Congress Karnataka : ಕಾಂಗ್ರೆಸ್‌ಗೆ ಮುಳ್ಳಾದ ನಿಗಮ-ಮಂಡಳಿ; ಅಪಸ್ವರದಿಂದ ಕೈ ಗಲಿಬಿಲಿ - Vistara News

ಬೆಂಗಳೂರು

Congress Karnataka : ಕಾಂಗ್ರೆಸ್‌ಗೆ ಮುಳ್ಳಾದ ನಿಗಮ-ಮಂಡಳಿ; ಅಪಸ್ವರದಿಂದ ಕೈ ಗಲಿಬಿಲಿ

Congress Karnataka : ಹಲವು ಶಾಸಕರು ತಮಗೆ ನೀಡಲಾಗ ನಿಗಮ ಮತ್ತು ಮಂಡಳಿಗಳ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರನ್ನು ಸಮಾಧಾನ ಮಾಡಲು ಸಿಎಂ ಮತ್ತು ಡಿಸಿಎಂ ಭಾರಿ ಸಾಹಸ ಮಾಡಬೇಕಾಗಿದೆ.

VISTARANEWS.COM


on

Karnataka Congress DK Shivakumar and CM siddaramaih
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರ್ಕಾರ (Congress Karnataka) 36 ಶಾಸಕರನ್ನು ನಿಗಮ ಮತ್ತು ಮಂಡಳಿಗಳ (Board and Corporation) ಅಧ್ಯಕ್ಷರಾಗಿ ನೇಮಕ ಮಾಡಿದೆ. ಆದರೆ, ಇದು ಹಲವು ವಿವಾದಗಳಿಗೆ, ಅಪಸ್ವರಗಳಿಗೆ ಕಾರಣವಾಗಿದೆ. ನೇಮಕಗೊಂಡ ಕೆಲವರು ತಮಗೆ ಮಹತ್ವವಿಲ್ಲದ ನಿಗಮಗಳನ್ನು ನೀಡಿದ್ದಾರೆ ಎಂದು ಅಪಸ್ವರ ಎತ್ತಿದರೆ, ಇನ್ನು ಕೆಲವರು ನಿಗಮ-ಮಂಡಳಿ ಬೇಕಾಗಿಲ್ಲ. ಮಂತ್ರಿ ಖಾತೆಯೇ ಬೇಕು ಎಂದು ಹಠ ಹಿಡಿದಿದ್ದಾರೆ. ಇವರನ್ನು ಸಮಾಧಾನ ಮಾಡಲು ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಹರಸಾಹಸ ಪಡಬೇಕಾಗಿದೆ.

ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ, ಸಿಂಧನೂರು ಕ್ಷೇತ್ರದ ಶಾಸಕ ಹಂಪನ ಗೌಡ ಬಾದರ್ಲಿ, ಬಾಗೇಪಲ್ಲಿ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್‌, ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೀಗೆ ಹಲವು ನಾಯಕರು ತಮಗೆ ಸಿಕ್ಕಿದ ನಿಗಮ ಮಂಡಳಿ ವಿಚಾರದಲ್ಲಿ ಅಕ್ಷೇಪದ ಧ್ವನಿಯನ್ನು ಬಹಿರಂಗವಾಗಿ ಎತ್ತಿದ್ದಾರೆ.

Congress Karnataka : ರಾಜೀನಾಮೆ ಮುಂದಾದ ಎಸ್‌.ಎನ್‌. ಸುಬ್ಬಾರೆಡ್ಡಿ ಬೆಂಬಲಿಗರು

ಬಾಗೇಪಲ್ಲಿ ಶಾಸಕರಾಗಿರುವ ಎಸ್‌.ಎನ್‌. ಸುಬ್ಬಾರೆಡ್ಡಿ ಅವರಿಗೆ ಬೀಜ ನಿಗಮದ ಅಧ್ಯಕ್ಷತೆ ನೀಡಲಾಗಿದೆ. ಇದು ರೆಡ್ಡಿ ಅವರಿಗೆ ಮತ್ತು ಅಭಿಮಾನಿಗಳಿಗೆ ಅಸಮಾಧಾನ ಉಂಟು ಮಾಡಿದೆ. ರೆಡ್ಡಿ ಅವರು ಕೂಡಾ ಈ ನಿಗಮವನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ. ತಮ್ಮ ನಾಯಕರನ್ನು ಮೂಲೆ ಗುಂಪು ಮಾಡಿರುವ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗುಡಿಬಂಡೆ ತಾಲ್ಲೂಕಿನ ಸುಬ್ಬಾರೆಡ್ಡಿ ಬೆಂಬಲಿಗರು ರಾಜೀನಾಮೆಗೆ ಮುಂದಾಗಿದ್ದಾರೆ.

ಗುಡಿಬಂಡೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿರುವ ತಾಲ್ಲೂಕಿನ ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರ ಸಭೆಯಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಪಟ್ಟಣ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗು ಕಾಂಗ್ರೆಸ್ ನ ಚುನಾಯಿತ ಪ್ರತಿನಿಧಿಗಳು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಈ ನಡುವೆ, ʻʻಸುಬ್ಬಾರೆಡ್ಡಿಗೆ ನಾನು ಮುಂಚೇನೆ ಹೆಳ್ಳಿದ್ದೇ ನೀವು ಚೇರ್ಮೆನ್ ಆಗ್ತೀರಾ ಅಂತ. ನಾನು ಹೇಳಿದಾಗ ಶಾಸಕ ಸುಬ್ಬಾರಡ್ಡಿ ಖುಷಿಯಾಗಿಯೇ ಇದ್ದರು. ಬೀಜ ನಿಗಮ ನಿಯಮಿತ ನೀಡಿರುವುದು ಸುಬ್ಬಾರಡ್ಡಿಗೆ ಸಮಾಧಾನ ಇಲ್ಲ. ನಾನು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡ್ತೇನೆʼʼ ಎಂದು ಕೈವಾರ ಕ್ರಾಸ್‌ನಲ್ಲಿ ಸಚಿವ ಡಾ. ಎಂ.ಸಿ. ಸುಧಾಕರ್‌ ಹೇಳಿದ್ದಾರೆ.

Oongress Karnataka board and Corporation

ʻʻಸುಬ್ಬಾರೆಡ್ಡಿ ಸತತವಾಗಿ ಮೂರು ಬಾರಿ ಗೆದ್ದಿರುವ ಹಿರಿಯ ಶಾಸಕರಾಗಿದ್ದಾರೆ. ಅವರಿಗೆ ಉತ್ತಮ ನಿಗಮ ಮಂಡಳಿ ನೀಡುವಂತೆ ನಾನು ಸಿಎಂ ಒತ್ತಾಯ ಮಾಡ್ತೇನೆ. ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ಸುಬ್ಬಾರೆಡ್ಡಿಗೆ ಸಮಾಧಾನ ಆಗುವಂತ ನಿಗಮ ಮಂಡಳಿ ಕೊಡಿಸುವಂತಹ ಕೆಲಸ ಮಾಡ್ತೇನೆ.ʼʼ ಎಂದು ಅವರು ಹೇಳಿದರು.

Congress Karnataka: ಸರ್ಕಾರದ ನಡೆಗೆ ವಿಜಯಾನಂದ ಕಾಶಪ್ಪನವರ್‌ ಸಿಟ್ಟು

ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಸರ್ಕಾರ ಒಂದು ಎಡವಟ್ಟು ಮಾಡಿಕೊಂಡಿದೆ. ನಿಯಮದಲ್ಲಿ ಅವಕಾಶ ಇಲ್ಲದೇ ಇದ್ದರೂ ವಿಜಯಾನಂದ ಕಾಶಪ್ಪನವರ್‌ಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರು. ಬೇರೆಯವರನ್ನು ನೇಮಿಸಲು ಅವಕಾಶವಿಲ್ಲ. ಅಂದರೆ ಕ್ರೀಡಾ ಸಚಿವ ನಾಗೇಂದ್ರ ಅವರೇ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಹಾಗಿದ್ದರೂ ಸರ್ಕಾರ ವಿಜಯಾನಂದ ಕಾಶಪ್ಪನವರ್ ಗೆ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಿದೆ. ನಿಜವೆಂದರೆ, ಈಗ ನೇಮಕ ಮಾಡಬೇಕಿದ್ದರೆ ಅಗುವು ಉಪಾಧ್ಯಕ್ಷತೆಗೆ ಮಾತ್ರ. ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಇಲ್ಲ ಎಂದು ತಿಳಿಯುತ್ತಲೇ ಕಾಶಪ್ಪನವರ್‌ ಅಸಮಾಧಾನಗೊಂಡಿದ್ದಾರೆ. ಈ ತಾಂತ್ರಿಕ ವಿಚಾರವನ್ನು ಪರಿಪಡಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: Congress Karnataka: ಕೊನೆಗೂ ಹೊರಬಿದ್ದ ನಿಗಮ-ಮಂಡಳಿ ಪಟ್ಟಿ; 36 ಶಾಸಕರಿಗೆ ಮಣೆ, ಡಿಕೆಶಿ ಮೇಲುಗೈ

Congress Karnataka : ಕೆಎಸ್ಸಾರ್ಟಿಸಿ ಅಧ್ಯಕ್ಷರಾದರೂ ಗುಬ್ಬಿ ಶ್ರೀನಿವಾಸ್‌ಗೆ ಸಮಾಧಾನವಿಲ್ಲ

ತುಮಕೂರು ಜಿಲ್ಲೆಯ ಗುಬ್ಬಿಯ ಶಾಸಕರಾಗಿರುವ ಎಸ್‌.ಆರ್‌. ಶ್ರೀನಿವಾಸ್‌ ಅವರನ್ನು ಕೆಎಸ್ಆರ್ ಟಿಸಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಆದರೆ, ಅವರು ಇದಕ್ಕೆ ಸಪ್ಪೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ʻʻನನಗೆ ಏನೂ ಅನ್ನಿಸ್ತಿಲ್ಲ, ಖುಷಿನೂ ಅನ್ನಿಸ್ತಿಲ್ಲ, ಬೇಜಾರೂ ಅನ್ನಿಸ್ತಿಲ್ಲʼʼ ಎಂದು ಹೇಳುವ ಮೂಲಕ ಎಸ್‌.ಆರ್‌. ಶ್ರೀನಿವಾಸ್‌ ಅವರು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ʻʻನಾನೇನು ಕೇಳಿರಲಿಲ್ಲ, ಪಕ್ಷದ ವರಿಷ್ಠರು ತೀರ್ಮಾನ ಮಾಡಿ ಕೊಟ್ಟಿದ್ದಾರೆ. ನಾನು ಅವರ ನಂಬಿಕೆಗೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ. ನಾನು ಯಾವುದೇ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಯಾವುದೋ ಆಸೆಗೆ ಬಿದ್ದು ರಾಜಕಾರಣ ಮಾಡಿದವನು ನಾನಲ್ಲ. ನಾನು ರಾಜಕಾರಣಕ್ಕೆ ಬಂದಿದ್ದೇ ಅನಿರೀಕ್ಷಿತವಾಗಿ.. ಜನರು ನನಗೆ ಅವಕಾಶ ಕೊಟ್ಟಿದ್ದಾರೆ, ಅವರ ಸೇವೆ ಮಾಡಬೇಕು ಅನ್ನೋದು ನನ್ನ ಆಸೆ. ಯಾವುದೇ ಸ್ಥಾನ ಸಿಕ್ಕರೂ ತೃಪ್ತಿ ಇರಬೇಕು ಎಂದು ಅವರು ಹೇಳಿದ್ದಾರೆ.

ʻʻಮನುಷ್ಯನ ಆಸೆಗಳು ಅಪರಿಮಿತ, ಮನುಷ್ಯನ ಆಸೆಗಳೆಲ್ಲವನ್ನು ಈಡೇರಿಸೋಕೆ ಆಗಲ್ಲ. ಸಮಯ ಸಂದರ್ಭದಲ್ಲಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ಕೆಲಸ ಮಾಡಬೇಕುʼʼ ಎಂದು ಎಸ್‌.ಆರ್‌ ಶ್ರೀನಿವಾಸ್‌ ಹೇಳಿದರು.

Congress Karnataka : ನಿಗಮ ಅಧ್ಯಕ್ಷ ಸ್ಥಾನ ಬೇಡ ಎನ್ನುತ್ತಿರುವ ಶಾಸಕ ಟಿ.ರಘುಮೂರ್ತಿ

ರಾಜ್ಯ ಕೈಗಾರಿಕಾ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿರುವ ಚಳ್ಳಕೆರೆ ಹಿರಿಯ ಶಾಸಕ ಟಿ.ರಘುಮೂರ್ತಿ ಅವರು, ಈಗ ನನಗೆ ಅಧ್ಯಕ್ಷ ಸ್ಥಾನ ಅಲಂಕರಿಸುವ ಇಚ್ಛೆ ಇಲ್ಲ. ನಾನು ನಿಗಮ ಮಂಡಳಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ ಎಂದಿದ್ದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅವರಿಗೆ ಪತ್ರ ಬರೆದಿದ್ದೆ. ಆದರೂ ನಿಗಮ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಿದ್ದಾರೆ. ನನಗೆ ಅಧ್ಯಕ್ಷ ಸ್ಥಾನ ಅಲಂಕರಿಸುವ ಮನಸ್ಸಿಲ್ಲ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಮಾತುಕತೆ ನಡೆಸುತ್ತೇನೆ. ಬಳಿಕ ಮುಂದಿನ ನಿರ್ಧಾರ ತಿಳಿಸುತ್ತೇನೆʼʼ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.

ನಿಜವೆಂದರೆ ಟಿ. ರಘುಮೂರ್ತಿ ಅವರು ತಮ್ಮನ್ನು ಸಚಿವ ಸ್ಥಾನಕ್ಕೆ ಪರಿಗಣಿಸಿ, ಅದನ್ನು ಬಿಟ್ಟು ಬೇರೆ ನಿಗಮ, ಮಂಡಳಿ ಅಧ್ಯಕ್ಷತೆ ಬೇಡ ಎಂದು ಬಹಿರಂಗವಾಗಿ ಹೇಳಿದ್ದರು.

ಎರಡೂವರೆ ವರ್ಷದ ಬಳಿಕ ಒಂದು ವೇಳೆ ಸಿಎಂ ಬದಲಾವಣೆ ಆದರೆ ಸಚಿವ ಸ್ಥಾನ ಸಿಗಬಹುದು ಎಂಬ ಆಸೆಯನ್ನು ರಘುಮೂರ್ತಿ ಹೊಂದಿದ್ದಾರೆ ಎನ್ನಲಾಗಿದೆ. ಅದರಲ್ಲೂ ಸತೀಶ್ ಜಾರಕಿಹೊಳಿ ಸಿಎಂ ಅಥವಾ ಡಿಸಿಎಂ ಅದರೆ, ತಮಗೆ ಸಚಿವ ಸ್ಥಾನ ಗ್ಯಾರಂಟಿ ಎಂಬ ವಿಶ್ವಾಸದಲ್ಲಿದ್ದಾರೆ. ಸತೀಶ್ ಜಾರಕಿಹೊಳಿ ಜೊತೆ ಮಾತನಾಡಿ ನಿರ್ಧಾರ ತಿಳಿಸುವುದಾಗಿ ಹೇಳಿರುವ ರಘುಮೂರ್ತಿ ಅವರಿಗೆ ಅಧ್ಯಕ್ಷ ಸ್ಥಾನ ಸ್ವೀಕರಿಸಬೇಡಿ ಎಂದು ಜಾರಕಿಹೊಳಿ ‌ ಹೇಳಿದ್ದಾರೆ ಎನ್ನಲಾಗಿದೆ.

Congress Karnataka : ರಾಯಚೂರು ಜಿಲ್ಲೆಯ ಮೂವರು ಶಾಸಕರಿಗೆ ಅಸಮಾಧಾನ

ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ, ಸಿಂಧನೂರು ಕ್ಷೇತ್ರದ ಶಾಸಕ ಹಂಪನ ಗೌಡ ಬಾದರ್ಲಿ ಈ ಮೂವರೂ ತಮಗೆ ಸಿಕ್ಕಿರುವ ನಿಗಮ, ಮಂಡಳಿ ಬಗ್ಗೆ ಸಮಾಧಾನವಿಲ್ಲ. ಇವರು ಮೂವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರಂತೂ ಶುಭಕೋರಲು ಬಂದ ಮುಖಂಡರನ್ನೆ ವಾಪಸ್ ಕಳಿಸಿದ್ದಾರೆ.

ʻʻರಾಯಚೂರು ಜಿಲ್ಲೆಗೆ ಬಹಳಷ್ಟು ಅವಕಾಶ ಕೊಡಬೇಕಿದೆ. ಸಚಿವ ಸಂಪುಟದಲ್ಲಿ ಸ್ಥಾನಮಾನಗಳಲ್ಲಿ ಸಿಂಹಪಾಲು ಕೊಡಬೇಕಿದೆ. ನಮ್ಮ ಜಿಲ್ಲೆಯಲ್ಲಿ ನಾಲ್ಕು ಜನ ಶಾಸಕರು ಇದ್ದೀವಿ. ಹಂಪನಗೌಡ ಬಾದರ್ಲಿ ಯವರು 5 ಬಾರಿ ಗೆದ್ದಿದ್ದಾರೆ. ಹಂಪಯ್ಯ ಸಾಹುಕಾರ್ ಮೂರು ಬಾರಿ ಗೆದ್ದಿದ್ದಾರೆ. ನಾನು ಮತ್ತು ಬಸನಗೌಡ ತುರುವಿಹಾಳ 2 ಬಾರಿ ಗೆದ್ದಿದ್ದೇವೆ.. ಈ ಹಿಂದೆ ವಾಲ್ಮೀಕಿ ನಿಗಮ ಮೋರ್ಚ್ ದಲ್ಲಿ ಕೆಲಸ ಮಾಡಿದ್ದೀನಿ. ಯಾವುದೇ ಸ್ಥಾನಮಾನ ಕೊಟ್ಟಾಗ ಜನರಿಗೆ ಹೆಚ್ಚಿನ ನಿರೀಕ್ಷೆ ಇರ್ತದೆ. ಅದಕ್ಕೆ ತಕ್ಕಂತೆ ಅನುದಾನ ಲಭ್ಯತೆ ಇದ್ದಾಗ ಮಾತ್ರ ಅಲ್ಲಿ ಕೆಲಸ ಸಾಧ್ಯ.. ಸಿಎಂ & ಡಿಸಿಎಂ ಹತ್ತಿರ ಚರ್ಚೆ ಮಾಡಿ, ತೀರ್ಮಾನ ಮಾಡ್ತೀವಿ. ನಾಲ್ಕು ಜನರಲ್ಲಿ ಯಾರಿಗಾದರೂ ಒಬ್ಬರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ಸಿಕ್ಕರೆ ನಮಗೆ ಸಂತೋಷʼʼ ಎಂದು ಬಸನಗೌಡ ದದ್ದಲ್‌ ಹೇಳಿದ್ದಾರೆ.

ಈ ನಡುವೆ, ಕೆಲವೊಂದು ಶಾಸಕರು ತಮಗೆ ನಿಗಮ, ಮಂಡಳಿಗೆ ಅಧ್ಯಕ್ಷತೆ ನೀಡಿರುವುದಕ್ಕೆ ಧನ್ಯವಾದ ಹೇಳಲು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಾರೆ. ಶಾಸಕರಾದ ಅಬ್ಬಯ್ಯ ಪ್ರಸಾದ್, ನಾರಾಯಣಸ್ವಾಮಿ ಅವರು ಕೊಟ್ಟ ನಿಗಮದಲ್ಲಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

Prajwal Revanna Case: ಅಶ್ಲೀಲಗಳನ್ನು ಒಳಗೊಂಡ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಸಂಖ್ಯಾತ ಪೆನ್‌ಡ್ರೈವ್‌ಗಳ ಮುಖೇನ ರಾಜ್ಯದಾದ್ಯಂತ ಹಂಚಿರುವ ಷಡ್ಯಂತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಹೆಸರುಗಳನ್ನು ಹೊಳೆನರಸಿಪುರದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರು ಸುದ್ದಿಗೋಷ್ಠಿಯಲ್ಲಿ ಸಾಕ್ಷಿ ಸಮೇತ ಬಹಿರಂಗ ಮಾಡಿದ್ದರು. ಇದನ್ನು ಎಸ್‌ಐಟಿ ಗಣನೆಗೆ ತೆಗೆದುಕೊಂಡಿಲ್ಲವೇ ಎಂದು ರಶ್ಮಿ ರಾಮೇಗೌಡ ಪ್ರಶ್ನಿಸಿದ್ದಾರೆ.

VISTARANEWS.COM


on

Prajwal Revanna Case JDS delegation moves Womens Commission to arrest pen drive allottees
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗಳುಳ್ಳ ಪೆನ್‌ಡ್ರೈವ್‌ಗಳನ್ನು ಅಪಾರ ಪ್ರಮಾಣದಲ್ಲಿ ಹಂಚುವ ಮೂಲಕ ಮಹಿಳೆಯರ ಮಾನಹಾನಿಗೆ ಕಾರಣವಾಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು. ಈ ಕುರಿತು ಎಲ್ಲ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಒತ್ತಾಯಿಸಿದರು.

ಈ ಬಗ್ಗೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಶ್ಮಿ ರಾಮೇಗೌಡ, ಅಶ್ಲೀಲ ವಿಡಿಯೊಗಳನ್ನು ಸೋರಿಕೆ ಮಾಡುವ ಮೂಲಕ ಸ್ತ್ರೀ ಕುಲಕ್ಕೆ ಅಪಚಾರ ಎಸಗಿರುವ ಕಿರಾತಕರನ್ನು ತಕ್ಷಣವೇ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.

ಸಚಿವರೇ ಈ ವಿಡಿಯೊಗಳ ವಿತರಣೆಯ ರೂವಾರಿ

ಸಚಿವ ಸಂಪುಟದ ಪ್ರಭಾವಿ ಸಚಿವರೇ ಈ ವಿಡಿಯೊಗಳ ವಿತರಣೆಯ ರೂವಾರಿ. ಹೀಗಾಗಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ದೊರಕಿಸುವುದು ಅಸಾಧ್ಯ. ಹರಿಬಿಟ್ಟಿರುವ ವಿಡಿಯೊಗಳಿಂದ ಸಂತ್ರಸ್ತೆಯರು ಅಪಾರ ನೋವು, ಅವಮಾನ ಮತ್ತು ಯಾತನೆಯನ್ನು ಅನುಭವಿಸುತ್ತಿದ್ದಾರೆ. ಇವರೊಂದಿಗೆ ಸಂತ್ರಸ್ತೆ ಕುಟುಂಬದವರ ಮೇಲೆ ಉಂಟಾಗಿರುವ ಹಾನಿ ಮತ್ತು ಅಪಮಾನ ವಿವರಿಸಲು ಅಸಾಧ್ಯ. ವಿಡಿಯೊದಲ್ಲಿರುವ ಮಹಿಳೆಯರ ಗುರುತು ಬಹಿರಂಗ ಆಗುವಂತೆ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ರಶ್ಮಿ ರಾಮೇಗೌಡ ಆಕ್ರೋಶ ಹೊರಹಾಕಿದರು.

ಎಸ್‌ಐಟಿಯಿಂದ ನೊಂದವರಿಗೆ ನ್ಯಾಯ ಸಿಗಲ್ಲ

ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾದಳ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಸಂತ್ರಸ್ಥ ಮಹಿಳೆಯರಿಗೆ ಹಾಗೂ ಅವರ ಕುಟುಂಬದವರಿಗೆ ನ್ಯಾಯ ಒದಗಿಸುವಲ್ಲಿ ಎಸ್‌ಐಟಿ ವಿಫಲವಾಗಿದೆ. ಸಿಬಿಐ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ರಶ್ಮಿ ರಾಮೇಗೌಡ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಿಎಂ, ಡಿಸಿಎಂ ಹೆಸರು ಬಂದಿದೆ

ಅಶ್ಲೀಲಗಳನ್ನು ಒಳಗೊಂಡ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಸಂಖ್ಯಾತ ಪೆನ್‌ಡ್ರೈವ್‌ಗಳ ಮುಖೇನ ರಾಜ್ಯದಾದ್ಯಂತ ಹಂಚಿರುವ ಷಡ್ಯಂತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಹೆಸರುಗಳನ್ನು ಹೊಳೆನರಸಿಪುರದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರು ಸುದ್ದಿಗೋಷ್ಠಿಯಲ್ಲಿ ಸಾಕ್ಷಿ ಸಮೇತ ಬಹಿರಂಗ ಮಾಡಿದ್ದರು. ಇದನ್ನು ಎಸ್‌ಐಟಿ ಗಣನೆಗೆ ತೆಗೆದುಕೊಂಡಿಲ್ಲವೇ ಎಂದು ರಶ್ಮಿ ರಾಮೇಗೌಡ ಪ್ರಶ್ನಿಸಿದರು.

ವಿಡಿಐೊ ಹಂಚಿಕೆ ಶಿಕ್ಷಾರ್ಹ ಅಪರಾಧ

ಮಾಹಿತಿ ತಂತ್ರಜ್ಞಾನ ಕಾಯಿದೆ-2020ರ ಸೆಕ್ಷನ್ 66-ಇ, 67 ಮತ್ತು 67-ಎ ಮತ್ತು ಕಾಯ್ದೆ 228 (ಎ) ಐಪಿಸಿ ಪ್ರಕಾರ ಯಾವುದೇ ವ್ಯಕ್ತಿ ಎಲೆಕ್ಟ್ರಾನಿಕ್ ಸಂದೇಶಗಳನ್ನಾಗಲಿ ಅಥವಾ ಚಿತ್ರಿಕರಣವನ್ನಾಗಲಿ ತಯಾರಿಸುವುದು, ಸಂಗ್ರಹಿಸಿ ಇಡುವುದು ಹಾಗೂ ಬಿತ್ತರಿಸುವುದು, ಚಿತ್ರಿಸುವುದು ಸಂತ್ರಸ್ತೆಯರ ಹೆಸರನ್ನು ಕೋರ್ಟ್ ಅನುಮತಿಯಿಲ್ಲದೆ, ಸಂತ್ರಸ್ತೆಯರ ಅನುಮತಿಯಿಲ್ಲದೆ ಬಹಿರಂಗ ಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ವಿಡಿಯೊಗಳನ್ನು ಲೀಕ್ ಮಾಡಿರುವ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ರಶ್ಮಿ ರಾಮೇಗೌಡ ಆಗ್ರಹಿಸಿದರು.

ಇದನ್ನೂ ಓದಿ: Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

ಪೆನ್‌ಡ್ರೈವ್‌ಗಳನ್ನು ಹಾಸನದಲ್ಲಿ ವ್ಯಾಪಕವಾಗಿ ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರೂ ಕ್ರಮ ಜರುಗಿಸಿರುವುದಿಲ್ಲ ಎಂದು ರಶ್ಮಿ ರಾಮೇಗೌಡ ಆರೋಪಿಸಿದರು.

ಇದೇ ವೇಳೆ ಅವರು ಮಹಿಳಾ ಆಯೋಗಕ್ಕೆ ಸಲ್ಲಿಸಿದ ದೂರಿನ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಬೆಂಗಳೂರು ಮಹಾನಗರ ಜನತಾದಳ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಎಸ್ ರಾವ್, ವಕ್ತಾರರಾದ ಪ್ರಶಾಂತಿ, ರಾಜಾಜಿನಗರ ಕ್ಷೇತ್ರದ ಮಹಿಳಾ ಅಧ್ಯಕ್ಷೆ ಕವಿತಾ, ರಾಜ್ಯ ಕಾರ್ಯದರ್ಶಿ ಮಂಗಳಮ್ಮ, ನಗರದ ಮಹಿಳಾ ವಿಭಾಗದ ಪದಾಧಿಕಾರಿಗಳು, ಮುಖಂಡರು ನಿಯೋಗದಲ್ಲಿ ಇದ್ದರು.

Continue Reading

ಪ್ರಮುಖ ಸುದ್ದಿ

Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

Rain News: ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Rain News
Koo

ಬೆಂಗಳೂರು: ರಾಜಧಾನಿ ಬೆಂಗಳೂರು, ಕೊಡಗು, ಚಿಕ್ಕಮಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಲ್ಲದೆ ಕಂಗೆಟ್ಟಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಬೆಂಗಳೂರಿನ ಹಲವೆಡೆ ದಿಢೀರನೆ ಸುರಿದ ಮಳೆಯಿಂದ (Rain News) ರಸ್ತೆಗಳು ಜಲಾವೃತವಾಗಿ ಹೊಳೆಯಂತಾಗಿದ್ದರಿಂದ ವಾಹನ ಸವಾರರು ತೊಂದರೆ ಅನುಭವಿಸಿದರು.

ಬೆಂಗಳೂರಲ್ಲಿ ಮಳೆ ಆರ್ಭಟ; ಸಿಟಿಯಲ್ಲಿ ಕೂಲ್ ವೆದರ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಭಾರಿ ಸುರಿಯುತ್ತಿದೆ. ಇನ್ನು ನಗರದಲ್ಲಿ ಬುಧವಾರ ಸಂಜೆಯಿಂದ ಹಲವೆಡೆ ಮಳೆ ಅರ್ಭಟ ಶುರು ಆಗಿದ್ದು, ಶಿವಾಜಿನಗರ, ವಸಂತನಗರ, ಶಾಂತಿನಗರ, ಜಯ ನಗರ, ವಿಜಯ ನಗರ, ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಯಶವಂತಪುರ, ರಾಜಾಜಿ ನಗರ, ಶೇಷಾದ್ರಿಪುರಂ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಭರ್ಜರಿ ಮಳೆಯ ಜೊತೆಗೆ ಗುಡುಗು-ಮಿಂಚು ಸಹ ಕಂಡು ಬಂದಿದೆ. ಬೇಸಿಗೆಯಲ್ಲಿ ಭಾರಿ ಮಳೆಯಿಂದ ರಾಜಧಾನಿಯ ವಾತಾವರಣ ತಂಪಾಗಿದ್ದರಿಂದ ಜನರು ಸಂತಸಪಡುತ್ತಿದ್ದಾರೆ.

ಮರ ಬಿದ್ದು 2 ಕಾರು ಜಖಂ

ಕೂಡ್ಲು ಗೇಟ್, ರೂಪೇನ ಅಗ್ರಹಾರದ ಬಳಿ ಮಳೆಯಿಂದ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದದ್ದು ಕಂಡುಬಂತು. ಇನ್ನು ಮಡಿವಾಳ ಸುತ್ತ ಮುತ್ತಲೂ ಭಾರಿ ಮಳೆಗಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ಉಲ್ಲಾಳ ಹತ್ತಿರದ ಜ್ಞಾನಜ್ಯೋತಿ ನಗರದಲ್ಲಿ ಮರ ಬಿದ್ದಿದ್ದರಿಂದ ಮನೆ ಮುಂದೆ ನಿಲ್ಲಿಸಿದ್ದ 2 ಕಾರು ಜಖಂಗೊಂಡಿದೆ.

ಎಲೆಕ್ಟ್ರಾನಿಕ್ ಸಿಟಿ ಸಮೀಪ ಹೆದ್ದಾರಿ ಜಲಾವೃತ

ಎಲೆಕ್ಟ್ರಾನಿಕ್ ಸಿಟಿ ಸಮೀಪದ ವೀರಸಂದ್ರ ಸಿಗ್ನಲ್ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದ್ದರಿಂದ ಸವಾರರು ಪರದಾಡಿದರು. ಪ್ರತಿ ಬಾರಿ ಮಳೆ ಬಂದಾಗ ರಾಷ್ಟ್ರೀಯ ಹೆದ್ದಾರಿ ಹೊಳೆಯಂತಾಗುತ್ತದೆ. ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಮಾಡದ ಅಧಿಕಾರಿಗಳು ನಿರ್ಲಕ್ಷ್ಯವಹಿಸಿರುವುದರಿಂದ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ | Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

ಕೊಡಗು, ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ ಸುರಿದಿದ್ದು, ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮೂಡಿಗೆರೆ ಪಟ್ಟಣದಲ್ಲಿ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಿಗೆರೆ ಸುತ್ತಮುತ್ತ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು.

ಇನ್ನು ಚಿಕ್ಕಬಳ್ಳಾಪುರದಲ್ಲಿ ಬಿಸಿಲಿಗೆ ನೀರಿಲ್ಲದೆ ಒಣಗುತಿದ್ದ ಬೆಳೆಗಳಿಗೆ ವರುಣ ತಂಪೆರೆದಿದ್ದಾನೆ. ರಣಬಿಸಿಲಿಗೆ ಕೃಷಿ ಚಟುವಟಿಕೆಗಳಿಂದ ಕಂಗೆಟ್ಟಿದ್ದ ಅನ್ನದಾತ, ಕೊನೆಗೂ ಒಂದಷ್ಟು ಮಳೆ ಬಂತಲ್ಲಾ ಎಂದು ನಿಟ್ಟುಸಿರು ಬಿಟ್ಟಿದ್ದಾನೆ.

ಕೆಜಿಎಫ್‌ನಲ್ಲಿ ಮನೆಗಳಿಗೆ ನುಗ್ಗಿದ ನೀರು

ಕೋಲಾರ: ಜಿಲ್ಲೆಯ ವಿವಿಧೆಡೆ ಬೆಳ್ಳಂ ಬೆಳಗ್ಗೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದ್ದರಿಂದ ಮಾವು ಹಾಗೂ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ಇನ್ನು ಕೆಜಿಎಫ್ ನಗರದ ಹಲವು ಬಡಾವಣೆಗಳ ತಗ್ಗು ಪ್ರದೇಶ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಕೆಜಿಎಫ್‌ನ ರಾಬರ್ಟ್‌ಸನ್ ಪೇಟೆ, ಮಾರಿಕುಪ್ಪಮ್, ಫಿಶ್ ಲೈನ್ ಬಡಾವಣೆಗಳಲ್ಲಿ ಮನೆಗಳಿಗೆ ಮಳೆನೀರು ನುಗ್ಗಿದ್ದ ಮನೆಯಲ್ಲಿನ ವಸ್ತುಗಳು ನೀರುಪಾಲಾಗಿವೆ. ಇದರಿಂದ ಜನರು ಸಂಕಷ್ಟ ಅನುಭವಿಸುವಂತಾಗಿದೆ.

ಮರ ಬಿದ್ದು ವ್ಯಕ್ತಿ ಸಾವು

ರಾತ್ರಿ ಸುರಿದ ಭಾರಿ ಮಳೆಗೆ ಮರ ಉರುಳಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಡೆಂಕಣಿಕೋಟೆ ಸಮೀಪದ ಅಂತೇವನಪಲ್ಲಿಯಲ್ಲಿ ನಡೆದಿದೆ. ಬೆಳಗ್ಗೆ 8 ಗಂಟೆ ವೇಳೆಗೆ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರ ಮೇಲೆ ಮರದ ಬೇರು ಬಿದ್ದು ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಚಿಕಿತ್ಸೆಗಾಗಿ ಡೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Heavy Rain: ಕಳುವರಹಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಶಾಲಾ ಚಾವಣಿ ಕುಸಿತ

ಇನ್ನು ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ, ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮೇ 10ರಂದು ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಸಹ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ.

Continue Reading

ಕ್ರೈಂ

BJP Karnataka: ಜೆ.ಪಿ. ನಡ್ಡಾ, ಅಮಿತ್‌ ಮಾಳವೀಯಾಗೆ ರಾಜ್ಯ ಪೊಲೀಸರ ನೋಟಿಸ್‌; 7 ದಿನದೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ

BJP Karnataka: ಮೊಟ್ಟೆ ವಿಡಿಯೊ ವಿಚಾರವಾಗಿ ಮೇ 5 ರಂದು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲು ಮಾಡಿತ್ತು. ಇದೀಗ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಜೆ.ಪಿ. ನಡ್ಡಾ, ಬಿ.ವೈ. ವಿಜಯೇಂದ್ರ ಹಾಗೂ ಅಮಿತ್‌ ಮಾಳವೀಯಾ ಅವರಿಗೆ ನೋಟಿಸ್‌ ನೀಡಿರುವ ಹೈ ಗ್ರೌಂಡ್ಸ್ ಪೊಲೀಸರು, ನೋಟಿಸ್ ತಲುಪಿದ 7 ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

BJP Karnataka State police issues notices to JP Nadda and Amit Malviya and BY Vijayendra
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮುದಾಯಾಧಾರಿತವಾಗಿ ಟೀಕೆ ಮಾಡುವ ಸಂಬಂಧ ಬಿಜೆಪಿಯ (BJP Karnataka) ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಅಪ್ಲೋಡ್‌ ಮಾಡಲಾಗಿದ್ದ ಮೊಟ್ಟೆ ವಿಡಿಯೊ ಈಗ ಮತ್ತೆ ಸುದ್ದಿಯಲ್ಲಿದೆ. ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda), ಐಟಿ ಘಟಕದ ಮುಖ್ಯಸ್ಥ ಅಮಿತ್‌ ಮಾಳವೀಯಾ (Amit Malaveya) ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರಿಗೆ ಹೈ ಗ್ರೌಂಡ್ಸ್ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದು, 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದ್ದಾರೆ.

ಮೊಟ್ಟೆ ವಿಡಿಯೊ ವಿಚಾರವಾಗಿ ಮೇ 5 ರಂದು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲು ಮಾಡಿತ್ತು. ಇದೀಗ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಜೆ.ಪಿ. ನಡ್ಡಾ, ಬಿ.ವೈ. ವಿಜಯೇಂದ್ರ ಹಾಗೂ ಅಮಿತ್‌ ಮಾಳವೀಯಾ ಅವರಿಗೆ ನೋಟಿಸ್‌ ನೀಡಿರುವ ಹೈ ಗ್ರೌಂಡ್ಸ್ ಪೊಲೀಸರು, ನೋಟಿಸ್ ತಲುಪಿದ 7 ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

BJP Karnataka State police issues notices to JP Nadda and Amit Malviya and BY Vijayendra

ಸಮುದಾಯಗಳಿಗೆ ಸಂಬಂಧಿಸಿದಂತೆ ಈ ಪೋಸ್ಟ್ ಮಾಡಲಾಗಿದೆ. ಅದರಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮುಸ್ಲಿಂ ಎಂಬಂತೆ ಬಿಂಬಿಸಿ ಮೊಟ್ಟೆಯಲ್ಲಿ ಬರುವ ಮರಿಗಳನ್ನು ಬೇರೆ ಬೇರೆ ಸಮುದಾಯಗಳಿಗೆ ಹೋಲಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು.

ವಿಡಿಯೊದಲ್ಲಿ ಏನಿದೆ?

ಈ ವಿಡಿಯೊದ ಆರಂಭದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಇತರ ಹಿಂದುಳಿದ ವರ್ಗಗಳನ್ನು (ಒಬಿಸಿ) ಮೀಸಲಾತಿಯ ಬುಟ್ಟಿಯಲ್ಲಿರುವ ಮೊಟ್ಟೆಗಳು ಎಂಬಂತೆ ಚಿತ್ರಿಸಲಾಗಿದೆ. ಬಳಿಕ ಈ ಮೀಸಲಾತಿ ಬುಟ್ಟಿಯಲ್ಲಿ ರಾಹುಲ್ ಗಾಂಧಿಯನ್ನು ಹೋಲುವ ಅನಿಮೇಟೆಡ್ ಪಾತ್ರ ಮುಸ್ಲಿಂ ಸಮುದಾಯದ ಮತ್ತೊಂದು ಮೊಟ್ಟೆಯನ್ನು ಇಡುವಂತೆ ತೋರಿಸಲಾಗಿದೆ. ಬಳಿಕ ಮೊಟ್ಟೆ ಬಿರಿದು ಪಕ್ಷಿಗಳು ಜೀವ ತಳೆಯುತ್ತವೆ. ಆಗ ರಾಹುಲ್‌ ಗಾಂಧಿ, ಸಿದ್ದರಾಮಯ್ಯ ಅವರನ್ನು ಹೋಲುವ ಪಾತ್ರಗಳು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗಿಂತ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಅನುದಾನವನ್ನು ನೀಡುತ್ತವೆ. ಬಳಿಕ ಬಲಿಷ್ಠವಾಗುವ ಮುಸ್ಲಿಮರನ್ನು ಹೋಲುವ ಹಕ್ಕಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳನ್ನು ಬುಟ್ಟಿಯಿಂದ ಹೊರದಬ್ಬುವುದು ವಿಡಿಯೊದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

ನೀತಿ ಸಂಹಿತೆಯ ಉಲ್ಲಂಘನೆ

“ಈ ವಿಡಿಯೊದಲ್ಲಿ ಮುಸ್ಲಿಂ ಸಮುದಾಯದವರಿಗೆ ಹೆಚ್ಚಿನ ಹಣವನ್ನು ನೀಡುವಂತೆ ಮತ್ತು ಮುಸ್ಲಿಂ ಸಮುದಾಯವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯವನ್ನು ಹೊರ ಹಾಕುವಂತೆ ಬಿಂಬಿಸಲಾಗಿದೆ” ಎಂದು ರಮೇಶ್ ಬಾಬು ಆರೋಪಿಸಿದ್ದರು. ʼʼಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಮಾತ್ರವಲ್ಲ 1989ರ ಎಸ್‌ಸಿ / ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧವೂ ಹೌದುʼʼ ಎಂದು ಹೇಳಿದ್ದಾರೆ. ಇಂತಹ ವಿಡಿಯೊಗಳು ಸಮುದಾಯಗಳ ನಡುವೆ ದ್ವೇಷ ಹುಟ್ಟು ಹಾಕುವ ಸಾಧ್ಯತೆ ಇದೆ. 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮತದಾನದ ಸಂದರ್ಭದಲ್ಲಿ ಇದು ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

Continue Reading

ಚಿಕ್ಕಮಗಳೂರು

Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

Prajwal Revanna Case: ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ ಎಂದು ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ. ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case HD Kumaraswamy King of Blackmail and DK Shivakumar is back
Koo

ಚಿಕ್ಕಮಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರಿವೆ. ಮಂಗಳವಾರವಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಎಚ್‌ಡಿಕೆ, ಸಂಪುಟದಿಂದ ಡಿಕೆಶಿ ವಜಾಕ್ಕೆ ಆಗ್ರಹಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್‌, ಕುಮಾರಸ್ವಾಮಿ ಅವರು “ಕಿಂಗ್ ಆಫ್ ಬ್ಲ್ಯಾಕ್‌ಮೇಲ್” ಎಂದು ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.

ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ರೆಸ್ಟ್‌ ಮಾಡಲು ಬಂದಿದ್ದೇನೆ

ಚುನಾವಣೆ ಮುಗಿಯಿತು. ನಾನೀಗ ಸಿದ್ದಾರ್ಥ್ ಮನೆಗೆ ರೆಸ್ಟ್ ಮಾಡಲು ಬಂದಿದ್ದೇನೆ. ಪೆನ್‌ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತು. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಹೋಗಿ ವಾದ ಮಾಡಲಿ

ಇವರು ವಕೀಲರಾ? ನ್ಯಾಯಾಧೀಶರಾ? ಹೋಗಿ ವಾದ ಮಾಡಲಿ. ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲ ಇನ್ವೆಸ್ಟಿಗೇಷನ್ ಟೀಮ್ ಎಂದು ಹೇಳುತ್ತಾರೆ. ಆದರೆ, ಈ ಪ್ರಕರಣದ ಕಥಾ ನಾಯಕ, ಡೈರೆಕ್ಟರ್, ಪ್ರೊಡ್ಯೂಸರ್ ಎಲ್ಲವೂ ಇವರೇ ಆಗಿದ್ದಾರೆ. ಎಲ್ಲವೂ ಗೊತ್ತಿದೆ. ಅವರ ಕಾರ್ಯಕರ್ತರು ಅಂತೆ, ಮರ್ಯಾದೆ ಇದ್ದರೆ ಹೋಗಿ ಧೈರ್ಯ ತುಂಬಲಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ

ನನ್ನ ಮೇಲೆ ಆರೋಪ ಮಾಡದಿದ್ದರೆ ಎಚ್.ಡಿ. ಕುಮಾರಸ್ವಾಮಿಗೆ ಮಾರ್ಕೆಟ್‌ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ಮಾಧ್ಯಮದಲ್ಲಿ ತೋರಿಸಲಲ್ಲ. ನನ್ನ ಹೆಸರು ಇಲ್ಲದಿದ್ರೆ ಪಾಪ ಅವರಿಗೆ ನಿದ್ದೆಯೇ ಬರಲ್ಲ. ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ, ಲೆಸ್‌ ಸ್ಟ್ರಾಂಗ್‌ ಲೆಸ್‌ ಎನಿಮಿ ಎಂದು ಡಿ.ಕೆ. ಶಿವಕುಮಾರ್‌ ಮಾರ್ಮಿಕವಾಗಿ ನುಡಿದರು.

Continue Reading
Advertisement
Prajwal Revanna Case JDS delegation moves Womens Commission to arrest pen drive allottees
ಕ್ರೈಂ12 mins ago

Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

Zomato
ದೇಶ13 mins ago

Zomato: ಜೊಮ್ಯಾಟೊ ಹೊಸ ತಂತ್ರಜ್ಞಾನ; ಮನೆ ಹೊರಗೆ ಕಾಲಿಡುವ ಮುನ್ನ ಇದನ್ನು ನೋಡಲೇಬೇಕು!

Hindu population
ದೇಶ15 mins ago

Hindu Population: ಹಿಂದೂಗಳ ಜನಸಂಖ್ಯೆ ಶೇ.7.8 ಕುಸಿತ; ಮುಸ್ಲಿಮರ ಸಂಖ್ಯೆ ಶೇ.43.15 ಏರಿಕೆ!

Rain News
ಪ್ರಮುಖ ಸುದ್ದಿ17 mins ago

Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

BJP Karnataka State police issues notices to JP Nadda and Amit Malviya and BY Vijayendra
ಕ್ರೈಂ40 mins ago

BJP Karnataka: ಜೆ.ಪಿ. ನಡ್ಡಾ, ಅಮಿತ್‌ ಮಾಳವೀಯಾಗೆ ರಾಜ್ಯ ಪೊಲೀಸರ ನೋಟಿಸ್‌; 7 ದಿನದೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ

Sam Pitroda
ಪ್ರಮುಖ ಸುದ್ದಿ46 mins ago

Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Neeraj Chopra
ಕ್ರೀಡೆ1 hour ago

Neeraj Chopra: 3 ವರ್ಷದ ಬಳಿಕ ದೇಶೀಯ ಕ್ರೀಡಾಕೂಟದಲ್ಲಿ ನೀರಜ್​ ಚೋಪ್ರಾ ಸ್ಪರ್ಧೆ

Cancer Risk
ಆರೋಗ್ಯ1 hour ago

Cancer Risk: ಕ್ಯಾನ್ಸರ್ ಅಪಾಯದಿಂದ ಪಾರಾಗಲು ಯಾವ ಆಹಾರ ಸೇವಿಸಬಾರದು? ಯಾವ ಆಹಾರ ಸೇವಿಸಬೇಕು?

K Vasantha Bangera
ಪ್ರಮುಖ ಸುದ್ದಿ1 hour ago

K Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

T20 World Cup 2024
ಕ್ರೀಡೆ2 hours ago

T20 World Cup 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​​; ಈ ಮೊಬೈಲ್‌ ಆ್ಯಪ್​ನಲ್ಲಿ ಟಿ20 ವಿಶ್ವಕಪ್ ಉಚಿತ ಪ್ರಸಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ23 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌