Site icon Vistara News

ಕುಡಿದು ವಾಹನ ಚಲಾಯಿಸಿದ ಚಾಲಕ, ಬಿಬಿಎಂಪಿ ಜಂಟಿ ಆಯುಕ್ತರ ಕಾರು ಅಪಘಾತ

accident

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಚಾಲಕ ಬಿಬಿಎಂಪಿ ಜಂಟಿ ಆಯುಕ್ತರ ಕಾರನ್ನೇ ಅಪಘಾತವೆಸಗಿದ್ದಾನೆ.

ರಾಜರಾಜೇಶ್ವರಿ ನಗರದ ಗೇಟ್ ಬಳಿ ಘಟನೆ ನಡೆದಿದೆ. ತಡರಾತ್ರಿ ಮನೆಗೆ ಹೋಗುತ್ತಿರುವಾಗ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿದ್ದಾನೆ. ಘಟನೆಯಲ್ಲಿ ಎರಡೂ ಕಾರುಗಳು ಜಖಂಗೊಂಡಿವೆ. ಘಟನೆ ಸಂಬಂಧ ಕಾರು ಚಾಲಕ ಶಿವಶಂಕರ್‌ನನ್ನು ಪೊಲೀಸರು ವಶಕ್ಕೆ ಪಡೆದು ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ ನಡೆಸಿದಾಗ, ಚಾಲಕ ಮದ್ಯ ಸೇವಿಸಿ ಕಾರು ಚಲಾಯಿಸಿರುವುದು ಪತ್ತೆಯಾಗಿದೆ. ಚಾಲಕ ಶಿವಶಂಕರ್ ವಿರುದ್ಧ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣವನ್ನು ಬ್ಯಾಟರಾಯನಪುರ ಸಂಚಾರಿ ಪೊಲೀಸರು ದಾಖಲಿಸಿದ್ದಾರೆ.

Exit mobile version