Site icon Vistara News

Crime News: ಮುತ್ತಪ್ಪ ರೈ ಮಗ ಮತ್ತು ಉದ್ಯಮಿ ನಾಯ್ಡು ನಡುವೆ ಮತ್ತೆ ಜಟಾಪಟಿ

rickey rai srinivas naidu

ಬೆಂಗಳೂರು: ಈಗಾಗಲೇ ಪೊಲೀಸ್‌ ಠಾಣೆಯಲ್ಲಿ ಪರಸ್ಪರ ಪ್ರಕರಣ ದಾಖಲಾಗಿರುವ ಬೆಂಗಳೂರಿನ ಭೂಗತ ಜಗತ್ತಿನ (Bangalore underworld) ಇಬ್ಬರು ರೌಡಿ ಶೀಟರ್‌ಗಳ ನಡುವೆ ಮತ್ತೊಮ್ಮೆ ಜಟಾಪಟಿ ನಡೆದಿದೆ. ಮಾಜಿ ಡಾನ್‌ ಮುತ್ತಪ್ಪ ರೈ ಮಗ ರಿಕ್ಕಿ ರೈ ಹಾಗೂ ಉದ್ಯಮಿ ಶ್ರೀನಿವಾಸ್ ನಾಯ್ಡು ಮತ್ತೊಮ್ಮೆ ಕೈ ಮಿಲಾಯಿಸಿಕೊಂಡಿದ್ದಾರೆ.

ಲ್ಯಾವೆಲ್ಲೆ ರೋಡ್ ಖಾಜೆ ಬಾರ್ ಅಂಡ್ ಕಿಚನ್ ಹೊಟೇಲ್‌ನಲ್ಲಿ ಘಟನೆ ನಡೆದಿದೆ. ಮಧ್ಯರಾತ್ರಿ 1 ಗಂಟೆಗೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಹಾಗೂ ಉದ್ಯಮಿ ಶ್ರೀನಿವಾಸ್ ನಾಯ್ಡು ಮುಖಾಮುಖಿಯಾಗಿದ್ದು, ಇಬ್ಬರ ನಡುವೆ ಜಗಳ ಹತ್ತಿಕೊಂಡಿದೆ. ಮದ್ಯದ ಅಮಲಿನಲ್ಲಿ ಇಬ್ಬರೂ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಘಟನೆಯಲ್ಲಿ ರಿಕ್ಕಿ ರೈ ಹಣೆಗೆ ಗಾಯವಾಗಿದ್ದು, ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಬಗ್ಗೆ ರಿಕ್ಕಿ ರೈ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಗಲಾಟೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಈ ಹಿಂದೆ ಉದ್ಯಮಿ ಶ್ರೀನಿವಾಸ ನಾಯ್ಡುಗೆ ಸೇರಿದ ಒಂದು ಕೋಟಿ ರೂಪಾಯಿ ಬೆಲೆಯ ರೇಂಜ್‌ ರೋವರ್‌ ಕಾರನ್ನು ರಿಕ್ಕಿ ರೈ ಸಹಚರರು ಸುಟ್ಟುಹಾಕಿದ್ದಾರೆ ಎಂದು ನಾಯ್ಡು ದೂರು ನೀಡಿದ್ದರು. ಇದಕ್ಕೂ ಮೊದಲು ಒಡನಾಡಿಗಳಾಗಿದ್ದ ರಿಕ್ಕಿ ರೈ ಹಾಗೂ ಶ್ರೀನಿವಾಸ ನಾಯ್ಡು ನಡುವೆ ಬಳಿಕ ವೈಮನಸ್ಯ ಬೆಳೆದಿತ್ತು.

ಇದನ್ನೂ ಓದಿ: Crime News: ಮುತ್ತಪ್ಪ ರೈ ಮಗನಿಂದ ಕೋಟಿ ರೂ. ಬೆಲೆಯ ಕಾರಿಗೆ ಬೆಂಕಿ ಪ್ರಕರಣ: ಚಾರ್ಜ್‌ಶೀಟ್‌ ಸಲ್ಲಿಕೆ

Exit mobile version