BTS 2022 | ಬೆಂಗಳೂರಿನಿಂದಾಚೆಗೆ ಉದ್ದಿಮೆಗಳ ಬೆಳವಣಿಗೆಗೆ ಆದ್ಯತೆ, ವರದಿ ಬಿಡುಗಡೆ - Vistara News

ಪ್ರಮುಖ ಸುದ್ದಿ

BTS 2022 | ಬೆಂಗಳೂರಿನಿಂದಾಚೆಗೆ ಉದ್ದಿಮೆಗಳ ಬೆಳವಣಿಗೆಗೆ ಆದ್ಯತೆ, ವರದಿ ಬಿಡುಗಡೆ

ಬೆಂಗಳೂರು ತಂತ್ರಜ್ಞಾನ ಸಮಾವೇಶದ ಸಮಾರೋಪದಲ್ಲಿ ಬಿಯಾಂಡ್‌ ಬೆಂಗಳೂರು, (BTS 2022) ಬಿಯಾಂಡ್‌ ಎಕ್ಸ್‌ಪೆಕ್ಟೇಶನ್ಸ್‌ ವರದಿಯನ್ನು ಬಿಡುಗಡೆಗೊಳಿಸಲಾಗಿದೆ.

VISTARANEWS.COM


on

bts 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 25ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶದ ಕೊನೆಯ ದಿನವಾದ ಶುಕ್ರವಾರ, ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ‘ಬಿಯಾಂಡ್‌ ಬೆಂಗಳೂರು, ಬಿಯಾಂಡ್‌ ಎಕ್ಸ್‌ಪೆಕ್ಟೇಶನ್ಸ್‌’ ವರದಿಯನ್ನು ಬಿಡುಗಡೆ ಮಾಡಿದರು.
‘ಬಿಯಾಂಡ್ ಬೆಂಗಳೂರು’ ಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದ ಆರ್ಥಿಕತೆಗೆ ಬೆಳವಣಿಗೆಯ ವೇಗವನ್ನು ಒದಗಿಸಬೇಕೆಂದರೆ ಉದ್ಯಮಗಳು ಬೆಂಗಳೂರಿನಿಂದ ಆಚೆ ನೆಲೆಯೂರುವುದು ಅಗತ್ಯವಾಗಿದೆ. ಹೀಗಾಗಿ ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು ಮತ್ತು ಕಲಬುರಗಿ ಕ್ಲಸ್ಟರ್‍‌ಗಳಿಗೆ ಆದ್ಯತೆ ಕೊಡಲಾಗುತ್ತಿದೆ” ಎಂದರು.
ಬೆಂಗಳೂರಿನಲ್ಲಿ ಉದ್ದಿಮೆಗಳು ಅತಿಯಾಗಿ ನೆಲೆಗೊಂಡಿವೆ. ಈ ದಟ್ಟಣೆಯನ್ನು ಕಡಿಮೆ ಮಾಡುವುದು ಬಿಯಾಂಡ್‌ ಬೆಂಗಳೂರು ಉಪಕ್ರಮದ ಗುರಿಯಾಗಿದೆ. ಕೋವಿಡ್‌ ಪಿಡುಗಿನ ನಂತರ ಸೃಷ್ಟಿಯಾದ ಪರಿಸ್ಥಿತಿಯು ಇದರ ಯಶಸ್ಸಿಗೆ ಪೂರಕವಾಗಿ ಒದಗಿ ಬಂತು. ಉದ್ದಿಮೆಗಳಿಗೆ ಬೇಕಾದ ಪ್ರತಿಭಾವಂತ ಮಾನವ ಸಂಪನ್ಮೂಲವನ್ನು ಒದಗಿಸಲು ಸರಕಾರವು ಶಿಕ್ಷಣ ಸಂಸ್ಥೆಗಳೊಂದಿಗೆ ಸಹಭಾಗಿತ್ವ ಸ್ಥಾಪನೆಯತ್ತ ಗಂಭೀರವಾಗಿ ಚಿಂತಿಸುತ್ತಿದೆ ಎಂದು ಅವರು ವಿವರಿಸಿದರು.
ಬಿಯಾಂಡ್‌ ಬೆಂಗಳೂರು ಉಪಕ್ರಮ ಸಂಪೂರ್ಣವಾಗಿ ಯಶಸ್ವಿಯಾಗಬೇಕೆಂದರೆ, ಉದ್ಯಮಗಳು ಮತ್ತು ಶಿಕ್ಷಣ ಸಂಸ್ಥೆಗಳ ನಡುವೆ ಸಂವಾದ ನಡೆಯುತ್ತಿರಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

LoK Sabha Election 2024: ಚೊಂಬು ಆರೋಪಕ್ಕೆ ಚಿಪ್ಪು ಕೊಟ್ಟ ಬಿಜೆಪಿ! ಪಿಕ್‌ ಪಾಕೆಟ್‌ ಕಾಂಗ್ರೆಸ್‌ ಪೋಸ್ಟರ್‌ ಬಿಡುಗಡೆ!

LoK Sabha Election 2024: ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿತ್ತು, ಅದನ್ನೇ ಜಯವೆಂದು ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ. ವಿಧಾನಸೌಧ ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಈ ಬಗ್ಗೆ ಮುಖ್ಯ ಕಾರ್ಯದರ್ಶಿ ವಿರುದ್ಧ ದೂರು ನೀಡಲಾಗಿದೆ. ಇನ್ನು ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಆಗ್ರಹಿಸಿದ್ದಾರೆ.

VISTARANEWS.COM


on

Lok Sabha Election 2024 BJP released Pick pocket Congress poster
Koo

ಬೆಂಗಳೂರು: ಲೋಕಸಭಾ ಚುನಾವಣೆ (LoK Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಆರೋಪ – ಪ್ರತ್ಯಾರೋಪಗಳು ಜೋರಾಗಿಯೇ ಇವೆ. ಕೇಂದ್ರ ಸರ್ಕಾರ ಬರ ಪರಿಹಾರ (Drought Relief) ನೀಡಲು ಚುನಾವಣಾ ಆಯೋಗದ (Election Commission) ಅನುಮತಿ ಕೇಳಿದ್ದು, ಇದನ್ನೇ ನ್ಯಾಯಾಲಯದಲ್ಲಿ ತಿಳಿಸಲಾಗಿದೆ. ಈ ವಿಷಯವನ್ನು ತಮಗೆ ಸಿಕ್ಕಿದ ಜಯ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳನ್ನು ಬಿಂಬಿಸುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಜನರ ಕೈಗೆ ಚಿಪ್ಪು ಕೊಟ್ಟಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್‌. ಅಶೋಕ್, ಕೇಂದ್ರ ಸರ್ಕಾರ (Central Government) ಬರ ಪರಿಹಾರ ಬಿಡುಗಡೆಗೆ ಅನುಮತಿಗಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಈ ಕುರಿತು ತಿಳಿಸಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ (Supreme Court) ನಡೆಯುತ್ತಿರುವ ಪ್ರಕರಣದ ವಿಚಾರಣೆ ವೇಳೆಯೂ ಇದನ್ನು ತಿಳಿಸಲಾಗಿದೆ. ಆದರೆ, ಕಾಂಗ್ರೆಸ್‌ ನಾಯಕರು (Congress Leaders) ಜಯ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಹಣ ಬಿಡುಗಡೆಗಾಗಿಯೇ ಅನುಮತಿ ಕೇಳಿರುವಾಗ, ಕಾಂಗ್ರೆಸ್‌ ಪಾತ್ರ ಇದರಲ್ಲಿ ಏನೂ ಇಲ್ಲ. ಜಯ ಸಿಗಲು ಕಾಂಗ್ರೆಸ್‌ನ ವಕೀಲರು ಏನೂ ವಾದ ಮಾಡಿಲ್ಲ ಎಂದರು.

ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲಾ ಅವರು ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಾರೆ? ಇಲ್ಲಿ ಬಾಂಬ್‌ ಸ್ಫೋಟ ಆಗಿರುವಾಗ ನಿಮಗೆ ಮತ ಕೇಳಲು ಯಾವ ಅಧಿಕಾರ ಇದೆ? ಕೇಂದ್ರ ಸರ್ಕಾರ ಕ್ರಮ ವಹಿಸಿದ್ದರಿಂದಲೇ ಬರ ಪರಿಹಾರ ಹಲವಾರು ರಾಜ್ಯಗಳಿಗೆ ದೊರೆಯುತ್ತಿದೆ. ಈಗಾಗಲೇ ಬರ ಪರಿಹಾರವನ್ನು ರಾಜ್ಯ ಸರ್ಕಾರದ ವತಿಯಿಂದ ನೀಡಬೇಕಿತ್ತು. ಎಸ್‌ಡಿಆರ್‌ಎಫ್‌ನಿಂದ 700 ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರ ನೀಡಿದೆ. ಆದರೆ ರಾಜ್ಯ ಸರ್ಕಾರವೇ ನೀಡಿದಂತೆ ಸಿಎಂ ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ ಎಂದು ಆರ್.‌ ಅಶೋಕ್‌ ಕಿಡಿಕಾರಿದರು.

Lok Sabha Election 2024 BJP released Pick pocket Congress poster

2013-14 ರಲ್ಲಿ ಬರ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ 9 ತಿಂಗಳು ತೆಗೆದುಕೊಂಡಿದ್ದರು. ಕೇಂದ್ರದಲ್ಲೀಗ ಬಿಜೆಪಿ ಇದೆ ಎಂಬ ಕಾರಣಕ್ಕೆ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಮೋದಿ ಸರ್ಕಾರ 7,940 ಕೋಟಿ ರೂ. ಪರಿಹಾರ ನೀಡಿದ್ದರೆ, ಮನಮೋಹನ್‌ ಸಿಂಗ್‌ ಸರ್ಕಾರ 3,000 ಕೋಟಿ ರೂ. ನೀಡಿದೆ. ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಆರ್.‌ ಅಶೋಕ್‌ ಹೇಳಿದರು.

ಸಿಬಿಐಗೆ ತನಿಖೆ ವಹಿಸಿ

ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿ ಬೀದಿಗೆ ಬಂದಿದ್ದು, ಮುಂದೆ ಸಂಬಳ ಕೊಡಲು ಹಣ ಇರುವುದಿಲ್ಲ. ಕಾಂಗ್ರೆಸ್‌ ವಿರುದ್ಧ ಹಿಂದೂಗಳು ಕೆರಳುತ್ತಿದ್ದಾರೆ. ಹಿಂದೂಗಳ ರಕ್ತವನ್ನು ಮತಾಂಧರು ಹರಿಸುತ್ತಿದ್ದು, ಇದನ್ನು ಮರೆಮಾಚಿಸಲು ಈ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ. ನೇಹಾ ಹತ್ಯೆಯ ತನಿಖೆಯನ್ನು ಸಿಬಿಐಗೆ ಕೊಡದೆ ಸಿಐಡಿಗೆ ನೀಡಿ ಮುಚ್ಚಿಹಾಕುವ ಕೆಲಸ ಮಾಡುತ್ತಿದ್ದಾರೆ. ಅವರ ತಂದೆಯೇ ಲವ್‌ ಜಿಹಾದ್‌ ಹೇಳಿದ್ದಾರೆ. ಈ ಪ್ರಕರಣವನ್ನು ಸೂಕ್ತವಾಗಿ ತನಿಖೆ ಮಾಡಲು ಸಿಬಿಐಗೆ ವಹಿಸಬೇಕು ಎಂದು ಆರ್.‌ ಅಶೋಕ್‌ ಆಗ್ರಹಿಸಿದರು.

“ಪಿಕ್ ಪಾಕೆಟ್ ಕಾಂಗ್ರೆಸ್” ಮತ್ತು “ಕನ್ನಡಿಗರ ಕೈಗೆ ಚಿಪ್ಪು” ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರದಿಂದ ಅನುದಾನ ತಾರತಮ್ಯ ನೀತಿಯನ್ನು ಅನುಸರಿಸಲಾಗುತ್ತಿದೆ ಎಂದು ಆರೋಪಿಸುತ್ತಾ ಬಂದಿದ್ದ ಕಾಂಗ್ರೆಸ್‌ “ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಚೊಂಬು” ಎಂಬ ಜಾಹೀರಾತನ್ನು ಕೊಟ್ಟಿತ್ತು. ಈಗ ಇದಕ್ಕೆ ಪ್ರತಿಯಾಗಿ ಬಿಜೆಪಿ ಎರಡು ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದು, ಸತ್ಯ ಸಂಗತಿ ಮರೆಮಾಚಿ ಜನರನ್ನು ವಂಚಿಸುತ್ತಿರುವ ಕಾಂಗ್ರೆಸ್ ಮುಖವಾಡ ಬಯಲು ಮಾಡಲಾಗುತ್ತಿದೆ ಎಂದು ಹೇಳಿದೆ. ಈ ಸಂಬಂಧ “ಪಿಕ್ ಪಾಕೆಟ್ ಕಾಂಗ್ರೆಸ್” ಮತ್ತು “ಕನ್ನಡಿಗರ ಕೈಗೆ ಚಿಪ್ಪು” ಪೋಸ್ಟರ್‌ಗಳನ್ನು ಆರ್.‌ ಅಶೋಕ್ ಬಿಡುಗಡೆ ಮಾಡಿದರು.

ಕಾಂಗ್ರೆಸ್‌ ಸರ್ಕಾರ ಚಿಪ್ಪು ಕೊಟ್ಟಿದೆ ಎಂಬ ಹಾಡು ಬಿಡುಗಡೆ ಮಾಡಿರುವ ಬಿಜೆಪಿ; ಇಲ್ಲಿದೆ ವಿಡಿಯೊ

ಇದನನೂ ಓದಿ: CM Siddaramaiah: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ಮೋದಿ, ಅಮಿತ್ ಶಾಗೆ ಗೋ ಬ್ಯಾಕ್‌ ಘೋಷಣೆ

ಚುನಾವಣಾ ಆಯೋಗಕ್ಕೆ ದೂರು

ವಿಧಾನಸೌಧದಲ್ಲಿ ಕಾಂಗ್ರೆಸ್‌ ಪ್ರತಿಭಟನೆಗೆ ಅವಕಾಶ ನೀಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪ್ರತಿಭಟಿಸಿದ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ವಿಧಾನಸೌಧದ ಒಳಗೆ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ವಿರೋಧಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಈಗ ವಿಧಾನಸೌಧದ ಮುಂಭಾಗ ಕಾಂಗ್ರೆಸ್‌ ನಾಯಕರು ಪ್ರತಿಭಟಿಸಲು ಅವಕಾಶ ಕೊಟ್ಟ ಮುಖ್ಯ ಕಾರ್ಯದರ್ಶಿಯ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ದೂರ ನೀಡಲಾಗಿದೆ. ವಿಧಾನಸೌಧವನ್ನು ಈಗಾಗಲೇ ಮೂರು ನಾಲ್ಕು ಬಾರಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರ್‌.ಅಶೋಕ ದೂರಿದರು.

Continue Reading

ಕ್ರೀಡೆ

Match Fixing : ಇರ್ಫಾನ್​ ಪಠಾಣ್​, ಸುರೇಶ್ ರೈನಾ ಪಾಲ್ಗೊಂಡಿದ್ದ ​ ಕ್ರಿಕೆಟ್ ಲೀಗ್​ನಲ್ಲಿ ಮ್ಯಾಚ್​ ಫಿಕ್ಸಿಂಗ್?

Match Fixing: ಲೆಜೆಂಡ್ಸ್ ಕ್ರಿಕೆಟ್ ಟ್ರೋಫಿ 2024 ರ ಸಂದರ್ಭದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ. ಅವರ ವಿರುದ್ಧ ಅಟಾರ್ನಿ ಜನರಲ್ ಇಲಾಖೆ ಕೊಲಂಬೊ ಹೈಕೋರ್ಟ್​ನಲ್ಲಿ ದೋಷಾರೋಪಗಳ ಪಟ್ಟಿ ಸಲ್ಲಿಸಿದೆ. ವಿಶ್ವದಾದ್ಯಂತದ ಕೆಲವು ಪ್ರಮುಖ ನಿವೃತ್ತ ಅಂತರರಾಷ್ಟ್ರೀಯ ಕ್ರಿಕೆಟಿಗರನ್ನು ಒಳಗೊಂಡ ಲೆಜೆಂಡ್ಸ್ ಕ್ರಿಕೆಟ್ ಟ್ರೋಫಿಯ ಬಗ್ಗೆ ಅನುಮಾನಗಳು ವ್ಯಕ್ತಗೊಂಡಿವೆ.

VISTARANEWS.COM


on

Match Fixing
Koo

ಬೆಂಗಳೂರು: ಹಿರಿಯ ಕ್ರಿಕೆಟಿಗರನ್ನು ಒಳಗೊಂಡಿರುವ ಲೆಜೆಂಡ್ಸ್​ ಕ್ರಿಕೆಟ್​ಲೀಗ್​ನಲ್ಲಿ ಮ್ಯಾಚ್​ ಫಿಕ್ಸಿಂಗ್ (Match Fixing) ನಡೆಸಿರುವ ಆರೋಪವೊಂದು ಕೇಳಿ ಬಂದಿದೆ. ಲೆಜೆಂಡ್ಸ್ ಕ್ರಿಕೆಟ್ ಲೀಗ್ 2024 ರ ತಂಡದ ವ್ಯವಸ್ಥಾಪಕ ಯೊನಿ ಪಟೇಲ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಹೊರಿಸಲಾಗಿದೆ. ಶ್ರೀಲಂಕಾದ ಕೊಲಂಬೊ ಹೈಕೋರ್ಟ್​​ನಲ್ಲಿ ಈಬಗ್ಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ನ್ಯೂಜಿಲೆಂಡ್​ನ ಮಾಜಿ ಆಟಗಾರ ನೀಲ್ ಬ್ರೂಮ್ ಮತ್ತು ಶ್ರೀಲಂಕಾದ ಮಾಜಿ ಆಟಗಾರ ಉಪುಲ್ ತರಂಗ ನೀಡಿದ ದೂರಿನ ನಂತರ ಈ ತನಿಖೆ ಆರಂಭಗೊಂಡಿದೆ.

ಲೆಜೆಂಡ್ಸ್ ಕ್ರಿಕೆಟ್ ಟ್ರೋಫಿ 2024 ರ ಸಂದರ್ಭದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ. ಅವರ ವಿರುದ್ಧ ಅಟಾರ್ನಿ ಜನರಲ್ ಇಲಾಖೆ ಕೊಲಂಬೊ ಹೈಕೋರ್ಟ್​ನಲ್ಲಿ ದೋಷಾರೋಪಗಳ ಪಟ್ಟಿ ಸಲ್ಲಿಸಿದೆ. ವಿಶ್ವದಾದ್ಯಂತದ ಕೆಲವು ಪ್ರಮುಖ ನಿವೃತ್ತ ಅಂತರರಾಷ್ಟ್ರೀಯ ಕ್ರಿಕೆಟಿಗರನ್ನು ಒಳಗೊಂಡ ಲೆಜೆಂಡ್ಸ್ ಕ್ರಿಕೆಟ್ ಟ್ರೋಫಿಯ ಬಗ್ಗೆ ಅನುಮಾನಗಳು ವ್ಯಕ್ತಗೊಂಡಿವೆ.

ಮಾರ್ಚ್ 8 ರಿಂದ ಮಾರ್ಚ್ 19 ರವರೆಗೆ ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಏಳು ತಂಡಗಳನ್ನು ಒಳಗೊಂಡ ಪಂದ್ಯಾವಳಿ ನಡೆದಿತ್ತು. ಬ್ರೂಮ್ ಪಂಜಾಬ್ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದರೆ, ಉಪುಲ್​ ತರಂಗ ಕ್ಯಾಂಡಿ ಸ್ಯಾಂಪ್ ಆರ್ಮಿ ತಂಡದ ಭಾಗವಾಗಿದ್ದರು. ಪಂದ್ಯಗಳನ್ನು ಫಿಕ್ಸ್ ಮಾಡುವಂತೆ ಯೊನಿ ಪಟೇಲ್ ತಮ್ಮ ಮೇಲೆ ಒತ್ತಡ ಹೇರಿದ್ದಾರೆ ಎಂದು ಇಬ್ಬರೂ ಆರೋಪಿಸಿದ್ದಾರೆ.

ಮ್ಯಾಚ್ ಫಿಕ್ಸಿಂಗ್ ಪ್ರಕರಣವನ್ನು ಕೊಲಂಬೊ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಕೈಗೆತ್ತಿಕೊಂಡಾಗ ಅಟಾರ್ನಿ ಜನರಲ್ ಪರವಾಗಿ ಹಾಜರಾದ ಹಿರಿಯ ರಾಜ್ಯ ವಕೀಲರು ಈ ವಿಷಯವನ್ನು ಬಹಿರಂಗಪಡಿಸಿದರು. ಲೆಜೆಂಡ್ಸ್ ಕ್ರಿಕೆಟ್ ಟ್ರೋಫಿ 2024 ರ ತಂಡದ ವ್ಯವಸ್ಥಾಪಕ ಯೊನಿ ಪಟೇಲ್ ವಿರುದ್ಧ ದೋಷಾರೋಪ ಸಲ್ಲಿಕೆಯಾಗಿದೆ.

ಉದ್ಘಾಟನೆ ಮತ್ತು ಫೈನಲ್ ಹೊರತುಪಡಿಸಿ, ಪ್ರತಿ ದಿನವೂ ಡಬಲ್ ಹೆಡರ್ ಆಗಿತ್ತು. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ಕಿಂಗ್ಸ್, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ನ್ಯೂಯಾರ್ಕ್ ಸೂಪರ್ ಸ್ಟಾರ್ ಸ್ಟ್ರೈಕರ್ಸ್ ತಂಡವನ್ನು 20 ರನ್ ಗಳಿಂದ ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತು.

ಇದನ್ನೂ ಓದಿ ವಿಸ್ತಾರ ಸಂಪಾದಕೀಯ: ತಂತ್ರಜ್ಞಾನ ಕಾಲದಲ್ಲೂ ಐಪಿಎಲ್​ ಅಂಪೈರ್ ಗಳ ಸೋಮಾರಿತನ ಆಕ್ಷೇಪಾರ್ಹ

ಈ ಪಂದ್ಯಾವಳಿಯಲ್ಲಿ ಯುವರಾಜ್ ಸಿಂಗ್, ಸುರೇಶ್ ರೈನಾ, ಕ್ರಿಸ್ ಗೇಲ್, ರಾಸ್ ಟೇಲರ್, ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ಮ್ಯಾಟ್ ಪ್ರಿಯರ್, ಕಾಲಿನ್ ಡಿ ಗ್ರ್ಯಾಂಡ್ಹೋಮ್, ಡೇನಿಯಲ್ ಕ್ರಿಶ್ಚಿಯನ್ ಮತ್ತು ಮೊಹಮ್ಮದ್ ಇರ್ಫಾನ್ ಅವರಂತಹ ಅಂತರರಾಷ್ಟ್ರೀಯ ಕ್ರಿಕೆಟ್​​ನ ಪ್ರಮುಖರು ಭಾಗವಹಿಸಿದ್ದರು.

ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸಮಯದಲ್ಲಿ ಏನಾಯಿತು?

ತನಿಖೆಯ ಪ್ರಕಾರ, ಫಿಕ್ಸರ್ ಕಳಪೆ ಪ್ರದರ್ಶನ ನೀಡಲು ಮತ್ತು ಪಂದ್ಯದ ಫಲಿತಾಂಶವನ್ನು ಮಾರ್ಪಡಿಸಲು ಹಣದ ಪ್ರಸ್ತಾಪಗಳೊಂದಿಗೆ ಆಟಗಾರರನ್ನು ಸಂಪರ್ಕಿಸಿದ್ದ ಏತನ್ಮಧ್ಯೆ, ಯೊನಿ ಮತ್ತು ಎಲ್​​ಇಎಲ್​​ನ ಮತ್ತೊಬ್ಬ ತಂಡದ ವ್ಯವಸ್ಥಾಪಕ ಪಿ ಆಕಾಶ್ ಶ್ರೀಲಂಕಾವನ್ನು ತೊರೆಯದಂತೆ ಈಗಾಗಲೇ ಪ್ರಯಾಣ ನಿರ್ಬಂಧಿಸಲಾಗಿದೆ.

ಲೆಜೆಂಡ್ಸ್ ಕ್ರಿಕೆಟ್ ಲೀಗ್ ಬಗ್ಗೆ

ಪಂದ್ಯಾವಳಿಯಲ್ಲಿ ಇಂಗ್ಲೆಂಡ್, ಆಸ್ಟ್ರೇಲಿಯಾ, ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್​​ನ ಏಳು ತಂಡಗಳು ಭಾಗವಹಿಸಿದ್ದವು. ಎಲ್ಲಾ ಪಂದ್ಯಗಳು ಮಾರ್ಚ್ 8 ರಿಂದ 19 ರವರೆಗೆ ಕ್ಯಾಂಡಿಯ ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದವು.

Continue Reading

ಕರ್ನಾಟಕ

Murugha Seer: ಪೋಕ್ಸೊ ಕೇಸ್‌ನಲ್ಲಿ ಮುರುಘಾ ಶ್ರೀಗೆ ಮತ್ತೆ ಸಂಕಷ್ಟ; 4 ತಿಂಗಳು ಜೈಲಿಗೆ

Murugha Seer: ಮುರುಘಾ ಶ್ರೀಗಳಿಗೆ ಮತ್ತೆ ನಾಲ್ಕು ತಿಂಗಳು ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ. ವಿಚಾರಣಾ ನ್ಯಾಯಾಲಯದ ಮುಂದೆ ಒಂದು ವಾರದೊಳಗೆ ಹಾಜರಾಗಲು ಸೂಚನೆ ನೀಡಿದೆ.

VISTARANEWS.COM


on

Murugha Seer
Koo

ಬೆಂಗಳೂರು: ಚಿತ್ರದುರ್ಗದ ಮುರುಘಾ ಶ್ರೀಗಳಿಗೆ (Murugha Seer) ಪೋಕ್ಸೊ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದ್ದು, ಅವರಿಗೆ ನಾಲ್ಕು ತಿಂಗಳು ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ. ಶ್ರೀಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು, ಆದರೆ ಇದೀಗ ಸುಪ್ರೀ ಆದೇಶದ ಹಿನ್ನೆಲೆಯಲ್ಲಿ ಶ್ರೀಗಳ ಜಾಮೀನು 4 ತಿಂಗಳ ಮಟ್ಟಿಗೆ ರದ್ದಾಗಲಿದೆ.

ವಿಚಾರಣಾ ನ್ಯಾಯಾಲಯದ ಮುಂದೆ ಒಂದು ವಾರದೊಳಗೆ ಹಾಜರಾಗಲು ಶರಣಾಗಲು ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ನೀಡಿದೆ. ಹಾಗೆಯೇ ನಾಲ್ಕು ತಿಂಗಳಲ್ಲಿ ವಿಚಾರಣೆ ಮುಗಿಸಲು ಚಿತ್ರದುರ್ಗದ ಕೋರ್ಟ್‌ಗೆ ಸುಪ್ರೀಂ ಸೂಚನೆ ನೀಡಿದ್ದು, ಸಾಕ್ಷ್ಯಗಳ ವಿಚಾರಣೆ ಮುಗಿಯುವ ತನಕ ಶ್ರೀಗಳು ನ್ಯಾಯಾಂಗ ಬಂಧನದಲ್ಲಿರಬೇಕು ಎಂದು ತಿಳಿಸಿದೆ.

ಡಿ.ರಾಜಪ್ಪ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಈ ಆದೇಶ ಹೊರಡಿಸಲಾಗಿದ್ದು, ಪ್ರಾಸಿಕ್ಯೂಷನ್ ಮತ್ತು ಆರೋಪಿ ಎಲ್ಲರೂ ಕೂಡ ವಿಚಾರಣೆಗೆ ಸಹಕರಿಸಬೇಕು. ವಿಚಾರಣೆ ನ್ಯಾಯಾಲಯವು 4 ತಿಂಗಳಲ್ಲಿ ವಿಚಾರಣೆ ಮುಗಿಸಬೇಕು. ಇನ್ನೂ ಹೆಚ್ಚು ಸಮಯ ಅಗತ್ಯ ಬಿದ್ದಲ್ಲಿ, ಸುಪ್ರೀಂ ಕೋರ್ಟ್ ಗಮನಕ್ಕೆ ತರಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ | Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

ಕಳೆದ ನವೆಂಬರ್‌ನಲ್ಲಿ 2ನೇ ಪೋಕ್ಸೊ ಪ್ರಕರಣದಲ್ಲಿ ಮುರುಘಾಶ್ರೀಗಳಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿತ್ತು. ಬಂಧನವಾದ ಕೆಲವೇ ನಿಮಿಷಗಳಲ್ಲಿ ಅವರನ್ನು ಬಿಡುಗಡೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ಉಚ್ಚ ನ್ಯಾಯಾಲಯ ಆದೇಶಿಸಿತ್ತು. ಮೊದಲ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾದ ಐದೇ ದಿನಗಳಲ್ಲಿ 2ನೇ ಪೋಕ್ಸೊ ಪ್ರಕರಣದಲ್ಲಿ ಶ್ರೀಗಳನ್ನು ಮತ್ತೆ ಬಂಧಿಸಲಾಗಿತ್ತು. ಚಿತ್ರದುರ್ಗ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ನಿರ್ದೇಶನ ನೀಡಿದ ಬೆನ್ನಲ್ಲೇ ಶ್ರೀಗಳ ಬಿಡುಗಡೆಗೆ ಹೈಕೋರ್ಟ್‌ ಸೂಚಿಸಿತ್ತು.

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯಿದೆಯಡಿ ಎರಡು ಪ್ರಕರಣಗಳು ದಾಖಲಾಗಿದ್ದವು. ಒಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣವಾದರೆ ಎರಡನೇ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರ ಜತೆಗೆ ಅವರು ಪರಿಶಿಷ್ಟ ಜಾತಿಯ ವಿದ್ಯಾರ್ಥಿನಿಯರು ಎಂಬುದನ್ನು ಉಲ್ಲೇಖಿಸಲಾಗಿತ್ತು. ಮೊದಲ ಪ್ರಕರಣದಲ್ಲಿ ಪೋಕ್ಸೊ ಪ್ರಕರಣ ಮಾತ್ರ ಇದ್ದರೆ, ಎರಡನೇ ಕೇಸ್‌ನಲ್ಲಿ ಪೋಕ್ಸೋ ಜತೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆಯೂ ಅನ್ವಯವಾಗಿದೆ.

Continue Reading

ಪ್ರಮುಖ ಸುದ್ದಿ

BrahMos Missiles: ಫಿಲಿಪ್ಪೀನ್ಸ್‌ಗೆ ನಾಲ್ಕನೇ ಬ್ರಹ್ಮೋಸ್‌ ಕ್ಷಿಪಣಿ ಬ್ಯಾಟರಿ ಕಳುಹಿಸಲು ಭಾರತ ಸಜ್ಜು

BrahMos Missiles: ಬ್ರಹ್ಮೋಸ್ ಕ್ಷಿಪಣಿಗಳ ಮೂರು ‘ಬ್ಯಾಟರಿ’ಗಳನ್ನು ಈಗಾಗಲೇ ದ್ವೀಪ ರಾಷ್ಟ್ರಕ್ಕೆ ಹಸ್ತಾಂತರಿಸಲಾಗಿದೆ. 2022ರಲ್ಲಿ ಎರಡು ಮಿತ್ರರಾಷ್ಟ್ರಗಳು ಸಹಿ ಮಾಡಿದ USD 375 ಮಿಲಿಯನ್ ಒಪ್ಪಂದದ ಭಾಗವಾಗಿದೆ ಇದು. ಪ್ರತಿ ಬ್ಯಾಟರಿಯೂ ನಾಲ್ಕು ಲಾಂಚರ್‌ಗಳನ್ನು ಒಳಗೊಂಡಿದೆ. ಪ್ರತಿ ಲಾಂಚರ್‌ನಲ್ಲೂ 290 ಕಿಮೀ ವ್ಯಾಪ್ತಿಯ ಮೂರು ಕ್ಷಿಪಣಿಗಳಿರುತ್ತವೆ.

VISTARANEWS.COM


on

BrahMos Missiles
Koo

ಹೊಸದಿಲ್ಲಿ: ದಕ್ಷಿಣ ಚೀನಾ ಸಮುದ್ರದಲ್ಲಿ (South China Sea) ಚೀನಾದ ಒತ್ತಡದಿಂದಾಗಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ರಕ್ಷಣಾ ರಫ್ತಿಗೆ (defence exports) ಭಾರಿ ಉತ್ತೇಜನ ನೀಡುತ್ತಿರುವ ಭಾರತ (India), ಇಂದು ಫಿಲಿಪ್ಪೀನ್ಸ್‌ಗೆ (Philippines) ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳ (BrahMos missiles, BrahMos supersonic cruise missiles) ಭೂ ಆವೃತ್ತಿಯ ನಾಲ್ಕನೇ ʼಬ್ಯಾಟರಿ’ಯನ್ನು (Battery) ಕಳುಹಿಸಲು ಮುಂದಾಗಿದೆ.

ಬ್ರಹ್ಮೋಸ್ ಕ್ಷಿಪಣಿಗಳ ಮೂರು ‘ಬ್ಯಾಟರಿ’ಗಳನ್ನು ಈಗಾಗಲೇ ದ್ವೀಪ ರಾಷ್ಟ್ರಕ್ಕೆ ಹಸ್ತಾಂತರಿಸಲಾಗಿದೆ. 2022ರಲ್ಲಿ ಎರಡು ಮಿತ್ರರಾಷ್ಟ್ರಗಳು ಸಹಿ ಮಾಡಿದ USD 375 ಮಿಲಿಯನ್ ಒಪ್ಪಂದದ ಭಾಗವಾಗಿದೆ ಇದು. ಪ್ರತಿ ಬ್ಯಾಟರಿಯೂ ನಾಲ್ಕು ಲಾಂಚರ್‌ಗಳನ್ನು ಒಳಗೊಂಡಿದೆ. ಪ್ರತಿ ಲಾಂಚರ್‌ನಲ್ಲೂ 290 ಕಿಮೀ ವ್ಯಾಪ್ತಿಯ ಮೂರು ಕ್ಷಿಪಣಿಗಳಿರುತ್ತವೆ. ಈ ಕ್ಷಿಪಣಿ ಸೂಪರ್‌ಸಾನಿಕ್ ವೇಗವನ್ನು ಹೊಂದಿದ್ದು, ಇದನ್ನು ಭೂಮಿ ಅಥವಾ ಹಡಗು ಆಧಾರಿತ ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್ (BMDs) ವ್ಯವಸ್ಥೆಗಳಿಂದ ಪ್ರತಿಬಂಧಿಸುವುದು ತುಂಬಾ ಕಷ್ಟ.

ಬ್ರಹ್ಮೋಸ್‌ನ ಫಿಲಿಪೈನ್ಸ್ ಒಪ್ಪಂದದ ಮೂಲಕ, 2023-2024ರಲ್ಲಿ ಭಾರತದ ರಕ್ಷಣಾ ರಫ್ತು ₹21083 ಕೋಟಿಗಳನ್ನು ಮುಟ್ಟಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇ.32.5ರಷ್ಟು ಬೃಹತ್ ಬೆಳವಣಿಗೆಯಾಗಿದೆ. ಬ್ರಹ್ಮೋಸ್ ದಾಖಲೆ ಮಾರಾಟ ಕಂಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಭಾರತವು ಈ ಸೂಪರ್‌ಸಾನಿಕ್ ಕ್ಷಿಪಣಿಗಳ ಹೆಚ್ಚಿನ ಆರ್ಡರ್‌ಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ.

ಕ್ಷಿಪಣಿ ರಫ್ತಿನಲ್ಲಿ ಭಾರತವು ಸಂತುಷ್ಟಿಯ ಮಟ್ಟವನ್ನು ಮುಟ್ಟಿದೆ. ನರೇಂದ್ರ ಮೋದಿ ಸರ್ಕಾರ ಇದೀಗ ಮುಂಬೈನಲ್ಲಿ ಸ್ಕಾರ್ಪೀನ್-ಕ್ಲಾಸ್ ಡೀಸೆಲ್-ಎಲೆಕ್ಟ್ರಿಕ್ ಜಲಾಂತರ್ಗಾಮಿ ನೌಕೆಗಳನ್ನು ತಯಾರಿಸಲು ಮತ್ತು ಇಂಡೋನೇಷ್ಯಾ, ಮಲೇಷ್ಯಾ ಮುಂತಾದ ಮೂರನೇ ದೇಶಗಳಿಗೆ ಸರಬರಾಜು ಮಾಡಲು ಮಜಗಾಂವ್ ಡಾಕ್‌ಯಾರ್ಡ್ಸ್ ಲಿಮಿಟೆಡ್ ಮತ್ತು ಫ್ರೆಂಚ್ ನೇವಲ್ ಗ್ರೂಪ್ ನಡುವೆ ಜಂಟಿ ಉದ್ಯಮವನ್ನು ಸ್ಥಾಪಿಸಲು ಮುಂದಾಗಿದೆ.

ಪ್ರಸ್ತುತ ನಮ್ಮ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಅನಿಲ್ ಚೌಹಾನ್ ಅವರು ಫ್ರಾನ್ಸ್‌ ಸರ್ಕಾರದೊಂದಿಗೆ ಸಂವಹನ ನಡೆಸಲು ಫ್ರಾನ್ಸ್‌ಗೆ ಭೇಟಿ ನೀಡಿದ್ದು, ಭಾರತೀಯ ಮತ್ತು ಫ್ರೆಂಚ್ ರಕ್ಷಣಾ ವ್ಯವಹಾರ ಸರಪಳಿಯನ್ನು ಇನ್ನಷ್ಟು ಗಟ್ಟಿಗೊಳಿಸಲಿದ್ದಾರೆ. ದ್ವಿಪಕ್ಷೀಯ ರಕ್ಷಣಾ ಸಹಕಾರವನ್ನು ಗಾಢಗೊಳಿಸುವ ಪ್ರಯತ್ನದಲ್ಲಿ ಭಾರತೀಯ ಸೇನಾ ಮುಖ್ಯಸ್ಥರು ಟೌಲೌಸ್‌ನಲ್ಲಿರುವ ಫ್ರೆಂಚ್ ಜಲಾಂತರ್ಗಾಮಿ ನೆಲೆಗೆ ಭೇಟಿ ನೀಡಲಿದ್ದಾರೆ. ಭಾರತಕ್ಕೆ ಇನ್ನೂ ಮೂರು ಹೆಚ್ಚುವರಿ ಕಲ್ವೇರಿ (Kalveri- ಮಾರ್ಪಡಿಸಿದ ಸ್ಕಾರ್ಪೀನ್) ದರ್ಜೆಯ ಜಲಾಂತರ್ಗಾಮಿ ನೌಕೆಗಳ ನಿರ್ಮಾಣಕ್ಕಾಗಿ ಫ್ರೆಂಚ್ ನೇವಲ್ ಗ್ರೂಪ್ ಈಗಾಗಲೇ MDLನೊಂದಿಗೆ ಮಾತುಕತೆ ನಡೆಸುತ್ತಿದೆ.

P-5 ಶಕ್ತಿಗಳು ಪರಮಾಣು-ಚಾಲಿತ ಸಾಂಪ್ರದಾಯಿಕ ಸಶಸ್ತ್ರ ದಾಳಿ ಜಲಾಂತರ್ಗಾಮಿ ನೌಕೆಗಳನ್ನು (SSN) ವೈರಿ ಸೈನ್ಯದ ತಡೆಗಟ್ಟುವಿಕೆಗೆ ಬಳಸುತ್ತಿರುವಾಗ, ಭಾರತವು ಇನ್ನೂ ತನ್ನ ಆಯ್ಕೆಗಳನ್ನು ಮೌಲ್ಯಮಾಪನ ಮಾಡುತ್ತಿದೆ. ದೀರ್ಘಾವಧಿಯ ಕಡಲ ಭದ್ರತೆಗಾಗಿ ಎಸ್‌ಎಸ್‌ಎನ್‌ಗಳನ್ನು ತಯಾರಿಸುವುದು ಅಥವಾ ಸಾಂಪ್ರದಾಯಿಕ ಡೀಸೆಲ್-ಎಲೆಕ್ಟ್ರಿಕ್ ಜಲಾಂತರ್ಗಾಮಿ ನೌಕೆಗಳನ್ನು ಹೊಂದುವುದು ಆಯ್ಕೆಗಳಾಗಿವೆ.

ಇದನ್ನೂ ಓದಿ: BrahMos Missiles: ನೌಕಾಪಡೆಗೆ ಭೀಮಬಲ; 200 ಬ್ರಹ್ಮೋಸ್‌ ಕ್ಷಿಪಣಿ ಖರೀದಿಗೆ ಕೇಂದ್ರ ಅಸ್ತು

Continue Reading
Advertisement
Lok Sabha Election 2024 BJP released Pick pocket Congress poster
Lok Sabha Election 20246 mins ago

LoK Sabha Election 2024: ಚೊಂಬು ಆರೋಪಕ್ಕೆ ಚಿಪ್ಪು ಕೊಟ್ಟ ಬಿಜೆಪಿ! ಪಿಕ್‌ ಪಾಕೆಟ್‌ ಕಾಂಗ್ರೆಸ್‌ ಪೋಸ್ಟರ್‌ ಬಿಡುಗಡೆ!

Match Fixing
ಕ್ರೀಡೆ8 mins ago

Match Fixing : ಇರ್ಫಾನ್​ ಪಠಾಣ್​, ಸುರೇಶ್ ರೈನಾ ಪಾಲ್ಗೊಂಡಿದ್ದ ​ ಕ್ರಿಕೆಟ್ ಲೀಗ್​ನಲ್ಲಿ ಮ್ಯಾಚ್​ ಫಿಕ್ಸಿಂಗ್?

Ballari lok sabha constituency congress candidate e Tukaram election campaign in Ballari city
ಬಳ್ಳಾರಿ10 mins ago

Lok Sabha Election 2024: ಪಂಚ ಗ್ಯಾರಂಟಿ ಜಾರಿ ಮಾಡಿ ನುಡಿದಂತೆ ನಡೆದಿದ್ದು ಕಾಂಗ್ರೆಸ್ ಸರ್ಕಾರ: ಈ.ತುಕಾರಾಂ

Murugha Seer
ಕರ್ನಾಟಕ13 mins ago

Murugha Seer: ಪೋಕ್ಸೊ ಕೇಸ್‌ನಲ್ಲಿ ಮುರುಘಾ ಶ್ರೀಗೆ ಮತ್ತೆ ಸಂಕಷ್ಟ; 4 ತಿಂಗಳು ಜೈಲಿಗೆ

T20 World Cup 2024
ಕ್ರಿಕೆಟ್23 mins ago

T20 World Cup 2024: ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟಿಸಲು ಮುಹೂರ್ತ ಫಿಕ್ಸ್‌​; ಈ ದಿನ ಘೋಷಣೆ

BrahMos Missiles
ಪ್ರಮುಖ ಸುದ್ದಿ31 mins ago

BrahMos Missiles: ಫಿಲಿಪ್ಪೀನ್ಸ್‌ಗೆ ನಾಲ್ಕನೇ ಬ್ರಹ್ಮೋಸ್‌ ಕ್ಷಿಪಣಿ ಬ್ಯಾಟರಿ ಕಳುಹಿಸಲು ಭಾರತ ಸಜ್ಜು

Reliance Jio
ವಾಣಿಜ್ಯ35 mins ago

Reliance Jio: ಡಾಟಾ ಟ್ರಾಫಿಕ್‌; ವಿಶ್ವದ ಅತಿದೊಡ್ಡ ಮೊಬೈಲ್ ಆಪರೇಟರ್ ಆಗಿ ಹೊರ ಹೊಮ್ಮಿದ ರಿಲಯನ್ಸ್ ಜಿಯೊ

CM Siddaramaiah Congress protests against Centre Go back to Modi and Amit Shah announced
ಕರ್ನಾಟಕ51 mins ago

CM Siddaramaiah: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ಮೋದಿ, ಅಮಿತ್ ಶಾಗೆ ಗೋ ಬ್ಯಾಕ್‌ ಘೋಷಣೆ

Mahesh Babu
ಕ್ರಿಕೆಟ್1 hour ago

IPL 2024: ಸನ್​ರೈಸರ್ಸ್​ ತಂಡದ ಆಟಗಾರರನ್ನು ಭೇಟಿ ಮಾಡಿದ ನಟ ಮಹೇಶ್‌ ಬಾಬು

arvind kejriwal in tihar jail
ದೇಶ1 hour ago

Arvind Kejriwal: ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು23 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ24 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌