Site icon Vistara News

ಆನೇಕಲ್‌ ಬಳಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಮೃತದೇಹ

ಆನೇಕಲ್: ಪಟ್ಟಣದ ಸಮೀಪದ ಹೆನ್ನಾಗರ ಗೇಟ್‌ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಕಾರಿನಿಂದ ಕೆಟ್ಟ ವಾಸನೆ ಬರುತ್ತಿದ್ದರಿಂದ ಸ್ಥಳೀಯರು ಪರಿಶೀಲಿಸಿದಾಗ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವುದು ಕಂಡುಬಂದಿದೆ.

ಹೆನ್ನಾಗರ ಗೇಟ್‌ ಬಳಿ ಕಳೆದ ನಾಲ್ಕು ದಿನಗಳಿಂದ ಕೆಎ 51 ಎಂಎಂ 9885 ಸಂಖ್ಯೆಯ ಕಾರು ನಿಂತಿತ್ತು. ಆರಂಭದಲ್ಲಿ ಸ್ಥಳೀಯರು ಕಾರನ್ನು ನೋಡಿ ಯಾರೋ ಪಾರ್ಕಿಂಗ್‌ ಮಾಡಿದ್ದಾರೆ ಎಂದು ಸುಮ್ಮನಾಗಿದ್ದರು. ಆದರೆ ಕಾರಿನಿಂದ ಕೆಟ್ಟ ವಾಸನೆ ಬರುತ್ತಿದ್ದರಿಂದ ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತನನ್ನು ಬೆಂಗಳೂರಿನ ವೀರಭದ್ರನಗರ ನಿವಾಸಿ ಚೇತನ್ ಕುಮಾರ್ (35) ಎಂದು ಗುರುತಿಸಲಾಗಿದೆ.

ತಿರುಪತಿಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ತೆರಳಿದ್ದ. ಮಾರ್ಗ ಮಧ್ಯೆದಲ್ಲಿ ಕಾರಿನ ಡ್ರೈವರ್ ಸೀಟಿನಲ್ಲೇ ಕುಳಿತು ಮೃತಪಟ್ಟಿರುವುದರಿಂದ ಹಲವು ಅನುಮಾನಗಳು ವ್ಯಕ್ತವಾಗಿವೆ. ಹೆಬ್ಬಗೋಡಿ ಪೊಲೀಸರು ಕಾರಿನಿಂದ‌ ಮೃತದೇಹ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ‌ ರವಾನೆ ಮಾಡಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಇದನ್ನೂ ಓದಿ | Tragedy | ಕುತ್ತಿಗೆಯನ್ನೇ ಕತ್ತರಿಸಿದ ಪ್ಲೈವುಡ್‌ ಕಟ್ಟಿಂಗ್‌ ಮೆಷಿನ್‌, ದಾರುಣವಾಗಿ ಪ್ರಾಣ ಕಳೆದುಕೊಂಡ ಯುವಕ

Exit mobile version