ಬಾಯ್‌ಫ್ರೆಂಡ್‌ ಮೊಬೈಲ್‌ ತೆರೆದಾಗ ಅವಳಿಗೆ ಕಂಡಿದ್ದು 13000 ಹುಡುಗಿಯರ ನಗ್ನಲೋಕ! - Vistara News

ಕರ್ನಾಟಕ

ಬಾಯ್‌ಫ್ರೆಂಡ್‌ ಮೊಬೈಲ್‌ ತೆರೆದಾಗ ಅವಳಿಗೆ ಕಂಡಿದ್ದು 13000 ಹುಡುಗಿಯರ ನಗ್ನಲೋಕ!

ಬೆಂಗಳೂರಿನ ಬಿಪಿಒ ಉದ್ಯೋಗಿಯೊಬ್ಬ ತನ್ನ ಕಚೇರಿಯ ಹುಡುಗಿಯರೂ ಸೇರಿದಂತೆ ನೂರಾರು ಹುಡುಗಿಯರ 13000 ಫೋಟೊಗಳನ್ನು ಮೊಬೈಲ್‌ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದಾನೆ. ಯಾಕಿದು?

VISTARANEWS.COM


on

BPO Employee Bangalore Nude Photos
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಅವಳು ಬೆಂಗಳೂರಿನ ಬಿಪಿಒ ಕಂಪನಿಯಲ್ಲಿ (BPO Company in Bangalore) ಉದ್ಯೋಗಿ. ವಯಸ್ಸು 22 ವರ್ಷ. ಅವಳಿಗೊಬ್ಬ ಬಾಯ್‌ಫ್ರೆಂಡ್ (Boy friend). ಇನ್ನೂ 25 ವರ್ಷ. ಕೇವಲ ನಾಲ್ಕು ತಿಂಗಳ ಹಿಂದಷ್ಟೇ ಪರಿಚಯವಾಗಿದ್ದ ಅವರು ಆಗಲೇ ಪ್ರೀತಿ-ಪ್ರೇಮ-ಪ್ರಣಯ (Love and sex relationship) ಅಂತ ಸ್ವಲ್ಪ ಸ್ವಲ್ಪ ಎಲ್ಲೆ ಮೀರಿದ್ದರು. ಅವರಿಬ್ಬರ ನಡುವಿನ ಆತ್ಮೀಯ ಕ್ಷಣಗಳನ್ನು ಆ ಹುಡುಗ ಸೆರೆ ಹಿಡಿದಿದ್ದ. ಅದೊಂದು ದಿನ ಅವನು ಕಣ್ಣಂಚಿನಲ್ಲಿ ಇಲ್ಲದಾಗ ಅವನ ಮೊಬೈಲ್‌ ತೆಗೆದು ತಮ್ಮ ಇಂಟಿಮೇಟ್‌ ಕ್ಷಣಗಳ (Intemate moments) ಚಿತ್ರ ವಿಡಿಯೊಗಳನ್ನು ಡಿಲೀಟ್‌ ಮಾಡಲು ಮುಂದಾದಳು. ಅದು ಹೇಗೋ ಸಂಪಾದಿಸಿಕೊಂಡಿದ್ದ ಲಾಕಿಂಗ್‌ ಪಾಸ್‌ವರ್ಡ್‌ ಬಳಸಿ ಅವನು ಮೊಬೈಲ್‌ನ ಗ್ಯಾಲರಿ (Mobile Photo Gallery) ಓಪನ್‌ ಮಾಡಿದರೆ.. ಬೆಚ್ಚಿ ಬೀಳುವ ಸರದಿ ಅವಳದಾಗಿತ್ತು. ಯಾಕೆಂದರೆ, ಅಲ್ಲಿ ಅವಳೊಬ್ಬಳ ಫೋಟೊ, ವಿಡಿಯೊ ಮಾತ್ರ ಇದ್ದಿದ್ದಲ್ಲ. ಸುಮಾರು 13000 ಹುಡುಗಿಯರ ಸೆಕ್ಸೀ, ರೊಮ್ಯಾಂಟಿಕ್‌ ಫೋಟೊಗಳು ಅಲ್ಲಿದ್ದವು. ಮಾತ್ರವಲ್ಲ, ಅವರಿಬ್ಬರು ಕೆಲಸ ಮಾಡುವ ಅದೇ ಬಿಪಿಒ ಕಂಪನಿಯ ಹಲವು ಹುಡುಗಿಯರ ಮಾದಕ ಚಿತ್ರಗಳ ಸಂಪುಟವೂ ಅಲ್ಲಿ ತೆರೆದುಕೊಂಡಿತ್ತು!

ಹೀಗೆ ಬೆಚ್ಚಿ ಬಿದ್ದ ಹುಡುಗಿಯ ಹೆಸರು ಸಾನ್ವಿ (ಹೆಸರು ಬದಲಿಸಲಾಗಿದೆ). ವರ್ಷದ ಹಿಂದೆ ಬಿಪಿಒ ಕಂಪನಿಗೆ ಸೇರಿದ್ದಳು. ಆಕೆ ಕೆಲಸ ಮಾಡುತ್ತಿದ್ದ ಕಂಪನಿಗೆ ಐದು ತಿಂಗಳ ಹಿಂದೆ ಬಂದು ಸೇರಿಕೊಂಡವನು ಸಂತೋಷ್‌ ಆದಿತ್ಯ (ಹೆಸರು ಬದಲಿಸಲಾಗಿದೆ). ನೋಡಲು ಚೆನ್ನಾಗಿದ್ದ ಅವನಿಗೂ, ಚೆಲುವಿನ ಖನಿಯಾಗಿದ್ದ ಅವಳಿಗೂ ಆಗಲೇ ಪರಿಚಯವಾಗಿತ್ತು. ಒಂದೇ ತಿಂಗಳಲ್ಲಿ ಅದು ಸಂಬಂಧವಾಗಿ ಪರಿವರ್ತನೆಯಾಯಿತು. ಮನಸು ಮಾತ್ರವಲ್ಲ ದೇಹಗಳೂ ಹತ್ತಿರವಾಗಿ ಆತ್ಮೀಯ ರಸಕ್ಷಣಗಳು ನಡೆದುಹೋದವು. ಈ ರಸಕ್ಷಣಗಳ ನೆನಪು ಶಾಶ್ವತವಾಗಿರಲಿ ಎಂದು ಸಂತೋಷ್‌ ಆದಿತ್ಯ ಕೆಲವೊಮ್ಮೆ ಫೋಟೊ ತೆಗೆದಿದ್ದ, ಕೆಲವೊಮ್ಮೆ ವಿಡಿಯೊ ಮಾಡಿದ್ದ.

BPO Employee representational photo
ಪ್ರಾತಿನಿಧಿಕ ಚಿತ್ರ

ಎಲ್ಲ ಮುಗಿದ ಮೇಲೆ ಸಾನ್ವಿಗೆ ಒಬ್ಬ ಹುಡುಗನ ಮೊಬೈಲ್‌ನಲ್ಲಿ ತನ್ನ ಈ ರೀತಿಯ ಫೋಟೊ/ವಿಡಿಯೊಗಳು ಇರುವುದು ಸರಿಯಲ್ಲ ಎಂಬುದರ ಅರಿವಾಗಿದೆ. ಹಾಗಾಗಿ ಆಕೆ ಆತನಿಗೆ ಅರಿವಿಲ್ಲದೆಯೇ ಆತನ ಮೊಬೈಲ್‌ ತೆರೆದು ಗ್ಯಾಲರಿ ಓಪನ್‌ ಮಾಡಿದ್ದಾಳೆ. ಆಗ ಅವಳಿಗೆ ಕಂಡಿದ್ದು 13 ಸಾವಿರ ಫೋಟೊಗಳು! ಅದರಲ್ಲಿ ಹೆಚ್ಚಿನವರು ಹೆಣ್ಮಕ್ಕಳ ಫೋಟೊಗಳು! ಅದರಲ್ಲೂ ತನ್ನದೇ ಆಫೀಸಿನ ಹೆಣ್ಮಕ್ಕಳ ಫೋಟೊಗಳು ಹೆಚ್ಚಾಗಿದ್ದವು. ಅವರ ಜತೆಗೆ ಇದ್ದದ್ದು ಕೂಡಾ ಅದೇ ಇಂಟಿಮೇಟ್‌ ಕ್ಷಣಗಳು.

ಇದನ್ನು ನೋಡಿದ ಸಾನ್ವಿ ಬೆಚ್ಚಿ ಬಿದ್ದಿದ್ದಾಳೆ. ಅಷ್ಟೂ ಹುಡುಗಿಯರ ಫೋಟೊ/ವಿಡಿಯೊಗಳ ನಡುವೆ ಆಕೆಯದ್ದು ಕಾಣಿಸಲೇ ಇಲ್ಲ! ಇದೆಲ್ಲ ನಡೆದದ್ದು ಸುಮಾರು 10 ದಿನಗಳ ಹಿಂದೆ. ಇದನ್ನು ನೋಡಿದ ಸಾನ್ವಿ ಸುಮ್ಮನಿರಲಿಲ್ಲ.

ಮೊದಲು ಸಂತೋಷ್‌ ಜತೆಗೆ ಬ್ರೇಕಪ್‌ ಮಾಡಿಕೊಂಡಿದ್ದಾಳೆ. ನಂತರ ನವೆಂಬರ್‌ 20ರಂದು ಆಕೆ ತನ್ನ ಕಚೇರಿಯ ಸೀನಿಯರ್‌ಗಳಿಗೆ ಈ ವಿಚಾರ ತಿಳಿಸಿದ್ದಾಳೆ. ಸಂತೋಷ್‌ನ ಫೋನ್‌ನಲ್ಲಿ 13000ಕ್ಕೂ ಹೆಚ್ಚು ನಗ್ನ ಫೋಟೊಗಳಿವೆ. ಇವುಗಳಲ್ಲಿ ಕೆಲವು ನಮ್ಮ ಕಚೇರಿಯಲ್ಲೇ ಕೆಲಸ ಮಾಡುವ ಹುಡುಗಿಯರು, ಹೆಂಗಸರದ್ದೂ ಇದೆ. ಹೀಗಾಗಿ ಅವರಿಗೆ ಯಾರಿಗೂ ಮುಂದೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ವಿಚಾರವನ್ನು ಗಮನಕ್ಕೆ ತರುತ್ತಿರುವುದಾಗಿ ಹೇಳಿದ್ದಾಳೆ.

ವರದಿಗಳ ಪ್ರಕಾರ ಈ ಚಿತ್ರಗಳಲ್ಲಿ ಕೆಲವು ಒರಿಜಿನಲ್‌ ಆಗಿವೆ. ಅದರ ಜತೆಗೆ ಕೆಲವು ಚಿತ್ರಗಳು ನಕಲಿಯಾಗಿರಬಹುದು ಎನ್ನಲಾಗಿದೆ. ಅಂದರೆ ಕಚೇರಿಯ ಕೆಲವು ಮಹಿಳೆಯರ ಯುವತಿಯರ ಫೋಟೊಗಳನ್ನು ಆತ ನಗ್ನ ಚಿತ್ರಗಳಿಗೆ ಜೋಡಿಸಿ ಆನಂದಿಸಿರಬಹುದು ಎಂದು ಕೂಡಾ ಹೇಳಲಾಗುತ್ತಿದೆ.

BPO sex case

ಮತ್ತೊಬ್ಬ ಸಿಬ್ಬಂದಿಯಿಂದ ಪೊಲೀಸರಿಗೆ ದೂರು

ಸಂತೋಷ್‌ನ ಈ ವಿಕೃತಿಯನ್ನು ಅರ್ಥ ಮಾಡಿಕೊಂಡ ಬೆಳ್ಳಂದೂರು ಮೂಲದ ಬಿಪಿಒ ಕಂಪನಿಯ ಉದ್ಯೋಗಿಯಾಗಿರುವ ಸುಚಿತ್ರಾ (ಹೆಸರು ಬದಲಿಸಲಾಗಿದೆ) ಅವರು ಸಂತೋಷ್‌ ವಿರುದ್ಧ ನವೆಂಬರ್‌ 23ರಂದು ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಅವನು ಇದುವರೆಗೆ ಈ ಕಚೇರಿಯಲ್ಲಿ ಯಾವ ಮಹಿಳೆಯರಿಗೂ ತೊಂದರೆ ಮಾಡಿಲ್ಲ. ಆದರೆ, ಈ ರೀತಿ ಫೋಟೊಗಳು ಇವೆ ಎಂದಾಗ ಅದು ಹೆಣ್ಮಕ್ಕಳಿಗೆ ಆತಂಕ ಆಗಿಯೇ ಆಗುತ್ತದೆ. ಆತ ಯಾಕೆ ಈ ರೀತಿಯಾಗಿ ಫೋಟೊಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದಾನೆ? ಅವನ ಉದ್ದೇಶವೇನು ಎನ್ನುವುದು ಗೊತ್ತಿಲ್ಲ. ಒಂದು ವೇಳೆ ಇಂಥ ಫೋಟೊಗಳು ಒಂದು ವೇಳೆ ಸೋರಿಕೆಯಾದರೆ ಹೆಣ್ಮಕ್ಕಳು ತುಂಬ ಖಿನ್ನತೆಗೆ ಒಳಗಾಗಬಹುದು. ಹೀಗಾಗಿ ಪ್ರಕರಣದ ಗಂಭೀರತೆಯನ್ನು ಆಧರಿಸಿ ಪೊಲೀಸರಿಗೆ ವಿವರಿಸಿದ್ದೇವೆ ಎಂದು ಕಂಪನಿಯ ವಕ್ತಾರರು ಹೇಳಿದ್ದಾರೆ ಎನ್ನಲಾಗಿದೆ.

ಈ ನಡುವೆ ಕಂಪನಿ ಇನ್ನೊಂದು ಸ್ಪಷ್ಟೀಕರಣವನ್ನು ನೀಡಿದೆ. ಅದೇನೆಂದರೆ, ಸಂತೋಷ್‌ ಫೋಟೊಗಳನ್ನು ಮಾರ್ಫ್‌ ಮಾಡಲು ಕಂಪನಿಯ ಯಾವುದೇ ಸಾಧನಗಳನ್ನು ಬಳಸಿಕೊಂಡಿಲ್ಲ ಎಂಬುದು. ಈ ಮೂಲಕ ಆತನ ಇಂಥ ಕುಕೃತ್ಯಗಳಿಗೂ ಕಂಪನಿಗೂ ಸಂಬಂಧವಿಲ್ಲ ಎಂದು ಹೇಳಿಕೊಂಡಿದೆ.

ಇದೇವೇಳೆ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡು ಸಂತೋಷ್‌ನನ್ನು ಆತನ ಕಚೇರಿಯಿಂದಲೇ ಬಂಧಿಸಿ ಕರೆದೊಯ್ದಿದ್ದಾರೆ. ಆತನ ಮೊಬೈಲ್‌ ಮತ್ತು ಅದರಲ್ಲಿರುವ ಚಿತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಇಷ್ಟೊಂದು ಸಂಖ್ಯೆಯ ನಗ್ನ ಚಿತ್ರಗಳನ್ನು ಸಂಗ್ರಹಿಸುವ ಆತನ ಉದ್ದೇಶವೇನು ಎನ್ನುವ ಬಗ್ಗೆ ಅವರು ತನಿಖೆ ನಡೆಸಲಿದ್ದಾರೆ.

ಮೊಬೈಲ್‌ನಲ್ಲಿರುವ ಚಿತ್ರಗಳ ಪೈಕಿ ಕೆಲವು ಮಾರ್ಫ್‌ ಮಾಡಿದ ನಕಲಿ ಫೋಟಗಳು, ಕೆಲವು ನಿಜವಾಗಿಯೂ ಮಹಿಳೆಯರದ್ದೇ ಫೋಟೊಗಳು. ಅವನು ಈ ಫೋಟೊಗಳನ್ನು ಹೇಗೆ ತೆಗೆದುಕೊಂಡ, ಕೇವಲ ಐದೇ ತಿಂಗಳಲ್ಲಿ ಇಂಥ ಫೋಟೊಗಳನ್ನು ತೆಗೆಸಿಕೊಳ್ಳುವಷ್ಟು ಆತ್ಮೀಯತೆ ಹೇಗೆ ಬೆಳೆಯಿತು? ಆತ ಯಾರಿಗಾದರೂ ಈ ಫೋಟೋ ಬಳಸಿ ಬ್ಲ್ಯಾಕ್‌ ಮೇಲ್‌ ಮಾಡಿದ್ದಾನಾ? ಯಾರಿಗಾದರೂ ಕಳುಹಿಸಿದ್ದಾನಾ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಜತೆಗೆ ಆತನ ಸಂಪರ್ಕಗಳ ಮೇಲೂ ಕಣ್ಣಿಡಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading
Advertisement
Live News12 hours ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest18 hours ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest20 hours ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ2 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ2 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ2 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ3 days ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ3 days ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ3 days ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ3 days ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌