DK Shivakumar: ರಾಮನಗರ ಜಿಲ್ಲೆ ಹೆಸರು ಬದಲಾವಣೆ ಖಚಿತ; ಡಿಕೆಶಿ ನೇತೃತ್ವದ ನಿಯೋಗ ಸಿಎಂ ಭೇಟಿ - Vistara News

ಬೆಂಗಳೂರು

DK Shivakumar: ರಾಮನಗರ ಜಿಲ್ಲೆ ಹೆಸರು ಬದಲಾವಣೆ ಖಚಿತ; ಡಿಕೆಶಿ ನೇತೃತ್ವದ ನಿಯೋಗ ಸಿಎಂ ಭೇಟಿ

DK Shivakumar: “ಈಗಿರುವ ರಾಮನಗರವೇ ಹೆಡ್ ಕ್ವಾರ್ಟರ್ ಆಗಿರಲಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲ್ಲೂಕುಗಳು ಬೆಂಗಳೂರು ದಕ್ಷಿಣದ ವ್ಯಾಪ್ತಿಗೆ ಸೇರಲಿವೆ. ಈ ವಿಚಾರವನ್ನು ಕ್ಯಾಬಿನೆಟ್‌ನಲ್ಲಿಟ್ಟು ಚರ್ಚೆ ಮಾಡ್ತೀವಿ” ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

KPCC President dk shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಮನಗರ ಜಿಲ್ಲೆಯ (Ramanagara District) ಹೆಸರನ್ನು ಬದಲಾಯಿಸಲು ಡಿಸಿಎಂ ಡಿಕೆ ಶಿವಕುಮಾರ್‌ (DCM Dk Shivakumar) ಮುಂದಾಗಿದ್ದಾರೆ. ಇದರ ಮೊದಲ ಹಂತವಾಗಿ ಇಂದು ರಾಮನಗರ ಜಿಲ್ಲಾ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರನ್ನು ಭೇಟಿ ಮಾಡಿ ಜಿಲ್ಲೆಯ ಹೆಸರು ಬದಲಾವಣೆಗೆ ಮನವಿ ಮಾಡಿದೆ.

ʼರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಮನವಿ ಮಾಡಲಾಗಿದೆʼ ಎಂದು ಸಿಎಂ ಭೇಟಿಯ ಬಳಿಕ ಡಿಕೆಶಿ ತಿಳಿಸಿದ್ದಾರೆ. “ನನ್ನ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ್ದೆವು. ನಾವೆಲ್ಲಾ ಬೆಂಗಳೂರಿನವರೇ. ಮೊದಲು ಬೆಂಗಳೂರು ಜಿಲ್ಲೆಗೇ ರಾಮನಗರ ಸೇರಿತ್ತು. ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ. ಇದಕ್ಕೆ ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ” ಎಂದಿದ್ದಾರೆ ಡಿಕೆ ಶಿವಕುಮಾರ್.‌

“ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಲಿದೆ. ಬಳಿಕ ಹೆಸರು ಬದಲಾವಣೆ ಆಗಲಿದೆ. ಈಗಿರುವ ರಾಮನಗರವೇ ಹೆಡ್ ಕ್ವಾರ್ಟರ್ ಆಗಿರಲಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲ್ಲೂಕುಗಳು ಬೆಂಗಳೂರು ದಕ್ಷಿಣದ ವ್ಯಾಪ್ತಿಗೆ ಸೇರಲಿವೆ. ಈ ವಿಚಾರವನ್ನು ಕ್ಯಾಬಿನೆಟ್‌ನಲ್ಲಿಟ್ಟು ಚರ್ಚೆ ಮಾಡ್ತೀವಿ” ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಡಿಸಿಎಂ ಡಿಕೆಶಿ ನೇತೃತ್ವದ ರಾಮನಗರದ ನಿಯೋಗ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಯಿತು. ಕನಕಪುರ- ರಾಮನಗರ ಮೆಡಿಕಲ್ ಕಾಲೇಜು ಮತ್ತು ರಾಮನಗರ ಜಿಲ್ಲಾ ಹೆಸರು ಬದಲಾವಣೆ ಸೇರಿದಂತೆ ಕ್ಷೇತ್ರದ ಹಲವು ವಿಚಾರಗಳ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಲಾಯಿತು. ನಿಯೋಗದಲ್ಲಿ ಮಾಜಿ ಸಂಸದ ಡಿಕೆ ಸುರೇಶ್ (DK Suresh), ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಉಪಸ್ಥಿತರಿದ್ದರು. ಬಹುತೇಕ ಜಿಲ್ಲೆಯ ಹೆಸರು ಬದಲಾವಣೆಗೆ ಸಿಎಂ ಅಧಿಕೃತ ಮುದ್ರೆ ಹಾಕುವ ಸಾಧ್ಯತೆ ಇದೆ.

ʼರಾಮನಗರ ಮೊದಲೂ ಬೆಂಗಳೂರಿಗೇ ಸೇರಿತ್ತುʼ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ. “ಜಿಲ್ಲೆಯ ಸಮಸ್ಯೆ ಬಗ್ಗೆ ಚರ್ಚೆ ನಡೆಸಲು ಸಿಎಂ ಭೇಟಿ ಆಗ್ತಾ ಇದ್ದೀವಿ. ಚನ್ನಪಟ್ಟಣ ಉಪ ಚುನಾವಣೆ ಸಹ ಇದೆ. ರಾಮನಗರ ಮೆಡಿಕಲ್ ಕಾಲೇಜ್, ಕನಕಪುರ ಮೆಡಿಕಲ್ ಕಾಲೇಜ್ ಸೇರಿದಂತೆ ಅಭಿವೃದ್ಧಿ ಕುರಿತು ಚರ್ಚೆ ಮಾಡ್ತೀವಿ. ರಾಮನಗರ ಹೆಸರು ಬದಲಾವಣೆ ಸಂಬಂಧ, ಈ ಮೊದಲೂ ಬೆಂಗಳೂರು ಜಿಲ್ಲೆಯಲ್ಲೇ ರಾಮನಗರ ಇತ್ತು” ಎಂದು ಹೇಳಿದ್ದಾರೆ.

ಚನ್ನಪಟ್ಟಣದಿಂದ ಡಿಕೆಶಿ ಸ್ಪರ್ಧೆ ವಿಚಾರ ಕುರಿತು, ʼಡಿಕೆಶಿ ತಂತ್ರ ನಮಗೂ ಗೊತ್ತಾಗಲ್ಲ, ನಿಮಗೂ ಗೊತ್ತಾಗಲ್ಲ. ಅವರ ತಂತ್ರಗಾರಿಕೆ ಏನಿದ್ಯೋ ನಮಗೆ ಗೊತ್ತಿಲ್ಲʼ ಎಂದು ರೆಡ್ಡಿ ಹೇಳಿದರು.

ʼನಮಗೆ ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಹೆಸರು ಬೇಕುʼ ಎಂದು ರಾಮನಗರ ಮಾಜಿ ಶಾಸಕ ಸಿಸಿಎಂ ಲಿಂಗಪ್ಪ ಹೇಳಿದ್ದಾರೆ. “ರಾಮನಗರ ಕನಕಪುರ ಚನ್ನಪಟ್ಟಣ ಮಹಾಗಡಿ ಬೆಂಗಳೂರಿಗೆ ಅವಿನಾಭಾವ ಸಂಬಂಧವಿದೆ. ಪುರಾತನ ಸಂಬಂಧದ ಹೆಸರು ಉಳಿಸಿಕೊಳ್ಳಬೇಕು. ನಮಗೆ ಇನ್ನೇನೂ ಇಲ್ಲ, ‌ರಾಮನಗರವೇ ಕೇಂದ್ರ. ರಾಮನಗರವನ್ನು ಬೆಂಗಳೂರಿಗೆ ಸೇರಿಸುವುದಿಲ್ಲ. ಅದು ಪ್ರತ್ಯೇಕವಾಗಿ ಇರುತ್ತೆ, ನಮಗೆ ಹೆಸರು ಬೇಕು ಅಷ್ಟೆ” ಎಂದಿದ್ದಾರೆ.

ಇದನ್ನೂ ಓದಿ: Channapatna By Election: ಚನ್ನಪಟ್ಟಣದಲ್ಲಿ ನನ್ನ ಪತ್ನಿ ಸ್ಪರ್ಧಿಸಲ್ಲ: ಸಂಸದ ಡಾ.ಸಿ.ಎನ್. ಮಂಜುನಾಥ್‌ ಸ್ಪಷ್ಟನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

Karnataka Rain : ಹಾಸನದಲ್ಲಿ ಭಾರಿ ಮಳೆಗೆ (Rain Effect) ತೆಂಗಿನ ಮರ ಧರೆಗುರುಳಿ ಕಾರು ಜಖಂಗೊಂಡರೆ, ಹಾವೇರಿಯಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಗೋಡೆ ಕುಸಿದಿದೆ. ನಾವುಂದ ಬಡಾಕೆರೆಯಲ್ಲಿ ನೆರೆ ಸೃಷ್ಟಿಯಾಗಿದ್ದು, ಜನರನ್ನು ಬೋಟ್‌ ಮೂಲಕ ರಕ್ಷಣೆ ಮಾಡಲಾಗಿದೆ.

VISTARANEWS.COM


on

By

Karnataka Rain
Koo

ಹಾಸನ/ಹಾವೇರಿ : ಹಾಸನದಲ್ಲಿ ಭಾರಿ ವರ್ಷಧಾರೆಗೆ (Karnataka Rain) ತೆಂಗಿನ ಮರ ಧರೆಗುರುಳಿದೆ. ಏಕಾಏಕಿ ಮಾರುತಿ ಓಮ್ನಿ ಕಾರಿನ ಮೇಲೆ‌ ಮರವು ಮುರಿದು ಬಿದ್ದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಗ್ರಾಮದಲ್ಲಿ ಘಟನೆ ನಡೆದಿದೆ. ಯಸಳೂರು ಪೊಲೀಸ್ ಠಾಣೆ ಎದುರು ಚಾಲಕ ಕಾರು ಪಾರ್ಕಿಂಗ್ ಮಾಡಿ ತೆರಳಿದ್ದರು. ಈ ವೇಳೆ ಏಕಾಏಕಿ ಯಸಳೂರು ಪೊಲೀಸ್ ಠಾಣೆ ಆವರಣದಲ್ಲಿದ್ದ ತೆಂಗಿನಮರ ಕಾರಿನ ಮೇಲೆ ಬಿದ್ದು ಜಖಂಗೊಂಡಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾವೇರಿಯಲ್ಲಿ ಮನೆಗಳ ಗೋಡೆ ಕುಸಿತ

ಹಾವೇರಿ: ಜಿಟಿ ಜಿಟಿ ಮಳೆಗೆ ಎರಡು ಮನೆಗಳ ಗೋಡೆ ಕುಸಿದಿದೆ. ಹಾವೇರಿಯ ರಟ್ಟಿಹಳ್ಳಿ ತಾಲೂಕಿನ ‌ಮೇದೂರು ಗ್ರಾಮದ ರೇಷ್ಮಾ ನ್ಯಾಮತಿ ಎಂಬುವರ ಮನೆಗೆ ಹಾನಿಯಾಗಿದೆ. ಶಿಗ್ಗಾವಿ ತಾಲೂಕಿನ ಕುನ್ನೂರು ಗ್ರಾಮದ ಮಹಾದೇವಿ ತಳವಾರ ಎಂಬುವರ ಮನೆ ಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿ ‌ಮಲಗಿದ್ದ ವೇಳೆ ಈ ಅವಘಡ ನಡೆದಿದೆ. ರಾಮಪ್ಪ ತಳವಾರ ಎಂಬುವರ ಮೇಲೆ ಗೋಡೆ ಕುಸಿದು ಗಾಯಗೊಂಡಿದ್ದಾದೆ. ರಾಮಪ್ಪ ಗಣೇಶನ ಮೂರ್ತಿಗಳನ್ನು ತಯಾರಿಸಿ ಜೀವನ ನಡೆಸುತ್ತಿದ್ದರು. ಮನೆ ಗೋಡೆ ಕುಸಿದ ಹಿನ್ನೆಲೆಯಲ್ಲಿ 300 ಗಣೇಶನ ಮೂರ್ತಿಗಳಿಗೆ ಹಾನಿಯಾಗಿದೆ.

ನಾವುಂದ ಬಡಾಕೆರೆಯಲ್ಲಿ ನೆರೆ; ಬೋಟ್‌ ಮೂಲಕ ರಕ್ಷಣೆ

ಉಡುಪಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ನಾವುಂದ ಬಡಾಕೆರೆಯಲ್ಲಿ ಮತ್ತೆ ನೆರೆ ಸೃಷ್ಟಿಯಾಗಿದೆ. ಬೈಂದೂರು ತಾಲೂಕಿನ ನಾವುಂದದಲ್ಲಿ ಮಳೆಗಾಲದಲ್ಲಿ 4 ಬಾರಿ ನೆರೆ ಕಟ್ಟಿಟ್ಟ ಬುತ್ತಿಯಾಗಿದೆ. ನೆರೆಯಿಂದಾಗಿ ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದೆ. ನಾವುಂದ ಬಡಾಕೆರೆಯಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿದ್ದು, ದೋಣಿ ಮೂಲಕ ರಕ್ಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಾದ್ಯಂತ ನೆರೆ ಹಾವಳಿ ಸೃಷ್ಟಿಯಾಗಿದೆ. ಸೀತಾ ನದಿ ತುಂಬಿ ಹರಿಯುತ್ತಿದ್ದು, ಕೋಟ ಬನ್ನಾಡಿ ಭಾಗದಲ್ಲಿ ನೆರೆಯಾಗಿದೆ. ಹೀಗಾಗಿ ಬನ್ನಾಡಿ, ಬೇಳೂರು, ಕೋಟ ವ್ಯಾಪ್ತಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು. ಜತೆಗೆ ಡಿಸಿ ವಿದ್ಯಾಕುಮಾರಿ ,ಸಿಇಒ ಪ್ರತೀಕ್ ಬಾಯಲ್ ಸಾಥ್ ನೀಡಿದರು. ಶಿರಿಯಾರದಲ್ಲಿ ನೆರೆಪೀಡಿತರನ್ನು ಎತ್ತರದ ಪ್ರದೇಶಕ್ಕೆ ಶಿಫ್ಟ್ ಮಾಡಲಾಯಿತು.

ಭಾರಿ ಮಳೆಗೆ ಬಾಯ್ಬಿಟ್ಟ ಭೂಮಿ!

ಭಾರಿ ಮಳೆಗೆ ಏಕಾಏಕಿ ಮನೆಯೊಂದರ ಪಕ್ಕ ಅಪಾಯಕಾರಿ ಗುಂಡಿ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ರಾಜಾರಾಂಪುರ ಕಾಲನಿಯಲ್ಲಿ ಘಟನೆ ನಡೆದಿದೆ. ರಾಜಾರಾಂಪರ ಕಾಲನಿ ನಿವಾಸಿ ವಿಶೇಷ ಚೇತನ ಬಾಳಪ್ಪ ಎಂಬುವವರ ಮನೆ ಪಕ್ಕ ಸುಮಾರು ಒಂದು ಫೀಟ್ ಅಂತರದಲ್ಲೇ ಭೂಮಿ ಬಾಯ್ಬಿಟ್ಟಿದೆ. ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಸುಮಾರು 15-20ಫೀಟ್ ಆಳವಾಗದ ಸುರಂಗದ ರೀತಿಯ ಗುಂಡಿ ನಿರ್ಮಾಣವಾಗಿದೆ. ಜತೆಗೆ ಗುಂಡಿ ಒಳಗಿನ ಸುರಂಗದಿಂದ ನೀರು ಉಕ್ಕಿ ಬರುತ್ತಿದೆ. ಅಪಾಯದಂಚಿನಲ್ಲಿರುವ ಸಂಪಾಜೆ ಗ್ರಾಮದ ನಿವಾಸಿ ಬಾಳಪ್ಪ ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.

ಕೆರೆಯಂತಾದ ರೈಲ್ವೆ ಅಂಡರ್‌ ಪಾಸ್‌

ರಾಯಚೂರಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ನೀರು ನಿಂತು ರೈಲ್ವೆ ಅಂಡರ್ ಪಾಸ್ ಕೆರೆಯಂತಾಗಿತ್ತು. ಕರೇಕಲ್ ಗ್ರಾಮದ ರೈಲ್ವೆ ಅಂಡರ್ ಪಾಸ್‌ನಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಇತ್ತ ವರದಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಿದ್ದು, ಜೀವದ ಹಂಗು ತೊರೆದು ಜನರು ಬ್ರಿಜ್ಡ್ ಕಂ ಬ್ಯಾರೇಜ್ ಮೇಲೆ ವಾಹನ ಚಲಾಯಿಸುತ್ತಿದ್ದಾರೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಳಸೂರು ಗ್ರಾಮದ ಬ್ರಿಜ್ಡ್ ಕಂ ಬ್ಯಾರೇಜ್ ಮೇಲೆ ನೀರು ಹರಿಯುತ್ತಿದೆ. ಕಳಸೂರು ಮತ್ತು ಕೊಳೂರ ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ.

ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಕುಸಿತ

ಅವೈಜ್ಞಾನಿಕ ಕಾಮಗಾರಿಯಿಂದ ಭಾರಿ ಮಳೆಗೆ ರಸ್ತೆ ಕುಸಿದಿದೆ. ನಿಂತ ಜಾಗದಲ್ಲಿಯೇ ಲಾರಿಯೊಂದು ಒಂದು ಬದಿಗೆ ಜಾರಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ್ದ ಲಾರಿ ರಸ್ತೆ ಪಕ್ಕಕ್ಕೆ ಜಾರಿದ್ದು, ತಡೆಗೋಡೆ ಇಲ್ಲದಿದ್ದರೆ ಪ್ರಪಾತಕ್ಕೆ ಉರುಳಿ ಬೀಳುವ ಸಾಧ್ಯತೆ ಇದೆ. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಹಾಸನ ರಾಷ್ಟ್ರೀಯ ಹೆದ್ದಾರಿ 75 ರ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಸಕಲೇಶಪುರ ಎಸಿ ಶೃತಿ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಮಳೆಗೆ ಗ್ರಾಮದ ಮುಖ್ಯ ರಸ್ತೆ ನದಿಯಂತಾಗಿತ್ತು. ಚಿಕ್ಕಮಗಳೂರು ತಾಲೂಕಿನ ಬಾಸಪುರ ಗ್ರಾಮದಲ್ಲಿ ಗುಡ್ಡದಿಂದ ರಸ್ತೆಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬಾಸಾಪುರ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ತೋಟಕ್ಕೆ ನೀರು ನುಗ್ಗಿ ಕಾಫಿ ಬೆಳೆ ನಾಶವಾಗಿದೆ.

Rain Effect.. karnataka Rain Effect

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

‌2nd PUC Exam Result: ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶ ಪ್ರಕಟ, 23.73% ವಿದ್ಯಾರ್ಥಿಗಳು ಪಾಸ್

‌2nd PUC Exam Result: ಜೂನ್/ಜುಲೈ 2024ರ ದ್ವಿತೀಯ ಪಿಯುಸಿ ಪರೀಕ್ಷೆ- 3 ಅನ್ನು ದಿನಾಂಕ ಜೂನ್‌ 24ರಿಂದ ಜುಲೈ 5ರವರೆಗೆ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಒಟ್ಟು 12 ಮೌಲ್ಯಮಾಪನ ಶಿಬಿರಗಳಲ್ಲಿ ದಿನಾಂಕ ಜುಲೈ 9ರಿಂದ 14ರವರೆಗೆ 2293 ಮೌಲ್ಯಮಾಪಕರಿಂದ ನಡೆಸಲಾಯಿತು.

VISTARANEWS.COM


on

2nd Puc Result
Koo

ಬೆಂಗಳೂರು: 2024ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶಗಳನ್ನು (2nd PUC Exam Result) ಪ್ರಕಟಿಸಲಾಗಿದೆ. 23.73% ವಿದ್ಯಾರ್ಥಿಗಳು (PUC Students) ಉತ್ತೀರ್ಣರಾಗಿದ್ದಾರೆ. ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶದ (PUC Result) ಅಂಕಿ ಅಂಶ ಬಿಡುಗಡೆ ಮಾಡಿದ್ದು, ಪರೀಕ್ಷೆಗೆ ಹಾಜರಾದ 75,466 ವಿದ್ಯಾರ್ಥಿಗಳಲ್ಲಿ 17,911 ಮಂದಿ ಪಾಸ್ (Pass) ಆಗಿದ್ದಾರೆ.

ಜೂನ್/ಜುಲೈ 2024ರ ದ್ವಿತೀಯ ಪಿಯುಸಿ ಪರೀಕ್ಷೆ- 3 ಅನ್ನು ದಿನಾಂಕ ಜೂನ್‌ 24ರಿಂದ ಜುಲೈ 5ರವರೆಗೆ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಒಟ್ಟು 12 ಮೌಲ್ಯಮಾಪನ ಶಿಬಿರಗಳಲ್ಲಿ ದಿನಾಂಕ ಜುಲೈ 9ರಿಂದ 14ರವರೆಗೆ 2293 ಮೌಲ್ಯಮಾಪಕರಿಂದ ನಡೆಸಲಾಯಿತು.

ಫಲಿತಾಂಶವನ್ನು ಇಂದು ಮಧ್ಯಾಹ್ನ 3:00 ಗಂಟೆಗೆ ಕಾಲೇಜುಗಳಲ್ಲಿ ಪ್ರಕಟಿಸಲಾಗುತ್ತಿದೆ. ಪರೀಕ್ಷೆ-3ರ ಫಲಿತಾಂಶವನ್ನು https://karresults.nic.in ವೆಬ್‌ಸೈಟ್‌ನಲ್ಲಿಯೂ ಪ್ರಚುರಪಡಿಸಲಾಗಿದೆ. ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪರೀಕ್ಷೆ 1, ಪರೀಕ್ಷೆ 2 ಮತ್ತು ಪರೀಕ್ಷೆ- 3ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು https://kseab.karnataka.gov.in ಅಂತರ್ಜಾಲದಲ್ಲಿ ನಂತರ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಪರೀಕ್ಷೆಗೆ ನೋಂದಾಯಿಸಿದವರ ಸಂಖ್ಯೆ 76,005, ಹಾಜರಾದವರು 75,466, ಉತ್ತೀರ್ಣರಾದವರು 17,911 ಹಾಗೂ ಶೇಕಡವಾರು ಫಲಿತಾಂಶ 23.73. ಉತ್ತೀರ್ಣರಾದವರಲ್ಲಿ ಬಾಲಕಿಯರ ಪ್ರಮಾಣ 26.65% ಹಾಗೂ ಬಾಲಕರು 21.65%. ಕಲಾ ವಿಭಾಗದಲ್ಲಿ 21.71%, ವಾಣಿಜ್ಯದಲ್ಲಿ 23.58% ಹಾಗೂ ವಿಜ್ಞಾನದಲ್ಲಿ 27.06% ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ ಪ್ರತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 17ರಿಂದ 21
ಸ್ಕ್ಯಾನಿಂಗ್‌ ಪ್ರತಿಯನ್ನು ಅಂತರ್ಜಾಲದಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳುವ ದಿನಾಂಕ: ಜುಲೈ 18ರಿಂದ 22
ಮರುಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಲು ಜುಲೈ 18ರಿಂದ 24. ಸ್ಕ್ಯಾನಿಂಗ್‌ ಪ್ರತಿ ತೆಗೆದುಕೊಂಡವರಿಗೆ ಮಾತ್ರ ಅವಕಾಶ.
ಸ್ಕ್ಯಾನಿಂಗ್‌ ಪ್ರತಿ ಪಡೆಯಲು ಪ್ರತಿ ಪೇಪರ್‌ಗೆ ಶುಲ್ಕ- 530 ರೂ.
ಮರುಮೌಲ್ಯಮಾಪನ ಶುಲ್ಕ ಪ್ರತಿ ವಿಷಯಕ್ಕೆ- 1670 ರೂ.

ಈ ಬಾರಿ ಆಯ್ಕೆಯಾದ 105 ಸಂಸದರು ಪಿಯುಸಿ ದಾಟಿಲ್ಲ!

ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಗೆದ್ದು ಸಂಸತ್ತು ಪ್ರವೇಶಿಸಿರುವ ಶೇ. 19ರಷ್ಟು ನೂತನ ಸಂಸದರ (MPs) ಶೈಕ್ಷಣಿಕ ಅರ್ಹತೆ (education qualification) 12 ನೇ ತರಗತಿಗಿಂತ ಕೆಳಗಿದೆ. ಶೇ. 77ರಷ್ಟು ಅಭ್ಯರ್ಥಿಗಳು ಪದವಿ ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷಣ ಅರ್ಹತೆಯನ್ನು ಪಡೆದಿದ್ದಾರೆ ಎಂದು ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿ ಹೇಳಿದೆ.

ವಿಜೇತ ಅಭ್ಯರ್ಥಿಗಳಲ್ಲಿ ಸುಮಾರು 105 ಮಂದಿ ತಮ್ಮ ಶೈಕ್ಷಣಿಕ ಅರ್ಹತೆಯನ್ನು 5ನೇ ತರಗತಿ ಮತ್ತು 12 ನೇ ತರಗತಿಯ ನಡುವೆ ಎಂದು ಘೋಷಿಸಿದ್ದಾರೆ. 420 ಅಭ್ಯರ್ಥಿಗಳು ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಪದವಿಯನ್ನು ಹೊಂದಿರುವುದಾಗಿ ಹೇಳಿಕೊಂಡಿದ್ದಾರೆ. 17 ವಿಜೇತ ಅಭ್ಯರ್ಥಿಗಳು ಡಿಪ್ಲೊಮಾ ಮಾಡಿದ್ದು, ಒಬ್ಬ ವಿಜೇತರು “ಕೇವಲ ಸಾಕ್ಷರರು” ಎಂದು ಹೇಳಿಕೊಂಡಿದ್ದಾರೆ. ಚುನಾವಣಾ ಕಣದಲ್ಲಿ ಇಳಿಯುವಾಗ ತಾವು ಅನಕ್ಷರಸ್ಥರೆಂದು ಘೋಷಿಸಿಕೊಂಡ ಎಲ್ಲಾ 121 ಅಭ್ಯರ್ಥಿಗಳು ಸೋಲು ಅನುಭವಿಸಿದ್ದಾರೆ.

ಯಾರು ಎಷ್ಟು?

5ನೇ ತರಗತಿಯವರೆಗೆ ಓದಿರುವ ಇಬ್ಬರು ವಿಜೇತ ಅಭ್ಯರ್ಥಿಗಳಿದ್ದರೆ, ನಾಲ್ವರು 8 ನೇ ತರಗತಿಯವರೆಗೆ ಓದಿದ್ದೇವೆ ಎಂದು ಹೇಳಿದ್ದಾರೆ. 34 ಅಭ್ಯರ್ಥಿಗಳು ತಾವು 10 ನೇ ತರಗತಿಯವರೆಗೆ ಮತ್ತು 65 ಅಭ್ಯರ್ಥಿಗಳು 12ನೇ ತರಗತಿಯವರೆಗೆ ಓದಿರುವುದಾಗಿ ಘೋಷಿಸಿದ್ದಾರೆ.

ಕೃಷಿಕರು

ಪಿ ಆರ್ ಎಸ್ ಶಾಸಕಾಂಗ ಸಂಶೋಧನೆ ವಿಶ್ಲೇಷಣೆಯ ಪ್ರಕಾರ 543 ಸಂಸದರಲ್ಲಿ ಛತ್ತೀಸ್‌ಗಢದ ಶೇ. 91 ಸಂಸದರು, ಮಧ್ಯಪ್ರದೇಶದಿಂದ ಶೇ. 72 ಮತ್ತು ಗುಜರಾತ್‌ನ ಶೇ. 65 ಸಂಸದರು ಕೃಷಿಯನ್ನು ತಮ್ಮ ವೃತ್ತಿ ಎಂದು ಘೋಷಿಸಿದ್ದಾರೆ.
18ನೇ ಲೋಕಸಭೆಗೆ ಚುನಾಯಿತರಾದ ಸಂಸದರಲ್ಲಿ ಸುಮಾರು ಶೇ. 7 ರಷ್ಟು ಮಂದಿ ವಕೀಲರು ಮತ್ತು ಶೇ. 4ರಷ್ಟು ಮಂದಿ ವೈದ್ಯಕೀಯ ವೃತ್ತಿಯವರು ಇದ್ದಾರೆ.

ಇದನ್ನೂ ಓದಿ: UGCET 2024: ಅರ್ಹತಾ ಅಂಕ ಶೇ 45ಕ್ಕೆ ಇಳಿಕೆ ; ಆರ್ಕಿಟೆಕ್ಚರ್ ಕೋರ್ಸ್‌ಗೆ ಅರ್ಜಿ ಸಲ್ಲಿಸಲು ಜು. 13ರವರೆಗೆ ಅವಕಾಶ

Continue Reading

ಕರ್ನಾಟಕ

7th Pay Commission: ಆ.1ರಿಂದ ನೌಕರರ ವೇತನ ಹೆಚ್ಚಳ; ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ಹೆಚ್ಚುವರಿ ಹೊರೆ ಎಂದ ಸಿಎಂ

7th Pay Commission: 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು 2022ರ ಜುಲೈ 1ರಿಂದ ಅನ್ವಯವಾಗುವಂತೆ ಪರಿಷ್ಕರಿಸಿ ಇದೇ ಆಗಸ್ಟ್‌ 1ರಿಂದ ಅನುಷ್ಠಾನಗೊಳಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

7th Pay Commission
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆಗೆ ಏಳನೇ ವೇತನ ಆಯೋಗ ರಚನೆ ಮಾಡಲಾಗಿತ್ತು. ಈ ಆಯೋಗ (7th Pay Commission) ವರದಿಯನ್ನು ನೀಡಿದ್ದು, ಆಗಸ್ಟ್‌ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಜಾರಿ ಮಾಡಲಾಗುತ್ತದೆ. ಶೇ. 31ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದ್ದು, ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ರೂ.ಗಳಷ್ಟು ಹೆಚ್ಚುವರಿ ವೆಚ್ಚ ಉಂಟಾಗುತ್ತದೆ. ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸಭಾ ಕಲಾಪದಲ್ಲಿ ಮಂಗಳವಾರ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆಯ ಬೇಡಿಕೆಗಳನ್ನು ಪರಿಷ್ಕರಿಸಲು 2022ರ ನ.19ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿತ್ತು. ಅದರಂತೆ, ವೇತನ ಆಯೋಗವು 2024ರ ಮಾರ್ಚ್‌ 24ರಂದು ಅಂತಿಮ ವರದಿ ಸಲ್ಲಿಸಿದೆ.
7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು 2022ರ ಜುಲೈ 1ರಿಂದ ಅನ್ವಯವಾಗುವಂತೆ ಪರಿಷ್ಕರಿಸಿ ಇದೇ ಆಗಸ್ಟ್‌ 1ರಿಂದ ಅನುಷ್ಠಾನಗೊಳಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ. ಅದರಂತೆ, 01.07.2022ಕ್ಕೆ ನೌಕರರ ಮೂಲ ವೇತನಕ್ಕೆ ಶೇಕಡ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ. 27.50 ರಷ್ಟು ಫಿಟ್‌ಮೆಂಟ್ ಸೇರಿಸಿ ವೇತನ ಮತ್ತು ಪಿಂಚಣಿಯನ್ನು ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ 58.50 ರಷ್ಟು ಹೆಚ್ಚಳವಾಗುತ್ತದೆ. ಮನೆಬಾಡಿಗೆ ಭತ್ಯೆಯಲ್ಲಿ ಶೇ. 32ರಷ್ಟು ಹೆಚ್ಚಳವಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ | 7th Pay Commission: ರಜೆ, ಪಿಂಚಣಿ, ಬಡ್ತಿ; 7ನೇ ವೇತನ ಆಯೋಗದ ಜಾರಿ ಬಳಿಕ ಸಂಬಳದ ಜತೆ ಏನೆಲ್ಲ ಸೌಲಭ್ಯ ಸಿಗಲಿವೆ? ಇಲ್ಲಿದೆ ಮಾಹಿತಿ

ನೌಕರರ ಕನಿಷ್ಠ ಮೂಲವೇತನವು 17,000 ರಿಂದ ರೂ. 27,000ಕ್ಕೆ, ಗರಿಷ್ಠ ವೇತನವು 1,50,600 ರಿಂದ 2,41,200 ಗಳಿಗೆ ಪರಿಷ್ಕರಣೆಯಾಗುತ್ತದೆ. ನೌಕರರ ಕನಿಷ್ಠ ಪಿಂಚಣಿಯು 8,500 ರಿಂದ 13,500ಕ್ಕೆ ಮತ್ತು ಗರಿಷ್ಠ ಪಿಂಚಣಿಯು 75,300 ರಿಂದ ರೂ. 1,20,600ಕ್ಕೆ ಪರಿಷ್ಕರಣೆಗೊಳ್ಳುತ್ತದೆ. ಈ ಪರಿಷ್ಕರಣೆಯು, ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಅನ್ವಯವಾಗುತ್ತದೆ.
ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 20,208 ರೂ. ಕೋಟಿಗಳಷ್ಟು ಹೆಚ್ಚುವರಿ ವೆಚ್ಚ ಉಂಟಾಗುತ್ತದೆ. ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

ವೇತನ ಆಯೋಗದ ಪ್ರಮುಖ ಶಿಫಾರಸುಗಳು

Cash

1. 7ನೇ ರಾಜ್ಯ ವೇತನ ಆಯೋಗವು ಶೇ.31 ತುಟ್ಟಿ ಭತ್ಯೆಯನ್ನು ವಿಲೀನಗೊಳಿಸುವ ಮೂಲಕ ಮತ್ತು ಶೇ.27.50ರಷ್ಟು ಫಿಟ್‌ಮೆಂಟ್ ಪ್ರಯೋಜನವನ್ನು ಒದಗಿಸುವ ಮೂಲಕ ರಾಜ್ಯ ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನವನ್ನು ತಿಂಗಳಿಗೆ ಅಸ್ತಿತ್ವದಲ್ಲಿರುವ ರೂ.17,000 ರಿಂದ ರೂ.27,000ಕ್ಕೆ ಪರಿಷ್ಕರಿಸುವುದು.

2. ವೇತನ ರಚನೆಯಲ್ಲಿ ಕನಿಷ್ಠ ಮತ್ತು ಗರಿಷ್ಠ ವೇತನದ ನಡುವೆ ಅಸ್ತಿತ್ವದಲ್ಲಿರುವ 1:8.86 ರ ಅನುಪಾತವನ್ನು ಹೆಚ್ಚು ಕಡಿಮೆ ಹಾಗೇ ಉಳಿಸಿಕೊಳ್ಳುವುದು ಮತ್ತು ಗರಿಷ್ಠ ವೇತನವನ್ನು 2,41,200 ರೂ.ಗೆ ನಿಗದಿಪಡಿಸುವುದು.

3. ಹೊಸ ವೇತನ ಶ್ರೇಣಿಗಳನ್ನು ದಿನಾಂಕ: 01.07.2022 ರಿಂದ ಕಾಲ್ಪನಿಕವಾಗಿ ಅನ್ವಯಿಸುತ್ತದೆ. ಅನುಷ್ಠಾನಗೊಳಿಸುವ ನೈಜ್ಯ ದಿನಾಂಕವನ್ನು ರಾಜ್ಯ ಸರ್ಕಾರವು ನಿರ್ಧರಿಸುವುದು.

4. ನೌಕರರ ಕುಟುಂಬದ ಕನಿಷ್ಠ ಬಳಕೆ ವೆಚ್ಚದ ಲೆಕ್ಕಾಚಾರಕ್ಕಾಗಿ ಬಳಸಲಾಗುವ ಅಕ್ರೋಯ್ತಾ
ಸೂತ್ರವನ್ನು ಚಾಲ್ತಿಯಲ್ಲಿರುವ ‘1’ ಮತ್ತು ‘0.8’, ರ ಪ್ರಮಾಣದ ಬದಲಿಗೆ ಪ್ರಾತಿನಿಧಿಕ ಕುಟುಂಬದ
ವಯಸ್ಕ ಪುರುಷ ಮತ್ತು ಮಹಿಳಾ ಸದಸ್ಯರಿಗೆ ‘1’ ಸಮಾನ ಪ್ರಮಾಣವನ್ನು ನೀಡುವ ಮೂಲಕ, ಎರಡೂ ಲಿಂಗಗಳನ್ನು ಸಮಾನವಾಗಿ ಪರಿಗಣಿಸಿ, ಸ್ವಲ್ಪ ಮಟ್ಟಿಗೆ ಮಾರ್ಪಡಿಸಲಾಗಿದೆ.

5. ಪರಿಷ್ಕೃತ ಪ್ರತ್ಯೇಕ (Individual) ವೇತನ ಶ್ರೇಣಿಗಳೊಂದಿಗೆ, ಪರಿಷ್ಕೃತ ಮುಖ್ಯ ಶ್ರೇಣಿಯನ್ನು ರೂಪಿಸಲಾಗಿದೆ. ಚಾಲ್ತಿಯಲ್ಲಿರುವ ರೂ.400ರಿಂದ ರೂ.3,100ರ ಬದಲಿಗೆ ವಾರ್ಷಿಕ ಬಡ್ತಿ ದರಗಳು ಮುಖ್ಯ ಶ್ರೇಣಿಯಾದ್ಯಂತ ರೂ.650 ರಿಂದ ರೂ.5,000 ವರೆಗೆ ಆಗಿರುತ್ತದೆ.

6. ಪ್ರಸ್ತುತ ಜಾರಿಯಲ್ಲಿರುವಂತೆ, ಒಂದು ಕ್ಯಾಲೆಂಡರ್ ವರ್ಷದಲ್ಲಿ 1ನೇ ಜನವರಿ ಅಥವಾ 1ನೇ ಜುಲೈನಲ್ಲಿ ವಾರ್ಷಿಕ ಬಡ್ತಿ ದರಗಳನ್ನು ಮಂಜೂರು ಮಾಡುವುದನ್ನು ಮುಂದುವರುಸಲು ಆಯೋಗವು ಶಿಫಾರಸು ಮಾಡುತ್ತದೆ.

7. ಕೇಂದ್ರದ ತುಟ್ಟಿ ಭತ್ಯೆ ಸೂತ್ರ ಮತ್ತು ಮಾದರಿಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರಿಸಲಾಗುತ್ತದೆ. ದಿನಾಂಕ: 01.07.2022 ರಂತೆ 361.704 ಸೂಚ್ಯಂಕ ಮಟ್ಟದಲ್ಲಿ ಸಂಪೂರ್ಣವಾಗಿ ತಟಸ್ಥಗೊಂಡಿರುವ ತುಟ್ಟಿ ಭತ್ಯೆಯೊಂದಿಗೆ, ದಿನಾಂಕ: 01.07.2022 ರಿಂದ, ಭಾರತ ಸರ್ಕಾರವು ಮಂಜೂರು ಮಾಡಿದ ಪ್ರತಿ ಶೇ.1 ರಷ್ಟು ತುಟ್ಟಿಭತ್ಯೆಗೆ, ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಬೇಕಾದ ತುಟ್ಟಿಭತ್ಯೆಯು ಪರಿಷ್ಕೃತ ಮೂಲ ವೇತನದ ಶೇ.0.722 ರಷ್ಟು ಆಗಿರುತ್ತದೆ.

8. ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಯ ವೇತನ ಶ್ರೇಣಿಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕರಿಸಿದ ರೀತಿಯಲ್ಲಿಯೇ ಪರಿಷ್ಕರಿಸಬೇಕು.

9. ರಾಜ್ಯ ಸರ್ಕಾರವು, ಕೇಂದ್ರದ ವೇತನ ರಚನೆಯನ್ನು ಅಳವಡಿಸಿಕೊಳ್ಳಲು ಒಂದು ವಿಧಾನವನ್ನು ಆಯೋಗವು ರೂಪಿಸಿದೆ. ಆದಾಗ್ಯೂ ಪ್ರಸ್ತುತ, ರಾಜ್ಯ ಸರ್ಕಾರವು ಮುಖ್ಯ ಶ್ರೇಣಿ ಮತ್ತು ವಿಭಜಿತ ಪ್ರತ್ಯೇಕ ವೇತನ ಶ್ರೇಣಿಗಳನ್ನು ಒಳಗೊಂಡಿರುವ ಅಸ್ತಿತ್ವದಲ್ಲಿರುವ ವೇತನದ ಮಾದರಿಯನ್ನು ರಾಜ್ಯ ಸರ್ಕಾರವು ಉಳಿಸಿಕೊಳ್ಳುವುದು ಸೂಕ್ತವೆಂದು ಅಭಿಪ್ರಾಯಪಟ್ಟಿದೆ. ಭಾರತ ಸರ್ಕಾರವು ತನ್ನ ನೌಕರರಿಗೆ ಮುಂದಿನ ವೇತನವನ್ನು ಪರಿಷ್ಕರಿಸಿದಾಗ ರಾಜ್ಯ ಸರ್ಕಾರವು ಕೇಂದ್ರೀಯ ವೇತನ ರಚನೆಯ ಆಧಾರದ ಮೇಲೆ ಪರ್ಯಾಯ ರಚನೆಯನ್ನು ಅಳವಡಿಸಿಕೊಳ್ಳಲು ಸೂಕ್ತ ಸಮಯವಾಗಿರುತ್ತದೆ.

10. ಮಾಸಿಕ ಪಿಂಚಣಿ ಪ್ರಮಾಣವು ಅಂತಿಮವಾಗಿ ಪಡೆದ ಮೂಲ ವೇತನದ ಶೇ.50ರಷ್ಟರಲ್ಲಿಯೇ ಮುಂದುವರಿಯುತ್ತದೆ ಮತ್ತು ಕುಟುಂಬ ಪಿಂಚಣಿಯು ಅಂತಿಮವಾಗಿ ಪಡೆದ ಮೂಲ ವೇತನದ ಶೇ.30ರಷ್ಟು ಮುಂದುವರಿಯುತ್ತದೆ. ಅದರಂತೆ, ಕನಿಷ್ಠ ಪಿಂಚಣಿಯನ್ನು ರೂ.13,500 (ಕನಿಷ್ಠ ವೇತನ ರೂ. 27,000ರ ಶೇ.50 ರಷ್ಟು) ಮತ್ತು ಗರಿಷ್ಠ ಪಿಂಚಣಿಯನ್ನು ರೂ.1,20,600 (ಗರಿಷ್ಠ ರೂ.2,41,200 ವೇತನದ ಶೇ.50 ರಷ್ಟು) ಪರಿಷ್ಕರಿಸುವುದು.

11. 70-80 ವರ್ಷ ವಯಸ್ಸಿನ ಪಿಂಚಣಿದಾರರಿಗೆ ಮೂಲ ಪಿಂಚಣಿಯ ಹೆಚ್ಚುವರಿ ಶೇ.10 ರಷ್ಟನ್ನು ಆಯೋಗವು ಶಿಫಾರಸು ಮಾಡುತ್ತದೆ.

12. ಆಯೋಗವು ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರನ್ನು ಒಳಗೊಳ್ಳುವ ಉದ್ದೇಶಿತ “ಸಂಧ್ಯಾಕಿರಣ” ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಲು ಒತ್ತಾಯಿಸುತ್ತದೆ ಮತ್ತು ಈ ಮಧ್ಯೆ, ರಾಜ್ಯ ಸರ್ಕಾರವು ಈ ಯೋಜನೆಯ ಅನುಷ್ಠಾನವನ್ನು ಪ್ರಾರಂಭಿಸುವವರೆಗೆ ಎಲ್ಲಾ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರಿಗೆ ವೈದ್ಯಕೀಯ ಭತ್ಯೆಯಾಗಿ ತಿಂಗಳಿಗೆ ರೂ.500 ಪಾವತಿಸುವುದು.

13. ಪಿಂಚಣಿದಾರರು ಆತ ಅಥವಾ ಆಕೆಯು ಮರಣದ ಹೊಂದಿದಲ್ಲಿ, ಅವರ ಅಂತ್ಯಕ್ರಿಯೆ ವೆಚ್ಚಗಳನ್ನು ಭರಿಸಲು ರೂ.10,000 ಗಳ ಮೊತ್ತವನ್ನು ಪಿಂಚಣಿದಾರರ ನಾಮ ನಿರ್ದೇಶಿತನಿಗೆ ಪಾವತಿಸುವುದು.

14. ಕರ್ನಾಟಕ ಸರ್ಕಾರಿ ನೌಕರರ (ಕುಟುಂಬ ಪಿಂಚಣಿ) ನಿಯಮಗಳು, 2002ರಲ್ಲಿ ಮಹಿಳಾ ಸರ್ಕಾರಿ ನೌಕರರು / ಪಿಂಚಣಿದಾರರು ತಮ್ಮ ಮಗು / ಮಕ್ಕಳನ್ನು ಕೆಲವು ಸಂದರ್ಭಗಳಲ್ಲಿ ಸಂಗಾತಿಯ ಬದಲಿಗೆ ಕುಟುಂಬ ಪಿಂಚಣಿಗೆ ನಾಮ ನಿರ್ದೇಶನ ಮಾಡಲು ಅವಕಾಶ ಕಲ್ಪಿಸಬಹುದು ಎಂದು ಆಯೋಗವು ಪ್ರಸ್ತಾಪಿಸಿದೆ.

15. ಎ, ಬಿ ಮತ್ತು ಸಿ ಸ್ಥಳಗಳ ಮೂರು ವರ್ಗಗಳಿಗೆ ಅಸ್ತಿತ್ವದಲ್ಲಿರುವ ಶೇ.24, ಶೇ.16 ಮತ್ತು ಶೇ.8 ರಿಂದ ಪರಿಷ್ಕೃತ ಮೂಲ ವೇತನದ ಕನಿಷ್ಠ ಶೇ.20, ಶೇ.15 ಮತ್ತು ಶೇ. 7.5 ಕ್ಕೆ ಅನುಕ್ರಮವಾಗಿ ಮನೆ ಬಾಡಿಗೆ ದರಗಳನ್ನು ಪರಿಷ್ಕರಿಸಲಾಗಿದೆ. ಶಿಫಾರಸು ಮಾಡಲಾದ ಪರಿಷ್ಕೃತ ವೇತನ ಶ್ರೇಣಿಗಳ ಆಧಾರದ ಮೇಲೆ, ಇದು 3 ವರ್ಗಗಳಿಗೆ ತಿಂಗಳಿಗೆ ರೂ.1,320, ರೂ.1,330 ಮತ್ತು ರೂ.690 ಅನುಕ್ರಮವಾಗಿ ಹೆಚ್ಚಳವಾಗಿರುವುದರಿಂದ ನಿಶ್ಚಳವಾಗಿ ಮನೆ ಬಾಡಿಗೆ ಭತ್ಯೆಯಲ್ಲಿ ಸುಮಾರು ಶೇ.40 ರಷ್ಟು ಹೆಚ್ಚಳವಾಗಿದೆ.

16. ಸೋಲಾರ್ ವಾಟರ್ ಹೀಟರ್, ಸೋಲಾರ್ ಕುಕ್ಕರ್. ಮೊಪೆಡ್ ಮತ್ತು ಮೋಟಾರು ವಾಹನಗಳ ದುರಸ್ತಿ ಮತ್ತು ಉಪಕರಣಗಳಿಗೆ ಮುಂಗಡಗಳನ್ನು ಸ್ಥಗಿತಗೊಳಿಸುವುದು.

17. ವೃಂದ ಎ ನೌಕರರಿಗೆ ಗರಿಷ್ಠ ರೂ.65 ಲಕ್ಷ ಮತ್ತು ಇತರ ನೌಕರರಿಗೆ ರೂ.40 ಲಕ್ಷಗಳ ಗೃಹ ನಿರ್ಮಾಣ ಭತ್ಯೆಯನ್ನು ಪರಿಷ್ಕರಿಸಿದೆ. ನೌಕರರ ಸೇವಾವಧಿಯಲ್ಲಿ ರಜೆ ಪ್ರಯಾಣ ಭತ್ಯೆಯ ಪ್ರಯೋಜನವನ್ನು ಎರಡು ಬಾರಿಯಿಂದ ಮೂರು ಬಾರಿಗೆ ಹೆಚ್ಚಿಸುವುದು.

18. ಸರ್ಕಾರಿ ನೌಕರರ ತರಬೇತಿಯ ಗುಣಮಟ್ಟವನ್ನು ಸುಧಾರಿಸುವುದಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕೆಂದು ಗುರುತಿಸಿ, ತರಬೇತಿ ಸಂಸ್ಥೆಗಳಲ್ಲಿನ ಅಧ್ಯಾಪಕರ ಗುಣಮಟ್ಟವನ್ನು ಹೆಚ್ಚಿಸಲು, ಎಲ್ಲ ಸರ್ಕಾರಿ ತರಬೇತಿ ಸಂಸ್ಥೆಗಳಲ್ಲಿ ನಿಯೋಜಿತ ಅಥವಾ ಅಧ್ಯಾಪಕರಾಗಿ ನೇಮಕಗೊಂಡ ನೌಕರರಿಗೆ ಅಸ್ತಿತ್ವದಲ್ಲಿರುವ ವಿಶೇಷ ಭತ್ಯೆಯನ್ನು ಶೇ.25ಕ್ಕೆ ಹೆಚ್ಚಿಸುವುದು.

19. ಪೋಷಕರು ಅಥವಾ ಅತ್ತೆ/ಮಾವಂದಿರು ಅಥವಾ ಕುಟುಂಬದ ಹಿರಿಯರು ಅಥವಾ ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಸಣ್ಣ ಮಕ್ಕಳನ್ನು ಆರೈಕೆ ಮಾಡಲು ನೌಕರರಿಗೆ ಆರೈಕೆ ರಜೆ ಎಂಬ ಹೊಸ ಪ್ರಯೋಜನವನ್ನು ಒದಗಿಸಬೇಕೆಂದು ಹಾಗೂ ರಜೆಯ ಅವಧಿಯಲ್ಲಿ ಶೇ.50 ರಷ್ಟು ವೇತನದೊಂದಿಗೆ ಈ ರಜೆಯ ಗರಿಷ್ಠ ಅವಧಿಯು 180 ದಿನಗಳಿಗೆ (6 ತಿಂಗಳು) ನಿಗದಿಪಡಿಸಲು ಆಯೋಗವು ಶಿಫಾರಸು ಮಾಡಿದೆ.

ಇದನ್ನೂ ಓದಿ: 7th Pay Commission: 7ನೇ ವೇತನ ಆಯೋಗ ಜಾರಿ; ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ಪಟ್ಟಿ

20. ಸೇವೆಗೆ ಸೇರುವ 60 ದಿನಗಳ ಮೊದಲು ಮಗುವಿಗೆ ಜನ್ಮ ನೀಡಿದ ಮಹಿಳಾ ಸರ್ಕಾರಿ ನೌಕರರಿಗೆ ಸೇವೆಗೆ ಸೇರುವ ಸಮಯದಲ್ಲಿ ನವಜಾತ ಶಿಶುವಿನ ಆರೈಕೆಯ ಅವಧಿಯಲ್ಲಿ ಇರುವವರಿಗೆ 18 ವಾರಗಳ ಹೆರಿಗೆ ರಜೆಯನ್ನು ಶಿಫಾರಸು ಮಾಡಿದೆ.

Continue Reading

ಮಳೆ

Rain Effect : ಭಾರಿ ಮಳೆಗೆ ಶಿರೂರು ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ್ದ ಮಹಿಳೆ ಮೃತದೇಹ ಪತ್ತೆ

Rain Effect : ಉತ್ತರಕನ್ನಡದಲ್ಲಿ ಭಾರಿ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿದ್ದು, ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.

VISTARANEWS.COM


on

By

Rain Effect
Koo

ಉತ್ತರಕನ್ನಡ: ಉತ್ತರಕನ್ನಡದಲ್ಲಿ ಭಾರಿ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿತ್ತು. ಧಾರಾಕಾರ ಮಳೆಯಿಂದಾಗಿ ಹೆದ್ದಾರಿ ಪಕ್ಕದ ಗುಡ್ಡ ಸಡಿಲಗೊಂಡು, ಅಂಕೋಲಾ ತಾಲೂಕಿನ ಶಿರೂರು ಬಳಿ ಅಂಗಡಿಯೊಂದರ ಮೇಲೆ ಬಿದ್ದಿತ್ತು. ಇದೀಗ ಮಣ್ಣಿನಡಿ ಸಿಲುಕಿ ಮೃತಪಟ್ಟ ಮಹಿಳೆಯೊಬ್ಬರ ಮೃತದೇಹ (Rain Effect) ಪತ್ತೆಯಾಗಿದೆ.

ಉತ್ತರ ಕನ್ನಡದ ಅಂಕೋಲಾ ಗುಡ್ಡ ಕುಸಿತ ಪ್ರದೇಶಕ್ಕೆ ಕುಮಟಾ ಎಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಗುಡ್ಡ ಕುಸಿದಿದೆ. ಗುಡ್ಡದ ಮಣ್ಣಿನಡಿ 10ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ಇದ್ದು, ಒಂದೇ ಕುಟುಂಬದ ಐವರು ಸೇರಿ ಹತ್ತಕ್ಕೂ ಅಧಿಕ ಮಂದಿ ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದೆ. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದಾರೆ.

ಅಂಕೋಲಾ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ. ಅವಘಡದಲ್ಲಿ 7 ಮಂದಿ ಸಾವನ್ನಪ್ಪಿರಬಹುದು, ಆದರೆ ಇನ್ನೂ ಕೂಡಾ ಖಚಿತ ಮಾಹಿತಿ ಬರಬೇಕಿದೆ ಎಂದಿದ್ದಾರೆ. ಸದ್ಯ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಎಷ್ಟು ಸಾವಾಗಿದೆ ಹೇಳುವುದು ಸಾಧ್ಯವಿಲ್ಲ. ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳು ಸಾಕಾಗುತ್ತಿಲ್ಲ. ಹೀಗಾಗಿ ಕುಮಟಾ ಹಾಗೂ ಅಂಕೋಲಾ ಎರಡೂ ಕಡೆಯಿಂದ ಕಾರ್ಯಾಚರಣೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಜೆಸಿಬಿ, ಹಿಟಾಚಿ ಮತ್ತಿತರ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುವುದು ಎಂದರು.

ಇದನ್ನೂ ಓದಿ: Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

ಭಾರಿ ಮಳೆಗೆ ವರ್ಷದ ಹಿಂದೆ ನಿರ್ಮಿಸಿದ ಸೇತುವೆ ಕುಸಿತ

ಉಡುಪಿಯ ಕುಂದಾಪುರ ತಾಲೂಕು ಹಾಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭರಣಕೊಳ್ಕಿಯಲ್ಲಿ ವರ್ಷದ ಹಿಂದೆ ನಿರ್ಮಿಸಿದ ಸೇತುವೆ ಭಾರಿ ಮಳೆಗೆ ಕುಸಿದಿದೆ. ಹಾಲಾಡಿಯಿಂದ ಜೋರಾಡಿ ಮುದ್ದೂರು ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಇದೆ ಸೇತುವೆಯನ್ನೇ ಬಳಸಬೇಕಿತ್ತು. ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಸೇತುವೆ ಕುಸಿದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಸೇತುವೆ ವರ್ಷದ ಒಳಗೆ ನೀರುಪಾಲಾಗಿದೆ.

ಚಿಕ್ಕಮಗಳೂರಲ್ಲಿ ಮರ ಬಿದ್ದು ಮನೆಗಳು ಜಖಂ

ಪುನರ್ವಸು ಮಳೆ ಅಬ್ಬರಕ್ಕೆ ಚಿಕ್ಕಮಗಳೂರು ತತ್ತರಿಸಿ ಹೋಗಿದೆ. ಭಾರೀ ಗಾಳಿ-ಮಳೆಗೆ ಮರಗಳು ಧರೆಗುರುಳುತ್ತಿವೆ. ಮೂಡಿಗೆರೆ ತಾಲೂಕಿನ ಬಾಳೂರು ಗುಡ್ಡಟ್ಟಿ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದಿದೆ. ನವೀನ್, ಶೇಷಪ್ಪ ಎಂಬುವರಿಗೆ ಸೇರಿದ ಮನೆಗಳು ಜಖಂಗೊಂಡಿವೆ. ಮನೆಯಲ್ಲಿದ್ದ ಗೃಹ ಉಪಯೋಗಿ ವಸ್ತುಗಳು ನಾಶವಾಗಿವೆ. ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದ ಮೂಲೆಮನೆ ಎಸ್ಟೇಟ್‌ನಲ್ಲಿ ಭಾರಿ ಗಾಳಿ, ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿತ್ತು. ಪರಿಣಾಮ ಮನೆಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಮನೆಯಲ್ಲಿದ್ದ ಪೂರ್ಣಿಮಾ, ಪ್ರಣಬ್ ಎಂಬುವವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತ ಭಾರೀ ಮಳೆಯಿಂದ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದಲ್ಲಿ ಹುಟ್ಟುವ ಹೇಮಾವತಿ ನದಿ ಗೊರೂರು ಡ್ಯಾಂ ಮೂಲಕ ಕೆ.ಆರ್.ಎಸ್. ಡ್ಯಾಂ ಸೇರಲಿದೆ.

ತುಂಗಾ ನದಿಯಲ್ಲಿ ಮುಳುಗಿದ ಮಂಟಪ

ಮಲೆನಾಡು ಭಾಗದಲ್ಲಿ ನಿರಂತರ ವರ್ಷಧಾರೆ ಹಿನ್ನೆಲೆಯಲ್ಲಿ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಮಂಟಪ ಮುಳುಗಿದೆ. ಶಿವಮೊಗ್ಗ ನಗರ ಮಧ್ಯೆ ಸಾಗುವ ತುಂಗಾ ನದಿಗೆ ತಾಗಿಕೊಂಡಿರುವ ಮಂಟಪ ಮುಳುಗಿದೆ. ಶಿವಮೊಗ್ಗ ನಗರದ ಕೋರ್ಪಲಯ್ಯನ ಛತ್ರದ ಬಳಿಯಿರುವ ಮಂಟಪ ಸಂಪೂರ್ಣವಾಗಿ ಮುಳುಗಿದೆ. ನದಿ ಪಾತ್ರದಲ್ಲಿ ಹೆಚ್ಚು ಜನರು ಓಡಾಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಎಸ್‌ಪಿ ಮಿಥುನ್ ಕುಮಾರ್ ನದಿ ಪಾತ್ರದಲ್ಲಿ ಪೊಲೀಸರ ಬೀಟ್ ವ್ಯವಸ್ಥೆ ಮಾಡಿದ್ದಾರೆ.

ದತ್ತ ಮಂದಿರಕ್ಕೆ ಸುತ್ತುವರಿದ ಕೃಷ್ಣೆ

ಮಹಾರಾಷ್ಟ್ರದ ಪ್ರಸಿದ್ಧ ದೇವಸ್ಥಾನ ದತ್ತ ಮಂದಿರಕ್ಕೆ ಕೃಷ್ಣೆ ನದಿ ಸುತ್ತುವರಿದಿದೆ. ಕೊಲ್ಹಾಪುರ ಜಿಲ್ಲೆಯ ಶಿಳೋಳ‌ ತಾಲೂಕಿನ‌ ನರಸಿಂಹವಾಡಿಯಲ್ಲಿರುವ ದತ್ತ ಮಂದಿರ ಜಲಾವೃತಗೊಂಡಿದೆ. ನರಸಿಂಹವಾಡಿ ಕೃಷ್ಣಾ ಹಾಗೂ ಪಂಚಗಂಗಾ ನದಿಗಳ ಸಂಗಮಸ್ಥಾನವಾಗಿದೆ. ಜಲಾವೃತವಾಗಿದ್ದರೂ ದೇವಸ್ಥಾನಕ್ಕೆ ಭಕ್ತರ ದಂಡು ಹರಿದು ಬಂಧಿದೆ. ನಡು ಮಟ್ಟದ ನೀರಲ್ಲಿಯೇ ಪ್ರದಕ್ಷಿಣೆ ಹಾಕುತ್ತಿದ್ದಾರೆ.

ಕೋಟ ಸಾಹೇಬ್ರಕಟ್ಟೆ ರಾಜ್ಯ ಹೆದ್ದಾರಿ ಸಂಪರ್ಕ ಬಂದ್

ಉಡುಪಿಯ ಕೋಟ ಸಾಹೇಬ್ರಕಟ್ಟೆ ರಾಜ್ಯ ಹೆದ್ದಾರಿ ಸಂಪರ್ಕ ಬಂದ್ ಆಗಿದೆ. ಕೋಟ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಬನ್ನಾಡಿಹೊಳೆ ತುಂಬಿ ಹರಿದಿದೆ. ರಾಜ್ಯ ಹೆದ್ದಾರಿ ಬನ್ನಾಡಿ ಭಾಗದಲ್ಲಿ ಪ್ರತಿ ವರ್ಷವೂ ಕಾಣಿಸಿಕೊಳ್ಳುವ ನೆರೆಹಾವಳಿಯಿಂದಾಗಿ ಸಂಚಾರ ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಹೆದ್ದಾರಿ ಬಂದ್ ಮಾಡಲಾಗಿದೆ. ಸ್ಥಳಕ್ಕೆ ಕುಂದಾಪುರ ಎಸಿ ರಶ್ಮಿ ಭೇಟಿ ನೀರಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಕುಂದಾಪುರ ವಾರಾಹಿ ಸೌಪರ್ಣಿಕ ನದಿ ಭರ್ತಿಯಾಗಿದೆ. ಕುಂದಾಪುರದ ನದಿ ಸಾಲಿನಲ್ಲಿ ನೆರೆಯ ವಾತಾವರಣ ನಿರ್ಮಾಣವಾಗಿದೆ. ಬೇಳೂರು ದೇಲಟ್ಟು ಭಾಗದಿಂದ ಜನರ ಸ್ಥಳಾಂತರ ಮಾಡಲಾಗಿದೆ. ಕುಂದಾಪುರ ಅಗ್ನಿಶಾಮಕ ದಳದ ಕಾರ್ಯಾಚರಣೆ ನಡೆಸುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral News
Latest4 mins ago

Viral News: ಬಾಸ್‌ ಜತೆ ಚಕ್ಕಂದವಾಡುತ್ತಿದ್ದ ಕಿಲಾಡಿ ಪತ್ನಿ; ಡ್ರೋನ್‌ ಬಳಸಿ ಪತ್ತೆ ಹಚ್ಚಿದ ಚಾಲಾಕಿ ಗಂಡ!

Rishabh Pant
ಕ್ರಿಕೆಟ್8 mins ago

Rishabh Pant: ಸಹ ಆಟಗಾರ ಖಲೀಲ್​ ಅಹ್ಮದ್​ರನ್ನು ಸ್ವಿಮ್ಮಿಂಗ್ ಪೂಲ್‌​ಗೆ ತಳ್ಳಿ ಹಾಕಿದ ಪಂತ್​; ವಿಡಿಯೊ ವೈರಲ್​

Karnataka Rain
ಮಳೆ8 mins ago

Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

2nd Puc Result
ಪ್ರಮುಖ ಸುದ್ದಿ13 mins ago

‌2nd PUC Exam Result: ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶ ಪ್ರಕಟ, 23.73% ವಿದ್ಯಾರ್ಥಿಗಳು ಪಾಸ್

Stuck in Lift
Latest19 mins ago

Stuck in Lift: ಫ್ಯಾನಿಲ್ಲ, ಲೈಟಿಲ್ಲ, ಆಹಾರವಿಲ್ಲ; 2 ದಿನ ಲಿಫ್ಟ್‌ನಲ್ಲಿ ಸಿಲುಕಿದ್ದವನ ಸ್ಥಿತಿ ಹೇಗಿರಬಹುದು ಊಹಿಸಿ!

7th Pay Commission
ಕರ್ನಾಟಕ35 mins ago

7th Pay Commission: ಸರ್ಕಾರಿ ನೌಕರರ ವೇತನ, ಪಿಂಚಣಿ 58% ಹೆಚ್ಚಳ; ಸಂಪೂರ್ಣ ಲೆಕ್ಕ ಕೊಟ್ಟ ಸಿದ್ದರಾಮಯ್ಯ

Viral Video
Latest38 mins ago

Viral Video: ಸ್ಟ್ರೆಚರ್‌ ಇಲ್ಲದ ಸರ್ಕಾರಿ ಆಸ್ಪತ್ರೆ; ಪತಿಯನ್ನು ಬೆನ್ನ ಮೇಲೆ ಹೊತ್ತು ನಡೆದ ಪತ್ನಿ! ಮನಮಿಡಿಯುವ ವಿಡಿಯೊ

7th Pay Commission
ಕರ್ನಾಟಕ49 mins ago

7th Pay Commission: ಆ.1ರಿಂದ ನೌಕರರ ವೇತನ ಹೆಚ್ಚಳ; ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ಹೆಚ್ಚುವರಿ ಹೊರೆ ಎಂದ ಸಿಎಂ

Sexual Abuse
Latest50 mins ago

Sexual Abuse: ಹೆಣ್ಣು ಮಕ್ಕಳಿಗೆ ಈಗ ಶಾಲೆ ಕೂಡ ಸುರಕ್ಷಿತವಲ್ಲ! ಶಾಲಾ ಶೌಚಾಲಯದಲ್ಲಿ ಬಾಲಕಿ ಮೇಲೆ ಬಾಲಕನಿಂದ ಅತ್ಯಾಚಾರ

MAX Teaser
ಸ್ಯಾಂಡಲ್ ವುಡ್56 mins ago

MAX Teaser: ಬಹುನಿರೀಕ್ಷಿತ ʼಮ್ಯಾಕ್ಸ್ʼ ಚಿತ್ರದ ಟೀಸರ್‌ ಔಟ್‌; ರೌಡಿಗಳ ಅಡ್ಡದಲ್ಲಿ ನಿಂತು ಲಾಂಗ್‌ ಬೀಸಿದ ಸುದೀಪ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ22 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌