Site icon Vistara News

ಶ್ರೀ ಕಾಲಭೈರವೇಶ್ವರ ಸ್ವಾಮಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಘಟಿಕೋತ್ಸವ; ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಘಟಿಕೋತ್ಸವ

ಬೆಂಗಳೂರು: ನಗರದ ವಿಜಯನಗರದ ಜೈ ಶ್ರೀ ಗುರುದೇವ್ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಕಾಲಭೈರವೇಶ್ವರ ಸ್ವಾಮಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಘಟಿಕೋತ್ಸವವನ್ನು (convocation) ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಸಚಿವ ಅಶ್ವತ್ಥನಾರಾಯಣ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ವಿತರಿಸಿದರು. ವಿಜಯನಗರ ಶಾಖಾಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಪ್ರಾಂಶುಪಾಲ ಡಾ. ಕಿರಣ್ ಗೌಡ, ರಾಮಣ್ಣ ಗೌಡರು, ಜಿ.ಟಿ.ರಾಜು, ಶಿವರಾಮ್ ಅಕ್ಕೂರ್ ಹಾಗೂ ಕಿದ್ವಾಯಿ ಸಂಸ್ಥೆಯ ನಿರ್ದೇಶಕರಾದ ಡಾ. ಲೋಕೇಶ್, ವೆಂಕಟೇಶ್ ಉಪಸ್ಥಿತರಿದ್ದರು.

ಇದನ್ನೂ ಓದಿ | ಸಪ್ತಕದಿಂದ ಅ.29ಕ್ಕೆ ಲಲಿತಾ ನಮನ ವಿಶೇಷ ಸಂಗೀತ ಕಾರ್ಯಕ್ರಮ; ಇರಲಿದೆ ಖ್ಯಾತನಾಮರ ಹಾಡಿನ ಮೋಡಿ

Exit mobile version