Criminal Politics | ರೌಡಿಗಳ ಪಕ್ಷ ಸೇರ್ಪಡೆ; ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ರಾಜ್ಯ ಪ್ರ.ಕಾರ್ಯದರ್ಶಿ ಎನ್‌. ರವಿಕುಮಾರ್‌ 16 ಪ್ರಶ್ನೆ - Vistara News

ಬೆಂಗಳೂರು

Criminal Politics | ರೌಡಿಗಳ ಪಕ್ಷ ಸೇರ್ಪಡೆ; ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ರಾಜ್ಯ ಪ್ರ.ಕಾರ್ಯದರ್ಶಿ ಎನ್‌. ರವಿಕುಮಾರ್‌ 16 ಪ್ರಶ್ನೆ

Criminal Politics | ಪಕ್ಷಕ್ಕೆ ರೌಡಿಗಳ ಸೇರ್ಪಡೆ ಬಗ್ಗೆ ಚರ್ಚಿಸುವ ಮೊದಲು
ಕಾಂಗ್ರೆಸ್‌ ನಾಯಕರು. 16 ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಆಗ್ರಹಿಸಿದ್ದಾರೆ.

VISTARANEWS.COM


on

Criminal Politics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೌಡಿಗಳನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ, ಅದು ನಮ್ಮ ಸಂಸ್ಕೃತಿ ಅಲ್ಲ (Criminal Politics) ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೇ ಸ್ಪಷ್ಟಪಡಿಸಿದ್ದರೂ ಕಾಂಗ್ರೆಸ್ ನಾಯಕರಾದ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಪದೇಪದೆ ನಾಲಿಗೆ ಹರಿಯಬಿಡುತ್ತಿದ್ದಾರೆ. ಚರ್ಚೆಯನ್ನು ಮುಂದುರಿಸುವ ಮುನ್ನ ಈ ಇಬ್ಬರೂ ಮಹಾನ್ ಸುಳ್ಳುಗಾರ ನಾಯಕರು ಕೆಲ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಕಿಡಿ ಕಾರಿದ್ದಾರೆ.

ಕಾಂಗ್ರೆಸ್‌ ನಾಯಕರಿಗೆ ಎನ್‌.ರವಿಕುಮಾರ್‌ 1೬ ಪ್ರಶ್ನೆಗಳನ್ನು ಹಾಕಿ, ಅವುಗಳಿಗೆ ಉತ್ತರಿಸಿದ ಬಳಿಕ ರೌಡಿಗಳ ಪಕ್ಷ ಸೇರ್ಪಡೆ ಕುರಿತು ಚರ್ಚೆಗೆ ಬರುವಂತೆ ಹೇಳಿದ್ದಾರೆ

  1. ದೇವರಾಜ್ ಅರಸು ಕಾಲದಲ್ಲಿ ಅಂದಿನ ಭೂಗತ ರೌಡಿಗಳೊಂದಿಗೆ ಪವಿತ್ರ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂತು ಪೊಲೀಸರಿಂದ ಎಳನೀರು ತರಿಸಿ ಕೊಡುತ್ತಿದ್ದವರು ಯಾವ ಪಕ್ಷದಲ್ಲಿದ್ದರು ಎಂದು ಹೇಳಬಹುದೇ ಸಿದ್ದರಾಮಯ್ಯನವರೇ?
  2. ಯಲಹಂಕದ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಅವರನ್ನು ಸೋಲಿಸಲು ಆಗುವುದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿಯೊಬ್ಬ ಮನೆಯಲ್ಲೇ ಕುಳಿತು ಹತ್ಯೆಗೆ ಸಂಚು ರೂಪಿಸಿದ್ದ ಆಡಿಯೊ ಬಿಡುಗಡೆ ಆಗಿದ್ದರ ಬಗ್ಗೆ ಏನು ಹೇಳುತ್ತೀರಿ ಸಿದ್ದರಾಮಯ್ಯನವರೇ?
  3. ಯಾರೋ ಕೆಲವರು ಕಾಂಗ್ರೆಸ್ ಪಕ್ಷದ ಬ್ಯಾನರ್ ಹರಿದು ಹಾಕಿದಾಗ, ರಾಜ್ಯದಲ್ಲಿ ಬಿಜೆಪಿಯವರಿಗೆ ಒಂದೂ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ಬೀದಿ ರೌಡಿಯ ರೀತಿ ತಾವು ಆವಾಜ್ ಹಾಕಿದ್ದು ಯಾವ ಸಂಸ್ಕೃತಿ ಡಿ.ಕೆ. ಶಿವಕುಮಾರ್‌ರವರೇ?
  4. ಟಿಪ್ಪು ಕುರಿತು ನಿಮ್ಮ ಕುರುಡು ಪ್ರೇಮವನ್ನು ಖಂಡಿಸಿ ಕೊಡಗಿನ ಜನ ನಿಮ್ಮ ಕಾರಿಗೆ ಕಲ್ಲು ಹೊಡೆದಾಗ ಅದಕ್ಕೆ ಪ್ರತೀಕಾರವಾಗಿ ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುತ್ತೇವೆ ಎಂದು ತಾವು ಹೇಳಿದ್ದು ರೌಡಿ ಸಂಸ್ಕೃತಿಯ ಲಕ್ಷಣ ಅಲ್ಲವೇ ಸಿದ್ದರಾಮಯ್ಯನವರೇ?
  5. ಕರ್ನಾಟಕ ಕಾಂಗ್ರೆಸ್‌ ಯುವ ಘಟಕದ ಈಗಿನ ಅಧ್ಯಕ್ಷರು ತಮ್ಮ ಗ್ಯಾಂಗ್ ಜತೆ ಸೇರಿಕೊಂಡು ಒಬ್ಬ ಪಾಪದ ಹುಡುಗನಿಗೆ ಹಿಗ್ಗಾ ಮುಗ್ಗಾ ಬಡಿದಿದ್ದನ್ನು ಇಡೀ ರಾಜ್ಯ ನೋಡಿರುವುದು ಸುಳ್ಳು ಎನ್ನುತ್ತೀರೇ ಡಿ.ಕೆ. ಶಿವಕುಮಾರ್‌ರವರೇ?
  6. ಪ್ರತಿಭಟನೆ ಮಾಡೋಕೆ ಬಂದರೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚುತ್ತೇನೆ ಎಂದು ನಿಮ್ಮ ಪರಮಾಪ್ತ ಶಾಸಕ ರಮೇಶ್ ಕುಮಾರ್ ಹೇಳಿದ್ದು, ತಾವು ಓದಿದ ಪ್ರಜಾಪ್ರಭುತ್ವದ ಯಾವ ಪುಸ್ತಕದ ಯಾವ ಹಾಳೆಯಲ್ಲಿದೆ ತಿಳಿಸಬಹುದೇ ಸಿದ್ದರಾಮಯ್ಯನವರೇ?
  7. ಅಖಿಲ ಭಾರತ ಕಾಂಗ್ರೆಸ್ ಘಟಕದ ಅಧ್ಯಕ್ಷರು ದೆಹಲಿಗೆ ಓಡಿಹೋಗಿ ಅವಿತುಕೊಳ್ಳುವುದಕ್ಕೂ ಮೊದಲು ಯಾವ ಸಾಮಾಜಿಕ ಸೇವೆಗಳಲ್ಲಿ ತೊಗಿಸಿಕೊಂಡಿದ್ದರು ಎನ್ನುವುದು ತಮಗೆ ತಿಳಿದಿಲ್ಲವೇ ಡಿ.ಕೆ. ಶಿವಕುಮಾರ್‌ರವರೇ?
  8. ಮಂಗಳೂರಿನ ನಟೋರಿಯಸ್ ಟಾರ್ಗೆಟ್ ಗ್ರೂಪ್‌ನ ಕುಖ್ಯಾತ ರೌಡಿ ಇಲ್ಯಾಸ್, ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಅಷ್ಟೇ ಅಲ್ಲದೆ ಶಾಸಕ ಯು.ಟಿ.ಖಾದರ್ ಆಪ್ತ ಹೌದೋ ಅಲ್ಲವೋ ಉತ್ತರಿಸಬಹುದೇ ಸಿದ್ದರಾಮಯ್ಯನವರೇ?
  9. ಮೂಡುಬಿದರೆಯಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ತಮ್ಮ ಶಿಷ್ಯ ಮಿಥುನ್ ರೈ ಹಿನ್ನೆಲೆ ಏನು ಎಂದು ತಿಳಿಸಬಹುದೇ ಡಿ.ಕೆ. ಶಿವಕುಮಾರ್‌ರವರೇ?
  10. ‘ಬಿಜೆಪಿಯವರು ಯಾರೂ ಕ್ಷೇತ್ರದಲ್ಲಿ ಓಡಾಡದ ಹಾಗೆ ಮಾಡ್ತೀನಿ’ ಎಂದು ತಮ್ಮ ಸಂವಹನ ವಿಭಾಗದ ಮುಖ್ಯಸ್ಥ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿರುವುದು ಭಗವಾನ್ ಬುದ್ಧರ ಅದ್ಯಾವ ಉಪದೇಶದಲ್ಲಿ ಇದೆ ಹೇಳು ಎಂದು ಪ್ರಶ್ನೆ ಮಾಡಿದ್ದೀರಾ ಸಿದ್ದರಾಮಯ್ಯನವರೇ?
  11. ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಿ ಕಾರ್ಪೊರೇಟರ್ ಮಾಡಿದ್ದ ಕೆ. ಎಸ್. ಸಮಿವುಲ್ಲಾ ಹಿನ್ನೆಲೆ ಏನು ಎಂದು ಸ್ವಲ್ಪ ತಮ್ಮ ಬಾಯಿಂದಲೇ ಹೇಳಬಹುದೇ ಡಿ.ಕೆ. ಶಿವಕುಮಾರ್‌ರವರೇ?
  12. ಸ್ವತಃ ತಾವೇ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಸೀಮಾ ಅವರ ಗಂಡ ಹಾಗೂ ಕೆಪಿಸಿಸಿ ಲೇಬರ್ ಸೆಲ್ ಸದಸ್ಯ ಅಲ್ತಾಫ್ ಖಾನ್ ಒಬ್ಬ ರೌಡಿ ಶೀಟರ್ ಅಷ್ಟೇ ಅಲ್ಲದೇ ತಮ್ಮ ಶಿಷ್ಯ ಜಮೀರ್ ಅಹಮ್ಮದ್ ಖಾನ್ ಅವರ ಅತ್ಯಾಪ್ತ ಎನ್ನುವುದು ಗೊತ್ತಿಲ್ಲವೇ ಸಿದ್ದರಾಮಯ್ಯನವರೇ?
  13. ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್‌ ಜತೆ ರೌಡಿ ಶೀಟರ್‌ಗಳು ಪೋಸ್ ಕೊಟ್ಟು ಏರಿಯಾದಲ್ಲೆಲ್ಲ ಪೋಸ್ಟರ್ ಅಂಟಿಸಿಕೊಳ್ಳುತ್ತಾರಲ್ಲ, ಅದು ಯಾವ ಜನಸೇವೆ ಎನ್ನುವುದನ್ನು ತಿಳಿಸಬಲ್ಲಿರಾ ಡಿ.ಕೆ. ಶಿವಕುಮಾರ್‌ರವರೇ?
  14. ತಾವು ಟಿ. ನರಸೀಪುರ ಶಾಸಕನನ್ನಾಗಿ ಮಾಡಲು ಹೊರಟಿರುವ ಸುನಿಲ್ ಬೋಸ್ ಎಂಬ ಕಾಂಗ್ರೆಸ್ ನಾಯಕನ ಮೇಲೆ ಕ್ರಿಕೆಟ್ ಬೆಟ್ಟಿಂಗ್ ಕೇಸ್ ಬುಕ್ ಆಗಿತ್ತು ಎನ್ನುವುದು ಮರೆತು ಹೋಗಿದೆಯೇ ಸಿದ್ದರಾಮಯ್ಯನವರೇ?
  15. ಕಾಂಗ್ರೆಸ್ ಮಾಜಿ ಮಂತ್ರಿ ಮತ್ತು ಶಾಸಕ ವಿನಯ್ ಕುಲಕರ್ಣಿ ಇನ್ನೂ ಯಾವ ಕಾರಣಕ್ಕಾಗಿ ಕೋರ್ಟ್‌ಗೆ ಅಲೆಯುತ್ತಿದ್ದಾರೆ? ಯಾವ ಸಮಾಜ ಸೇವೆಯನ್ನು ಮಾಡಿದ ಘನಾಂಧಾರಿ ಕೆಲಸಕ್ಕಾಗಿ ಧಾರವಾಡ ಜಿಲ್ಲೆಗೆ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಬಹುದೇ ಡಿ.ಕೆ. ಶಿವಕುಮಾರ್‌ರವರೇ?
  16. ತಮ್ಮ ಆಪ್ತ ಮಾಜಿ ಸಚಿವ ಕೆ.ಜೆ. ಜಾರ್ಜ್ ಜತೆಯಾಗಿ ಬೆಂಗಳೂರು ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ರಿಜ್ವಾನ್ ಅರ್ಷದ್ ಪರ ಪ್ರಚಾರ ಮಾಡಿದ್ದ ಕುಖ್ಯಾತ ರೌಡಿ ‘ಬ್ರಿಗೇಡ್ ಆಝಮ್’ ಕುರಿತು ತಮಗೆ ಮಾಹಿತಿ ಇರಲಿಲ್ಲವೇ ಸಿದ್ದರಾಮಯ್ಯನವರೇ? ಎಂದು ಎನ್‌‌. ರವಿಕುಮಾರ್ ಕಾಂಗ್ರೆಸ್‌ ನಾಯಕರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | ಬೊಮ್ಮಾಯುಲ್ಲಾ ಖಾನ್, ಗಡ್ಕರಿ ಶೇಕ್: ಸಿದ್ರಾಮುಲ್ಲಾ ಖಾನ್‌ ಎಂದ ಸಿ.ಟಿ. ರವಿಗೆ ಕಾಂಗ್ರೆಸ್‌ ತಿರುಗೇಟು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಬಂಗಾರ‌ ಇಂದೇ ತಗೊಳ್ಳಿ! ಚಿನ್ನದ ಬೆಲೆ ಭಾರೀ ಇಳಿಕೆ; ಇಂದು ಇಷ್ಟಿದೆ ನೋಡಿ

Gold Rate Today: ಚಿನ್ನಾಭರಣಗಳ ಮಾರುಕಟ್ಟೆಯಲ್ಲಿ ಇಂದು ಭಾರಿ ಪ್ರಮಾಣದ ದರ ಇಳಿಕೆ ಕಂಡುಬಂದಿದೆ. ಬೆಳ್ಳಿಯ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ ಚಿನ್ನದ 10 ಗ್ರಾನ ಬೆಲೆಗಳು ಕ್ರಮವಾಗಿ ₹1000 ಹಾಗೂ ₹1090 ಇಳಿಕೆ ಆಗಿವೆ.

VISTARANEWS.COM


on

gold rate today 18
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು ಬಂಗಾರದ ಬೆಲೆ ಭಾರೀ ಇಳಿಕೆ ದಾಖಲಿಸಿದೆ. ಈ ಪ್ರಮಾಣದ ದರ ಇಳಿಕೆಗೆ ಕಾರಣ ಸ್ಪಷ್ಟವಾಗಿಲ್ಲವಾದರೂ, ಬಂಗಾರ ಕೊಳ್ಳಲು ಇಂದೇ ಸುಸಮಯವಾಗಿದೆ. 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹100 ಹಾಗೂ ₹109 ಇಳಿಕೆ ಆಗಿವೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,555ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,440 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹65,550 ಮತ್ತು ₹6,65,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,151 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,208 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹71,510 ಮತ್ತು ₹7,15,100 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹84, ಎಂಟು ಗ್ರಾಂ ₹672 ಮತ್ತು 10 ಗ್ರಾಂ ₹840ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ65,70071,660
ಮುಂಬಯಿ65,550 71,510
ಬೆಂಗಳೂರು65,550 71,510
ಚೆನ್ನೈ66,35072,380

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Continue Reading

ಕ್ರೈಂ

Hassan Pen Drive Case: ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

Hassan Pen Drive Case: ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

VISTARANEWS.COM


on

Hassan Pen Drive Case Prajwal Revanna
Koo

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ (Karnataka politics) ಅತೀವ ಕೋಲಾಹಲ ಸೃಷ್ಟಿಸಿರುವ ಹಾಸನದ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಅಶ್ಲೀಲ ವಿಡಿಯೋದಲ್ಲಿರುವ (Obscene video) ಪ್ರಧಾನ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna) ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಅವರು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದಾರೆ.

ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್‌ ಅವರು ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್‌ ವೀಸಾವನ್ನು ಅವರು ಹೊಂದಿದ್ದಾರೆ. ಟೂರಿಸ್ಟ್‌ ವೀಸಾದಲ್ಲಿ ಅವರು ಜರ್ಮನಿಗೆ ತೆರಳಿದ್ದು, ಇದರ ಅವಧಿ 90 ದಿನಗಳ ಕಾಲ ಚಾಲೂ ಇರುತ್ತದೆ. CRPC41A ಸೆಕ್ಷನ್‌ ಪ್ರಕಾರ, ಅವರು ನೋಟೀಸ್‌ಗೆ ಸ್ಪಂದಿಸಿ ಹಾಜರಾಗದೆ ಇದ್ದರೆ ಅವರನ್ನು ಬಂಧಿಸಬಹುದಾಗಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಆದರೆ ಹಾಗೆ ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಇಂದು ಬೆಳಗ್ಗೆ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೊಟೀಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

ಪ್ರಜ್ವಲ್‌ ತನಿಖೆ ಮುಖ್ಯ

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗೂ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ಇಂದು ನೊಟೀಸ್ (Notice) ಅನ್ನು ಎಸ್‌ಐಟಿ (SIT) ಟೀಂ ಅಂಟಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಹೆಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಆದರೆ ಈಗಾಗಲೇ ಎಸ್‌ಐಟಿ ವಿಚಾರಣೆ ನೋಟೀಸ್‌ ಜಾರಿ ಮಾಡಿದೆ. ಇದಕ್ಕೆ ಉತ್ತರಿಸದೆ ತಲೆ ಮರೆಸಿಕೊಂಡರೆ ಆರೋಪಿಗೆ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೊಟೀಸ್ ಜಾರಿ ಮಾಡುವ ಸಾಧ್ಯತೆಯೂ ಎಸ್‌ಐಟಿ ಮುಂದಿದೆ.

ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಹಾಗೂ ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ. ವಿಚಾರಣೆ ಬಳಿಕ ಕಾರ್ತೀಕ್ ಮೊಬೈಲ್ ಸೀಜ್ ಮಾಡಿ ಎಫ್ಎಸ್ಎಲ್‌ಗೆ ವಿಧಿವಿಜ್ಞಾನ ಪರಿಶೀಲನೆಗಾಗಿ ಕಳಿಸಲಾಗಿದೆ.

ಹೋಮ ಮಾಡಿಸುತ್ತಿರುವ ರೇವಣ್ಣ

ತಮ್ಮ ವಿರುದ್ಧ ಎಸ್ಐಟಿ ತನಿಖೆ ಚುರುಕುಗೊಂಡಿರುವ ನಡುವೆ ರೇವಣ್ಣ ದೇವರು ದಿಂಡಿರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ಅವರ ಮನೆಯಲ್ಲಿ ಹೋಮ ಹವನ ಮಾಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎದುರಾದ ಸಂಕಷ್ಟ ನಿವಾರಣೆಗಾಗಿ ಮನೆಯೊಳಗೇ ಹೋಮ ಕುಂಡ ನಿರ್ಮಿಸಿ ಬೆಳಗ್ಗೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

Continue Reading

ಕರ್ನಾಟಕ

Bengaluru Weather: ಬೆಂಗಳೂರು ಈಗ ʼಹಾಟ್‌ʼಸ್ಪಾಟ್‌; 1983ರ ನಂತರ ಮೊದಲ ಬಾರಿ ಏಪ್ರಿಲ್‌ನಲ್ಲಿ ಶೂನ್ಯ ಮಳೆ

Bengaluru Weather: ಬೆಂಗಳೂರಿನಲ್ಲಿ ಬಿಸಿಲಿನ‍ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಚ್ಚರಿ ಎಂದರೆ ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯೇ ಆಗಿಲ್ಲ. ಈ ರೀತಿಯ ಪರಿಸ್ಥಿತಿ 1983ರ ನಂತರ ಕಂಡುಬರುತ್ತಿರುವುದು ಇದು ಮೊದಲ ಬಾರಿ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದೇ ಕಾರಣಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದೆ. ಈ ಮಧ್ಯೆ ʼʼಮಳೆಗಾಲಕ್ಕೆ ಮುಂಚಿತವಾಗಿ ಎಲ್ ನಿನೊ ಸ್ಥಿತಿಯು ತಟಸ್ಥ ಅಥವಾ ಶೂನ್ಯಕ್ಕೆ ಬದಲಾಗುತ್ತದೆ ಎನ್ನುವ ನಿರೀಕ್ಷೆ ಇದೆ. ಇದು ಉತ್ತಮ ಮಾನ್ಸೂನ್‌ಗೆ ಅನುಕೂಲ ಒದಗಿಸಲಿದೆ. ಈ ಮಳೆಗಾಲದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ” ಎಂದು ವಿಜ್ಞಾನಿಗಳು ತಿಳಿಸಿದ್ದು ಕೊಂಚ ಮಟ್ಟಿನ ನೆಮ್ಮದಿ ನೀಡಿದೆ.

VISTARANEWS.COM


on

Bengaluru Weather
Koo

ಬೆಂಗಳೂರು: ಬೆಂಗಳೂರು ಅಕ್ಷರಶಃ ʼಬೆಂದʼಕಾಳೂರು ಆಗಿದೆ. ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಹನಿ ಮಳೆಗಾಗಿ ಆಗಸದತ್ತ ಮುಖ ಮಾಡುವಂತಾಗಿದೆ. ಅಚ್ಚರಿ ಎಂದರೆ ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯೇ ಆಗಿಲ್ಲ (Bengaluru Weather). ಈ ರೀತಿಯ ಪರಿಸ್ಥಿತಿ 1983ರ ನಂತರ ಕಂಡುಬರುತ್ತಿರುವುದು ಇದು ಮೊದಲ ಬಾರಿ ಎಂದು ಭಾರತೀಯ ಹವಾಮಾನ ಇಲಾಖೆ (Meteorological Department) ತಿಳಿಸಿದೆ.

ಈ ಬಗ್ಗೆ ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಪ್ರಸಾದ್‌ ಮಾತನಾಡಿ, ʼʼಈ ಏಪ್ರಿಲ್‌ 41 ವರ್ಷಗಳಲ್ಲೇ ಅತ್ಯಂತ ಶುಷ್ಕವಾಗಿತ್ತು. 1983ರ ಬಳಿಕ ಈ ವರ್ಷ ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ಮಳೆಯೇ ಆಗಿಲ್ಲʼʼ ಎಂದು ತಿಳಿಸಿದ್ದಾರೆ. ʼʼಮಳೆಗಾಲಕ್ಕೆ ಮುಂಚಿತವಾಗಿ ಎಲ್ ನಿನೊ ಸ್ಥಿತಿಯು ತಟಸ್ಥ ಅಥವಾ ಶೂನ್ಯಕ್ಕೆ ಬದಲಾಗುತ್ತದೆ ಎನ್ನುವ ನಿರೀಕ್ಷೆ ಇದೆ. ಇದು ಉತ್ತಮ ಮಾನ್ಸೂನ್‌ಗೆ ಅನುಕೂಲ ಒದಗಿಸಲಿದೆ. ಈ ಮಳೆಗಾಲದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ” ಎಂದು ಅವರು ವಿವರಿಸಿದ್ದಾರೆ.

ಅಂಕಿ-ಅಂಶ ಏನು ಹೇಳುತ್ತದೆ?

ಕೊನೆಯದಾಗಿ 2023ರ ನವೆಂಬರ್‌ನಲ್ಲಿ ಮಳೆಯಾಗಿತ್ತು ಎಂದು ಬೆಂಗಳೂರು ಐಎಂಡಿ ಹೇಳಿದೆ. ಅಂದು ಸುಮಾರು 106.6 ಮಿ.ಮೀ. ಮಳೆಯಾಗಿತ್ತು. ಅಂದಿನಿಂದ ಅಲ್ಪ ಸ್ವಲ್ಪ ಮಳೆಯಾಗಿದ್ದು ಬಿಟ್ಟರೆ ಧಾರಾಕಾರವಾಗಿ ಸುರಿದಿಲ್ಲ. ಡಿಸೆಂಬರ್ 0.7 ಮಿ.ಮೀ., 2024ರ ಜನವರಿಯಲ್ಲಿ 2 ಮಿ.ಮೀ. ಮಳೆಯಾಗಿತ್ತು. ಇನ್ನು ಫೆಬ್ರವರಿ, ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಒಂದು ಹನಿ ಮಳೆಯೂ ಸುರಿದಿಲ್ಲ ಎಂದು ಅಂಕಿ-ಅಂಶ ಹೇಳಿದೆ. ಏಪ್ರಿಲ್ 19 ಮತ್ತು 20ರಂದು ಕೆಲವು ಪ್ರದೇಶಗಳಲ್ಲಿ ಮಳೆಯಾಗಿದ್ದರೂ ಅದು ಗಮನಾರ್ಹವಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ. ಐಎಂಡಿ ಪ್ರಕಾರ, ಮೇ ಎರಡನೇ ವಾರದಿಂದ ಗುಡುಗು ಸಹಿತ ಸಂಜೆ ಮಳೆಯಾಗುವ ಸಾಧ್ಯತೆಯಿದೆ.

ಸಮುದ್ರ ಮಟ್ಟದಿಂದ 3,000ಕ್ಕೂ ಹೆಚ್ಚು ಅಡಿ ಎತ್ತರದಲ್ಲಿರುವ ಬೆಂಗಳೂರು ಆಹ್ಲಾದಕರ ಹವಾಮಾನವನ್ನು ಹೊಂದಿದೆ. ಹೀಗಾಗಿ ಇದು ಪ್ರಪಂಚದಾದ್ಯಂತದ ಯುವ, ಪ್ರತಿಭಾವಂತ ಉದ್ಯೋಗಿಗಳನ್ನು ಆಕರ್ಷಿಸುತ್ತದೆ. ಆದರೆ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. ಬೇಸಿಗೆಯ ಬಿಸಿ ಕಠಿಣವಾಗಿದೆ. ಕೊಳವೆಬಾವಿಗಳು ಒಣಗುತ್ತಿವೆ. ಜತೆಗೆ ಕೆಲವು ಕಡೆಗಳಲ್ಲಿ ನೀರಿಗಾಗಿ ಹಾಹಾಕಾರ ಮುಂದುವರಿದಿದೆ.

ಏಪ್ರಿಲ್‌ 28ರಂದು ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 38.5 ಡಿಗ್ರಿ ಸಿಲ್ಸಿಯಸ್‌ ದಾಖಲಾಗಿತ್ತು. ಈ ಮೂಲಕ ಎರಡನೇ ಅತ್ಯಂತ ಬೆಚ್ಚಗಿನ ಎಪ್ರಿಲ್‌ನ ದಿನ ಎನಿಸಿಕೊಂಡಿತ್ತು. ಈ ಹಿಂದೆ 2016ರ ಏಪ್ರಿಲ್‌ 25ರಂದು 39.2 ಡಿಗ್ರಿ ಸಿಲ್ಸಿಯಸ್‌ ದಾಖಲಾಗಿದ್ದು ಇದುವರೆಗಿನ ಏಪ್ರಿಲ್‌ನ ಗರಿಷ್ಠ ಉಷ್ಣಾಂಶ.

ಇದನ್ನೂ ಓದಿ: Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

ದೇಶದಲ್ಲೂ ಇದೇ ರೀತಿಯ ಪರಿಸ್ಥಿತಿ ಇದೆ. ದಿನದಿಂದ ದಿನಕ್ಕೆ ವಾತಾವರಣದ ಬಿಸಿ ಏರಿಕೆಯಾಗುತ್ತಿದೆ. ಬಿಸಿಲಿನ ಬೇಗೆಗೆ ಜನ ಹೈರಾಣಾಗಿದ್ದಾರೆ. ದೇಶದ ಹೆಚ್ಚಿನ ಭಾಗಗಳು ಉಷ್ಣಗಾಳಿಯ ಹೊಡೆತಕ್ಕೆ ಸಿಲುಕಿ ತತ್ತರಿಸಿವೆ. 1901ರ ಬಳಿಕ ರಾತ್ರಿ ತಾಪಮಾನದ ದೃಷ್ಟಿಯಿಂದ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಇದು ಅತ್ಯಂತ ಬೆಚ್ಚಗಿನ ಏಪ್ರಿಲ್ ಎನಿಸಿಕೊಂಡಿದೆ. ಜತೆಗೆ ಮೂರನೇ ಅತಿ ಹೆಚ್ಚಿನ ಸರಾಸರಿ ತಾಪಮಾನವಾಗಿದೆ. ಹವಾಮಾನ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಗರಿಷ್ಠ, ಕನಿಷ್ಠ ಮತ್ತು ಸರಾಸರಿ ತಾಪಮಾನದ ದೃಷ್ಟಿಯಿಂದ ಇದು ದೇಶದ ಎರಡನೇ ಅತಿ ಹೆಚ್ಚು ಬೆಚ್ಚಗಿನ ಏಪ್ರಿಲ್ ಆಗಿದೆ. ಎಲ್ ನಿನೊ ಮತ್ತು ಹವಾಮಾನ ಬದಲಾವಣೆ ಇದಕ್ಕೆ ಕಾರಣ ಎಂದು ತಜ್ಞರು ತಿಳಿಸಿದ್ದಾರೆ.

Continue Reading

ಕ್ರೈಂ

Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

Hassan Pen Drive Case: ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಪ್ರಜ್ವಲ್‌ ರೇವಣ್ಣ ಜರ್ಮನಿಗೆ ತೆರಳಿದ್ದು, ಎಚ್‌ಡಿ ರೇವಣ್ಣ ಅವರು ಉತ್ತರ ಕರ್ನಾಟಕದ ಚುನಾವಣೆ ಪ್ರಚಾರಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಮನೆಯಲ್ಲೇ ಇದ್ದಾರೆ ಎಂದೂ ಹೇಳಲಾಗುತ್ತಿದೆ.

VISTARANEWS.COM


on

hassan pen drive case hd revanna prajwal revanna
Koo

ಹಾಸನ: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋಗಳ ಆರೋಪಿಗಳಾಗಿರುವ (Hassan Pen Drive Case) ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗು ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ನೊಟೀಸ್ (Notice) ಅನ್ನು ಅಂಟಿಸಿ ಎಸ್‌ಐಟಿ (SIT) ಟೀಂ ವಾಪಸಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಪ್ರಜ್ವಲ್‌ ರೇವಣ್ಣ ಜರ್ಮನಿಗೆ ತೆರಳಿದ್ದು, ಎಚ್‌ಡಿ ರೇವಣ್ಣ ಅವರು ಉತ್ತರ ಕರ್ನಾಟಕದ ಚುನಾವಣೆ ಪ್ರಚಾರಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಮನೆಯಲ್ಲೇ ಇದ್ದಾರೆ ಎಂದೂ ಹೇಳಲಾಗುತ್ತಿದೆ.

ಇಂದು ಸ್ಥಳ ಮಹಜರು

ಇಂದು ಹೊಳೆನರಸೀಪುರಕ್ಕೆ ತೆರಳಿರುವ ಎಸ್‌ಐಟಿ ಟೀಂ, ಏಪ್ರಿಲ್ 28ರಂದು ದೂರು ನೀಡಿದ್ದ ಸಂತ್ರಸ್ತ ಮಹಿಳೆಯ ಸಮ್ಮುಖದಲ್ಲಿ ಸ್ಥಳ ಮಹಜರ್ ನಡೆಸಲಿದೆ. ಹೊಳೆನರಸೀಪುರದ ಎಚ್‌ಡಿ ರೇವಣ್ಣ ಮನೆಯಲ್ಲಿ ಕೂಡ ಮಹಜರ್ ನಡೆಸಬೇಕಿದೆ. ತಾನು ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ರೇವಣ್ಣ ಲೈಂಗಿಕ ಕಿರುಕುಳ ನೀಡಿದ್ದಾಗಿ ಮಹಿಳೆ ದೂರು ನೀಡಿದ್ದರು.

ಹೊಳೆನರಸೀಪುರ ನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದರು. ಬಳಿಕ ಪ್ರಕರಣವನ್ನು ಸರ್ಕಾರ ಎಸ್‌ಐಟಿಗೆ ವಹಿಸಿತ್ತು. ನಿನ್ನೆ ಮಹಿಳೆಯ ಹೇಳಿಕೆಯನ್ನು ಎಸ್‌ಐಟಿ ದಾಖಲು ಮಾಡಿಕೊಂಡಿದೆ. ಇಂದು ಖುದ್ದು ಮಹಿಳೆ ಸಮ್ಮುಖದಲ್ಲಿ ಸ್ಥಳ ಮಹಜರ್ ಮಾಡಬೇಕಿದೆ.

ಪ್ರಜ್ವಲ್‌ಗೆ ನೋಟಿಸ್‌ ಇಶ್ಯೂ ಹೇಗೆ?

ಪ್ರಕರಣದ ಎ1 ಹೆಚ್.ಡಿ ರೇವಣ್ಣ ಹಾಗೂ ಎ2 ಪ್ರಜ್ವಲ್‌ ರೇವಣ್ಣ ಇಬ್ಬರಿಗೂ ನೊಟೀಸ್ ಇಶ್ಯೂ ಆಗಿದ್ದು, ಇದನ್ನು ಪ್ರಜ್ವಲ್‌ಗೆ ತಲುಪಿಸುವುದು ಹೇಗೆ ಎಂಬುದು ಈಗ ಎಸ್‌ಐಟಿ ಮುಂದಿರುವ ಪ್ರಶ್ನೆಯಾಗಿದೆ. ಪ್ರಜ್ವಲ್ ಸದ್ಯ ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದು, ಎರಡು ತಿಂಗಳ ಟೂರಿಸ್ಟ್ ವೀಸಾದಲ್ಲಿ ತೆರಳಿದ್ದಾರೆ.

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಆದರೆ ಪ್ರಜ್ವಲ್ ರೇವಣ್ಣಗೆ ನೊಟೀಸ್ ಕೊಟ್ಟು ಕರೆಸಿಕೊಳ್ಳಲು ಫ್ರಾಂಕ್‌ಫರ್ಟ್ ಟ್ರೀಟಿ ಏನು ಹೇಳುತ್ತದೆ ಎಂದು ತಿಳಿಯಬೇಕಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಹೆಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಸದ್ಯ ತೀವ್ರಗತಿಯಲ್ಲಿ ಸಾಗುತ್ತಿರುವ ತನಿಖೆ ಪ್ರಜ್ವಲ್‌ ಗೈರುಹಾಜರಿಯಲ್ಲಿ ವಿಳಂಬಗತಿಗೆ ಜಾರಬಹುದು. ಚುನಾವಣೆ ಬಿಸಿ ಮುಗಿದ ನಂತರ ಹಳ್ಳ ಹಿಡಿಯಲೂಬಹುದು. ಆದರೆ ಒಬ್ಬ ಸಂಸತ್‌ ಸದಸ್ಯ ತಲೆ ತಪ್ಪಿಸಿಕೊಂಡಿದ್ದಾರೆಂದರೆ ಕ್ಷೇತ್ರಕ್ಕೆ, ಪಕ್ಷಕ್ಕೆ ಹಾಗೂ ಇಡೀ ರಾಜ್ಯಕ್ಕೆ ಮುಜುಗರದ ಸಂಗತಿ.

ಅರೋಪಿಗಾಗಿ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೊಟೀಸ್ ಜಾರಿ ಮಾಡುವ ಸಾಧ್ಯತೆ ಇದೆ. ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಹಾಗೂ ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿ, “ಯಾರನ್ನೇ ಆದರೂ ಏಕಾಏಕಿ ಬಂಧನ ಮಾಡುವುದಿಲ್ಲ” ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೊಟೀಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

“ನಾವು SIT ಮಾಡಿ ತನಿಖೆಗೆ ಚಾಲನೆ ಕೊಟ್ಟಿದ್ದೇವೆ. ಅವರೇನೂ ಮಾಡಿಲ್ಲ ಅಂತ ಅಮಿತ್ ಶಾ ಹೇಳಿದ್ದಾರೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವಂತಹದ್ದು ಏನೂ ಇಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನ ಮಾಡ್ತೀವಿ. ಇದರಲ್ಲಿ ಬಹಳ ಜನರ ಜೀವನ ಇದೆ. ಇಷ್ಟ ಬಂದ ಹಾಗೆ ತನಿಖೆ‌ ಮಾಡೋಕೆ ಆಗೊಲ್ಲ. SIT ತನಿಖೆ ಶುರುವಾಗಿದೆ. ನೊಟೀಸ್‌ ಕೊಟ್ಟಿದ್ದಾರೆ. ದೂರು ಕೊಟ್ಟವರ ಹೇಳಿಕೆ ಪಡೆದಿದ್ದಾರೆ. ಏನು ಕಾನೂನು ಪ್ರಕ್ರಿಯೆ ಇದೆಯೋ ಆ ರೀತಿ ಮಾಡ್ತಿದ್ದಾರೆ” ಎಂದು ಪರಮೇಶ್ವರ್‌ ತಿಳಿಸಿದ್ದಾರೆ.

ಇದನ್ನೂ ಓದಿ: Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು?

Continue Reading
Advertisement
LPG Price Cut
ದೇಶ3 mins ago

LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

Ambedkar Statue in kalaburagi news
ಕಲಬುರಗಿ11 mins ago

Ambedkar Statue: ಅಂಬೇಡ್ಕರ್‌ ಪ್ರತಿಮೆ ಅಪಮಾನ ಕೇಸ್‌; ಜಾಮೀನು ಪಡೆದ ಆರೋಪಿ ಮನೆಗೆ ಕಲ್ಲು ತೂರಾಟ

gold rate today 18
ಚಿನ್ನದ ದರ29 mins ago

Gold Rate Today: ಬಂಗಾರ‌ ಇಂದೇ ತಗೊಳ್ಳಿ! ಚಿನ್ನದ ಬೆಲೆ ಭಾರೀ ಇಳಿಕೆ; ಇಂದು ಇಷ್ಟಿದೆ ನೋಡಿ

Delhi Congress
ರಾಜಕೀಯ32 mins ago

Delhi Congress: ದಿಲ್ಲಿ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು; ಪಕ್ಷಕ್ಕೆ ಗುಡ್‌ಬೈ ಹೇಳಿದ ಮಾಜಿ ಶಾಸಕರು

Duniya Vijay Visited Kolluru Shri Mookambika Devi Temple
ಸಿನಿಮಾ35 mins ago

Duniya Vijay: ಕೊಲ್ಲೂರಿನಲ್ಲಿ ʼಸ್ಯಾಂಡಲ್‌ವುಡ್‌ ಸಲಗʼವನ್ನು ಮುತ್ತಿಕೊಂಡ ಅಭಿಮಾನಿಗಳು!

Vettaiyan Movie Anirudh Ravichander to make a special appearance in Rajinikanth
ಕಾಲಿವುಡ್44 mins ago

Vettaiyan Movie: ರಜನಿಕಾಂತ್ ಸಿನಿಮಾದಲ್ಲಿ ಅನಿರುದ್ಧ್ ರವಿಚಂದರ್; ಲೀಕ್‌ ಆಯ್ತು ಫೋಟೊ!

Divorce Case
ಕ್ರೈಂ1 hour ago

Divorce Case: ಪತಿ, ಕುಟುಂಬದ ವಿರುದ್ಧದ ಸುಳ್ಳು ಕೇಸು ಕ್ರೌರ್ಯಕ್ಕೆ ಸಮಾನ; ಬಾಂಬೆ ಹೈಕೋರ್ಟ್

Hassan Pen Drive Case Prajwal Revanna
ಕ್ರೈಂ1 hour ago

Hassan Pen Drive Case: ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

Mokshita Pai realistic morning routine With special Child brother
ಕಿರುತೆರೆ1 hour ago

Mokshitha Pai: ವಿಶೇಷ ಚೇತನ ತಮ್ಮನನ್ನು ಅಮ್ಮನಂತೆ ಆರೈಕೆ ಮಾಡುತ್ತಿರುವ ʻಪಾರುʼ

Suspicious Death in Mandya
ಮಂಡ್ಯ1 hour ago

Suspicious Death : ಗೃಹಿಣಿಯ ಕುತ್ತಿಗೆಯಲ್ಲಿತ್ತು ರಕ್ತ ಹೆಪ್ಪುಗಟ್ಟಿರುವ ಕಲೆ; ಈ ಸಾವು ಕೊಲೆಯೋ, ಆತ್ಮಹತ್ಯೆಯೋ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌