Cauvery Dispute : ರಾಜ್ಯಕ್ಕೆ ಮತ್ತೆ ಶಾಕ್‌, 15 ದಿನ 2600 ಕ್ಯೂಸೆಕ್‌ ನೀರು ಹರಿಸಲು CWRC ಶಿಫಾರಸು - Vistara News

ಕರ್ನಾಟಕ

Cauvery Dispute : ರಾಜ್ಯಕ್ಕೆ ಮತ್ತೆ ಶಾಕ್‌, 15 ದಿನ 2600 ಕ್ಯೂಸೆಕ್‌ ನೀರು ಹರಿಸಲು CWRC ಶಿಫಾರಸು

Cauvery Dispute : ಕಾವೇರಿ ನೀರು ನಿಯಂತ್ರಣ ಸಮಿತಿಯು ರಾಜ್ಯಕ್ಕೆ ಮತ್ತೆ ಬರೆ ಎಳೆದಿದೆ. ಪ್ರತಿ ದಿನ 2600 ಕ್ಯೂಸೆಕ್‌ ನೀರು ಬಿಡುವಂತೆ ಸೂಚಿಸಿದೆ.

VISTARANEWS.COM


on

Cauvery water CWRC order
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕಾವೇರಿ ಜಲ ವಿವಾದದಲ್ಲಿ (Cauvery Dispute) ರಾಜ್ಯಕ್ಕೆ ಮತ್ತೆ ಹೊಡೆತ ಬಿದ್ದಿದೆ. ರಾಜ್ಯದಲ್ಲಿ ನೀರಿಗೆ ಹಾಹಾಕಾರ ಕಾಣಿಸಿಕೊಂಡಿರುವ ನಡುವೆಯೇ ಕಾವೇರಿ ನೀರು ನಿಯಂತ್ರಣ ಸಮಿತಿಯು (Cauvery Water regulation Committee) ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಮತ್ತೆ 2600 ಕ್ಯೂಸೆಕ್ ನೀರು ಬಿಡಲು ಶಿಫಾರಸು ಮಾಡಿದೆ. ಸೋಮವಾರ ದಿಲ್ಲಿಯನ್ನು ಕೇಂದ್ರವಾಗಿಟ್ಟುಕೊಂಡು ನಡೆದ ವರ್ಚ್ಯುವಲ್‌ ಸಭೆಯಲ್ಲಿ ಸಾಕಷ್ಟು ಚರ್ಚೆಗಳ ಬಳಿಕ ಈ ತೀರ್ಮಾನ ಪ್ರಕಟಿಸಲಾಗಿದೆ. ಪ್ರತಿ ಬಾರಿ ಸಿಡಬ್ಲ್ಯುಆರ್‌ಸಿ ಸಭೆ ನಡೆದಾಗಲೂ ನೀರು ಬಿಡುಗಡೆ ಮಾಡುವಂತೆ ರಾಜ್ಯಕ್ಕೆ ಆದೇಶ ನೀಡುವುದು ಈಗ ಕಾಯಂ ಆಗಿದೆ. ಈ ಬಾರಿ ನೀರಿನ ಪ್ರಮಾಣವನ್ನು 2600 ಕ್ಯೂಸೆಕ್‌ಗೆ ಇಳಿಸಿದೆ ಎನ್ನುವುದೇ ಹೊಸ ಸಂಗತಿ.

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿ ಕಾವೇರಿ ನೀರು ನಿಯಂತ್ರಣ ಸಮಿತಿ ನಡೆಸಿದ 89ನೇ ಸಭೆ ಇದಾಗಿತ್ತು. ಕಳೆದ ಐದೂ ಸಭೆಗಳಲ್ಲಿ ಸಮಿತಿಯು ನಿರಂತರವಾಗಿ ಕರ್ನಾಟಕಕ್ಕೆ 15 ದಿನಗಳ ಕಾಲ ಪ್ರತಿ ದಿನವೂ 3000 ಕ್ಯೂಸೆಕ್‌ ನೀರು ಬಿಡುಗಡೆ ಮಾಡಬೇಕು ಎಂದು ಸೂಚಿಸುತ್ತಲೇ ಬಂದಿದೆ. ತಮಿಳುನಾಡು ಪ್ರತಿ ಬಾರಿಯೂ ಪ್ರತಿದಿನ 12500 ಕ್ಯೂಸೆಕ್‌ ನೀರಿಗೆ ಬೇಡಿಕೆ ಇಡುವುದು, ಕರ್ನಾಟಕ ಸರ್ಕಾರ ಬರದ ಕಾರಣ ನೀಡಿ ನಿರಾಕರಿಸುವುದು, ಬಳಿಕ ಸಿಡಬ್ಲ್ಯೂಆರ್‌ಸಿ 3000 ಕ್ಯೂಸೆಕ್‌ ನೀರು ಬಿಡುಗಡೆ ಮಾಡುವಂತೆ ಸೂಚಿಸುವುದು ಸಾಮಾನ್ಯ ಪ್ರಕ್ರಿಯೆ ಎಂಬಂತಾಗಿದೆ.

ಈ ಬಾರಿಯೂ ಅದೇ ರೀತಿಯ ವಾದ ವಿವಾದಗಳು ನಡೆದು ಅಂತಿಮವಾಗಿ ಸಮಿತಿಯು ಮುಂದಿನ 15 ದಿನಗಳ ಕಾಲ 2500 ಕ್ಯೂಸೆಕ್‌ ನೀರು ಬಿಡುಗಡೆಗೆ ಸೂಚನೆ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management Authority – CWMA) ಸಭೆ ನಡೆಯಲಿದ್ದು, ಅದರಲ್ಲಿ ಈ ಶಿಫಾರಸಿಗೆ ಸಂಬಂಧಿಸಿ ಚರ್ಚೆ ನಡೆದು ಅಂತಿಮ ತೀರ್ಮಾನ ಹೊರಬೀಳಲಿದೆ. ಹಿಂದಿನ ಎಲ್ಲ ಸಭೆಗಳಲ್ಲೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವೂ CWRC ತೀರ್ಮಾನವನ್ನು ಎತ್ತಿ ಹಿಡಿದಿದೆ.

ಸಿಡಬ್ಲ್ಯುಆರ್‌ಸಿ ಮುಂದೆ ತಮಿಳುನಾಡಿನ ವಾದ ಏನಿತ್ತು?

ಕಾವೇರಿ ನೀರು ನಿಯಂತ್ರಣ ಸಮಿತಿಯ ಮುಂದೆ ವಾದ ಮಂಡಿಸಿದ ತಮಿಳುನಾಡು ಮುಂದಿನ 15 ದಿನಗಳ ಕಾಲ ಪ್ರತಿದಿನ 13000 ಕ್ಯೂಸೆಕ್‌ ನೀರು ಬಿಡಲು ಆದೇಶ ನೀಡಬೇಕು ಎಂದು ಕೇಳಿಕೊಂಡಿತ್ತು. ಅಂದರೆ ಒಟ್ಟು ಪ್ರಮಾಣ 16.90 ಟಿಎಂಸಿ ಆಗುತ್ತದೆ.

ಕರ್ನಾಟಕ ಹೇಳಿದ್ದೇನು?

ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಕರ್ನಾಟಕದ ಜಲಾಶಯಗಳಿಗೆ ನೀರಿನ ಒಳಹರಿವು ಶೂನ್ಯ ಮಟ್ಟಕ್ಕೆ ಇಳಿದಿದೆ. ಹೀಗಾಗಿ ನೀರು ಬಿಡುವುದು ಸಾಧ್ಯವೇ ಇಲ್ಲ ಎಂದು ಕರ್ನಾಟಕ ಹೇಳಿದೆ. ಆದರೆ ಸಮಿತಿ ಅಂತಿಮವಾಗಿ ನವೆಂಬರ್‌ 1ರಿಂದ ನವೆಂಬರ್‌ 15ರವರೆಗೆ ಪ್ರತಿ ದಿನವೂ 2600 ಕ್ಯೂಸೆಕ್‌ ನೀರು ಬಿಡುವಂತೆ ಸೂಚನೆ ನೀಡಿದೆ.

ಆಗಸ್ಟ್‌ 26ರಿಂದ ನಿರಂತರ ಆದೇಶ

ಕಾವೇರಿ ನೀರು ನಿಯಂತ್ರಣ ಸಮಿತಿಯು ಆಗಸ್ಟ್‌ 26ರಂದು ನೀಡಿದ ಅದೇಶದಲ್ಲಿ ಆಗಸ್ಟ್‌ 29ರಿಂದ 15 ದಿನಗಳ ಕಾಲ 5000 ಕ್ಯೂಸೆಕ್‌ ನೀರು ಬಿಡಲು ಸೂಚಿಸಿತ್ತು. ಬಳಿಕ ಸೆ. 12ರಂದು ಮತ್ತೆ ಐದು ಸಾವಿರ ಕ್ಯೂಸೆಕ್‌ ನೀರು ಬಿಡಲು ಸೂಚಿಸಿತ್ತು. ಸೆಪ್ಟೆಂಬರ್‌ 26ರಂದು ಇದೇ ಆದೇಶವನ್ನು ರಿಪೀಟ್‌ ಮಾಡಿತ್ತು. ಅಕ್ಟೋಬರ್‌ 12ರಂದು ನೀಡಿದ ಆದೇಶದಲ್ಲಿ ಈ ಪ್ರಮಾಣವನ್ನು 3000ಕ್ಕೆ ಇಳಿಸಿತ್ತು. ಐದನೇ ಮೀಟಿಂಗ್‌ನಲ್ಲಿ ಹರಿಸಬೇಕಾದ ನೀರಿನ ಪ್ರಮಾಣವನ್ನು 2600 ಕ್ಯೂಸೆಕ್‌ಗೆ ಇಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Yuva Rajkumar: ಕಾಂತಾರ ಕ್ವೀನ್‌ ಸಪ್ತಮಿ ಗೌಡ ಜತೆ ಯುವ ರಾಜ್‌ಕುಮಾರ್‌ ಸಂಬಂಧ ಇದೆ ಎಂದು ಪತ್ನಿ ಶ್ರೀದೇವಿ ಆರೋಪ ಮಾಡಿದ್ದರು. ಇದೀಗ ಶ್ರೀದೇವಿ ವಿರುದ್ಧ ತಿರುಗಿ ಬಿದ್ದಿರುವ ಸಪ್ತಮಿ ಗೌಡ ಕುಟುಂಬಸ್ಥರು ಮಾನಹಾನಿ ಕೇಸ್‌ ದಾಖಲಿಸಲು ಮುಂದಾಗಿದ್ದಾರೆ.

VISTARANEWS.COM


on

By

Saptami Gowda
Koo

ಬೆಂಗಳೂರು: ನಟ ಯುವ ರಾಜ್‌ಕುಮಾರ್‌ (Yuva Rajkumar) ನಟಿ ಸಪ್ತಮಿ ಗೌಡ (Sapthami Gowda) ಜತೆ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಯುವ ಪತ್ನಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದರು. ಇದರ ಬೆನ್ನಲ್ಲೇ ಶ್ರೀದೇವಿ ವಿರುದ್ಧ ಕಾನೂನು ಹೋರಾಟಕ್ಕೆ ಸಪ್ತಮಿ ಗೌಡ ಕುಟುಂಬ ನಿರ್ಧರಿಸಿದೆ.

ಯುವ ರಾಜ್‌ಕುಮಾರ್ ಪರ ವಕೀಲ ನೀಡಿದ ನೋಟೀಸ್‌ಗೆ ತಿರುಗೇಟು ನೀಡಿದ ಶ್ರೀದೇವಿ, ಯುವ ರಾಜಕುಮಾರ್ ಹಾಗೂ ಸಪ್ತಮಿ ಗೌಡ ರೂಮ್‌ನಲ್ಲಿ ಇದ್ದರು ಎಂದು ಉಲ್ಲೇಖಿಸಿದ್ದರು. ಹೀಗಾಗಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್ ದಾಖಲಿಸುವ ಬಗ್ಗೆ ಸಪ್ತಮಿ ಗೌಡ ಕುಟುಂಬಸ್ಥರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಸಪ್ತಮಿ ಗೌಡ ತಂದೆ ಎಸ್‌ಕೆ ಉಮೇಶ್‌ ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

ನೋಟಿಸ್‌ನಲ್ಲಿ ಸುಳ್ಳು ಆರೋಪ- ಶ್ರೀದೇವಿ ಪರ ವಕೀಲ

ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂದು ಯುವ ಪರ ವಕೀಲ ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೆ ಶ್ರೀದೇವಿ ಕ್ಯಾರೆಕ್ಟರ್ ಬಗ್ಗೆ ಏನೇನೋ ಆರೋಪ ಮಾಡಿದ್ದಾರೆ ಆದರೆ ಅದೆಲ್ಲವೂ ಸುಳ್ಳು ಎಂದು ಶ್ರೀದೇವಿ ಪರ ವಕೀಲ ಪಿ.ಭಾಸ್ಕರ್ ರಾವ್ ಪ್ರತಿಕ್ರಿಯಿಸಿದ್ದಾರೆ.

ಯುವ ರಾಜ್‌ಕುಮಾರ್ ನೋಟಿಸ್‌ಗೆ ಉತ್ತರ ಕೊಡಬೇಕಿತ್ತು. ಆದರೆ ಶ್ರೀದೇವಿ ಮೈಸೂರಿಗೆ ಬಂದ ಮೇಲೆ ಮಾತನಾಡಿ ರಿಪ್ಲೈ ಮಾಡುತ್ತೇನೆ. ನೋಟಿಸ್‌ನಲ್ಲಿ ಸುಳ್ಳು ಆರೋಪ ಮಾಡಿದ್ದಾರೆ. ಅದೆಲ್ಲವನ್ನೂ ಸುಳ್ಳು ಎಂದು ಸಾಬೀತು ಮಾಡಲು ಅವಕಾಶವಿದೆ. ಹಣಕಾಸಿನ ವಹಿವಾಟು ಬೇರೆ, ದಾಂಪತ್ಯ ಬೇರೆ, ಇದೊಂದು ವೈಯುಕ್ತಿಕವಾದ ಪ್ರಕರಣವಾಗಿದೆ. ಯುವ ರಾಜ್ ಕುಮಾರ್ ವಕೀಲರು ಬಹಿರಂಗವಾಗಿ ಮಾತನಾಡಬಾರದಿತ್ತು ಎಂದು ತಿಳಿಸಿದ್ದಾರೆ.

ಏನಿದು ಪ್ರಕರಣ?

ಬೆಂಗಳೂರು: ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪ- ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದಾರೆ. ಇನ್ನು, ನಟನ ಲೀಗಲ್‌ ನೋಟಿಸ್‌ಗೆ ಉತ್ತರಿಸಿದ ಶ್ರೀದೇವಿ ಭೈರಪ್ಪ, “ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ (Sapthami Gowda) ಜತೆ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಆರೋಪಿಸಿದ್ದಾರೆ. ಆ ಮೂಲಕ ಡಿವೋರ್ಸ್‌ ಪ್ರಕರಣವೀಗ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಹೌದು, ನಟ ಯುವ ರಾಜ್‌ಕುಮಾರ್‌ ಕಳುಹಿಸಿದ ಲೀಗಲ್‌ ನೋಟಿಸ್‌ಗೆ ಶ್ರೀದೇವಿ ಭೈರಪ್ಪ ಮರುತ್ತರ ನೀಡಿದ್ದು, ಹಲವು ಆರೋಪಗಳನ್ನು ಮಾಡಿದ್ದಾರೆ. ಇದೇ ವರ್ಷದ ಮೇ 30ರಂದು ಶ್ರೀದೇವಿ ಭೈರಪ್ಪ ಅವರು ರಿಪ್ಲೈ ನೋಟಿಸ್‌ ನೀಡಿದ್ದಾರೆ. “ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್‌ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು. ಪ್ರೀತಿಸಿ ಮದುವೆಯಾದ ಯುವ ರಾಜ್‌ಕುಮಾರ್‌, ಬಳಿಕ ಸಪ್ತಮಿ ಗೌಡ ಹಿಂದೆ ಬಿದ್ದಿದ್ದಾರೆ” ಎಂಬುದಾಗಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದಾರೆ.

“ನಾನು ಹಾಗೂ ಯುವ ರಾಜ್‌ಕುಮಾರ್‌ 5 ವರ್ಷ ಪ್ರೀತಿಸಿದ್ದೆವು. 2019ರಲ್ಲಿ ಹಿಂದು ಸಂಪ್ರದಾಯದಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಮಾಡಿಕೊಂಡೆವು. ಮದುವೆಗೂ ಮುಂಚೆ ಯುವ ರಾಜ್‌ಕುಮಾರ್‌ ನಿರುದ್ಯೋಗಿ ಆಗಿದ್ದರು. ಅವರಿಗೆ ಕರಿಯರ್‌ ಬಗ್ಗೆ ಫೋಕಸ್‌ ಇರಲಿಲ್ಲ. ಅವರ ಕುಟುಂಬವು ಕೂಡ ಆರ್ಥಿಕವಾಗಿ ಸ್ಟೇಬಲ್‌ ಇರಲಿಲ್ಲ. ಇದಾದ ಬಳಿಕ ಯುವ ರಾಜ್‌ಕುಮಾರ್‌ ಸಪ್ತಮಿ ಗೌಡ ಹಿಂದೆ ಬಿದ್ದರು. ನಟಿಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಸಪ್ತಮಿ ಗೌಡ ಜತೆ ಹೋಟೆಲ್‌ನಲ್ಲಿ ಇರುವಾಗಲೇ ಯುವ ಸಿಕ್ಕಿಬಿದ್ದಿದ್ದರು. ಸಂಬಂಧ ಗೊತ್ತಾದ ಮೇಲೆ ನನ್ನ ಮೇಲೆ ಆರೋಪ ಮಾಡಲು ಶುರುವಿಟ್ಟುಕೊಂಡರು” ಎಂಬುದಾಗಿ ಶ್ರೀದೇವಿ ಆರೋಪಿಸಿದ್ದಾರೆ.

ಲೀಗಲ್‌ ನೋಟಿಸ್‌ಗೆ ಶ್ರೀದೇವಿ ರಿಪ್ಲೈ

ಯುವ ಪರ ವಕೀಲರು ಹೇಳಿದ್ದೇನು?

ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. “ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Darshan: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದವನ ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ಯಾರು ಈ ಪವಿತ್ರಾ?

Actor Darshan: ದರ್ಶನ್‌ ಅವರಿಗೆ ಆತ್ಮೀಯರಾಗಿರುವ ನಟಿ ಪವಿತ್ರಾ ಗೌಡ ಅವರ ಫೋಟೊಗಳಿಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದ ರೇಣುಕಾಸ್ವಾಮಿಯನ್ನು ಕೆಲವು ದಿನಗಳ ಹಿಂದೆ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ದರ್ಶನ್‌ ಭಾಗಿಯಾಗಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್‌ ಮಾಡಲಾಗಿದೆ. ಹಾಗಾದರೆ ಯಾರು ಈ ಪವಿತ್ರಾ ಗೌಡ? ಇಲ್ಲಿದೆ ಉತ್ತರ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪೊಲೀಸರು ಸ್ಯಾಂಡಲ್‌ವುಡ್‌ ನಟ ದರ್ಶನ್‌ (Actor Darshan) ಅವರನ್ನು ಬಂಧಿಸಿದ್ದಾರೆ. ದರ್ಶನ್‌ ಅವರಿಗೆ ಆತ್ಮೀಯರಾಗಿರುವ ನಟಿ ಪವಿತ್ರಾ ಗೌಡ ಅವರ ಫೋಟೊಗಳಿಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದ ರೇಣುಕಾಸ್ವಾಮಿಯನ್ನು ಕೆಲವು ದಿನಗಳ ಹಿಂದೆ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ದರ್ಶನ್‌ ಭಾಗಿಯಾಗಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಹಾಗಾದರೆ ಪವಿತ್ರಾ ಗೌಡ ಯಾರು?

ಫ್ಯಾಷನ್‌ ಡಿಸೈನರ್‌ ಎಂದೆನಿಸಿಕೊಂಡಿರುವ ಪವಿತ್ರಗೌಡ ಅವರು ದರ್ಶನ್‌ ಜತೆ ಆತ್ಮೀಯರಾಗಿದ್ದಾರೆ. ಇವರು ಬೆಂಗಳೂರಿನ ಆರ್.ಆರ್. ನಗರದಲ್ಲಿ ʼರೆಡ್ ಕಾರ್ಪೆಟ್ʼ ಹೆಸರಿನಲ್ಲಿ ಬೋಟಿಕ್ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಿಂದ ದರ್ಶನ್ ಜತೆ ಸ್ನೇಹ ಸಂಬಂಧದಲ್ಲಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಅವರು ದರ್ಶನ್‌ ಜತೆ ಇರುವ ಹಲವು ಫೋಟೊಗಳ ರೀಲ್ಸ್‌ ಹಂಚಿಕೊಂಡು ʻನಮ್ಮ ಸಂಬಂಧಕ್ಕೆ 10 ವರ್ಷಗಳಾಗಿವೆʼ ಎಂದು ಕ್ಯಾಪ್ಷನ್‌ ಕೊಟ್ಟು ಶೇರ್‌ ಮಾಡಿಕೊಂಡಿದ್ದರು. ಇದಾದ ಬಳಿಕ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದರು. ಈ ವಿಚಾರ ಭಾರೀ ಸದ್ದು ಮಾಡಿತ್ತು.

ನಟಿಯೂ ಹೌದು

ಪವಿತ್ರಾ ಗೌಡ ಅವರು ಮಾಡೆಲ್‌ ಹಾಗೂ ನಟಿಯೂ ಹೌದು. ʼಅಗಮ್ಯಾʼ, ʼಛತ್ರಿಗಳು ಸಾರ್ ಛತ್ರಿಗಳುʼ, ʼಸಾಗುವ ದಾರಿʼ, ʼಪ್ರೀತಿ ಕಿತಾಬುʼ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಮುಂಚೆ ಪವಿತ್ರಾ ಅವರು ದರ್ಶನ್‌ ಅವರ ತಾಯಿ ಹಾಗೂ ಸಹೋದರಿ ಜತೆಗಿನ ಫೋಟೊವನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿದ್ದವು. ಇದಾದ ಮೇಲೆ ದರ್ಶನ್‌ ಸಿನಿಮಾ ಸೆಟ್‌ಗಳಲ್ಲಿ ಪವಿತ್ರಾ ಅವರು ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದೂ ಇದೆ. ಕಳೆದ ವರ್ಷ ದರ್ಶನ್‌ ಅವರ ಜನುಮದಿನ ನಟಿ ಮೇಘಾ ಶೆಟ್ಟಿ ಹಂಚಿಕೊಂಡಿದ್ದ ಚಿತ್ರದಲ್ಲಿ ದರ್ಶನ್ ಜತೆಗೆ ಪವಿತ್ರಾ ಕೂಡ ಇದ್ದರು. ಈ ವೇಳೆ ಮೊದಲ ಬಾರಿಗೆ ಇದರ ವಿರುದ್ಧ ಬಹಿರಂಗವಾಗಿ ಧ್ವನಿ ಎತ್ತಿದ್ದ ದರ್ಶನ್​ ಅವರ ಪತ್ನಿ ವಿಜಯಲಕ್ಷ್ಮೀ ಅವರು ಮೇಘಾ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಇದಾದ ಬಳಿಕ ಮೇಘಾ ಶೆಟ್ಟಿ ಫೋಟೊ ಡಿಲಿಟ್‌ ಮಾಡಿದ್ದರು.

ಪವಿತ್ರಾ ಗೌಡ ಅವರಿಗೆ ಖುಷಿ ಎಂಬ ಮಗಳಿದ್ದಾಳೆ. ಕೆಲ ತಿಂಗಳ ಹಿಂದಷ್ಟೆ ಪುತ್ರಿ ಜತೆ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ವಿಡಿಯೋ ಹಂಚಿಕೊಂಡಿದ್ದರು.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

ಯಾರು ಈ ರೇಣುಕಾಸ್ವಾಮಿ?

ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರು ನಟಿ ಪವಿತ್ರಾ ಗೌಡ ಅವರಿಗೆ ಮೆಸೇಜ್‌ ಮಾಡಿದ್ದರು. ಇದರಿಂದ ಕುಪಿತಗೊಂಡಿದ್ದ ದರ್ಶನ್‌ ಅವರು ಹಲವರೊಂದಿಗೆ ತೆರಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿತ್ತು. ಕೊಲೆ ಕುರಿತು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ತಿಂಗಳ ಹಿಂದೆ ಹತ್ಯೆ ಮಾಡಲಾಗಿತ್ತು.

Continue Reading

ಪ್ರಮುಖ ಸುದ್ದಿ

Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

Actor Darshan: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬುವರ ಮೇಲೆ ಎರಡು ತಿಂಗಳ ಹಿಂದೆ ದರ್ಶನ್‌ ಸೇರಿ ಹಲವರು ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ.

VISTARANEWS.COM


on

Actor Darshan
Koo

ಮೈಸೂರು: ವ್ಯಕ್ತಿಯೊಬ್ಬರ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಟ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನಲ್ಲಿರುವ (Mysore) ದರ್ಶನ್‌ ಅವರ ತೋಟದ ಮನೆಯಲ್ಲಿ ಬೆಂಗಳೂರಿನ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ. ನಟನನ್ನು ಬಂಧಿಸಿರುವ (Actor Darshan Arrested) ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಜತೆಗೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬುವರ ಮೇಲೆ ಎರಡು ತಿಂಗಳ ಹಿಂದೆ ದರ್ಶನ್‌ ಸೇರಿ ಹಲವರು ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಟ ದರ್ಶನ್‌ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್‌ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್‌ ಮಾಹಿತಿ ನೀಡಿದ್ದು, “ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ದರ್ಶನ್‌ ಅವರನ್ನು ಕರೆತರಲಾಗಿದೆ” ಎಂದು ತಿಳಿಸಿದ್ದಾರೆ.

ಹತ್ಯೆಗೀಡಾದ ಯುವಕ.

ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರು ನಟಿ ಪವಿತ್ರಾ ಗೌಡ ಅವರಿಗೆ ಮೆಸೇಜ್‌ ಮಾಡಿದ್ದರು. ಇದರಿಂದ ಕುಪಿತಗೊಂಡಿದ್ದ ದರ್ಶನ್‌ ಅವರು ಹಲವರೊಂದಿಗೆ ತೆರಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿತ್ತು. ಕೊಲೆ ಕುರಿತು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ತಿಂಗಳ ಹಿಂದೆ ಹತ್ಯೆ ಮಾಡಲಾಗಿತ್ತು.

ಕೊಲೆ ಕೇಸ್‌ನಲ್ಲಿ ದಾಖಲಾಗಿದ್ದ ಎಫ್‌ಐಆರ್

ಬೆಂಗಳೂರಿನ ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ವ್ಯಕ್ತಿಯನ್ನು ಹತ್ಯೆ ಮಾಡಿ ರಾಜಕಾಲುವೆ ಬಳಿ ಬಿಸಾಡಲಾಗಿತ್ತು. ಶವವನ್ನು ನೋಡಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಶವ ರೇಣುಕಾಸ್ವಾಮಿ ಅವರದ್ದೇ ಎಂದು ಗುರುತಿಸಿದ್ದರು. ಇದಾದ ಬಳಿಕ ತನಿಖೆ ಕೈಗೊಂಡಿದ್ದರು. ತನಿಖೆ ನಡೆಸಿದ ಪೊಲೀಸರು ದರ್ಶನ್‌ ಅವರನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ದರ್ಶನ್‌ ಅವರ ಬೌನ್ಸರ್‌ಗಳನ್ನು ಕೂಡ ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Continue Reading

ಪ್ರಮುಖ ಸುದ್ದಿ

Gold Rate Today: ಚಿನ್ನದ ದರದಲ್ಲಿ ತುಸು ಇಳಿಕೆ; ಇಷ್ಟಿದೆ ಇಂದಿನ ಬೆಲೆ

Gold Rate Today: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬೆಂಗಳೂರಿನಲ್ಲಿ ಭಾರಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಇಂದು ತುಸು ಇಳಿಕೆಯಾಗಿದೆ. ಇದರಿಂದಾಗಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಚಿನ್ನ ಖರೀದಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಜೂನ್‌ 11) ಚಿನ್ನದ ಬೆಲೆಯಲ್ಲಿ (Gold Rate Today) ತುಸು ಇಳಿಕೆಯಾಗಿದೆ. ಲೋಕಸಭೆ ಚುನಾವಣೆ ಫಲಿತಾಂಶದ (Lok Sabha Election Result 2024) ಬಳಿಕ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಈಗ ಇಳಿಕೆಯಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ತಲಾ 1 ರೂ. ಇಳಿಕೆಯಾಗಿದೆ. ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತ ಆಗಿರಲಿಲ್ಲ.

ಒಂದು ರೂಪಾಯಿ ಇಳಿಕೆಯೊಂದಿಗೆ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 6,569 ರೂ. ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 7,166 ರೂ. ಆಗಿದೆ. ಲೋಕಸಭೆ ಚುನಾವಣೆ ಫಲಿತಾಂಶದ ದಿನವಾದ ಜೂನ್‌ 4ರಂದು ಚಿನ್ನದ ಬೆಲೆಯಲ್ಲಿ ಏಕಾಏಕಿ 76 ರೂ. ಏರಿಕೆಯಾಗಿತ್ತು. ಜೂನ್‌ 6 ಹಾಗೂ ಜೂನ್‌ 7ರಂದು ಕೂಡ ಏರಿಕೆಯಾಗಿತ್ತು. ಇದಾದ ಮರುದಿನ ಅಂದರೆ, ಜೂನ್‌ 8ರಂದು 208 ರೂ. ಇಳಿಕೆಯಾಗಿದ್ದು ಗ್ರಾಹಕರು ನಿಟ್ಟುಸಿರು ಬಿಡುವಂತೆ ಮಾಡಿತ್ತು. ಈಗ ಮತ್ತೆ ತುಸು ಇಳಿಕೆಯಾಗಿದೆ.

Gold Rate Today

ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್‌ಮಾರ್ಕ್‌ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್‌ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Stock Market: ಫಲಿತಾಂಶದ ಬಳಿಕ ಷೇರು ಪೇಟೆ ನೆಗೆತ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಲಾಭ

Continue Reading
Advertisement
Saptami Gowda
ಸಿನಿಮಾ10 mins ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Actor Darshan
ಸಿನಿಮಾ18 mins ago

Actor Darshan: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದವನ ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ಯಾರು ಈ ಪವಿತ್ರಾ?

Actor Darshan
ಪ್ರಮುಖ ಸುದ್ದಿ41 mins ago

Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

All Eyes on Raesi
ದೇಶ50 mins ago

All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

IND vs PAK
ಕ್ರೀಡೆ51 mins ago

IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

Gold Rate Today
ಪ್ರಮುಖ ಸುದ್ದಿ59 mins ago

Gold Rate Today: ಚಿನ್ನದ ದರದಲ್ಲಿ ತುಸು ಇಳಿಕೆ; ಇಷ್ಟಿದೆ ಇಂದಿನ ಬೆಲೆ

Virat Kohli
ಕ್ರೀಡೆ1 hour ago

Virat Kohli: ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಕೊಹ್ಲಿಯನ್ನು ಗುರುತಿಸದ ನ್ಯೂಯಾರ್ಕ್​ ಜನತೆ; ವಿಡಿಯೊ ವೈರಲ್​

Cashless Health Claim
ಮನಿ ಗೈಡ್2 hours ago

Cashless Health Claim: ಸಂಪೂರ್ಣ ನಗದು ರಹಿತ ಆರೋಗ್ಯ ವಿಮೆ ಕ್ಲೈಮ್; ಆಗಸ್ಟ್ 1ರಿಂದ ಜಾರಿ

Shatrughan Sinha
ಸಿನಿಮಾ2 hours ago

Shatrughan Sinha: ಮುಸ್ಲಿಂ ಯುವಕನ ಜತೆ ಮಗಳ ವಿವಾಹ; ನಟ ಶತ್ರುಘ್ನ ಸಿನ್ಹಾ ಪ್ರತಿಕ್ರಿಯೆ ಏನು?

Amol Kale
ಪ್ರಮುಖ ಸುದ್ದಿ2 hours ago

Amol Kale: ಭಾರತ-ಪಾಕ್‌ ಪಂದ್ಯ ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದ ಎಂಸಿಎ ಅಧ್ಯಕ್ಷ ಅಮೋಲ್‌ ಕಾಳೆ ನಿಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Saptami Gowda
ಸಿನಿಮಾ10 mins ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

ಟ್ರೆಂಡಿಂಗ್‌