Congress Karnataka : ಕಾಂಗ್ರೆಸ್‌ಗೆ ಮುಳ್ಳಾದ ನಿಗಮ-ಮಂಡಳಿ; ಅಪಸ್ವರದಿಂದ ಕೈ ಗಲಿಬಿಲಿ - Vistara News

ಬೆಂಗಳೂರು

Congress Karnataka : ಕಾಂಗ್ರೆಸ್‌ಗೆ ಮುಳ್ಳಾದ ನಿಗಮ-ಮಂಡಳಿ; ಅಪಸ್ವರದಿಂದ ಕೈ ಗಲಿಬಿಲಿ

Congress Karnataka : ಹಲವು ಶಾಸಕರು ತಮಗೆ ನೀಡಲಾಗ ನಿಗಮ ಮತ್ತು ಮಂಡಳಿಗಳ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರನ್ನು ಸಮಾಧಾನ ಮಾಡಲು ಸಿಎಂ ಮತ್ತು ಡಿಸಿಎಂ ಭಾರಿ ಸಾಹಸ ಮಾಡಬೇಕಾಗಿದೆ.

VISTARANEWS.COM


on

Karnataka Congress DK Shivakumar and CM siddaramaih
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರ್ಕಾರ (Congress Karnataka) 36 ಶಾಸಕರನ್ನು ನಿಗಮ ಮತ್ತು ಮಂಡಳಿಗಳ (Board and Corporation) ಅಧ್ಯಕ್ಷರಾಗಿ ನೇಮಕ ಮಾಡಿದೆ. ಆದರೆ, ಇದು ಹಲವು ವಿವಾದಗಳಿಗೆ, ಅಪಸ್ವರಗಳಿಗೆ ಕಾರಣವಾಗಿದೆ. ನೇಮಕಗೊಂಡ ಕೆಲವರು ತಮಗೆ ಮಹತ್ವವಿಲ್ಲದ ನಿಗಮಗಳನ್ನು ನೀಡಿದ್ದಾರೆ ಎಂದು ಅಪಸ್ವರ ಎತ್ತಿದರೆ, ಇನ್ನು ಕೆಲವರು ನಿಗಮ-ಮಂಡಳಿ ಬೇಕಾಗಿಲ್ಲ. ಮಂತ್ರಿ ಖಾತೆಯೇ ಬೇಕು ಎಂದು ಹಠ ಹಿಡಿದಿದ್ದಾರೆ. ಇವರನ್ನು ಸಮಾಧಾನ ಮಾಡಲು ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಹರಸಾಹಸ ಪಡಬೇಕಾಗಿದೆ.

ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ, ಸಿಂಧನೂರು ಕ್ಷೇತ್ರದ ಶಾಸಕ ಹಂಪನ ಗೌಡ ಬಾದರ್ಲಿ, ಬಾಗೇಪಲ್ಲಿ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್‌, ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೀಗೆ ಹಲವು ನಾಯಕರು ತಮಗೆ ಸಿಕ್ಕಿದ ನಿಗಮ ಮಂಡಳಿ ವಿಚಾರದಲ್ಲಿ ಅಕ್ಷೇಪದ ಧ್ವನಿಯನ್ನು ಬಹಿರಂಗವಾಗಿ ಎತ್ತಿದ್ದಾರೆ.

Congress Karnataka : ರಾಜೀನಾಮೆ ಮುಂದಾದ ಎಸ್‌.ಎನ್‌. ಸುಬ್ಬಾರೆಡ್ಡಿ ಬೆಂಬಲಿಗರು

ಬಾಗೇಪಲ್ಲಿ ಶಾಸಕರಾಗಿರುವ ಎಸ್‌.ಎನ್‌. ಸುಬ್ಬಾರೆಡ್ಡಿ ಅವರಿಗೆ ಬೀಜ ನಿಗಮದ ಅಧ್ಯಕ್ಷತೆ ನೀಡಲಾಗಿದೆ. ಇದು ರೆಡ್ಡಿ ಅವರಿಗೆ ಮತ್ತು ಅಭಿಮಾನಿಗಳಿಗೆ ಅಸಮಾಧಾನ ಉಂಟು ಮಾಡಿದೆ. ರೆಡ್ಡಿ ಅವರು ಕೂಡಾ ಈ ನಿಗಮವನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ. ತಮ್ಮ ನಾಯಕರನ್ನು ಮೂಲೆ ಗುಂಪು ಮಾಡಿರುವ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗುಡಿಬಂಡೆ ತಾಲ್ಲೂಕಿನ ಸುಬ್ಬಾರೆಡ್ಡಿ ಬೆಂಬಲಿಗರು ರಾಜೀನಾಮೆಗೆ ಮುಂದಾಗಿದ್ದಾರೆ.

ಗುಡಿಬಂಡೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿರುವ ತಾಲ್ಲೂಕಿನ ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರ ಸಭೆಯಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಪಟ್ಟಣ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗು ಕಾಂಗ್ರೆಸ್ ನ ಚುನಾಯಿತ ಪ್ರತಿನಿಧಿಗಳು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಈ ನಡುವೆ, ʻʻಸುಬ್ಬಾರೆಡ್ಡಿಗೆ ನಾನು ಮುಂಚೇನೆ ಹೆಳ್ಳಿದ್ದೇ ನೀವು ಚೇರ್ಮೆನ್ ಆಗ್ತೀರಾ ಅಂತ. ನಾನು ಹೇಳಿದಾಗ ಶಾಸಕ ಸುಬ್ಬಾರಡ್ಡಿ ಖುಷಿಯಾಗಿಯೇ ಇದ್ದರು. ಬೀಜ ನಿಗಮ ನಿಯಮಿತ ನೀಡಿರುವುದು ಸುಬ್ಬಾರಡ್ಡಿಗೆ ಸಮಾಧಾನ ಇಲ್ಲ. ನಾನು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡ್ತೇನೆʼʼ ಎಂದು ಕೈವಾರ ಕ್ರಾಸ್‌ನಲ್ಲಿ ಸಚಿವ ಡಾ. ಎಂ.ಸಿ. ಸುಧಾಕರ್‌ ಹೇಳಿದ್ದಾರೆ.

Oongress Karnataka board and Corporation

ʻʻಸುಬ್ಬಾರೆಡ್ಡಿ ಸತತವಾಗಿ ಮೂರು ಬಾರಿ ಗೆದ್ದಿರುವ ಹಿರಿಯ ಶಾಸಕರಾಗಿದ್ದಾರೆ. ಅವರಿಗೆ ಉತ್ತಮ ನಿಗಮ ಮಂಡಳಿ ನೀಡುವಂತೆ ನಾನು ಸಿಎಂ ಒತ್ತಾಯ ಮಾಡ್ತೇನೆ. ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ಸುಬ್ಬಾರೆಡ್ಡಿಗೆ ಸಮಾಧಾನ ಆಗುವಂತ ನಿಗಮ ಮಂಡಳಿ ಕೊಡಿಸುವಂತಹ ಕೆಲಸ ಮಾಡ್ತೇನೆ.ʼʼ ಎಂದು ಅವರು ಹೇಳಿದರು.

Congress Karnataka: ಸರ್ಕಾರದ ನಡೆಗೆ ವಿಜಯಾನಂದ ಕಾಶಪ್ಪನವರ್‌ ಸಿಟ್ಟು

ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಸರ್ಕಾರ ಒಂದು ಎಡವಟ್ಟು ಮಾಡಿಕೊಂಡಿದೆ. ನಿಯಮದಲ್ಲಿ ಅವಕಾಶ ಇಲ್ಲದೇ ಇದ್ದರೂ ವಿಜಯಾನಂದ ಕಾಶಪ್ಪನವರ್‌ಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರು. ಬೇರೆಯವರನ್ನು ನೇಮಿಸಲು ಅವಕಾಶವಿಲ್ಲ. ಅಂದರೆ ಕ್ರೀಡಾ ಸಚಿವ ನಾಗೇಂದ್ರ ಅವರೇ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಹಾಗಿದ್ದರೂ ಸರ್ಕಾರ ವಿಜಯಾನಂದ ಕಾಶಪ್ಪನವರ್ ಗೆ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಿದೆ. ನಿಜವೆಂದರೆ, ಈಗ ನೇಮಕ ಮಾಡಬೇಕಿದ್ದರೆ ಅಗುವು ಉಪಾಧ್ಯಕ್ಷತೆಗೆ ಮಾತ್ರ. ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಇಲ್ಲ ಎಂದು ತಿಳಿಯುತ್ತಲೇ ಕಾಶಪ್ಪನವರ್‌ ಅಸಮಾಧಾನಗೊಂಡಿದ್ದಾರೆ. ಈ ತಾಂತ್ರಿಕ ವಿಚಾರವನ್ನು ಪರಿಪಡಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: Congress Karnataka: ಕೊನೆಗೂ ಹೊರಬಿದ್ದ ನಿಗಮ-ಮಂಡಳಿ ಪಟ್ಟಿ; 36 ಶಾಸಕರಿಗೆ ಮಣೆ, ಡಿಕೆಶಿ ಮೇಲುಗೈ

Congress Karnataka : ಕೆಎಸ್ಸಾರ್ಟಿಸಿ ಅಧ್ಯಕ್ಷರಾದರೂ ಗುಬ್ಬಿ ಶ್ರೀನಿವಾಸ್‌ಗೆ ಸಮಾಧಾನವಿಲ್ಲ

ತುಮಕೂರು ಜಿಲ್ಲೆಯ ಗುಬ್ಬಿಯ ಶಾಸಕರಾಗಿರುವ ಎಸ್‌.ಆರ್‌. ಶ್ರೀನಿವಾಸ್‌ ಅವರನ್ನು ಕೆಎಸ್ಆರ್ ಟಿಸಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಆದರೆ, ಅವರು ಇದಕ್ಕೆ ಸಪ್ಪೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ʻʻನನಗೆ ಏನೂ ಅನ್ನಿಸ್ತಿಲ್ಲ, ಖುಷಿನೂ ಅನ್ನಿಸ್ತಿಲ್ಲ, ಬೇಜಾರೂ ಅನ್ನಿಸ್ತಿಲ್ಲʼʼ ಎಂದು ಹೇಳುವ ಮೂಲಕ ಎಸ್‌.ಆರ್‌. ಶ್ರೀನಿವಾಸ್‌ ಅವರು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ʻʻನಾನೇನು ಕೇಳಿರಲಿಲ್ಲ, ಪಕ್ಷದ ವರಿಷ್ಠರು ತೀರ್ಮಾನ ಮಾಡಿ ಕೊಟ್ಟಿದ್ದಾರೆ. ನಾನು ಅವರ ನಂಬಿಕೆಗೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ. ನಾನು ಯಾವುದೇ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಯಾವುದೋ ಆಸೆಗೆ ಬಿದ್ದು ರಾಜಕಾರಣ ಮಾಡಿದವನು ನಾನಲ್ಲ. ನಾನು ರಾಜಕಾರಣಕ್ಕೆ ಬಂದಿದ್ದೇ ಅನಿರೀಕ್ಷಿತವಾಗಿ.. ಜನರು ನನಗೆ ಅವಕಾಶ ಕೊಟ್ಟಿದ್ದಾರೆ, ಅವರ ಸೇವೆ ಮಾಡಬೇಕು ಅನ್ನೋದು ನನ್ನ ಆಸೆ. ಯಾವುದೇ ಸ್ಥಾನ ಸಿಕ್ಕರೂ ತೃಪ್ತಿ ಇರಬೇಕು ಎಂದು ಅವರು ಹೇಳಿದ್ದಾರೆ.

ʻʻಮನುಷ್ಯನ ಆಸೆಗಳು ಅಪರಿಮಿತ, ಮನುಷ್ಯನ ಆಸೆಗಳೆಲ್ಲವನ್ನು ಈಡೇರಿಸೋಕೆ ಆಗಲ್ಲ. ಸಮಯ ಸಂದರ್ಭದಲ್ಲಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ಕೆಲಸ ಮಾಡಬೇಕುʼʼ ಎಂದು ಎಸ್‌.ಆರ್‌ ಶ್ರೀನಿವಾಸ್‌ ಹೇಳಿದರು.

Congress Karnataka : ನಿಗಮ ಅಧ್ಯಕ್ಷ ಸ್ಥಾನ ಬೇಡ ಎನ್ನುತ್ತಿರುವ ಶಾಸಕ ಟಿ.ರಘುಮೂರ್ತಿ

ರಾಜ್ಯ ಕೈಗಾರಿಕಾ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿರುವ ಚಳ್ಳಕೆರೆ ಹಿರಿಯ ಶಾಸಕ ಟಿ.ರಘುಮೂರ್ತಿ ಅವರು, ಈಗ ನನಗೆ ಅಧ್ಯಕ್ಷ ಸ್ಥಾನ ಅಲಂಕರಿಸುವ ಇಚ್ಛೆ ಇಲ್ಲ. ನಾನು ನಿಗಮ ಮಂಡಳಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ ಎಂದಿದ್ದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅವರಿಗೆ ಪತ್ರ ಬರೆದಿದ್ದೆ. ಆದರೂ ನಿಗಮ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಿದ್ದಾರೆ. ನನಗೆ ಅಧ್ಯಕ್ಷ ಸ್ಥಾನ ಅಲಂಕರಿಸುವ ಮನಸ್ಸಿಲ್ಲ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಮಾತುಕತೆ ನಡೆಸುತ್ತೇನೆ. ಬಳಿಕ ಮುಂದಿನ ನಿರ್ಧಾರ ತಿಳಿಸುತ್ತೇನೆʼʼ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.

ನಿಜವೆಂದರೆ ಟಿ. ರಘುಮೂರ್ತಿ ಅವರು ತಮ್ಮನ್ನು ಸಚಿವ ಸ್ಥಾನಕ್ಕೆ ಪರಿಗಣಿಸಿ, ಅದನ್ನು ಬಿಟ್ಟು ಬೇರೆ ನಿಗಮ, ಮಂಡಳಿ ಅಧ್ಯಕ್ಷತೆ ಬೇಡ ಎಂದು ಬಹಿರಂಗವಾಗಿ ಹೇಳಿದ್ದರು.

ಎರಡೂವರೆ ವರ್ಷದ ಬಳಿಕ ಒಂದು ವೇಳೆ ಸಿಎಂ ಬದಲಾವಣೆ ಆದರೆ ಸಚಿವ ಸ್ಥಾನ ಸಿಗಬಹುದು ಎಂಬ ಆಸೆಯನ್ನು ರಘುಮೂರ್ತಿ ಹೊಂದಿದ್ದಾರೆ ಎನ್ನಲಾಗಿದೆ. ಅದರಲ್ಲೂ ಸತೀಶ್ ಜಾರಕಿಹೊಳಿ ಸಿಎಂ ಅಥವಾ ಡಿಸಿಎಂ ಅದರೆ, ತಮಗೆ ಸಚಿವ ಸ್ಥಾನ ಗ್ಯಾರಂಟಿ ಎಂಬ ವಿಶ್ವಾಸದಲ್ಲಿದ್ದಾರೆ. ಸತೀಶ್ ಜಾರಕಿಹೊಳಿ ಜೊತೆ ಮಾತನಾಡಿ ನಿರ್ಧಾರ ತಿಳಿಸುವುದಾಗಿ ಹೇಳಿರುವ ರಘುಮೂರ್ತಿ ಅವರಿಗೆ ಅಧ್ಯಕ್ಷ ಸ್ಥಾನ ಸ್ವೀಕರಿಸಬೇಡಿ ಎಂದು ಜಾರಕಿಹೊಳಿ ‌ ಹೇಳಿದ್ದಾರೆ ಎನ್ನಲಾಗಿದೆ.

Congress Karnataka : ರಾಯಚೂರು ಜಿಲ್ಲೆಯ ಮೂವರು ಶಾಸಕರಿಗೆ ಅಸಮಾಧಾನ

ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ, ಸಿಂಧನೂರು ಕ್ಷೇತ್ರದ ಶಾಸಕ ಹಂಪನ ಗೌಡ ಬಾದರ್ಲಿ ಈ ಮೂವರೂ ತಮಗೆ ಸಿಕ್ಕಿರುವ ನಿಗಮ, ಮಂಡಳಿ ಬಗ್ಗೆ ಸಮಾಧಾನವಿಲ್ಲ. ಇವರು ಮೂವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರಂತೂ ಶುಭಕೋರಲು ಬಂದ ಮುಖಂಡರನ್ನೆ ವಾಪಸ್ ಕಳಿಸಿದ್ದಾರೆ.

ʻʻರಾಯಚೂರು ಜಿಲ್ಲೆಗೆ ಬಹಳಷ್ಟು ಅವಕಾಶ ಕೊಡಬೇಕಿದೆ. ಸಚಿವ ಸಂಪುಟದಲ್ಲಿ ಸ್ಥಾನಮಾನಗಳಲ್ಲಿ ಸಿಂಹಪಾಲು ಕೊಡಬೇಕಿದೆ. ನಮ್ಮ ಜಿಲ್ಲೆಯಲ್ಲಿ ನಾಲ್ಕು ಜನ ಶಾಸಕರು ಇದ್ದೀವಿ. ಹಂಪನಗೌಡ ಬಾದರ್ಲಿ ಯವರು 5 ಬಾರಿ ಗೆದ್ದಿದ್ದಾರೆ. ಹಂಪಯ್ಯ ಸಾಹುಕಾರ್ ಮೂರು ಬಾರಿ ಗೆದ್ದಿದ್ದಾರೆ. ನಾನು ಮತ್ತು ಬಸನಗೌಡ ತುರುವಿಹಾಳ 2 ಬಾರಿ ಗೆದ್ದಿದ್ದೇವೆ.. ಈ ಹಿಂದೆ ವಾಲ್ಮೀಕಿ ನಿಗಮ ಮೋರ್ಚ್ ದಲ್ಲಿ ಕೆಲಸ ಮಾಡಿದ್ದೀನಿ. ಯಾವುದೇ ಸ್ಥಾನಮಾನ ಕೊಟ್ಟಾಗ ಜನರಿಗೆ ಹೆಚ್ಚಿನ ನಿರೀಕ್ಷೆ ಇರ್ತದೆ. ಅದಕ್ಕೆ ತಕ್ಕಂತೆ ಅನುದಾನ ಲಭ್ಯತೆ ಇದ್ದಾಗ ಮಾತ್ರ ಅಲ್ಲಿ ಕೆಲಸ ಸಾಧ್ಯ.. ಸಿಎಂ & ಡಿಸಿಎಂ ಹತ್ತಿರ ಚರ್ಚೆ ಮಾಡಿ, ತೀರ್ಮಾನ ಮಾಡ್ತೀವಿ. ನಾಲ್ಕು ಜನರಲ್ಲಿ ಯಾರಿಗಾದರೂ ಒಬ್ಬರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ಸಿಕ್ಕರೆ ನಮಗೆ ಸಂತೋಷʼʼ ಎಂದು ಬಸನಗೌಡ ದದ್ದಲ್‌ ಹೇಳಿದ್ದಾರೆ.

ಈ ನಡುವೆ, ಕೆಲವೊಂದು ಶಾಸಕರು ತಮಗೆ ನಿಗಮ, ಮಂಡಳಿಗೆ ಅಧ್ಯಕ್ಷತೆ ನೀಡಿರುವುದಕ್ಕೆ ಧನ್ಯವಾದ ಹೇಳಲು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಾರೆ. ಶಾಸಕರಾದ ಅಬ್ಬಯ್ಯ ಪ್ರಸಾದ್, ನಾರಾಯಣಸ್ವಾಮಿ ಅವರು ಕೊಟ್ಟ ನಿಗಮದಲ್ಲಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest10 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest12 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest15 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest16 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌