Site icon Vistara News

Woman Murder: ಬೆಂಗಳೂರಿನಲ್ಲಿ ಗಂಡನಿಂದಲೇ ಹೆಂಡತಿಯ ಬರ್ಬರ ಕೊಲೆ

woman murder

ಬೆಂಗಳೂರು: ಮಹಿಳೆಯೊಬ್ಬರನ್ನು ಆಕೆಯ ಗಂಡನೇ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ (Woman Murder) ಘಟನೆ ನಡೆದಿದೆ.

ಬಸವೇಶ್ವನಗರದ ಮಂಜುನಾಥನಗರದಲ್ಲಿ ದುರ್ಘಟನೆ ನಡೆದಿದ್ದು, ನಾಗರತ್ನ (32) ಎಂಬವರು ಕೊಲೆಯಾದ ಮಹಿಳೆ. ನಾಗರತ್ನ ಅವರ ಗಂಡ ಅಯ್ಯಪ್ಪ ಎಂಬಾತ ಚಾಕುವಿನಿಂದ ಮನಸೋ ಇಚ್ಛೆ ಚುಚ್ಚಿ ಕೊಲೆ ಮಾಡಿದ್ದಾನೆ.

ಅನೈತಿಕ ಸಂಬಂಧದ ಅನುಮಾನದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ಇದೆ. ಅಪ್ಪ ಅಮ್ಮ‌ ಇಲ್ಲದೆ ಅನಾಥಾಶ್ರಮದಲ್ಲಿದ್ದ ನಾಗರತ್ನ ಅವರನ್ನು 12 ವರ್ಷಗಳ ಹಿಂದೆ ಅಯ್ಯಪ್ಪ ಮದುವೆಯಾಗಿದ್ದ. ದಂಪತಿಗೆ 11 ವರ್ಷದ ಮಗ ಹಾಗೂ 7 ವರ್ಷದ ಮಗಳು ಇದ್ದಾರೆ. ತನ್ನ ಅಕ್ಕನ ಮನೆಯಲ್ಲಿ ಅಯ್ಯಪ್ಪ ಮಕ್ಕಳನ್ನು ಬಿಟ್ಟಿದ್ದ.

ಇತ್ತೀಚೆಗೆ ಹೆಂಡತಿಯ ನಡತೆ ಮೇಲೆ ಅಯ್ಯಪ್ಪ ಅನುಮಾನ ಪಡುತ್ತಾ ಇದ್ದ. ಮೂರು ದಿನಗಳಿಂದ ದಂಪತಿ ಮಧ್ಯೆ ಗಲಾಟೆ ನಡೆಯುತ್ತಿತ್ತು. ಗಲಾಟೆ ಉಲ್ಬಣಗೊಂಡು ಕೊಲೆ ಮಾಡಿದ್ದಾನೆ. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಬಸವೇಶ್ವರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೊಲೆ ಮಾಡಿ ಪರಾರಿಯಾಗಿದ್ದ ಅಯ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

Exit mobile version