CM City Rounds: ವಿಜಯನಗರ ರಾಜಕಾಲುವೆ; ಈ ವರ್ಷದೊಳಗೆ ಪರಿಹರಿಸದಿದ್ದರೆ ಮುಖ್ಯ ಎಂಜಿನಿಯರ್‌ ಸಸ್ಪೆಂಡ್‌: ಸಿಎಂ ವಾರ್ನಿಂಗ್ - Vistara News

ಬೆಂಗಳೂರು

CM City Rounds: ವಿಜಯನಗರ ರಾಜಕಾಲುವೆ; ಈ ವರ್ಷದೊಳಗೆ ಪರಿಹರಿಸದಿದ್ದರೆ ಮುಖ್ಯ ಎಂಜಿನಿಯರ್‌ ಸಸ್ಪೆಂಡ್‌: ಸಿಎಂ ವಾರ್ನಿಂಗ್

CM City Rounds: ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪ ಇರುವ ರಾಜಕಾಲುವೆಗೆ ಸಮಾನಾಂತರವಾಗಿ ಇನ್ನೊಂದು ಕಾಲುವೆ ನಿರ್ಮಿಸುವುದರಿಂದ ಪ್ರವಾಹ ತಗ್ಗಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿವರಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಪ್ರವಾಹ ನಿಯಂತ್ರಣ ಕಾಮಗಾರಿಗೆ 11.5 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಈ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

VISTARANEWS.COM


on

CM City Rounds Vijayanagar Canal Siddaramaiah warns to Chief engineer will be suspended if not resolved within this year
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದೆ. ಅಲ್ಲದೆ, ಪ್ರತಿ ವರ್ಷ ಮಳೆಯಿಂದ ಸಾಕಷ್ಟು ನಷ್ಟ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಅವರು ಬುಧವಾರ (ಮೇ 22) ಬಿಬಿಎಂಪಿ, ಬಿಡಿಎ ಹಾಗೂ ಬಿಡಬ್ಲ್ಯೂಎಸ್‌ಎಸ್‌ಬಿ ( BBMP, BDA and BWSSB) ಅಧಿಕಾರಿಗಳೊಂದಿಗೆ ಸಿಟಿ ರೌಂಡ್ಸ್‌ (CM City Rounds) ಮಾಡಿದ್ದು, ಮಳೆ ಹಾನಿ ಪ್ರದೇಶಗಳನ್ನು ಪರಿವೀಕ್ಷಿಸಿದರು.

ಸಿಟಿ ರೌಂಡ್‌ ಸ್ಪಾಟ್-1

  • ಸ್ಥಳ: ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ
  • ವಿಧಾನಸಭಾ ಕ್ಷೇತ್ರ: ವಿಜಯನಗರ
  • ಯಾವ ವಾರ್ಡ್: ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವಾರ್ಡ್
  • ಸಮಸ್ಯೆ ಏನು?: ಗಾಳಿ ಆಂಜನೇಯ ದೇವಸ್ಥಾನ ಸಮೀಪದ ರಾಜಕಾಲುವೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಉಂಟಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಏನು?

ಇದಕ್ಕೆ ಸಮಾನಾಂತರವಾಗಿ ಇನ್ನೊಂದು ಕಾಲುವೆ ನಿರ್ಮಿಸುವುದರಿಂದ ಪ್ರವಾಹ ತಗ್ಗಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಸಿದ್ದರಾಮಯ್ಯ ಅವರಿಗೆ ವಿವರಿಸಿದರು. ಆಗ ಸಿಎಂ ಪ್ರತಿಕ್ರಿಯೆ ನೀಡಿ, ಪ್ರವಾಹ ನಿಯಂತ್ರಣ ಕಾಮಗಾರಿಗೆ 11.5 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಈ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

CM City Rounds Vijayanagar Canal Siddaramaiah warns to Chief engineer will be suspended if not resolved within this year

ಈ ರಾಜಕಾಲುವೆಗೆ ಸಾರ್ವಜನಿಕರು ಕಸ ಎಸೆಯುವುದನ್ನು ತಡೆಗಟ್ಟಲು ಕ್ರಮ ವಹಿಸುವಂತೆ ಸೂಚಿಸಿದರು. ಸಮಸ್ಯೆ ಬಗೆಹರಿಸಲು ಕೊಟ್ಟ ಕಾಲ ಮಿತಿಯನ್ನು ಮಳೆಗಾಲದೊಳಗೆ ಪೂರ್ಣಗೊಳಿಸಲು ಸೂಚಿಸಿದರು.

ಎಚ್ಚರಿಕೆ: ಈ ವರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಆಗಬೇಕು. ಇಲ್ಲದಿದ್ದರೆ ಅಮಾನತು ಮಾಡುವುದಾಗಿ ಚೀಫ್ ಎಂಜಿನಿಯರ್‌ಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಸಿಟಿ ರೌಂಡ್‌ ಸ್ಪಾಟ್ – 2

  • ಸ್ಥಳ: ನಾಯಂಡಹಳ್ಳಿ
  • ವಿಧಾನಸಭಾ ಕ್ಷೇತ್ರ: ವಿಜಯನಗರ
  • ಯಾವ ವಾರ್ಡ್: ನಾಯಂಡಹಳ್ಳಿ ವಾರ್ಡ್
  • ಸಮಸ್ಯೆ ಏನು?: ರಾಜಕಾಲುವೆಯಲ್ಲಿ ಮಳೆಗಾಲ ಪ್ರವಾಹ ಉಂಟಾಗುತ್ತಿದೆ. ಫ್ಲೈಓವರ್‌ ನಿರ್ಮಿಸಿದ್ದರಿಂದ ರಾಜಕಾಲುವೆಯ ವಿಸ್ತಾರ ಕಡಿಮೆ ಆಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಏನು?

ನೀರು ಸರಾಗವಾಗಿ ಹರಿದುಹೋಗಲು ಹೆಚ್ಚುವರಿ ಕಾಲುವೆ ಅಗತ್ಯವಿದೆ. ಏಳುಕೋಟಿ ವೆಚ್ಚದ ಕಾಮಗಾರಿ ಅನುಮೋದನೆಯಾಗಿದ್ದು, ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ವಿವರಿಸಿದರು. ಅದರಂತೆ ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ನೀಡಿ, ಕೂಡಲೇ ಬಿಬಿಎಂಪಿಯು ಕಾಮಗಾರಿ ಕೈಗೆತ್ತಿಕೊಳ್ಳಲು ಅನುವು ಮಾಡುವಂತೆ ಎರಡೂ ಇಲಾಖೆಗಳಿಗೆ ಸೂಚನೆ ನೀಡಿದರು.
ಕಾಲಮಿತಿ: ಈ ವರ್ಷದೊಳಗೆ ಕಾಮಗಾರಿ ಅಂತ್ಯವಾಗಬೇಕು

CM City Rounds Vijayanagar Canal Siddaramaiah warns to Chief engineer will be suspended if not resolved within this year

ಸಿಟಿ ರೌಂಡ್‌ ಸ್ಪಾಟ್: ಬಿಟಿಎಂ ಮೆಟ್ರೋ ಸ್ಟೇಷನ್

  • ವಾರ್ಡ್- ಬಿಟಿಎಂ ಲೇಔಟ್‌
  • ವಿಧಾನಸಭೆ ಕ್ಷೇತ್ರ: ಬಿಟಿಎಂ ಲೇಔಟ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಸಂಚಾರ, ಸ್ಥಳ ಪರಿಶೀಲನೆ ವೇಳೆಗೆ ಬಿಟಿಎಂ ಮೆಟ್ರೋ ಸ್ಟೇಷನ್‌ಗೆ ಭೇಟಿ ನೀಡಿ ಮೇಲುಸೇತುವೆ ರಸ್ತೆ ಹಾಗೂ ಮೆಟ್ರೋ ಮಾರ್ಗಗಳೆರಡೂ ಒಂದರ ಮೇಲೊಂದು ಇರುವ ಡಬಲ್‌ ಡೆಕ್ಕರ್‌ – 2 ಟಯರ್‌ ವ್ಯವಸ್ಥೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶೀಲಿಸಿದರು. ಮೂರು ಕಿ.ಮೀ. ಉದ್ದದ ಈ ವ್ಯವಸ್ಥೆಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು, ಸಂಚಾರ ದಟ್ಟಣೆ ನಿವಾರಣೆಗೆ ಈ ಡಬ್ಬಲ್ ಡೆಕ್ಕರ್ ಮಾದರಿಯನ್ನು ನಗರದ ಇತರ ಭಾಗಗಳಲ್ಲಿಯೂ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ಸಂಚಾರ ದಟ್ಟಣೆಗೆ ಪರಿಹಾರ ರೂಪವಾಗಿ ಈ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ.
ಇದಲ್ಲದೆ, ಸುಗಮ ಸಂಚಾರಕ್ಕಾಗಿ, ಬಿಟಿಎಂ ನಿಂದ ಬನಶಂಕರಿ ಕಡೆಗೆ ಹೋಗುವಾಗ, ರಾಘವೇಂದ್ರಸ್ವಾಮಿ ಟೆಂಪಲ್‌ ಸರ್ಕಲ್‌, ಜಯನಗರ 5ನೇ ಬ್ಲಾಕ್‌ನಲ್ಲಿ ಅಂಡರ್‌ ಪಾಸ್‌ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇಲ್ಲಿ ಅಂಡರ್‌ ಪಾಸ್‌ ನಿರ್ಮಿಸಲು ಸೂಚಿಸಿದರು.

ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ: ಸಿಎಂ ಗರಂ

ಸಿಟಿ ರೌಂಡ್ಸ್ ವೇಳೆ ಸಿಎಂ‌ ಕಣ್ಣಿಗೆ ರಸ್ತೆ ಬದಿ ಇದ್ದ ಒಣ ಮರಗಳು ಕಣ್ಣಿಗೆ ಬಿದ್ದವು. ಈ ವೇಳೆ ಗರಂ ಆದ ಸಿಎಂ ಸಿದ್ದರಾಮಯ್ಯ, ಒಣಗಿದ ಮರ ಯಾಕೆ ಬಿಟ್ಟುಕೊಂಡಿದ್ದೀರಿ? ಅನಾಹುತ ಆಗ್ಲಿ ಅಂತನಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಬನಶಂಕರಿ 2ನೇ ಹಂತದ 100 ಅಡಿ (2nd stage 100 ft.) ರಸ್ತೆಯ ಒಣಗಿದ ಮರಗಳನ್ನು ತೆರವುಗೊಳಿಸಬೇಕು. ನಗರದಾದ್ಯಂತ ಇರುವ ಒಣ ಮರ, ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು, ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬೇಕು, ಪದ್ಮನಾಭನಗರ ಫ್ಲೈಓವರ್ ಬಳಿ ಹಾನಿಯಾಗಿರುವ ಫುಟ್ ಪಾತ್ ಅನ್ನು ಶೀರ್ಘವಾಗಿ ದುರಸ್ತಿಗೊಳಿಸಲು ಹಾಗೂ ಮೆಟ್ರೋ ಮತ್ತು ಫ್ಲೈ ಓವರ್ ಕಾಮಗಾರಿಯಿಂದಾಗಿ ಅಲ್ಲಲ್ಲಿ ಹಾಕಲಾಗಿದ್ದ ಡೆಬ್ರಿಸ್‌ಗಳನ್ನು ಆಗಿಂದಾಗಲೇ ತೆರವುಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಇದನ್ನೂ ಓದಿ: Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಇಂದು ಎಲ್ಲೆಲ್ಲಿ ಸಿಎಂ, ಡಿಸಿಎಂ ಸಿಟಿ ರೌಂಡ್ಸ್‌?

  • ಮೈಸೂರು ರಸ್ತೆ – ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಬಳಿಯ ರಾಜಕಾಲುವೆ ಪರಿಶೀಲನೆ..
  • ಮೈಸೂರು ರಸ್ತೆ – ನಾಯಂಡಹಳ್ಳಿ ಜಂಕ್ಷನ್ ಬಳಿಯ ರಾಜಕಾಲುವೆ ಪರಿಶೀಲನೆ.
  • ಜೆಪಿ ನಗರ – ರಾಗಿಗುಡ್ಡ ಜಂಕ್ಷನ್ ವೀಕ್ಷಣೆ
  • ಕೊಡಿಚಿಕ್ಕನಹಳ್ಳಿ ರಸ್ತೆ ಅನುಗ್ರಹ ಲೇಔಟ್ ನಲ್ಲಿರುವ ರಾಜಕಾಲುವೆ ಪರಿಶೀಲನೆ
  • ಸೆಂಟ್ರಲ್ ಸಿಲ್ಕ್ ಬೋರ್ಡ್ ಬಳಿ ರಾಜಕಾಲುವೆ ಕಾಮಗಾರಿ ಪರಿಶೀಲನೆ
  • ಎಚ್‌ಎಸ್‌ಆರ್‌ ಲೇಔಟ್‌ ರಾಜಕಾಲುವೆ ಕಾಮಗಾರಿ ಪರಿಶೀಲನೆ
  • ಆಗರ ಕೆರೆ – ನಿರ್ಮಾಣ ಹಂತದಲ್ಲಿರುವ ರಾಜಕಾಲುವೆ ಪರಿಶೀಲನೆ
  • ಬೆಳ್ಳಂದೂರು ಕೆರೆ ಕೊಡಿ ಸೇತುವೆ ವೀಕ್ಷಣೆ
  • ಎಚ್‌ಎಎಲ್‌ ಸಮೀಪದ ಯಮಲೂರು ರಸ್ತೆಯಲ್ಲಿರುವ ರಾಜಕಾಲುವೆ ವೀಕ್ಷಣೆ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Rain news : ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆ ಆಗಿದೆ. ಆದರೆ ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಕೆಲವೆಡೆ ಮಳೆಯ ಸಿಂಚನವಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್‌ ನೀಡಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಜೂನ್‌ 16ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Bhandara Fair : ಲೋಕಾಪುರದ ಭಂಡಾರ ಜಾತ್ರೆಗೆ ಅದ್ಧೂರಿ ಚಾಲನೆ; ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ

ಮತ್ತೊಂದು ವಾರ ಮಳೆ ಎಚ್ಚರಿಕೆ ಕೊಟ್ಟ ತಜ್ಞರು

ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ತಜ್ಞರು ಕೊಟ್ಟಿದ್ದಾರೆ. ಮೊದಲ ಮೂರು ದಿನ ಅಂದರೆ ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಜಲಾಶಯಗಳ ನೀರಿನ ಮಟ್ಟ ಹೀಗಿದೆ

karnataka weather Forecast Dam Level

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶ್ರದ್ಧಾಂಜಲಿ

Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Sagri Raghavendra Upadhyaya: ಹಿರಿಯ ವಿದ್ವಾಂಸ, ಪ್ರವಚನಕಾರ, ಗ್ರಂಥಕರ್ಥ, ಪ್ರಕಾಶಕ, ಉಡುಪಿ ಮೂಲದ ಸಗ್ರಿ ರಾಘವೇಂದ್ರ ಉಪಾಧ್ಯಾಯ (71) ಅವರು ಬೆಂಗಳೂರಿನಲ್ಲಿ ಶನಿವಾರ ನಿಧನರಾಗಿದ್ದಾರೆ.

VISTARANEWS.COM


on

Hiriya vidwamsa Sagri Raghavendra Upadhyaya passed away
Koo

ಬೆಂಗಳೂರು: ಹಿರಿಯ ವಿದ್ವಾಂಸ, ಪ್ರವಚನಕಾರ, ಗ್ರಂಥಕಾರ, ಉಡುಪಿ ಮೂಲದ ಸಗ್ರಿ ರಾಘವೇಂದ್ರ ಉಪಾಧ್ಯಾಯ (71) (Sagri Raghavendra Upadhyaya) ಅವರು ಬೆಂಗಳೂರಿನಲ್ಲಿ ಶನಿವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಪುತ್ರ ಇದ್ದಾರೆ.

ನರಸಿಂಹ ಉಪಾಧ್ಯಾಯ ಮತ್ತು ಸೀತಾಲಕ್ಷ್ಮಿ ದಂಪತಿಯ ಪುತ್ರನಾಗಿ 1953ರಲ್ಲಿ ಜನಿಸಿದ ಸಗ್ರಿ ರಾಘವೇಂದ್ರ ಉಪಾಧ್ಯಾಯರು ಶ್ರೀ ವಿದ್ಯಾಮಾನ್ಯ ತೀರ್ಥರು, ಶೀ ವಿಶ್ವೇಶತೀರ್ಥ ಸ್ವಾಮೀಜಿ ಹಾಗೂ ಶ್ರೀ ಕಾಪು ಹಯಗ್ರೀವಾಚಾರ್ಯರು ಮೊದಲಾದ ಪಂಡಿತರಲ್ಲಿ ಅಧ್ಯಯನ ಮಾಡಿ, ವೇದಾಂತ ಶಾಸ್ತ್ರದಲ್ಲಿ, ಸಂಸ್ಕೃತದಲ್ಲಿ ಎಂ.ಎ ಪಡೆದು ಎಸ್‌ಎಂಎಸ್‌ಪಿ ಸಂಸ್ಕೃತ ಕಾಲೇಜು, ಉಡುಪಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

ತಮ್ಮದೇ ಆದ ಪರವಿದ್ಯಾ ಪ್ರಕಾಶನ ಸಂಸ್ಥೆ ಪ್ರಾರಂಭಿಸಿ, ನೂರಾರು ಗ್ರಂಥಗಳನ್ನು ರಚಿಸಿದ್ದಾರೆ. ಉಡುಪಿಯ ಹಲವಾರು ಮಠಗಳಿಗೆ ಆಸ್ಥಾನ ವಿದ್ವಾಂಸರಾಗಿ ಗೌರವ ಮತ್ತು ಮಾನ್ಯತೆಗೆ ಭಾಜನರಾಗಿದ್ದರು. ಕನ್ನಡ ಧಾರ್ಮಿಕ ಸಾಹಿತ್ಯದಲ್ಲಿ ಉತ್ತಮ ಹೆಸರು ಗಳಿಸಿರುವ ತತ್ವವಾದ ಮತ್ತು ಸರ್ವಮೂಲ ಮಾಸ ಪತ್ರಿಕೆಯ ಸಂಪಾದಕರಾಗಿದ್ದರು.

ಸಗ್ರಿ ರಾಘವೇಂದ್ರ ಉಪಾಧ್ಯಾಯರು ಶುಕ್ರವಾರ ಸಂಜೆ ಬೆಂಗಳೂರಿನ ಶ್ರೀ ಭಂಡಾರಕೇರಿ ಮಠದಲ್ಲಿ ಶ್ರೀ ವಿದ್ಯೇಶತೀರ್ಥರ 70ನೇ ವರ್ಷದ ವರ್ಧಂತಿ ಕಾರ್ಯಕ್ರಮದಲ್ಲಿ ತಮ್ಮ ಕೊನೆಯ ಉಪನ್ಯಾಸ ನೀಡಿ, ನಂತರದ ಕೆಲವೇ ನಿಮಿಷಗಳಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಹೃದಯಾಘಾತದಿಂದ ಬಳಲಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚೇತರಿಸಿಕೊಳ್ಳಲಾಗದೇ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಚಾಮರಾಜಪೇಟೆ ಚಿತಾಗಾರದಲ್ಲಿ ನೂರಾರು ವಿದ್ವಾಂಸರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಿತು.

ಇದನ್ನೂ ಒದಿ: Drown in Quarry: ಕ್ವಾರಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು‌

ತೀವ್ರ ಸಂತಾಪ: ಸಗ್ರಿ ರಾಘವೇಂದ್ರ ಉಪಾಧ್ಯಾಯ ಅವರ ನಿಧನಕ್ಕೆ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥರು, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರು, ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ಮತ್ತು ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Continue Reading

ಕರ್ನಾಟಕ

Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

Pralhad Joshi: ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿಮೆ ಮಾಡಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರಿಗೆ ಹೊರೆ ಮಾಡಿದೆ ಎಂದು ಖಂಡಿಸಿದ ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್‌ ಜೋಶಿ, ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯಗಳನ್ನು ನೀಡಿದೆಯೇ ಹೊರತು ಜನರ ಪಾಲಿಗೆ ಭಾಗ್ಯಶಾಲಿಯಾಗಿ ಉಳಿದಿಲ್ಲ ಎಂದು ಟೀಕಿಸಿದ್ದಾರೆ.

VISTARANEWS.COM


on

Union Minister Pralhad Joshi statement about increase in petrol and diesel prices in the state
Koo

ಹುಬ್ಬಳ್ಳಿ: ರಾಜ್ಯದಲ್ಲಿ ಗ್ಯಾರಂಟಿ ಗ್ಯಾರಂಟಿ ಎಂದು ಬಾಯಿ ಬಡಿದುಕೊಳ್ಳುವ ಕಾಂಗ್ರೆಸ್ ಸರ್ಕಾರ ಈಗ ತೈಲ ಬೆಲೆ ಏರಿಸುವ ಮೂಲಕ ಜನರ ಕೈಗೆ ಅಕ್ಷರಶಃ ಚೊಂಬು ಕೊಟ್ಟಿದೆ ನೋಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi), ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

ರಾಜ್ಯದಲ್ಲಿ ಅಭಿವೃದ್ಧಿ ಮಾತ್ರ ಕೇಳ್ಬೇಡಿ, ತಗೊಳ್ರಪ್ಪ ಕೊಟ್ರು ಚೊಂಬು ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿ ಹಾಯ್ದ ಸಚಿವರು, ಬೆಲೆ ಏರಿಕೆ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದ ಜನಸಾಮಾನ್ಯರಿಗೆ ತಾನೇ ಬೆಲೆ ಏರಿಕೆ ಬಿಸಿ ತಟ್ಟಿಸಿದೆ ಎಂದು ಸಚಿವ ಜೋಶಿ ಕಿಡಿಕಾರಿದರು.

ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿಮೆ ಮಾಡಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರಿಗೆ ಹೊರೆ ಮಾಡಿದೆ ಎಂದು ಖಂಡಿಸಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯಗಳನ್ನು ನೀಡಿದೆಯೇ ಹೊರತು ಜನರ ಪಾಲಿಗೆ ಭಾಗ್ಯಶಾಲಿಯಾಗಿ ಉಳಿದಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ 1.5 ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳನ್ನೇ ಕೈಗೊಂಡಿಲ್ಲ. ಈಗ ನೇರವಾಗಿ ಜನರ ಜೇಬಿಗೇ ಕತ್ತರಿ ಹಾಕುವ ಕೆಲಸಕ್ಕೆ ಕೈ ಹಾಕಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದರು.

Continue Reading

ಪ್ರಮುಖ ಸುದ್ದಿ

Sapthami Gowda: ಯುವ ಪತ್ನಿ ವಿರುದ್ಧ ಸಪ್ತಮಿಗೌಡ ಮಾನಹಾನಿ ಕೇಸ್; ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ

Sapthami Gowda: ವಕೀಲ ಶಂಕರಪ್ಪ ಅವರ ಮೂಲಕ ನಟಿ ಸಪ್ತಮಿಗೌಡ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈಗ ಮಾಡಿರುವ ಆರೋಪಗಳಿಂದ ಉಂಟಾದ ಮಾನಹಾನಿ ಸಂಬಂಧ ಶ್ರೀದೇವಿಗೆ ನೋಟಿಸ್ ನೀಡಿದ್ದು, 10 ಕೋಟಿ ಪರಿಹಾರ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Sapthami Gowda
Koo

ಬೆಂಗಳೂರು: ನಟ ಯುವ ರಾಜ್‌ಕುಮಾರ್‌ ಪತ್ನಿ ಶ್ರೀದೇವಿ ಬೈರಪ್ಪ ವಿರುದ್ಧ ನಟಿ ಸಪ್ತಮಿ ಗೌಡ ಮಾನಹಾನಿ ಕೇಸ್ ದಾಖಲಿಸಿದ್ದಾರೆ. ವಕೀಲ ಶಂಕರಪ್ಪ ಅವರ ಮೂಲಕ ನಟಿ (Sapthami Gowda) ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ ನೀಡಿದೆ.

ಯುವ ಮತ್ತು ಶ್ರೀದೇವಿ ಬೈರಪ್ಪ ನಡುವಿನ ಆರೋಪ-ಪ್ರತ್ಯಾರೋಪಗಳಲ್ಲಿ ಸಪ್ತಮಿಗೌಡ ಹೆಸರು ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ತನ್ನ ವೃತ್ತಿ ಜೀವನದ ಪರಿಣಾಮ ಬೀರಲಿದೆ ಎಂದು ಸಪ್ತಮಿ ಗೌಡ ಮಾನಹಾನಿ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಇನ್ಮುಂದೆ ನಟಿಯ ಬಗ್ಗೆ ಎಲ್ಲಿಯೂ ಮಾತನಾಡದಂತೆ ಲೀಗಲ್ ನೋಟಿಸ್ ನೀಡಲಾಗಿದೆ ಹಾಗೂ ಈಗ ಮಾಡಿರುವ ಆರೋಪಗಳಿಂದ ಉಂಟಾದ ಮಾನಹಾನಿ ಸಂಬಂಧ ಶ್ರೀದೇವಿಗೆ ನೋಟಿಸ್ ನೀಡಿದ್ದು, 10 ಕೋಟಿ ರೂ. ಪರಿಹಾರ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೇಳೆ ನಟಿ ಸಪ್ತಮಿಗೌಡ ಬಗ್ಗೆ ಎಲ್ಲಿಯೂ ಪ್ರಸ್ತಾಪಿಸದಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಸಿಟಿ ಸಿವಿಲ್ ಕೋರ್ಟ್, ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ ನೀಡಿದೆ.

ಇದನ್ನೂ ಓದಿ | Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪ- ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದರು. ಇನ್ನು, ನಟನ ಲೀಗಲ್‌ ನೋಟಿಸ್‌ಗೆ ಉತ್ತರಿಸಿದ್ದ ಶ್ರೀದೇವಿ ಭೈರಪ್ಪ, “ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ (Sapthami Gowda) ಜತೆ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಆರೋಪಿಸಿದ್ದರು. ಆ ಮೂಲಕ ಡಿವೋರ್ಸ್‌ ಪ್ರಕರಣವು ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿತ್ತು

ನಟ ಯುವ ರಾಜ್‌ಕುಮಾರ್‌ ಕಳುಹಿಸಿದ ಲೀಗಲ್‌ ನೋಟಿಸ್‌ಗೆ ಮರುತ್ತರ ನೀಡಿದ್ದ ಶ್ರೀದೇವಿ ಭೈರಪ್ಪ, ಹಲವು ಆರೋಪಗಳನ್ನು ಮಾಡಿದ್ದರು. “ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್‌ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು. ಪ್ರೀತಿಸಿ ಮದುವೆಯಾದ ಯುವ ರಾಜ್‌ಕುಮಾರ್‌, ಬಳಿಕ ಸಪ್ತಮಿ ಗೌಡ ಹಿಂದೆ ಬಿದ್ದಿದ್ದಾರೆ” ಎಂಬುದಾಗಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದರು.

ಇದನ್ನೂ ಓದಿ | Sapthami Gowda: ಲವ್‌ ಬ್ರೇಕಪ್‌ ಆಗಿದೆ, ಬಾಯ್‌ಫ್ರೆಂಡ್‌ ನನ್ನ ಜತೆ ಇಲ್ಲ ಎಂದ ಸಪ್ತಮಿ ಗೌಡ!

“ನಾನು ಹಾಗೂ ಯುವ ರಾಜ್‌ಕುಮಾರ್‌ 5 ವರ್ಷ ಪ್ರೀತಿಸಿದ್ದೆವು. 2019ರಲ್ಲಿ ಹಿಂದು ಸಂಪ್ರದಾಯದಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಮಾಡಿಕೊಂಡೆವು. ಮದುವೆಗೂ ಮುಂಚೆ ಯುವ ರಾಜ್‌ಕುಮಾರ್‌ ನಿರುದ್ಯೋಗಿ ಆಗಿದ್ದರು. ಅವರಿಗೆ ಕರಿಯರ್‌ ಬಗ್ಗೆ ಫೋಕಸ್‌ ಇರಲಿಲ್ಲ. ಅವರ ಕುಟುಂಬವು ಕೂಡ ಆರ್ಥಿಕವಾಗಿ ಸ್ಟೇಬಲ್‌ ಇರಲಿಲ್ಲ. ಇದಾದ ಬಳಿಕ ಯುವ ರಾಜ್‌ಕುಮಾರ್‌ ಸಪ್ತಮಿ ಗೌಡ ಹಿಂದೆ ಬಿದ್ದರು. ನಟಿಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಸಪ್ತಮಿ ಗೌಡ ಜತೆ ಹೋಟೆಲ್‌ನಲ್ಲಿ ಇರುವಾಗಲೇ ಯುವ ಸಿಕ್ಕಿಬಿದ್ದಿದ್ದರು. ಸಂಬಂಧ ಗೊತ್ತಾದ ಮೇಲೆ ನನ್ನ ಮೇಲೆ ಆರೋಪ ಮಾಡಲು ಶುರುವಿಟ್ಟುಕೊಂಡರು” ಎಂಬುದಾಗಿ ಶ್ರೀದೇವಿ ಆರೋಪಿಸಿದ್ದರು. ಹೀಗಾಗಿ ಇದೀಗ ದಂಪತಿ ನಡುವಿನ ವಿವಾದದಲ್ಲಿ ತಮ್ಮ ಹೆಸರನ್ನು ತರದಂತೆ ಸಪ್ತಮಿ ಗೌಡ ನೋಟಿಸ್‌ ನೀಡಿದ್ದಾರೆ.

Continue Reading
Advertisement
Karnataka Weather Forecast
ಮಳೆ51 seconds ago

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Siddaramaiah
ಸಂಪಾದಕೀಯ30 mins ago

ವಿಸ್ತಾರ ಸಂಪಾದಕೀಯ: ಬೆಲೆ ಏರಿಕೆ ಮಾಡುವುದೇ ರಾಜ್ಯ ಸರ್ಕಾರದ 6ನೇ ‘ಗ್ಯಾರಂಟಿ’ ಆಗದಿರಲಿ!

International Yoga Day 2024
ಆರೋಗ್ಯ31 mins ago

International Yoga Day 2024: ಗರ್ಭಿಣಿಯರೂ ಯೋಗ ಮಾಡಬಹುದೇ? ಯಾವ ಆಸನಗಳು ಸೂಕ್ತ?

Dina Bhavishya
ಭವಿಷ್ಯ2 hours ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಕುಟುಂಬ ಸದಸ್ಯರಿಂದ ಸಿಗಲಿದೆ ಬೆಂಬಲ

Teachers Transfer
ಪ್ರಮುಖ ಸುದ್ದಿ7 hours ago

Teachers Transfer: ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ; ಕಡ್ಡಾಯ, ಹೆಚ್ಚುವರಿ‌ ಟ್ರಾನ್ಸ್‌ಫರ್ ಇಲ್ಲ, ಕೋರಿಕೆ ವರ್ಗ ಮಾತ್ರ

T20 World Cup 2024
T20 ವಿಶ್ವಕಪ್8 hours ago

T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

Hiriya vidwamsa Sagri Raghavendra Upadhyaya passed away
ಶ್ರದ್ಧಾಂಜಲಿ10 hours ago

Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Government has no money to clean tankers no ability to provide clean drinking water says R Ashok
ಪ್ರಮುಖ ಸುದ್ದಿ10 hours ago

R Ashok: ಟ್ಯಾಂಕರ್ ಸ್ವಚ್ಛಗೊಳಿಸಲೂ ಸಿದ್ದು ಸರ್ಕಾರದ ಬಳಿ ಹಣವಿಲ್ಲ; ಆರ್. ಅಶೋಕ್‌ ಆಕ್ರೋಶ

Union Minister Pralhad Joshi statement about increase in petrol and diesel prices in the state
ಕರ್ನಾಟಕ10 hours ago

Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

Bribe Case
ಕ್ರೈಂ10 hours ago

Bribe Case: ಕಸ ಗುಡಿಸುತ್ತಲೇ ಉನ್ನತ ಹುದ್ದೆಗೇರಿದ್ದ ಮಹಿಳೆ ಕಸ ಗುಡಿಸುವವರಿಂದಲೇ ಲಂಚ ಸ್ವೀಕರಿಸುವಾಗ ಬಂಧನ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ17 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌