Chaitra Kundapura : ಅಬ್ಬಬ್ಬಾ… ಗೋವಿಂದ ಪೂಜಾರಿಯೇ ವಂಚಕ ಎಂದು ಬಿಂಬಿಸಲು ಕ್ರಿಮಿನಲ್‌ ಐಡಿಯಾ; ITಗೆ ದೂರು Vistara News

ಉಡುಪಿ

Chaitra Kundapura : ಅಬ್ಬಬ್ಬಾ… ಗೋವಿಂದ ಪೂಜಾರಿಯೇ ವಂಚಕ ಎಂದು ಬಿಂಬಿಸಲು ಕ್ರಿಮಿನಲ್‌ ಐಡಿಯಾ; ITಗೆ ದೂರು

Chaitra Kundapura :ಚೈತ್ರಾ ಕುಂದಾಪುರ ಸಾಮಾನ್ಯ ಅಲ್ಲ ಅನ್ನುವುದಕ್ಕೆ ಇಲ್ಲೊಂದು ಪತ್ರವನ್ನು ಹಾಕಿದ್ದೇವೆ ಓದಿ. ತಾನೇ ವಂಚನೆ ಮಾಡಿದ್ದರೂ ಗೋವಿಂದ ಪೂಜಾರಿ ವಂಚಕ ಎಂದು ಬಿಂಬಿಸಿ ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆಯಬೇಕು ಎಂದರೆ ಎಷ್ಟೊಂದು ಕ್ರಿಮಿನಲ್‌ ಐಡಿಯಾ ಬೇಕು ನೋಡಿ!

VISTARANEWS.COM


on

Chaitra Govinda poojari IT letter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP Ticket) ಕೊಡಿಸುವುದಾಗಿ ಐದು ಕೋಟಿ ರೂಪಾಯಿ ವಸೂಲಿ (Five crore rupees fraud) ಮಾಡಿ ವಂಚಿಸಿ ಬಂಧನಕ್ಕೆ ಒಳಗಾಗಿರುವ ಫೈರ್‌ ಬ್ರಾಂಡ್‌ ಚೈತ್ರಾ ಕುಂದಾಪುರ (Chaitra Kundapura) ಅದೆಂಥ ಕಿಲಾಡಿ ಎಂದರೆ, ಈ ಪ್ರಕರಣದಲ್ಲಿ ತನ್ನ ಬಂಧನವಾಗುವುದು ಖಚಿತ ಎಂದು ತಿಳಿಯುತ್ತಿದ್ದಂತೆಯೇ ಗೋವಿಂದ ಪೂಜಾರಿಯೇ (Govinda poojari) ಫ್ರಾಡ್‌ ತಾನೊಬ್ಬ ಸಾಚಾ ಎಂದು ಬಿಂಬಿಸಿ ಆದಾಯ ತೆರಿಗೆ ಇಲಾಖೆಗೆ ಆಕೆ ದೊಡ್ಡ ಪತ್ರವೊಂದನ್ನು ಬರೆದಿರುವುದು ಬೆಳಕಿಗೆ ಬಂದಿದೆ. ಈ ಪತ್ರವನ್ನು ಆಕೆ ಆದಾಯ ತೆರಿಗೆ ಇಲಾಖೆಗೆ (Income tax Department) ಪೋಸ್ಟ್‌ ಮಾಡಿದ್ದಾಳೋ ಇಲ್ಲವೋ ಗೊತ್ತಿಲ್ಲ. ಆದರೆ, ಇದರಲ್ಲಿ ತಾನು ಒಬ್ಬ ಪತ್ರಕರ್ತೆಯಾಗಿ (Chaitra in the guise of Journalist) ಈ ಪ್ರಕರಣದ ಇಂಚಿಂಚು ಮಾಹಿತಿಯನ್ನು ಸಂಗ್ರಹ ಮಾಡಿದ್ದಾಗಿ ಹೇಳಿಕೊಂಡಿದ್ದಾಳೆ.

ಗೋವಿಂದ ಪೂಜಾರಿ ಎಂಬ ಉದ್ಯಮಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಅಕ್ರಮ ದಾರಿಗಳಲ್ಲಿ ಪ್ರಯತ್ನ ಮಾಡಿರುವ ಮಾಹಿತಿ ತಿಳಿದ ತಾನು ಅದರ ತನಿಖೆಯನ್ನು ನಡೆಸಿ ಇದಿಷ್ಟು ವಿವರಗಳನ್ನು ಸಂಗ್ರಹಿಸಿ ಕೊಟ್ಟಿರುವುದಾಗಿ ಪತ್ರದಲ್ಲಿ ಬರೆಯಲಾಗಿದೆ. ಹಲವಾರು ಫೇಸ್‌ ಬುಕ್‌ ಲಿಂಕ್‌ಗಳು, ಆಡಿಯೋಗಳು ಮತ್ತು ವಿಡಿಯೊಗಳನ್ನು ಅದರಲ್ಲಿ ಲಗತ್ತಿಸಲಾಗಿದೆ. ಅಂದರೆ ಒಂದು ವೇಳೆ ಈ ಪ್ರಕರಣದಲ್ಲಿ ತಾನು ಸಿಕ್ಕಿಹಾಕಿಕೊಂಡರೂ ತಾನು ವಂಚಕಿಯಲ್ಲ. ಇದನ್ನು ಒಬ್ಬ ಪತ್ರಕರ್ತೆಯಾಗಿ ಭೇದಿಸಲು ಬಂದಿದ್ದು ಎಂದು ತೋರಿಸಿಕೊಳ್ಳುವ ಪ್ರಯತ್ನವನ್ನು ಆಕೆ ಮಾಡಿದಂತೆ ಕಾಣುತ್ತಿದೆ.

ಇದು ಸೆಪ್ಟೆಂಬರ್‌ 8ರಂದು ಗೋವಿಂದ ಪೂಜಾರಿ ಬೆಂಗಳೂರಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಮತ್ತು ಸೆಪ್ಟೆಂಬರ್‌ 12ರಂದು ಚೈತ್ರಾ ಕುಂದಾಪುರ ಉಡುಪಿ ಕೃಷ್ಣ ಮಠದ ಸಮೀಪದ ಬಂಧನಕ್ಕೆ ಒಳಗಾಗುವ ನಡುವಿನ ನಾಲ್ಕು ದಿನದಲ್ಲಿ ನಡೆದ ಕೆಲಸ. ಅಂದರೆ ಚೈತ್ರಾ ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ಈ ಕೆಲಸ ನಡೆದಿದೆ. ತಾನು ಆದಾಯ ತೆರಿಗೆ ಇಲಾಖೆಗೆ ಈ ಬಗ್ಗೆ ಪತ್ರ ಬರೆದಿದ್ದೇನೆ, ನನ್ನನ್ನು ಈ ಪ್ರಕರಣದಲ್ಲಿ ಎಳೆದುತಂದರೆ ನೀವು ಕೂಡಾ ಸಿಕ್ಕಿಬೀಳುತ್ತೀರಿ. ಹೀಗಾಗಿ ಎಚ್ಚರಿಕೆಯಿಂದ ಇರಿ ಎಂದು ಗೋವಿಂದ ಪೂಜಾರಿ ಅವರನ್ನು ಹೆದರಿಸುವ ತಂತ್ರ ಇದೆಂದು ಹೇಳಲಾಗುತ್ತಿದೆ.

Govinda poojari and Chaitra at hala matt

ಪತ್ರದಲ್ಲಿರುವ ಪ್ರಮುಖ ಅಂಶಗಳೇನು?

  1. ನಾನೊಬ್ಬಳು ಪತ್ರಕರ್ತೆ, ಗೋವಿಂದ ಪೂಜಾರಿ ಅವರು ವಾಮಮಾರ್ಗದಿಂದ ಟಿಕೆಟ್‌ ಪಡೆಯಲು ಪ್ರಯತ್ನಿಸಿದ್ದರ ವಿಚಾರ ತಿಳಿದು ತನಿಖೆ ನಡೆಸಿ ಈ ಮಾಹಿತಿ ನೀಡುತ್ತಿರುವುದಾಗಿ ಹೇಳಿಕೆ.
  2. ಗೋವಿಂದ ಪೂಜಾರಿಯವರು ಬಿಜೆಪಿ ಟಿಕೆಟ್‌ ಪಡೆಯಲು ಏನೇನು ವಾಮ ಮಾರ್ಗಗಳನ್ನು ಬಳಸಿದ್ದಾರೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
  3. ಹಾಲಶ್ರೀಗಳಿಗೆ 1.5 ಕೋಟಿ ರೂ., ವಿಶ್ವನಾಥ್‌ಜಿಗೆ 3 ಕೋಟಿ ರೂ. ಕೊಟ್ಟಿರುವ ಉಲ್ಲೇಖ ಮಾಡಲಾಗಿದೆ.
  4. ಗೋವಿಂದ ಪೂಜಾರಿ ಆಪ್ತರ ಪ್ರಸಾದ್‌ ಪೂಜಾರಿ ಬೈಂದೂರು, ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಗಗನ್‌ ಕಡೂರ್‌ ಅವರೆಲ್ಲ ಈ ಪ್ರಕರಣದಲ್ಲಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
  5. ಪತ್ರದಲ್ಲಿ ಮಂಗಳೂರಿನ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಬಗ್ಗೆಯೂ ಪತ್ರದಲ್ಲಿ ಪ್ರಸ್ತಾಪ ಮಾಡಲಾಗಿದೆ. ಜುಲೈ 29 ರಂದು ಮಧ್ಯಾಹ್ನ 12:43ಕ್ಕೆ ಚೈತ್ರಾಗೆ ಕರೆ ಮಾಡಿದ್ರಂತೆ ರಾಜಶೇಖರಾನಂದ ಸ್ವಾಮೀಜಿ. ಗೋವಿಂದ ಬಾಬು ಪೂಜಾರಿಯವರು ಬಿಜೆಪಿ ಟಿಕೆಟ್ ಗಾಗಿ 5 ಕೋಟಿ ರೂಪಾಯಿ ನೀಡಿರುವ ಕುರಿತು ಚರ್ಚೆ ನಡೆದಿದೆಯಂತೆ.
  6. ಪತ್ರದಲ್ಲಿ ಸಂತೋಷ್ ಕೆಲ್ಲೋಜಿ ಎಂಬುವರ ಹೆಸರು ಕೂಡಾ ಪ್ರಸ್ತಾಪವಾಗುತ್ತದೆ.

ಹಾಗಿದ್ದರೆ ಚೈತ್ರಾ ಐಟಿ ಇಲಾಖೆಗೆ ಬರೆದಿರುವ ಪತ್ರದಲ್ಲಿ ಏನಿದೆ ನೀವೇ ನೋಡಿ..

Chaitra letter to IT

ರಿಗೆ, ಪ್ರಧಾನ ಮುಖ್ಯ ಆಯುಕ್ತರು, ಆದಾಯ ತೆರಿಗೆ ಇಲಾಖೆ, ದಕ್ಷಿಣ ವಲಯ, ಬೆಂಗಳೂರು,

ಮಾನ್ಯರೇ

ವಿಷಯ : ಅನಧೀಕೃತ ಹಣದ ವಹಿವಾಟು ನಡೆದಿರುವ ಕುರಿತು.

ಚೈತ್ರಾ ಎನ್ನುವ ನಾನು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದು ಗೋವಿಂದ ಬಾಬು ಪೂಜಾರಿ ಎನ್ನುವ ಬೆಂಗಳೂರು ಮೂಲದ ಉದ್ಯಮಿಯೊಬ್ಬರು ಅಕ್ರಮವಾಗಿ ಹಣದ ವ್ಯವಹಾರ ನಡೆಸಿರುವ ಕುರಿತು ನನಗೆ ಖಚಿತ ಮಾಹಿತಿ ದೊರೆತಿರುತ್ತದೆ, ಗೋವಿಂದ ಬಾಬು ಪೂಜಾರಿ ಎನ್ನುವ ವ್ಯಕ್ತಿ ಮೂಲತಃ ಬೈಂದೂರಿನವರಾಗಿದ್ದು ಹಲವು ವರ್ಷಗಳ ಕಾಲ ಮುಂಬೈನಲ್ಲಿ ನೆಲೆಸಿ ವ್ಯವಹಾರಗಳನ್ನು ನಡೆಸಿದ್ದು, ಕೆಲವು ವರ್ಷಗಳಿಂದ ಈಚೆಗೆ ಬೆಂಗಳೂರಿನಲ್ಲಿ ಸ್ವಂತ ಕೇಟರಿಂಗ್ ಉದ್ಯಮ ನಡೆಸಿಕೊಂಡು ಬಂದಿರುತ್ತಾರೆ, ಜೊತೆಗೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಒಂದಷ್ಟು ಸಮಾಜ ಸೇವೆ ನಡೆಸಿಕೊಂಡು ಇಲ್ಲಿನ ಜನರ ನಡುವೆ ಸಮಾಜ ಸೇವಕ ಎಂದು ಗುರುತಿಸಿಕೊಂಡಿರುವುದರಿಂದ ಕಳೆದ ಒಂದು ವರ್ಷದಿಂದ ನನಗೆ ಅವರ ಆಪ್ತ ಸಹಾಯಕ ಪ್ರಸಾದ್ ಪೂಜಾರಿ ಎನ್ನುವ ವ್ಯಕ್ತಿಯ ಮೂಲಕ ಪರಿಚಿತರಾಗಿರುತ್ತಾರೆ. ಹೀಗಿರುವಾಗ ಕಳೆದ 2-3 ವರ್ಷಗಳಿಂದ ಈಚೆಗೆ ಇವರು ಬೈಂದೂರು ಭಾಗದಲ್ಲಿ ಭಾರತೀಯ ಜನತಾ ಪಾರ್ಟಿಯ ಮೂಲಕ ಶಾಸಕ ಸ್ಥಾನಕ್ಕೆ ಅಭ್ಯರ್ಥಿಯ ಆಕಾಂಕ್ಷಿಯಾಗಿರುತ್ತಾರೆ ಈ ಕುರಿತು ಅವರು ಮಾಧ್ಯಮಗಳಲ್ಲಿ ಮಾತನಾಡಿರುವ ಲಿಂಕ್ ಅನ್ನು ಇಲ್ಲಿ ನೀಡಲಾಗಿದೆ. (ಲಿಂಕ್ – https://fb.watch/m7cDA672di/?mibextid=NnVzG8 ಫೈಲ್ ಸಂಖ್ಯೆ-001)

ನಾನು ಪತ್ರಕರ್ತೆ, ರಹಸ್ಯ ವರದಿ ಮಾಡುವ ಆಸಕ್ತಿ ನಂಗೆ

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಟಿಕೆಟ್ ಪಡೆಯಲು ಪ್ರಯತ್ನ ಪಟ್ಟರೂ ಸಾಧ್ಯವಾಗದೆ ಇರುವ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯಲ್ಲಿ ಯಾವುದೇ ಜವಾಬ್ದಾರಿಯುತ ಹುದೆಯಲ್ಲಿರದೆ ಇದ್ದರೂ ತಾನು ಬಿಜೆಪಿ ಆಕಾಂಕ್ಷಿ ಎಂದು ಹೇಳಿಕೊಂಡು ಓಡಾಡುತ್ತಿದ್ದ ಇವರ ಕುರಿತು ನನಗೆ ಸಹಜವಾಗಿಯೇ ಅನುಮಾನ ಮತ್ತು ಕುತೂಹಲ ಹುಟ್ಟಿಕೊಳ್ಳುತ್ತದೆ, ವೃತ್ತಿಯಲ್ಲಿ ಪತ್ರಕರ್ತೆಯಾಗಿರುವ ನನಗೆ ಚುನಾವಣೆ ಸಂದರ್ಭದಲ್ಲಿ ನಡೆಯುವ ಹಣದ ವಹಿವಾಟುಗಳ ಕುರಿತು ರಹಸ್ಯ ವರದಿ ಮಾಡುವ ಆಸಕ್ತಿ ಹಿಂದಿನಿಂದಲೂ ಇತ್ತು. (ನಾನು ಈ ಹಿಂದೆ ರಾಜ್ಯ ಮಟ್ಟದ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಉಪಸಂಪಾದಕಿಯಾಗಿ ಹಾಗೂ ಹಲವು ಚಾನೆಲ್ ಗಳಲ್ಲಿ ಸುದ್ದಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿರುವ ದಾಖಲೆಗಳನ್ನು ಲಗತ್ತಿಸಿದ್ದೇನೆ).

ಪ್ರಸಾದ್‌ ಬೈಂದೂರ್‌ಗೆ ಕರೆ ಮಾಡಿ ಆಗಾಗ ಮಾಹಿತಿ ಸಂಗ್ರಹಿಸುತ್ತಿದ್ದೆ

ಹಾಗಾಗಿ ಗೋವಿಂದ ಬಾಬು ಪೂಜಾರಿಯವರು ಟಿಕೆಟ್‌ಗಾಗಿ ಹೇಗೆ ಪ್ರಯತ್ನಿಸುತ್ತಿದ್ದಾರೆ ಎನ್ನುವ ಮಾಹಿತಿ ಸಂಗ್ರಹಿಸಲು ಅವರೊಂದಿಗೆ ಮತ್ತು ಅವರ ಆಪ್ತನಾಗಿದ್ದ ಪ್ರಸಾದ್ ಪೂಜಾರಿಯೊಂದಿಗೆ ಆಗಾಗ ಕರೆ ಮಾಡುತ್ತಾ ಮಾಹಿತಿ ಸಂಗ್ರಹಿಸುತ್ತಿದ್ದೆ. ಒಂದೊಮ್ಮೆ ಗೋವಿಂದ ಪೂಜಾರಿಯವರು ಹಣ ನೀಡಿ ಅಕ್ರಮ ಮಾರ್ಗದಿಂದ ಟಿಕೆಟ್ ಪಡೆಯುವ ಪ್ರಯತ್ನ ಮಾಡಿದಲ್ಲಿ ಅದನ್ನು ಕಾನೂನು ಮೂಲಕ ದೂರು ನೀಡಿ ತಡೆಯುವ ಮತ್ತು ಅದರ ಕುರಿತು ವರದಿ ಮಾಡುವ ಉದ್ದೇಶದಿಂದ ನಾನು ಅವರು ಟಿಕೆಟ್ ಗಾಗಿ ಯಾರೊಂದಿಗೆಲ್ಲ ಸಂಪರ್ಕದಲ್ಲಿದ್ದರೋ ಅವರೆಲ್ಲರೊಂದಿಗೂ ಹಾಗೂ ಅವರ ಆಪ್ತ ಬಳಗದ ಬಹುತೇಕರೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಮಾಹಿತಿ ಕಲೆ ಹಾಕುವ ಪ್ರಯತ್ನ ಮಾಡಿದ್ದೆ. ಆದರೆ ಇವರು ಹಣ ನೀಡುವ ಅಥವಾ ಹಣದ ರೆಕಾರ್ಡ್ ನಲ್ಲಿ ಮೂರು ಕೋಟಿ ಮತ್ತು 50 ಲಕ್ಷ ಕೊಟ್ಟಿರುವ ಕುರಿತು ಅವರ ಮಾತುಗಳಲ್ಲೇ ಉಲ್ಲೇಖಿಸಿದ್ದಾರೆ ಮತ್ತು ಸ್ವಾಮೀಜಿಯವರಿಗೆ ಹಣ ಕೊಟ್ಟಿರುವ ಬಗ್ಗೆಯೂ ಒಪ್ಪಿಕೊಂಡಿದ್ದಾರೆ. (File no-003)

ಪೊಲೀಸ್‌ ಕೇಸ್‌ ದಾಖಲಿಸಲು ಗೋವಿಂದ ಪೂಜಾರಿಗೆ ಸಲಹೆ ಕೊಟ್ಟಿದ್ದೇ ನಾನು

ಇನ್ನು ಇವರು ಈ ವಿಷಯದ ಕುರಿತು ಅವರು ನನ್ನ ಬಳಿ ಮಾತನಾಡಿದಾಗ ನಾನು ಅವರಿಗೆ ಪೊಲೀಸ್ ಕೇಸ್ ದಾಖಲಿಸಲು ಸಲಹೆ ನೀಡಿರುತ್ತೇನೆ, ಆದರೆ ಅವರು ಈ ವರೆಗೂ ಪೊಲೀಸ್ ಕೇಸ್ ದಾಖಲಿಸಿರುವುದು ನನ್ನ ಗಮನಕ್ಕೆ ಬಂದಿಲ್ಲ. ಇವರ ಈ ನಡೆ ನನಗೆ ಅನುಮಾನಾಸ್ಪದವಾಗಿ ಕಂಡು ಬಂದಿರುತ್ತದೆ,

ಇದರೊಂದಿಗೆ ಅವರ ಆಪ್ತ ಸಹಾಯಕ ಪ್ರಸಾದ್ ಪೂಜಾರಿಯವರು ಕೂಡ 2023, ಮೇ 11 ನೇ ತಾರೀಕು ನನಗೆ ಕರೆ ಮಾಡಿ ಗೋವಿಂದ ಬಾಬು ಪೂಜಾರಿಯವರು ಟಿಕೆಟ್ ಗಾಗಿ ಕೋಟಿಗಟ್ಟಲೆ ಹಣ ನೀಡಿ ಕಳೆದುಕೊಂಡಿರುವ ಕುರಿತು ಮಾತನಾಡಿರುತ್ತಾನೆ. (ಇದಕ್ಕೆ ಸಂಬಂಧಿಸಿದ ಕಾಲ್ ರೆಕಾರ್ಡ್ ಅನ್ನು ಲಗತ್ತಿಸಿದ್ದೇನೆ File no-004)

ಇದು ನಡೆದು ಸುಮಾರು 2 ತಿಂಗಳ ಬಳಿಕ ನನಗೆ ಕೃಷ್ಣ ಪೂಜಾರಿ ಎಂದು ಪರಿಚಯಿಸಿ ಕೊಂಡ ವ್ಯಕ್ತಿಯಿಂದ ಜುಲೈ 21, 2023ರಿಂದ 23ರ ನಡುವೆ ಹಲವರ ಬಳಿ ಚರ್ಚೆ ನಡೆಸಿದ್ದು +918217220747 ಎಂಬ ಮೊಬೈಲ್ ಸಂಖ್ಯೆಯಿಂದ ಕರೆ ಬಂದಿದ್ದು, ಅವರು ನನ್ನ ಗೋವಿಂದ ಬಾಬು ಪೂಜಾರಿ ಅವರು ಚುನಾವಣೆ ಟಿಕೆಟ್ ಗಾಗಿ 5 ಕೋಟಿ ರೂಪಾಯಿ ಕೊಟ್ಟಿರುವ ಕುರಿತು ನನ್ನನ್ನು ಪ್ರಶ್ನಿಸಿರುತ್ತಾರೆ, ಈ ಕುರಿತು ನಾನು ಅವರ ಬಳಿ ನನ್ನ ಅಭಿಪ್ರಾಯವನ್ನು ಹಂಚಿಕೊಂಡು ಪೊಲೀಸ್ ಕೇಸ್ ದಾಖಲಿಸುವಂತೆ ಸಲಹೆ ನೀಡಿರುತ್ತೇನೆ.

ರಾಜಶೇಖರಾನಂದ ಸ್ವಾಮೀಜಿ ಕೂಡಾ ಫೋನ್‌ ಮಾಡಿ ಮಾಹಿತಿ ಕೇಳಿದ್ದರು

ತದ ನಂತರ ಪುನಃ ಜುಲೈ 29 ರಂದು ಮಧ್ಯಾಹ್ನ 12:43 ಕ್ಕೆ ನನಗೆ ಪರಿಚಿತರಾಗಿರುವ ರಾಜಶೇಖರಾನಂದ ಸ್ವಾಮೀಜಿಯವರ ಫೋನ್ ನಂಬರ್+919986126131ರಿಂದ ಕರೆ ಬಂದಿದ್ದು, ಅದರಲ್ಲಿ ಅವರು ಗೋವಿಂದ ಬಾಬು ಪೂಜಾರಿಯವರು ಬಿಜೆಪಿ ಟಿಕೆಟ್ ಗಾಗಿ 5 ಕೋಟಿ ರೂಪಾಯಿಯನ್ನು ನೀಡಿರುವ ಕುರಿತು ಅವರ ಆಪ್ತರೊಬ್ಬರು ಅವರಿಗೆ ಮಾಹಿತಿ ನೀಡಿರುವ ಬಗ್ಗೆ ನನ್ನ ಬಳಿ ಚರ್ಚಿಸುತ್ತಾರೆ.

ಅದಾದ ಬಳಿಕ ಮತ್ತೆ ಜುಲೈ 30 ರಂದು ನನಗೆ ಪರಿಚಿತರರಾದ ಸಂತೋಷ್ ಕೆಲ್ಲೋಜಿ ಎನ್ನುವವರು ಮಧ್ಯಾಹ್ನ 2:05 ಕ್ಕೆ ಕರೆಯಲ್ಲಿ ನನ್ನೊಂದಿಗೆ ಮಾತನಾಡಿ ಗೋವಿಂದ ಬಾಬು ಪೂಜಾರಿಯವರಿಗೆ ಸಂಬಂಧಿಸಿದಂತೆ ಚುನಾವಣೆಯಲ್ಲಿ ಹಣ ನೀಡಿರುವ ಸುದ್ದಿಯೊಂದು ವಾಟ್ಸಾಪ್ ಗಳಲ್ಲಿ ಶೇರ್ ಆಗಿರುವ ಕುರಿತು ನನ್ನ ಬಳಿ ವಿಚಾರಿಸಿರುತ್ತಾರೆ, ಈ ಎಲ್ಲಾ ಕರೆಗಳಿಗೆ ಸಂಬಂಧಿಸಿದಂತೆ ಕರೆಗಳನ್ನು ನಾನು ರೆಕಾರ್ಡ್ ಮಾಡಿ ಕೊಂಡಿದ್ದು, ಅದನ್ನು ಇದರೊಂದಿಗೆ ಲಗತ್ತಿಸಿರುತ್ತೇನೆ. (File no 005, 006, 007)

ಹಣ ಕಳೆದುಕೊಂಡಿದ್ದೇನೆ ಎಂದು ಪೂಜಾರಿಯವರೇ ಬರೆದುಕೊಂಡಂತೆ ಪತ್ರ

ಈ ಎಲ್ಲಾ ವಿಚಾರಗಳೂ ನಡೆಯುವಾಗಲೇ ವಾಟ್ಸಾಪ್ ನಲ್ಲಿ ಗೋವಿಂದ ಬಾಬು ಪೂಜಾರಿಯವರಿಗೆ ಸಂಬಂಧಿಸಿದಂತೆ ಪತ್ರವೊಂದು ಹರಿದಾಡಲು ಪ್ರಾರಂಭವಾಗಿದ್ದು (ವಾಟ್ಸಾಪ್ ನಲ್ಲಿ ಬಂದಿರುವ ಸಂದೇಶದ screen shot ಲಗತ್ತಿಸಲಾಗಿದೆ, ಹಾಗೂ WhatsApp ನಲ್ಲಿ ಈ ಪತ್ರದ ಪ್ರತಿಯನ್ನು ಕಳುಹಿಸಿರುವ ವ್ಯಕ್ತಿಯ ಫೋನ್ ಸಂಖ್ಯೆ ವಿಳಾಸ screen recorder ಮೂಲಕ ರೆಕಾರ್ಡ್ ಮಾಡಿ ಲಗತ್ತಿಸಿದ್ದೇನೆ. (Fill no- 009)

ಆ ಪತ್ರದಲ್ಲಿ ಸ್ವತಹಃ ಗೋವಿಂದ ಬಾಬು ಪೂಜಾರಿಯವರೇ ಹೇಳಿಕೊಂಡಿರುವಂತೆ ಬರೆಯಲಾಗಿದ್ದು ಅವರ ವ್ಯವಹಾರಗಳ ಪರಿಚಯವಿದ್ದು ಸ್ವತಃ ಅವರು ಚುನಾವಣೆ ಟಿಕೆಟ್ ಗಾಗಿ 5 ಕೋಟಿ ರೂಗಳನ್ನು ಕಳೆದುಕೊಂಡಿರುವ ಬಗ್ಗೆ ವಿಕೃತವಾಗಿ ವಿವರಿಸಲಾಗಿದೆ. (ಪತ್ರದ ಪ್ರತಿಯನ್ನು ಇದರೊಂದಿಗೆ ಲಗತ್ತಿಸಲಾಗಿದೆ pdf file name LETTER-PARTY pdf )

ಮೇಲ್ನೋಟಕ್ಕೆ ನೋಡುವಾಗ ಆ ಪತ್ರವನ್ನು ಸ್ವತಹ ಗೋವಿಂದ ಬಾಬು ಪೂಜಾರಿಯವರೇ ಅಥವಾ ಅವರ ಅತ್ಯಂತ ಆಪ್ತ ಬಳಗವೇ ಬರೆದಿರುವಂತೆ ಕಂಡು ಬರುತ್ತದೆ. ಕಾರಣ 4 ಪುಟಗಳ ಈ ಪತ್ರದಲ್ಲಿ ಗೋವಿಂದ ಬಾಬು ಪೂಜಾರಿಯವರ ವೈಯಕ್ತಿಕ ಬದುಕು ಮತ್ತು ವ್ಯವಹಾರಗಳ ಬಗ್ಗೆ ನಿಖರವಾಗಿ ಉಲ್ಲೇಖಿಸಲಾಗಿದೆ ಮತ್ತು ನನಗೆ ಬಂದಿರುವ ಕರೆಗಳ ರೆಕಾರ್ಡ್ ಗಳನ್ನು ಪರಿಶೀಲಿಸಿದರೆ ಅದರಲ್ಲಿ ಮೇಲ್ಕಂಡ ಎಲ್ಲಾ ವ್ಯಕ್ತಿಗಳೂ ಮಾತನಾಡಿರುವ ವಿಷಯ ಮತ್ತು ಈ ಪತ್ರದಲ್ಲಿ ಉಲ್ಲೇಖವಾಗಿರುವ ವಿಷಯಗಳಲ್ಲಿ ಸಾಮ್ಯತೆ ಇರುವುದು ಸ್ಪಷ್ಟವಾಗಿ ಗೋಚರವಾಗುತ್ತದೆ.

ಹೀಗಿರುವಾಗ ಈ ಪತ್ರ ನಿಜವಾಗಿಯೂ ಗೋವಿಂದ ಬಾಬು ಪೂಜಾರಿಯವರಿಂದಲೇ ಬಂದಿರುವುದು ನಿಜವಾಗಿದ್ದಲ್ಲಿ ಅವರೇ ಹೇಳಿಕೊಂಡಿರುವಂತೆ ಅವರಿಗೆ 5 ಕೋಟಿ ರೂ ವಂಚನೆಯಾಗಿದ್ದಲ್ಲಿ ಇದುವರೆಗೂ ಅವರು ಪೊಲೀಸ್ ಕೇಸು ದಾಖಲಿಸದೆ ಇರಲು ಕಾರಣವೇನು?? ಅವರು ನಡೆಸಿದ್ದೇನೆ ಎಂದು ಹೇಳಿಕೊಂಡಿರುವಂತೆ ಅದೃಷ್ಟವಶಾತ್ ಇವರಿಗೆ ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿಯಿಂದ ಇವರು ನಿರೀಕ್ಷೆ ಮಾಡಿದಂತೆ ಶಾಸಕ ಸ್ಥಾನಕ್ಕೆ ಟಿಕೆಟ್ ಸಿಗುವುದಿಲ್ಲ, ಸಾಮಾನ್ಯವಾಗಿ ಚುನಾವಣೆ ಘೋಷಣೆಯಾದ ಬಳಿಕ ಯಾವುದೇ ಪಕ್ಷಗಳು ಯಾರಿಗೂ ಹುದ್ದೆ ಜವಾಬ್ದಾರಿ ನೀಡುವುದು ಬಹಳ ಕಡಿಮೆ, ಆದರೆ ಆಶ್ಚರ್ಯ ಎನ್ನುವಂತೆ ದಿಢೀರ್ ಆಗಿ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಗೋವಿಂದ ಬಾಬು ಪೂಜಾರಿಯವರಿಗೆ ಜವಾಬ್ದಾರಿ ದೊರೆಯುತ್ತದೆ. (ಇದಕ್ಕೆ ಸಂಬಂಧಿಸಿದಂತೆ ಅವರ ಅಧಿಕೃತ ಪೇಜ್ ನಲ್ಲಿ ಅವರ ಜವಾಬ್ದಾರಿಯನ್ನು ಘೋಷಣೆ ಮಾಡಿರುವ ಪ್ರತಿಯ ಲಿಂಕ್ https://m.facebook.com/story.php?story_fbid=pfbid02Vp YbVvV3YokkV9hsuBQ3PqRcPc3ZA1LK YetCXyMtDkpPjYAKNFTh9jwdDL2UMdaWI&id=1000630621006306210064×2006)

ಮತ್ತು ಈ ಜವಾಬ್ದಾರಿ ದೊರೆತ ಬಳಿಕ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಸ್ಥಳೀಯ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆಯವರ ಪರವಾಗಿ ಇವರು ಪ್ರಚಾರವನ್ನೂ ನಡೆಸಿರುತ್ತಾರೆ.

ಹಾಗೂ ಚುನಾವಣಾ ಪ್ರಚಾರಕ್ಕೆ ಬೈಂದೂರಿಗೆ ಆಗಮಿಸಿದ್ದ ಬಿಜೆಪಿಯ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ನಡುವೆ ಇವರು ಗುರುತಿಸಿಕೊಳ್ಳಲು ಪ್ರಾರಂಭಿಸುತ್ತಾರೆ. (ಈ ಕುರಿತ ಫೋಟೋ ಸಾಕ್ಷಿ ಲಾಗತ್ತಿಸಲಾಗಿದೆ, ಹಾಗೂ ಈ ಫೋಟೋ ಗಳನ್ನು ಗೋವಿಂದ ಬಾಬು ಪೂಜಾರಿಯವರ ಅಧಿಕೃತ ಫೇಸ್ ಬುಕ್ ಖಾತೆಗಳಿಂದ ತೆಗೆದುಕೊಳ್ಳಲಾಗಿದೆ, ಅದಕ್ಕೆ ಸಂಬಂಧಿಸಿದ ಲಿಂಕ್ ಗಳನ್ನು ಕೂಡ ನೀಡಿದ್ದೇವೆ.

ಲಿಂಕ್‌ಗಳು ಇವು -https://m.facebook.com/story.php?story_fbid=pfbid02rz4rDuhrRTMznaqRUIR67hkjPDdNCIQDwX LUWva1YLSryjTLJ7s1dqcVbWyWDhp71&id=10006384220463861

https://m.facebook.com/story.php?story_fbid=pfbid0G7pks6Y9PwsgWLQbxTNXis2QPQ2qvX2w eUcAfkXUasyDTBumuYfunxDotZVUsduel&id=100063842mibe4x3862

https://m.facebook.com/story.php?story_fbid=pfbid0G7pks6 Y9PwsgWLQbxTNXis2QPQ2qvX2w

eUcAfkXUasyDTBumuYfunxDotZVUsduel&id=100063861244042&mibextid=ZbWKWL)

ಇದನ್ನೆಲ್ಲಾ ಗಮನಿಸಿದಾಗ ಈ ಪ್ರಕರಣದಲ್ಲಿ ಬಹುದೊಡ್ಡ ಪ್ರಭಾವಿಗಳು ಶಾಮೀಲಾಗಿರಬಹುದು ಎನ್ನುವ ಅನುಮಾನ ನನಗೆ ಬಲವಾಗ ತೊಡಗಿತು. ಆದರೆ ಇದನ್ನೆಲ್ಲಾ ಸಾಬೀತು ಮಾಡಲು ನನ್ನ ಬಳಿ ಯಾವುದೇ ಸೂಕ್ತ ದಾಖಲೆಗಳು ಇರಲಿಲ್ಲ.

ಆರು ಕೋಟಿ ಕೊಟ್ಟಿದ್ದೇನೆಂದು ನನ್ನ ಬಳಿಯೇ ಹೇಳಿದ್ದಾರೆ ಎಂದಿರುವ ಚೈತ್ರಾ

ಚುನಾವಣೆ ಮುಗಿದ ಬಳಿಕ ಗೋವಿಂದ ಬಾಬು ಪೂಜಾರಿಯವರು ತಾನು ಬಿಜೆಪಿ ಟಿಕೆಟ್ ಗಾಗಿ 6 ಕೋಟಿ ರೂಪಾಯಿ ಹಣವನ್ನು ಅನಧಿಕೃತವಾಗಿ ನೀಡಿರುವ ಕುರಿತು ನನ್ನ ಬಳಿ ಹೇಳಿಕ್ಕೊಂಡಿರುತ್ತಾರೆ. ಇದಕ್ಕೆ ಸಾಕ್ಷಿ ಎಂಬಂತೆ ದಿನಾಂಕ 11/05/2023 ರಂದು ಅವರ ಅಧಿಕೃತ ಫೋನ್ ಸಂಖ್ಯೆಯಾದ 9833311169 ನಂಬರ್ ನಿಂದ ಕರೆ ಮಾಡಿ ತಾನು ಮಂಜುನಾಥ್ ಎನ್ನುವವರಿಗೆ 1 ಕೋಟಿ ರೂಪಾಯಿಯನ್ನು ಅಭಿನವ ಹಾಲಶ್ರೀ ಸ್ವಾಮೀಜಿ ಅವರಿಗೆ ಒಂದೂವರೆ ಕೋಟಿ ರೂಪಾಯಿಯನ್ನು ಹಾಗೂ ವಿಶ್ವನಾಥ್ ಜೀ ಎನ್ನುವವರಿಗೆ 3 ಕೋಟಿ ರೂಪಾಯಿಯನ್ನೂ ನೀಡಿರುವುದಾಗಿ ನನ್ನೊಂದಿಗೆ ಚರ್ಚೆ ನಡೆಸಿರುತ್ತಾರೆ, ಈ ಕುರಿತು ತಾವು ಹಣ ನೀಡಿರುವುದನ್ನು ಸ್ವತಃ ಗೋವಿಂದ ಬಾಬು ಪೂಜಾರಿಯವರೇ ನನ್ನ ಬಳಿ ಹೇಳಿಕೊಂಡು ಒಪ್ಪಿಕೊಂಡಿರುತ್ತಾರೆ. ಈ ಕುರಿತು ಅವರು ಮಾತನಾಡಿರುವ ಕರೆಯ ರೆಕಾರ್ಡ್ ಗಳನ್ನು ಲಗತ್ತಿಸಿರುತ್ತೇನೆ.

ಹಾಗಿದ್ದರೆ ಗೋವಿಂದ ಪೂಜಾರಿ ಹಣಕಾಸಿನ ಮೂಲ ಯಾವುದು? ತನಿಖೆಯಾಗಲಿ

ಹಣಕಾಸಿನ ಮೂಲ ಯಾವುದು? ಅವರು ಹಣ ವರ್ಗಾವಣೆ ಮಾಡಿರುವ ಬ್ಯಾಂಕ್ ಖಾತೆಗಳ ವಿವರಗಳ ಕುರಿತು ವಿಚಾರಣೆ ನಡೆಯಬೇಕಿದೆ, Prevention Of Money Laundering Act 2002ರ ಪ್ರಕಾರ ಇವರು ನಡೆಸಿರುವ ಹಣಕಾಸಿನ ವ್ಯವಹಾರ ಕಾನೂನು ಬದ್ಧವಾಗಿದೆಯೇ? ಮತ್ತು ಈ ವ್ಯವಹಾರದಲ್ಲಿ ತೊಡಗಿಕೊಂಡಿರುವಂತೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿರುವ ಗೋವಿಂದ ಬಾಬು ಪೂಜಾರಿಯವರ ದಾಖಲಿತ ಬ್ಯಾಂಕ್ ವ್ಯವಹಾರಗಳು ಮತ್ತು ಇವರು ಪತ್ರದಲ್ಲಿ ಉಲ್ಲೇಖಿಸಿರುವಂತೆ ಗಗನ್ ಕಡೂರ್ ಹಾಗೂ ಅಭಿನವ ಹಾಲಶ್ರೀ ಸ್ವಾಮೀಜಿಗೆ ಹಣ ನೀಡಿರುವುದು ನಿಜವೇ ಆಗಿದ್ದಲ್ಲಿ ಅವರ ದಾಖಲಿತ ಬ್ಯಾಂಕ್ ವ್ಯವಹಾರ ಗಳು, ಆದಾಯದ ಮೂಲ ಮತ್ತು ಸ್ಥಿರ ಹಾಗೂ ಚರ ಆಸ್ತಿ -ಪಾಸ್ತಿಗಳ ಕುರಿತು ತನಿಖೆ ನಡೆಸಬೇಕು.

ಗೋವಿಂದ ಬಾಬು ಪೂಜಾರಿಯವರು ಕಾನೂನು ಬದ್ಧವಾಗಿ ಹಣಕಾಸು ವ್ಯವಹಾರ ನಡೆಸಿದ್ದಲ್ಲಿ 2022-23 ರ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಗಡುವು ಜುಲೈ 31 ಕ್ಕೆ ಮುಗಿದಿರುವುದರಿಂದ ಇವರು ಹೇಳಿಕೊಂಡಿರುವ 5 ಕೋಟಿ ರೂ. ಸಾಲವನ್ನು ಈ ITR returnsನಲ್ಲಿ ನಮೂದು ಮಾಡಿದ್ದಾರಾ?? ಒಂದೊಮ್ಮೆ ಇವರು ಕಾನೂನು ಬದ್ಧವಾಗಿ ವ್ಯವಹಾರ ನಡೆಸಿದ್ದು ಈ ವಿಷಯದಲ್ಲಿ ಅವರಿಗೆ ವಂಚನೆ ನಡೆದಿರುವುದು ಸಾಕ್ಷಿ ಸಮೇತ ಸಾಬೀತಾದಲ್ಲಿ ಅವರಿಗೆ ಅವರ ಹಣವನ್ನು ನ್ಯಾಯಬದ್ಧವಾಗಿ ಮರಳಿಸುವಲ್ಲಿ ತಮ್ಮ ಇಲಾಖೆ ಸಹಕರಿಸಬೇಕಾಗಿ ಈ ಮೂಲಕ ವಿನಂತಿಸಿಕೊಳ್ಳುತ್ತೇನೆ.

ತನಿಖೆಗೆ ಪೂರ್ಣ ಪ್ರಮಾಣದಲ್ಲಿ ಸಹಕರಿಸಲು ಸಿದ್ಧ ಎಂದಿದ್ದ ಚೈತ್ರಾ

ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ವೈಯಕ್ತಿಕವಾಗಿ ಯಾವುದೇ ತೆರನಾದ ತನಿಖೆಗೆ ಸಂಪೂರ್ಣವಾಗಿ ಸಹಕರಿಸಲು ಸಿದ್ಧಳಿದ್ದೇನೆ ಹಾಗೂ ಇದಕ್ಕೆ ನಾನು ನೀಡಿರುವ ಕಾಲ್ ರೆಕಾರ್ಡ್ ದಾಖಲೆಗಳಿಗೆ ಪೂರಕವಾಗಿ ನನ್ನ ಮೊಬೈಲ್ ಸೇರಿದಂತೆ ಯಾವುದೇ ಯಂತ್ರೋಪಕರಣಗಳನ್ನು ಇಲಾಖೆಗೆ ನೀಡಲು ನಾನು ಸದಾ ಸಿದ್ಧಳಾಗಿದ್ದೇನೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ಈ ಪ್ರಕರಣ ಕಾನೂನು ಮೂಲಕ ಬಗೆಹರಿದು ಯಾರೇ ಕಾನೂನನ್ನು ಮೀರಿ ವ್ಯವಹಾರ ನಡೆಸಿದ್ದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಕೋರಿಕೊಳ್ಳುತ್ತೇನೆ.- ಇತೀ ತಮ್ಮ ವಿಶ್ವಾಸಿ

(ಈ ಪತ್ರದೊಂದಿಗೆ ನೀಡಿರುವ ಪೆನ್ ಡ್ರೈವ್ ನಲ್ಲಿ ಮೇಲೆ ತಿಳಿಸಿದ ಎಲ್ಲಾ ವಿಷಯಗಳಿಗೆ ಸಂಬಂಧಿಸಿದ ಸಾಕ್ಷಿ ಆಧಾರಗಳು ಲಭ್ಯವಿರುತ್ತದೆ, ಅದಕ್ಕೆ ಸಂಬಂಧಿಸಿದ ಫೈಲ್ ನಂಬರ್ ಗಳನ್ನು ಕೂಡ ತಿಳಿಸಿರುತ್ತೇನೆ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉಡುಪಿ

Billionaire Farmer : ಕುಂದಾಪುರದ ರಮೇಶ್‌ ನಾಯಕ್‌ ಬಿಲಿಯನೇರ್‌ ರೈತ; ಇವರ ತೋಟ ನೋಡಿದ್ರಾ?

Billionaire farmer: ಕುಂದಾಪುರದ ಪ್ರಗತಿಪರ ರೈತ, ಉದ್ಯಮಿಯೊಬ್ಬರು ಕೇಂದ್ರ ಸರ್ಕಾರದ ಬಿಲಿಯನೇರ್‌ ರೈತ ಪ್ರಶಸ್ತಿ ಪಡೆದಿದ್ದಾರೆ. ಹಾಗಿದ್ದರೆ ಅವರು ಮಾಡಿದ್ದೇನು? ಇಲ್ಲಿದೆ ಮಾಹಿತಿ.

VISTARANEWS.COM


on

Ramesh Nayak Billionaire farmer
Koo

ಉಡುಪಿ: ರೈತ ಅಂದ ಕೂಡಲೇ ಬಡವ, ಸಾಲ ಸುಳಿಗೆ ಸಿಲುಕಿದವರು ಎಂಬೆಲ್ಲಾ ಚಿತ್ರಣಗಳು ಮೂಡುವ ಕಾಲದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ತೆಕ್ಕಟ್ಟೆಯ‌ ವ್ಯಕ್ತಿಯೊಬ್ಬರು ಬಿಲಿಯನೇರ್‌ ರೈತ (Billionaire Farmer) ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇಂದ್ರ ಸರ್ಕಾರ ಕೊಡುವ ಈ ಪ್ರಶಸ್ತಿಯನ್ನು ಪಡೆದವರು ತೆಕ್ಕಟ್ಟೆಯ ರೈತ ಕಮ್‌ ಉದ್ಯಮಿ ರಮೇಶ್‌ ನಾಯಕ್‌ (Ramesh Nayak). ಡಿಸೆಂಬರ್‌ 7ರಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರೇ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ರೈಸ್‌ಮಿಲ್ ಉದ್ಯಮದ ಜತೆಗೆ ಕೃಷಿ ಮೌಲ್ಯವರ್ಧನೆ ಹಾಗೂ ಗ್ರಾಮೀಣ ರೈತರಿಗೆ ಬೆನ್ನೆಲುಬಾಗಿ ನಿಂತ ಉದ್ಯಮಿ ರಮೇಶ್ ನಾಯಕ್ ಕೇಂದ್ರ ಸರಕಾರ ಕೊಡಮಾಡುವ ಬಿಲಿಯನೇರ್ ರೈತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ತೆಕ್ಕಟ್ಟೆಯ ರೈಸ್‌ಮಿಲ್ ಉದ್ಯಮಿ ರಮೇಶ್ ನಾಯಕ್ ಅವರು ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ ಸುಮಾರು 13 ಎಕರೆ ಜಾಗದಲ್ಲಿ ಸುಮಾರು 11 ಜಾತಿಯ, ಸುಮಾರು 1,634 ವಿವಿಧ ತಳಿಯ ಹಣ್ಣಿನ ಗಿಡಗಳನ್ನು ನೆಟ್ಟು ಉತ್ತಮ ಫಸಲು ಕಂಡುಕೊಳ್ಳುವ ಮೂಲಕ ನಿಸರ್ಗ ಪ್ರೇಮ ಮೆರೆದು ಜಿಲ್ಲೆಯಲ್ಲಿ ಮಾದರಿಯಾಗಿದ್ದಾರೆ.

ವಾರ್ಷಿಕ ಸುಮಾರು ಕೋಟಿ ರೂ.ಗಳಿಗೂ ಅಧಿಕ ವಹಿವಾಟು ಮಾಡಿರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಹೊಸದಿಲ್ಲಿಯಲ್ಲಿ ಡಿ. 7ರಂದು ನಡೆಯುವ ಕಾರ್ಯಕ್ರಮದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Ramesh Nayak Billionaire farmer

ಯಾರಿವರು ರೈತ ರಮೇಶ್‌ ನಾಯಕ್‌?

ತೆಕ್ಕಟ್ಟೆ ರಮೇಶ್ ನಾಯಕ್, ಮೂಲತಃ ರೈಸ್ ಮಿಲ್ ಉದ್ಯಮಿ, ಇವರು ಹಣ್ಣುಗಳ ಬಗ್ಗೆ ಇರುವ ವಿಶೇಷ ಪ್ರೀತಿಯಿಂದ ವಿವಿಧ ಉಪ ಉಷ್ಣ ವಲಯದಲ್ಲಿ ಎಳೆಯುವ ವಿಶೇಷ ಹಣ್ಣುಗಳ ಬಗ್ಗೆ ಅಧ್ಯಯನ ಮಾಡಿ
ಕೆದೂರು ಗ್ರಾಮದಲ್ಲಿ ಸುಮಾರು 13 ಎಕ್ರೆ ಜಾಗದಲ್ಲಿ ಕಾಮಾಕ್ಷಿ ಫಾರ್ಮ್ಸ ಅನ್ನು 2019ರಲ್ಲಿ ಸ್ಥಾಪಿಸಿದರು. ರಂಬುಟನ್, 5 ವಿಧದ ಹಲಸು, ಮ್ಯಾಂಗೋಸ್ಟೀನ್, ದುರಿಯನ್, ಡ್ರಾಗನ್, ಪ್ಯಾಶನ್ ಹಣ್ಣು ಹೀಗೆ ವಿವಿಧ ಹಣ್ಣುಗಳನ್ನು ಯಾವುದೇ ಹಾನಿಕಾರಕ ರಾಸಾಯನಿಕಗಳನ್ನು ಬಳಸದೆ ಬೆಳೆಯುತ್ತಾರೆ.

ಹಣ್ಣುಗಳನ್ನು ಬೆಳೆಯುವುದು ಅಷ್ಟೇ ಅಲ್ಲದೆ ಹಣ್ಣುಗಳನ್ನು ಸ್ವಚ್ಛಗೊಳಿಸಿ ಕತ್ತರಿಸಿ ಬಾಕ್ಸ್ ಗಳಲ್ಲಿ ಪ್ಯಾಕ್ ಮಾಡಿ ಮಾರಾಟ ಮಾಡಿ ಕರಾವಳಿ ಕರ್ನಾಟಕದಲ್ಲಿ ಹಣ್ಣುಗಳ ವ್ಯಾಪಾರಕ್ಕೆ ಹೊಸ ಭಾಷ್ಯ ಬರೆದಿದ್ದು ರಮೇಶ್ ನಾಯಕ್ ಅವರ ಕಾಮಾಕ್ಷಿ ಫಾರ್ಮ್ಸ್.

Ramesh Nayak Billionaire farmer

ಹಲಸಿನ ಸೊಳೆ ಹೋಮ್‌ ಡೆಲಿವರಿ ಮಾಡ್ತಾರೆ!

ವಿವಿಧ ತಳಿಯ ಹಲಸಿನ ಹಣ್ಣನ್ನು ಬಾಕ್ಸ್ ಮಾಡಿ ತಳಿಗಳ ಬಗ್ಗೆ ಗ್ರಾಹಕರಿಗೆ ತಿಳಿಸಿ ಉತ್ತಮ ರುಚಿಯ ಶುಚಿಯಾದ ಹಲಸಿನ ಸೊಳೆಗಳ ಬಾಕ್ಸ್ ಅನ್ನು ಹೋಂ ಡೆಲಿವರಿ ಮೂಲಕ ಮನೆ ಮನೆಗೆ ತಲುಪಿಸಿ ಪ್ರಾರಂಭವಾದ ಹಣ್ಣುಗಳ ಬಾಕ್ಸ್ ಮಾರಾಟ ನಂತರದ ದಿನಗಳಲ್ಲಿ ಅನಾನಸ್, ಪಪಾಯ, ಡ್ರಾಗನ್ ಹೀಗೆ ತೋಟದಲ್ಲಿ ಬೆಳೆಯುವ ಎಲ್ಲ ಹಣ್ಣುಗಳಿಗೆ ಅಳವಡಿಸಿ ಅದರಲ್ಲಿ ಯಶ ಕಂಡಿದ್ದಾರೆ. ತೋಟದಿಂದ ಗ್ರಾಹಕರಿಗೆ ಎಂಬ ವಿಚಾರವನ್ನಿಟ್ಟು ಉತ್ತಮ ಗುಣಮಟ್ಟದ ಹಣ್ಣುಗಳನ್ನು ನೇರವಾಗಿ ಗ್ರಾಹರಿಗೆ ತಲುಪಿಸುವಲ್ಲಿ ಹೆಜ್ಜೆಯನ್ನು ಇಟ್ಟಿದ್ದಾರೆ.

ಇದನ್ನೂ ಓದಿ: Agriculture APP : ರೈತರಿಗಾಗಿ AI ಆಧಾರಿತ ಆ್ಯಪ್ ಶೀಘ್ರ; ಕೃಷಿ ಇಲಾಖೆಯಿಂದ ಮಹತ್ವದ ಹೆಜ್ಜೆ

ವಿದೇಶದಿಂದ ಆಮದಾಗುವ ಹಣ್ಣುಗಳನ್ನು ರುಚಿ ಮತ್ತು ಗುಣಮಟ್ಟದಲ್ಲಿ ಯಾವುದೇ ರಾಜಿಯಾಗದೇ ಹಾನಿಕಾರಕ ರಾಸಾಯನಿಕಗಳನ್ನೂ ಬಳಸದೆ ಬೆಳೆದು ಮಾರುಕಟ್ಟೆ ಮಾಡುವಲ್ಲಿ ಕಾಮಾಕ್ಷಿ ಫಾರ್ಮ್ಸ್ ಯಶ ಕಂಡಿದೆ.

Continue Reading

ಉಡುಪಿ

Fraud Case : ವಂಚಕಿ ಚೈತ್ರಾಗೆ ಕೊನೆಗೂ ಸಿಕ್ತು ಜಾಮೀನು, ಇಂದು ಜೈಲಿಂದ ಬಿಡುಗಡೆ

Fraud Case : ಉದ್ಯಮಿ ಗೋವಿಂದ ಪೂಜಾರಿ ಅವರಿಗೆ 5 ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಕುಂದಾಪುರದ ಚೈತ್ರಾ ಮತ್ತು ಶ್ರೀಕಾಂತ್‌ ಗೆ ಜಾಮೀನು ಸಿಕ್ಕಿದೆ.

VISTARANEWS.COM


on

Chaitra from Kundapura released
Koo

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ (Govinda Babu Poojari) ಅವರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ (Fraud Case) ಜೈಲು ಸೇರಿದ್ದ ‌ ಉಗ್ರ ಹಿಂದುತ್ವದ ಭಾಷಣಕಾರ್ತಿ ಕುಂದಾಪುರದ ಚೈತ್ರಾಗೆ (Chaitra from Kundapura) ಕೋರ್ಟ್‌ ಜಾಮೀನು ಮಂಜೂರು (Bail from Court) ಮಾಡಿದೆ. ಆಕೆ ಮಂಗಳವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾಳೆ. ಆಕೆಯ ಜತೆ ಸಹ ಆರೋಪಿ ಶ್ರೀಕಾಂತ್‌ ಕೂಡಾ ಬಿಡುಗಡೆಯಾಗಲಿದ್ದಾನೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸೆಪ್ಟೆಂಬರ್‌ 12ರ ರಾತ್ರಿ ಚೈತ್ರಾಳನ್ನು ಉಡುಪಿಯಲ್ಲಿ ಬಂಧಿಸಲಾಗಿತ್ತು. ಅದೇ ಸಂದರ್ಭದಲ್ಲಿ ಆಕೆಯ ಸಹಚರ ಗಗನ್‌ ಕಡೂರ್‌, ಪ್ರಜ್ವಲ್‌, ಶ್ರೀಕಾಂತ್‌ ಕೂಡಾ ಸೆರೆಯಾಗಿದ್ದರು. ಮುಂದೆ ಕಡೂರಿನ ರಮೇಶ್‌ ಮತ್ತು ಧನರಾಜ್‌ ಹಾಗೂ ಚೆನ್ನಾ ನಾಯ್ಕ್‌ ಸೆರೆಸಿಕ್ಕಿದ್ದರು. ಅದಾದ ಕೆಲವೇ ದಿನದಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಕಟಕ್‌ನಲ್ಲಿ ಬಂಧಿಸಲಾಗಿತ್ತು. ಹಾಲಶ್ರೀ ಸ್ವಾಮೀಜಿಗೆ ನವೆಂಬರ್‌ 11ರಂದು ಕೋರ್ಟ್‌ ಜಾಮೀನು ನೀಡಿತ್ತು. ಇದೀಗ ಪ್ರಕರಣದ ಮೊದಲ ಆರೋಪಿ ಚೈತ್ರಾ ಮತ್ತು ಏಳನೇ ಆರೋಪಿ ಶ್ರೀಕಾಂತ್‌ಗೆ 3ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಬಂಧನವಾದ ಬಳಿಕ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದ ಚೈತ್ರಾ ಎಂಟ್‌ ಟೀಮ್‌ ಹಲವು ಬಾರಿ ಜಾಮೀನಿಗೆ ಅರ್ಜಿ ಸಲ್ಲಿಸಿತ್ತು. ಆದರೆ, ಸಿಕ್ಕಿರಲಿಲ್ಲ. ಈ ನಡುವೆ, ಹಾಲಶ್ರೀಗೆ ಜಾಮೀನು ಸಿಕ್ಕಿರುವುದು ಚೈತ್ರಾ ಮತ್ತು ತಂಡಕ್ಕೆ ಅನುಕೂಲವಾಗಿದೆ. ಈ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವ ಕೋರ್ಟ್‌ ಇಬ್ಬರು ವ್ಯಕ್ತಿಗಳ ಶ್ಯೂರಿಟಿ, ಎರಡು ಲಕ್ಷ ಬಾಂಡ್ ನೀಡುವಂತೆ ಸೂಚಿಸಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಷರತ್ತು ವಿಧಿಸಿದೆ. ಆರೋಪಿಗಳಿಂದ ಈಗಾಗಲೇ ಅವರು ವಂಚನೆ ಮಾಡಿದ ಲಕ್ಷಾಂತರ ರೂ. ನಗದು, ಆಸ್ತಿ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಏನಿದು ಚೈತ್ರಾ ವಂಚನೆ ಪ್ರಕರಣ?

ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಗೋವಿಂದ ಪೂಜಾರಿ ಅವರು ಸಮಾಜಸೇವಕರೂ ಆಗಿದ್ದು ಬೈಂದೂರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಹೊತ್ತಿದ್ದರು. ಈ ಸಂಬಂಧ ಟಿಕೆಟ್‌ ಪಡೆಯಲು ಯಾರ ಮೂಲಕ ಪ್ರಯತ್ನಿಸಬಹುದು ಎಂಬ ಚರ್ಚೆ ನಡೆದಾಗ ಯಾರೋ ಭಾಷಣಕಾರ್ತಿ ಚೈತ್ರಾ ಹೆಸರು ಹೇಳಿದ್ದರು. ಆಕೆಯನ್ನು ಭೇಟಿ ಮಾಡಿದಾಗ ಆಕೆ ಖಂಡಿತವಾಗಿಯೂ ಟಿಕೆಟ್‌ ಕೊಡಿಸುವ ಭರವಸೆ ನೀಡಿದ್ದಳು. ಈ ನಡುವೆ, ಚೈತ್ರಾ ಗೋವಿಂದ ಬಾಬು ಪೂಜಾರಿಯವರನ್ನು ಹಾಲಶ್ರೀ ಸ್ವಾಮೀಜಿಗಳ ಬಳಿ ಕರೆದುಕೊಂಡು ಹೋಗಿದ್ದಳು. ಆಗ ಸ್ವಾಮೀಜಿ ಟಿಕೆಟ್‌ ಗಾಗಿ 1.5 ಕೋಟಿ ರೂ ಬೇಡಿಕೆ ಇಟ್ಟಿದ್ದರು. ಅದನ್ನು ಗೋವಿಂದ ಪೂಜಾರಿ ಕೆಲವೇ ಸಮಯದಲ್ಲಿ ಹಸ್ತಾಂತರ ಮಾಡಿದ್ದರು. ಈ ನಡುವೆ, ಎಲ್ಲಾ ದುಡ್ಡು ಸ್ವಾಮೀಜಿ ಪಾಲಾಗುತ್ತದೆ, ಇಷ್ಟು ಕಷ್ಟ ಪಟ್ಟ ತನಗೆ ಏನೂ ಸಿಗುವುದಿಲ್ಲ ಎಂದು ಯೋಚಿಸಿ ಗೋವಿಂದ ಪೂಜಾರಿಯಿಂದ ಹಣ ಕಸಿಯುವ ಪ್ಲ್ಯಾನ್‌ ಮಾಡಿದ್ದಳು. ಅದಕ್ಕೆ ಕಡೂರಿನ ಬಿಜೆಪಿ ನಾಯಕ ಗಗನ್‌ ನನ್ನು ಸೇರಿಸಿಕೊಂಡು ವ್ಯೂಹ ಹೆಣೆದಳು. ಆರೆಸ್ಸೆಸ್‌ನ ಹಿರಿಯ ನಾಯಕರು, ಬಿಜೆಪಿಯ ಉನ್ನತ ನಾಯಕರನ್ನು ಭೇಟಿ ಮಾಡಿಸುವ ನಾಟಕವಾಡಿ ನಾಟಕದ ವ್ಯಕ್ತಿಗಳನ್ನು ತೋರಿಸಿ ಹಣ ಪಡೆದುಕೊಂಡಳು. ಕೊನೆಗೆ ಟಿಕೆಟ್‌ ಸಿಗದೆ ಹೋದಾಗ ತನಿಖೆಗೆ ಶುರು ಮಾಡಿದ ಗೋವಿಂದ ಪೂಜಾರಿ ಅವರಿಗೆ ಜ್ಞಾನೋದಯವಾಗಿ ದೂರು ನೀಡಿದರು. ಸೆ. 12ರಂದು ಚೈತ್ರಾ ಎಂಡ್‌ ಟೀಮ್‌ ಬಂಧನವಾಗಿ ಜೈಲಿನಲ್ಲಿದೆ. ನವೆಂಬರ್‌ 12ರಂದು ಹಾಲಶ್ರೀ ಸ್ವಾಮೀಜಿ, ಡಿಸೆಂಬರ್‌ 11ರಂದು ಚೈತ್ರಾ ಮತ್ತು ಶ್ರೀಕಾಂತ್‌ಗೆ ಜಾಮೀನು ಸಿಕ್ಕಿದೆ.

Continue Reading

ಉಡುಪಿ

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Rain News : ಇನ್ನೆರಡು ದಿನಗಳು ಹಗುರ ಮಳೆಯೊಂದಿಗೆ ಥಂಡಿ ಗಾಳಿಯು ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

women enjoying in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಡಿ. 4-5ರಂದು ಮಳೆಯ ಸಿಂಚನವಾಗಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ ವೇಗದಲ್ಲಿ ನೆಲಗಾಳಿಯು ಬೀಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು, ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗಲಿದೆ.

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ. ಕರಾವಳಿಯಲ್ಲಿ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಇರಲಿದ್ದು, ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Cocktail finger ring : ಬ್ರೈಡಲ್‌ ಜ್ಯುವೆಲರಿ ಫ್ಯಾಷನ್‌ನಲ್ಲಿ ಎಥ್ನಿಕ್‌ ಕಾಕ್‌ಟೈಲ್‌ ಉಂಗುರಗಳ ಕಲರವ

ಕನಿಷ್ಠ ತಾಪಮಾನ ಏರಿಕೆ

ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಕೆಲವೆಡೆ ಚಳಿಯು ಮೈ ನಡುಗಿಸಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 27 ಡಿ.ಸೆ -18 ಡಿ.ಸೆ
ಮಂಗಳೂರು: 36 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka weather : ಸೈಕ್ಲೋನ್‌ ಎಫೆಕ್ಟ್‌; ನಾಳೆ ಮಳೆ ಜತೆಗೆ ಥಂಡಿ ಗಾಳಿ

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ಮುಂದಿನ 24 ಗಂಟೆಯಲ್ಲಿ ಥಂಡಿ ಗಾಳಿ ಬೀಸಲಿದ್ದು, ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Rain alert
Koo

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣ (karnataka weather Forecast) ಇರಲಿದೆ. ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು ಮಳೆಯಾಗುವ (Rain News) ನಿರೀಕ್ಷೆ ಇದೆ.

ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಲ್ಲಿ ಹಗುರ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಮಳೆಯಾಗಲಿದೆ.

ಮೇಲ್ಮೈ ಗಾಳಿಯೊಂದಿಗೆ ಮಳೆ ಸಾಥ್‌

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಳೆ ನಡುವೆಯೂ ತಾಪಮಾನ ಎಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಶನಿವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 16.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
lidkar ambassador dolly dhananjay Officially
South Cinema14 mins ago

Dolly Dhananjay: ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

Government Job Vistara Exclusive and CM Siddaramaiah
ಉದ್ಯೋಗ18 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

kim
ವಿದೇಶ36 mins ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ49 mins ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್49 mins ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

murder case in Bengaluru
ಕರ್ನಾಟಕ1 hour ago

Murder Case : ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ಯುವಕ!

Government Job Vistara Exclusive
ಉದ್ಯೋಗ1 hour ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

danish
ಕ್ರಿಕೆಟ್1 hour ago

Danish Kaneria: ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ; ಕಾರಣವೇನು?

Snehith Gowda Became Villain In Bigg Boss Kannada in rakshasa task
ಬಿಗ್ ಬಾಸ್2 hours ago

BBK SEASON 10: ನ್ಯಾಯವಾಗಿ ಆಡೋಕ್‌ ಬಂದಿಲ್ಲ ಅಂದ್ರೆ ಹೋಗ್ತಿರ್ಬೇಕು; ಸ್ನೇಹಿತ್‌ ವಿರುದ್ಧ ರಕ್ಕಸರು ಉರಿ ಉರಿ!

pranab mukherjee and rahul gandhi
ದೇಶ2 hours ago

ʼರಾಹುಲ್‌ ಗಾಂಧಿಗೆ ರಾಜಕೀಯದಲ್ಲಿ ಪ್ರಬುದ್ಧತೆ ಇಲ್ಲʼ ಎಂದಿದ್ದರು ಪ್ರಣಬ್‌ ಮುಖರ್ಜಿ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Government Job Vistara Exclusive and CM Siddaramaiah
ಉದ್ಯೋಗ18 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 hour ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ8 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ17 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ17 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ17 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

ಟ್ರೆಂಡಿಂಗ್‌