Site icon Vistara News

Karnataka Election 2023: ಬಿಟಿಎಂ ಲೇಔಟ್‌ ಬಿಜೆಪಿ ಅಭ್ಯರ್ಥಿ ಶ್ರೀಧರರೆಡ್ಡಿ ಗುರುವಾರ ನಾಮಪತ್ರ ಸಲ್ಲಿಕೆ

BTM Layout BJP Candidate KR Sridhara Reddy Will File Nomination On Thursday

ಕೆ.ಆರ್‌. ಶ್ರೀಧರ ರೆಡ್ಡಿ

ಬೆಂಗಳೂರು: ಬಿಟಿಎಂ ಲೇಔಟ್‌ ಬಿಜೆಪಿ ಅಭ್ಯರ್ಥಿ ಕೆ.ಆರ್.ಶ್ರೀಧರರೆಡ್ಡಿ ಅವರು ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಗುರುವಾರ (ಮಾರ್ಚ್‌ 20) ಉಮೇದುವಾರಿಕೆ (Karnataka Election 2023) ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಕುರಿತು ಅವರು ಫೇಸ್‌ಬುಕ್‌ನಲ್ಲಿ ಮಾಹಿತಿ ನೀಡಿದ್ದಾರೆ.

“ಬಿಟಿಎಂ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಪಕ್ಷವನ್ನು ಪ್ರತಿನಿಧಿಸಲು ನನಗೆ ಅವಕಾಶ ನೀಡಿದ್ದು,
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಎಲ್ಲ ನಾಯಕರಿಗೂ, ಪಕ್ಷದ ಎಲ್ಲ ಕಾರ್ಯಕರ್ತರಿಗೆ ನನ್ನ ಹೃದಯಪೂರ್ವಕ ಧನ್ಯವಾದ ತಿಳಿಸಲು ಬಯಸುತ್ತೇನೆ. ಕ್ಷೇತ್ರದ ಎಲ್ಲ ನಾಯಕರ ಹಾಗೂ ಕಾರ್ಯಕರ್ತರ ಆಶೀರ್ವಾದ ಮತ್ತು ಸಲಹೆಯನ್ನು ಆಧರಿಸಿ ನಾನು ಗುರುವಾರ ಬಿಜೆಪಿ ಅಭ್ಯರ್ಥಿಯಾಗಿ
ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಬಿಟಿಎಂ ಲೇಔಟ್‌ನಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ನೇರ ಪೈಪೋಟಿ ಇದೆ. ಹಾಲಿ ಶಾಸಕ, ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ರಾಮಲಿಂಗಾರೆಡ್ಡಿ ಅವರು ಮರು ಆಯ್ಕೆ ಬಯಸಿ ಕಣದಲ್ಲಿದ್ದಾರೆ. ಇವರಿಗೆ ಕೆ.ಆರ್‌.ಶ್ರೀಧರರೆಡ್ಡಿ ತೀವ್ರ ಪೈಪೋಟಿ ನೀಡಲು ಸಜ್ಜಾಗಿದ್ದಾರೆ. ಇನ್ನು ಜೆಡಿಎಸ್‌ ವೆಂಕಟೇಶ್ ಅವರಿಗೆ ಬುಧವಾರ ಟಿಕೆಟ್‌ ಘೋಷಿಸಿದೆ. ಕಳೆದ ಬಾರಿ ಇಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮಧ್ಯೆ ನೇರ ಹಣಾಹಣಿ ಇತ್ತು.

ಇದನ್ನೂ ಓದಿ: Karnataka Election 2023: ವಿ. ಸೋಮಣ್ಣ, ಬಿ.ಸಿ. ನಾಗೇಶ್‌ ಸೇರಿ ಹಲವು ಬಿಜೆಪಿ ನಾಯಕರಿಂದ ನಾಮಪತ್ರ ಸಲ್ಲಿಕೆ

Exit mobile version