Site icon Vistara News

ಸಿಲಿಕಾನ್ ಸಿಟಿಯಲ್ಲಿ ಭೀಕರ ಅಪಘಾತ: ಶಾಲಾ ಬಸ್‌ ಗುದ್ದಿ ಬಾಲಕಿ ದುರ್ಮರಣ

ಶಾಲಾ ಬಸ್ ಹರಿದು ಬಾಲಕಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಬಸ್‌, ಲಾರಿಗಳಂತಹ ಬೃಹತ್‌ ವಾಹನಗಳಿಗೆ ಸಿಲುಕಿ ಸಾವನ್ನಪ್ಪುವವರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ. ಅಂತಹದ್ದೇ ಒಂದು ಪ್ರಕರಣದಲ್ಲಿ ಶಾಲಾ ಬಸ್ ಹರಿದು ಬಾಲಕಿ ಸಾವನಪ್ಪಿದ್ದಾಳೆ. ಹಾರೋಹಳ್ಳಿಯ ನಿವಾಸಿಯಾಗಿರುವ 16 ವರ್ಷದ ಕೀರ್ತನ ಮೃತ ಬಾಲಕಿ. ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ | ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಲಾರಿ-ಖಾಸಗಿ ಬಸ್‌ ಡಿಕ್ಕಿಯಾಗಿ 8 ಮಂದಿ ಸಾವು

ಹರ್ಷಿತ, ಕೀರ್ತನ, ದರ್ಶನ್ ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್‌ ಬರುತ್ತಿದ್ದರು. ಈ ವೇಳೆ ಹಿಂದಿನಿಂದ ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ವಾಹನ ಗುದ್ದಿದ ರಭಸಕ್ಕೆ ಕೀರ್ತನ ಮೃತಪಟ್ಟಿದ್ದಾಳೆ. ಉಳಿದಿಬ್ಬರಿಗೆ ಗಾಯಗಳಾಗಿವೆ. ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಅಪಘಾತ: ಉರುಳಿ ಬಿದ್ದ ಕಂಟೈನರ್‌

Exit mobile version