Crime news: ಸಹೋದ್ಯೋಗಿ ಪತ್ನಿಗೆ ವಿಡಿಯೋ ಕಾಲ್‌ ಮಾಡಬೇಕೆಂದ, ನಿರಾಕರಿಸಿದಾಗ ಎದೆಗೆ ಕತ್ತರಿಯಿಂದ ಇರಿದ! - Vistara News

ಕ್ರೈಂ

Crime news: ಸಹೋದ್ಯೋಗಿ ಪತ್ನಿಗೆ ವಿಡಿಯೋ ಕಾಲ್‌ ಮಾಡಬೇಕೆಂದ, ನಿರಾಕರಿಸಿದಾಗ ಎದೆಗೆ ಕತ್ತರಿಯಿಂದ ಇರಿದ!

ಸಹೋದ್ಯೋಗಿ ತನ್ನ ಪತ್ನಿಯ ಜತೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ವಿಡಿಯೋ ಕಾಲ್‌ ಮಾಡುವಂತೆ ಬೇಡಿಕೆಯಿಟ್ಟ, ಆತ ನಿರಾಕರಿಸಿದಾಗ ಅವನ ಎದೆಗೇ ಕತ್ತರಿಯಿಂದ ಇರಿದ ಘಟನೆ ನಡೆದಿದೆ.

VISTARANEWS.COM


on

suresh crime
ಆರೋಪಿ ಸುರೇಶ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಹೋದ್ಯೋಗಿ ತನ್ನ ಪತ್ನಿಯ ಜತೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ವಿಡಿಯೋ ಕಾಲ್‌ ಮಾಡುವಂತೆ ಬೇಡಿಕೆಯಿಟ್ಟ, ಆತ ನಿರಾಕರಿಸಿದಾಗ ಅವನ ಎದೆಗೇ ಕತ್ತರಿಯಿಂದ ಇರಿದ ಘಟನೆ ನಡೆದಿದೆ.

ಹೆಚ್ಎಸ್ಆರ್ ಲೇಔಟ್‌ನ ಲೆನಿನ್ ಶೋ ರೂಂನಲ್ಲಿ ಈ ಘಟನೆ ನಡೆದಿದೆ. ರಾಜೇಶ್ ಮಿಶ್ರಾ ಎಂಬವರಿಗೆ ಸುರೇಶ್‌ ಎಂಬಾತ ಕತ್ತರಿಯಿಂದ ಇರಿದಿದ್ದಾನೆ. ರಾಜೇಶ್ ಹಾಗೂ ಸುರೇಶ್ ಇಬ್ಬರೂ ಲೆನಿನ್ ಶೋರೂಂನಲ್ಲಿ ಕೆಲಸಗಾರರು. ರಾಜೇಶ್ ಮಿಶ್ರಾ ತನ್ನ ಪತ್ನಿಯ ಜೊತೆ ಫೋನ್‌ನಲ್ಲಿ ಮಾತಾನಾಡುತ್ತಿದ್ದ. ಆ ವೇಳೆ ನೀನು ವಿಡಿಯೋ ಕಾಲ್ ಮಾಡು, ನಾನು ಮಾತನಾಡುತ್ತೇನೆ ಎಂದು ಸುರೇಶ್ ಡಿಮ್ಯಾಂಡ್ ಮಾಡಿದ್ದ.

ಇದರಿಂ ಕೋಪಕ್ಕೊಳಗಾದ ರಾಜೇಶ್ ಮಿಶ್ರ, ನನ್ನ ಪತ್ನಿ ಜೊತೆ ಮಾತಾಡೋದಕ್ಕೆ ನೀನ್ಯಾರೆಂದು ಪ್ರಶ್ನಿಸಿದ್ದಾನೆ. ಆ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಅಂಗಡಿಯಲ್ಲಿದ್ದ ಕತ್ತರಿ ತೆಗೆದು ರಾಜೇಶ್ ಮಿಶ್ರಾ ಎದೆಗೆ ಸುರೇಶ್‌ ಇರಿದಿದ್ದಾನೆ. ರಾಜೇಶ್ ಮಿಶ್ರಾ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೆಚ್‌ಎಸ್‌ಆರ್‌ ಲೇಔಟ್ ಠಾಣೆ ಪೊಲೀಸರು ಸುರೇಶ್‌ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Crime news: ನಗರದಲ್ಲಿ ಮತ್ತೆ ಪುಂಡರ ಹಾವಳಿ, ಬೀದಿಯಲ್ಲಿ ಥಳಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Road Accident: ಕುಡಿದ ಮತ್ತಿನಲ್ಲಿ ಕಾರು ಹರಿಸಿದ ಚಾಲಕ, ಒಬ್ಬನ ಸಾವು, ಇಬ್ಬರಿಗೆ ಗಾಯ

Road Accident: ಜಿಗಣಿ- ಬೆಂಗಳೂರು ಮುಖ್ಯರಸ್ತೆಯ ಜಂಗಲ್ ಪಾಳ್ಯ ಬಳಿ ಈ ಭೀಕರ ಅಪಘಾತ ನಡೆದಿದೆ. ಜಿಗಣಿ ಕಡೆಯಿಂದ ಬೆಂಗಳೂರು ಮಾರ್ಗವಾಗಿ ಹೋಗುತ್ತಿದ್ದ ಇಟಿಯೋಸ್‌ ಕಾರನ್ನು ಕುಡಿದ ಮತ್ತಿನಲ್ಲಿ ಚಲಾಯಿಸುತ್ತಿದ್ದ ಚಾಲಕ ಪಾದಚಾರಿಗಳ ಮೇಲೆ ಹರಿಸಿದ್ದಾನೆ.

VISTARANEWS.COM


on

Road Accident jigani anekal
Koo

ಆನೇಕಲ್: ಕುಡಿದ ಮತ್ತಿನಲ್ಲಿ (Drink and drive) ವ್ಯಕ್ತಿಯೊಬ್ಬ ಕಾರು ಚಲಾಯಿಸಿದ (Car Accident) ಪರಿಣಾಮ ಭೀಕರ ಅಪಘಾತ (Road Accident) ಸಂಭವಿಸಿದ್ದು, ಒಬ್ಬ ಸ್ಥಳದಲ್ಲಿಯೇ ಸಾವಿಗೀಡಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಜಿಗಣಿ- ಬೆಂಗಳೂರು ಮುಖ್ಯರಸ್ತೆಯ ಜಂಗಲ್ ಪಾಳ್ಯ ಬಳಿ ಈ ಭೀಕರ ಅಪಘಾತ ನಡೆದಿದೆ. ಜಿಗಣಿ ಕಡೆಯಿಂದ ಬೆಂಗಳೂರು ಮಾರ್ಗವಾಗಿ ಹೋಗುತ್ತಿದ್ದ ಇಟಿಯೋಸ್‌ ಕಾರನ್ನು ಕುಡಿದ ಮತ್ತಿನಲ್ಲಿ ಚಲಾಯಿಸುತ್ತಿದ್ದ ಚಾಲಕ ಪಾದಚಾರಿಗಳ ಮೇಲೆ ಹರಿಸಿದ್ದಾನೆ. ಪರಿಣಾಮ ಕುಮಾರ್ (40) ಎಂಬವರು ಮೃತಪಟ್ಟಿದ್ದಾರೆ. ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತ ನಡೆಸಿದ ಕುಡುಕ ಕಾರು ಚಾಲಕನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು, ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಕಸದ ಲಾರಿಗೆ ಇಬ್ಬರು ಬಲಿ

ಬೆಂಗಳೂರು: ರಾಜಧಾನಿಯಲ್ಲಿ ಬಿಬಿಎಂಪಿ ಕಸದ ಲಾರಿ ಮತ್ತೆರಡು ಬಲಿ ಪಡೆದುಕೊಂಡಿದೆ. ನಗರದ ಹೃದಯ ಭಾಗದ ಕೆಆರ್ ಸರ್ಕಲ್ ಬಳಿ ಈ ದುರ್ಘಟನೆ ನಡೆದಿದೆ.

ರಾತ್ರಿ 8.45ರ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ. ಪ್ರಶಾಂತ್ (25), ಬಯನ್ನಗಾರಿ ಶಿಲ್ಪ (27) ಮೃತ ದುರ್ದೈವಿಗಳು. ಪ್ರಶಾಂತ್ ಮೂಲತಃ ಬೆಂಗಳೂರಿನ ಬಾಣಸವಾಡಿಯ ಯುವಕ. ಶಿಲ್ಪ ಆಂಧ್ರ ಮೂಲದವಳು. ಪ್ರಶಾಂತ್ ಮತ್ತು ಯುವತಿ ಇಬ್ಬರು ಸಹೋದ್ಯೋಗಿಗಳಾಗಿದ್ದು, ಐಟಿಪಿಎಲ್ ಟಿಸಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪಿಜಿಯಲ್ಲಿ ವಾಸ ಮಾಡುತ್ತಿದ್ದ ಯುವತಿ ಶಿಲ್ಪ, ಊಟಕ್ಕೆ ಎಂದು ಹೊರಗೆ ಬಂದಾಗ ಅಪಘಾತವಾಗಿದೆ.

ಮೆಜೆಸ್ಟಿಕ್‌ದ ಕೆಆರ್ ಸರ್ಕಲ್ ಮಾರ್ಗವಾಗಿ ಇವರಿಬ್ಬರೂ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸಿಐಡಿ ಸಿಗ್ನಲ್ ಮಾರ್ಗದಿಂದ ಕೆಆರ್ ಸರ್ಕಲ್ ಕಡೆ ಕಸದ ಲಾರಿ ತೀವ್ರ ವೇಗದಿಂದ ಬಂದಿದೆ. ತಿರುವು ಇದ್ದ ಮಾರ್ಗದಲ್ಲಿ ಲಾರಿ ವೇಗವಾಗಿ ಬಂದ ಕಾರಣ ಕಸದ ಲಾರಿಯ ವೇಗದಿಂದ ತಪ್ಪಿಸಿಕೊಳ್ಳಲಾಗದೇ ಬೈಕ್‌ ಲಾರಿ ಕೆಳಗೆ ಸಿಲುಕಿಕೊಂಡಿದೆ.

ಮೃತರ ಮೇಲೆ ಹರಿದ ಕಸದ ಲಾರಿ ಸುಮಾರು 10 ಮೀಟರ್‌ನಷ್ಟು ದೂರ ದೇಹಗಳನ್ನು ಎಳೆದೊಯ್ದಿದೆ. ರಸ್ತೆ ಮೇಲೆ ರಕ್ತ ಚೆಲ್ಲಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಅಪಘಾತದ ಬಳಿಕ ಕಸದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಕೂಡಲೇ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗದಲ್ಲಿಯೇ ಇಬ್ಬರೂ ಮೃತ ಪಟ್ಟರು. ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ಒಯ್ಯಲಾಗಿದೆ.

ಸ್ಥಳಕ್ಕೆ ಹಲಸೂರು ಗೇಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗನನ್ನು ಕಳೆದುಕೊಂಡು ತಂದೆ ತಾಯಿ ಕಣ್ಣೀರು ಹಾಕಿದ್ದು, ಆಸ್ಪತ್ರೆಯಲ್ಲಿ ಪ್ರಶಾಂತ್ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. “ಬಿಬಿಎಂಪಿ ವಾಹನ ಅಪಘಾತ ಆಗಿದೆ. ನನ್ನ ಮಗ ಹಾಗೂ ಯುವತಿ ಸಾವನ್ನಪ್ಪಿದ್ದಾರೆ. ಮೊದಲು ಪೊಲೀಸರು ಸರಿಯಾಗಿ ರೆಸ್ಪಾನ್ಸ್ ಕೂಡ ಮಾಡಿಲ್ಲ. ನಮಗೆ ನ್ಯಾಯ ಬೇಕಾಗಿದೆ. ಅಪಘಾತ ಮಾಡಿದ ಚಾಲಕನ ಬಂಧನ ಆಗಬೇಕು. ನ್ಯಾಯ ಸಿಗದಿದ್ದರೆ ನಾನು ನನ್ನ ಪತ್ನಿ ಮತ್ತು ಮಗಳು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ತೇವೆ. ನನ್ನ ಮಗ ಮಾರ್ಥಾಸ್ ಆಸ್ಪತ್ರೆಯಲ್ಲಿಯೇ ಜನಿಸಿದ್ದ. ಇದೇ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ” ಎಂದು ಮೃತ ಪ್ರಶಾಂತ್ ತಂದೆ ಲೋಕೇಶ್ ಹೇಳಿದ್ದಾರೆ.

ಇದನ್ನೂ ಓದಿ: Peenya flyover: ಇಂದಿನಿಂದ ಪೀಣ್ಯ ಮೇಲ್ಸೇತುವೆ ಎಲ್ಲ ವಾಹನಗಳಿಗೆ ಮುಕ್ತ

Continue Reading

ಬೆಂಗಳೂರು

Road Accident: ಬೆಂಗಳೂರಿನಲ್ಲಿ ಕಸದ ಲಾರಿಯ ಆರ್ಭಟಕ್ಕೆ ಇಬ್ಬರು ಟೆಕ್ಕಿಗಳು ಬಲಿ

Road Accident: ರಾತ್ರಿ 8.45ರ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ. ಪ್ರಶಾಂತ್ (25), ಬಯನ್ನಗಾರಿ ಶಿಲ್ಪ (27) ಮೃತ ದುರ್ದೈವಿಗಳು. ಪ್ರಶಾಂತ್ ಮೂಲತಃ ಬೆಂಗಳೂರಿನ ಬಾಣಸವಾಡಿಯ ಯುವಕ. ಶಿಲ್ಪ ಆಂಧ್ರ ಮೂಲದವಳು. ಪ್ರಶಾಂತ್ ಮತ್ತು ಯುವತಿ ಇಬ್ಬರು ಸಹೋದ್ಯೋಗಿಗಳಾಗಿದ್ದು, ಐಟಿಪಿಎಲ್ ಟಿಸಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದರು.

VISTARANEWS.COM


on

bbmp lorry road accident
Koo

ಬೆಂಗಳೂರು: ರಾಜಧಾನಿಯಲ್ಲಿ ಬಿಬಿಎಂಪಿ ಕಸದ ಲಾರಿ (BBMP Lorry) ಮತ್ತೆರಡು ಬಲಿ (Road Accident) ಪಡೆದುಕೊಂಡಿದೆ. ನಗರದ ಹೃದಯ ಭಾಗದ ಕೆಆರ್ ಸರ್ಕಲ್ (KR Circle) ಬಳಿ ಈ ದುರ್ಘಟನೆ ನಡೆದಿದೆ. ಮೃತರಿಬ್ಬರೂ ಟೆಕ್ಕಿಗಳಾಗಿದ್ದು, ಟಿಸಿಎಸ್‌ನಲ್ಲಿ (TCS) ಕೆಲಸ ಮಾಡುತ್ತಿದ್ದರು.

ರಾತ್ರಿ 8.45ರ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ. ಪ್ರಶಾಂತ್ (25), ಬಯನ್ನಗಾರಿ ಶಿಲ್ಪ (27) ಮೃತ ದುರ್ದೈವಿಗಳು. ಪ್ರಶಾಂತ್ ಮೂಲತಃ ಬೆಂಗಳೂರಿನ ಬಾಣಸವಾಡಿಯ ಯುವಕ. ಶಿಲ್ಪ ಆಂಧ್ರ ಮೂಲದವಳು. ಪ್ರಶಾಂತ್ ಮತ್ತು ಯುವತಿ ಇಬ್ಬರು ಸಹೋದ್ಯೋಗಿಗಳಾಗಿದ್ದು, ಐಟಿಪಿಎಲ್ ಟಿಸಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪಿಜಿಯಲ್ಲಿ ವಾಸ ಮಾಡುತ್ತಿದ್ದ ಯುವತಿ ಶಿಲ್ಪ, ಊಟಕ್ಕೆ ಎಂದು ಹೊರಗೆ ಬಂದಾಗ ಅಪಘಾತವಾಗಿದೆ.

ಮೆಜೆಸ್ಟಿಕ್‌ದ ಕೆಆರ್ ಸರ್ಕಲ್ ಮಾರ್ಗವಾಗಿ ಇವರಿಬ್ಬರೂ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸಿಐಡಿ ಸಿಗ್ನಲ್ ಮಾರ್ಗದಿಂದ ಕೆಆರ್ ಸರ್ಕಲ್ ಕಡೆ ಕಸದ ಲಾರಿ ತೀವ್ರ ವೇಗದಿಂದ ಬಂದಿದೆ. ತಿರುವು ಇದ್ದ ಮಾರ್ಗದಲ್ಲಿ ಲಾರಿ ವೇಗವಾಗಿ ಬಂದ ಕಾರಣ ಕಸದ ಲಾರಿಯ ವೇಗದಿಂದ ತಪ್ಪಿಸಿಕೊಳ್ಳಲಾಗದೇ ಬೈಕ್‌ ಲಾರಿ ಕೆಳಗೆ ಸಿಲುಕಿಕೊಂಡಿದೆ.

ಮೃತರ ಮೇಲೆ ಹರಿದ ಕಸದ ಲಾರಿ ಸುಮಾರು 10 ಮೀಟರ್‌ನಷ್ಟು ದೂರ ದೇಹಗಳನ್ನು ಎಳೆದೊಯ್ದಿದೆ. ರಸ್ತೆ ಮೇಲೆ ರಕ್ತ ಚೆಲ್ಲಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಅಪಘಾತದ ಬಳಿಕ ಕಸದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಕೂಡಲೇ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗದಲ್ಲಿಯೇ ಇಬ್ಬರೂ ಮೃತ ಪಟ್ಟರು. ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ಒಯ್ಯಲಾಗಿದೆ.

ಸ್ಥಳಕ್ಕೆ ಹಲಸೂರು ಗೇಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗನನ್ನು ಕಳೆದುಕೊಂಡು ತಂದೆ ತಾಯಿ ಕಣ್ಣೀರು ಹಾಕಿದ್ದು, ಆಸ್ಪತ್ರೆಯಲ್ಲಿ ಪ್ರಶಾಂತ್ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. “ಬಿಬಿಎಂಪಿ ವಾಹನ ಅಪಘಾತ ಆಗಿದೆ. ನನ್ನ ಮಗ ಹಾಗೂ ಯುವತಿ ಸಾವನ್ನಪ್ಪಿದ್ದಾರೆ. ಮೊದಲು ಪೊಲೀಸರು ಸರಿಯಾಗಿ ರೆಸ್ಪಾನ್ಸ್ ಕೂಡ ಮಾಡಿಲ್ಲ. ನಮಗೆ ನ್ಯಾಯ ಬೇಕಾಗಿದೆ. ಅಪಘಾತ ಮಾಡಿದ ಚಾಲಕನ ಬಂಧನ ಆಗಬೇಕು. ನ್ಯಾಯ ಸಿಗದಿದ್ದರೆ ನಾನು ನನ್ನ ಪತ್ನಿ ಮತ್ತು ಮಗಳು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ತೇವೆ. ನನ್ನ ಮಗ ಮಾರ್ಥಾಸ್ ಆಸ್ಪತ್ರೆಯಲ್ಲಿಯೇ ಜನಿಸಿದ್ದ. ಇದೇ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ” ಎಂದು ಮೃತ ಪ್ರಶಾಂತ್ ತಂದೆ ಲೋಕೇಶ್ ಹೇಳಿದ್ದಾರೆ.

ವಿಡಿಯೋ ಮಾಡುತ್ತಾ ನೇಣು ಹಾಕಿಕೊಂಡ ಮಹಿಳೆ

ಬೆಂಗಳೂರು: ಪತಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಲೈವವ ವಿಡಿಯೊ ಮಾಡಿಟ್ಟುಕೊಂಡು ಫ್ಯಾನ್​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ (Women Suicide) ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆಡಿದೆ. ಮಾನಸ(25)ಆತ್ಮಹತ್ಯೆ ಮಾಡಿಕೊಂಡು ಮಹಿಳೆ.

ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ, ದಿಲೀಪ್​ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಬೇಸತ್ತ ಮಾನಸ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸ ಅಂದ್ರಹಳ್ಳಿ ಗಂಡನ ಮನೆಯಲ್ಲಿ ವಾಸವಿದ್ದರು. ಭಾನುವಾರ ಸಂಜೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಳಿಕ ದಿಲೀಪ್​ ಮನೆಯವರ ವಿರುದ್ಧ ಮಾನಸ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಎಂದು ಆರೋಪಿಸಿದ್ದಾರೆ. ಠಾಣೆ ಮುಂಭಾಗವೇ ಗಂಡನ ಕಡೆಯವರಿಗೆ ಹಲ್ಲೆ ನಡೆಸಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Puttamadegowda: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಅನಾರೋಗ್ಯದಿಂದ ನಿಧನ

Continue Reading

ಪ್ರಮುಖ ಸುದ್ದಿ

Women Suicide : ಬೆಂಗಳೂರಿನಲ್ಲಿ ವಿವಾಹಿತ ಮಹಿಳೆ ಲೈವ್​ ವಿಡಿಯೊ ಮಾಡುತ್ತಾ ನೇಣು ಹಾಕಿಕೊಂಡು ಆತ್ಮಹತ್ಯೆ

Women Suicide : ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ, ದಿಲೀಪ್​ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಬೇಸತ್ತ ಮಾನಸ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

VISTARANEWS.COM


on

Women Suicide
Koo

ಬೆಂಗಳೂರು: ಪತಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಲೈವವ ವಿಡಿಯೊ ಮಾಡಿಟ್ಟುಕೊಂಡು ಫ್ಯಾನ್​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ (Women Suicide) ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆಡಿದೆ. ಮಾನಸ(25)ಆತ್ಮಹತ್ಯೆ ಮಾಡಿಕೊಂಡು ಮಹಿಳೆ.

ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ, ದಿಲೀಪ್​ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಬೇಸತ್ತ ಮಾನಸ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸ ಅಂದ್ರಹಳ್ಳಿ ಗಂಡನ ಮನೆಯಲ್ಲಿ ವಾಸವಿದ್ದರು. ಭಾನುವಾರ ಸಂಜೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಳಿಕ ದಿಲೀಪ್​ ಮನೆಯವರ ವಿರುದ್ಧ ಮಾನಸ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಎಂದು ಆರೋಪಿಸಿದ್ದಾರೆ. ಠಾಣೆ ಮುಂಭಾಗವೇ ಗಂಡನ ಕಡೆಯವರಿಗೆ ಹಲ್ಲೆ ನಡೆಸಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯನ್ನು ಕೊಂದು, ಸುಟ್ಟು ಹಾಕಿದ ಕಿರಾತಕ

ಕಲಬುರಗಿ: ಕಲಬುರಗಿಯಲ್ಲಿ (Kalaburagi News) ಮಹಿಳೆಯೊಬ್ಬಳ ಕೊಲೆ (Murder case) ಮಾಡಿ ಶವ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಗಾಂವ್ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ. ಕಲಬುರಗಿ ನಗರದ ರಾಜ್ ಕುಮಾರ್ ಬಂಧಿತ ಆರೋಪಿ ಆಗಿದ್ದಾನೆ.

ಇದನ್ನೂ ಓದಿ: Puttamadegowda: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಅನಾರೋಗ್ಯದಿಂದ ನಿಧನ

ರಾಜ್‌ಕುಮಾರ್‌ ಊಟ ಕೊಡಿಸುವ ನೆಪದಲ್ಲಿ ಬಸ್ಸಮ್ಮ ಎಂಬಾಕೆಯನ್ನು ಕರೆದೊಯ್ದು ಕೊಲೆ ಮಾಡಿದ್ದ. ಕೊಲೆ ಬಳಿಕ ಪೆಟ್ರೋಲ್ ಹಾಕಿ ಸುಟ್ಟು ರಸ್ತೆ ಬದಿಯಲ್ಲಿ ಶವ ಹೂತಿಟ್ಟು ಎಸ್ಕೇಪ್ ಆಗಿದ್ದ. ಬಸ್ಸಮ್ಮ ಈ ರಾಜಕುಮಾರ್ ಬಳಿ ಚಿನ್ನಾಭರಣವನ್ನು ಅಡವಿಟ್ಟಿದ್ದಳು ಜತೆಗೆ ಹಣವನ್ನು ಕೊಟ್ಟಿದ್ದಳು. ಬಸ್ಸಮ್ಮ ಕೊಟ್ಟ ಚಿನ್ನವನ್ನು ರಾಜುಕುಮಾರ್‌ ಮತ್ತೊಬ್ಬರ ಬಳಿ ಅಡವಿಟ್ಟಿದ್ದ. ಕೆಲ ದಿನಗಳ ಬಳಿಕ ಬಸ್ಸಮ್ಮ, ರಾಜಕುಮಾರ್‌ಗೆ ಚಿನ್ನಾಭರಣ ಹಾಗೂ ಹಣವನ್ನು ನೀಡುವಂತೆ ಕೇಳಿದ್ದಳು.

ಆದರೆ ಬೇರೊಬ್ಬರ ಬಳಿ ಚಿನ್ನ ಅಡವಿಟ್ಟ ಕಾರಣಕ್ಕೆ ರಾಜಕುಮಾರ್‌, ಬಸ್ಸಮ್ಮಳನ್ನು ಕೊಂದು ಮುಗಿಸಲು ಸ್ಕೆಚ್‌ ಹಾಕಿದ್ದ. ಅದರಂತೆ ಜುಲೈ 14 ರಂದು ಮಾರ್ಕೆಟ್‌ನಿಂದ ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಗುರುತು ಸಿಗದಂತೆ ಸುಟ್ಟು ಹಾಕಿ ಎಸ್ಕೇಪ್ ಆಗಿದ್ದ.

ಜಮೀನಿನಲ್ಲಿ ಪತ್ತೆಯಾಗಿದ್ದ ಶವ

ಕಲಬುರಗಿಯ (Kalaburagi News) ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಸುಟ್ಟಸ್ಥಿತಿಯಲ್ಲಿ ಮಹಿಳೆಯ ಶವ (Dead Body Found) ಪತ್ತೆಯಾಗಿತ್ತು. ಮಹಿಳೆ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಬಳಿಕ ಗುರುತು ಸಿಗಬಾರದೆಂದು ಸುಟ್ಟು ಹಾಕಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಎಸ್ಪಿ ಅಡ್ಡೂರು ‌ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Continue Reading

ಕ್ರೈಂ

Shirur landslide: ಶಿರೂರು ಭೂಕುಸಿತ; ಇನ್ನೂ ಪತ್ತೆಯಾಗದವರ ಶೋಧ ಕಾರ್ಯಾಚರಣೆ ಕೈಬಿಟ್ಟ ಜಿಲ್ಲಾಡಳಿತ

Shirur landslide: ಜುಲೈ 16 ರಂದು ಶಿರೂರು ಬಳಿ ನಡೆದ ಗುಡ್ಡಕುಸಿತ ದುರಂತದಲ್ಲಿ 11 ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ 8 ಮಂದಿ ಶವವಾಗಿ ಸಿಕ್ಕಿದ್ದರು. ನಾಪತ್ತೆಯಾಗಿದ್ದ ಜಗನ್ನಾಥ ನಾಯ್ಕ, ಲೋಕೇಶ, ಅರ್ಜುನ್‌‌ ಸೇರಿ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಆದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ.

VISTARANEWS.COM


on

Shirur landslide
ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ
Koo

ಕಾರವಾರ: ಅಂಕೋಲಾದ ಶಿರೂರು ಭೂಕುಸಿತ ಪ್ರಕರಣದಲ್ಲಿ (Shirur landslide) ನಾಪತ್ತೆಯಾದ 11 ಮಂದಿ ಪೈಕಿ 8 ಮಂದಿ ಮೃತದೇಹ ಸಿಕ್ಕಿದ್ದವು. ಆದರೆ, ಉಳಿದ ಮೂವರ ಶವಗಳು, 13ನೇ ದಿನದ ಕಾರ್ಯಾಚರಣೆಯಲ್ಲೂ ಸಿಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಮುಳುಗು ತಜ್ಞ ಈಶ್ವರ ಮಲ್ಪೆ ನೇತೃತ್ವದಲ್ಲಿ ಭಾನುವಾರ ಹುಡುಕಾಟ ನಡೆಸಲಾಗಿದೆ. ಆದರೂ ಮೂವರ ಮೃತದೇಹ ಪತ್ತೆಯಾಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ.

ಜುಲೈ 16 ರಂದು ಶಿರೂರು ಬಳಿ ನಡೆದ ಗುಡ್ಡಕುಸಿತ ದುರಂತದಲ್ಲಿ 11 ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ 8 ಮಂದಿ ಶವವಾಗಿ ಸಿಕ್ಕಿದ್ದರು. ನಾಪತ್ತೆಯಾಗಿದ್ದ ಜಗನ್ನಾಥ ನಾಯ್ಕ, ಲೋಕೇಶ, ಅರ್ಜುನ್‌‌ ಸೇರಿ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಹಲವರು ಮಣ್ಣಿನಡಿ ಸಿಲುಕಿದ್ದರು, ಇನ್ನೂ ಕೆಲವರು ಗಂಗಾವಳಿ ನದಿಗೆ ಬಿದ್ದ ಹಿನ್ನೆಲೆಯಲ್ಲಿ ನದಿಯಲ್ಲೂ ಹುಡುಕಾಟ ನಡೆಸಲಾಗುತ್ತಿದೆ. ನೀರಿನ ವೇಗ ಹೆಚ್ಚಿರುವುದು ಹಾಗೂ ನದಿಯಲ್ಲಿರುವ ಮಣ್ಣು, ಕಲ್ಲು ಬಂಡೆ ಹಾಗೂ ಮರದ ದಿಮ್ಮಿಗಳಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಅಲ್ಲದೇ ಕಾರ್ಯಾಚರಣೆಯಲ್ಲಿ ಲಾರಿಯನ್ನು ಮೇಲಕ್ಕೆ ಎತ್ತಲೂ ಸಾಧ್ಯವಾಗಿಲ್ಲ.

ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ ಪ್ರತಿಕ್ರಿಯಿಸಿ, ನಿನ್ನೆ ಮೂರು ಹಾಗೂ ಇವತ್ತು ಒಂದು ಪಾಯಿಂಟ್‌ನಲ್ಲಿ ಹುಡುಕಾಟ ಮಾಡಲಾಗಿದೆ. ಆದರೆ ಎಲ್ಲೂ ಲಾರಿ ಸಿಕ್ಕಿಲ್ಲ, ಕಣ್ಮರೆಯಾಗಿರುವರೂ ಪತ್ತೆಯಾಗಿಲ್ಲ. ಕಾರ್ಯಾಚರಣೆ ವೇಳೆ ಕಲ್ಲು, ಮರದ ತುಂಡುಗಳು ಅಡ್ಡಿಯಾಗಿದ್ದಾಗಿ ಮುಳುಗು ತಜ್ಞ ಈಶ್ವರ್ ಮಲ್ಪೆ ತಿಳಿಸಿದ್ದಾರೆ. ನೀರಿನ ಹರಿವು ಸಹ ಹೆಚ್ಚಾಗಿರುವುದರಿಂದ ಶೋಧ ಕಾರ್ಯ ನಡೆಸಲಾಗಿಲ್ಲ. ಮುಂದಿನ ಕಾರ್ಯಾಚರಣೆ ಬಗ್ಗೆ ಜಿಲ್ಲಾ‌ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಕಾಣೆಯಾದವರ ಪತ್ತೆಗೆ ಶತ ಪ್ರಯತ್ನ: ಶಾಸಕ ಸತೀಶ್ ಸೈಲ್

ಕಾರ್ಯಾಚರಣೆ ಸ್ಥಗಿತ ಕುರಿತು ಶಾಸಕ ಸತೀಶ್ ಸೈಲ್ ಪ್ರತಿಕ್ರಿಯಿಸಿ, ಈಶ್ವರ ಮಲ್ಪೆ ತಂಡ ನೆನ್ನೆಯಿಂದ ಶತ ಪ್ರಯತ್ನ ಮಾಡಿದೆ. ನದಿಯ ಪರಿಸ್ಥಿತಿ ನೋಡಿ ಕಾರ್ಯಾಚರಣೆ ಸಾಧ್ಯವಿಲ್ಲ ಎಂದು ಭಾವಿಸಲಾಗಿತ್ತು. ಆದರೂ ಅವರು ನಾಲ್ಕನೇ ಪಾಯಿಂಟ್‌ನಲ್ಲಿ ಹುಡುಕಾಡಿದ್ದಾರೆ. ಇವತ್ತು ಮಣ್ಣು ಮಿಶ್ರಿತ ನೀರು ಹೆಚ್ಚಾಗಿ ಹರಿಯುತ್ತಿದ್ದ ಹಿನ್ನೆಲೆ ಹುಡುಕಾಟ ಸಾಧ್ಯವಾಗಿಲ್ಲ. ಕಣ್ಮರೆಯಾದವರ ಶೋಧಕ್ಕೆ ತಿರುಚ್ಚಿಯಲ್ಲಿ ಕ್ರೇನ್ ಇರುವ ಬೋಟ್ ಇದೆ. ಆದರೆ ಅದನ್ನು ಅಲ್ಲಿಂದ ತರಿಸಲು ತಡವಾಗಬಹುದು. ಸರ್ಕಾರದೊಂದಿಗೆ ಮಾತನಾಡಿ ಸಾಧ್ಯವಾದ ಪ್ರಯತ್ನ ಮಾಡುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸಿ ಮುಂದಿನ ಕಾರ್ಯಾಚರಣೆ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

ಕಾರ್ಯಾಚರಣೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂದ ಜಿಲ್ಲಾ ಉಸ್ತುವಾರಿ ಸಚಿವ

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ಒಂದು ಕಡೆ ಮಣ್ಣಿನಡಿ ಲಾರಿ ಇದೆ ಎಂದಿದ್ದರು, ಒಂದು ವಾರದಲ್ಲಿ ಕಾರ್ಯಾಚರಣೆ ನಡೆಸಿ ಮಣ್ಣು ತೆಗೆದೆವು. ಈಗ ನೀರಿನಲ್ಲಿ ಇದೆ ಎಂದಾಗ ನದಿಯಲ್ಲಿ ಕಾರ್ಯಾಚರಣೆ ಮಾಡಿದ್ದೇವೆ. ಎಲ್ಲಾ ಪ್ರಯತ್ನ ಮಾಡಿದರೂ ಮೂವರ ಮೃತ ದೇಹ ಸಿಗದಿರುವುದು ಬೇಸರ ತಂದಿದೆ. ದೇಹ ಸಿಗದೇ ಇದ್ದವರಿಗೂ ಅವರ ಅವಲಂಬಿತರ ಬಳಿ ಅಗ್ರಿಮೆಂಟ್ ಮಾಡಿಕೊಂಡು ಪರಿಹಾರ ನೀಡುತ್ತೇವೆ. ಮೃತರ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾದರೆ ಅವರ ಜೊತೆ ನಾವು ಇರುತ್ತೇವೆ. ಕಾರ್ಯಾಚರಣೆ ಸ್ಥಗಿತ ಆಗಿಲ್ಲ, ಆದರೆ ಮಾಡಲು ಸಾಧ್ಯವಾಗುತ್ತಿಲ್ಲ. ನೀರಿನ ಪ್ರಮಾಣ ಕಡಿಮೆಯಾದ ನಂತರ ಕಾರ್ಯಾಚರಣೆ ಮಾಡುತ್ತೇವೆ. ಮುಳುಗಿರುವ ಟ್ರಕ್ ಮೇಲಕ್ಕೆ ಎತ್ತುವ ಪ್ರಯತ್ನ ಮಾಡುತ್ತೇವೆ. ಗುಡ್ಡ ಕುಸಿತದ ಬಗ್ಗೆ ಮಾಹಿತಿ ಪಡೆದು ಸಂಚಾರಕ್ಕೆ ಅನುವು ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.

Continue Reading
Advertisement
shiradi landslide railway track
ಪ್ರಮುಖ ಸುದ್ದಿ27 mins ago

Shiradi Landslide: ಹಳಿ ಮೇಲೆ ಭೂಕುಸಿತ, ಬೆಂಗಳೂರು- ಮಂಗಳೂರು ರೈಲುಗಳು 15 ದಿನ ಬಂದ್, 400 ಕಾರ್ಮಿಕರಿಂದ ತೆರವು ಕಾರ್ಯಾಚರಣೆ

US Mass Shooting
ವಿದೇಶ45 mins ago

US Mass Shooting: ಅಮೆರಿಕದ ಪಾರ್ಕ್‌ನಲ್ಲಿ ಮತ್ತೆ ಸಾಮೂಹಿಕ ಗುಂಡಿನ ದಾಳಿ; ಒಬ್ಬ ವ್ಯಕ್ತಿ ಬಲಿ, 6 ಜನಕ್ಕೆ ಗಾಯ

Janhvi Kapoor interview Kamiya Jani trolled for calling idli-chicken curry weird combination
ಬಾಲಿವುಡ್49 mins ago

Janhvi Kapoor: ಇಡ್ಲಿ- ಚಿಕನ್ ಕರಿ ಕಾಂಬಿನೇಶನ್‌ಗೆ ಮುಖ ಕಿವುಚಿಕೊಂಡ ಖ್ಯಾತ ಯುಟ್ಯೂಬರ್‌; ತಿನ್ನಲು ಕೈ ಬಳಸಿ ಎಂದ ಜಾಹ್ನವಿ ಕಪೂರ್!

mukesh bollywood ರಾಜಮಾರ್ಗ ಅಂಕಣ
ಅಂಕಣ60 mins ago

ರಾಜಮಾರ್ಗ ಅಂಕಣ: ಮುಕೇಶ್ ಅಂದರೆ ಹಾಂಟಿಂಗ್ ಮೆಲಡಿ, ನೋವಿನಲ್ಲಿ ಅದ್ದಿ ತೆಗೆದ ದನಿ!

ವೈರಲ್ ನ್ಯೂಸ್1 hour ago

Viral Video: 7ನೇ ಡಿವೋರ್ಸ್‌ಗೆ ಕೋರ್ಟ್‌ಗೆ ಬಂದ ಮಹಿಳೆ; ಈಕೆಯ ಕುತಂತ್ರ ಕಂಡು ಜಡ್ಜ್‌ಗೆ ಶಾಕ್‌!

Tourist Place
Latest1 hour ago

Tourist Place in Tamilnadu : ತಮಿಳುನಾಡಿಗೆ ಹೋದರೆ ಈ ಅದ್ಭುತ ತಾಣಗಳಿಗೆ ಭೇಟಿ ನೀಡುವುದನ್ನು ತಪ್ಪಿಸಬೇಡಿ!

Kalika Temple
ದೇಶ1 hour ago

Kalika Temple: ಭಕ್ತರು ಈ ದೇವಾಲಯಕ್ಕೆ ತುಂಡುಡುಗೆ ಧರಿಸಿ ಬಂದರೆ ಪ್ರವೇಶ ಇಲ್ಲ; ಆಡಳಿತ ಮಂಡಳಿ ಆದೇಶ

Kannada New Movie powder Movie release date announce
ಸ್ಯಾಂಡಲ್ ವುಡ್2 hours ago

Kannada New Movie: ‘ಪೌಡರ್’ ರಿಲೀಸ್ ಡೇಟ್ ಪೋಸ್ಟ್ ಪೋನ್: ತೆರೆಗೆ ಯಾವಾಗ?

14 hours work protest
ಪ್ರಮುಖ ಸುದ್ದಿ2 hours ago

14 Hours Work: 14 ಗಂಟೆಗಳ ಕೆಲಸ; ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್‌ 3ರಂದು ಐಟಿ ಉದ್ಯೋಗಿಗಳ ಪ್ರತಿಭಟನೆ

India Maldives
ದೇಶ2 hours ago

India Maldives: ದುರಹಂಕಾರ ಬಿಟ್ಟು ಭಾರತಕ್ಕೆ ಧನ್ಯವಾದ ತಿಳಿಸಿದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಜು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ16 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ18 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ20 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ21 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌