ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೃದಯಾಘಾತದಿಂದ ನಿಧನ - Vistara News

ಪ್ರಮುಖ ಸುದ್ದಿ

ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೃದಯಾಘಾತದಿಂದ ನಿಧನ

ಅನೇಕ ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಬಸವರಾಜ ಬೊಮ್ಮಾಯಿ ಅವರು ಗೃಹಮಂತ್ರಿಯಾಗಿದ್ದಾಗಿನಿಂದಲೂ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

VISTARANEWS.COM


on

Gurlingaswamy holimath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ (47) ಅವರು ಹೃದಯಾಘಾತದಿಂದ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ನಾಗರಭಾವಿಯಲ್ಲಿರುವ ಮನೆಯ ಬಳಿ ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುತ್ತಿದ್ದಾಗ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದವರಾಗಿರುವ ಗುರುಲಿಂಗಸ್ವಾಮಿ ಹೊಳಿಮಠ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೇ, ಕನ್ನಡದ ರಾಜ್ಯ ಮಟ್ಟದ ದಿನಪತ್ರಿಕೆ ಮತ್ತು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿಯೂ 1998 ರಿಂದ ಸೇವೆ ಸಲ್ಲಿಸುತ್ತಿದ್ದರು.

ವಿಜಯವಾಣಿ ದಿನಪತ್ರಿಕೆಯಲ್ಲಿ ರಾಜಕೀಯ ವರದಿಗಾರರಾಗಿ, ನಂತರ ಟಿವಿ5 ಸುದ್ದಿವಾಹಿನಿ ರಾಜಕೀಯ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ನಂತರ, 2019ರಲ್ಲಿ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿದ್ದರು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ 2021ರಲ್ಲಿ ಮಾಧ್ಯಮ ಸಂಯೋಜಕರನ್ನಾಗಿ ನೇಮಕ ಮಾಡಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Bank Loan Fraud: ಧೀರಜ್ ವಾಧ್ವಾನ್ ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ವೈದ್ಯಕೀಯ ಆಧಾರದ ಮೇಲೆ ಬಾಂಬೆ ಹೈಕೋರ್ಟ್​​ನಿಂದ ಪ್ರತ್ಯೇಕ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು. ಬಾಂಬೆ ಹೈಕೋರ್ಟ್ ಈ ವರ್ಷದ ಮೇ 2 ರಂದು ಆ ಪ್ರಕರಣದಲ್ಲಿ ಜಾಮೀನನ್ನು ಕ್ರಮಬದ್ಧಗೊಳಿಸಿತ್ತು. ಸಿಬಿಐ ಬಂಧನದಿಂದ ಅವರ ರಕ್ಷಣೆಯನ್ನು ಒಂದು ವಾರ ವಿಸ್ತರಿಸಿತ್ತು. ರಕ್ಷಣಾ ಅವಧಿ ಮುಗಿದ ನಂತರ ಸಿಬಿಐ ವಾಧ್ವಾನ್ ಅವರನ್ನು ಬಂಧಿಸಲಾಗಿದೆ.

VISTARANEWS.COM


on

Bank Loan Fraud
Koo

ನವದೆಹಲಿ: 17 ಸದಸ್ಯರ ಬ್ಯಾಂಕ್ ಒಕ್ಕೂಟಕ್ಕೆ 34,000 ಕೋಟಿ ರೂ. ವಂಚನೆ ಮಾಡಿದ (Bank Loan Fraud) ಆರೋಪದ ಮೇಲೆ ಡಿಎಚ್ಎಫ್ಎಲ್ ಮಾಜಿ ನಿರ್ದೇಶಕ ಧೀರಜ್ ವಾಧ್ವಾನ್ ಅವರನ್ನು ಸಿಬಿಐ ಮಂಗಳವಾರ ಬಂಧಿಸಿದೆ ಸೋಮವಾರ ರಾತ್ರಿ ಮುಂಬೈನಲ್ಲಿ ವಶಕ್ಕೆ ಪಡೆದ ವಾಧ್ವಾನ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅದು ಅವರನ್ನು ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಡಿಎಚ್ಎಫ್ಎಲ್​​ನ ಮಾಜಿ ನಿರ್ದೇಶಕ ಮತ್ತು ಅವರ ಸಹೋದರ ಕಪಿಲ್ ಅವರನ್ನು ಈ ಹಿಂದೆ ಜುಲೈ 19, 2022 ರಂದು ಬಂಧಿಸಲಾಗಿತ್ತು. ಅಕ್ಟೋಬರ್ 15, 2022 ರಂದು ಕಪಿಲ್ ಮತ್ತು ಧೀರಜ್ ಸೇರಿದಂತೆ 75 ಸಂಸ್ಥೆಗಳ ವಿರುದ್ಧ ಸಿಬಿಐ ಚಾರ್ಜ್​ಶೀಟ್​ ಸಲ್ಲಿಸಲಾಗಿತ್ತು. ತನಿಖೆ ಅಪೂರ್ಣವಾಗಿದೆ ಮತ್ತು ಸಲ್ಲಿಸಲಾದ ಚಾರ್ಜ್​ಶೀಟ್​ನಲ್ಲಿ ತೊಡಕುಗಳಿಗೆ ಎಂಬ ಆಧಾರದ ಮೇಲೆ ಅವರಿಗೆ ಡಿಸೆಂಬರ್ 3, 2022 ರಂದು ವಿಶೇಷ ನ್ಯಾಯಾಲಯದಿಂದ “ಶಾಸನಬದ್ಧ” ಜಾಮೀನು ನೀಡಿತ್ತು. ಈ ಆದೇಶವನ್ನು ದೆಹಲಿ ಹೈಕೋರ್ಟ್ ಕೂಡ ಎತ್ತಿಹಿಡಿದಿದೆ.

ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮತ್ತು ಇತ್ಯರ್ಥಪಡಿಸಿದ ಕಾನೂನು ಸ್ಥಾನವನ್ನು ನಿರ್ಲಕ್ಷಿಸುವಲ್ಲಿ “ಕಾನೂನಿನ ಗಂಭೀರ ತಪ್ಪು ಮಾಡಿದೆ” ಎಂದು ಉಲ್ಲೇಖಿಸಿ ಜಾಮೀನು ಆದೇಶಗಳನ್ನು ಸರ್ವೋಚ್ಛ ರದ್ದುಗೊಳಿಸಿತು.

ಏತನ್ಮಧ್ಯೆ, ಧೀರಜ್ ವಾಧ್ವಾನ್ ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ವೈದ್ಯಕೀಯ ಆಧಾರದ ಮೇಲೆ ಬಾಂಬೆ ಹೈಕೋರ್ಟ್​​ನಿಂದ ಪ್ರತ್ಯೇಕ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು. ಬಾಂಬೆ ಹೈಕೋರ್ಟ್ ಈ ವರ್ಷದ ಮೇ 2 ರಂದು ಆ ಪ್ರಕರಣದಲ್ಲಿ ಜಾಮೀನನ್ನು ಕ್ರಮಬದ್ಧಗೊಳಿಸಿತ್ತು. ಸಿಬಿಐ ಬಂಧನದಿಂದ ಅವರ ರಕ್ಷಣೆಯನ್ನು ಒಂದು ವಾರ ವಿಸ್ತರಿಸಿತ್ತು. ರಕ್ಷಣಾ ಅವಧಿ ಮುಗಿದ ನಂತರ ಸಿಬಿಐ ವಾಧ್ವಾನ್ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಧೀರಜ್ ವಾಧ್ವಾನ್ ಮತ್ತು ಅವರ ಸಹೋದರ ಕಪಿಲ್ ವಾಧ್ವಾನ್ ಮತ್ತು ಅಜಯ್ ನವಂದರ್ ಈ ಆರೋಪಿಗಳಾಗಿದ್ದಾರೆ.

ಸಾಲ ವಾಪಸ್​ ಕೊಡದ ಡಿಎಚ್​ಎಲ್​ಎಫ್​

2010 ಮತ್ತು 2018 ರ ನಡುವೆ ಡಿಎಚ್ಎಫ್ಎಲ್​ಗೆ 42,871 ಕೋಟಿ ರೂ.ಗಳ ಸಾಲ ನೀಡಿದ್ದ 17 ಸದಸ್ಯರ ಸಾಲದಾತ ಒಕ್ಕೂಟದ ಮುಂಚೂಣಿ ಸಂಸ್ಥೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಮೇರೆಗೆ ಸಿಬಿಐ ವಾಧ್ವಾನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿತ್ತು.

ಕಪಿಲ್ ಮತ್ತು ಧೀರಜ್ ವಾಧ್ವಾನ್ ಇತರರೊಂದಿಗೆ ಕ್ರಿಮಿನಲ್ ಪಿತೂರಿ ಮಾಡಿದ್ದು ಸತ್ಯ ಮರೆ ಮಾಚಲಾಗಿದೆ ಎಂದು ಹೇಳಲಾಗಿದೆ. ಕ್ರಿಮಿನಲ್ ನಂಬಿಕೆ ಉಲ್ಲಂಘನೆ ಮಾಡಿದ್ದಾರೆ ಮತ್ತು 2019 ರ ಮೇ ತಿಂಗಳಿನಿಂದ ಸಾಲ ಮರುಪಾವತಿಯಲ್ಲಿ ವಿಫಲರಾಗುವ ಮೂಲಕ ಒಕ್ಕೂಟಕ್ಕೆ 34,615 ಕೋಟಿ ರೂ.ಗಳನ್ನು ವಂಚಿಸಲಾಗಿದೆ. ಅಲ್ಲದೆ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸಿಬಿಐ ತನ್ನ ಚಾರ್ಜ್​ಶೀಟ್​ನಲ್ಲಿ ಆರೋಪಿಸಿದೆ.

Continue Reading

ಪ್ರಮುಖ ಸುದ್ದಿ

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ದೆಹಲಿಯ ಅವರ ಮನೆಯಲ್ಲಿ ಕಾಯುತ್ತಿದ್ದಾಗ ಕೇಜ್ರಿವಾಲ್ ಅವರ ಸಹಾಯಕ ಸ್ವಾತಿ ಮಲಿವಾಲ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಒಪ್ಪಿಕೊಂಡಿದ್ದಾರೆ.

VISTARANEWS.COM


on

Swati Maliwal
Koo

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಿಎಂ ನಿವಾಸದೊಳಗೆ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳಾ ಆಯೋಗದ ಮಾಜಿ ಮುಖ್ಯಸ್ಥೆ ಸ್ವಾತಿ ಮಾಲಿವಾಲ್ (Swati Maliwal ) ಅರೋಪಿಸಿದ ಮರುದಿನ ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಈ ಮಾಹಿತಿಯನ್ನು ಒಪ್ಪಿಕೊಂಡಿದೆ. ಎಎಪಿ ಮುಖ್ಯಸ್ಥರ ಸಹಾಯಕ ತಪ್ಪು ಮಾಡಿರುವುದು ಸತ್ಯ ಕೇಜ್ರಿವಾಲ್ ಅವರು ಈ ವಿಷಯವನ್ನು ಗಮನಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಎಎಪಿ ಹೇಳಿದೆ.

ಹಿರಿಯ ಎಎಪಿ ನಾಯಕಿ ಮತ್ತು ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಸೋಮವಾರ ಬೆಳಿಗ್ಗೆ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ತೆರಳಿ ಅರವಿಂದ್ ಕೇಜ್ರಿವಾಲ್ ಅವರ ವೈಯಕ್ತಿಕ ಸಹಾಯಕ ಬಿಭವ್ ಕುಮಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ, ಅವರು ಅಧಿಕೃತ ದೂರು ದಾಖಲಿಸಿರಲಿಲ್ಲ. ಈ ಮುಜುಗರದ ವಿವಾದದ ಬಗ್ಗೆ ಸ್ವಾತಿ ಮಲಿವಾಲ್ ಅಥವಾ ಆಮ್ ಆದ್ಮಿ ಪಕ್ಷ (ಎಎಪಿ) ಸೋಮವಾರ ಪ್ರತಿಕ್ರಿಯಿಸಲಿಲ್ಲ.

ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ದೆಹಲಿಯ ಅವರ ಮನೆಯಲ್ಲಿ ಕಾಯುತ್ತಿದ್ದಾಗ ಕೇಜ್ರಿವಾಲ್ ಅವರ ಸಹಾಯಕ ಸ್ವಾತಿ ಮಾಲಿವಾಲ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಒಪ್ಪಿಕೊಂಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಡ್ರಾಯಿಂಗ್ ರೂಂನಲ್ಲಿ ಈ ಘಟನೆ ನಡೆದಿದೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. “ನಿನ್ನೆ, ಖಂಡನೀಯ ಘಟನೆ ನಡೆದಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಸ್ವಾತಿ ಮಾಲಿವಾಲ್ ಅವರ ನಿವಾಸಕ್ಕೆ ಹೋಗಿದ್ದರು. ಡ್ರಾಯಿಂಗ್ ರೂಮ್​ನಲ್ಲಿ ಅವರಿಗೆ ಕಾಯುತ್ತಿದ್ದಾಗ, ಬಿಭವ್ ಕುಮಾರ್ ಅವರಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಸಿಎಂ ಈ ವಿಷಯವನ್ನು ಅರಿತುಕೊಂಡಿದ್ದಾರೆ ಮತ್ತು ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಸಂಜಯ್​ ಸಿಂಗ್​ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

ದೆಹಲಿ ಮಹಿಳಾ ಆಯೋಗದ ಮಾಜಿ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಬೆಳಿಗ್ಗೆ 9.34 ಕ್ಕೆ ಪಿಸಿಆರ್ ಸಂಖ್ಯೆಗೆ ಕರೆ ಮಾಡಿ ಬಿಭವ್ ಕುಮಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿ ಮಾಡಿದ್ದಾರೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದರು.

ದೂರು ದಾಖಲಿಸದ ಸ್ವಾತಿ

ಸೋಮವಾರ ಬೆಳಿಗ್ಗೆ 10 ಗಂಟೆಗೆ ಪೊಲೀಸ್ ಠಾಣೆಗೆ ಬಂದ ಸ್ವಾತಿ ಅವರು ಐದು ನಿಮಿಷಗಳ ನಂತರ ಔಪಚಾರಿಕ ದೂರು ದಾಖಲಿಸದೆ ಹೊರಟುಹೋಗಿದ್ದರು. ಹಲ್ಲೆ ಪ್ರಕರಣಗಳಲ್ಲಿ ವೈದ್ಯಕೀಯ ಪರೀಕ್ಷೆ ಕಡ್ಡಾಯ ಎಂದು ಹೇಳಿದ ನಂತರ ಅವರು ಹೊರಟುಹೋದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು. ಕೇಜ್ರಿವಾಲ್ ಅವರ ಮನೆಯನ್ನು ‘ಬಾಕ್ಸಿಂಗ್ ರಿಂಗ್’ ಎಂದು ಕರೆದಿದೆ. ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೂ ಅವರ ಮನೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದೆ

Continue Reading

ಕರ್ನಾಟಕ

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Karnataka weather: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

VISTARANEWS.COM


on

Karnataka weather Man from Siddapura killed in lightning Heavy rain warning for four more days
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Narendra Modi: ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳಲ್ಲಿ ಪ್ರಧಾನಿ 9.12 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದಾರೆ ಮತ್ತು 2.68 ಲಕ್ಷ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ. ಅವರ ಆದಾಯವು 2018-19ರಲ್ಲಿ 11.14 ಲಕ್ಷ ರೂ.ಗಳಿಂದ 2022-23ರಲ್ಲಿ 23.56 ಲಕ್ಷ ರೂ.ಗೆ ಏರಿದೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಮೂರನೇ ಬಾರಿ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಲ್ಲಿಸಿದ್ದ ಅಫಿಡವಿಟ್​ನಲ್ಲಿ ಅವರು ತಮ್ಮ ಆಸ್ತಿ ವಿವರಗಳನ್ನು ನೀಡಿದ್ದಾರೆ. ಅದರ ಪ್ರಕಾರ ಅವರು ಒಟ್ಟು 3 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಎರಡು ಬಾರಿ ಪ್ರಧಾನಿ ಆಗಿರುವ ಬಳಿಕವೂ ಅವರು ಯಾವುದೇ ಭೂಮಿ, ಮನೆ ಅಥವಾ ಕಾರುಗಳನ್ನು ಹೊಂದಿಲ್ಲ. ಅವರು ತಮ್ಮ ಉಳಿಕೆಯ ಎಲ್ಲ ಮಾಹಿತಿಗಳನ್ನು ಚುನಾವಣಾ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.

ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದು, ಅಫಿಡವಿಟ್​ನಲ್ಲಿ ಅವರು ಒಟ್ಟು 3.02 ಕೋಟಿ ರೂ.ಗಳ ಆಸ್ತಿ ಪ್ರಕಟಿಸಿದ್ದಾರೆ. ಅದರಲ್ಲಿ ಬಹುಪಾಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿದೆ. ಅಂದರೆ 2.86 ಕೋಟಿ ರೂ.ಗಳ ಸ್ಥಿರ ಠೇವಣಿ ಇಟ್ಟಿದ್ದಾರೆ. (Fixed Deposit) ಅವರ ಕೈಯಲ್ಲಿ ಒಟ್ಟು ₹ 52,920 ನಗದು ಗಾಂಧಿನಗರ ಮತ್ತು ವಾರಣಾಸಿಯ ಎರಡು ಬ್ಯಾಂಕ್ ಖಾತೆಗಳಲ್ಲಿ ಉಳಿದ ₹ 80,304 ಉಳಿಕೆಯಿದೆ.

ಪ್ರಧಾನಿ ಮೋದಿಯ ನಾಮಪತ್ರದ ​ ವಿವರ ಇಲ್ಲಿದೆ

ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳಲ್ಲಿ ಪ್ರಧಾನಿ 9.12 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದಾರೆ ಮತ್ತು 2.68 ಲಕ್ಷ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ. ಅವರ ಒಟ್ಟು ಆದಾಯ 2018-19ರಲ್ಲಿ ಇದ್ದ 11.14 ಲಕ್ಷ ರೂ.ಗಳಿಂದ 2022-23ರಲ್ಲಿ 23.56 ಲಕ್ಷ ರೂಪಾಯಿಗೆ ಏರಿದೆ.

ಶೈಕ್ಷಣಿಕ ಅರ್ಹತೆ

ಪ್ರಧಾನಿ ಮೋದಿ 1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ ಮತ್ತು 1983ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಆರ್ಟ್ಸ್ ಪೂರ್ಣಗೊಳಿಸಿದ್ದೇನೆ ಎಂದು ಪ್ರಧಾನಿ ಘೋಷಿಸಿದ್ದಾರೆ. ಅವರ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗುತ್ತಿರುವ ವಾರಾಣಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, “ನಾನು ಭಾವಪರವಶನಾಗಿದ್ದೇನೆ. ನಿಮ್ಮ ಪ್ರೀತಿಯ ನೆರಳಿನಲ್ಲಿ 10 ವರ್ಷಗಳು ಹೇಗೆ ಕಳೆದವು ಎಂದು ನನಗೆ ತಿಳಿದಿರಲಿಲ್ಲ. ‘ಆಜ್ ಮಾ ಗಂಗಾ ನೆ ಮುಜೆ ಗಾಡ್ ಲೇ ಲಿಯಾ ಹೈ’ (ಇಂದು, ತಾಯಿ ಗಂಗಾ ನನ್ನನ್ನು ದತ್ತು ತೆಗೆದುಕೊಂಡಿದ್ದಾಳೆ) ಎಂದು ಹೇಳಿದ್ದಾರೆ. ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಹಂತದ ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ವಾರಾಣಾಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ (Narendra Modi nomination) ಸಲ್ಲಿಸಿದರು. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೇರಿದಂತೆ ಇನ್ನೂ ಹಲವರಿದ್ದರು. ಆದರೆ ಮುಖ್ಯವಾಗಿ ಒಂದು ಮುಖ ಎಲ್ಲರ ಗಮನ ಸೆಳೆಯಿತು. ಅದು ಮೋದಿಯವರ ಪಕ್ಕದಲ್ಲಿಯೇ ಕುಳಿತಿದ್ದ, ಗಡ್ಡಧಾರಿ ಸಾಧು. ಮೋದಿ ಹಾಗೂ ಈ ವ್ಯಕ್ತಿ ಆತ್ಮೀಯವಾಗಿ ಮಾತನಾಡಿಕೊಳ್ಳುತ್ತಿದ್ದುದು ಕ್ಯಾಮೆರಾದಲ್ಲಿ ಸೆರೆಯಾಯಿತು.

ಹಾಗಾದರೆ ಅವರು ಯಾರು? ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಸಲ್ಲಿಸಿದ ನಾಮಪತ್ರವನ್ನು ಅನುಮೋದಿಸಿದ ನಾಲ್ವರಲ್ಲಿ ಈ ಸಾಧುವೂ ಒಬ್ಬರು. ಅವರ ಹೆಸರು ಪಂಡಿತ ಗಣೇಶ್ವರ ಶಾಸ್ತ್ರಿ (Pandit Ganeshwar Shastri). ಇತರ ಮೂವರೆಂದರೆ ಬೈಜನಾಥ್ ಪಟೇಲ್, ಲಾಲ್‌ಚಂದ್ ಕುಶ್ವಾಹಾ ಮತ್ತು ಸಂಜಯ್ ಸೋಂಕರ್.

ಯಾರು ಈ ಗಣೇಶ್ವರ ಶಾಸ್ತ್ರಿ? ಇವರು ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸಿದ್ಧ ವಿದ್ವಾಂಸರು. ವಿದ್ವಾಂಸ ರಾಜೇಶ್ವರ ಶಾಸ್ತ್ರಿಯವರ ಎರಡನೇ ಮಗ. ವಿದ್ವಾನ್‌ ಗಣೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ನೆಲೆಸಿದ್ದು, ಧರ್ಮ ಪ್ರಚಾರ ಮತ್ತು ಬೋಧನೆಗೆ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರು ಸಾಂಗ್ವೇದ ವಿದ್ಯಾಲಯದಲ್ಲಿ ಗೀರ್ವಾಣವಾಗ್‌ವರ್ಧಿನಿ ಸಭೆಯ ನಿರ್ಧಾರಗಳನ್ನು ಶ್ರದ್ಧೆಯಿಂದ ಅನುಸರಿಸುತ್ತಾರೆ ಮತ್ತು ಜ್ಯೋತಿಷ್ಯ, ಆಯುರ್ವೇದ ಮತ್ತು ಆಚರಣೆಗಳಲ್ಲಿ ತಮ್ಮ ಪರಿಣತಿಯ ಮೂಲಕ ಜನರಿಗೆ ಸಹಾಯ ಮಾಡುತ್ತಿರುತ್ತಾರೆ.

ಜನವರಿ 22ರಂದು ನಡೆದ ಅಯೋಧ್ಯೆ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭವು ಪಂಡಿತ ಗಣೇಶ್ವರ ಶಾಸ್ತ್ರಿ ದ್ರಾವಿಡ ಅವರು ನಿರ್ಧರಿಸಿದ 84 ಸೆಕೆಂಡುಗಳ ಕಾಲ ಶುಭ ಮುಹೂರ್ತದಲ್ಲಿ ನಡೆದಿತ್ತು. ಈ ಸಮಯವನ್ನು ರಾಮ ಮಂದಿರದ ಅಡಿಪಾಯ ಹಾಕಲು ಸಹ ಬಳಸಲಾಗಿತ್ತು. ಇದು ಈ ಮಂದಿರ ಯೋಜನೆಯಲ್ಲಿ ಈ ವಿದ್ವಾಂಸರು ಎಷ್ಟು ಆಳವಾಗಿ ತೊಡಗಿಕೊಂಡಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ.

ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

ಮೋದಿ ನಾಮಪತ್ರ ಅನುಮೋದಿಸಿದ ಇನ್ನು ಮೂವರೆಂದರೆ ಬೈಜನಾಥ್ ಪಟೇಲ್, ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು. ಲಾಲ್‌ಚಂದ್ ಕುಶ್ವಾಹಾ, ಇವರು ಕೂಡ ಒಬಿಸಿ ಸಮುದಾಯದವರು. ಸಂಜಯ್ ಸೋಂಕರ್, ಇವರು ದಲಿತ ಸಮುದಾಯದಿಂದ ಬಂದವರು

Continue Reading
Advertisement
Bank Loan Fraud
ಪ್ರಮುಖ ಸುದ್ದಿ9 mins ago

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
ಉತ್ತರ ಕನ್ನಡ23 mins ago

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Swati Maliwal
ಪ್ರಮುಖ ಸುದ್ದಿ40 mins ago

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

Karnataka weather Man from Siddapura killed in lightning Heavy rain warning for four more days
ಕರ್ನಾಟಕ59 mins ago

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Manjappa Magodi
ಚಿತ್ರದುರ್ಗ2 hours ago

Manjappa Magodi: ಕೆಇಎಸ್‌ ಅಧಿಕಾರಿ ಮಂಜಪ್ಪ ಮಾಗೊದಿಗೆ ಕುವೆಂಪು ವಿವಿಯಿಂದ ಡಾಕ್ಟರೇಟ್

Viral News
ವಿದೇಶ2 hours ago

Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

Narendra Modi
ಪ್ರಮುಖ ಸುದ್ದಿ2 hours ago

Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Viral Video
ವೈರಲ್ ನ್ಯೂಸ್2 hours ago

Viral Video: 25 ವರ್ಷಗಳ ಹಿಂದೆ ಬಿಬಿಸಿ ನ್ಯೂಸ್ ಥೀಮ್ ಟ್ಯೂನ್ ಹುಟ್ಟಿಕೊಂಡಿದ್ದು ಹೇಗೆ ಗೊತ್ತೇ?

Chaya Singh
ಕರ್ನಾಟಕ2 hours ago

Chaya Singh: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ಕದ್ದಿದ್ದ ಮನೆಕೆಲಸದಾಕೆ ಬಂಧನ

former MLC Arun Shahapur latest Statement
ಬೆಂಗಳೂರು2 hours ago

Bengaluru News: ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ; ಅರುಣ್ ಶಹಾಪುರ ಆರೋಪ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Released first reaction after release will be acquitted of all charges
ರಾಜಕೀಯ2 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20248 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ9 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು10 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ16 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ1 day ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ಟ್ರೆಂಡಿಂಗ್‌