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಈ ಬಗ್ಗೆ ಆದೇಶ ಹೊರಡಿಸಿದೆ. ಬಿಎಂಟಿಸಿ ವಜ್ರ ಹವಾ ನಿಯಂತ್ರಿತ ಬಸ್‌ ಆಗಿದ್ದು, ಇದರ ದೈನಂದಿನ, (BMTC Vajra ticket price hike) ಮಾಸಿಕ ಪಾಸ್‌ಗಳ ದರವನ್ನು ಜನವರಿ 1 ರಿಂದ ಏರಿಕೆ ಮಾಡಲಾಗಿದೆ.

ಇಂದಿನಿಂದ ದೂರದ ಪ್ರಯಾಣ ದರ ಕೂಡ ಹೆಚ್ಚಳವಾಗಲಿದೆ. 20 ಕಿ. ಮೀ ಕ್ಕಿಂತ ದೂರದ ಪ್ರಯಾಣದ ದರದಲ್ಲಿ ಏರಿಕೆ ಆಗಿದೆ. ಬಿಎಂಟಿಸಿ ವಜ್ರ ಬಸ್‌ನಲ್ಲಿ ಪ್ರಯಾಣಿಕರಿಗೆ ಮಾಸಿಕ ಪಾಸಿನ ದರ 1,500 ರೂ.ಗಳಿಂದ 1,800 ರೂ.ಗೆ ಏರಿಕೆಯಾಗಿದೆ. ದೈನಿಕ ಪಾಸ್‌ನ ದರ 100 ರೂ.ಗಳಿಂದ 120 ರೂ.ಗೆ ಹೆಚ್ಚಳವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Other Backward Classes : 2011ರ ನಂತರ ನೀಡಿದ್ದ ಒಬಿಸಿ ಪ್ರಮಾಣ ಪತ್ರಗಳನ್ನು ರದ್ದು ಮಾಡಿದ ಕಲ್ಕತಾ ಹೈಕೋರ್ಟ್​​

Other Backward Classes : 2012 ರಲ್ಲಿ ಅಂಗೀಕರಿಸಿದ ರಾಜ್ಯ ಸರ್ಕಾರದ ಹೊಸ ಕಾನೂನಿನ ಅಡಿಯಲ್ಲಿ ಹಲವಾರು ಸಮುದಾಯಗಳಿಗೆ ಇತರ ಹಿಂದುಳಿದ ವರ್ಗಗಳ ಮೀಸಲಾತಿ ನೀಡಲಾಗಿತ್ತು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ. ಆದಾಗ್ಯೂ, ನ್ಯಾಯಮೂರ್ತಿಗಳಾದ ತಪಬ್ರತಾ ಚಕ್ರವರ್ತಿ ಮತ್ತು ರಾಜಶೇಖರ್ ಮಂಥಾ ಅವರು, 2010 ಕ್ಕಿಂತ ಮೊದಲು ವರ್ಗೀಕರಿಸಿದ ಒಬಿಸಿಯ 66 ವರ್ಗಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ.

VISTARANEWS.COM


on

Calcutta High Court
Koo

ಕೋಲ್ಕತಾ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಡಳಿತದಲ್ಲಿ 2011 ರಿಂದ ಪಶ್ಚಿಮ ಬಂಗಾಳದಲ್ಲಿ ನೀಡಲಾಗುತ್ತಿರುವ ಇತರ ಹಿಂದುಳಿದ ವರ್ಗಗಳ (Other Backward Classes) ಎಲ್ಲಾ ಪ್ರಮಾಣಪತ್ರಗಳನ್ನು ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿದೆ. ಅದು ಹೊಸದಾಗಿ ಪಟ್ಟಿಗೆ ಸೇರ್ಪಡೆ ಮಾಡಲಾಗಿರುವ ಜಾರಿಗಳಿಗೆ ಅನ್ವಯ. ಅಂತೆಯೇ ಇದು ಹಾಲಿ ಈ ಸಮುದಾಯದ ಜನರು ಹೊಂದಿರುವ ಉದ್ಯೋಗಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಆದೇಶವನ್ನು ಸ್ವೀಕರಿಸಿವುದಿಲ್ಲ ಎಂದು ಹೇಳಿದ್ದಾರೆ. ತಪಶಿಲಿ ಸಮುದಾಯಕ್ಕೆ ನೀಡಲಾದ ಹಕ್ಕುಗಳನ್ನು ಕಸಿದುಕೊಳ್ಳುವ ಆದೇಶವನ್ನು ತಾನು ಒಪ್ಪುವುದಿಲ್ಲ ಎಂಬುದಾಗಿ ಹೇಳಿಕೊಂಡಿದ್ದಾರೆ.

2012 ರಲ್ಲಿ ಅಂಗೀಕರಿಸಿದ ರಾಜ್ಯ ಸರ್ಕಾರದ ಹೊಸ ಕಾನೂನಿನ ಅಡಿಯಲ್ಲಿ ಹಲವಾರು ಸಮುದಾಯಗಳಿಗೆ ಇತರ ಹಿಂದುಳಿದ ವರ್ಗಗಳ ಮೀಸಲಾತಿ ನೀಡಲಾಗಿತ್ತು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ. ಆದಾಗ್ಯೂ, ನ್ಯಾಯಮೂರ್ತಿಗಳಾದ ತಪಬ್ರತಾ ಚಕ್ರವರ್ತಿ ಮತ್ತು ರಾಜಶೇಖರ್ ಮಂಥಾ ಅವರು, 2010 ಕ್ಕಿಂತ ಮೊದಲು ವರ್ಗೀಕರಿಸಿದ ಒಬಿಸಿಯ 66 ವರ್ಗಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಈ ವರ್ಗಗಳ ಕುರಿತು ಕೋರ್ಟ್​ಗೆ ಸಲ್ಲಿಸಲಾಗಿದ್ದ ಅರ್ಜಿಗಳಲ್ಲಿ ಪ್ರಶ್ನಿಸಲಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅರ್ಜಿಯಲ್ಲಿ ಏನಿತ್ತು?

“2010 ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು 1993 (ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ ಆಯೋಗ) ಕಾಯ್ದೆಯನ್ನು ಕಡೆಗಣಿಸಿವೆ ಎಂದು 2011 ರಲ್ಲಿ ಸಲ್ಲಿಸಲಾದ ಪಿಐಎಲ್​ನಲ್ಲಿ ಪ್ರಶ್ನಿಸಲಾಗಿತ್ತು . ವಾಸ್ತವವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಿಗೆ ಅವರ ಸರಿಯಾದ ಪ್ರಮಾಣಪತ್ರಗಳನ್ನು ನೀಡಲಾಗಿಲ್ಲ. 2010ರ ನಂತರ ನೀಡಲಾದ ಎಲ್ಲ ಒಬಿಸಿ ಪ್ರಮಾಣಪತ್ರಗಳನ್ನು ವಿಭಾಗೀಯ ಪೀಠ ರದ್ದುಪಡಿಸಿದೆ. 2010ಕ್ಕಿಂತ ಮೊದಲು ಒಬಿಸಿ ಪ್ರಮಾಣಪತ್ರ ಹೊಂದಿರುವವರು ಕಲ್ಕತ್ತಾ ಹೈಕೋರ್ಟ್ ವಿಚಾರಣೆಯ ಭಾರವನ್ನು ಹೊರುವುದಿಲ್ಲ” ಎಂದು ವಕೀಲ ಸುದೀಪ್ತಾ ದಾಸ್ ಗುಪ್ತಾ ವಾದಿಸಿದ್ದರು.

ಆದಾಗ್ಯೂ, ಈ ಆದೇಶವು ಈಗಾಗಲೇ ಸೇವೆಯಲ್ಲಿರುವ ಅಥವಾ ಮೀಸಲಾತಿಯಿಂದ ಪ್ರಯೋಜನ ಪಡೆದ ಅಥವಾ ರಾಜ್ಯದ ಯಾವುದೇ ಆಯ್ಕೆ ಪ್ರಕ್ರಿಯೆಯಲ್ಲಿ ಯಶಸ್ವಿಯಾದ ಹೊರಹಾಕಲ್ಪಟ್ಟ ವರ್ಗಗಳ ನಾಗರಿಕರ ಸೇವೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಮಮತಾ ವಿರೋಧ

ಪಶ್ಚಿಮ ಬಂಗಾಳ ಸರ್ಕಾರ ಪರಿಚಯಿಸಿದ ಒಬಿಸಿ ಮೀಸಲಾತಿ ಕೋಟಾ ಮುಂದುವರಿಯುತ್ತದೆ. ಮನೆ-ಮನೆ ಸಮೀಕ್ಷೆ ನಡೆಸಿದ ನಂತರ ನಾವು ಮಸೂದೆ ಸಿದ್ಧಪಡಿಸಿದ್ದೇವೆ. ಅದನ್ನು ಕ್ಯಾಬಿನೆಟ್ ಮತ್ತು ವಿಧಾನಸಭೆ ಅಂಗೀಕರಿಸಿದೆ ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಜನರಿಗೆ ನೀಡುವ ಸೌಲಭ್ಯಗಳನ್ನು ತಡೆಯಲು ಬಿಜೆಪಿ ಪಿತೂರಿ ನಡೆಸಿದೆ. ಅಂತಹ ಧೈರ್ಯವನ್ನು ಅವರು ಹೇಗೆ ತೋರಿಸುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ. ನ್ಯಾಯಾಲಯದ ತೀರ್ಪು ತಪಶಿಲಿ ಸಮುದಾಯಕ್ಕೆ ಮೀಸಲಾತಿಯನ್ನು ರದ್ದುಗೊಳಿಸುವ ಬಿಜೆಪಿಯ ಪ್ರಯತ್ನಗಳ ಭಾಗವಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಮತ್ತು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.

ಒಬ್ಬ ನ್ಯಾಯಾಧೀಶರು ‘ನಾನು ಆರ್ಎಸ್ಎಸ್ ವ್ಯಕ್ತಿ’ ಎಂದು ಹೇಳುತ್ತಿದ್ದಾರೆ/ ಇನ್ನೊಬ್ಬರು ಬಿಜೆಪಿಗೆ ಸೇರುತ್ತಾರೆ… ತಪಶಿಲಿಗಳಿಗೆ ಮೀಸಲಾತಿಯನ್ನು ರದ್ದುಗೊಳಿಸಲು ಮೋದಿ ಬಯಸಿದ್ದಾರೆ. ನಾನು ಅದಕ್ಕೆ ಅವಕಾಶ ನೀಡುವುದಿಲ್ಲ. ಅವರು ಆದಿವಾಸಿಗಳ ಹಕ್ಕುಗಳನ್ನು ಕಸಿದುಕೊಳ್ಳಲು ಬಯಸುತ್ತಾರೆ ಎಂದು ಅವರು ಅಭಿಷೇಕ್ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

Bomb Threat: ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬೆದರಿಕೆ ಮೇಲ್ ಸ್ವೀಕರಿಸಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಪೊಲೀಸರಿಗೆ ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಸಂಪೂರ್ಣವಾಗಿ ತನಿಖೆ ನಡೆಸಿ ಹುಸಿ ಬಾಂಬ್​ ಕರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಶೋಧ ಮುಂದವರಿಸಿದ್ದಾರೆ.

VISTARANEWS.COM


on

Bomb Threat
Koo

ನವ ದೆಹಲಿ: ಲೋಕಸಭಾ ಚುನಾವಣೆ ನಡೆಯುತ್ತಿರುವ ಮಧ್ಯೆಯೇ ದೇಶದ ಅಲ್ಲಲ್ಲಿ ಹುಸಿ ಬಾಂಬ್​ ಕರೆಗಳನ್ನು ಸ್ವೀಕರಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದಕ್ಕೊಂದು ಮಿತಿಯೇ ಇಲ್ಲದಂತಾಗಿದೆ. ಈ ಹಿಂದೆ ದೆಹಲಿ ಶಾಲೆಗಳು, ನಂತರ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ ಬಂದಿದ್ದವು. ಇದೀಗ ಈಗ ಸಚಿವ ಅಮಿತ್ ಶಾ ಅವರ ನಿಯಂತ್ರಣದಲ್ಲಿರುವ ಗೃಹ ಸಚಿವಾಲಯವನ್ನು ಸ್ಫೋಟಿಸುವುದಾಗಿ ಮೇಲ್ ಬೆದರಿಕೆ (Bomb Threat ) ಬಂದಿದೆ. ಇದು ಕೆಲವು ಕ್ಷಣ ಆತಂಕಕ್ಕೆ ಕಾರಣವಾಯಿತಾದರೂ ಹುಸಿ ಎಂಬುದು ಪೊಲೀಸರು ಸ್ಪಷ್ಟಪಡಿಸಿದ ಬಳಿಕ ನಿರಾಳತೆ ಮೂಡಿತು.

ಬೆದರಿಕೆ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಇರುವ ನಾರ್ತ್ ಬ್ಲಾಕ್​ನ ಕೆಂಪು ಕಲ್ಲಿನ ಕಟ್ಟಡದಲ್ಲಿ ಪೊಲೀಸರು ಸಮಗ್ರ ಶೋಧ ನಡೆಸಿದ್ದಾರೆ. ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ತನಿಖಾ ತಂಡವೊಂದರ ಮೂಲಗಳು ತಿಳಿಸಿವೆ.

ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬೆದರಿಕೆ ಮೇಲ್ ಸ್ವೀಕರಿಸಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಪೊಲೀಸರಿಗೆ ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಸಂಪೂರ್ಣವಾಗಿ ತನಿಖೆ ನಡೆಸಿ ಹುಸಿ ಬಾಂಬ್​ ಕರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಶೋಧ ಮುಂದವರಿಸಿದ್ದಾರೆ.

ಇದನ್ನೂ ಓದಿ: WhatsApp Update: ವಾಟ್ಸ್ ಆಪ್ ಬಳಕೆದಾರರಿಗೆ ಸಂತಸದ ಸುದ್ದಿ; ಮೆಸೆಜ್‌ಗೆ ಸಂಬಂಧಿಸಿ ಮಹತ್ವದ ಅಪ್‌ಡೇಟ್‌!

ಈ ತಿಂಗಳ ಆರಂಭದಲ್ಲಿ ದೆಹಲಿ-ಎನ್​ಸಿಆರ್​ನ ಸುಮಾರು 150 ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆ ಇಮೇಲ್​​ಗಳನ್ನು ಕಳುಹಿಸಲಾಗಿತ್ತು. ಹಂಗೇರಿಯ ರಾಜಧಾನಿ ಬುಡಾಪೆಸ್ಟ್​​ನಿಂದ ಕಳುಹಿಸಲಾಗಿದೆ ಎಂದು ಶಂಕಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ದೆಹಲಿ ಪೊಲೀಸರು ಶೀಘ್ರದಲ್ಲೇ ಹಂಗೇರಿಯಲ್ಲಿರುವ ಅಲ್ಲಿನ ಅಧಿಕಾರಿಗಳನ್ನು ಸಂಪರ್ಕಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಾಲಾ ಆವರಣದಲ್ಲಿ ಸ್ಫೋಟಕಗಳನ್ನು ಇರಿಸಲಾಗಿದೆ ಎಂದು ಹೇಳಲಾಗಿತ್ತು. ಭಯಭೀತರಾದ ಶಾಲಾ ಮಕ್ಕಳ ಪೋಷಕರು ಮೇ 1 ರಂದು ತಮ್ಮ ಮಕ್ಕಳನ್ನು ಕರೆದೊಯ್ಯಲು ಏಕಾಏಕಿ ಧಾವಿಸಿದ್ದರು. ಇದು ದೊಡ್ಡ ಗೊಂದಲಕ್ಕೆ ಕಾರಣವಾಗಿತ್ತು. ಶಾಲೆಗಳಲ್ಲಿ ಆಕ್ಷೇಪಾರ್ಹ ಏನೂ ಕಂಡುಬರದ ಕಾರಣ ಇದನ್ನು ನಂತರ ಹುಸಿ ಎಂದು ಘೋಷಿಸಲಾಗಿತ್ತು.

Continue Reading

ಕರ್ನಾಟಕ

CM’s Bengaluru City Rounds: ರಾಜಕಾಲುವೆ ಒತ್ತುವರಿ ಯಾರೇ ಮಾಡಿದ್ರೂ ಮುಲಾಜಿಲ್ಲದೆ ತೆರವು: ಸಿಎಂ ಎಚ್ಚರಿಕೆ

CM’s Bengaluru City Rounds: ಬೆಂಗಳೂರಿನ ವಿವಿಧೆಡೆ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಿದರು.

VISTARANEWS.COM


on

Koo

ಬೆಂಗಳೂರು: ರಾಜಧಾನಿಯಲ್ಲಿ ಈ ಹಿಂದೆ ಸುಮಾರು 400 ಕೆರೆಗಳು ಇದ್ದವು. ಆದರೆ, ಒತ್ತುವರಿಯಿಂದ ಅನೇಕ ಕೆರೆಗಳು ಕಣ್ಮರೆಯಾಗಿವೆ. ಅವುಗಳನ್ನು ತೆರವು ಮಾಡಲು ಸೂಚನೆ ಕೊಟ್ಟಿದ್ದೇವೆ. ರಾಜಕಾಲುವೆ ತೆರವುಗೊಳಿಸುವಲ್ಲಿ ಯಾವುದೇ ರಾಜಿ ಇಲ್ಲ. ಯಾವ ಪ್ರಬಲ ರಾಜಕಾರಣಿಯೇ ಇರಲಿ, ಬೇರೆ ಯಾರೇ ಇರಲಿ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM’s Bengaluru City Rounds) ಖಡಕ್‌ ಎಚ್ಚರಿಕೆ ನೀಡಿದರು.

ನಗರದ ವಿವಿಧೆಡೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರಾಮಲಿಂಗಾರೆಡ್ಡಿ ಬಿಡಿಎ ಅಧ್ಯಕ್ಷರು, ಆಯುಕ್ತರು ಸೇರಿ ಅಧಿಕಾರಿಗಳ ತಂಡದ ಜೊತೆ ಅನೇಕ ಪ್ರದೇಶಗಳಿಗೆ ಭೇಟಿ ನೀಡಿದೆವು. ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದೇವೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿಗೆ ನೀರು ಹೋಗಲು ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಗಾಳಿ ಆಂಜನೇಯ ದೇವಾಲಯದ ಬಳಿ ಮಳೆ ಜಾಸ್ತಿಯಾದಾಗ ನೀರು ಹರಿಯಲು ಎತ್ತರ ಸಾಲಲ್ಲ, ಹೂಳು ತುಂಬಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು. ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು ಎಂದು ಹೇಳಿದರು.

ಇದನ್ನೂ ಓದಿ | Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಹಿಂದಿನ ಸರ್ಕಾರ ಜನವರಿ 2023 ರಲ್ಲಿ 193 ಕಿಮೀ ತೆರವು ಮಾಡಲು ಕ್ರಮ ತೆಗೆದುಕೊಂಡರು. ಮೊದಲೇ ಈ ಕೆಲಸ ಮಾಡಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. 1800 ಕೋಟಿ ರೋ. ಇದಕ್ಕೆ ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2000 ಕೋಟಿ ರೂಪಾಯಿ ನೀಡಲಿದೆ. 12 ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿವೆ. ವಕೀಲರು ಇದಕ್ಕೆ ಹಾಜರಾಗುತ್ತಿದ್ದು, ಅಗತ್ಯ ಬಿದ್ದರೆ ವಿಶೇಷ ವಕೀಲರನ್ನು ನೇಮಿಸಿ ಪ್ರಕರಣ ಇತ್ಯರ್ಥ ಗೊಳಿಸಲಾಗುವುದು. 12.15 ಕಿಮೀ ನ್ಯಾಯಾಲಯದಲ್ಲಿ ಪ್ರಕರಣವಿದೆ ಎಂದು ತಿಳಿಸಿದರು.

ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು, ಒಣಗಿರುವ ಕೊಂಬೆಗಳನ್ನು ಕತ್ತರಿಸಲು ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು ಎಂದು ತಿಳಿಸಿದರು.

ಒಂದು ತಿಂಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿ

ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ. ಸಿಲ್ಕ್ ಬೋರ್ಡ್ ಬಳಿ ಮೆಟ್ರೋ ನಿರ್ಮಿಸಿರುವ ರಸ್ತೆಯನ್ನು ಅಗಲೀಕರಿಸಲು ಸೂಚನೆ ನೀಡಲಾಗಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಕೆರೆಯ ಬಳಿ ಇನ್ನೊಂದು ಚರಂಡಿ ನಿರ್ಮಿಸಲು ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಈಜಿಪುರದಲ್ಲಿ ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಾಣ ನನೆಗುದಿಗೆ ಬಿದ್ದಿದ್ದು, ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಇವರ ಗುತ್ತಿಗೆ ರದ್ದು ಮಾಡಿ ಹೊಸಬರಿಗೆ ಕೊಡಲು ಸೂಚನೆ ನೀಡಲಾಗಿದೆ. ಮುಂಗಾರು ಮಳೆಗೂ ಮುನ್ನ ಪ್ರವಾಹ ಉಂಟಾಗಬಾರದೆಂದು ಚುನಾವಣಾ ಆಯೋಗದಿಂದ ಅನುಮತಿ ಪಡೆದು 7-8 ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ.

ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ ನೀಡಲಾಗಿದೆ. ಗುಂಡಿಗಳು ಬಿದ್ದ ಹಾಗೆಯೇ ಕೂಡಲೇ ದುರಸ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಬಿಡಿಎನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಲು ಸೂಚಿಸಲಾಗಿದೆ ಎಂದು ಸಿಎಂ ಹೇಳಿದರು.

ಮಳೆಗಾಲ ನಿರ್ವಹಣೆಗೆ ಸಜ್ಜಾಗಲು ಸೂಚನೆ

ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಎಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದರು.

ರಾಜಕಾಲುವೆ ತೆರವು

ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವು ಗೊಳಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿದೆ ಹಾಗೂ ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಜೂನ್‌ಗೆ ಮುಂಚೆಯೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪ್ರವಾಹ ಸಂಬಂಧಿ ಸ್ಥಳಗಳನ್ನು ಮಾತ್ರ ಪರಿಶೀಲಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ, ಅದರಂತೆ ಪರಿಶೀಲಿಸಲಾಗಿದೆ. ಕೆರೆಗಳಿಂದ ತೆಗೆಯಲಾಗುವ ಹೂಳನ್ನು ಗುರುತು ಮಾಡಿರುವ ಸ್ಥಳಗಳಲ್ಲಿ (ಕ್ವಾರಿಗಳಿಗೆ) ಹಾಕಲಾಗುತ್ತಿದೆ ಎಂದರು. ಇನ್ನು ಬಿಬಿಎಂಪಿ ಚುನಾವಣೆ ಬಗ್ಗೆ ಲೋಕಸಭೆ ಫಲಿತಾಂಶದ ನಂತರ ಚಿಂತಿಸಲಾಗುವುದು ಎಂದರು.

ಸುಳ್ಳು ಹೇಳುತ್ತಾರೆ

ಸಿಎಂ , ಡಿಸಿಎಂ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ ಎಂದು ಬಿಜೆಪಿಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆರ್. ಅಶೋಕ್ ಕೇವಲ ಸುಳ್ಳು ಹೇಳುತ್ತಾರೆ ಎಂದರು.

ಇದನ್ನೂ ಓದಿ | CM City Rounds: ವಿಜಯನಗರ ರಾಜಕಾಲುವೆ; ಈ ವರ್ಷದೊಳಗೆ ಪರಿಹರಿಸದಿದ್ದರೆ ಮುಖ್ಯ ಎಂಜಿನಿಯರ್‌ ಸಸ್ಪೆಂಡ್‌: ಸಿಎಂ ವಾರ್ನಿಂಗ್

ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ

ನಮ್ಮ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು. ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಮರೆಮಾಚಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

Continue Reading

ಕ್ರಿಕೆಟ್

IPL 2024 : ಅಮ್ಮನನ್ನು ಆಸ್ಪತ್ರೆಯಲ್ಲಿ ಮಲಗಿಸಿ ಕೆಕೆಆರ್​ ಪರ ಕ್ವಾಲಿಫೈಯರ್ ಆಡಿದ ಆಫ್ಘನ್​ ಕ್ರಿಕೆಟಿಗ

IPL 2024 : ಗುರ್ಬಾಜ್ ತನ್ನ ತಾಯಿ ಇನ್ನೂ ಆಸ್ಪತ್ರೆಯಲ್ಲಿದ್ದಾರೆ ಮತ್ತು ಪ್ರತಿದಿನ ಅವರೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಬಹಿರಂಗಪಡಿಸಿದರು. 22 ವರ್ಷದ ವಿಕೆಟ್ ಕೀಪರ್ ಇದು ನಿಜವಾಗಿಯೂ ಕಠಿಣ ಪರಿಸ್ಥಿತಿ ಎಂದು ಹೇಳಿದ್ದಾರೆ. ಆದರೆ ಕೆಕೆಆರ್ ಬಗ್ಗೆ ತಮ್ಮ ಬದ್ಧತೆ ಮತ್ತು ಜವಾಬ್ದಾರಿಯನ್ನು ಪುನರುಚ್ಚರಿಸಿದರು.

VISTARANEWS.COM


on

IPL 2024
Koo

ಬೆಂಗಳೂರು: ಅಫ್ಘಾನಿಸ್ತಾನದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಹಮಾನುಲ್ಲಾ ಗುರ್ಬಾಜ್ (Rahmanullah Gurbaz) ಅವರು ಐಪಿಎಲ್ 2024 (IPL 2024) ಪ್ಲೇಆಫ್​ ಪಂದ್ಯದಲ್ಲಿ ಆಡಿದ್ದಾರೆ ಆದರೆ ಅವರು ಅನಾರೋಗ್ಯ ಪೀಡಿತ ತಮ್ಮ ತಾಯಿಯನ್ನು ಆಸ್ಪತ್ರೆಯಲ್ಲಿ ಅಡ್ಮಿಟ್​ ಮಾಡಿ ಬಂದು ಆಡಿರುವುದಾಗಿ ಹೇಳಿದ್ದಾರೆ. ಅಹ್ಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಕೆಕೆಆರ್ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿತ್ತು. ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಗುರ್ಬಾಜ್ ಅವರ ಮೊದಲ ಪಂದ್ಯವಾಗಿತ್ತು. ಯಾಕೆಂದರೆ ಓಪನಿಂಗ್ ಸ್ಪಾಟ್​ ಇಂಗ್ಲೆಂಡ್​​ನ ಫಿಲ್ ಸಾಲ್ಟ್ ತುಂಬಿದ್ದ ಕಾರಣ ಅವರಿಗೆ ಇದುವರೆಗೆ ಅವಕಾಶ ಸಿಕ್ಕಿರಲಿಲ್ಲ. ಸಾಲ್ಟ್ ರಾಷ್ಟ್ರೀಯ ಕರ್ತವ್ಯಕ್ಕೆ ಮರಳಿದ್ದು ಗುರ್ಬಾಜ್​ಗೆ ಅವಕಾಶ ಸಿಕ್ಕಿದೆ.

ಆಕ್ರಮಣಕಾರಿ ಬಲಗೈ ಬ್ಯಾಟರ್​​ 14 ಎಸೆತಗಳಲ್ಲಿ, ಎರಡು ಬೌಂಡರಿಗಳು ಮತ್ತು ಅಷ್ಟೇ ಸಿಕ್ಸರ್​ಗಳೊಂದಿಗೆ 23 ರನ್ ಗಳಿಸಿದ್ದಾರೆ. ಆ ಮೂಲಕ ಕೆಕೆಆರ್​ಗೆ 6.2 ಓವರ್​ಗಳು ಬಾಕಿ ಇರುವಾಗ 160 ರನ್​ಗಳ ಗುರಿಯನ್ನು ಬೆನ್ನಟ್ಟಲು ಸಹಾಯ ಮಾಡಿದ್ದರು. ಅಹಮದಾಬಾದ್ನಲ್ಲಿ ನಡೆದ ಕ್ವಾಲಿಫೈಯರ್ 1 ರಲ್ಲಿ ಎಸ್​ಆರ್​ಎಚ್ ತಂಡವನ್ನು ಎಂಟು ವಿಕೆಟ್​​ಗಳಿಂದ ಸೋಲಿಸಿ ಮೇ 26 ರಂದು ಚೆನ್ನೈನಲ್ಲಿ ನಡೆಯಲಿರುವ ಐಪಿಎಲ್ 2024 ಫೈನಲ್​ಗೆ ಕೆಕೆಆರ್​ ಪ್ರವೇಶಿಸಿದೆ.

ತಾಯಿಯನ್ನು ತೊರೆದು ಐಪಿಎಲ್ ಆಡಿದ ಗುರ್ಬಾಜ್

ಕೆಕೆಆರ್ ಮತ್ತು ಎಸ್ಆರ್​ಎಚ್​​ ಕ್ವಾಲಿಫೈಯರ್ 1 ರ ನಂತರ ಮಾತನಾಡಿದ , ಗುರ್ಬಾಜ್. ಪಂದ್ಯಾವಳಿಯ ಮಧ್ಯದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯೊಂದಿಗೆ ಇರಲು ಮನೆಗೆ ಮರಳಿದ್ದೆ ಎಂಬುದಾಗಿ ಹೇಳಿದರು. ಸುಮಾರು ಹತ್ತು ದಿನಗಳ ಹಿಂದೆ, ಫಿಲ್ ಸಾಲ್ಟ್ ರಾಷ್ಟ್ರೀಯ ಕರ್ತವ್ಯಗಳಿಗೆ ತೆರಳಿದ ನಂತರ ಕೆಕೆಆರ್ ತಂಡದ ಮ್ಯಾನೇಜ್ಮೆಂಟ್ ಅವರನ್ನು ಸಂಪರ್ಕಿಸಿತ್ತು. ಐಪಿಎಲ್ 2024 ಪ್ಲೇಆಫ್​ಗೆ ಅವರ ಅಗತ್ಯವಿದೆ ಎಂದು ಹೇಳಿತ್ತು. ಭಾವನಾತ್ಮಕ ಗೊಂದಲ ಮತ್ತು ಕಠಿಣ ನಿರ್ಧಾರದ ಹೊರತಾಗಿಯೂ ಅಫ್ಘಾನಿಸ್ತಾನ ಕ್ರಿಕೆಟಿಗ ನಿರ್ಣಾಯಕ ಐಪಿಎಲ್ 2024 ಪ್ಲೇಆಫ್​ಗಳಲ್ಲಿ ಕೆಕೆಆರ್ ತಂಡವನ್ನು ಬೆಂಬಲಿಸಲು ಭಾರತಕ್ಕೆ ಮರಳಲು ನಿರ್ಧರಿಸಿದರು.

ಗುರ್ಬಾಜ್ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಬದ್ಧತೆಗಳನ್ನು ಸಮತೋಲನಗೊಳಿಸುವ ಸವಾಲನ್ನು ಒಪ್ಪಿಕೊಂಡಿದ್ದಾರೆ. ಆದರೆ ಅವರು ತಮ್ಮ ತಾಯಿಯ ಆಶೀರ್ವಾದವನ್ನು ಪಡೆದಿದ್ದಾರೆ.

ಇದನ್ನೂ ಓದಿ: IPL 2024 : ಕೊಹ್ಲಿಯನ್ನು ಹೊಗಳಿ ಆರ್​​ಸಿಬಿಗೆ ವಿದಾಯ ಹೇಳಿದ ವಿಜಯ್​ ಮಲ್ಯ

ಗುರ್ಬಾಜ್ ತನ್ನ ತಾಯಿ ಇನ್ನೂ ಆಸ್ಪತ್ರೆಯಲ್ಲಿದ್ದಾರೆ ಮತ್ತು ಪ್ರತಿದಿನ ಅವರೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಬಹಿರಂಗಪಡಿಸಿದರು. 22 ವರ್ಷದ ವಿಕೆಟ್ ಕೀಪರ್ ಇದು ನಿಜವಾಗಿಯೂ ಕಠಿಣ ಪರಿಸ್ಥಿತಿ ಎಂದು ಹೇಳಿದ್ದಾರೆ. ಆದರೆ ಕೆಕೆಆರ್ ಬಗ್ಗೆ ತಮ್ಮ ಬದ್ಧತೆ ಮತ್ತು ಜವಾಬ್ದಾರಿಯನ್ನು ಪುನರುಚ್ಚರಿಸಿದರು.

ನನ್ನ ತಾಯಿ ಇನ್ನೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ: ಗುರ್ಬಾಜ್

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಹಮಾನುಲ್ಲಾ ಗುರ್ಬಾಜ್, “ನನ್ನ ತಾಯಿ ಇನ್ನೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ನಾನು ಅಲ್ಲಿಗೆ ಹೋಗಿದ್ದೆ (ಅಫ್ಘಾನಿಸ್ತಾನದಲ್ಲಿರುವ ಮನೆಗೆ). ಫಿಲ್ ಸಾಲ್ಟ್ ನಿರ್ಗಮಿಸಿದ ನಂತರ ನನಗೆ ಕೆಕೆಆರ್​ನಿಂದ ಕರೆ ಬಂತು. ಹೀಗಾಗಿ ಬಂದೆ ಎಂದು ಹೇಳಿದ್ದಾರೆ.

ನನ್ನ ತಾಯಿ ಇನ್ನೂ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ನಾನು ಪ್ರತಿದಿನ ಅವರೊಂದಿಗೆ ಮಾತನಾಡುತ್ತೇನೆ. ಆದರೆ ನನ್ನ ಕೆಕೆಆರ್ ಕೂಡ ನನ್ನ ಕುಟುಂಬ ಎಂದು ನನಗೆ ತಿಳಿದಿದೆ, ಅವರಿಗೆ ಇಲ್ಲಿ ನನ್ನ ಅಗತ್ಯವಿತ್ತು. ಆದ್ದರಿಂದ, ನಾನು ಅಫ್ಘಾನಿಸ್ತಾನದಿಂದ ಹಿಂತಿರುಗಿದೆ. ಇದು ಕಠಿಣ ಆದರೆ ನಾನು ನಿರ್ವಹಿಸಬೇಕಾಗಿದೆ ಎಂದು ಹೇಳಿದ್ದಾರೆ

ಒಬ್ಬ ಕ್ರಿಕೆಟಿಗನಾಗಿ, ಏನು ಮಾಡಬೇಕೆಂದು ನಿಮಗೆ ತಿಳಿದಿದೆ. ಲೀಗ್ ಕ್ರಿಕೆಟ್​ ಲೀಗ್​ನಲ್ಲಿ ನಾಲ್ಕು ವಿದೇಶಿ ಆಟಗಾರರು ಮಾತ್ರ ಪ್ಲೇಯಿಂಗ್​ ಇಲೆವೆನ್​ನಲ್ಲಿ ಆಡಬಹುದು. ನಿಮಗೆ ಅವಕಾಶವಿದ್ದರೆ ನೀವು ಪ್ರಯತ್ನಿಸಬೇಕು ಮತ್ತು ಉತ್ತಮವಾಗಿ ಮಾಡಬೇಕು. ನಿಮಗೆ ಅವಕಾಶವಿಲ್ಲದಿದ್ದರೆ, ನೀವು ಚೆನ್ನಾಗಿ ತಯಾರಿ ನಡೆಸಬೇಕು ಮತ್ತು ಸಿದ್ಧರಾಗಿರಬೇಕು. ನಿಮಗೆ ಅವಕಾಶ ಸಿಕ್ಕಾಗಲೆಲ್ಲಾ, ನೀವು ಸಿದ್ಧರಾಗಿರಬೇಕು ಎಂದು ಗುರ್ಬಾಜ್​ ಹೇಳಿದ್ದಾರೆ.

Continue Reading
Advertisement
Calcutta High Court
ಪ್ರಮುಖ ಸುದ್ದಿ2 mins ago

Other Backward Classes : 2011ರ ನಂತರ ನೀಡಿದ್ದ ಒಬಿಸಿ ಪ್ರಮಾಣ ಪತ್ರಗಳನ್ನು ರದ್ದು ಮಾಡಿದ ಕಲ್ಕತಾ ಹೈಕೋರ್ಟ್​​

Bomb Threat
ಪ್ರಮುಖ ಸುದ್ದಿ21 mins ago

Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

ಕರ್ನಾಟಕ27 mins ago

CM’s Bengaluru City Rounds: ರಾಜಕಾಲುವೆ ಒತ್ತುವರಿ ಯಾರೇ ಮಾಡಿದ್ರೂ ಮುಲಾಜಿಲ್ಲದೆ ತೆರವು: ಸಿಎಂ ಎಚ್ಚರಿಕೆ

IPL 2024
ಕ್ರಿಕೆಟ್43 mins ago

IPL 2024 : ಅಮ್ಮನನ್ನು ಆಸ್ಪತ್ರೆಯಲ್ಲಿ ಮಲಗಿಸಿ ಕೆಕೆಆರ್​ ಪರ ಕ್ವಾಲಿಫೈಯರ್ ಆಡಿದ ಆಫ್ಘನ್​ ಕ್ರಿಕೆಟಿಗ

Star Cricket Theam Fashion
ಫ್ಯಾಷನ್49 mins ago

Star Cricket Theme Fashion: ಕ್ರಿಕೆಟ್‌ ಥೀಮ್‌ನಲ್ಲಿ ಬೆರಗುಗೊಳಿಸಿದ ನಟಿ ಜಾಹ್ನವಿ ಕಪೂರ್ ಫ್ಯಾಷನ್‌!

Harish Poonja Govt responsible for disaster if MLA Harish Poonja is arrested says BY Vijayendra
ರಾಜಕೀಯ50 mins ago

Harish Poonja: ಶಾಸಕ ಹರೀಶ್‌ ಪೂಂಜಾರನ್ನು ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ಗುಡುಗಿದ ವಿಜಯೇಂದ್ರ

Virat kohli
ಕ್ರೀಡೆ1 hour ago

IPL 2024 : ಕೊಹ್ಲಿಯನ್ನು ಹೊಗಳಿ ಆರ್​​ಸಿಬಿಗೆ ವಿದಾಯ ಹೇಳಿದ ವಿಜಯ್​ ಮಲ್ಯ

WhatsApp Update
ತಂತ್ರಜ್ಞಾನ1 hour ago

WhatsApp Update: ವಾಟ್ಸ್ ಆಪ್ ಬಳಕೆದಾರರಿಗೆ ಸಂತಸದ ಸುದ್ದಿ; ಮೆಸೆಜ್‌ಗೆ ಸಂಬಂಧಿಸಿ ಮಹತ್ವದ ಅಪ್‌ಡೇಟ್‌!

Jackfruit Seed: ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ; ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!
ಆರೋಗ್ಯ1 hour ago

Jackfruit Seed: ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ; ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!

Blink Movie in half centuru with good in OTT
ಸ್ಯಾಂಡಲ್ ವುಡ್1 hour ago

Blink Movie: ಹಾಫ್ ಸೆಂಚುರಿ ಬಾರಿಸಿದ ʻಬ್ಲಿಂಕ್ ʼ ಸಿನಿಮಾ; ಒಟಿಟಿಯಲ್ಲಿಯೂ ʻಬಹುಪರಾಕ್ʼ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ12 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌