D.K. Shivakumar: ಸಿಎಂ ಕುರ್ಚಿ ಖಾಲಿಯಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್ - Vistara News

ಬೆಂಗಳೂರು

D.K. Shivakumar: ಸಿಎಂ ಕುರ್ಚಿ ಖಾಲಿಯಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್

D.K.Sivakumar: “ಸಿಎಂ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

VISTARANEWS.COM


on

Independence Day 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು, ಸೆ. 02: “ಸಿಎಂ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಹೇಳಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿ ಎನ್ನುವ ಆರ್.ವಿ.ದೇಶಪಾಂಡೆಯವರ ಹೇಳಿಕೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು.

DK Shivakumar

“ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ. ಆದರೆ ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನೀಡೋಣ” ಎಂದರು. ನ್ಯಾಯಲಯದಲ್ಲಿ ಸಿದ್ದರಾಮಯ್ಯ ಅವರ ವಿರುದ್ದವಾಗಿ ತೀರ್ಪು ಬಂದರೆ ಮುಂದಿನ ನಡೆ ಏನು ಎಂದು ಕೇಳಿದಾಗ “ಯಾವುದೇ ವ್ಯತಿರಿಕ್ತವಾಗುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ಕೆಲಸ ಮಾಡುತ್ತಾರೆ” ಎಂದರು.

ಇದನ್ನೂ ಓದಿ: KPSC Exam: ಕೆಪಿಎಸ್ಸಿ ಮರು ಪರೀಕ್ಷೆ; ಕೆಟ್ಟ ಮೇಲೆ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಬಂತು- ಆರ್‌ ಅಶೋಕ್‌‌ ವ್ಯಂಗ್ಯ

ಕಾಂಗ್ರೆಸ್ ಬಗ್ಗೆ ಸಂಸದ ಸುಧಾಕರ್ ಪ್ರಮಾಣ ಪತ್ರ ನೀಡಲಿ

ಕೋವಿಡ್ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಂಸದ ಡಾ.ಕೆ.ಸುಧಾಕರ್ ಅವರು, ಕಾಂಗ್ರೆಸ್ ಅವರು ಸತ್ಯಹರಿಶ್ಚಂದ್ರರೇ ಎನ್ನುವ ಹೇಳಿಕೆ ಬಗ್ಗೆ ಕೇಳದಾಗ “ಕಾಂಗ್ರೆಸ್ ಅಲ್ಲಿ ಇದ್ದು ಈಗ ಬಿಜೆಪಿಗೆ ಹೋಗಿರುವ ಸಂಸದ ಸುಧಾಕರ್ ಅವರು ತಮ್ಮ ಹೇಳಿಕೆಯ ಬಗ್ಗೆ ಮೊದಲು ಪ್ರಮಾಣ ಪತ್ರ ನೀಡಲಿ. ಅವರ ರಕ್ತ, ಆಚಾರ, ವಿಚಾರ ಎಲ್ಲವೂ ಕಾಂಗ್ರೆಸ್ ಇತ್ತು. ಈಗ ನಾಲ್ಕೈದು ವರ್ಷದಿಂದ ಬದಲಾಗಿದೆ” ಎಂದರು.

“ನಾನು ಕೋವಿಡ್ ಹಗರಣದ ವರದಿಯನ್ನು ಓದಿಲ್ಲ. ಕೇವಲ ಮಾಧ್ಯಮಗಳ ವರದಿಯನ್ನು ಮಾತ್ರ ಓದಿದ್ದೇನೆ. ವರದಿ ಪರಿಶೀಲನೆ ನಂತರ ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದರು. ಯಡಿಯೂರಪ್ಪ ಅವರ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣದ ಶೀಘ್ರ ತನಿಖೆಗೆ ರಾಜ್ಯ ಮಹಿಳಾ ಆಯೋಗ ಸೂಚಿಸಿರುವ ಬಗ್ಗೆ ಕೇಳಿದಾಗ “ಇರ ಬಗ್ಗೆ ನನಗೆ ಮಾಹಿತಿಯಿಲ್ಲ” ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ದಿಢೀರ್‌ ಮಳೆಯಿಂದಾಗಿ ಕೆರೆಯಂತಾದ ಆನೇಕಲ್ ರಸ್ತೆ; ನಾಳೆಯೂ ಭಾರಿ ಮಳೆ ಎಚ್ಚರಿಕೆ

Karnataka Weather Forecast : ಆನೇಕಲ್‌, ಬನ್ನೇರುಘಟ್ಟ ಸುತ್ತಮುತ್ತ ಮಳೆಯಾಗಿದ್ದು, ದಿಢೀರ್‌ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿತ್ತು. ಯಾದಗಿರಿಯಲ್ಲಿ ನಿರಂತರ ಮಳೆಗೆ (Rain News) ಜಮೀನುಗಳು ಕೆರೆಯಂತಾಗಿದ್ದವು.

VISTARANEWS.COM


on

By

Karnataka Weather Forecast
Koo

ಆನೇಕಲ್‌: ಸೋಮವಾರ ಆನೇಕಲ್ ತಾಲ್ಲೂಕಿನಾದ್ಯಂತ (Karnataka Weather Forecast) ಮಳೆರಾಯನ ಅಬ್ಬರ (Rain News) ಜೋರಾಗಿತ್ತು. ಆನೇಕಲ್, ಬನ್ನೇರುಘಟ್ಟ, ಜಿಗಣಿ, ಅತ್ತಿಬೆಲೆ ಸುತ್ತಮುತ್ತ ಮಳೆಯ ಸಿಂಚನವಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು, ಬಳಿಕ ಮಧ್ಯಾಹ್ನದ ಹೊತ್ತಿಗೆ ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡಬೇಕಾಯಿತು.

ಕೆಲವರು ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆಯಬೇಕಾಯಿತು. ಮಳೆರಾಯನ ಆಗಮನದಿಂದ ವಾತಾವರಣ ಕೂಲ್ ಆಗಿತ್ತು. ಕೆಲ ತಾಸು ಸುರಿದ ಮಳೆಗೆ ಆನೇಕಲ್‌ ರಸ್ತೆಗಳು ಜಲಾವೃತಗೊಂಡಿದ್ದವು. ಇತ್ತ ಮಳೆಯಿಂದಾಗಿ ಬನ್ನೇರುಘಟ್ಟ ರಸ್ತೆ ಕೆರೆಯಂತಾಗಿತ್ತು. ಮುಕ್ಕಾಲು ಅಡಿ ನೀರು ನಿಂತ ಕಾರಣ ವಾಹನ ಸವಾರರು ಪರದಾಡಿದರು. ಬನ್ನೇರುಘಟ್ಟದಿಂದ ಆನೇಕಲ್ ಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ರಸ್ತೆ ಕಾಣದೆ ಸವಾರರ ಕಂಗಲಾದರು. ಬನ್ನೇರುಘಟ್ಟ ರಸ್ತೆಯ ರಾಗೀಹಳ್ಳಿ ಬಳಿ ಘಟನೆ ನಡೆದಿದೆ.

karnataka weather Forecast
karnataka weather Forecast

ಯಾದಗಿರಿಯಲ್ಲಿ ನಿರಂತರ ಮಳೆ

ಯಾದಗಿರಿ ಜಿಲ್ಲೆಯಲ್ಲಿ ನಿರಂತರ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನೀರು ಪಾಲಾಗಿತ್ತು. ಮಳೆ ನೀರಿನಿಂದ ರೈತರ ಜಮೀನು ಪ್ರದೇಶ ನದಿಯಂತಾಗಿತ್ತು. ಯಾದಗಿರಿ ಜಿಲ್ಲೆಯ ಪಗಲಾಪುರ, ನಂದೆಪಲ್ಲಿ, ಬದ್ದೆಪಲ್ಲಿ, ವಂಕಸಂಬ್ರ ಸೇರಿದಂತೆ ಮೊದಲಾದ ಕಡೆ ಬೆಳೆ ಹಾಳಾಗಿತ್ತು. ಹತ್ತಿ, ಭತ್ತ, ತೊಗರಿ ಬೆಳೆ ಎಲ್ಲವೂ ನೀರುಪಾಲಾಗಿದ್ದವು. ಬೆಳೆ ಹಾನಿಯಿಂದ ಯಾದಗಿರಿ ಜಿಲ್ಲೆಯ ರೈತರ ಸಂಕಷ್ಟ ಎದುರಿಸಬೇಕಾಯಿತು. ಸರಕಾರ ಸೂಕ್ತ ಪರಿಹಾರ ಕಲ್ಪಿಸುವಂತೆ ಉಮೇಶ ಮುದ್ನಾಳ ಒತ್ತಾಯಸಿದರು.

ಇಂದು- ನಾಳೆ ಭಾರಿ ಮಳೆ ಎಚ್ಚರಿಕೆ

ಸೆ.2ರ ಸಂಜೆ ನಂತರ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಡುಪಿಯಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಒಳನಾಡಿನ ಸುತ್ತಮುತ್ತ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ನಾಳೆ ಮಂಗಳವಾರ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿ.ಸೆ ಮತ್ತು 21 ಡಿ.ಸೆ ಇರಲಿದೆ.

Continue Reading

ಸಿನಿಮಾ

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌; ದರ್ಶನ್‌ ಗ್ಯಾಂಗ್‌ ವಿರುದ್ಧ ಇನ್ನೆರಡು ದಿನಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ!

Actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣ ಅಂತಿ‌ಮ ಹಂತ ತಲುಪಿದ್ದು ಅತಿ ಹೆಚ್ಚು ಸಾಕ್ಷಿಗಳನ್ನು ಕಲೆ ಹಾಕಿದ ಪ್ರಕರಣವಾಗಿದೆ. ಇದರ ಕಂಪ್ಲೀಟ್‌ ಡಿಟೇಲ್ಸ್ ಇಲ್ಲಿದೆ.

VISTARANEWS.COM


on

Three more FIRs filed against Actor Darshan
Koo

ರೇಣುಕಾಸ್ವಾಮಿ ಕೊಲೆ ಪ್ರಕರಣ ಅಂತಿ‌ಮ ಹಂತ ತಲುಪಿದೆ. ಅತಿ ಹೆಚ್ಚು ಸಾಕ್ಷಿಗಳನ್ನು ಕಲೆ ಹಾಕಿದ ಪ್ರಕರಣವಾಗಿದ್ದು, ಈಗಾಗಲೆ ಸಾಬೀತಾಗಿರುವ ಸಾಕ್ಷಾಧಾರಗಳು ಹಾಗು ಆರೋಪಿಗಳ ಪರ ವಹಿಸಿ ಬಂದ ಹೇಳಿಕೆಗಳೇ ದರ್ಶನ್‌ಗೆ (Actor Darshan) ಕಂಟಕವಾಗಿವೆ. ಎಸಿಪಿ ಚಂದನ್ ನೇತೃತ್ವದ ತಂಡ ನಿಜಕ್ಕೂ ಶ್ರಮವಹಿಸಿ ಅನೇಕ ಸಾಕ್ಷಿಗಳನ್ನ ಕಲೆ ಹಾಕಿದೆ. ಪ್ರತಿಯೊಂದು ಸಾಕ್ಷಿಗಳೂ ಕೂಡ ಪ್ರಕರಣಕ್ಕೆ ಅಷ್ಟೆ ಪ್ರಾಮುಖ್ಯತೆಯನ್ನ ಒದಗಿಸಿದ್ದು ದರ್ಶನ್ ಮನೆಯ ಸಿಸಿಟಿವಿ ರಿಟ್ರೀವ್ ಸಹ ಒಂದು ಮಹತ್ವದ ಸಾಕ್ಷಿಯಾಗಿದೆ.

Actor Darshan
Actor Darshan

ಕೃತ್ಯ ಬಯಲಿಗೆ ಬಂದ ಬಳಿಕ ಡಿಲೀಟ್ ಆರೋಪಿಗಳು ದರ್ಶನ್ ಮನೆಗೆ ಸೇರಿ ಮೀಟಿಂಗ್ ಮಾಡಿದ್ದರು ಏನ್ನುವ ವಿಡಿಯೋವನ್ನು ಡಿಲೀಟ್ ಮಾಡಲಾಗಿತ್ತು. ಡಿವಿಆರ್‌ನನ್ನು ಎಫ್ ಎಸ್ ಎಲ್‌ಗೆ ರವಾನೆ ಮಾಡಿದ್ದರು.‌ ಎಫ್ ಎಸ್ ಎಲ್ ಅಧಿಕಾರಿಗಳು ಡಿವಿಆರ್‌ನಲ್ಲಿರುವ ಡಿಲೀಟೆಡ್ ವೀಡಿಯೊವನ್ನ ಪುನಃ ಪಡೆದುಕೊಂಡಿದ್ದಾರೆ. ದರ್ಶನ್ ಅವರು ತಪ್ಪು ಮಾಡಿಲ್ಲ ಎಂಬರ್ಥದಲ್ಲಿ ಮಾತನಾಡಿದ ಸೆಲೆಬ್ರಿಟಿಗಳ ಹೇಳಿಕೆಗಳನ್ನೂ ಕೂಡ ಪೊಲೀಸರು ಅನಾಲೈಝ್ ಮಾಡ್ತಿದ್ದಾರೆ. ಹತ್ತಾರು ಪೊಲೀಸರ ಶ್ರಮ , ಅನೇಕ‌ ಸಾಕ್ಷಿಗಳು , ನ್ಯಾಯಾಲಯದ ಆದೇಶಗಳು ಇವೆಲ್ಲವೂ ಸುಳ್ಳು ಎಂಬರ್ಥದಲ್ಲಿ ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ತಮ್ಮದೇ ಆದ ಸಾಮ್ರಾಜ್ಯವನ್ನ ಕಟ್ಟಿ ವ್ಯವಸ್ಥೆಯೇ ಸುಳ್ಳು ಎಂಬರ್ಥದಲ್ಲಿ ಕೆಲ ಸೆಲೆಬ್ರಿಟಿಗಳು ವರ್ತನೆಯನ್ನ ಮಾಡ್ತಿರುವುದು ಪೊಲೀಸರಿಗೆ ಹಾಗು ನ್ಯಾಯಾಲಯದ ಗಮನಕ್ಕೆ ಬಂದಿದೆ ಹಾಗು ಅಭಿಮಾನಿಗಳ ಧಮ್ಕಿಗಳೂ ಕೂಡ ಉಳಿದ ಆರೋಪಿಗಳ ಜೀವಕ್ಕೆ ಹಾನಿಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

ಈ ಹಿನ್ನಲೆಯಲ್ಲಿ ಇವೆಲ್ಲವೂ ಜಾಮೀನಿಗೆ ತೊಂದರೆಯಾಗುವ ಸಾಧ್ಯತೆಗಳೂ ಹೆಚ್ಚಿದೆ. ಇನ್ನು ಚಾರ್ಜ್ ಶೀಟ್ ಸಲ್ಲಿಸೋದಕ್ಕೆ ಕೌಂಟ್‌ಡೌನ್‌ ಆರಂಬವಾಗಿದೆ. ಚಾರ್ಜ್ ಶೀಟ್‌ನಲ್ಲಿ, ಸಿಡಿ ಆರ್ ರಿಪೋರ್ಟ್ ಗಳು , ಬಟ್ಟೆಗಳ ಸ್ಯಾಂಪಲ್ಸ್ , ಸಿಸಿಟಿವಿ , ಎಫ್ ಎಸ್ ಎಲ್ ರಿಪೋರ್ಟ್‌ಗಳು , 164 ಹೇಳಿಕೆಗಳೆಲ್ಲಾದರ ಉಲ್ಲೇಖವಿದೆ . ರೇಣುಕಾಸ್ವಾನಿ ಕೊಲೆಗೆ ಬಳಕೆಯಾದ ವಸ್ತುಗಳು ಕೂಡ ಪೊಲೀಸರ ಬಳಿದೆ. ಕೊಲೆಗೆ ಮುನ್ನ ಸ್ಟೋನಿ ಬ್ರೂಕ್ ಸಿಬ್ಬಂಧಿಗಳ ಹೇಳಿಕೆ ಪಟ್ಟಣಗೆರೆ ಶೆಡ್ ಸೆಕ್ಯೂರಿಟಿ ಗಾರ್ಡ್ ಹೇಳಿಕೆಗಳು ಸಾಕಷ್ಟು ಮಹತ್ವ ಪಡೆದಿದೆ. ಸದ್ಯ ಇಲ್ಲಿಯವರೆಗೆ 200ಕ್ಕೂ ಹೆಚ್ಚು ಸಾಕ್ಷಿಗಳನ್ನ ಕಲೆ ಹಾಕಿದ್ದಾರೆ.

Continue Reading

ಕರ್ನಾಟಕ

KPSC Exam: ಕೆಪಿಎಸ್ಸಿ ಮರು ಪರೀಕ್ಷೆ; ಕೆಟ್ಟ ಮೇಲೆ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಬಂತು- ಆರ್‌ ಅಶೋಕ್‌‌ ವ್ಯಂಗ್ಯ

KPSC Exam: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹ ಎಂದು ಆರ್‌ ಅಶೋಕ್‌ ತಿಳಿಸಿದ್ದಾರೆ. ಕಡೆಗೂ ಕೆಟ್ಟ ಮೇಲೆ ಬುದ್ಧಿ ಬಂತಲ್ಲ ಎಂದು ಕಾಲೆಳೆದಿದ್ದಾರೆ.

VISTARANEWS.COM


on

SSLC examination-2 to begin from tomorrow at over 700 centres
Koo

ಕೆಪಿಎಸ್‌ಸಿ (KPSC Exam) ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಹಾಗು ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮರುಪರೀಕ್ಷೆಯನ್ನ ಸಮರ್ಪಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಸೂಕ್ತ ಪರೀಕ್ಷಾ ದಿನಾಂಕ ನಿಗದಿ ಮಾಡುವುದು, ಅಭ್ಯರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಕೇಂದ್ರಗಳ ಹಂಚಿಕೆ ಮಾಡುವುದು, ಪ್ರಶ್ನೆ ಪತ್ರಿಕೆ ರಚನೆ, ಕನ್ನಡಕ್ಕೆ ತರ್ಜುಮೆ ಸೇರಿದಂತೆ ಎಲ್ಲ ಅಂಶಗಳನ್ನ ಪರಿಗಣಿಸಿ ಈ ಹಿಂದೆ ಆದ ತಪ್ಪುಗಳು, ಲೋಪದೋಷಗಳು ಮರುಕಳಿಸದಂತೆ ಅತ್ಯಂತ ಜಾಗರೂಕತೆಯಿಂದ, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು.

ಅಧಿಕಾರಿಗಳನ್ನು ಕಪ್ಪುಪಟ್ಟಿಗೆ ಸೇರಿಸಿ

ಈಗ ನಡೆದಿರುವ ಪರೀಕ್ಷೆಯಲ್ಲಿನ ಎಡವಟ್ಟುಗಳಿಗೆ ಕಾರಣರಾದ ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಮುಲಾಜಿಲ್ಲದೆ ಕಪ್ಪುಪಟ್ಟಿಗೆ ಸೇರಿಸಬೇಕು. ಮುಂದೆ ಯಾವ ಸ್ಪರ್ಧಾತ್ಮಕ ಪರೀಕ್ಷೆಗಳ ಕರ್ತವ್ಯಕ್ಕೂ ಅವರು ನಿಯೋಜನೆಯಾಗದಂತೆ ಬ್ಲಾಕ್ ಲಿಸ್ಟ್ ಮಾಡಬೇಕು. ಕೆಪಿಎಸ್ ಸಿ ಪರೀಕ್ಷೆ ಲಕ್ಷಾಂತರ ಯುವ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಪ್ರಶ್ನೆ ಆಗಿರುವುದರಿಂದ ಅವರ ಬದುಕಿನ ಜೊತೆ ಚೆಲ್ಲಾಟವಾಡದೆ, ಇದನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಪರೀಕ್ಷೆ ಸುವ್ಯವಸ್ಥಿತವಾಗಿ, ಅಚ್ಚುಕಟ್ಟಾಗಿ ನಡೆಯುವಂತೆ ಎಚ್ಚರವಹಿಸಬೇಕು. ಕೆಪಿಎಸ್ ಸಿ ಪರೀಕ್ಷೆ ಕಡೆಗೆ ಈಗ ಇಡೀ ದೇಶವೇ ಎದುರು ನೋಡುತ್ತಿದ್ದು, ಇದು ಈಗ ಕೇವಲ ಅಭ್ಯರ್ಥಿಗಳ ಪರೀಕ್ಷೆಯಾಗಿ ಉಳಿದಿಲ್ಲ. ಇದು ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಒಂದು ಸತ್ವ ಪರೀಕ್ಷೆಯಾಗಿದೆ.

Continue Reading

ಬೆಂಗಳೂರು

Lakshmi Hebbalkar: ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar: ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅವಕಾಶ ಕಲ್ಪಿಸಿದ್ದಾರೆ.

VISTARANEWS.COM


on

Lakshmi Hebbalkar
Koo

ಬೆಂಗಳೂರು: ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವಕಾಶ ಕಲ್ಪಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ.

Lakshmi Hebbalkar

ಇಲ್ಲಿಯವರೆಗೆ ಗೃಹಲಕ್ಷ್ಮೀ ಫಲಾನುಭವಿಗಳಾದ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆಯನ್ನು ಈ ಒಂದು ವರ್ಷದಲ್ಲಿ ತಂದಿದೆ ಎನ್ನುವುದನ್ನು ಯಜಮಾನಿಯರು ಹಂಚಿಕೊಳ್ಳಲು ಸಚಿವರು ಕೋರಿದ್ದಾರೆ.
ರೀಲ್ಸ್ ಮಾಡಿ ಸಾಮಾಜಿಕ ಜಾಲ ಜಾಲತಾಣಗಳಾದ ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡುವ ಮೂಲಕ ಅದನ್ನು ಹಂಚಿಕೊಳ್ಳುವಂತೆ ಕೋರಿದ್ದಾರೆ.

ಲಾಸ್ಟ್‌ ಡೇಟ್‌ ಯಾವಾಗ?

ಯಾವ ಯಜಮಾನಿಯರು ಮಾಡಿದ ರೀಲ್ಸ್‌ಗೆ ಹೆಚ್ಚು ವಿವರ್ಸ್ ಬಂದಿದೆಯೋ ಅಂತಹ ಯಜಮಾನಿಯರಿಗೆ ಒಂದು ಬಹುಮಾನ ಘೋಷಿಸಿದ್ದಾರೆ. ಇಲ್ಲಿಂದ ಒಂದು ತಿಂಗಳು ಅಂದರೆ ಸೆಪ್ಪಂಬರ್ 30ನೇ ತಾರೀಖಿನವರೆಗೆ ಯಜಮಾನಿಯರು ತಮ್ಮ ರೀಲ್ಸ್ ಗಳನ್ನು ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಹಂಚಿಕೊಳ್ಳಬೇಕಿದೆ. ಜಾಸ್ತಿ ವಿವರ್ಸ್ ಸಿಕ್ಕಿದ ಯಜಮಾನಿಯರಿಗೆ ಸಚಿವರು ವೈಯಕ್ತಿಕವಾಗಿ ಒಂದು ಬಹುಮಾನವನ್ನು ನೀಡಲಿದ್ದಾರೆ. ಮೊದಲ 50 ಯಜಮಾನಿಯರ ರೀಲ್ಸ್ ಹಾದಿಯನ್ನು ಎದುರು ನೋಡುತ್ತಿದ್ದೇನೆ; ಈ ಒಂದು ಗೃಹಲಕ್ಷ್ಮೀ ಯೋಜನೆಯಿಂದ ಜೀವನದಲ್ಲಿ ಆದ ಬದಲಾವಣೆಯನ್ನು ನಮ್ಮೆಲ್ಲ ಕರ್ನಾಟಕದ ಜನರ ಮುಂದೆ ಹಂಚಿಕೊಳ್ಳಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆಯ ಎಲ್ಲ ಯಜಮಾನಿಯರಲ್ಲಿ ಮನವಿ ಮಾಡಿದ್ದಾರೆ.

Continue Reading
Advertisement
Karnataka Weather Forecast
ಮಳೆ1 min ago

Karnataka Weather : ದಿಢೀರ್‌ ಮಳೆಯಿಂದಾಗಿ ಕೆರೆಯಂತಾದ ಆನೇಕಲ್ ರಸ್ತೆ; ನಾಳೆಯೂ ಭಾರಿ ಮಳೆ ಎಚ್ಚರಿಕೆ

Three more FIRs filed against Actor Darshan
ಸಿನಿಮಾ58 mins ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌; ದರ್ಶನ್‌ ಗ್ಯಾಂಗ್‌ ವಿರುದ್ಧ ಇನ್ನೆರಡು ದಿನಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ!

CM Siddaramaiah
ರಾಜಕೀಯ1 hour ago

CM Siddaramaiah : ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್; ಸೆ.9ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Independence Day 2024
ಬೆಂಗಳೂರು2 hours ago

D.K. Shivakumar: ಸಿಎಂ ಕುರ್ಚಿ ಖಾಲಿಯಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್

SSLC examination-2 to begin from tomorrow at over 700 centres
ಕರ್ನಾಟಕ2 hours ago

KPSC Exam: ಕೆಪಿಎಸ್ಸಿ ಮರು ಪರೀಕ್ಷೆ; ಕೆಟ್ಟ ಮೇಲೆ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಬಂತು- ಆರ್‌ ಅಶೋಕ್‌‌ ವ್ಯಂಗ್ಯ

Billa Ranga Baashaa
ಸಿನಿಮಾ3 hours ago

Billa Ranga Baashaa: ಕಿಚ್ಚೋತ್ಸವಕ್ಕೆ ‘ಬಿಲ್ಲ ರಂಗ ಭಾಷಾ’; ಹನುಮಾನ್ ಸಿನಿಮಾ ನಿರ್ಮಾಪಕ ಜೊತೆ ಕೈ ಜೋಡಿಸಿದ ಸುದೀಪ್

Kiccha Sudeep Call Boss To Only Two Persons
ಸಿನಿಮಾ3 hours ago

Kiccha Sudeepa: ನನ್ನ ಫ್ಯಾನ್ಸ್ ಒಳ್ಳೆಯವರು ಅದಕ್ಕೆ ನಾನು ಒಳ್ಳೆಯವನು- ದರ್ಶನ್ ಫ್ಯಾನ್ಸ್‌ಗೆ ಟಾಂಗ್

kichcha sudeepa
ಸಿನಿಮಾ4 hours ago

Kichcha Sudeepa: “ಮ್ಯಾಕ್ಸಿಮಮ್ ಮಾಸ್” ಆಟ ಆರಂಭ; ಕಿಚ್ಚನ ಹುಟ್ಟುಹಬ್ಬಕ್ಕೆ “ಮ್ಯಾಕ್ಸ್” ಚಿತ್ರದ ಮೊದಲ ಗೀತೆ ಬಿಡುಗಡೆ

Lakshmi Hebbalkar
ಬೆಂಗಳೂರು4 hours ago

Lakshmi Hebbalkar: ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Govt approves KPSC re-examination Officials suspended for dereliction of duty
ಪ್ರಮುಖ ಸುದ್ದಿ5 hours ago

KPSC Exam 2024 : ಕೆಪಿಎಸ್‌ಸಿ ಮರುಪರೀಕ್ಷೆಗೆ ಸರ್ಕಾರ ಅಸ್ತು; ಕರ್ತವ್ಯ ಲೋಪವೆಸಗಿದ ಅಧಿಕಾರಿಗಳು ಅಮಾನತು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 days ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌