TA Sharavana: ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪದಗ್ರಹಣ; ಶರವಣ ಅಭಿನಂದನೆ - Vistara News

ಬೆಂಗಳೂರು

TA Sharavana: ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪದಗ್ರಹಣ; ಶರವಣ ಅಭಿನಂದನೆ

TA Sharavana: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರಿಗೆ ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಟಿ.ಎ. ಶರವಣ ಅಭಿನಂದಿಸಿದ್ದಾರೆ.

VISTARANEWS.COM


on

chandrababu naidu takes oath as andhra chief minister mlc TA Sharavana Congratulated
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (Chandrababu Naidu) ಅವರಿಗೆ ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಟಿ.ಎ. ಶರವಣ (TA Sharavana) ಅಭಿನಂದಿಸಿದ್ದಾರೆ.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರ ನೇತೃತ್ವದಲ್ಲಿ ಆಂಧ್ರ ಪ್ರದೇಶವು ಆಮೂಲಾಗ್ರವಾಗಿ ಅಭಿವೃದ್ಧಿ ಕಾಣಲಿ ಹಾಗೂ ಜನತೆಗೆ ತಮ್ಮಿಂದ ಒಳ್ಳೆಯದಾಗಲಿ ಎಂದು ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಟಿ.ಎ. ಶರವಣ ಹಾರೈಸಿದ್ದಾರೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪದಗ್ರಹಣ

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್.​ ಚಂದ್ರಬಾಬು ನಾಯ್ಡು (Chandrababu Naidu) ನಾಲ್ಕನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬುಧವಾರ (ಜೂನ್‌ 12) ರಾಜ್ಯಪಾಲ ಅಬ್ದುಲ್ ನಜೀರ್ ಅವರು ಪ್ರಮಾಣ ವಚನ ಬೋಧಿಸಿದರು. ಜನಸೇನಾ ಪಾರ್ಟಿಯ ಪವನ್‌ ಕಲ್ಯಾಣ್‌ ಕೂಡ ಈ ವೇಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವಿಜಯವಾಡದ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಸಮಾರಂಭ ನಡೆದಿದ್ದು, ಎನ್‌ಡಿಎ ಒಕ್ಕೂಟದ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಚಂದ್ರಬಾಬು ನಾಯ್ಡು ಅವರ ಪುತ್ರ ಮತ್ತು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್, ಟಿಡಿಪಿಯ ಆಂಧ್ರಪ್ರದೇಶ ಘಟಕದ ಅಧ್ಯಕ್ಷ ಕೆ.ಅಚ್ಚಣ್ಣ ನಾಯ್ಡು ಮತ್ತು ಜನಸೇನಾ ಪಾರ್ಟಿಯ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷ ನಾದೆಂಡ್ಲಾ ಮನೋಹರ್ ಮತ್ತಿತರರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಮುಖರು.‌

ಇದನ್ನೂ ಒದಿ: IND vs USA: ಪಂದ್ಯಕ್ಕೆ ಮಳೆ ಭೀತಿ; ಪಂದ್ಯ ರದ್ದಾದರೆ ಉಭಯ ತಂಡಗಳು ಸೂಪರ್​-8 ಪ್ರವೇಶ

ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ಜೆ.ಪಿ.ನಡ್ಡಾ, ನಿತಿನ್‌ ಗಡ್ಕರಿ, ರಾಮ್‌ದಾಸ್‌ ಅಥವಾಳೆ, ಅನುಪ್ರಿಯಾ ಪಟೇಲ್‌, ಚಿರಾಗ್‌ ಪಾಸ್ವಾನ್‌, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂದೆ, ಎನ್‌ಚಿಪಿ ನಾಯಕರಾದ ಪ್ರಫುಲ್‌ ಪಟೇಲ್‌, ಮಾಜಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತಿತರರು ಪಾಲ್ಗೊಂಡಿದ್ದರು.

ಆಂಧ್ರ ಪ್ರದೇಶ ವಿಧಾನ ಸಭೆಯ 175 ಸೀಟುಗಳ ಪೈಕಿ ಎನ್‌ಡಿಎ 164 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಈ ಪೈಕಿ ಟಿಡಿಪಿ 135, ಜನಸೇನಾ ಪಾರ್ಟಿ 21 ಮತ್ತು ಬಿಜೆಪಿ 8 ಕಡೆ ಗೆದ್ದಿದೆ. ಮಂಗಳವಾರ ತಡರಾತ್ರಿ ಅಮರಾವತಿಯ ತಮ್ಮ ನಿವಾಸದಲ್ಲಿ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಅವರೊಂದಿಗೆ ಸಭೆ ನಡೆಸಿದ ನಂತರ ಚಂದ್ರಬಾಬು ನಾಯ್ಡು ತಮ್ಮ ಸಚಿವರ ತಂಡವನ್ನು ಅಂತಿಮಗೊಳಿಸಿದ್ದರು. ಸತ್ಯ ಕುಮಾರ್ ಯಾದವ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿಯ ಏಕೈಕ ಶಾಸಕ. ಜನಸೇನಾ ಪಾರ್ಟಿಯಿಂದ ಪವನ್ ಕಲ್ಯಾಣ್, ನಾದೆಂಡ್ಲಾ ಮನೋಹರ್ ಮತ್ತು ಕಂದುಲಾ ದುರ್ಗೇಶ್ ಮೂವರು ಸಚಿವರಾಗಿ ಆಯ್ಕೆಯಾಗಿದ್ದಾರೆ. ಈ ಸಚಿವ ಸಂಪುಟದಲ್ಲಿ 17 ಹೊಸ ಮುಖಗಳಿವೆ. ಸಂಪುಟದಲ್ಲಿ ಮೂವರು ಮಹಿಳೆಯರಿದ್ದಾರೆ.

ಇದನ್ನೂ ಓದಿ: Kalaburagi News: ಜೂ.14ರಂದು ಸಿಎಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

ಚಂದ್ರಬಾಬು ನಾಯ್ಡು 2014ರಲ್ಲಿ ವಿಭಜಿತ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದರು. ಅವರು 2019ರ ಚುನಾವಣೆಯಲ್ಲಿ ಸೋತು 2024ರವರೆಗೆ ವಿರೋಧ ಪಕ್ಷದ ನಾಯಕರಾಗಿದ್ದರು. ಇದೀಗ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಮರಳಿದ್ದಾರೆ. ಮಂಗಳವಾರ ವಿಜಯವಾಡದ ಎ-ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಟಿಡಿಪಿ, ಬಿಜೆಪಿ ಮತ್ತು ಪವನ್‌ ಕಲ್ಯಾಣ ನೇತೃತ್ವದ ಜನಸೇನಾ ಪಾರ್ಟಿ(JSP)ಯ ಶಾಸಕರು ಪಾಲ್ಗೊಂಡಿದ್ದರು. ಈ ವೇಳೆ ಮುಖ್ಯಮಂತ್ರಿ ಹುದ್ದೆಗೆ ಚಂದ್ರಬಾಬು ನಾಯ್ಡು ಅವರ ಹೆಸರನ್ನು ಪವನ್‌ ಕಲ್ಯಾಣ ಪ್ರಸ್ತಾಪಿಸಿದ್ದರು. ಇದಕ್ಕೆ ಬಿಜೆಪಿಯ ಡಿ.ಪುರಂದರೇಶ್ವರಿ ಬೆಂಬಲ ಸೂಚಿಸಿದರು. ಬಳಿಕ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru News: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ; ಕರವೇಯಿಂದ ಜು.1ರಂದು ಬೃಹತ್ ಧರಣಿ ಸತ್ಯಾಗ್ರಹ

Bengaluru News: ಕರ್ನಾಟಕ ರಕ್ಷಣಾ ವೇದಿಕೆಯಿಂದ ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1 ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

VISTARANEWS.COM


on

Demand to provide job reservation for Kannadigas; Massive Dharani sathyagraha on July 1 from Karave
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯಿಂದ ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ (Bengaluru News) ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕಕ್ಕೆ ಹೊರರಾಜ್ಯಗಳಿಂದ ಅವ್ಯಾಹತವಾಗಿ ವಲಸೆ ನಡೆಯುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಇದು ತೀವ್ರ ಸ್ವರೂಪ ಪಡೆದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಮಹಾನಗರಗಳು ವಲಸಿಗರ ಹಾವಳಿಯಿಂದ ಸಂಪೂರ್ಣ ಬದಲಾಗುತ್ತಿವೆ. ಕನ್ನಡಿಗರ ಉದ್ಯೋಗಗಳನ್ನು ಹೊರರಾಜ್ಯದವರು ಕಿತ್ತುಕೊಳ್ಳುತ್ತಿದ್ದಾರೆ. ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ವೇದಿಕೆ ದೊಡ್ಡ ಪ್ರಮಾಣದ ಚಳವಳಿಗೆ ಸಜ್ಜಾಗಿದೆ. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಲು ಆಗ್ರಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: MEIL: ಕೈಗಾ ಪರಮಾಣು ವಿದ್ಯುತ್‌ ಉತ್ಪಾದನೆ ಯೋಜನೆ ಜಾರಿ ಅವಕಾಶ ಗಿಟ್ಟಿಸಿದ ಎಂ.ಇ.ಐ.ಎಲ್‌

ಹಕ್ಕೊತ್ತಾಯಗಳು

ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ಅನ್ವಯ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು.

ಎಲ್ಲ ಖಾಸಗಿ ಸಂಸ್ಥೆಗಳ ಇತರ ಹುದ್ದೆಗಳಲ್ಲಿ ಶೇ. 80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಹದಿನೈದು ವರ್ಷ ಕಾಲ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು.

ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ಭೂಮಿ ನೀಡಲಾಗಿದ್ದರೆ ಹಿಂದಕ್ಕೆ ಪಡೆಯುವ ಮತ್ತು ಆ ಸಂಸ್ಥೆಗಳಿಗೆ ನೀಡಿರುವ ಎಲ್ಲ ಸವಲತ್ತುಗಳನ್ನು ಹಿಂದಕ್ಕೆ ಪಡೆಯುವ ನಿಯಮವನ್ನು ರೂಪಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ದಂಡ ವಿಧಿಸಬೇಕು ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು.

ಇದನ್ನೂ ಓದಿ: Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ಮೀಸಲಾತಿ ನೀಡಬೇಕು. ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ಹೊರತಾದ ಉಳಿದೆಲ್ಲ ಹುದ್ದೆಗಳಲ್ಲೂ ಶೇ. 90ರಷ್ಟು ಮೀಸಲಾತಿ ನೀಡಬೇಕು.

ರಾಜ್ಯ, ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅವಕಾಶವನ್ನು ಉದ್ದೇಶಿತ ಕಾನೂನಿನಲ್ಲಿ ಅಳವಡಿಸಬೇಕು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ರಾಜ್ಯ ಸರ್ಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡಬೇಕು. ಮುಂದೆ ಕಾನೂನು ಸಮಸ್ಯೆಗಳು ಎದುರಾದರೆ ಅದನ್ನು ಎದುರಿಸಲು ಸಮರ್ಥ ವಕೀಲರ ತಂಡವನ್ನು ಸಿದ್ಧಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Continue Reading

ಕರ್ನಾಟಕ

MEIL: ಕೈಗಾ ಪರಮಾಣು ವಿದ್ಯುತ್‌ ಉತ್ಪಾದನೆ ಯೋಜನೆ ಜಾರಿ ಅವಕಾಶ ಗಿಟ್ಟಿಸಿದ ಎಂ.ಇ.ಐ.ಎಲ್‌

MEIL: ನ್ಯೂಕ್ಲಿಯರ್‌ ಪವರ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (ಎನ್‌ಪಿಸಿಐಎಲ್‌) ಶುದ್ಧ ಮತ್ತು ಸುರಕ್ಷಿತ ಅಣು ವಿದ್ಯುತ್‌ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದು, ರಾಜ್ಯದ ಕೈಗಾ ಸ್ಥಾವರದಲ್ಲಿ 2×700 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆ ಯೋಜನೆ ರೂಪಿಸಿದೆ. ಇದಕ್ಕಾಗಿ ಎನ್‌ಪಿಸಿಎಲ್‌ ತನ್ನ ಈವರೆಗಿನ ಬೃಹತ್‌ ಮೊತ್ತ ಎನ್ನಬಹುದಾದದ 12,799 ಕೋಟಿ ರೂ.ಗಳ ಟೆಂಡರ್‌ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ದೇಶದ ಪ್ರಖ್ಯಾತ ಮೂಲಸೌಕರ್ಯ ಸಂಸ್ಥೆ ಎಂ.ಇ.ಐ.ಎಲ್‌ ಈ ವಿದ್ಯುತ್‌ ಸ್ವಾವಲಂಬಿ ನಿರ್ಮಾಣ ಟೆಂಡರ್‌ ಅನ್ನು ತನ್ನದಾಗಿಸಿಕೊಂಡಿದೆ.

VISTARANEWS.COM


on

MEIL got the opportunity to implement Kaiga nuclear power generation project
Koo

ಬೆಂಗಳೂರು: ನ್ಯೂಕ್ಲಿಯರ್‌ ಪವರ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (MEIL) ಶುದ್ಧ ಮತ್ತು ಸುರಕ್ಷಿತ ಅಣು ವಿದ್ಯುತ್‌ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದು, ರಾಜ್ಯದ ಕೈಗಾ ಸ್ಥಾವರದಲ್ಲಿ 2×700 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆ ಯೋಜನೆ ರೂಪಿಸಿದೆ.

ಇದಕ್ಕಾಗಿ ಎನ್‌ಪಿಸಿಎಲ್‌ ತನ್ನ ಈವರೆಗಿನ ಬೃಹತ್‌ ಮೊತ್ತ ಎನ್ನಬಹುದಾದ 12,799 ಕೋಟಿ ರೂ.ಗಳ ಟೆಂಡರ್‌ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ದೇಶದ ಪ್ರಖ್ಯಾತ ಮೂಲಸೌಕರ್ಯ ಸಂಸ್ಥೆ ಎಂ.ಇ.ಐ.ಎಲ್‌ ಈ ವಿದ್ಯುತ್‌ ಸ್ವಾವಲಂಬಿ ನಿರ್ಮಾಣ ಟೆಂಡರ್‌ ಅನ್ನು (Bengaluru News) ತನ್ನದಾಗಿಸಿಕೊಂಡಿದೆ.

ಅಣುಶಕ್ತಿ ಇಲಾಖೆಯ ಅಧೀನದಲ್ಲಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ ಪಿಸಿಐಎಲ್) ನಡೆಸುವ ಎಂಜಿನಿಯರಿಂಗ್, ಸಂಗ್ರಹಣೆ ಮತ್ತು ನಿರ್ಮಾಣ (ಇಪಿಸಿ) ಗುತ್ತಿಗೆಗೆ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಎಂಇಐಎಲ್) ಅತ್ಯಂತ ಕಡಿಮೆ ಬಿಡ್‌ದಾರನಾಗಿ ಹೊರಹೊಮ್ಮಿದೆ. ಈ ಪ್ರತಿಷ್ಠಿತ ಯೋಜನೆಯು ಕರ್ನಾಟಕದ ಕೈಗಾದಲ್ಲಿ ನಿರ್ಮಾಣವಾಗಲಿದ್ದು, ಶುದ್ಧ ಮತ್ತು ವಿಶ್ವಾಸಾರ್ಹ ಪರಮಾಣು ಶಕ್ತಿಯತ್ತ ಭಾರತದ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲಿಗೆ ಸಾಕ್ಷಿಯಾಗಲಿದೆ.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ಗುಣಮಟ್ಟ ಮತ್ತು ವೆಚ್ಚ ಆಧಾರಿತ ಆಯ್ಕೆ (ಕ್ಯೂಸಿಬಿಎಸ್) ವಿಧಾನವನ್ನು ಪರಿಚಯಿಸುವುದರೊಂದಿಗೆ ಈ ಯೋಜನೆಯು ಮಹತ್ವ ಪಡೆದುಕೊಂಡಿದ್ದು, ಈ ಕಠಿಣ ಯೋಜನೆ ಜಾರಿಗೆ ತಾಂತ್ರಿಕ ಪರಿಣಿತಿ ಮತ್ತು ಕಡಿಮೆ ವೆಚ್ಚದ ವಿದ್ಯುತ್‌ ಉತ್ಪಾದನೆ ಹಾದಿ ಸುಗಮಗೊಳಿಸಲಿದೆ.

ಟೆಂಡರ್ ಪ್ರಕ್ರಿಯೆಯು ಮೇ 2023ರಲ್ಲಿ ಪ್ರಾರಂಭವಾಯಿತು, ತಾಂತ್ರಿಕ ಬಿಡ್ ಅಕ್ಟೋಬರ್ 2023 ರಲ್ಲಿ ತೆರೆಯಲ್ಪಟ್ಟಿತು. ಅತ್ಯಂತ ಸ್ಪರ್ಧಾತ್ಮಕ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ದೇಶದ ಪ್ರಮುಖ ಮೂಲ ಸೌಕರ್ಯ ಸಂಸ್ಥೆಗಳಾದ ಬಿಎಚ್ಇಎಲ್, ಎಲ್ ಅಂಡ್‌ ಟಿ ಮತ್ತು ಎಂಇಐಎಲ್ ಆಸಕ್ತಿ ತೋರಿಸಿತ್ತು. ಎಂಇಐಎಲ್ 12,799.92 ಕೋಟಿ ರೂ.ಗಳ ಕನಿಷ್ಠ ಬಿಡ್ ಸಲ್ಲಿಸುವ ಮೂಲಕ ತನ್ನ ಅಸಾಧಾರಣ ತಾಂತ್ರಿಕ ಸಾಮರ್ಥ್ಯ ಮತ್ತು ವೆಚ್ಚ-ದಕ್ಷತೆಯನ್ನು ಪ್ರದರ್ಶಿಸುವ ಮೂಲಕ ಅತ್ಯಂತ ಕಡಿಮೆ ಬಿಡ್‌ದಾರನಾಗಿ ಹೊರಹೊಮ್ಮುವ ಮೂಲಕ ನಿರ್ಮಾಣ ಕಾರ್ಯದ ಜವಾಬ್ದಾರಿ ವಹಿಸಿಕೊಂಡಿದೆ.

“ಈ ಒಪ್ಪಂದವು ಎಂಇಐಎಲ್‌ಗೆ ಮಹತ್ವದ ಯೋಜನೆ ಜತೆಗೆ ಪರಮಾಣು ಇಂಧನ ಕ್ಷೇತ್ರದ ಪ್ರವೇಶಕ್ಕೆ ಸಮರ್ಥ ವೇದಿಕೆಯಾಗಿದೆ ” ಎಂದು ಎಂಇಐಎಲ್ ನಿರ್ದೇಶಕ ಸಿ.ಎಚ್.ಸುಬ್ಬಯ್ಯ ಹೇಳಿದ್ದಾರೆ.

ಇದನ್ನೂ ಓದಿ: Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

“ಉತ್ಕೃಷ್ಟತೆ ಮತ್ತು ನಾವೀನ್ಯತೆಗೆ ಹೆಸರುವಾಸಿಯಾಗಿರುವ ಎಂಇಐಎಲ್‌ ಈ ಯೋಜನೆ ಮೂಲಕ ದೇಶದ ಶುದ್ಧ ಇಂಧನ ಪರಿಹಾರ ಮತ್ತು ಸ್ವಾವಲಂಬನೆಗೆ ಕೊಡುಗೆ ನೀಡಲು ಉತ್ಸುಕವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Continue Reading

ಕರ್ನಾಟಕ

DK Shivakumar: ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್

DK Shivakumar: ಬಿಜೆಪಿ ರೈತರ ವಿರೋಧಿ ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM DK Shivakumar statement about milk price hike
Koo

ಬೆಂಗಳೂರು: ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿರುಗೇಟು ನೀಡಿದರು.

ವಿಧಾನಸೌಧದ ಆವರಣದಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಹಾಲಿನ ದರ ಏರಿಕೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಹಾಲಿನ ದರಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ ಬೆಲೆಗೆ ಹಾಲು ನೀಡಲಾಗುತ್ತಿದೆ ಎಂದರು.

ಬೆಲೆ ಏರಿಕೆ ಹಣ ರೈತರಿಗೆ ಹೋಗುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷರು ಹೇಳಿದ್ದಾರೆ ಎಂದು ಕೇಳಿದಾಗ, “ಕೆಎಂಎಫ್ ಎಂದರೆ ರೈತರು, ಅದು ರೈತರ ಒಕ್ಕೂಟ. ಯಾರು ಏನಾದರೂ ವಿವಾದ ಮಾಡಲಿ, ಪರವಾಗಿಲ್ಲ. ನನ್ನ ಪ್ರಕಾರ ಹಾಲಿನ ದರ ಇನ್ನೂ ಹೆಚ್ಚಳ ಮಾಡಬೇಕಿತ್ತು. ರೈತರು ತಮ್ಮ ಹಸುಗಳನ್ನು ಮಾರಿಕೊಳ್ಳುವ ದುಸ್ಥಿತಿಯಲ್ಲಿ ಇದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಎಷ್ಟಿದೆ ಎಂದು ತಿಳಿದು, ಆಮೇಲೆ ಮಾತಾಡಲಿ. ರೈತರನ್ನು ಬದುಕಿಸುವ ಕೆಲಸ ಮಾಡಲಿ” ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು: ವಿರೋಧ ಪಕ್ಷದ ನಾಯಕನಾಗಬೇಕು ಎಂಬುದು ರಾಹುಲ್ ಗಾಂಧಿ ಅವರ ಬಯಕೆಯಲ್ಲ. ಇದು ಜನರ ಬಯಕೆ. ನಮ್ಮ ಮನವಿಯನ್ನು ಒಪ್ಪಿ ವಿರೋಧ ಪಕ್ಷದ ನಾಯಕ ಜವಾಬ್ದಾರಿ ವಹಿಸಿಕೊಂಡ ರಾಹುಲ್ ಗಾಂಧಿ ಅವರಿಗೆ ದೇಶದ ಜನರ ಪರವಾಗಿ, ಇಂಡಿಯಾ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗೆ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಈ ತೀರ್ಮಾನ ನಾವು ಸ್ವಾಗತಿಸುತ್ತೇವೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ತೀರ್ಮಾನ ಕೈಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಒತ್ತಡ ಹಾಕಿದ ಇಂಡಿಯಾ ಮೈತ್ರಿಕೂಟ ನಾಯಕರಿಗೆ ಅಭಿನಂದನೆಗಳು. ಈ ದೇಶದ ರಕ್ಷಣೆ ಹಾಗೂ ಜನರ ಹಿತ ಕಾಯಲು ಇಂಡಿಯಾ ಮೈತ್ರಿಕೂಟ ಹೋರಾಟ ಮಾಡಲಿದೆ ಎಂದರು.

ಇದನ್ನೂ ಓದಿ: Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

ಹೆಚ್ಚುವರಿ ಡಿಸಿಎಂ ಬೇಡಿಕೆ ಚರ್ಚೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಕೇಳಿ. ಈ ಬಗ್ಗೆ ಉತ್ತರ ನೀಡಲು ಅವರೇ ಸೂಕ್ತ ವ್ಯಕ್ತಿ ಎಂದು ತಿಳಿಸಿದರು.

Continue Reading

ಬೆಂಗಳೂರು

HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

HD Kumaraswamy: ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಮಂತ್ರಿ ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ. ಆ ಮಹಾಪುರುಷರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಹೃದಯದಲ್ಲಿ ಗೌರವ ಎನ್ನುವುದು ಇದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

VISTARANEWS.COM


on

Union Minister HD Kumaraswamy latest statement in New Delhi
Koo

ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತೂ ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು.

ನವದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ ಎಂದರು.

ಕೆಂಪೇಗೌಡರ ಜಯಂತಿಗೆ ನನಗೆ ಆಹ್ವಾನ ಇಲ್ಲ, ಆಹ್ವಾನ ಪತ್ರಿಕೆಯಲ್ಲಿ ಹೆಸರೂ ಹಾಕಿಲ್ಲ ಎಂದು ನೀವು ಕೇಳಿದಿರಿ ಎನ್ನುವ ಕಾರಣಕ್ಕೆ ನಾನು ಮಾತಾಡಬೇಕಾಯಿತು. ನನ್ನ ಹೃದಯದಲ್ಲಿ ನಾಡಪ್ರಭುಗಳು ಇದ್ದಾರೆ. ಅವರು ಕಾರ್ಯಕ್ರಮಕ್ಕೆ ಕರೆಯದಿರುವುದಕ್ಕೆ ನನಗೆ ಬೇಸರವಿಲ್ಲ, ನಾನು ಈ ವಿಚಾರಕ್ಕೆ ಮಹತ್ವ ಕೊಡುವುದಿಲ್ಲ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

ನಾನು ಯಾವಾಗಲೂ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿ ಎಂದು ಹೇಳುವುದಿಲ್ಲ. ಪ್ರೀತಿಯಿಂದ ಕರೆದರೆ ಹೋಗುತ್ತೇನೆ. ನಾನು ಈಗ ದೆಹಲಿಯಲ್ಲಿ ಸಂಸತ್ ಕಲಾಪದಲ್ಲಿ ಭಾಗಿಯಾಗಿದ್ದೇನೆ. ನಾಳೆಯ ದಿನ ರಾಷ್ಟ್ರಪತಿಗಳು ಸಂಸತ್ತಿನ ಜಂಟಿ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅವರು ಕರೆದಿದ್ದರೂ ಹೋಗಲು ಆಗುತ್ತಿರಲಿಲ್ಲ ಎಂದರು. ನಾನು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆದಾಗಲೂ ಆ ನಗರಕ್ಕೆ ಕೊಡುಗೆ ಕೊಟ್ಟಿದ್ದೇನೆ. ಕೆಂಪೇಗೌಡರ ಹಿರಿಮೆಗೆ ಧಕ್ಕೆ ಆಗದ ರೀತಿಯಲ್ಲಿ ಕೆಲಸ ಮಾಡಿದ್ದೇನೆ. ಕೆಂಪೇಗೌಡರಿಗೆ ಯಾವ ರೀತಿ ಗೌರವ ಸಲ್ಲಿಸಬೇಕೋ ಹಾಗೆ ನಡೆದುಕೊಂಡಿದ್ದೇನೆ ಎಂದು ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

ಕೆಂಪೇಗೌಡರ ಜಯಂತಿಯನ್ನು ಬೇರೆ ಬೇರೆ ರೀತಿಯಲ್ಲಿ ಜನರು ಆಚರಣೆ ಮಾಡುತ್ತಾರೆ. ಸರ್ಕಾರ ಬೇರೆ ರೀತಿಯಲ್ಲಿ ಆಚರಣೆ ಮಾಡುತ್ತದೆ. ದೇವನಹಳ್ಳಿ ಸೇರಿ ರಾಜ್ಯದ ಅನೇಕ ಭಾಗಗಳಲ್ಲಿ ಮನೆ ಮನೆಯಲ್ಲೂ ನಾಡಪ್ರಭುಗಳ ಭಾವಚಿತ್ರ ಇಟ್ಟು ಪೂಜೆ ಮಾಡಿ ಜಯಂತಿಯನ್ನು ಆಚರಣೆ ಮಾಡುತ್ತಾರೆ. ನಾನು ಸಹ ದೆಹಲಿಯಲ್ಲಿಯೇ ಕೆಂಪೇಗೌಡರನ್ನು ಸ್ಮರಣೆ ಮಾಡುತ್ತೇನೆ ಎಂದರು.

ಕೆಂಪೇಗೌಡರು ಕಟ್ಟಿಸಿದ ಕೆರೆಗಳನ್ನು ರಕ್ಷಿಸಿ

ಬೆಂಗಳೂರು ನಗರದ ಬಗ್ಗೆ ಇಂದು ವಿಶ್ವದಲ್ಲೇ ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣ ಕೆಂಪೇಗೌಡರು. ಅವರು ಕಟ್ಟಿರುವ ಕೆರೆಗಳನ್ನು ಈಗಿನ ದಿನಗಳಲ್ಲಿ ಸ್ವಾರ್ಥಕ್ಕೆ ಕೆಲವರು ನುಂಗಿದ್ದಾರೆ. ಈಗಲಾದರೂ ಆ ಕೆರೆಗಳನ್ನು ಕಾಪಾಡುವ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಮೇಕೆದಾಟು ಕಟ್ಟಬೇಕು, ಕುಡಿಯುವ ನೀರು ತರುತ್ತೇವೆ ಎಂದೆಲ್ಲಾ ಹೇಳುತ್ತಾರೆ. ಆದರೆ, ನಗರದ ಜಲಮೂಲಗಳಾಗಿದ್ದ ಕೆರೆಗಳನ್ನು ನುಂಗಿ ನೀರು ಕುಡಿದಿದ್ದಾರೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಈಗಲೇ ಕುಡಿಯಲು ನೀರಿಲ್ಲದೆ ಜನರು ಬೆಂಗಳೂರಿನಲ್ಲಿ ಪರದಾಡುವ ಪರಿಸ್ಥಿತಿ ಇದೆ. 15 ವರ್ಷವಾದ ಮೇಲೆ ಬೆಂಗಳೂರಿನ ಸ್ಥಿತಿ ಏನಾಗುತ್ತದೋ ಗೊತ್ತಿಲ್ಲ. ಈ ಸರಕಾರ ನ್ಯಾಯಯುತವಾಗಿ ಕೆಂಪೇಗೌಡರ ಜಯಂತಿ ಆಚರಣೆ ಮಾಡೋದಾದರೆ ಆ ಕೆರೆಗಳನ್ನು ರಕ್ಷಣೆ ಮಾಡುವಂತಹ ಕೆಲಸ ಮಾಡಲಿ. ಮಳೆ ನೀರನ್ನು ಸರಿಯಾಗಿ ಬಳಸಿಕೊಳ್ಳುವತ್ತ ಚಿಂತನೆ ಮಾಡಲಿ. ಇಷ್ಟು ಮಾಡಿದರೆ ನಾನು ಸರ್ಕಾರಕ್ಕೆ ಸಲ್ಯೂಟ್ ಮಾಡುತ್ತೇನೆ ಎಂದು ಕೇಂದ್ರ ಸಚಿವರು ಹೇಳಿದರು.

ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಬಿಜೆಪಿ ಅಭ್ಯರ್ಥಿ ಅಂತಲ್ಲ, ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಒಮ್ಮತವಾಗಿ ಸ್ಪರ್ಧೆ ಮಾಡಲಿದ್ದಾರೆ. ಇನ್ನೂ ಸಾಕಷ್ಟು ಸಮಯ ಇದೆ. ನಾವು ನಿರ್ಧಾರ ಮಾಡುತ್ತೇವೆ. ಮೈತ್ರಿ ಅಭ್ಯರ್ಥಿ ಅಲ್ಲಿ ಸ್ಪರ್ಧೆ ಮಾಡುತ್ತಾರೆ. ಬಿಜೆಪಿ -ಜೆಡಿಎಸ್ ಎನ್ನುವ ವಿಚಾರ ಅಲ್ಲಿ ಬರೋದೇ ಇಲ್ಲಾ. ಮೈತ್ರಿ ಅಭ್ಯರ್ಥಿ ಸ್ಪರ್ಧೆ ಮಾಡುತ್ತಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು ಇದ್ದರು.

ಇದನ್ನೂ ಓದಿ: Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

Continue Reading
Advertisement
Serial Bride
ದೇಶ21 mins ago

Serial Bride: ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ; ಮಾಜಿ ವರಗಳಿಗಾಗಿ ಶೋಧ!

Demand to provide job reservation for Kannadigas; Massive Dharani sathyagraha on July 1 from Karave
ಕರ್ನಾಟಕ53 mins ago

Bengaluru News: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ; ಕರವೇಯಿಂದ ಜು.1ರಂದು ಬೃಹತ್ ಧರಣಿ ಸತ್ಯಾಗ್ರಹ

Attica Babu
ಕರ್ನಾಟಕ2 hours ago

Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Terrorists Killed
ಪ್ರಮುಖ ಸುದ್ದಿ2 hours ago

Terrorists Killed: ಆಪರೇಷನ್‌ ಆಲ್‌ಔಟ್ ಯಶಸ್ವಿ; ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

DCM Dk shivakumar statement in bagilige bantu sarkara sevege irali sahakara programme in channapattana
ಕರ್ನಾಟಕ3 hours ago

DK Shivakumar: ಸರ್ಕಾರಿ ಅಧಿಕಾರಿಗಳು ಗುಲಾಮರೆಂದ ಮಾಜಿ ಶಾಸಕ; ಕ್ಷಮೆ ಕೇಳಿದ ಡಿ.ಕೆ. ಶಿವಕುಮಾರ್

MEIL got the opportunity to implement Kaiga nuclear power generation project
ಕರ್ನಾಟಕ3 hours ago

MEIL: ಕೈಗಾ ಪರಮಾಣು ವಿದ್ಯುತ್‌ ಉತ್ಪಾದನೆ ಯೋಜನೆ ಜಾರಿ ಅವಕಾಶ ಗಿಟ್ಟಿಸಿದ ಎಂ.ಇ.ಐ.ಎಲ್‌

DCM DK Shivakumar statement about milk price hike
ಕರ್ನಾಟಕ3 hours ago

DK Shivakumar: ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್

Union Minister HD Kumaraswamy latest statement in New Delhi
ಬೆಂಗಳೂರು3 hours ago

HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

NEET UGC NET Exam irregularities protest demanding investigation
ರಾಯಚೂರು3 hours ago

Raichur News: ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ; ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

kempegowda Jayanti
ಪ್ರಮುಖ ಸುದ್ದಿ3 hours ago

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌