New Baldwin International School: ಫೆ.11ಕ್ಕೆ ಮಂಡೂರಿನ ನ್ಯೂ ಬಾಲ್ಡ್​ವಿನ್​ ಇಂಟರ್‌ನ್ಯಾಷನಲ್ ಸ್ಕೂಲ್‌ ಘಟಿಕೋತ್ಸವ - Vistara News

ಬೆಂಗಳೂರು

New Baldwin International School: ಫೆ.11ಕ್ಕೆ ಮಂಡೂರಿನ ನ್ಯೂ ಬಾಲ್ಡ್​ವಿನ್​ ಇಂಟರ್‌ನ್ಯಾಷನಲ್ ಸ್ಕೂಲ್‌ ಘಟಿಕೋತ್ಸವ

New Baldwin International School :ಬೆಂಗಳೂರು ಹೊರವಲಯದ ಮಂಡೂರಿನ ನ್ಯೂ ಬಾಲ್ಡ್ವಿನ್ ಇಂಟರ್‌ನ್ಯಾಷನಲ್ ಸ್ಕೂಲ್‌ ಘಟಿಕೋತ್ಸವ ಫೆ.11ರಂದು ನಡೆಯಲಿದೆ.

VISTARANEWS.COM


on

New Baldwin International School
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಹೊರವಲಯದ ಮಂಡೂರಿನ ನ್ಯೂ ಬಾಲ್ಡ್​ವಿನ್ ಇಂಟರ್‌ನ್ಯಾಷನಲ್ ಸ್ಕೂಲ್‌ (New Baldwin International School) ಆವರಣದಲ್ಲಿ ಫೆ.11ರಂದು ಸಂಜೆ 4.30ಕ್ಕೆ ಘಟಿಕೋತ್ಸವ-2022-23 ಹಮ್ಮಿಕೊಳ್ಳಲಾಗಿದೆ.

ಶ್ರೀಮದ್ರಾಜಾಪುರ ವೀರಧರ್ಮ ಸಿಂಹಾಸನ ಸಂಸ್ಥಾನ ಮಠದ ಷ. ಬ್ರ. ಪಟ್ಟದ ಶ್ರೀ ಡಾ. ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಹದೇವಪುರ ಶಾಸಕ ಅರವಿಂದ್ ಲಿಂಬಾವಳಿ, ಚಿಂತಾಮಣಿ ಶಾಸಕ ಕೃಷ್ಣಾರೆಡ್ಡಿ, ವಿಸ್ತಾರ ನ್ಯೂಸ್‌ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ, ಪ್ರಖ್ಯಾತ ಜ್ಯೋತಿಷ್ಯರಾದ ಡಾ.ಬಸವರಾಜ್‌ ಗುರೂಜಿ ಹಾಗೂ ಕಿರುತೆರೆ ನಟಿ ಯಶಸ್ವಿನಿ ಆಗಮಿಸಲಿದ್ದಾರೆ.

ಇದನ್ನೂ ಓದಿ | Kannada Sahitya Parishat: ಕಸಾಪದಿಂದ ಡಾ. ಎಚ್‌.ವಿಶ್ವನಾಥ್‌, ಇಂದಿರಾ ದತ್ತಿ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ; ಫೆ. 28 ಕೊನೆಯ ದಿನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Valmiki Corporation Scam: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಮತ್ತೆ 5 ದಿನ ಇಡಿ ಕಸ್ಟಡಿಗೆ

Valmiki Corporation Scam: ಇಂದು ನಾಗೇಂದ್ರ ಅವರ ಕಸ್ಟಡಿ ಅಂತ್ಯವಾಗಿದ್ದು, ಅವರನ್ನು ಮತ್ತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಇಡಿ ಹಾಜರ್ ಪಡಿಸಿತ್ತು. ತನಿಖೆ ಇನ್ನಷ್ಟು ನಡೆಯಬೇಕಿರುವ ಹಿನ್ನೆಲೆಯಲ್ಲಿ ಮತ್ತೆ ಕಸ್ಟಡಿಗೆ ಕೇಳಿತ್ತು. ಇವತ್ತು ಸೇರಿ ಜುಲೈ 22 ರವರೆಗೂ ಇಡಿ ವಶಕ್ಕೆ ನೀಡಿ 82ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದಾರೆ.

VISTARANEWS.COM


on

b nagendra valmiki corporation scam 2
Koo

ಬೆಂಗಳೂರು: ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Corporation Scam) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (Enforcement Directorate) ಬಂಧಿತರಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ (Ex minister B Nagendra) ಅವರಿಗೆ ಮತ್ತೆ 5 ದಿನಗಳ ನ್ಯಾಯಾಂಗ ಬಂಧನ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಇಂದು ನಾಗೇಂದ್ರ ಅವರ ಕಸ್ಟಡಿ ಅಂತ್ಯವಾಗಿದ್ದು, ಅವರನ್ನು ಮತ್ತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಇಡಿ ಹಾಜರ್ ಪಡಿಸಿತ್ತು. ತನಿಖೆ ಇನ್ನಷ್ಟು ನಡೆಯಬೇಕಿರುವ ಹಿನ್ನೆಲೆಯಲ್ಲಿ ಮತ್ತೆ ಕಸ್ಟಡಿಗೆ ಕೇಳಿತ್ತು. ಇವತ್ತು ಸೇರಿ ಜುಲೈ 22 ರವರೆಗೂ ಇಡಿ ವಶಕ್ಕೆ ನೀಡಿ 82ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದಾರೆ.

ಮಾಚಿ ಸಚಿವ ನಾಗೇಂದ್ರ ಪರ ಹಿರಿಯ ವಕೀಲ ಶ್ಯಾಮ್ ಸುಂದರ್ ವಾದ ಮಂಡಿಸಿದರು. ನಾಗೇಂದ್ರ ವಿರುದ್ಧ ದಾಖಲಿಸಿರುವ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಸರ್ಚಿಂಗ್ ಮುಗಿದಿದೆ. ಸೀಜಿಂಗ್ ಕಾರ್ಯ ಮುಗಿದಿದೆ. ಆರೋಪಿಯ ವಿಚಾರಣೆಯೂ ಮುಗಿದಿದೆ. ಮತ್ತೆ ಕಸ್ಟಡಿಗೆ ಪಡೆಯುವ ಅವಶ್ಯಕತೆ ಇಲ್ಲ. ಇಡಿ ಅಧಿಕಾರಿಗಳು ಪೊಲೀಸರಲ್ಲ. ಅವರನ್ನು ಕಸ್ಟಡಿಗೆ ಪಡೆದ ಉದ್ದೇಶ ಮುಗಿದಿದೆ. ಮತ್ತೆ ಕಸ್ಟಡಿಗೆ ಪಡೆದು ವಿಚಾರಣೆ ಮಾಡೋದೇನಿದೆ? ಎಂದು ಪ್ರಶ್ನಿಸಿದ ನಾಗೇಂದ್ರ ಪರ ವಕೀಲ ಶ್ಯಾಮ್ ಸುಂದರ್‌, ಸುಪ್ರೀಂ ಕೋರ್ಟ್ ಆದೇಶಗಳನ್ನು ಉಲ್ಲೇಖಿಸಿದರು.

ಇಡಿ ಪರ ಎಸ್ಪಿಪಿ ಪ್ರಸನ್ನ ಕುಮಾರ್ ಹಾಜರಾದರು. ದಾಳಿ ವೇಳೆ ಸಾಕಷ್ಟು ಮಾಹಿತಿ ಸಂಗ್ರಹಿಸಲಾಗಿದೆ. ಕಂತೆ ಕಂತೆ ಹಣ ಪತ್ತೆಯಾಗಿದೆ. ಆರೋಪಿ ಎಲ್ಲವೂ ಗೊತ್ತಿದ್ದು ಅಪರಾಧ ಕೃತ್ಯ ಎಸಗಿದ್ದಾರೆ. ಆರೋಪಿ ತನ್ನ ಸಹಚರರಿಗೆ ಸೂಚನೆ ನೀಡಿದ್ದಾರೆ. ಅವರ ಸೂಚನೆ ಮೇರೆಗೆ ನಿಗಮದಲ್ಲಿ ಕೋಟಿ ಕೋಟಿ ಹಗರಣ ನಡೆದಿದೆ. ಈಗಾಗಲೇ ಕೆಲವು ಆರೋಪಿಗಳ‌ ಮೊಬೈಲ್ ಪರಿಶೀಲನೆ ಮಾಡಲಾಗುತ್ತಿದೆ. ಆರೋಪಿ ನಾಗೇಂದ್ರ ಪತ್ನಿಯನ್ನು ವಿಚಾರಣೆ ನಡೆಸಿ ‌ಆಕೆಯ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಇನ್ನಷ್ಟು ಮಾಹಿತಿ ಬೇಕಿರುವ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ನೀಡುವಂತೆ ಎಸ್‌ಪಿಪಿ ಮನವಿ ಮಾಡಿದರು. ಇಲ್ಲಿಯವರೆಗೆ ನಡೆದ ತನಿಖಾ ಮಾಹಿತಿ ದಾಖಲೆಗಳನ್ನೊಳಗೊಂಡ ಕಡತಗಳನ್ನು ಇಡಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಸಿದರು.

ನಿನ್ನೆ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ತೆಗೆದುಕೊಂಡು ಇಡಿ ವಿಚಾರಣೆ ಮಾಡಿತ್ತು. ಅಧಿಕಾರಿಗಳು 7ರಿಂದ 8 ಗಂಟೆಗಳ ಕಾಲ ಸುದೀರ್ಘ ವಿಚಾರಣೆ ಮಾಡಿದ್ದರು. ಸಾಕಷ್ಟು ವಿಚಾರಗಳನ್ನು ಹೊರ ತೆಗೆದಿದ್ದಾರೆ. ಪತಿ ಪತ್ನಿಯನ್ನು ಮುಖಾಮುಖಿ ಕೂರಿಸಿ ಪ್ರಶ್ನೆ ಮಾಡಲಾಗಿದೆ. ಹಣದ ಅವ್ಯವಹಾರದಲ್ಲಿ ನಾಗೇಂದ್ರ ಪತ್ನಿಯ ಅಕೌಂಟ್‌ನಲ್ಲಿ ಕೂಡ ಅನಧಿಕೃತ ಹಣ ಕಂಡುಬಂದಿದ್ದು, ಈ ಬಗ್ಗೆ ಪ್ರಶ್ನಿಸಲಾಗಿದೆ.

ಕಳೆದೊಂದು ವಾರದಿಂದ ನಾಗೇಂದ್ರ ಇಡಿ ವಶದಲ್ಲಿದ್ದಾರೆ. ಅವರ ಮನೆ ಸೇರಿ 23 ಕಡೆಗಳಲ್ಲಿ ಇಡಿ ಏಕಕಾಲಕ್ಕೆ ದಾಳಿ ಮಾಡಿತ್ತು. 6 ದಿನಗಳ ಕಾಲದ ಇಡಿ ವಿಚಾರಣೆ ವಿಚಾರಣೆಯಲ್ಲಿ ನಾಗೇಂದ್ರ ಸಮರ್ಪಕವಾಗಿ ಉತ್ತರ ನೀಡಿಲ್ಲ. ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿರುವ ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್‌ ಕೂಡ ಪ್ರಕರಣದಲ್ಲಿ ವಿಚಾರಣೆಗಾಗಿ ಇಡಿಗೆ ಬೇಕಾಗಿದ್ದಾರೆ. ಈಗಾಗಲೇ ಬಂಧಿತ ಆರೋಪಿಗಳನ್ನು ಪ್ರಶ್ನಿಸಿದಾಗ ದದ್ದಲ್‌ ಪಿಎಯ ಕೈವಾಡ ಕೂಡ ಇದರಲ್ಲಿ ಕಂಡುಬಂದಿದೆ.

ಆದರೆ ಮನೆಗೆ ಇಡಿ ದಾಳಿಯ ಬಳಿಕ ಇಡಿ ಬಂಧನ ತಪ್ಪಿಸಿಕೊಳ್ಳಲು ದದ್ದಲ್‌ ಎಸ್‌ಐಟಿ ಮುಂದೆ ಹಾಜರಾಗಿ ಇಡೀ ದಿನ ಕೂತಿದ್ದರು. ನಂತರ ಅಲ್ಲಿಂದ ಹೊರಬಿದ್ದು ಮೂರು ದಿವಸ ಕಣ್ಮರೆಯಾಗಿದ್ದ ದದ್ದಲ್‌, ನಾಲ್ಕನೇ ದಿವಸ ವಿಧಾನಮಂಡಲ ಅಧಿವೇಶನ ಶುರುವಾದಾಗ ವಿಧಾನಸಭೆಯಲ್ಲಿ ಕಾಣಿಸಿಕೊಂಡಿದ್ದರು. ವಿಚಾರಣೆಗೆ ಬರುವಂತೆ ದದ್ದಲ್‌ ಅವರಿಗೆ ಇಡಿ ನೋಟೀಸ್‌ ನೀಡಿದೆ ಎನ್ನಲಾಗಿದೆ. ಆದರೆ ನನಗೆ ಯಾವುದೇ ನೋಟೀಸ್‌ ಬಂದಿಲ್ಲ ಎಂದಿದ್ದಾರೆ ದದ್ದಲ್.‌ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವಾಗ ಸ್ಪೀಕರ್‌ ಅನುಮತಿ ಇಲ್ಲದೆ ಶಾಸಕರನ್ನು ಇಡಿ ಬಂಧಿಸುವಂತಿಲ್ಲ.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

Continue Reading

ಪ್ರಮುಖ ಸುದ್ದಿ

GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ಗೆ ಬೀಗ ಹಾಕಲು ಸಾಧ್ಯವಿಲ್ಲ! ಸಚಿವರ ಮಾತಿಗೆ ಬೆಲೆ ಇಲ್ವಾ?

GT World Mall: ಜಿಟಿ ಮಾಲ್‌ಗೆ ಬೀಗ ಹಾಕುವುದಾದರೆ ಯಾವ ಅಂಶದ ಆಧಾರದಲ್ಲಿ ಬೀಗ ಹಾಕಬೇಕೆನ್ನುವ ಗೊಂದಲಕ್ಕೆ ಬಿಬಿಎಂಪಿ ಅಧಿಕಾರಿಗಳು ಸಿಲುಕಿದ್ದಾರೆ. ನೋಟೀಸ್ ನೀಡದೆ ಏಕಾಏಕಿ ಮಾಲ್‌ಗೆ ಬೀಗ ಹಾಕುವಂತಿಲ್ಲ. ಕೆಎಂಸಿ ಆಕ್ಟ್‌ನಲ್ಲಿ ಈ ಬಗ್ಗೆ ಸ್ಪಷ್ಟ ಉಲ್ಲೇಖವಿದೆ.

VISTARANEWS.COM


on

gt world mall assembly live
Koo

ಬೆಂಗಳೂರು: ಪಂಚೆ ಧರಿಸಿ ಬಂದ ರೈತರಿಗೆ ಒಳಗೆ ಬಿಡದೆ ಅವಮಾನ ಮಾಡಿದ ಜಿಟಿ ವರ್ಲ್ಡ್‌ ಮಾಲ್‌ (GT World Mall) ಅನ್ನು ಒಂದು ವಾರ ಕಾಲ ಮುಚ್ಚಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ (Byrathi Suresh) ಅವರು ಸದನದಲ್ಲಿ ಗುಡುಗಿದ್ದರು. ಆದರೆ ಮಾಲ್‌ ಅನ್ನು ಮುಚ್ಚಿಸಲು ಯಾವುದೇ ಕಾರಣ ಸಿಗದೆ ಬಿಬಿಎಂಪಿ ಅಧಿಕಾರಿಗಳು (BBMP Officers) ಕಂಗಾಲಾಗಿದ್ದಾರೆ. ಹೀಗಾಗಿ, ಸುಮ್ಮನೇ ಬಾಯಿಮಾತಿಗಾಗಿ ಸಚಿವರು ಹೀಗೆ ಹೇಳಿದ್ರಾ ಎಂಬ ಪ್ರಶ್ನೆ ಉದ್ಭವವಾಗಿದೆ.

ಇಂದು ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಅಧಿಕಾರಿಗಳು ಮಾಲ್‌ ಅನ್ನು ಸಮಗ್ರವಾಗಿ ಪರಿಶೀಲಿಸಿದರು. ಆದರೆ ಯಾವುದೇ ಅವ್ಯವಸ್ಥೆ ಅವರಿಗೆ ಕಂಡುಬಂದಿಲ್ಲ. ಆದರೆ, ಮಾಲೀಕರು ಒಂದೂವರೆ ಕೋಟಿ ರೂ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಮಾಲ್‌ಗೆ ನೋಟೀಸ್‌ ನೀಡಬಹುದು ಅಷ್ಟೆ. ಆದರೆ ಮುಚ್ಚುವಂತಿಲ್ಲ.

ಜಿಟಿ ಮಾಲ್‌ಗೆ ಬೀಗ ಹಾಕುವುದಾದರೆ ಯಾವ ಅಂಶದ ಆಧಾರದಲ್ಲಿ ಬೀಗ ಹಾಕಬೇಕೆನ್ನುವ ಗೊಂದಲಕ್ಕೆ ಬಿಬಿಎಂಪಿ ಅಧಿಕಾರಿಗಳು ಸಿಲುಕಿದ್ದಾರೆ. ನೋಟೀಸ್ ನೀಡದೆ ಏಕಾಏಕಿ ಮಾಲ್‌ಗೆ ಬೀಗ ಹಾಕುವಂತಿಲ್ಲ. ಕೆಎಂಸಿ ಆಕ್ಟ್‌ನಲ್ಲಿ ಈ ಬಗ್ಗೆ ಸ್ಪಷ್ಟ ಉಲ್ಲೇಖವಿದೆ. ಮೂರು ಬಾರಿ ನೋಟೀಸ್ ನೀಡಿದ ಮೇಲೆಯೇ ಬೀಗ ಹಾಕುವ ಅವಕಾಶ ಬಿಬಿಎಂಪಿಗೆ ಇದೆ. ಮೂರು ನೋಟೀಸ್‌ಗಳಿಗೆ ವಿವರಣೆ ನೀಡಲು ಅವಕಾಶ ಕೂಡ ನೀಡಬೇಕು‌.
.
ಈ ಪ್ರಕರಣದಲ್ಲಿ ನೊಟೀಸ್ ನೀಡುವ ಪ್ರಕ್ರಿಯೆಯೇ ನಡೆದಿಲ್ಲ. ಹೀಗಿರುವಾಗ ಏಕಾಏಕಿ ಮಾಲ್ ಮುಚ್ಚಲು ಸಾಧ್ಯವಿಲ್ಲ. ನಿಯಮ ಮೀರಿ ನೋಟೀಸ್ ನೀಡಿದರೆ ಮಾಲ್ ಆಡಳಿತದಿಂದ ಮಾನನಷ್ಟ ಮೊಕದ್ದಮೆ ಹೂಡುವ ಸಾಧ್ಯತೆಯೂ ಇದೆ. ಇದರಿಂದ ಬಿಬಿಎಂಪಿ ಅಧಿಕಾರಿಗಳೇ ನಾಳೆ ಕೋರ್ಟ್ ಕಟಕಟೆಯಲ್ಲಿ ನಿಲ್ಲುವ ಆತಂಕ‌ ಇದೆ. ಹೀಗಾಗಿ ರಿಸ್ಕ್ ತೆಗೆದುಕೊಳ್ಳಲು ಬಿಬಿಎಂಪಿ ಅಧಿಕಾರಿಗಳು‌ ಮುಂದಾಗಿಲ್ಲ.

ಆದರೆ ಸಚಿವರ ಆದೇಶ ಪಾಲಿಸಬೇಕಿದ್ದು, ಕಾನೂನಾತ್ಮಕ ಕುಣಿಕೆಯಿಂದ ಹೇಗೆ ಪಾರಾಗಬೇಕು ಎಂಬ ಗೊಂದಲದಲ್ಲಿ ಅಧಿಕಾರಿಗಳಿದ್ದಾರೆ. ಇದುವರೆಗೆ ಸರ್ಕಾರದಿಂದ ಮಾಲ್‌ ಮುಚ್ಚಲು ಯಾವುದೇ ಲಿಖಿತ ಆದೇಶ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯ ಅಧಿಕಾರಿಗಳು ಕೇವಲ ಅಂಗಡಿಗಳಿಗೆ ನೋಟೀಸ್ ನೀಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಸ್ವಚ್ಛತೆ, ಬೆಂಕಿ ಸುರಕ್ಷತೆ ಮೊದಲಾದ ಕೆಲವು ಅನುಬಂಧಗಳ ಅಡಿಯಲ್ಲಿ ನೋಟೀಸ್‌ ನೀಡಬಹುದು.

7 ದಿನ ಮುಚ್ಚಲು ಸೂಚನೆ

ಇಂದು ಆರಂಭವಾದ ಮೂರನೇ ದಿನದ ವಿಧಾನಸಭೆ ಕಲಾಪ ಆರಂಭದಲ್ಲೇ ಈ ವಿಷಯ ಪ್ರಸ್ತಾಪವಾಯಿತು. ಹಲವರು ಸದಸ್ಯರು ರೈತರಿಗೆ ಅವಮಾನ ಆದ ವಿಷಯವನ್ನು ಪ್ರಸ್ತಾಪಿಸಿದರು. ವಿಸ್ತಾರ ನ್ಯೂಸ್‌ ನಿನ್ನೆ ಇಡೀ ದಿನ ಈ ಘಟನೆಯನ್ನು ಪ್ರಸಾರ ಮಾಡಿದ್ದಲ್ಲದೆ, ರೈತರನ್ನು ಮರಳಿ ಜಿಟಿ ಮಾಲ್‌ಗೆ ಕರೆದೊಯ್ದು ಪ್ರವೇಶ ಕೊಡಿಸಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಕನ್ನಡ ಹಾಗೂ ರೈತಪರ ಸಂಘಟನೆಗಳು ಈ ವಿಚಾರದಲ್ಲಿ ವಿಸ್ತಾರ ನ್ಯೂಸ್‌ನೊಂದಿಗೆ ಕೈಜೋಡಿಸಿದ್ದವು. ನಂತರ ಸಚಿವ ಸಂತೋಷ್‌ ಲಾಡ್‌ (Santosh Lad) ಕೂಡ ಕೂಡ ಈ ವಿಚಾರದಲ್ಲಿ ಮಾಲ್‌ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ವಿಧಾನಸಭೆ ಕಲಾಪದ ಆರಂಭದ ಹೊತ್ತಿಗೆ ಸ್ವತಃ ಸ್ಪೀಕರ್‌ ಯು.ಟಿ ಖಾದರ್‌ (Speaker UT Khader) ಅವರು ಈ ವಿಚಾರ ಎತ್ತಿದರು. ಈ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚಿಸಿದರು. ಸದಸ್ಯರು ಪಕ್ಷಾತೀತವಾಗಿ ಮಾಲ್‌ ನಡೆಯನ್ನು ತೀವ್ರವಾಗಿ ಖಂಡಿಸಿದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇದೆ. 7 ದಿನಗಳ ವರೆಗೆ ಬಂದ್‌ ಮಾಡಿಸಬಹುದು. ಆದರೆ ಎಚ್ಚರಿಕೆ ನೀಡಿ ಮೂರು ದಿನಗಳ ಕಾಲ ಮಾಲ್ ಬಂದ್ ಮಾಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ ವಿರುದ್ಧ ಸಚಿವರು ಗರಂ; ʼಪಂಚೆ ಧರಿಸಿಯೇ ಸಿದ್ದರಾಮಯ್ಯ 7 ವರ್ಷ ರಾಜ್ಯ ಆಳ್ಲಿಲ್ವಾ?ʼ

Continue Reading

ಕರ್ನಾಟಕ

Sameer Nigam: 25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ ಆಕ್ರೋಶ

Sameer Nigam: ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ. 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75 ಮೀಸಲಾತಿ ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಸದ್ಯ ಈ ಬಗ್ಗೆ ಪರ-ವಿರೋಧ ಅಬಿಪ್ರಾಯ ವ್ಯಕ್ತವಾಗುತ್ತಿದೆ. ಈ ಮಧ್ಯೆ ಫೋನ್‌ಪೇ ಸಿಇಒ ಮತ್ತು ಸಹ ಸಂಸ್ಥಾಪಕ ಸಮೀರ್ ನಿಗಮ್ ಅವರು ಕರ್ನಾಟಕ ಸರ್ಕಾರದ ಖಾಸಗಿ ಉದ್ಯೋಗ ಕೋಟಾ ಮಸೂದೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Sameer Nigam
Koo

ಬೆಂಗಳೂರು: ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ. 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಸದ್ಯ ಈ ಬಗ್ಗೆ ಪರ-ವಿರೋಧ ಅಬಿಪ್ರಾಯ ವ್ಯಕ್ತವಾಗುತ್ತಿದೆ. ಈ ಮಧ್ಯೆ ಫೋನ್‌ಪೇ (PhonePe) ಸಿಇಒ ಮತ್ತು ಸಹ ಸಂಸ್ಥಾಪಕ ಸಮೀರ್ ನಿಗಮ್ (Sameer Nigam) ಅವರು ಕರ್ನಾಟಕ ಸರ್ಕಾರದ ಖಾಸಗಿ ಉದ್ಯೋಗ ಕೋಟಾ ಮಸೂದೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ನನಗೆ 46 ವರ್ಷ ವಯಸ್ಸು. ನಾನು ಯಾವುದೇ ರಾಜ್ಯದಲ್ಲಿ 15 ವರ್ಷಕ್ಕೂ ಹೆಚ್ಚು ಕಾಲ ವಾಸಿಸಿಲ್ಲ. ನನ್ನ ತಂದೆ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ದೇಶಾದ್ಯಂತ ಕಾರ್ಯ ನಿರ್ವಹಿಸಿದ್ದಾರೆ. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ನಾನು ಕಂಪನಿಗಳನ್ನು ಸ್ಥಾಪಿಸಿ ಭಾರತದಾದ್ಯಂತ 25,000+ ಉದ್ಯೋಗಗಳನ್ನು ಸೃಷ್ಟಿಸಿದ್ದೇನೆ. ಹಾಗಾದರೆ ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ?ʼʼ ಎಂದು ಪ್ರಶ್ನಿಸಿದ್ದಾರೆ. ಸರ್ಕಾರ ಈ ಮಸೂದೆಯನ್ನು ತಡೆಹಿಡಿಯುವ ಮೊದಲ ಅವರು ಈ ಅಭಿಪ್ರಾಯ ಹಂಚಿಕೊಂಡಿದ್ದರು.

ನೆಟ್ಟಿಗರ ಪ್ರತಿಕ್ರಿಯೆ

ಅವರ ಈ ಪೋಸ್ಟ್‌ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯನ್ನೇ ಹುಟ್ಟು ಹಾಕಿದೆ. ʼʼನೀವು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲ ಎಂದು ಯಾರು ಹೇಳಿದ್ದು? ನೀವು ಮಾಡಬೇಕಾಗಿರುವುದು ಭಾಷೆಯನ್ನು ಕಲಿಯುವ ಕೆಲಸ. ಇದಕ್ಕಾಗಿ ಇಷ್ಟೊಂದು ಅಳುವ ಅಗತ್ಯವಿಲ್ಲʼʼ ಎಂದು ಒಬ್ಬರು ಹೇಳಿದ್ದಾರೆ. ಇದಕ್ಕೆ ನಿಗಮ್‌ ಪ್ರತಿಕ್ರಿಯಿಸಿ, ʼʼನಾನು ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಬಹುದು. ನಾನು ಬಯಸುವ ಯಾವುದೇ ಭಾಷೆಯನ್ನು ಕಲಿಯಬಲ್ಲೆ. ಭಾರತದ ಸಂವಿಧಾನ ನನಗೆ ಈ ಹಕ್ಕು ನೀಡಿದೆ. ಇದು ನನ್ನ ಆಯ್ಕೆʼʼ ಎಂದಿದ್ದಾರೆ.

ಇನ್ನೊಬ್ಬರು ಕಮೆಂಟ್‌ ಮಾಡಿ, “ನಿಜ. ಉತ್ತಮ ಭವಿಷ್ಯಕ್ಕಾಗಿ ಬೆಂಗಳೂರಿಗೆ ಬಂದ ಜನರು ನಗರವನ್ನು, ಇಲ್ಲಿನ ಜನರನ್ನು ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದರೆ ಈ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು!ʼʼ ಎಂದು ಹೇಳಿದ್ದಾರೆ. “ಭಾರತದ ಎಲ್ಲ ರಾಜ್ಯಗಳಲ್ಲಿ ಎಲ್ಲರಿಗೂ ಸಮಾನ ಅವಕಾಶಗಳು ಇರಬೇಕುʼʼ ಎಂದು ಮತ್ತೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಯೂ ಟರ್ನ್‌

ಸದ್ಯ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಸಂಪುಟ ಅನುಮೋದನೆ ನೀಡಲಾಗಿದ್ದ ಮಸೂದೆ ಕುರಿತು ಮುಂದಿನ ದಿನಗಳಲ್ಲಿ ಮತ್ತೊಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಗೊಂಡಿತ್ತು. ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈ,ಕಿರಣ್ ಮಜುಂದಾರ್ ಅವರು ಈ ಬಗ್ಗೆ ಆಕ್ಷೇಪ ಎತ್ತಿದ್ದರು. ನೆರೆ ರಾಜ್ಯದ ಸರ್ಕಾರಗಳೂ ಇದರ ಬಗ್ಗೆ ತಕರಾರು ಎತ್ತಿದ್ದವು. 

ಇದನ್ನೂ ಓದಿ: Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ

Continue Reading

ಕರ್ನಾಟಕ

Kannada New Movie: ಹಾರರ್ ಜಾನರ್‌ನ ʼಹಗ್ಗʼ ಚಿತ್ರದ ಟೀಸರ್ ಅನಾವರಣ

Kannada New Movie: ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ, ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್. ನಿರ್ದೇಶನದ “ಹಗ್ಗ” ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು. ಖ್ಯಾತ ನಿರ್ದೇಶಕ ಆರ್. ಚಂದ್ರು ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರದ ನಿರ್ಮಾಪಕರಾದ ಕೆ.ಮಂಜು,‌ ದಯಾಳ್ ಅವರು ಸೇರಿದಂತೆ ಅನೇಕ ಗಣ್ಯರು “ಹಗ್ಗ” ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

VISTARANEWS.COM


on

Director R Chandru unveiled the teaser of Hagga movie
Koo

ಬೆಂಗಳೂರು: ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್. ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ “ಹಗ್ಗ” ಚಿತ್ರದ (Kannada New Movie) ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು. ಖ್ಯಾತ ನಿರ್ದೇಶಕ ಆರ್. ಚಂದ್ರು ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಚಿತ್ರದ ನಿರ್ಮಾಪಕರಾದ ಕೆ.ಮಂಜು,‌ ದಯಾಳ್ ಸೇರಿದಂತೆ ಅನೇಕ ಗಣ್ಯರು “ಹಗ್ಗ” ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಟೀಸರ್ ಬಿಡುಗಡೆ ನಂತರ ಮಾತನಾಡಿದ ನಿರ್ದೇಶಕ ಅವಿನಾಶ್, ನಾನು ಮೂಲತಃ ಮೆಕಾನಿಕಲ್ ಎಂಜಿನಿಯರ್. ಸಿನಿಮಾ ನಿರ್ದೇಶನ ನನ್ನ ಕನಸು. ಆ ಕನಸು “ಹಗ್ಗ” ಚಿತ್ರದ ಮೂಲಕ ಈಡೇರಿದೆ. ಈ ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಚ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆದರೆ “ಹಗ್ಗ”ವೇ ನಮ್ಮ ಚಿತ್ರದ ನಾಯಕ. ಇದು ಹಾರರ್ ಜಾನರ್‌ನ ಚಿತ್ರವಾದರೂ, ಚಿತ್ರದಲ್ಲಿ ಒಂದು ಪ್ರಮುಖ ಸಂದೇಶ ಸಹ ಇದೆ ಎಂದರು.

ಇದನ್ನೂ ಓದಿ: Paris Olympics: ಅತಿ ಹೆಚ್ಚು ಒಲಿಂಪಿಕ್ಸ್ ಆತಿಥ್ಯ ವಹಿಸಿದ ದೇಶ ಯಾವುದು?

ಚಿತ್ರಕ್ಕೆ ನಾನೇ ಕಥೆ‌ ಬರೆದು ನಿರ್ಮಾಣ ಮಾಡಿದ್ದೇನೆ.‌ ಅವಿನಾಶ್ ನಿರ್ದೇಶನ ಮಾಡಿದ್ದಾರೆ. ಟೀಸರ್ ಬಿಡುಗಡೆ ಬಂದಿರುವ ಎಲ್ಲಾ ಗಣ್ಯರಿಗೂ ಧನ್ಯವಾದ. ಈಗಾಗಲೇ ಮೋಷನ್ ಪೋಸ್ಟರ್ ಮೂಲಕ “ಹಗ್ಗ” ಜನರ ಮನಸ್ಸಿಗೆ ಹತ್ತಿರವಾಗಿದೆ. ಈಗ ಟೀಸರ್ ಬಿಡುಗಡೆಯಾಗಿದೆ. ಆಗಸ್ಟ್‌ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ಮಾಪಕ ರಾಜ್ ಭಾರದ್ವಾಜ್ ತಿಳಿಸಿದರು.

ಅವಿನಾಶ್ ಅವರು ಚಿತ್ರದ ಕುರಿತು ಹೇಳಿದಾಗ ನನ್ನ ಪಾತ್ರ ಬಹಳ ಇಷ್ಟವಾಯಿತು. ನನ್ನನ್ನು “ಸೂಪರ್ ಹೀರೋ” ಎಂದು ತೋರಿಸಿದ್ದಾರೆ. ಪಾತ್ರದ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ‌‌. ಆದರೆ ಒಳ್ಳೆಯ ಪಾತ್ರ ಕೊಟ್ಟ ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ಧನ್ಯವಾದ ಎಂದರು ನಟಿ ಅನು ಪ್ರಭಾಕರ್.

ನನ್ನದು ಈ ಚಿತ್ರದಲ್ಲಿ ಪತ್ರಕರ್ತೆಯ ಪಾತ್ರ. ಯಾವುದೋ ಒಂದು ವಿಷಯದ ಅನ್ವೇಷಣೆಗಾಗಿ ಹಳ್ಳಿಗೆ ಹೋಗುತ್ತೇನೆ. ಈ ಚಿತ್ರದಲ್ಲಿ ಜೀಪ್ ಕೂಡ ಡ್ರೈವ್ ಮಾಡಿದ್ದೇನೆ ಎಂದು ಹರ್ಷಿಕಾ ಪೂಣಚ್ಚ ತಿಳಿಸಿದರು.

ಇದು ನನ್ನ ಮೊದಲ ಚಿತ್ರ. ನಟನೆಗೆ ತಬಲ ನಾಣಿ ಅವರು ಬಹಳ ಸಹಾಯ ಮಾಡಿದರು. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕ ವೇಣು. ನಟ ತಬಲ ನಾಣಿ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ನಿರ್ಮಾಪಕ ರಾಜ್ ಭಾರದ್ವಾಜ್ ಅವರೆ “ಹಗ್ಗ” ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಅವರದು. ಮ್ಯಾಥ್ಯೂಸ್ ಮನು ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ ಹಾಗೂ ಎನ್.ಎಂ. ವಿಶ್ವ ಅವರ ಸಂಕಲನವಿರುವ ಈ ಚಿತ್ರಕ್ಕೆ ಮನೋಹರ್ ಎಸ್.ಪಿ. ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ: Media Connect: ಮೀಡಿಯಾ ಕನೆಕ್ಟ್‌ಗೆ ಭರವಸೆಯ ಪಿಆರ್‌ ಸೇವಾ ಪ್ರಶಸ್ತಿ

ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading
Advertisement
ಯಾದಗಿರಿ11 mins ago

Murder case : ಪತ್ನಿ, ಅತ್ತೆ ಹಾಗೂ ಮಾವನಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು, ಚಾಕುವಿನಿಂದ ಇರಿದು ಕೊಂದ

b nagendra valmiki corporation scam 2
ಕ್ರೈಂ15 mins ago

Valmiki Corporation Scam: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಮತ್ತೆ 5 ದಿನ ಇಡಿ ಕಸ್ಟಡಿಗೆ

INDW vs PAKW
ಕ್ರೀಡೆ22 mins ago

INDW vs PAKW: ನಾಳೆಯಿಂದ ಮಹಿಳಾ ಏಷ್ಯಾ ಕಪ್​; ಭಾರತಕ್ಕೆ ಪಾಕ್​ ಎದುರಾಳಿ

gt world mall assembly live
ಪ್ರಮುಖ ಸುದ್ದಿ22 mins ago

GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ಗೆ ಬೀಗ ಹಾಕಲು ಸಾಧ್ಯವಿಲ್ಲ! ಸಚಿವರ ಮಾತಿಗೆ ಬೆಲೆ ಇಲ್ವಾ?

Actor Darshan Judicial Custody Extended Till Aug 1
ಸ್ಯಾಂಡಲ್ ವುಡ್31 mins ago

Actor Darshan: ದರ್ಶನ್‌ &ಗ್ಯಾಂಗ್‌ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ; ಕಾರಣಗಳು ಹೀಗಿವೆ!

Raghaveshwarashree Chaturmasya at Ashoke from 21st July
ಉತ್ತರ ಕನ್ನಡ32 mins ago

Uttara Kannada News: ಗೋಕರ್ಣದ ʼಅಶೋಕೆʼಯಲ್ಲಿ ಜು. 21ರಿಂದ ರಾಘವೇಶ್ವರಶ್ರೀ ಚಾತುರ್ಮಾಸ್ಯ

Uttara Kannada Landslide
ಮಳೆ37 mins ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Kannada Serials TRP Lakshmi Nivas in Top 3 Lakshmi Baramma at fifth position
ಕಿರುತೆರೆ48 mins ago

Kannada Serials TRP: ಟಾಪ್‌ 3ಯಲ್ಲಿ ʻಲಕ್ಷ್ಮೀ ನಿವಾಸʼ: ಐದನೇ ಸ್ಥಾನದಲ್ಲಿ ʻಲಕ್ಷ್ಮೀ ಬಾರಮ್ಮʻ ಧಾರಾವಾಹಿ

Sameer Nigam
ಕರ್ನಾಟಕ1 hour ago

Sameer Nigam: 25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ ಆಕ್ರೋಶ

Director R Chandru unveiled the teaser of Hagga movie
ಕರ್ನಾಟಕ1 hour ago

Kannada New Movie: ಹಾರರ್ ಜಾನರ್‌ನ ʼಹಗ್ಗʼ ಚಿತ್ರದ ಟೀಸರ್ ಅನಾವರಣ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Uttara Kannada Landslide
ಮಳೆ37 mins ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

ಟ್ರೆಂಡಿಂಗ್‌