Site icon Vistara News

Dry Day Order : ಮದ್ಯಪ್ರಿಯರಿಗೆ Good News ; ಮದ್ಯ ಮಾರಾಟ ನಿಷೇಧ ಅವಧಿ ಇಳಿಕೆ!

Dry day order time Change

ಬೆಂಗಳೂರು: ವಿಧಾನ ಪರಿಷತ್‌ನ ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಹೆಸರಲ್ಲಿ (MLC Election) ಎರಡು ದಿನಗಳ ಕಾಲ ಅಂದರೆ ಪೂರ್ತಿ 48 ಗಂಟೆ ಬೆಂಗಳೂರಿನಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ (Dry Day Order) ವಿಧಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದುಕೊಂಡಿದೆ. ಅದನ್ನು ಮತದಾನ ದಿನಕ್ಕೆ ಸೀಮಿತವಾಗಿ ಕೇವಲ 18 ಗಂಟೆಗಳಿಗೆ ಇಳಿಸಿದೆ.

ಫೆಬ್ರವರಿ 16ರಂದು ನಡೆಯಲಿರುವ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಅಬಕಾರಿ ಇಲಾಖೆ (Excise department) ಅತ್ಯುತ್ಸಾಹದಿಂದ ಕ್ರಮ ಕೈಗೊಂಡು ಫೆಬ್ರವರಿ 14ರ ಸಂಜೆ ಆರು ಗಂಟೆಯಿಂದಲೇ ನಿರ್ಬಂಧವನ್ನು ಜಾರಿ ಮಾಡಿತ್ತು. ಫೆಬ್ರವರಿ 14ರಿಂದ ಫೆಬ್ರವರಿ 16ರಂದು ಚುನಾವಣೆ ಮುಗಿಯುವ ವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಸೂಚಿಸಿತ್ತು. ಈ ನಡುವೆ ಕೆಲವು ರೆಸ್ಟೋರೆಂಟ್‌ ಮಾಲೀಕರು (Restuarant Owners) ಇದು ಕಾನೂನುಬಾಹಿರ ನಿಯಮ ಎಂದು ಕೋರ್ಟ್‌ಗೆ (Karnataka High court) ಹೋಗಿದ್ದ ಫಲವಾಗಿ ಈಗ ಬದಲಾವಣೆ ಮಾಡಲಾಗಿದೆ.

ಮತದಾನದ ದಿನ ಮತ್ತು ಎಣಿಕೆ‌‌ ದಿನದಂದು ಮಾತ್ರ ಮದ್ಯ ಮಾರಾಟ ನಿರ್ಬಂಧ ವಿಧಿಸಿದರೆ ಸಾಕು ಎಂದು ಹೈಕೋರ್ಟ್‌ ಸೂಚಿಸಿದೆ. ಮತದಾನ ನಡೆಯುವ ಫೆ.16ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮದ್ಯ ಮಾರಾಟ‌ ನಿರ್ಬಂಧ ಮಾಡಬಹುದು. ಮತ ಎಣಿಕೆ ನಡೆಯುವ ಫೆ. 20ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿರ್ಬಂಧ ವಿಧಿಸಬಹುದು ಎಂದು ನ್ಯಾ. ಎಸ್.ಆರ್. ಕೃಷ್ಣ ಕುಮಾರ್ ರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ನೀಡಿದೆ.

ಕೋರ್ಟ್‌ ಮೊರೆ ಹೋಗಿದ್ದ ಹೋಟೆಲ್‌ ಸಂಘಟನೆ ಕಾರ್ಯದರ್ಶಿ

ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಫೆಬ್ರವರಿ 1ರಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬೃಹತ್‌ ಬೆಂಗಳೂರು ಹೋಟೆಲ್‌ಗಳ ಸಂಘಟನೆಯ ಕಾರ್ಯದರ್ಶಿ ವೀರೇಂದ್ರ ಎನ್‌.ಕಾಮತ್‌ ಸೇರಿದಂತೆ ಒಟ್ಟು ನಾಲ್ವರು ಹೈಕೋರ್ಟ್‌ ಮೊರೆ ಹೊಕ್ಕಿದ್ದರು.

ಇದನ್ನೂ ಓದಿ : Dry day order : ಚುನಾವಣೆ ಹೆಸರಲ್ಲಿ 48 ಗಂಟೆ ಮದ್ಯ ಮಾರಾಟ ನಿಷೇಧ‌ ಬೇಕಾ?; ಆಕ್ಷೇಪ ಸರಿ ಎಂದ ಕೋರ್ಟ್

Dry day order : ಅರ್ಜಿದಾರರ ವಾದ ಏನಾಗಿತ್ತು?

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಹಿರಿಯ ವಕೀಲ ಅರುಣ್‌ ಶ್ಯಾಮ್‌ ಅವರು. ಅವರು ಹಲವಾರು ವಿಚಾರಗಳನ್ನು ತಮ್ಮ ದಾವೆಯಲ್ಲಿ ಉಲ್ಲೇಖ ಮಾಡಿದ್ದಾರೆ.

  1. ಉಪಚುನಾವಣೆಯು ಸಾರ್ವತ್ರಿಕ ಚುನಾವಣೆಯಲ್ಲ. ಇದರಲ್ಲಿ ಕೇವಲ 16 ಸಾವಿರ ಮತದಾರರು ಮತ ಚಲಾಯಿಸಲು ಅರ್ಹತೆ ಹೊಂದಿದ್ದಾರೆ.
  2. ಹೀಗಾಗಿ, 48 ಗಂಟೆಗಳ ಅವಧಿಯವರೆಗೆ ಮದ್ಯ ಮಾರಾಟ ನಿಷೇಧಿಸಿದರೆ ವರ್ತಕರು, ಉದ್ದಿಮೆದಾರರು ಸಾಕಷ್ಟು ತೊಂದರೆ ಅನುಭವಿಸಲಿದ್ದಾರೆ.
  3. ಪರಿಷತ್‌ ಚುನಾವಣೆಯಲ್ಲಿ ಬಾಂಬೆ ಹೈಕೋರ್ಟ್ ಇಂತಹ ನಿಷೇಧದ ಅವಧಿಯನ್ನು ಒಂದು ದಿನಕ್ಕೆ ಸೀಮಿತಗೊಳಿಸಿರುವ ಪೂರ್ವನಿದರ್ಶನದ ತೀರ್ಪಿದೆ. ಹೀಗಾಗಿ, ಈ ಪ್ರಕರಣದಲ್ಲೂ ಕೇವಲ ಮತದಾನದ ದಿನದಂದು ಮಾತ್ರವೇ ನಿಷೇಧ ಅನ್ವಯಿಸಲು ನಿರ್ದೇಶಿಸಬೇಕು.
  4. ಅರ್ಜಿದಾರರು ಎಂದಿನಿಂತೆ ಉಳಿದ ಅವಧಿಯಲ್ಲಿ ಚಿಲ್ಲರೆ, ಸಗಟು ವ್ಯಾಪಾರ, ಹೋಟೆಲ್‌, ಬಾರ್ ಅಂಡ್‌ ರೆಸ್ಟೋರೆಂಟ್‌ಗಳನ್ನು ತೆರೆಯಲು ಅನುಮತಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಬೇಕು.

ಅಂತಿಮವಾಗಿ ಕೋರ್ಟ್‌ ಹೇಳಿದ್ದೇನು?

ಮತದಾರರು ಶಿಕ್ಷಕರಾಗಿರುವುದರಿಂದ ಮದ್ಯಪಾನದ ನಿರ್ಬಂಧ ಪರಿಶೀಲನೆ ಮಾಡಬಹುದು. ಮದ್ಯಪಾನ ನಿರ್ಬಂಧಿಸದಿದ್ದರೆ ಶಿಕ್ಷಕರು ಮದ್ಯ ಸೇವಿಸುತ್ತಾರೆಂದು ಭಾವಿಸಬೇಕಿಲ್ಲ. ಮುಕ್ತ, ನ್ಯಾಯಸಮ್ಮತ ಮತದಾನಕ್ಕೆ ಇಷ್ಟು ದಿನದ ನಿರ್ಬಂಧ ಅಗತ್ಯವಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠದ ಮಧ್ಯಂತರ ಆದೇಶದಲ್ಲಿ ತಿಳಿಸಿದೆ. ಇದೇ ವೇಳೆ ಇನ್ನೊಂದು ಸೂಚನೆಯನ್ನು ನೀಡಲಾಗಿದ್ದು, ಮದ್ಯ ಮಾರಾಟ ನಿರ್ಬಂಧ ಇರುವ ಅವಧಿಯಲ್ಲೂ ರೆಸ್ಟೋರೆಂಟ್‌ಗಳಲ್ಲಿ ಆಹಾರ ಪೂರೈಸಲು ಯಾವುದೇ ನಿರ್ಬಂಧವಿಲ್ಲ ಎಂದಿದೆ.

Exit mobile version