Sudha Murthy: ವೈದ್ಯಕೀಯ ಸೇವೆಯಲ್ಲಿ ಬದ್ಧತೆ, ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ - Vistara News

ಬೆಂಗಳೂರು

Sudha Murthy: ವೈದ್ಯಕೀಯ ಸೇವೆಯಲ್ಲಿ ಬದ್ಧತೆ, ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ

ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಎನ್‌ಯು ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಸುಧಾಮೂರ್ತಿ (Sudha Murthy) ಅವರು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಖಾಸಗಿ ಆಸ್ಪತ್ರೆಯೊಂದು ಬದ್ಧತೆ ಹಾಗೂ ನೈತಿಕತೆ ಇಟ್ಟುಕೊಂಡು ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ ಎಂದು ತಿಳಿಸಿದ್ದಾರೆ.

VISTARANEWS.COM


on

Sudha Murthy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಪರ್ಧಾತ್ಮಕ ಜಗತ್ತಿನಲ್ಲಿ ಖಾಸಗಿ ಆಸ್ಪತ್ರೆಯೊಂದು ಬದ್ಧತೆ ಹಾಗೂ ನೈತಿಕತೆ ಇಟ್ಟುಕೊಂಡು ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ ಎಂದು ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ (Sudha Murthy) ತಿಳಿಸಿದರು.

ನಗರದ ನಿಮ್ಹಾನ್ಸ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಎನ್‌ಯು ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಆಸ್ಪತ್ರೆ ನಡೆಸುವುದು ಸುಲಭದ ಕೆಲಸವಲ್ಲ. ನಾನು ಈ ಕಷ್ಟವನ್ನು ಹತ್ತಿರದಿಂದ ಕಂಡಿದ್ದೇನೆ. ಇಂತಹ ಸ್ಪರ್ಧಾತ್ಮಕ ವ್ಯವಸ್ಥೆಯಲ್ಲಿ ಆಸ್ಪತ್ರೆ 25 ವರ್ಷಗಳನ್ನು ಪೂರ್ಣಗೊಳಿಸುವುದು ಸಾಹಸವೇ ಸರಿ. ಆ ನಿಟ್ಟಿನಲ್ಲಿ ಎನ್‌ಯು ಆಸ್ಪತ್ರೆಯ ಈ ಪಯಣ ನಿಜಕ್ಕೂ ಅಭಿನಂದನಾರ್ಹ. ಇಂದು ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ ಆಸ್ಪತ್ರೆ ನಡೆಸುವುದು ಅಸಾಧ್ಯದ ಮಾತು. ಹಾಗೆಯೇ ಕೇವಲ ಹಣ ಮಾಡುವುದಕ್ಕಷ್ಟೇ ಆಸ್ಪತ್ರೆ ನಡೆಸುವುದು ಸರಿಯಾದುದಲ್ಲ. ಆದರೆ ಬದ್ಧತೆ ಹಾಗೂ ನೈತಿಕತೆ ಇಟ್ಟುಕೊಂಡು ಸೇವೆ ನೀಡುವ ಕೆಲಸ ನಿಜಕ್ಕೂ ಸ್ವಾಗತಾರ್ಹ. ಅಂತಹ ಕೆಲಸ ಎನ್‌ಯು ಆಸ್ಪತ್ರೆ ಮಾಡುತ್ತಾ ಬರುತ್ತಿರುವುದು ಬಹು ದೊಡ್ಡ ಸಾಧನೆ ಎಂದು ತಿಳಿಸಿದರು.

ಇದನ್ನೂ ಓದಿ: MB Patil: ವಿಮಾನ‌ ನಿಲ್ದಾಣ, ಏರ್ ಸ್ಟ್ರಿಪ್ ಪ್ರಗತಿ ಪರಿಶೀಲನೆ; ತಾಂತ್ರಿಕ ಅಡಚಣೆ ನಿವಾರಣೆಗೆ ಸಚಿವ ಎಂ‌.ಬಿ. ಪಾಟೀಲ ಸೂಚನೆ

ರಜತ ಮಹೋತ್ಸವದ ಕುರಿತು ಎನ್‌ಯು ಆಸ್ಪತ್ರೆಯ ಅಧ್ಯಕ್ಷ ಡಾ. ವೆಂಕಟೇಶ್ ಕೃಷ್ಣಮೂರ್ತಿ ಮಾತನಾಡಿ, ನಮ್ಮ ವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯರು ನಿಯಮಿತವಾಗಿ ಪ್ರತಿಷ್ಠಿತ ವೈದ್ಯಕೀಯ ನಿಯತಕಾಲಿಕಗಳಲ್ಲಿ ಸಂಶೋಧನೆಗಳನ್ನು ಪ್ರಕಟಿಸುತ್ತಾ ಬಂದಿದ್ದಾರೆ. ಹಾಗೆಯೇ ಈ ಮೂಲಕ ರೋಗಿಗಳಲ್ಲಿನ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿವೆ. ರೋಗಿಯು ಶೀಘ್ರ ಗುಣಮುಖಗೊಳ್ಳುತ್ತಿದ್ದಾರೆ. ಮತ್ತೆ ರೋಗಕ್ಕೆ ತುತ್ತಾಗುವುದು ಹಾಗೂ ಮರಣ ಪ್ರಮಾಣವು ಗಣನೀಯವಾಗಿ ಕಡಿಮೆಯಾಗುತ್ತಿದೆ. ಈ ಪ್ರಯತ್ನದಲ್ಲಿ ಎನ್‌ಯು ಆಸ್ಪತ್ರೆಯು ಮುಂಚೂಣಿಯಲ್ಲಿದೆ ಹಾಗೂ ಇದೇ ಆಸ್ಪತ್ರೆಯ ಯಶಸ್ಸಿಗೆ ಕಾರಣವಾಗಿದೆ. ಅಲ್ಲದೆ ಆಸ್ಪತ್ರೆಯು ಅತ್ಯಾಧುನಿಕ ಐಸಿಯು ಸೌಲಭ್ಯಗಳು, 24/7 ಡಯಾಲಿಸಿಸ್, ಸುಧಾರಿತ ಪ್ರಯೋಗಾಲಯ ಮತ್ತು ರೇಡಿಯೊ ಡಯಾಗ್ನೋಸಿಸ್ ಸೇವೆಗಳು ಮತ್ತು ಯುರೊಡೈನಾಮಿಕ್ಸ್ ಸೌಲಭ್ಯಗಳನ್ನು ಹೊಂದಿದೆ. ಇದರಿಂದ ಉತ್ತಮ ರೀತಿಯಲ್ಲಿ ಸೇವೆ ನೀಡಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಖ್ಯಾತ ಯುರಾಲಜಿಸ್ಟ್ ಮತ್ತು ಎನ್‌ಯು ಆಸ್ಪತ್ರೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಸನ್ನ ವೆಂಕಟೇಶ್ ಮಾತನಾಡಿ, ಎನ್‌ಯು ಆಸ್ಪತ್ರೆಯು 25 ವರ್ಷಗಳನ್ನು ಪೂರೈಸುತ್ತಿದ್ದು, ತನ್ನ ರಜತ ಮಹೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದೆ. ಕಳೆದ ಕಾಲು ಶತಮಾನದಲ್ಲಿ ಎನ್‌ಯು ಆಸ್ಪತ್ರೆ ಹಲವಾರು ಮೈಲಿಗಲ್ಲುಗಳನ್ನು ತಲುಪಿದೆ. 2018ರಲ್ಲಿ ನಾನ್ ಇನ್ವೇಸಿವ್ ರೋಗಿಗಳ ಮೇಲ್ವಿಚಾರಣಾ ವ್ಯವಸ್ಥೆಯಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿರುವ ಯುಎಸ್ ಮೂಲದ ಮಾಸಿಮೊ ಸಹಯೋಗದೊಂದಿಗೆ ‘ಪೇಷಂಟ್ ಸೇಫ್ಟಿನೆಟ್’ ಅನ್ನು ಅಳವಡಿಸಿಕೊಂಡ ಭಾರತದ ಮೊದಲ ಆಸ್ಪತ್ರೆಯಾಗಿದೆ. ಈ ಆಸ್ಪತ್ರೆಯು ಸಿಎಂಆರ್ ವರ್ಸಿಯಸ್ ಸರ್ಜಿಕಲ್ ರೊಬೊಟಿಕ್ ಸಿಸ್ಟಮ್ ಅನ್ನು ಪರಿಚಯಿಸಿದ ಭಾರತದಲ್ಲಿ ಮೊದಲನೆಯ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಕಾರಣವಾಗಿದೆ. ಈ ವಿಧಾನಗಳ ಚಿಕಿತ್ಸೆಯ ಮೂಲಕ ರೋಗಿಗೆ ಎದುರಾಗಬಹುದಾದಂತಹ ತೊಂದರೆಗಳನ್ನು ತಪ್ಪಿಸುವಲ್ಲಿ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ತಿಳಿಸಿದರು.

2015ರಲ್ಲಿ ಎನ್‌ಯು ಆಸ್ಪತ್ರೆಯು ಬೆಂಗಳೂರಿನ ರಾಜಾಜಿನಗರದಲ್ಲಿ ಎರಡನೇ ಅತ್ಯಾಧುನಿಕ ಘಟಕವನ್ನು ಆರಂಭಿಸುವ ಮೂಲಕ ತನ್ನ ಶಾಖೆಯನ್ನು ವಿಸ್ತರಿಸಿತು. ರಿಪಬ್ಲಿಕ್ ಆಫ್ ಮಾಲ್ಡೀವ್ಸ್‌ನ ಮಾಲೆಯಲ್ಲಿರುವ ಇಂದಿರಾ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಯುರಾಲಜಿ ರೆನಲ್ ಮತ್ತು ಫಲವತ್ತತೆ ಕೇಂದ್ರವನ್ನು 2016 ರಲ್ಲಿ ತೆರೆಯುವ ಮೂಲಕ ಆಸ್ಪತ್ರೆಯ ವ್ಯಾಪ್ತಿಯು ವಿದೇಶಕ್ಕೆ ವಿಸ್ತರಿಸಿತು. 2020ರಲ್ಲಿ ಕರ್ನಾಟಕದ ಶಿವಮೊಗ್ಗ ಮತ್ತು ತಮಿಳುನಾಡಿನ ಅಂಬೂರಿನಲ್ಲಿ ಆಸ್ಪತ್ರೆಗಳ ಸ್ಥಾಪನೆಯೊಂದಿಗೆ ದಕ್ಷಿಣ ಭಾರತದಲ್ಲಿ ಶಾಖೆಗಳನ್ನು ಮತ್ತಷ್ಟು ವಿಸ್ತರಣೆ ಮಾಡಲಾಯಿತು. ಎಲ್ಲಾ ಎನ್‌ಯು ಆಸ್ಪತ್ರೆಗಳ ಘಟಕಗಳು ಎನ್‌ಎಬಿಎಚ್‌ (NABH) ಮತ್ತು ಎನ್‌ಎಬಿಎಲ್‌ (NABL) ಮಾನ್ಯತೆ ಪಡೆದಿವೆ. ಸಂಸ್ಥೆಯು ಡಿಎನ್‌ಬಿ (DNB) ನ್ಯಾಷನಲ್ ಬೋರ್ಡ್-ಮಾನ್ಯತೆ ಪಡೆದ ಸ್ನಾತಕೋತ್ತರ ಕಾರ್ಯಕ್ರಮಗಳನ್ನು ನೀಡುವ ಮೂಲಕ ಮುಂದಿನ ಪೀಳಿಗೆಯ ಯುರಾಲಜಿಸ್ಟ್ ಮತ್ತು ನೆಫ್ರಾಲಜಿಸ್ಟ್ ತಜ್ಞರಿಗೆ ತರಬೇತಿ ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: UPS: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು

25ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಅಂಗವಾಗಿ ಕಾರ್ಯಕ್ರಮದಲ್ಲಿ ಆಸ್ಪತ್ರೆಗೆ ದೀರ್ಘ ಹಾಗೂ ವಿಶೇಷ ಸೇವೆ ಸಲ್ಲಿಸಿದ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

Unified pension scheme: ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ಯುಪಿಎಸ್ ಪಿಂಚಣಿ ಯೋಜನೆ ಜಾರಿಗೆ ಶೇಕಡ 50ರಷ್ಟು ಪಿಂಚಣಿ ನೀಡಲು ತೆಗೆದುಕೊಂಡಿರುವ ತೀರ್ಮಾನ ತೃಪ್ತಿ ತಂದಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ. ನಮ್ಮ ಬೇಡಿಕೆ ಹಳೆ ಪಿಂಚಣಿಯ ಮರು ಸ್ಥಾಪನೆ ಮಾತ್ರ ಎಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಹೇಳಿದ್ದಾರೆ.

VISTARANEWS.COM


on

unified pension scheme
Koo


ಬೆಂಗಳೂರು: ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಹೊಸ ಯುಪಿಎಸ್ ಪಿಂಚಣಿ ಯೋಜನೆ(Unified pension scheme)ಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ(Karnataka government employees) ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ಈ ನಿರ್ಧಾರ ತೃಪ್ತಿಕರವಲ್ಲ ಎಂದು ಈ ಸಂಘಗಳು ಅಭಿಪ್ರಾಯಪಟ್ಟಿವೆ

ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ಯುಪಿಎಸ್ ಪಿಂಚಣಿ ಯೋಜನೆ ಜಾರಿಗೆ ಶೇಕಡ 50ರಷ್ಟು ಪಿಂಚಣಿ ನೀಡಲು ತೆಗೆದುಕೊಂಡಿರುವ ತೀರ್ಮಾನ ತೃಪ್ತಿ ತಂದಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಮತ್ತೊಮ್ಮೆ ಪುನರ್ ಪರಿಶೀಲಿಸಿ ಶೇಕಡ 100ರಷ್ಟು ಪಿಂಚಣಿ ನೀಡಲು ಆಗ್ರಹಿಸುತ್ತೇವೆ ಎಂದು ಷಡಾಕ್ಷರಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಪೂರ್ಣವಾಗಿ ವಿರೋಧಿಸುತ್ತದೆ ಎಂದು ಈ ಸಂಘದ ಅಧ್ಯಕ್ಷ ಶಾಂತಾರಾಮ್ ಅವರು ಹೇಳಿಕೆ ನೀಡಿದ್ದಾರೆ. ನಮ್ಮ ಬೇಡಿಕೆ ಹಳೆ ಪಿಂಚಣಿಯ ಮರು ಸ್ಥಾಪನೆ ಮಾತ್ರ ಎಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಹೇಳಿದ್ದಾರೆ.

ಏನಿದು ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆ?:

ಇದು ಸರ್ಕಾರಿ ನೌಕರರಿಗೆ ಇತ್ತೀಚಿನ ಪಿಂಚಣಿ ಯೋಜನೆಯಾಗಿದೆ. ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ಮೊತ್ತದ ಭರವಸೆ ನೀಡುವ ಯೋಜನೆ ಇದಾಗಿದೆ. UPS ಅಡಿಯಲ್ಲಿ, ನಿಗದಿತ ಪಿಂಚಣಿಯು ಕಳೆದ 12 ತಿಂಗಳುಗಳ ಅವಧಿಯಲ್ಲಿ ಪಡೆದ ಸರಾಸರಿ ಮೂಲ ವೇತನದ 50 ಪ್ರತಿಶತದಷ್ಟಿರುತ್ತದೆ.ಇದು ಖಚಿತವಾದ ಕುಟುಂಬ ಪಿಂಚಣಿಯನ್ನು ಸಹ ಹೊಂದಿರುತ್ತದೆ, ಇದು ಉದ್ಯೋಗಿಯ ಮೂಲ ವೇತನದ 60 ಪ್ರತಿಶತವಾಗಿದೆ. ನೌಕರನ ಮರಣದ ಸಂದರ್ಭದಲ್ಲಿ ಅದನ್ನು ತಕ್ಷಣವೇ ನೀಡಲಾಗುವುದು. ಕನಿಷ್ಠ 10 ವರ್ಷಗಳ ಸೇವೆಯ ನಂತರ ನಿವೃತ್ತಿಯ ಸಂದರ್ಭದಲ್ಲಿ, UPS ತಿಂಗಳಿಗೆ 10,000 ರೂ.ಗಳ ಖಚಿತವಾದ ಕನಿಷ್ಠ ಪಿಂಚಣಿಯನ್ನು ಒದಗಿಸುತ್ತದೆ.

ಯುಪಿಎಸ್‌ಗೆ ಯಾರು ಸೇರಬಹುದು?

“ಕೇಂದ್ರ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆಯಲ್ಲಿ (ಎನ್‌ಪಿಎಸ್) ಉಳಿಯಲು ಅಥವಾ ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಸೇರಲು ನಿರ್ಧರಿಸುವ ಹಕ್ಕನ್ನು ಹೊಂದಿರುತ್ತಾರೆ” ಎಂದು ವೈಷ್ಣವ್ ಹೇಳಿದರು. ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿ ನಿಯೋಜಿತ ಟಿ ವಿ ಸೋಮನಾಥನ್ ಅವರು, “ಇದು ಈಗಾಗಲೇ ಎನ್‌ಪಿಎಸ್ ಅಡಿಯಲ್ಲಿ 2004 ರಿಂದ ನಿವೃತ್ತರಾದ ಎಲ್ಲರಿಗೂ ಅನ್ವಯಿಸುತ್ತದೆ. ಹೊಸ ಯೋಜನೆಯು ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆಯಾದರೂ, NPS ಪ್ರಾರಂಭವಾದ ಸಮಯದಿಂದ ನಿವೃತ್ತರಾದ ಪ್ರತಿಯೊಬ್ಬರೂ ಮತ್ತು ಮಾರ್ಚ್ 31, 2025 ರವರೆಗೆ ನಿವೃತ್ತರಾದವರು ಸೇರಿದಂತೆ, UPS ನ ಈ ಎಲ್ಲಾ ಐದು ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ” ಎಂದಿದ್ದಾರೆ.

ಇದನ್ನೂ ಓದಿ: NPS v/s UPS: ಏಕೀಕೃತ ಪಿಂಚಣಿ ಯೋಜನೆ ಅಂದ್ರೆ ಏನು? ಇದು NPSಗಿಂತ ಹೇಗೆ ಭಿನ್ನ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Continue Reading

ಮಳೆ

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Karnataka Rain : ಕರಾವಳಿಯಲ್ಲಿ ಇಂದಿನಿಂದ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿಗೂ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Karnataka Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಉತ್ತರ ಒಳನಾಡು, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಹುಡ್ಗಿ ವಿಷ್ಯಕ್ಕೆ ರೂಮ್‌ನಲ್ಲಿ ಕೂಡಿ ಹಾಕಿ ಯುವಕನಿಗೆ ರಕ್ತ ಬರುವಂತೆ ಥಳಿತ; ವಿಡಿಯೊ ವೈರಲ್‌

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ. ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆ ಇವೆ.

ಕರಾವಳಿಗೂ ಮಳೆ ಅಲರ್ಟ್‌

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಆಗಸ್ಟ್‌ 27 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೇಲಿನ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಮುಂದಿನ 48 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Murder Case: ಇಬ್ಬರು ಹೆಣ್ಣು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಮಲತಂದೆ!

Murder Case: ಬೆಂಗಳೂರಿನ ದಾಸರಹಳ್ಳಿಯಲ್ಲಿ ಉತ್ತರ ಭಾರತ ಮೂಲದ ಕುಟುಂಬದ 14 ಹಾಗೂ 15 ವರ್ಷದ ಹೆಣ್ಣು ಮಕ್ಕಳನ್ನು ಮಲತಂದೆ ಬರ್ಬರವಾಗಿ ಕೊಂದಿದ್ದಾನೆ.

VISTARANEWS.COM


on

Murder Case
Koo

ಬೆಂಗಳೂರು: ಇಬ್ಬರು ಹೆಣ್ಣು ಮಕ್ಕಳನ್ನು ಮಲತಂದೆ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ (Murder Case) ಮಾಡಿರುವ ಘಟನೆ ನಗರದ ದಾಸರಹಳ್ಳಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ ಕುಟುಂಬದ 14 ಹಾಗೂ 15 ವರ್ಷದ ಹೆಣ್ಣು ಮಕ್ಕಳನ್ನು ಮಲತಂದೆ ಬರ್ಬರವಾಗಿ ಕೊಂದಿದ್ದಾನೆ.

ಸುಮಿತ್ ಕೊಲೆ ಮಾಡಿದ ಆರೋಪಿ. ದಾಸರಹಳ್ಳಿಯ ಕಾವೇರಿ ಬಡಾವಣೆಯ ಎರಡನೇ ಮಹಡಿಯಲ್ಲಿದ್ದ ಮನೆಯಲ್ಲಿಯಲ್ಲಿ ಘಟನೆ ನಡೆದಿದೆ. ಪತ್ನಿ ಕೆಲಸಕ್ಕೆ ಹೋಗಿದ್ದ ವೇಳೆ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ಪಾಪಿ ಮಲತಂದೆ ಪರಾರಿಯಾಗಿದ್ದಾನೆ. ಆರೋಪಿಯು ಜೆಪ್ಟೊ ಡೆಲಿವರಿ ಆ್ಯಪ್‌ನಲ್ಲಿ‌ ಕೆಲಸ ಮಾಡುತ್ತಿದ್ದ. ಸ್ಥಳಕ್ಕೆ ಈಶಾನ್ಯ ವಿಭಾಗದ ಡಿಸಿಪಿ ಸಜೀತ್, ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Lorry Accident: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; 16 ಕಾರ್ಮಿಕರಿಗೆ ಗಂಭೀರ ಗಾಯ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ (Murder Case) ಸಂಪಿಗೆಹಳ್ಳಿ‌ ಪೊಲೀಸ್ ಠಾಣಾ ವ್ಯಾಪ್ತಿಯ 80 ಫೀಟ್ ರಸ್ತೆಯಲ್ಲಿ ನಡೆದಿದೆ. ಪುಷ್ಪರಾಜ್ (27) ಹತ್ಯೆಯಾದ ಯುವಕ. ಕುಡಿದ ಮತ್ತಿನಲ್ಲಿ ಆರೋಪಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಪುಷ್ಪರಾಜ್‌ ಟೈಲ್ಸ್ ಹಾಕುವ ಕೆಲಸ ಮಾಡಿಕೊಂಡಿದ್ದ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಶುಕ್ರವಾರ ರಾತ್ರಿ ಖಾಲಿ‌ ಜಾಗದ ಶೆಡ್‌ನಲ್ಲಿ ಸ್ನೇಹಿತರು ಪಾರ್ಟಿ ಮಾಡಿದ್ದರು. ಈ ವೇಳೆ ಜಗಳ ನಡೆದಿದ್ದು, ಪುಷ್ಪ ರಾಜ್ ಕೊಲೆಯಾಗಿದೆ. ಘಟನೆ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಇಂದು ಸಂಜೆ 4.30ಕ್ಕೆ ಮೃತದೇಹ ಇರುವುದು ಪತ್ತೆಯಾಗಿದೆ. ಸದ್ಯ ಸ್ಥಳಕ್ಕೆ ಸಂಪಿಗೆಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಣ ಡಬಲ್‌ ಆಗುತ್ತೆಂದು ಆನ್‌ಲೈನ್‌ನಲ್ಲಿ ಹೂಡಿಕೆ; ಮೋಸ ಹೋದ ಯುವಕ ನೇಣಿಗೆ ಶರಣು

ಶಿವಮೊಗ್ಗ: ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿ ಮೋಸ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿ ನಗರದ ಕಾಗದ ನಗರ ಬಡಾವಣೆಯ 6ನೇ ವಾರ್ಡ್‌ನಲ್ಲಿ ನಡೆದಿದೆ. ಒನ್ ಟು ಡಬಲ್ ಆಗುತ್ತದೆಂದು ನಂಬಿ ಆನ್‌ಲೈನ್‌ನಲ್ಲಿ 91 ಸಾವಿರ ರೂ.ಗಳನ್ನು ಯುವಕ ಹೂಡಿಕೆ ಮಾಡಿದ್ದ. ಅದರೆ, ಮೋಸ ಹೋದ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪ್ರದೀಪ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಖಾಸಗಿ ಕಂಪನಿಯಲ್ಲಿ ಪ್ರದೀಪ್ ಕೆಲಸ ಮಾಡುತ್ತಿದ್ದ. ಸಾಲ ಮಾಡಿ ಆನ್‌ಲೈನ್‌ ಆ್ಯಪ್‌ ಮೂಲಕ ಯುವಕ ಹಣ ಹೂಡಿಕೆ ಮಾಡಿದ್ದ. ಆದರೆ. ಅದರಲ್ಲಿ ಮೋಸ ಹೋಗಿದ್ದರಿಂದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ | Lorry Accident: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; 16 ಕಾರ್ಮಿಕರಿಗೆ ಗಂಭೀರ ಗಾಯ

Continue Reading

ಕರ್ನಾಟಕ

Self Harming: ಹಣ ಡಬಲ್‌ ಆಗುತ್ತೆಂದು ಆನ್‌ಲೈನ್‌ನಲ್ಲಿ ಹೂಡಿಕೆ; ಮೋಸ ಹೋದ ಯುವಕ ನೇಣಿಗೆ ಶರಣು

Self Harming: ಒನ್ ಟು ಡಬಲ್ ಆಗುತ್ತದೆಂದು ನಂಬಿ ಆನ್‌ಲೈನ್‌ನಲ್ಲಿ 91 ಸಾವಿರ ರೂ.ಗಳನ್ನು ಯುವಕ ಹೂಡಿಕೆ ಮಾಡಿದ್ದ. ಆದರೆ, ಮೋಸ ಹೋಗಿದ್ದರಿಂದ ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Self Harming
Koo

ಶಿವಮೊಗ್ಗ: ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿ ಮೋಸ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿ ನಗರದ ಕಾಗದ ನಗರ ಬಡಾವಣೆಯ 6ನೇ ವಾರ್ಡ್‌ನಲ್ಲಿ ನಡೆದಿದೆ. ಒನ್ ಟು ಡಬಲ್ ಆಗುತ್ತದೆಂದು ನಂಬಿ ಆನ್‌ಲೈನ್‌ನಲ್ಲಿ 91 ಸಾವಿರ ರೂ.ಗಳನ್ನು ಯುವಕ ಹೂಡಿಕೆ ಮಾಡಿದ್ದ. ಅದರೆ, ಮೋಸ ಹೋದ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪ್ರದೀಪ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಖಾಸಗಿ ಕಂಪನಿಯಲ್ಲಿ ಪ್ರದೀಪ್ ಕೆಲಸ ಮಾಡುತ್ತಿದ್ದ. ಸಾಲ ಮಾಡಿ ಆನ್‌ಲೈನ್‌ ಆ್ಯಪ್‌ ಮೂಲಕ ಯುವಕ ಹಣ ಹೂಡಿಕೆ ಮಾಡಿದ್ದ. ಆದರೆ. ಅದರಲ್ಲಿ ಮೋಸ ಹೋಗಿದ್ದರಿಂದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ | Lorry Accident: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; 16 ಕಾರ್ಮಿಕರಿಗೆ ಗಂಭೀರ ಗಾಯ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ (Murder Case) ಸಂಪಿಗೆಹಳ್ಳಿ‌ ಪೊಲೀಸ್ ಠಾಣಾ ವ್ಯಾಪ್ತಿಯ 80 ಫೀಟ್ ರಸ್ತೆಯಲ್ಲಿ ನಡೆದಿದೆ. ಪುಷ್ಪರಾಜ್ (27) ಹತ್ಯೆಯಾದ ಯುವಕ. ಕುಡಿದ ಮತ್ತಿನಲ್ಲಿ ಆರೋಪಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಪುಷ್ಪರಾಜ್‌ ಟೈಲ್ಸ್ ಹಾಕುವ ಕೆಲಸ ಮಾಡಿಕೊಂಡಿದ್ದ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಶುಕ್ರವಾರ ರಾತ್ರಿ ಖಾಲಿ‌ ಜಾಗದ ಶೆಡ್‌ನಲ್ಲಿ ಸ್ನೇಹಿತರು ಪಾರ್ಟಿ ಮಾಡಿದ್ದರು. ಈ ವೇಳೆ ಜಗಳ ನಡೆದಿದ್ದು, ಪುಷ್ಪ ರಾಜ್ ಕೊಲೆಯಾಗಿದೆ. ಘಟನೆ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಇಂದು ಸಂಜೆ 4.30ಕ್ಕೆ ಮೃತದೇಹ ಇರುವುದು ಪತ್ತೆಯಾಗಿದೆ. ಸದ್ಯ ಸ್ಥಳಕ್ಕೆ ಸಂಪಿಗೆಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Murder case : ಬಾಳೆತೋಟದಲ್ಲಿತ್ತು ದಲಿತ ಮಹಿಳೆ ಶವ; ಕಾಲ್ಕಿತ್ತ ಮಾಲೀಕ, ಅತ್ಯಾಚಾರ ಶಂಕೆ

ಚಿಕ್ಕೋಡಿಯಲ್ಲಿ ವ್ಯಕ್ತಿ ಕಾಲಿನ ಮೇಲೆ ಹರಿದ ಬಸ್‌

ಚಿಕ್ಕೋಡಿ: ವೇಗವಾಗಿ ಬಂದ ಬಸ್‌ವೊಂದು ವ್ಯಕ್ತಿಗೆ ಹೊಡೆದು ಕಾಲಿನ ಮೇಲೆ ಹರಿದಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಳಗಾವಿ ತಾಲ್ಲೂಕಿನ ಕಗಬರಗಿ ಗ್ರಾಮದ 40 ವರ್ಷದ ಸದಾಶಿವ ಯಡವಳ್ಳಿ ಎಂಬುವವರ ಮೇಲೆ ಬಸ್‌ ಹರಿದಿದೆ. ಬಸ್‌ಗಾಗಿ ಕಾಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ: Accident Case:ಕೇತೇನಹಳ್ಳಿ ಫಾಲ್ಸ್‌ನಿಂದ ಬರುವಾಗ ಕಾಲು ಜಾರಿ ಬಿದ್ದ ಮಹಿಳಾ ಟೆಕ್ಕಿ; 2 ಕಿಮೀ ಹೊತ್ತು ತಂದ ಯುವಕರು

ಗಾಯಾಳು ಸದಾಶಿವ ಅವರನ್ನು ಕೂಡಲೇ ಚಿಕ್ಕೋಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading
Advertisement
unified pension scheme
ಪ್ರಮುಖ ಸುದ್ದಿ2 hours ago

Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

Sunita Williams
ದೇಶ2 hours ago

Sunita Williams: ಮುಂದಿನ ವರ್ಷ ಫೆಬ್ರುವರಿಯಲ್ಲಿ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್;‌ ನಾಸಾ ಘೋಷಣೆ

karnataka weather forecast
ಮಳೆ2 hours ago

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರ ಬಹು ದಿನಗಳ ಕನಸು ನನಸು; ಕುಟುಂಬದ ಆಪ್ತರಿಂದ ಶುಭ ಸುದ್ದಿ

Rahul Gandhi
ದೇಶ8 hours ago

Rahul Gandhi: ಮಿಸ್‌ ಇಂಡಿಯಾ ಪಟ್ಟಿಯಲ್ಲಿ ದಲಿತ, ಬುಡಕಟ್ಟು, ಒಬಿಸಿ ಮಹಿಳೆಯರು ಇಲ್ಲವೇ ಇಲ್ಲ-ರಾಹುಲ್‌ ಗಾಂಧಿ ಹೊಸ ಆರೋಪ

Sudha Murthy
ಬೆಂಗಳೂರು9 hours ago

Sudha Murthy: ವೈದ್ಯಕೀಯ ಸೇವೆಯಲ್ಲಿ ಬದ್ಧತೆ, ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ

Unified Pension scheme
ಪ್ರಮುಖ ಸುದ್ದಿ9 hours ago

Unified Pension scheme: ಏಕೀಕೃತ ಪಿಂಚಣಿ ಯೋಜನೆ ಸರ್ಕಾರಿ ನೌಕರರಿಗೆ ಕೇಂದ್ರ ನೀಡುತ್ತಿರುವ ಆರ್ಥಿಕ ಭದ್ರತೆ- ಪ್ರಧಾನಿ ನರೇಂದ್ರ ಮೋದಿ

Amit Shah
ದೇಶ10 hours ago

Amit Shah: 2026ರ ವೇಳೆಗೆ ನಕ್ಸಲಿಸಂ ಸಂಪೂರ್ಣ ನಿರ್ಣಾಮ; ಬಿಗ್‌ ಟಾರ್ಗೆಟ್‌ ಫಿಕ್ಸ್‌ ಮಾಡಿದ ಕೇಂದ್ರ

Vijayanagara News
ವಿಜಯನಗರ10 hours ago

Vijayanagara News: ಮೀನುಗಾರರಿಗೆ ರಾಜ್ಯ‌ ಸರ್ಕಾರದಿಂದ ನಾನಾ ಸೌಕರ್ಯ; ಸಚಿವ ಮಂಕಾಳ ವೈದ್ಯ

NPS v/s UPS
ದೇಶ11 hours ago

NPS v/s UPS: ಏಕೀಕೃತ ಪಿಂಚಣಿ ಯೋಜನೆ ಅಂದ್ರೆ ಏನು? ಇದು NPSಗಿಂತ ಹೇಗೆ ಭಿನ್ನ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ17 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌