Crime news | ಮೈಸೂರು ರಾಜವಂಶಸ್ಥನ ಸೋಗಿನಲ್ಲಿ ಸಾಫ್ಟ್‌ವೇರ್ ಕಂಪನಿ ಮಾಲೀಕನಿಗೆ 2 ಕೋಟಿ ರೂ. ವಂಚನೆ, ಹಲ್ಲೆ - Vistara News

ಕ್ರೈಂ

Crime news | ಮೈಸೂರು ರಾಜವಂಶಸ್ಥನ ಸೋಗಿನಲ್ಲಿ ಸಾಫ್ಟ್‌ವೇರ್ ಕಂಪನಿ ಮಾಲೀಕನಿಗೆ 2 ಕೋಟಿ ರೂ. ವಂಚನೆ, ಹಲ್ಲೆ

ಹೈದರಾಬಾದ್ ಮೂಲದ ಸಾಫ್ಟ್‌ವೇರ್ ಕಂಪನಿ ಮಾಲೀಕರೊಬ್ಬರಿಗೆ, ಮೈಸೂರು ರಾಜವಂಶಸ್ಥ ತಾನು ಎಂದು ಕೋಟಿಗಟ್ಟಲೆ ರೂ. ಹಣಕಾಸು ವಂಚಿಸಿದ ಹಾಗೂ ಅವರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಆರೋಪಿಗಳನ್ನು ಬಂಧಿಸಲಾಗಿದೆ.

VISTARANEWS.COM


on

crime news
ಆರೋಪಿಗಳಾದ ಮನೋಜ್‌, ಕುಮಾರ್‌, ಆದಿತ್ಯ, ರಂಜಿತ್‌, ಶ್ರೀಕಾಂತ ರೆಡ್ಡಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೈದರಾಬಾದ್ ಮೂಲದ ಸಾಫ್ಟ್‌ವೇರ್ ಕಂಪನಿ ಮಾಲೀಕರೊಬ್ಬರಿಗೆ, ಮೈಸೂರು ರಾಜವಂಶಸ್ಥ ತಾನು ಎಂದು ಕೋಟಿಗಟ್ಟಲೆ ರೂ. ಹಣಕಾಸು ವಂಚಿಸಿದ ಹಾಗೂ ಅವರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಆರೋಪಿಗಳನ್ನು ಬಂಧಿಸಲಾಗಿದೆ.

ಹೈದರಾಬಾದ್‌ನ ನಾಗ ರಮಣೇಶ್ವರ ಎಂಬ ಸಾಫ್ಟ್‌ವೇರ್ ಕಂಪನಿ ಮಾಲೀಕ ವಂಚನೆಗೆ ಹಾಗೂ ಹಲ್ಲೆಗೀಡಾಗಿದ್ದಾರೆ. ಸಾಫ್ಟ್‌ವೇರ್ ಕಂಪನಿ ಡೆವಲಪ್ ಮಾಡಲು ನಾಗ ರಮಣೇಶ್ವರ್ ಸಾಲದ ಮೊರೆ ಹೋಗಿದ್ದರು. ಅವರನ್ನು ಈ ವಿಚಾರಕ್ಕೆ ಸಂಪರ್ಕಿಸಿದ್ದ ಕುಮಾರ್ ಎಂಬ ಮಧ್ಯವರ್ತಿ ಮನೋಜ್ ಎಂಬಾತನನ್ನು ಪರಿಚಯಿಸಿದ್ದ. ತಾನು ʻಮನೋಜ್‌ ಅರಸುʼ ಎಂದು, ಮೈಸೂರು ರಾಜವಂಶಸ್ಥನೆಂದು ಪರಿಚಯಿಸಿಕೊಂಡಿದ್ದ. ಅನುಮಾನ ಬರದಂತೆ ರಾಜನ ವೇಷಭೂಷಣದಲ್ಲಿ, ಮೈ ತುಂಬ ಬಂಗಾರ, ರೇಷ್ಮೆ ಬಟ್ಟೆ ಧರಿಸಿ ಕೈಯಲ್ಲಿ ಕೋಲು ಹಿಡಿದು ಬಿಲ್ಡಪ್ ಕೊಟ್ಟೇ ಭೇಟಿಯಾಗಿದ್ದ!

ಮನೋಜ್‌ನಿಂದ ಲೋನ್ ಕೊಡಿಸುತ್ತೇವೆಂದು, ಅದಕ್ಕೆ ಮೊತ್ತದ ಹತ್ತು ಪರ್ಸೆಂಟ್ ಕಮೀಷನ್ ನೀಡಬೇಕು ಎಂದು ಸಾಲ ನೀಡುವ ಮೊದಲೇ ಆರೋಪಿಗಳು ಹಣ ಪಡೆದಿದ್ದರು. 20 ಕೋಟಿಗೆ ಎರಡು ಕೋಟಿಯಂತೆ ಕಮೀಷನ್ ಪಡೆದಿದ್ದರು. ಕೊನೆಗೆ ಲೋನ್ ಕೊಡಿಸದ ಹಿನ್ನೆಲೆಯಲ್ಲಿ ಹಣ ವಾಪಸ್ ನೀಡುವಂತೆ ನಾಗ ರಮಣೇಶ್ವರ್ ಒತ್ತಡ ಹಾಕಿದಾಗ, ಇವತ್ತು ಕೊಡುತ್ತೇವೆ ನಾಳೆ ಕೊಡುತ್ತೇವೆ ಎಂದು ಹೈದರಾಬಾದ್- ಬೆಂಗಳೂರು ರೌಂಡ್ ಹೊಡೆಸಿದ್ದರು. 10ಕ್ಕು ಹೆಚ್ಚು ಬಾರಿ ವಿಮಾನದಲ್ಲಿ ಬೆಂಗಳೂರಿಗೆ ಅಲೆದಾಡಿ ನಾಗ ರಮಣೇಶ್ವರ್ ಸುಸ್ತಾಗಿದ್ದರು.

ಇದನ್ನೂ ಓದಿ | Murder case | ಕಾಲಿಗೆ ಹಗ್ಗ ಕಟ್ಟಿ ಕೆರೆಗೆ ಎಸೆದು ಯುವಕನ ಕೊಲೆ: ಮಾನವ ಹಕ್ಕು ಹೋರಾಟಗಾರನಾ?

ಕೊನೆಗೆ ಹಣ ವಾಪಸ್ಸು ನೀಡದ ಹಿನ್ನೆಲೆಯಲ್ಲಿ ಹೈದರಾಬಾದಿನಲ್ಲಿ ದೂರು ನೀಡುವುದಾಗಿ ರಮಣೇಶ್ವರ ಎಚ್ಚರಿಕೆ ನೀಡಿದಾಗ, ಹಣ ಕೊಡುತ್ತೇವೆಂದು ಆರೋಪಿಗಳು ಬೆಂಗಳೂರಿಗೆ ಕರೆಸಿಕೊಂಡಿದ್ದರು. ಫೋರಂ ಸೆಂಟರ್‌ ಹೋಟೆಲ್‌ನಲ್ಲಿ ತಂಗಿದ್ದ ರಮಣೇಶ್ವರ್‌ರನ್ನು ಬೂದಿಗೆರೆಗೆ ಬರಲು ಸೂಚಿಸಿ, ಮಾರ್ಗಮಧ್ಯೆ ಗೊಲ್ಲಹಳ್ಳಿ ಎಂಬಲ್ಲಿ ಕಾರು ತಡೆದು ರಮಣೇಶ್ವರ್ ಮೇಲೆ ಹಲ್ಲೆ ನಡೆಸಿದ್ದರು. ಕಾರಿನಿಂದ ಎಳೆದುಹಾಕಿ ಕಬ್ಬಿಣದ ರಾಡ್‌ಗಳಿಂದ ಮನಸೋ ಇಚ್ಛೆ ಬಡಿದಿದ್ದರು. ಎರಡೂ ಕಾಲುಗಳನ್ನು ಫುಟ್‌ಪಾತ್ ಸ್ಲಾಬ್ ಮೇಲೆ ಇಟ್ಟು ಕಾಲಿನ ಮೂಳೆ ಪುಡಿಯಾಗುವಂತೆ ಹಲ್ಲೆ ಮಾಡಿದ್ದರಿಂದ, ರಮಣೇಶ್ವರರ ಎರಡೂ ಕಾಲು ಮುರಿದಿತ್ತು. ಅದನ್ನು ಖಚಿತಪಡಿಸಿಕೊಂಡು, ಇನ್ನೊಮ್ಮೆ ಹಣ ಕೇಳಿದರೆ ಜೀವ ಉಳಿಯುವುದಿಲ್ಲ ಎಂದು ಬೆದರಿಕೆ ಹಾಕಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಬಾಗಲೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ದಲ್ಲಾಳಿ ಕುಮಾರ್, ರಾಜವಂಶಸ್ಥನೆಂದು ಹೇಳಿಕೊಂಡಿದ್ದ ಮನೋಜ್ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ದಲ್ಲಾಳಿ ಕುಮಾರ್‌ ಹೈದರಾಬಾದಿನಲ್ಲೇ ತಲೆಮರೆಸಿಕೊಂಡಿದ್ದ. ಸದ್ಯ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ.

ಇದನ್ನೂ ಓದಿ | Moral policing | ಬಸ್ಸಿನಲ್ಲಿ ಮೈ ತಾಗಿದ ವಿಚಾರದಲ್ಲಿ ತಗಾದೆ: ಮುಸ್ಲಿಂ ಕೂಲಿ ಕಾರ್ಮಿಕನ ಮೇಲೆ ಯದ್ವಾತದ್ವಾ ಹಲ್ಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ; ಹಾಡ ಹಗಲೇ ಯುವತಿಗೆ ಅನ್ಯಕೋಮಿನ ಯುವಕರಿಂದ ಕಿರುಕುಳ

Viral News: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಲೇಟೆಸ್ಟ್‌ ಉದದಾಹರಣೆ ಈ ಘಟನೆ. ಹಾಡ ಹಗಲೇ ರಸ್ತೆಯ ಪಕ್ಕ ನಿಂತಿದ್ದ ಯುವತಿಗೆ ಇಬ್ಬರು ಮುಸ್ಲಿಂ ಯುವಕರು ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿದ ಘಟನೆ ನಡೆದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಸದ್ಯ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇದು ಬಿ.ಟಿ.ಎಂ‌. ಲೇ ಔಟ್‌ನಲ್ಲಿ ನಡೆದಿರುವ ಘಟನೆ ಎನ್ನಲಾಗಿದ್ದು, ಮಹಿಳೆಯರ ಸುರಕ್ಷತೆ ಬಗ್ಗೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral News
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾತ್ರಿ ಬಿಡಿ ಹಗಲಿನಲ್ಲೇ ಮಹಿಳೆಯರು, ಯುವತಿಯರು, ಮಕ್ಕಳು ಓಡಾಡಲು ಭಯಪಡುವಂತಾಗಿದೆ. ಇದಕ್ಕೆ ಲೇಟೆಸ್ಟ್‌ ಉದದಾಹರಣೆ ಈ ಘಟನೆ. ಹಾಡ ಹಗಲೇ ರಸ್ತೆಯ ಪಕ್ಕ ನಿಂತಿದ್ದ ಯುವತಿಗೆ ಇಬ್ಬರು ಮುಸ್ಲಿಂ ಯುವಕರು ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿದ ಘಟನೆ ನಡೆದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಸದ್ಯ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral News).

ರಸ್ತೆ ಬದಿಯಲ್ಲಿ ಸ್ಕೂಟಿ‌ ನಿಲ್ಲಿಸಿಕೊಂಡು ನಿಂತಿದ್ದ ಯುವತಿ ಬಳಿಗೆ ಬಂದ ಸ್ಕೂಟರ್‌ನಲ್ಲಿದ್ದ ಇಬ್ಬರು ಯುವಕರು ಹಿಂದಿಯಲ್ಲಿ ನಿಂದಿಸಿದ್ದಾರೆ. ಇದು ಬಿ.ಟಿ.ಎಂ‌. ಲೇ ಔಟ್‌ನಲ್ಲಿ ನಡೆದಿರುವ ಘಟನೆ ಎನ್ನಲಾಗಿದ್ದು, ಮಹಿಳೆಯರ ಸುರಕ್ಷತೆ ಬಗ್ಗೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

ರಸ್ತೆಯ ಪಕ್ಕ ಸ್ಕೂಟಿ ನಿಲ್ಲಿಸಿ ಯುವತಿ ತಮ್ಮ ಪಾಡಿಗೆ ತಾವು ನಿಂತಿದ್ದರು. ಅಲ್ಲಿಗೆ ಸ್ಕೂಟರ್‌ನಲ್ಲಿ ಬಂದ ಇಬ್ಬರು ಮುಸ್ಲಿಂ ಯುವಕರು, ʼʼಕುಡಿದ ನಶೆಯಲ್ಲಿ ರೋಡ್ ಶೋ ಮಾಡುತ್ತೀಯಾ?ʼʼ ಎಂದು ಬೈದಿದ್ದಾರೆ. ಯುವಕರ ಅವಾಚ್ಯ ನಿಂದನೆಯಿಂದ ಒಂದು ಕ್ಷಣ ಗಾಬರಿಗೊಳಗಾದ ಯುವತಿ ಬಳಿಕ ಅವರನ್ನು ದಿಟ್ಟವಾಗಿ ಎದುರಿಸಿದ್ದಾರೆ. ಅವರನ್ನೇ ಪ್ರಶ್ನಿಸಿದ್ದಾರೆ. ಇದರಿಂದ ಕೆರಳಿದ ಪುಂಡರು ಅಶ್ಲೀಲ ಪದಗಳಿಂದ ಯುವತಿಯನ್ನು ಹಿಂದಿಯಲ್ಲಿ ನಿಂದಿಸಿದ್ದಾರೆ. ಹೀಗೆ ಯುವಕರು ಕೆಲಕಾಲ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಸದ್ಯ ಈ ವಿಡಿಯೊ ವೈರಲ್ ಆಗಿದ್ದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಆದರೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಹೀಗೆ ಅನುಚಿತವಾಗಿ ವರ್ತಿಸುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

ನಡುಬೀದಿಯಲ್ಲಿ ಲೈಂಗಿಕ ಕಿರುಕುಳ

ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲೇ ಬಿಹಾರ ಮೂಲದ ದಂಪತಿಗೆ ಲೈಂಗಿಕ ಕಿರುಕುಳದ ಕರಾಳ ಅನುಭವ ಆಗಿದ್ದು, ಅದರಿಂದ ಪಾರಾಗಲು ಇಬ್ಬರೂ ಒದ್ದಾಡಿದ್ದಾರೆ. ನಗರದಲ್ಲಿ ಪದೇ ಪದೆ ಬೆಳಕಿಗೆ ಬರುತ್ತಿರುವ ಹೆಣ್ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಇದೂ ಒಂದು ಸೇರ್ಪಡೆ. ರಾತ್ರಿ ಸಮಯದಲ್ಲಿ ಯುವತಿಯೊಬ್ಬಳಿಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ್ದಾರೆ. ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ಯುವತಿ ಹಾಗೂ ಆಕೆಯ ಪತಿ ಆರೋಪಿಸಿದ್ದಾರೆ. ಕೊಡಿಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ಒಂದು ವಾರದ ಹಿಂದೆ 10:30ರ ಸುಮಾರಿಗೆ ನಡೆದ ಘಟನೆ ಇದು.

ಜತೆಗಿದ್ದ ದಂಪತಿಯ ಬಳಿ ಬಂದ ಮೂರ್ನಾಲ್ಕು ಪುಂಡರು, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಯುವತಿಗೆ ಒತ್ತಾಯ ಮಾಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್ ಮಾಡುವ ಬೆದರಿಕೆ ಹಾಕಿದ್ದಾರೆ. ಈ ದಂಪತಿ ಬಿಹಾರ ಮೂಲದವರಾಗಿದ್ದು, ಈ ದಂಪತಿಗೆ ನಿನ್ನೆ ರಾತ್ರಿ ಕರಾಳ ಅನುಭವವಾಗಿದೆ. ಹೆಂಡತಿಯನ್ನು ಕಳಿಸುವಂತೆ ಪುಂಡರು ಗಂಡನಿಗೆ ಬೆದರಿಕೆ ಹಾಕಿದ್ದಾರೆ. ಗಂಡನ ಸ್ನೇಹಿತನಿಂದಲೇ ಕೃತ್ಯ ನಡೆದಿದೆ. ಹೀಗಾಗಿ ಸದ್ಯ ಬೆಂಗಳೂರಿಗರು ಒಬ್ಬರೇ ಓಡಾಡಲು ಭಯಪಡುವಂತಾಗಿದೆ.

ಇದನ್ನೂ ಓದಿ: Physical Abuse: ನಡುಬೀದಿಯಲ್ಲಿ ಲೈಂಗಿಕ ಕಿರುಕುಳ, ಹೆಂಡತಿಯನ್ನು ಕಳಿಸುವಂತೆ ಗಂಡನಿಗೆ ಬೆದರಿಕೆ

Continue Reading

ಕ್ರೈಂ

Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು

Dharwad News: ಬಸವ ಜಯಂತಿ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ನಡೆದ ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಬಾಬುಸಾಬ ಮಕಾಸಿ ಎಂದು ಗುರುತಿಸಲಾಗಿದೆ. ರಥಕ್ಕೆ ಎಸೆಯುವ ಉತ್ತುತ್ತಿ ಅರಸಿಕೊಳ್ಳುವ ವೇಳೆ ಬಾಬುಸಾಬ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ವೇಳೆ ರಥದ ಚಕ್ರ ಅವರ ಮೇಲೆ ಹರಿದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

VISTARANEWS.COM


on

Dharwad News
Koo

ಧಾರವಾಡ: ಬಸವ ಜಯಂತಿ (Basava Jayanti) ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಬಸವೇಶ್ವರ ಜಾತ್ರೆಯಲ್ಲಿ ದುರಂತವೊಂದು ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ (Dharwad News). ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಬಾಬುಸಾಬ ಮಕಾಸಿ ಎಂದು ಗುರುತಿಸಲಾಗಿದೆ.

ಮಜ್ಜಿಗುಡ್ಡ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ಆಯೋಜಿಸಲಾಗಿತ್ತು. ಸಂಜೆ ನಡೆದ ರಥೋತ್ಸವ ವೇಳೆ ರಥಕ್ಕೆ ಎಸೆಯುವ ಉತ್ತುತ್ತಿ ಅರಸಿಕೊಳ್ಳುವ ವೇಳೆ ಬಾಬುಸಾಬ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ವೇಳೆ ರಥದ ಚಕ್ರ ಅವರ ಮೇಲೆ ಹರಿದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ದುರ್ಮರಣ

ಕೆಲವು ದಿನಗಳ ಹಿಂದೆ ಕಲಬುರಗಿಯಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು. ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಿಬ್ಬಂದಿ ಮೃತಪಟ್ಟಿದ್ದರು. ಕಲಬುರಗಿ ನಗರದಲ್ಲಿ ನಡೆದ ಶ್ರೀ ಶರಣ ಬಸವೇಶ್ವರ ಜಾತ್ರಾ ಮಹೋತ್ಸವದ ಭಾಗವಾಗಿ ಆಯೋಜಿಸಿದ್ದ ಉಚ್ಚಾಯಿ ರಥೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಿಬ್ಬಂದಿ, ಬೀದರ್ ಜಿಲ್ಲೆ ಇಟಗಾ ಗ್ರಾಮದ ರಾಮು ಸಿದ್ದಪ್ಪ (28) ದುರ್ಮರಣ ಹೊಂದಿದ್ದರು. ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಉಂಟಾದ ಗದ್ದಲದ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ

ಬೆಂಗಳೂರು: ಒಂಟಿ ಮಹಿಳೆಯ ಕತ್ತು ಹಿಸುಕು ಕೊಲೆ‌ ಮಾಡಿರುವ ಘಟನೆ ನಗರದ ಹೊರವಲಯದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ಮನೆ ಬಾಡಿಗೆ ಕೇಳುವ ನೆಪದಲ್ಲಿ ದುಷ್ಕರ್ಮಿಯೊಬ್ಬ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಿವ್ಯಾ (32) ಕೊಲೆಯಾದ ಮಹಿಳೆ. ಮಹಿಳೆಯ ಗಂಡ ಗುರುಮೂರ್ತಿ ಕೆಲಸಕ್ಕೆಂದು ಸಲೂನ್‌ ಹೋಗಿದ್ದರು. ಈ ವೇಳೆ ಆರೋಪಿ, ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಕುತ್ತಿಯಲ್ಲಿದ್ದ ಚೈನ್ ಕದ್ದು ಪರಾರಿಯಾಗಿದ್ದಾನೆ. ಮಹಿಳೆಯ ಮೃತದೇಹವನ್ನು ಆರ್.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

ಮದುವೆಗೆ ನೋ ಎಂದ ಪ್ರಿಯಕರ; ಮನನೊಂದು ಯುವತಿ ಆತ್ಮಹತ್ಯೆ‌

ಕಲಬುರಗಿ: ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಮನನೊಂದು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೋಟನೂರು (ಡಿ) ಬಳಿ ಶುಕ್ರವಾರ ನಡೆದಿದೆ. ಪುಷ್ಪಾ (26) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ ಪದವಿ ವ್ಯಾಸಂಗ ಮುಗಿಸಿದ್ದು, ಆಳಂದ ತಾಲೂಕಿನ ಕೌಲಗಾ ಗ್ರಾಮದಿಂದ ಕಲಬುರಗಿ ನಗರಕ್ಕೆ ಬಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು. ಹೀಗಾಗಿ ಕೋಟನೂರು ಬಳಿ ಬಾಡಿಗೆ ರೂಮ್‌ ಪಡೆದು ವಾಸವಾಗಿದ್ದಳು. ಈಕೆಯು ಕಳೆದ ನಾಲ್ಕು‌ ವರ್ಷದಿಂದ ಕಲಬುರಗಿಯ ಗಾಂಧಿನಗರದ ನಿವಾಸಿ ಕಿರಣ್ ಎಂಬುವರೊಂದಿಗೆ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.

Continue Reading

ಕ್ರೈಂ

Murder Case: ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಆರೋಪಿಯ ಬಂಧನ

Murder Case: ತನ್ನ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯೊಬ್ಬಳನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ಗುರುವಾರ ನಡೆದಿತ್ತು. ಬಾಲಕಿಯನ್ನು ಹತ್ಯೆ ಮಾಡಿ ಪ್ರಕಾಶ್‌ ತಲೆ ಮರೆಸಿಕೊಂಡು ಕಾಡಿನಲ್ಲಿ ಅಡಗಿ ಕುಳಿತ್ತಿದ್ದ.

VISTARANEWS.COM


on

Murder Case
Koo

ಸೋಮವಾರಪೇಟೆ: ತನ್ನ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯೊಬ್ಬಳನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ (Murder Case) ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ಗುರುವಾರ ನಡೆದು ರಾಜ್ಯವೇ ಬೆಚ್ಚಿ ಬಿದ್ದಿತ್ತು. ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಮೀನಾಳನ್ನು ಕೊಲೆ ಮಾಡಿದ್ದ ಆರೋಪಿ ಪ್ರಕಾಶ್‌ ಪತ್ತೆಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಪ್ರಕಾಶ್‌ ಕಾಡಿನಲ್ಲಿ ಪತ್ತೆಯಾಗಿದ್ದಾನೆ. ಸದ್ಯ ಆತನನ್ನು ಸೋಮವಾರಪೇಟೆ ಠಾಣೆಗೆ ಪೊಲೀಸರು ಕರೆ ತರುತ್ತಿದ್ದಾರೆ. ಬಾಲಕಿಯನ್ನು ಹತ್ಯೆ ಮಾಡಿದ ಬಳಿಕ ಈತ ರುಂಡ ಹಾಗೂ ಕೋವಿಯೊಂದಿಗೆ ಪರಾರಿಯಾಗಿದ್ದ. ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿತ್ತು. ಬಳಿಕ ಪೊಲೀಸರು ಸ್ಪಷ್ಟನೆ ನೀಡಿ ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಸಿದ್ದರು. ಇದೀಗ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಏನಿದು ಪ್ರಕರಣ?

ಮೀನಾ ಇನ್ನೂ ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಆಗಿದ್ದಳು. ಹೀಗಾಗಿ ಗುರುವಾರ ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿತ್ತು. ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ಪ್ರಕಾಶ್‌ ಮೀನಾಳನ್ನು ಎಳೆದೊಯ್ದು ಕತ್ತು ಕೊಯ್ದಿದ್ದ. ನಂತರ ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದ. ಭೀಕರ ಘಟನೆಯು ಸುತ್ತಲಿನ ಜನರನ್ನು ಬೆಚ್ಚಿ ಬೀಳಿಸಿತ್ತು.

ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮೀನಾ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಪ್ರಕಾಶ್‌ ಕೊಲೆ ಮಾಡಿದ್ದ.

ಬಾಲಕಿಯನ್ನು ಆರೋಪಿ ಪ್ರಕಾಶ್‌ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದ.

ಎಸ್​ಎಸ್​ಎಲ್​ಸಿ ಪಾಸಾಗಿದ್ದ ಬಾಲಕಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು.

ಇದನ್ನೂ ಓದಿ: Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

Continue Reading

ಕರ್ನಾಟಕ

Prajwal Revanna Case: 36 ಸೆಕೆಂಡ್‌‌ಗಳ ಮತ್ತೊಂದು ಆಡಿಯೊ ಬಾಂಬ್; ಪ್ರಜ್ವಲ್ ಕೇಸ್‌‌ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್!

Prajwal Revanna Case: ಹಾಸನದಲ್ಲಿ ಅಶ್ಲೀಲ ವಿಡಿಯೊ ಹರಿಬಿಟ್ಟವರ ಬಗ್ಗೆ ಮಾಹಿತಿ ಬಹಿರಂಗ ಮಾಡುತ್ತೇನೆ ಎಂದಿದ್ದ ವಕೀಲ ದೇವರಾಜೇಗೌಡ, ಇದೀಗ ಮತ್ತೊಂದು ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಅಶ್ಲೀಲ ವಿಡಿಯೊ ಹರಿಬಿಟ್ಟವರ ಬಗ್ಗೆ ಮಾಹಿತಿ ಬಹಿರಂಗ ಮಾಡುತ್ತೇನೆ ಎಂದಿದ್ದ ವಕೀಲ ದೇವರಾಜೇಗೌಡ, ಇದೀಗ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ್ದಾರೆ. ಇದರಿಂದ ಪ್ರಜ್ವಲ್‌ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದ್ದು, ವೈರಲ್‌ ಆಗಿರುವ 36 ಸೆಕೆಂಡ್‌ಗಳ ಆಡಿಯೊದಲ್ಲಿ ಏನಿದೆ ಎಂಬ ಮಾಹಿತಿ ಇಲ್ಲಿದೆ.

ಇತ್ತೀಚೆಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವಕೀಲ ದೇವರಾಜೇಗೌಡ, ಹಾಸನ ಪೆನ್‌ಡ್ರೈವ್‌ ಪ್ರಕರಣದ ಹಿಂದಿನ ಕಥಾನಾಯಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಎಂದು ಗಂಭೀರ ಆರೋಪ ಮಾಡಿದ್ದರು. ನಂತರ ಇದಕ್ಕೆ ಸಂಬಂಧಪಟ್ಟಂತೆ ಮತ್ತಷ್ಟು ಸಾಕ್ಷ್ಯ ನೀಡುವುದಾಗಿ ಹೇಳಿದ್ದರು. ಇದೀಗ ಪ್ರಕರಣದ ಬಗ್ಗೆ ಮಂಡ್ಯ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಜತೆ ಮಾತುಕತೆಯ ಆಡಿಯೊವನ್ನು ಹರಿಬಿಟ್ಟಿದ್ದಾರೆ.

ಒಟ್ಟು ಮೂರು ಆಡಿಯೊಗಳನ್ನು ದೇವರಾಜೇಗೌಡ ರಿಲೀಸ್‌ ಮಾಡಿದ್ದು, ಇದರಲ್ಲಿ ಹನಿಟ್ರ್ಯಾಪ್‌ ಮಾಡಿದ್ದರು ಎನ್ನಲಾಗಿದ್ದ ಮಹಿಳೆಯ ಗಂಡ ಮೋಹನ್‌ ಜತೆಗಿನ ಮಾತುಕತೆಯ ವಿಡಿಯೊ ಒಂದು ಇದ್ದು, ಉಳಿದೆರಡು ಆಡಿಯೊಗಳು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಜತೆ ಮಾತನಾಡಿರುವುದಾಗಿದೆ.

ಇದನ್ನೂ ಓದಿ | Prajwal Revanna Case: ರೇವಣ್ಣ ಬಸವನಗುಡಿ ನಿವಾಸದಲ್ಲಿ 2ನೇ ಬಾರಿ ಸ್ಥಳ ಮಹಜರು

ಆಡಿಯೊದಲ್ಲಿ ಏನಿದೆ?

ಆಡಿಯೊದಲ್ಲಿ ಮೊದಲಿಗೆ ನನ್ನನ್ನು ಭೇಟಿ ಆಗಿದ್ದೆ ಎಂದು ದೇವರಾಜೇಗೌಡ ಹೇಳಿರುವುದು ಯಾಕೆ ಎಂದು ಡಿಕೆಶಿ ತಮ್ಮ ಬಳಿ ಕೇಳಿರುವುದಾಗಿ ಮಾಜಿ ಸಂಸದ ಶಿವರಾಮೇಗೌಡ ಹೇಳುತ್ತಾರೆ. ಈ ವೇಳೆ ವಕೀಲ ದೇವರಾಜೇಗೌಡ, ನಮಗೆ ಏನಾದರೂ ಎಸ್‌ಐಟಿಯವರು ನೋಟಿಸ್‌ ಕೊಡತ್ತಾರಾ ಎಂದು ಪ್ರಶ್ನಿಸಿದ್ದಾರೆ. ಆಗ ಕೊಡ್ತಾರೆ, ಕೊಡ್ತಾರೆ ಎಂದ ಶಿವರಾಮೇಗೌಡ, ಎಸ್‌ಐಟಿ ಅಧಿಕಾರಿಗಳ ಮುಂದೆ ಡಿಕೆ ಬಗ್ಗೆ ನೀನು ಚಕಾರ ಎತ್ತಬೇಡ. ನಾನು ಇವತ್ತಿನಿಂದ ಅಲ್ಲ, ಬಹಳ ವರ್ಷಗಳಿಂದ ರೇವಣ್ಣ ಕುಟುಂಬದ ವಿರುದ್ಧ ಕೋರ್ಟ್‌ನಲ್ಲಿ ಹೋರಾಟ ಮಾಡುತ್ತಿದ್ದೇನೆ ಎಂದು ಹೇಳು ಎಂದು ಶಿವರಾಮೇಗೌಡ ಕಿವಿಮಾತು ಹೇಳಿದ್ದಾರೆ.

ಮತ್ತೊಂದು ಆಡಿಯೊದಲ್ಲಿ ತಮಗೆ ಹನಿಟ್ರ್ಯಾಪ್‌ ಮಾಡಿದ್ದರು ಎನ್ನಲಾದ ಮಹಿಳೆಯ ಗಂಡ ಮೋಹನ್‌ ಎಂಬುವವರ ಜತೆ ದೇವರಾಜೇಗೌಡ ಮಾತನಾಡಿದ್ದಾರೆ. ನಿಮ್ಮ ಹೆಂಡತಿ, ಅವರ ಜತೆ ಸೇರಿಕೊಂಡು ನನ್ನನ್ನು ಹನಿಟ್ರ್ಯಾಪ್‌ ಮಾಡಿದ್ದಾಳೆ, ಅವಳ ಜತೆ ಡಿವೋರ್ಸ್‌ ಆಗಿಲ್ಲವಾ ಎಂದು ಪ್ರಶ್ನಿಸಿದ್ದಾರೆ. ನಮ್ಮನ್ನು ಮನೆಯಿಂದ ಆಚೆ ಹಾಕಿ, ಹಾಸನದಲ್ಲಿ ನಮ್ಮ ಆಸ್ತಿಯನ್ನು ಅವಳ ಹೆಸರಿಗೆ ಮಾಡಿಕೊಂಡಿದ್ದಾಳೆ. ನಾನು ಹೇಗೋ ಜೀವನ ಮಾಡಿಕೊಂಡಿದ್ದೇನೆ ಎಂದು ಮೋಹನ್‌ ಹೇಳಿದ್ದಾರೆ.

ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ವಶಕ್ಕೆ

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣ ಸಂಬಂಧ ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಿರಿಯೂರಿನಲ್ಲಿ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಸ್‌ಐಟಿಗೆ ಒಪ್ಪಿಸಲು ತಯಾರಿ ನಡೆಸಿದ್ದಾರೆ. ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್‌ ದಾಖಲಾಗಿತ್ತು.

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೇವರಾಜೇಗೌಡ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಪತಿಯ ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ವಾಟ್ಸ್​ಆ್ಯಪ್​ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪ ದೇವರಾಜ್ ವಿರುದ್ಧ ಕೇಳಿ ಬಂದಿತ್ತು. ಅದೇ ರೀತಿ ಬಳಿಕ ಲೈಂಗಿಕವಾಗಿ ದುರ್ಬಳಕೆ ಮಾಡಿದ ಆರೋಪವೂ ಕೇಳಿ ಬಂದಿತ್ತು.

ಮಹಿಳೆಗೆ ಫೋನ್ ಮಾಡಿ ತಾವು ಜೊತೆಯಲ್ಲಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದಾಗಿ ಬೆದರಿಕೆ ಹಾಕಿದ ಆರೋಪವೂ ದಾಖಲಾಗಿತ್ತು. ಅದೇ ರೀತಿ ವಿಡಿಯೋ ಕಾಲ್‌ ಮಾಡಿ‌ ಖಾಸಗಿ ಅಂಗ ಪ್ರದರ್ಶನದ ಮಾಡಿರುವ ಆರೋಪವೂ ದಾಖಲಾಗಿತ್ತು.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಡ್ರೈವರ್‌ ಮೊಬೈಲ್‌ಗೆ ಲೀಕ್‌ ಆಗಿದ್ದು ಹೀಗೆ!

ತಾನು ಹೇಳಿದ ಹಾಗೆ ಕೇಳಬೇಕು. ಇಲ್ಲದೇ ಹೋದರೆ ಪತಿಯ ಜೀವಕ್ಕೆ ಪಾಯ ತಂದೊಡ್ಡುವುದಾಗಿ ದೇವರಾಜೇಗೌಡ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಬೆಂಬಲಿಗರನ್ನು ಕಳುಹಿಸಿ ಜೀವ ಬೆದರಿಕೆ ಹಾಕಿದ ಆರೋಪವೂ ಕೇಳಿ ಬಂದಿತ್ತು. ಹೀಗಾಗಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.


Continue Reading
Advertisement
K S Rajanna
ದೇಶ51 mins ago

K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

Viral News
ಕ್ರೈಂ1 hour ago

ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ; ಹಾಡ ಹಗಲೇ ಯುವತಿಗೆ ಅನ್ಯಕೋಮಿನ ಯುವಕರಿಂದ ಕಿರುಕುಳ

CAA
ದೇಶ2 hours ago

CAA: ಕೇಂದ್ರ ಸೂಚನೆ ಕೊಟ್ಟ ಕೂಡಲೇ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ; ಸಿಎಂ ಮೋಹನ್‌ ಯಾದವ್‌

Heavy Rain
ಕರ್ನಾಟಕ2 hours ago

Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

Dharwad News
ಕ್ರೈಂ2 hours ago

Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು

cyber crime
ದೇಶ2 hours ago

Cyber crime: ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಬ್ಲಾಕ್‌!

Murder Case
ಕ್ರೈಂ3 hours ago

Murder Case: ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಆರೋಪಿಯ ಬಂಧನ

karnataka Weather Forecast
ಮಳೆ4 hours ago

Karnataka Weather : ವಾರಾಂತ್ಯದಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಅಬ್ಬರ

Joe Biden
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಭಾರತದ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ ಖಂಡನೀಯ

Cotton Candy
ಆರೋಗ್ಯ4 hours ago

Cotton Candy: ಕಾಟನ್‌ ಕ್ಯಾಂಡಿ ಯಾಕೆ ಎಷ್ಟೊಂದು ಅಪಾಯಕಾರಿ ಗೊತ್ತೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ20 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ22 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ23 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌