Electric Bike taxi Service : ನಿರ್ಬಂಧ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿಗೆ ಮಾತ್ರ; ರ‍್ಯಾಪಿಡೊ ಸೇವೆಗೆ ತೊಂದರೆ ಇಲ್ಲ - Vistara News

ಬೆಂಗಳೂರು

Electric Bike taxi Service : ನಿರ್ಬಂಧ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿಗೆ ಮಾತ್ರ; ರ‍್ಯಾಪಿಡೊ ಸೇವೆಗೆ ತೊಂದರೆ ಇಲ್ಲ

Electric Bike taxi Service : ರಾಜ್ಯ ಸರ್ಕಾರ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸರ್ವಿಸ್‌ ನೀಡಿದ್ದ ಅನುಮತಿಯನ್ನು ರದ್ದು ಮಾಡಿದೆ. ಆದರೆ, ಇದು ಪೆಟ್ರೋಲ್‌ ಬೈಕ್‌ಗಳ ಟ್ಯಾಕ್ಸಿ ಸೇವೆಗೆ ಅನ್ವಯಿಸುವುದಿಲ್ಲ ಎಂದು ರ‍್ಯಾಪಿಡೊ ಕಂಪನಿ ಹೇಳಿದೆ.

VISTARANEWS.COM


on

Electric bike taxi service rapido
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರವು (Karnataka Government) ಹಿಂಪಡೆದಿರುವ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ (Electric bike taxi Service) ಆದೇಶದಿಂದಾಗಿ ರ‍್ಯಾಪಿಡೊ ಬೈಕ್‌ ಟ್ಯಾಕ್ಸಿಗಳ ಸೇವೆಗೆ (Rapido bike taxi Service) ಯಾವುದೇ ಅಡಚಣೆ ಆಗುವುದಿಲ್ಲ ಎಂದು ರ‍್ಯಾಪಿಡೊ ಕಂಪನಿ (Rapido company) ಸ್ಪಷ್ಟಪಡಿಸಿದೆ.

ರಾಜ್ಯ ಸರ್ಕಾರವು ಮಾರ್ಚ್‌ 6ರಂದು ಹೊರಡಿಸಿದ ಆದೇಶದಲ್ಲಿ ವಿದ್ಯುತ್‌ ಚಾಲಿತ ಬೈಕ್‌ ಟ್ಯಾಕ್ಸಿ ಸೇವೆಗೆ ನೀಡಿದ ಆನುಮತಿಯನ್ನು ಹಿಂದಕ್ಕೆ ಪಡೆದಿತ್ತು. ಇದನ್ನು ಎಲ್ಲ ಮಾದರಿಯ ಬೈಕ್‌ ಟ್ಯಾಕ್ಸಿ ಸೇವೆಗಳಿಗೂ ಅನ್ವಯವಾಗಲಿದೆ ಎಂದು ವ್ಯಾಖ್ಯಾನಿಸಲಾಗಿತ್ತು. ಅದಕ್ಕೆ ಸಂಬಂಧಿಸಿ ರ‍್ಯಾಪಿಡೊ ಸಂಸ್ಥೆ ಸ್ಪಷ್ಟನೆಯನ್ನು ನೀಡಿದೆ.

ಶುಕ್ರವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕಂಪೆನಿಯು ರಾಜ್ಯ ಸರ್ಕಾರದ ಆದೇಶವು ವಿದ್ಯುತ್‌ ಚಾಲಿತ ವಾಹನಗಳ ಓಡಾಟಕ್ಕೆ ಮಾತ್ರ ಸಂಬಂಧಿಸಿದ್ದಾಗಿದ್ದು ರ‍್ಯಾಪಿಡೊ (Rapido)ಸೇವೆ ಅಭಾಧಿತವಾಗಿ ಮುಂದುವರಿಯಲಿದೆ ಎಂದು ಹೇಳಿದೆ. 2021 ರಲ್ಲಿ ಅಂದಿನ ರಾಜ್ಯ ಸರ್ಕಾರವು ಪರಿಚಯಿಸಿದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ಈಗ ರಾಜ್ಯ ಸರ್ಕಾರವು 2024ರಲ್ಲಿ ಹಿಂಪಡೆದಿದೆ. ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯು ಕರ್ನಾಟಕ ರಾಜ್ಯದೊಳಗೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಮಾತ್ರ ಸಂಬಂಧಿಸಿದೆ. ಪೆಟ್ರೋಲ್‌ ಆಧರಿತ ಬೈಕ್‌ ಟ್ಯಾಕ್ಸಿಗಳ ಸೇವೆಗೆ ಇದು ಅನ್ವಯಿಸುವುದಿಲ್ಲ.

ರಾಜ್ಯ ಸರ್ಕಾರವು ಹೊರಡಿಸಿದ ಅಧಿಸೂಚನೆಯು ಕರ್ನಾಟಕ ರಾಜ್ಯದಲ್ಲಿ ರ‍್ಯಾಪಿಡೊ (Rapido) ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳಿಗೆ ಸಂಬಂಧಿಸಿಲ್ಲ ಮತ್ತು ರ‍್ಯಾಪಿಡೊ (Rapido)ಕರ್ನಾಟಕ ರಾಜ್ಯದಲ್ಲಿ ತನ್ನ ಗ್ರಾಹಕರು ಮತ್ತು ಕ್ಯಾಪ್ಟನ್‌ಗಳಿಗೆ ಯಾವುದೇ ಅಡೆತಡೆಗಳಿಲ್ಲದೆ ಕಾರ್ಯನಿರ್ವಹಿಸಲು ಮತ್ತು ಸೇವೆಯನ್ನು ಮುಂದುವರಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರ‍್ಯಾಪಿಡೊ (Rapido) ಕರ್ನಾಟಕ ರಾಜ್ಯದಲ್ಲಿ ತನ್ನ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳ ಬಗ್ಗೆ 2021 ರಲ್ಲಿ ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಆಗಸ್ಟ್ 2021 ರಲ್ಲಿ ಗೌರವಾನ್ವಿತ ಉಚ್ಚ ನ್ಯಾಯಾಲಯವು ರ‍್ಯಾಪಿಡೊ (Rapido) ಪರವಾಗಿ ಮಧ್ಯಂತರ ಆದೇಶವನ್ನು ನೀಡಿತು ಮತ್ತು ರ‍್ಯಾಪಿಡೊ (Rapido) ಅಥವಾ ಅದರ ಸವಾರರ ವಿರುದ್ಧ ಯಾವುದೇ ದಬ್ಬಾಳಿಕೆಯ ಕ್ರಮವನ್ನು ತೆಗೆದುಕೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತು. ಪ್ರಕರಣವನ್ನು ಕೊನೆಯದಾಗಿ ಮಾರ್ಚ್ 7, 2024ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು ಮತ್ತು ಇದೀಗ ಮಧ್ಯಂತರ ಆದೇಶದ ವಿಸ್ತರಣೆಯೊಂದಿಗೆ ಮಾರ್ಚ್ 20, 2024ಕ್ಕೆ ಮುಂದೂಡಲಾಗಿದೆ.

ರ‍್ಯಾಪಿಡೊ (Rapido) ಕಾನೂನು ಮಾನದಂಡಗಳನ್ನು ಎತ್ತಿಹಿಡಿಯಲು ಮತ್ತು ಅದರ ಬಳಕೆದಾರರಿಗೆ ಉನ್ನತ ಮಟ್ಟದ ಸೇವೆಯ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ. ನಾವು ಕಾನೂನು ಪ್ರಕ್ರಿಯೆಯೊಂದಿಗೆ ಸಹಕರಿಸುವುದನ್ನು ಮುಂದುವರಿಸುತ್ತೇವೆ ಮತ್ತು ನಮ್ಮ ಕಾರ್ಯಾಚರಣೆಗಳಲ್ಲಿ ಪಾರದರ್ಶಕವಾಗಿರುತ್ತೇವೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ : Electric bike Taxi service : ರಾಜ್ಯದಲ್ಲಿ ಆ್ಯಪ್‌ ಆಧಾರಿತ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸೇವೆ ಸ್ಟಾಪ್‌

ಸರ್ಕಾರ ಹೊರಡಿಸಿದ ಹೊಸ ಆದೇಶದಲ್ಲಿ ಏನಿದೆ?

ಸರ್ಕಾರದ ಅಧಿಸೂಚನೆ 14/7/2021ರ ಅನ್ವಯ ಸಾರ್ವಜನಿಕ ಸಾರಿಗೆಗಾಗಿ ಮೊದಲ ಮತ್ತು ಕೊನೆಯ ಹಂತದ ಸಾರಿಗೆ ಸಂಪರ್ಕವನ್ನು ಕಲ್ಪಿಸುವ ಮತ್ತು ಸ್ವಯಂ ಉದ್ಯೋಗ ಅವಕಾಶವನ್ನು ಒದಗಿಸುವ ಉದ್ದೇಶದಿಂದ, ಮೋಟಾರು ವಾಹನ ಕಾಯ್ದೆ 1988ರ (1998ರ ಕೇಂದ್ರ ಅಧಿನಿಯಮ 59ರ ಕಲಂ 2ರ ಉಪಕಲಂ (1) ಕ್ರಮ ಸಂಖ್ಯೆ: 38(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದಲ್ಲಿನ ಎಲ್ಲಾ ನಗರ ಪ್ರದೇಶಗಳಿಗೆ ಅನ್ವಯಿಸುವಂತೆ ‘ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ 2021’ ಅನ್ನು ಜಾರಿಗೆ ತರಲಾಗಿತ್ತು.

ಕರ್ನಾಟಕ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯ ಅಗತ್ಯತೆ ಮತ್ತು ಜಾರಿಯ ಬಗ್ಗೆ ವ್ಯವಸ್ಥಾಪಕ ನಿರ್ದೇಶಕರು, BMRCL ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯಲ್ಲಿ ಬೈಕ್ ಟ್ಯಾಕ್ಸಿ ಯೋಜನೆಗೆ ಸಂಬಂಧಿಸಿದಂತೆ ವರದಿಯು ಪೂರಕವಾಗಿರುವುದಿಲ್ಲವೆಂದು ತಿಳಿಸಿದೆ. ಪ್ರಸ್ತುತ ಕೆಲವು ಖಾಸಗಿ ಅಪ್ಲಿಕೇಶನ್ ಆಧಾರಿತ ಸಂಸ್ಥೆಗಳು ಮೋಟಾರು ವಾಹನ ಕಾಯ್ದೆ ಮತ್ತು ಅದರಡಿ ರಚಿತವಾದ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಸಾರಿಗೇತರ (Non-transport) ದ್ವಿಚಕ್ರ ವಾಹನಗಳನ್ನು ಸಾರಿಗೆ (Transport) ವಾಹನಗಳನ್ನಾಗಿ ಉಪಯೋಗಿಸುತ್ತಿರುವುದು ಕಂಡುಬಂದಿರುತ್ತದೆ. ಹೀಗಾಗಿ ಯೋಜನೆಯನ್ನು ರದ್ದು ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿತ್ತು. ಇದರಲ್ಲಿ ಪೆಟ್ರೋಲ್‌ ಚಾಲಿತ ಬೈಕ್‌ಗಳ ಉಲ್ಲೇಖವಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Phone Tapping: ಎಚ್‌ಡಿಕೆ ಫೋನ್‌ ಟ್ಯಾಪ್‌ ಮಾಡೋಕೆ, ಅವರೇನು ಟೆರರಿಸ್ಟಾ? ಎಂದ ಡಿಕೆಶಿ

Phone Tapping: ರಾಜ್ಯ ಸರ್ಕಾರ ರೇವಣ್ಣ-ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬ ಆರೋಪದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Phone Tapping
Koo

ಬೆಂಗಳೂರು: ರಾಜ್ಯ ಸರ್ಕಾರ ಫೋನ್‌ ಟ್ಯಾಪಿಂಗ್‌ (Phone Tapping) ಮಾಡುತ್ತಿದೆ ಎಂಬ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ಪೋನ್ ಕದ್ದಾಲಿಕೆ ಸರ್ಕಾರ ಮಾಡಿಲ್ಲ. ಅಂಥ ಮುಟ್ಟಾಳ್ ಕೆಲಸ ನಮ್ಮ ಸರ್ಕಾರ ಮಾಡಲ್ಲ. ಫೋನ್‌ ಕದ್ದಾಲಿಸಲು ಅವರೇನು ಭಯೋತ್ಪಾದಕರಾ? ಅವರು ನಮ್ಮ ನಾಯಕರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ರೇವಣ್ಣ-ಕುಮಾರಸ್ವಾಮಿ ಫೋನ್ ಕದ್ದಾಲಿಕೆ ಸರ್ಕಾರ ಮಾಡುತ್ತಿದೆ ಎಂಬ ಆರೋಪದ ಬಗ್ಗೆ ನಗರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಇನ್ನು ಸಿಡಿ ಶಿವು ಎಂಬ ಎಚ್‌ಡಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೂ ಅದಕ್ಕೂ ಯಾವುದೇ ತರಹದ ಸಂಬಂಧವಿಲ್ಲ. ಅದಕ್ಕೆ ಉತ್ತರ ಕೊಡುವ ಸಂದರ್ಭ ಇಲ್ಲ. ನನ್ನ ಹೆಸರು ಹೇಳಲಿಲ್ಲ ಅಂದ್ರೆ ಎಂದರೆ ಅವರಿಗೆ ನಿದ್ದೆ ಬರುವುದಿಲ್ಲ. ಮಾಧ್ಯಮಗಳು ಎಥಿಕ್ಸ್ ಬಿಟ್ಟು ಅನೇಕ ವಿಚಾರಗಳು ಚರ್ಚೆ ಮಾಡುತ್ತೀದ್ದೀರಿ, ಉಪ್ಪು ತಿಂದವರು ನೀರು ಕುಡಿಯಬೇಕು ಎಂದು ಅವರು ಹೇಳಿದ್ದಾರೆ. ಕಾನೂನು ಇದೆ, ಕಾನೂನು ಪ್ರಕಾರ ನಡೆಯುತ್ತದೆ. ಅವರು ಏನು ಬೇಕಾದರೂ ಹೇಳಲಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | Prajwal Revanna Case: ನಾನು ಸೇರಿ ಸುಮಾರು 30 ಜನರ ಫೋನ್ ಟ್ಯಾಪ್: ಸರ್ಕಾರದ ವಿರುದ್ಧ ಎಚ್‌ಡಿಕೆ ಬಾಂಬ್‌!

ದೇವರಾಜೇಗೌಡ- ಶಿವರಾಮೇಗೌಡ ಆಡಿಯೊ ಲೀಕ್ ವಿಚಾರಕ್ಕೆ ಸ್ಪಂದಿಸಿ, ನಮಗೆ ಸಂಬಂಧವಿಲ್ಲ, ನೀವು ಉಂಟು ಅವರುಂಟು. ನೀವು ಮಾತನಾಡಬಹುದು, ನಾನು ಯಾರ ಬಳಿಯೂ ಮಾತನಾಡಿಲ್ಲ. ನಾನು ಯಾರಿಗೂ ಜಿಪಿಎ ಕೊಟ್ಟಿಲ್ಲ. ನಾನು ರಾಜಕಾರಣಿ, ನೂರಾರು ಜನ ಬಿಜೆಪಿ, ದಳ, ಸಾರ್ವಜನಿಕರು, ಅಧಿಕಾರಿಗಳು ಭೇಟಿ ಮಾಡಲು ಬರುತ್ತಾರೆ. ಏನೇನು ಮಾಹಿತಿ ಕೊಡಬೇಕು ಎಂದು ಬರುತ್ತಾರೆ. ಅವರು ಬಿಜೆಪಿಯವರು (ದೇವರಾಜೇಗೌಡ) ಭೇಟಿ ಮಾಡಲು ಸಮಯ ಕೇಳಿದ್ದರು. ನಾನು ಸಮಯ ಕೊಡಲಿಲ್ಲ, ಬಂದರೂ ಒಂದು ನಿಮಿಷ ಯಾರದೋ ಹತ್ತಿರ ಮಾತನಾಡಿದ್ರು, ನಾನು ಒಂದು ನಿಮಿಷವೂ ಮಾತನಾಡಿಲ್ಲ. ನನಗೂ ರಾಜಕೀಯ, ವ್ಯವಹಾರಿಕ ಪ್ರಜ್ಞೆ ಇದೆ. ಅದನ್ನು ಇನ್ನೊಂದು ಸಾರಿ ಆ ಸುದ್ದಿನ ನನ್ನ ಬಳಿ ಕೇಳಬೇಡಿ ಎಂದು ಹೇಳಿದರು.

ತಿಹಾರ್ ಜೈಲಿಗೆ ಹೋದಾಗ ತಾಯಿಗೆ ಸಾಂತ್ವನ ಹೇಳಿದ್ದೆ ಎಂಬ ಎಚ್‌ಡಿಕೆ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ಸಾರಿ ಅವರ ಪರಿಸ್ಥಿತಿ ನೋಡಿ ಅಯ್ಯೋ ಅನ್ನಿಸುತ್ತಿದೆ. ನಾನು ಅವತ್ತು ಹೇಳಿದ್ದೇನೆ, ಇವತ್ತೂ ಹೇಳ್ತೀನಿ, ಮುಂದಕ್ಕೂ ಹೇಳ್ತೀನಿ ಎಂದರು.

ಒಂದು ವರ್ಷ ಸರ್ಕಾರ ಐಸಿಯುನಲ್ಲಿತ್ತು ಎಂಬ ಕುಮಾರಸ್ವಾಮಿ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕಾರ ಏನಾಯ್ತು ಅಂತ ಜನ ಹೇಳಬೇಕು, ನಾಯಕರು ಹೇಳೋದಲ್ಲ. ಹೆಣ್ಣು ಮಕ್ಕಳು ಬದುಕಿನಲ್ಲಿ ಬದಲಾವಣೆ ಯಾವ ಮಟ್ಟಕ್ಕೆ ಆಗಿದೆ ಅಂತ ತಾಯಂದಿರು ಹೇಳಬೇಕು. ಎಲೆಕ್ಷನ್‌ಗೂ ಮುಂಚೆ ಕುಮಾರಸ್ವಾಮಿಯವರೇ ನುಡಿಮುತ್ತು ಹೇಳಿದ್ರಲ್ಲ. ಅವರ ನುಡಿಮುತ್ತುಗಳು ಅವರ ಪಾರ್ಟಿಯ ನುಡಿಮುತ್ತುಗಳು ನಿಮ್ಮ ಹತ್ತಿರ ದಾಖಲೆ ಇದೆಯಲ್ಲ. ನಮ್ಮ ಬಗ್ಗೆ ಅವರು ಹೇಳಲೇಬೇಕು, ನಮ್ಮ ಬಗ್ಗೆ ಶಹಬ್ಬಾಷ್ ಗಿರಿ ಕೊಡಿ ಅಂತ ಕೇಳಕ್ಕಾಗಲ್ಲ, ಕೇಳೋದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ | HD Revanna: ರೇವಣ್ಣಗೆ ಜಾಮೀನು ಸಿಕ್ಕರೂ ಸಿಗದ ರಿಲೀಫ್‌; ಎಸ್‌ಐಟಿಯಿಂದ ಹೈಕೋರ್ಟ್‌ ಮೊರೆ

ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ನಿಮ್ಮೆಲ್ಲರ ಸಹಕಾರ, ಜನರಿಗೆ ಬಹಳ ತೃಪ್ತಿಕರವಾಗಿ ಸರ್ಕಾರ ನಡೆಸಿದ್ದೇವೆ. ಬರೀ ಗ್ಯಾರಂಟಿ ಒಂದೇ ಅಲ್ಲ, ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಡಿಗಲ್ಲು ಹಾಕಿದ್ದೇವೆ. ಎಲೆಕ್ಷನ್ ಮತ್ತೆ ಬಂತು, ಮುಂದೆ ಅವನ್ನು ಕಾರ್ಯರೂಪಕ್ಕೆ ತರಲು ಸಜ್ಜಾಗಿದ್ದೇವೆ. ಸಿಎಂ ಸಹ ಮೊನ್ನೆ ಸಭೆ ನಡೆಸಿ, ಟೆಂಡರ್ ಕರೆಯಲು ಹೇಳಿದ್ದಾರೆ ಎಂದು ತಿಳಿಸಿದರು.

Continue Reading

ರಾಜಕೀಯ

Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Legislative Council Election: ನಾಮಪತ್ರ ಸಲ್ಲಿಸಲು ಜೂನ್‌ 3 ಕೊನೆಯ ದಿನವಾಗಿದೆ. ಜೂನ್ 4ರಂದು ನಾಮಪತ್ರ ಪರಿಶೀಲನಾ ಪ್ರಕ್ರಿಯೆ ನಡೆಯಲಿದೆ. ಅಲ್ಲದೆ, ಮತದಾನದ ದಿನವಾದ ಜೂನ್‌ 13ರಂದೇ ಮತ ಎಣಿಕೆಯನ್ನೂ ನಡೆಸಲಾಗುವುದು ಎಂದು ಆಯೋಗ ಹೇಳಿದೆ. ಈಗಿರುವ ಕರ್ನಾಟಕ ವಿಧಾನ ಪರಿಷತ್ತಿನ 11 ಸದಸ್ಯರ ಅವಧಿಯು ಮುಂದಿನ ತಿಂಗಳು ಮುಕ್ತಾಯವಾಗಲಿದೆ. ಜೂನ್‌ 17ರಂದು ಅವಧಿ ಮುಕ್ತಾಯವಾಗುತ್ತಿರುವುದರಿಂದ ಆ ಸದಸ್ಯತ್ವ ಸ್ಥಾನಗಳನ್ನು ಭರ್ತಿ ಮಾಡಲು ಮುಂದಾಗಲಾಗಿದೆ. ವಿಧಾನಸಭೆಯ ಸದಸ್ಯರು ಇವರನ್ನು ಆಯ್ಕೆ ಮಾಡುತ್ತಾರೆ.

VISTARANEWS.COM


on

Legislative Council Election dates fixedVoting on June 13
Koo

ಬೆಂಗಳೂರು: ರಾಜ್ಯದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕವನ್ನು (Legislative Council Election) ಘೋಷಣೆ ಮಾಡಲಾಗಿದ್ದು, ಜೂನ್‌ 13ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ನಾಮಪತ್ರ ಸಲ್ಲಿಸಲು ಜೂನ್‌ 3 ಕೊನೆಯ ದಿನವಾಗಿದೆ. ಜೂನ್ 4ರಂದು ನಾಮಪತ್ರ ಪರಿಶೀಲನಾ ಪ್ರಕ್ರಿಯೆ ನಡೆಯಲಿದೆ. ಅಲ್ಲದೆ, ಮತದಾನದ ದಿನವಾದ ಜೂನ್‌ 13ರಂದೇ ಮತ ಎಣಿಕೆಯನ್ನೂ ನಡೆಸಲಾಗುವುದು ಎಂದು ಆಯೋಗ ಹೇಳಿದೆ. ಈಗಿರುವ ಕರ್ನಾಟಕ ವಿಧಾನ ಪರಿಷತ್ತಿನ 11 ಸದಸ್ಯರ ಅವಧಿಯು ಮುಂದಿನ ತಿಂಗಳು ಮುಕ್ತಾಯವಾಗಲಿದೆ.

Legislative Council Election dates fixedVoting on June 13

ಜೂನ್‌ 17ರಂದು ಅವಧಿ ಮುಕ್ತಾಯವಾಗುತ್ತಿರುವುದರಿಂದ ಆ ಸದಸ್ಯತ್ವ ಸ್ಥಾನಗಳನ್ನು ಭರ್ತಿ ಮಾಡಲು ಮುಂದಾಗಲಾಗಿದೆ. ಶಾಸಕರು (ವಿಧಾನಸಭೆಯ ಸದಸ್ಯರು) ಇವರನ್ನು ಆಯ್ಕೆ ಮಾಡುತ್ತಾರೆ.

ಈ ಪರಿಷತ್ ಸದಸ್ಯರ ಅವಧಿ ಮುಕ್ತಾಯ

  1. ಅರವಿಂದ್ ಕುಮಾರ್ ಅರಳಿ
  2. ಎನ್.ಎಸ್. ಬೋಸರಾಜು
  3. ಕೆ. ಗೋವಿಂದರಾಜ್
  4. ಡಾ. ತೇಜಸ್ವಿನಿ ಗೌಡ
  5. ಮುನಿರಾಜು ಗೌಡ ಪಿ.ಎಂ.
  6. ಕೆ.ಪಿ. ನಂಜುಂಡಿ ವಿಶ್ವಕರ್ಮ
  7. ಬಿ.ಎಂ. ಫಾರೂಕ್
  8. ರಘುನಾಥ ರಾವ್ ಮಲ್ಕಾಪುರೆ
  9. ಎನ್. ರವಿ ಕುಮಾರ್
  10. ಎಸ್. ರುದ್ರೇಗೌಡ
  11. ಕೆ ಹರೀಶ್ ಕುಮಾರ್

ಅಧಿಸೂಚನೆಯಿಂದ ಮತ ಎಣಿಕೆ ವರೆಗೆ

  1. ಅಧಿಸೂಚನೆ ಹೊರಡಿಸುವ ದಿನಾಂಕ: ಮೇ 27 (ಸೋಮವಾರ)
  2. ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಜೂನ್ 03 (ಸೋಮವಾರ)
  3. ನಾಮಪತ್ರ ಪರಿಶೀಲನೆ: ಜೂನ್ 04 (ಮಂಗಳವಾರ)
  4. ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಜೂನ್ 06 (ಗುರುವಾರ)
  5. ಮತದಾನ ದಿನಾಂಕ: ಜೂನ್ 13 (ಗುರುವಾರ)
  6. ಮತದಾನದ ಸಮಯ: ಬೆಳಗ್ಗೆ 09 ಗಂಟೆಯಿಂದ ಸಂಜೆ 4 ಗಂಟೆವರೆಗೆ
  7. ಮತ ಎಣಿಕೆ ದಿನಾಂಕ: ಜೂನ್ 13 (ಗುರುವಾರ) ಸಂಜೆ 05:00 ಗಂಟೆಗೆ
  8. ಚುನಾವಣೆ ಮುಗಿಯುವ ದಿನಾಂಕ: ಜೂನ್ 15 (ಶನಿವಾರ)

MLC Election: ವಿಧಾನ ಪರಿಷತ್‌ ಚುನಾವಣೆ; ನೈಋತ್ಯ ಶಿಕ್ಷಕರ ಕ್ಷೇತ್ರದ 1 ನಾಮಪತ್ರ ತಿರಸ್ಕೃತ

ಮೈಸೂರು: ಕರ್ನಾಟಕ ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿ ನಾಮಪತ್ರ ಪರಿಶೀಲನೆ ನಡೆಸಲಾಗಿದೆ (MLC Election). ಈ ಪೈಕಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ. ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಚುನಾವಣೆ ಅಧಿಕಾರಿ ಡಾ. ಪ್ರಕಾಶ್ ನೇತೃತ್ವದಲ್ಲಿ ಪರಿಶೀಲನೆ ನಡೆಯಿತು. ಈ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಸತೀಶ್‌ ಕಾರಂತ್‌ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ನಮೂನೆ-26 ನೋಟರಿ ಅಫಿಡವಿತ್‌ ಮತ್ತು ವಿಧಾನಸಭಾ ಮತದಾರರ ಪಟ್ಟಿಯ ದೃಢೀಕೃತ ಪ್ರತಿಯನ್ನು ಸಲ್ಲಿಸದಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಎಲ್ಲ 13 ನಾಮಪತ್ರವೂ ಅಂಗೀಕಾರಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ಅಭ್ಯರ್ಥಿಗಳ ನಾಮಪತ್ರವೂ ಸ್ವೀಕೃತಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ 10 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಈ ಪೈಕಿ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ವಿಧಾನ ಪರಿಷತ್‌ ಚುನಾವಣೆಗೆ ಮೇ 9ರಂದು ಅದಧಿಸೂಚನೆ ಹೊರಡಿಸಲಾಗಿತ್ತು. ಮೇ 17ರ ತನಕ ನಾಮಪತ್ರ ಪರಿಶೀಲನೆ ನಡೆಸಲಾಯಿತು. ಮೇ 20ರ ಅಪರಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

ಬೆಂಗಳೂರು: ʼʼವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆʼʼ ಎಂದು ಸುರೇಶ್ ಸಜ್ಜನ್ ತಿಳಿಸಿದ್ದಾರೆ.

ಇದನ್ನೂ ಓದಿ: HD Revanna: ರೇವಣ್ಣಗೆ ಜಾಮೀನು ಸಿಕ್ಕರೂ ಸಿಗದ ರಿಲೀಫ್‌; ಎಸ್‌ಐಟಿಯಿಂದ ಹೈಕೋರ್ಟ್‌ ಮೊರೆ

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼಪಕ್ಷದ ಹಿರಿಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ರಾಜುಗೌಡ, ಎನ್. ರವಿಕುಮಾರ್, ಗೋವಿಂದ ಕಾರಜೋಳ ಅವರ ಆಶೀರ್ವಾದ ಪಡೆಯಲು ನಿಯೋಗದೊಂದಿಗೆ ಇಲ್ಲಿಗೆ ಬಂದಿದ್ದೆ. ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆʼʼ ಎಂದು ತಿಳಿಸಿದ್ದಾರೆ. ಇಲ್ಲಿಗೆ ಬಂದಿದ್ದ ಮುಖಂಡರ ಜತೆ ಸಮಾಲೋಚನೆ ಮಾಡಿ ಈ ನಿರ್ಧಾರ ಮಾಡಿದ್ದಾಗಿ ವಿವರಿಸಿದ್ದಾರೆ. ರಾಜ್ಯಾಧ್ಯಕ್ಷರು ಪಕ್ಷಕ್ಕಾಗಿ ಮಾಡುತ್ತಿರುವ ಹೋರಾಟ, ಸಂಘಟನಾ ಕಾರ್ಯಕ್ಕೆ ಅವರು ಮೆಚ್ಚುಗೆ ಸೂಚಿಸಿದರು. ʼʼನನಗೆ ಟಿಕೆಟ್ ಮುಖ್ಯವಲ್ಲ; ಪಕ್ಷದ ಅಭ್ಯರ್ಥಿಯ ಗೆಲುವೇ ಮುಖ್ಯ ಎಂದು ತಿಳಿಸಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮುಂದೆ ಮುಖ್ಯಮಂತ್ರಿಯಾಗಲು ಅವರ ಕೈ ಬಲಪಡಿಸುವ ಅಗತ್ಯವಿದೆʼʼ ಎಂದು ಇದೇ ವೇಳೆ ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Prajwal Revanna Case: ನಾನು ಸೇರಿ ಸುಮಾರು 30 ಜನರ ಫೋನ್ ಟ್ಯಾಪ್: ಸರ್ಕಾರದ ವಿರುದ್ಧ ಎಚ್‌ಡಿಕೆ ಬಾಂಬ್‌!

Prajwal Revanna Case: ಹಾಸನ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಪ್ರಜ್ವಲ್‌ ಎಲ್ಲಿದ್ದರೂ ಕರೆಸುವುದಕ್ಕೆ ರೇವಣ್ಣಗೆ ಹೇಳಿದ್ದೇನೆ. ಆದರೆ. ನಾವು ಏನು ಮಾತನಾಡುತ್ತೇವೆ ಎಂದು ತಿಳಿಯಲು ಫೋನ್‌ ಕದ್ದಾಲಿಗೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದ (Prajwal Revanna Case) ಬಳಿಕ ನಾನು ಸೇರಿದಂತೆ ನಮ್ಮ ಸುತ್ತಲೂ ಇರುವ ಸುಮಾರು 30 ಜನರ ಫೋನ್ ಟ್ಯಾಪ್‌ (Phone Tapping) ಆಗುತ್ತಿದೆ. ರೇವಣ್ಣ ಫೋನ್ ಕೂಡ ಟ್ಯಾಪ್‌ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಗಂಭೀರ ಆರೋಪ ಮಾಡಿದ್ದಾರೆ.

ಹಾಸನ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿರುವ ಅವರು, ಪ್ರಜ್ವಲ್‌ ಎಲ್ಲಿದ್ದರೂ ಕರೆಸುವುದಕ್ಕೆ ರೇವಣ್ಣಗೆ ಹೇಳಿದ್ದೇನೆ. ಆದರೆ. ನಾವು ಏನು ಮಾತನಾಡುತ್ತೇವೆ ಎಂದು ತಿಳಿಯಲು ಫೋನ್‌ ಕದ್ದಾಲಿಗೆ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಎಚ್‌ಡಿಕೆ ಕಿಡಿಕಾರಿದ್ದಾರೆ.

ದೇವೇಗೌಡರು ರಾಜೀನಾಮೆ ಕೊಡಲು ಮುಂದಾಗಿದ್ದರು

ಹಾಸನ ಪೆನ್ ಡ್ರೈವ್ ಪ್ರಕರಣದಿಂದ ನೊಂದು ದೇವೇಗೌಡರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದರು. ಯಾವ ಮುಖ ಇಟ್ಟುಕೊಂಡು ನಾನು ರಾಜ್ಯಸಭೆಗೆ ಹೋಗಲಿ ಅಂತ ಹೇಳಿ, ರಾಜೀನಾಮೆ ಕೊಡಲು ಮುಂದಾಗಿದ್ದರು. ಎಷ್ಟು ದಿನ ಅಂತ ಹೊರಗೆ ಇರಬೇಕು. ಬಂದು ತನಿಖೆ ಎದುರಿಸಬೇಕು ಎಂದು ಅವರು ಹೇಳಿರುವುದಾಗಿ ಎಚ್‌ಡಿಕೆ ಹೇಳಿದ್ದಾರೆ.

ಇನ್ನು ಪ್ರಜ್ವಲ್‌ ಎಲ್ಲಿದ್ದರೂ ಕರೆಸಲು ಮಾಧ್ಯಮದ ಮೂಲಕ ಮನವಿ ಮಾಡು ಅಂತ ರೇವಣ್ಣಗೆ ಹೇಳಿದ್ದೇನೆ. ದೇವೇಗೌಡರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾದಾಗ, ಯಾರೋ ಮಾಡಿದ ತಪ್ಪಿಗೆ ನೀವು ರಾಜೀನಾಮೆ ಕೊಟ್ಟರೆ ರಾಜ್ಯಕ್ಕೆ ನಷ್ಟ ಅಂತ ಹೇಳಿದ್ದೇನೆ. ಈ ಪ್ರಕರಣದಿಂದ ದೇವೇಗೌಡ್ರು ನೊಂದಿದ್ದಾರೆ. ಯಾವ ಮುಖ ಹೊತ್ತು ರಾಜ್ಯಸಭೆಯಲ್ಲಿ ಕೂರಲಿ ಅಂತ ಹೇಳಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ | CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

ಅವರೇನು ಭಯೋತ್ಪಾದಕರಾ? ಎಂದ ಡಿಕೆಶಿ

ರೇವಣ್ಣ-ಕುಮಾರಸ್ವಾಮಿ ಫೋನ್ ಕದ್ದಾಲಿಕೆಯನ್ನು ಸರ್ಕಾರ ಮಾಡುತ್ತಿದೆ ಎಂಬ ಹೆಚ್ಡಿಕೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಫೋನ್ ಕದ್ದಾಲಿಕೆ ಸರ್ಕಾರ ಮಾಡಿಲ್ಲ. ಅಂತಹ ಮುಟ್ಟಾಳ್ ಕೆಲಸ ನಮ್ಮ ಸರ್ಕಾರ ಮಾಡಲ್ಲ. ಅವರೇನು ಭಯೋತ್ಪಾದಕರಾ? ಅವರು ನಮ್ಮ ನಾಯಕರು ಎಂದು ವ್ಯಂಗ್ಯವಾಡಿದ್ದಾರೆ.

ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Prajwal Revanna Case Shivarame Gowdas Deve Gowda suicide statement says Nikhil Kumaraswamy

ಬೆಂಗಳೂರು: ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಸಂತ್ರಸ್ತೆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡಿಯೂ ತೋರಿಸಿಲ್ಲ. ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಎಷ್ಟು ಸರಿ? ಇಡೀ ರಾಜ್ಯದ ಜನಕ್ಕೆ ಈ ರೀತಿಯ ತೋರಿಸಿದ್ದು ಯಾರು? ಅವರ ಬಗ್ಗೆ ಯಾಕೆ ತನಿಖೆ ಆಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆಯೋ , ರಾಜ್ಯ ಸರ್ಕಾರದ ಜವಾಬ್ದಾರಿ ಇದೆ. ಇದು ಇವತ್ತು ರಾಷ್ಟ್ರದ ಮಟ್ಟದಲ್ಲಿ ಸುದ್ದಿ ಆಗಿದೆ. ಇದಕ್ಕೆ ಉತ್ತರ ಸಿಗಬೇಕು. ತನಿಖೆ ಪಾರದರ್ಶಕವಾಗಿ ಆಗಬೇಕು ಅಲ್ವಾ‌? ಎಂದು ನಿಖಿಲ್‌ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಎಸ್ಐಟಿ ತನಿಖೆ ಎದುರಿಸುವುದು ಸೂಕ್ತ. ಘಟ‌ನೆ ಆದ ದಿನವೇ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಬೇಕು ಅಂತ. ಎಸ್‌ಐಟಿ ತನಿಖೆ ಮಾಡುತ್ತಲಿದೆ. ಹೀಗಾಗಿ ಸಂಸದರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಪ್ರಜ್ವಲ್‌ ನನ್ನ ಜತೆಯಂತೂ ಸಂಪರ್ಕದಲ್ಲಿಲ್ಲ ಎಂದು ನಿಖಿಲ್‌ ಹೇಳಿದರು.

ದೇವೇಗೌಡ ಆತ್ಮಹತ್ಯೆ ಹೇಳಿಕೆ; ಶಿವರಾಮೇಗೌಡ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕೆಂಡ

ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಎಸಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್. ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಈಗ ಎಲ್ಲಡೆ ವೈರಲ್‌ ಆಗಿದೆ. ಅಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ (HD Dewegowda) ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಹೇಳಿಕೆಗೆ ವ್ಯಾಪಕ ಟೀಕೆಗಳು ಕೇಳಿ ಬರುತ್ತಿವೆ. ಇದನ್ನು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಖಂಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ನಿನ್ನೆ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರ ಆಡಿಯೊವನ್ನು ನಾನು ಕೇಳಿದೆ. ದೇವೇಗೌಡರ ಬಗ್ಗೆ ಈ ರೀತಿ ಲಘುವಾಗಿ ಮಾತನಾಡಬಾರದು. ರಾಜಕಾರಣ ಬೇರೆಯೊಬ್ಬರ ಸಾವು ಬಯಸುವುದು ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ

ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೊವನ್ನು ಕೇಳಿದ್ದಾರೆ. ದೇಶದ ಮಾಜಿ ಪ್ರಧಾನಿಗಳು, ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಇಂಥ ಹೇಳಿಕೆಯನ್ನು ಕೊಡಬಾರದಿತ್ತು. ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಅ‌ನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ರಾಜಕೀಯವನ್ನು ಮಾಡಿ ಯಾರು ಬೇಡ ಎಂದು ಹೇಳುತ್ತಾರೆ? ಆದರೆ, ಇನ್ನೊಬ್ಬರ ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ನಮ್ಮ ಬಳಿ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮಗನ ಭವಿಷ್ಯದ ಬಗ್ಗೆ ಯೋಚನೆ ಮಾಡಿ ಹೀಗೆ ಮಾಡಿದ್ದಾರೆ ಎಂದು ಶಿವರಾಮೇಗೌಡ ಅವರು ಹೇಳಿರುವ ಮಾತುಗಳು ಆಡಿಯೊದಲ್ಲಿ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್‌ ಕುಮಾರಸ್ವಾಮಿ, ಚುನಾವಣೆಗಳಲ್ಲಿ ಅಡ್ಜಸ್ಟ್‌ಮೆಂಟ್‌ ಕೆಲವು ಸಲ ಆಗುತ್ತದೆ. ಅದು ಹೊರಗೂ ಬರುತ್ತದೆ. ಆದರೆ, ನನ್ನ ಬಗ್ಗೆ ನಮ್ಮ ತಂದೆ ಎಂದೂ ಹೀಗೆ ಯೋಚನೆ ಮಾಡಿಲ್ಲ. ನಮ್ಮ ತಂದೆ ರಾಜ್ಯದ, ಜನರ ಬಗ್ಗೆ ಯೋಚನೆ ಮಾಡ್ತಾರೆ. ಬಹಳ ಜನ ಅಡ್ಜೆಸ್ಟ್‌ಮೆಂಟ್‌ ಮಾಡಿಕೊಂಡು ಇವತ್ತು ಬಹಳ ಒಳ್ಳೇ ಸ್ಥಾನದಲ್ಲಿ ಇದ್ದಾರೆ. ಆದರೆ, ನಮ್ಮ ಬಳಿ ಆ ರೀತಿ ಯಾವ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ ಎಂದು ಹೇಳಿದರು.

ಶಿವರಾಮೇಗೌಡ ಮಾತನಾಡಿರುವ ಪ್ರತಿ ವಿಚಾರದಲ್ಲಿಯೂ ರಾಜ್ಯ ಸರ್ಕಾರದ ಕೈವಾಡ ಇದೆ ಎಂಬುದು ಗೊತ್ತಾಗುತ್ತದೆ. ಅವರೂ ಕೂಡಾ ಸರ್ಕಾರದ ಪ್ರಮುಖ ವ್ಯಕ್ತಿಯೊಬ್ಬರ ಹೆಸರು ಹೇಳಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದರು.

ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಗನ ಭವಿಷ್ಯದ ಚಿಂತೆ ಅಂತಾರೆ. ಎರಡು ಚುನಾವಣೆಯನ್ನು ನಾನು ಎದುರಿಸಿದ್ದೇನೆ. ಕೆಲವೊಮ್ಮೆ ಕೆಲವು ಸಂದರ್ಭದಲ್ಲಿ ಅಡ್ಜೆಸ್ಟ್‌ಮೆಂಟ್‌ ಒಳಗೆ ಹೊರಗೆ ಆಗುತ್ತದೆ. ಆದರೆ, ನಮ್ಮ ವಿಚಾರದಲ್ಲಿ ಹೀಗೆ ಆಗಲಿಲ್ಲ. ನನ್ನ ವಿಷಯದಲ್ಲಿ ದೊಡ್ಡ ಮಟ್ಟದಲ್ಲಿ ಕೂರಿಸಬೇಕು ಅನ್ನೋ ಚಿಂತನೆ ಕುಮಾರಣ್ಣರಿಗೆ ಇಲ್ಲ. ಅವರಿಗೆ ರಾಜ್ಯದ ಜನತೆ ಬಗ್ಗೆ ಇದ್ದ ಕಮಿಟ್ಮೆಂಟ್, ಬದ್ಧತೆ ಹಿನ್ನೆಲೆಯಲ್ಲಿ ಅವರು ಯಾವುದೇ ರೀತಿಯ ಯೋಚನೆಯನ್ನು ಮಾಡಲಿಲ್ಲ. ನಾನು ಸೋತ ಬಳಿಕವೂ ರಾಮನಗರ, ಮಂಡ್ಯದಲ್ಲಿ ಓಡಾಡುತ್ತಿದ್ದೇನೆ. ಅನೇಕ ರಾಜಕಾರಣಿ ಮಕ್ಕಳು ಅಡ್ಜೆಸ್ಟ್‌ಮೆಂಟ್‌ ಮೂಲಕ ಉತ್ತಮ ಸ್ಥಾನಗಳಲ್ಲಿದ್ದಾರೆ. ನನಗೆ ಹಾಗೇ ಆಗಿಲ್ಲ. ನಾನು ಒಬ್ಬನೇ ಓಡಾಡುತ್ತಿದ್ದೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು

ಶಿವರಾಮೇಗೌಡ ಒಬ್ಬ ಸರ್ಕಾರದ ವ್ಯಕ್ತಿಯ ಹೆಸರನ್ನು ಉಲ್ಲೇಖಿಸುತ್ತಾರೆ. ಹಾಸನದ ಸಂಸದರ ವಿಡಿಯೊ ರಿಲೀಸ್ ಆದ ಬಳಿಕ ಸಂತ್ರಸ್ತೆ ಮುಖವನ್ನು ಬ್ಲರ್ ಮಾಡಲಿಲ್ಲ. ಸಂಸದರ ಮೇಲೆ ಆರೋಪ ಕೇಳಿಬಂದಿದೆ. ಆರೋಪಿ ಅದನ್ನು ಎದುರಿಸಲಿ. ಆದರೆ, ಸಂತ್ರಸ್ತೆಯರ ವಿಡಿಯೊ ಬಿಡುಗಡೆ ಮಾಡಿ ಮಾನ ಹರಾಜು ಮಾಡೋದು ಯಾಕೆ? ವಿಡಿಯೊ ರಿಲೀಸ್ ಮಾಡಿದವರ ಬಗ್ಗೆ ಕ್ರಮ ಯಾಕೆ ಆಗುತ್ತಿಲ್ಲ. ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದರು.

Continue Reading

ಕ್ರೈಂ

HD Revanna: ರೇವಣ್ಣಗೆ ಜಾಮೀನು ಸಿಕ್ಕರೂ ಸಿಗದ ರಿಲೀಫ್‌; ಎಸ್‌ಐಟಿಯಿಂದ ಹೈಕೋರ್ಟ್‌ ಮೊರೆ

HD Revanna: ಇವತ್ತು ನಮಗೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ಐದು ಲಕ್ಷ ರೂಪಾಯಿಯ ಬಾಂಡ್ ಮೇಲೆ ರೇವಣ್ಣಗೆ ಜಾಮೀನು ಸಿಕ್ಕಿದೆ. ಕೆ.ಆರ್. ನಗರ ಕೇಸ್‌ನಲ್ಲಿ ರೇವಣ್ಣ ಅವರಿಗೆ ಸಿಕ್ಕಿದ ಜಾಮೀನು ಆದೇಶವನ್ನು ಪ್ರಶ್ನಿಸಿ ಎಸ್‌ಐಟಿ ಹೈಕೋರ್ಟ್ ಮೊರೆ ಹೋಗಿರುವುದು ಸರ್ಕಾರದ ಹುನ್ನಾರವಾಗಿದೆ. ಇದರಲ್ಲಿ ರೇವಣ್ಣ ಅವರನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ಅವರ ಕಾನೂನು ಹೋರಾಟಕ್ಕೆ ನಾವು ಕೂಡ ಸಮರ್ಥವಾಗಿ ಹೈಕೋರ್ಟ್‌ನಲ್ಲಿ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್‌ ಮುಖಂಡ ಎ.ಪಿ. ರಂಗನಾಥ್ ಹೇಳಿದ್ದಾರೆ.

VISTARANEWS.COM


on

Holenarasipura sexual assault case SIT moves HC against HD Revanna bail order
Koo

ಬೆಂಗಳೂರು: ಹೊಳೆನರಸೀಪುರ (Holenarasipura) ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna case) ಅವರಿಗೆ ಜಾಮೀನು (Bail) ಮಂಜೂರಾಗಿದೆ. ಇನ್ನೊಂದು ಪ್ರಕರಣದಲ್ಲಿ ಈಗಾಗಲೇ ಜಾಮೀನು ದೊರೆತಿರುವುದರಿಂದ ರೇವಣ್ಣಗೆ ಬಿಗ್‌ ರಿಲೀಫ್‌ ದೊರೆತಂತಾಗಿದೆ ಎಂದು ಅಂದುಕೊಳ್ಳುತ್ತಿರುವಂತೆ ಅವರಿಗೆ ಎಸ್‌ಐಟಿ ಶಾಕ್‌ ನೀಡಿದೆ. ಜಾಮೀನು ಅರ್ಜಿಯನ್ನು ಪ್ರಶ್ನೆ ಮಾಡಿ ಹೈಕೋರ್ಟ್‌ ಮೊರೆ ಹೋಗಿದೆ.

ಜನಪ್ರತಿನಿಧಿಗಳ ಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಎಸ್ಐಟಿ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಆದೇಶವನ್ನು ಪ್ರಶ್ನೆ ಮಾಡಲಿದೆ.

ಈ ಸಂಬಂಧ ಜೆಡಿಎಸ್‌ ಮುಖಂಡ ಎ.ಪಿ. ರಂಗನಾಥ್ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ವಾರ ವಾದ – ಪ್ರತಿವಾದಗಳು ನಡೆದಿದ್ದವು. ಹೊಸ ಪ್ರಯೋಗ ಮಾಡಲು ಹೋಗಿ ಎಸ್‌ಐಟಿಗೆ ಮುಖಭಂಗವಾಗಿದೆ. ಇವತ್ತು ನ್ಯಾಯಾಲಯ ಎಸ್‌ಐಟಿಯ ನಡೆಯನ್ನು ವಜಾ ಮಾಡಿದೆ. ಇದೇ ಎಸ್‌ಐಟಿಯ ಎಸ್‌ಪಿಪಿ ಹೆಚ್ಚುವರಿ ಸೆಕ್ಷನ್ ಸೇರಿಸಲ್ಲವೆಂದು ಕೋರ್ಟ್‌ಗೆ ಹೇಳಿದ್ದರು. ಕೊನೆಗೆ 354 ಕೇಸ್‌ನಲ್ಲಿನ ಜಾಮೀನು ತೆಗೆದುಕೊಳ್ಳಲು ಬಂದಾಗ 376 ಸೇರಿಸಿದ್ದೇವೆ ಎಂದು ಹೇಳಿಕೊಂಡರು. ರೇವಣ್ಣ ಪರ ಹಿರಿಯ ಪರ ವಕೀಲ ಸಿ.ವಿ. ನಾಗೇಶ ವಾದ ಮಂಡಿಸಿ, ಎಸ್‌ಐಟಿ ತಪ್ಪುಗಳನ್ನು ಕೋರ್ಟ್‌ ಗಮನಕ್ಕೆ ತಂದರು. ಇವತ್ತು ನಮಗೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ಐದು ಲಕ್ಷ ರೂಪಾಯಿಯ ಬಾಂಡ್ ಮೇಲೆ ರೇವಣ್ಣಗೆ ಜಾಮೀನು ಸಿಕ್ಕಿದೆ. ಕೆ.ಆರ್. ನಗರ ಕೇಸ್‌ನಲ್ಲಿ ರೇವಣ್ಣ ಅವರಿಗೆ ಸಿಕ್ಕಿದ ಜಾಮೀನು ಆದೇಶವನ್ನು ಪ್ರಶ್ನಿಸಿ ಎಸ್‌ಐಟಿ ಹೈಕೋರ್ಟ್ ಮೊರೆ ಹೋಗಿರುವುದು ಸರ್ಕಾರದ ಹುನ್ನಾರವಾಗಿದೆ. ಇದರಲ್ಲಿ ರೇವಣ್ಣ ಅವರನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ಅವರ ಕಾನೂನು ಹೋರಾಟಕ್ಕೆ ನಾವು ಕೂಡ ಸಮರ್ಥವಾಗಿ ಹೈಕೋರ್ಟ್‌ನಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌ಡಿ ರೇವಣ್ಣಗೆ ಜಾಮೀನು

ಜಾಮೀನಿಗೆ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ನ್ಯಾಯಾಧೀಶರು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ. 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಪ್ರೀತ್ ಜೆ. ಅವರು ಆದೇಶ ಹೊರಡಿಸಿದ್ದಾರೆ. ಇಂದು ವಿಚಾರಣೆಗೆ ರೇವಣ್ಣ ಬರಿಗಾಲಲ್ಲೇ ಹಾಜರಾಗಿದ್ದರು. ಜಾಮೀನು ದೊರೆತ ಬಳಿಕ ಅವರ ಮುಖದಲ್ಲಿ ನಿರಾಳತೆ ಕಂಡುಬಂತು.

ಗುರುವಾರ ಮಧ್ಯಂತರ ಜಾಮೀನು ನೀಡಿ ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿತ್ತು. ಶುಕ್ರವಾರ ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಸೋಮವಾರಕ್ಕೆ (ಮೇ 20) ವಿಚಾರಣೆಯನ್ನು ಮುಂದೂಡಿದ್ದರು. ಇದೀಗ ಎರಡನೇ ಪ್ರಕರಣದಲ್ಲಿ ಅವರಿಗೆ ಜಾಮೀನು ಲಭ್ಯವಾಗಿದೆ.

ಚಾಮರಾಜನಗರದ ಸಂತ್ರಸ್ತೆಯ ಕಿಡ್‌ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆರು ದಿನಗಳ ನಿರಂತರ ಕಾನೂನು ಸಮರದ ಬಳಿಕ ಅವರಿಗೆ ಜಾಮೀನು ದೊರೆತಿತ್ತು.

ಹೊಳೆನರಸೀಪುರ ಪ್ರಕರಣದಲ್ಲಿ ಎಸ್‌ಐಟಿ ಪರ ವಾದ ಮಂಡಿಸಿದ ಎಸ್‌ಪಿಪಿ ಜಯ್ನಾ ಕೊಠಾರಿ, ಎಚ್.‌ ಡಿ. ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದ್ದರು. ಆರೋಪಿ ರೇವಣ್ಣ ಅವರನ್ನು ಪೊಲೀಸರ ವಶಕ್ಕೆ ನೀಡಬೇಕು. ಇದೇ ಪ್ರಕರಣದ ಇನ್ನೊಬ್ಬ ಆರೋಪಿ ವಿಚಾರಣೆಗೆ ಹಾಜರಾಗಿಲ್ಲ. ಮತ್ತೊಬ್ಬ ಆರೋಪಿ ದೇಶ ಬಿಟ್ಟು ಹೋಗಿದ್ದಾರೆ. ಹೀಗಾಗಿ ಸಮಯ ನೀಡಬಾರದು. ಇಂದೇ ವಿಚಾರಣೆ ನಡೆಸಿ ಆದೇಶ ನೀಡಿ ಅಥವಾ ಪೊಲೀಸರ ವಶಕ್ಕೆ ನೀಡಬೇಕು ಎಂದು ವಾದಿಸಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್, ಎಚ್.ಡಿ. ರೇವಣ್ಣ ವಿರುದ್ಧ ಯಾವುದೇ ನಾನ್ ಬೇಲೆಬಲ್ ಸೆಕ್ಷನ್ ಇಲ್ಲ. ಜಾಮೀನು ನೀಡುವಂತಹ ಸೆಕ್ಷನ್‌ಗಳು ಇವೆ ಎಂದು ಹೇಳಿದರು. ನಾನ್ ಬೇಲೆಬಲ್ ಸೆಕ್ಷನ್ ಪ್ರಕರಣದಲ್ಲಿ ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರವೇ ಇಲ್ಲ. ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರ ಇದೆಯೇ ಎಂಬುದು ಮೊದಲು ನಿರ್ಧಾರ ಆಗಲಿ. ಈಗಾಗಲೇ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆಗಲೇ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಬಹುದಿತ್ತು. ಈಗ ಎಸ್ಐಟಿ ಕಸ್ಟಡಿಗೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ರೇವಣ್ಣ ಪರ ವಕೀಲರ ವಾದ ಹೀಗಿತ್ತು

ವಾದದ ವೇಳೆ ರೇವಣ್ಣ ಪರ ವಕೀಲರು ಪ್ರಕರಣದ ದೋಷಗಳನ್ನು ಕೋರ್ಟ್‌ ಮುಂದೆ ಎತ್ತಿ ತೋರಿಸಿದರು. ಪೊಲೀಸರು ದಾಖಲಿಸಿಕೊಂಡಿರುವ ದೂರಿನಲ್ಲಿ ಉಲ್ಲೇಖವಾಗಿರುವ ಮಹಿಳೆಯ ಹೇಳಿಕೆಯಲ್ಲಿನ ಗೊಂದಲದ ಬಗ್ಗೆ ಗಮನ ಸೆಳೆದಿದ್ದಾರೆ.

ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜಾಮೀನು ನೀಡುವ ಬಗ್ಗೆ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್‌, ದೂರುದಾರೆಯ ಹೇಳಿಕೆ ಬಗ್ಗೆ ಕೋರ್ಟ್‌ ಗಮನಕ್ಕೆ ತಂದರು. ಈ ಹೇಳಿಕೆಯು ಸಂಪೂರ್ಣ ಗೊಂದಲಮಯವಾಗಿದೆ. ಬೇಕೆಂದೇ ನಮ್ಮ ಕಕ್ಷಿದಾರರನ್ನು ಇಲ್ಲಿ ಫಿಟ್‌ ಮಾಡಲಾಗಿದೆ. ಇದೊಂದು ಸುಳ್ಳು ಕೇಸ್‌ ಎಂದು ವಾದಿಸಿದರು.

ಕೋರ್ಟ್‌ನಲ್ಲಿ ವಾದ ಮಂಡಿಸಿದ ಸಿ.ವಿ. ನಾಗೇಶ್‌, ದೂರುದಾರರು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಹೊಳೆನರಸೀಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬೆಂಗಳೂರಿಗೆ ಬಂದು ದೂರುದಾರರಿಂದ ತಮಗೆ ನೀಡಿದಂತೆ ದೂರು ಬರೆಸಿಕೊಂಡು ಹೋಗಿ ಕೇಸ್ ದಾಖಲಿಸಿದ್ದಾರೆ ಎಂಬುದನ್ನು ಗಮನಕ್ಕೆ ತಂದರು. ಅಲ್ಲದೆ, ಪೊಲೀಸರು ದಾಖಲು ಮಾಡಿಕೊಂಡಿರುವ ಹೇಳಿಕೆಯನ್ನು ಕೋರ್ಟ್‌ ಮುಂದೆ ಓದಿದರು.

ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ

ಪ್ರಜ್ವಲ್ ರೇವಣ್ಣ ಮೇಲೆ‌ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಏಪ್ರಿಲ್ 24ರ ರಾತ್ರಿ‌ 11 ಗಂಟೆಗೆ ಬೆಂಗಳೂರಿನಲ್ಲಿರುವ ಸಂತ್ರಸ್ತೆಯೊಬ್ಬರು ದೂರು ನೀಡಲು‌ ಬಂದಿದ್ದರು. ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿ, ಮಹಿಳಾ ಸಿಬ್ಬಂದಿಯೊಂದಿಗೆ ಸಂತ್ರಸ್ತೆ ಇರುವ ಸ್ಥಳಕ್ಕೆ ಹೋಗಿ ದೂರು ಪಡೆದು‌ ಕೇಸ್ ದಾಖಲಿಸಿದ್ದಾಗಿ ಸ್ಟೇಷನ್ ಬುಕ್‌ನಲ್ಲಿ‌ ಉಲ್ಲೇಖಿಸಿದ್ದಾರೆ. ಇಲ್ಲಿ ಸ್ಪಷ್ಟವಾಗಿ ಗೊತ್ತಾಗುವುದೇನೆಂದರೆ ಈ ದೂರು ರಿಜಿಸ್ಟರ್ ಆಗಿರುವುದಲ್ಲ‌. ದೂರನ್ನು ತಿದ್ದುಪಡಿ ಮಾಡಿ ತಮಗೆ ಬೇಕಾದ ಹಾಗೆ ಮಾಡಿಕೊಂಡಿದ್ದಾರೆ. ರೇವಣ್ಣ ವಿರುದ್ಧ ದೂರುದಾರೆ ನೀಡಿದ ದೂರನ್ನು ಮಹಿಳಾ ಅಧಿಕಾರಿ ದಾಖಲಿಸಿಕೊಳ್ಳಲ್ಲಿಲ್ಲ. ಆಕೆಯ ಹೇಳಿಕೆಯನ್ನು ಲಿಖಿತ ರೂಪದಲ್ಲಿ ದಾಖಲಿಸಿಕೊಂಡಿಲ್ಲ. ಇದು ಸಂತ್ರಸ್ತೆ ನೀಡಿದ ದೂರೇ ಅಲ್ಲ. ಬೇಕಂತಲೇ ಸೃಷ್ಟಿಯಾಗಿರುವ ಕೇಸ್ ಆಗಿದೆ. ಆಕೆಗೆ ಲೈಂಗಿಕ ದೌರ್ಜನ್ಯ ಅಂದರೇನು ಅಂತ ಗೊತ್ತೇ ಇರುವುದಿಲ್ಲ ಎಂದು ಸಿ.ವಿ. ನಾಗೇಶ್ ವಾದಿಸಿದರು.

ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ಲೈಂಗಿಕ ದೌರ್ಜನ್ಯವೇ ಬೇರೆ, ಅತ್ಯಾಚಾರವೇ ಬೇರೆ. ಸಂತ್ರಸ್ತೆ ನೀಡಿದ ದೂರಿನ ಅಂಶಗಳನ್ನು ಓದಿ ಹೇಳಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯ ಪತಿ ಆಕೆಯ ಮೇಲೆ ಪಟ್ಟ ಅನುಮಾನವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಕೆ ನನ್ನ ಮೇಲೆ ಆ ರೀತಿ ಕೃತ್ಯ ನಡೆದಿಲ್ಲ ಎಂದು ಹೇಳಿದ್ದಾಳೆ. ನಾಲ್ಕೈದು ವರ್ಷಗಳ ಹಿಂದೆ ನಡೆದಿರುವ ಕೃತ್ಯದ ಬಗ್ಗೆ ಆರೋಪಿಸಿದ್ದಾರೆ. ಒಂದು ಕಡೆ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ನೀಡಿದ್ದ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳುತ್ತಾರೆ. ಮತ್ತೊಂದೆಡೆ ಸಂತ್ರಸ್ತೆ ಗಂಡ ಬೇರೆ ಹೆಣ್ಣು‌ ಮಕ್ಕಳ ವಿಡಿಯೊ ಬಗ್ಗೆ ಕೇಳಿದಾಗ ನನ್ನ ಮೇಲೆ ಆ ರೀತಿ ಆಗಿಲ್ಲ‌ ಅಂತ ಹೇಳಿದ್ದಾಳೆ. ಮತ್ತೊಂದೆಡೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ತಾಳಲಾರದೆ ಮನೆ ಕೆಲಸ ಬಿಟ್ಟು ಬಂದೆ ಎಂದು ಹೇಳುತ್ತಾಳೆ. ತನಿಖಾಧಿಕಾರಿಗಳು ಸಂತ್ರಸ್ತೆ ಹೇಳಿಕೆ ಆಧಾರದ ಮೇಲೆ 376 ದಾಖಲಿಸಲು ಅನುಮತಿ ಕೇಳಿದ್ದಾರೆ. ಯಾರ ಮೇಲೆ ಸೆಕ್ಷನ್‌ 376 ದಾಖಲಿಸುತ್ತಾರೆ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣಗೆ ಸಂಕಷ್ಟ; ಅರೆಸ್ಟ್ ವಾರಂಟ್ ನೀಡಿದ ಕೋರ್ಟ್‌

ದೂರುದಾರರು ಲೈಂಗಿಕ ದೌರ್ಜನ್ಯ ತಾಳಲಾರದೆ 4 ವರ್ಷದ ಹಿಂದೆ ಮನೆ ಕೆಲಸ ಬಿಟ್ಟೆ ಎಂದು ಹೇಳುತ್ತಾರೆ. ಮನೆ ಬಿಟ್ಟು ಬಂದಿದ್ದಕ್ಕೆ ಪೊಲೀಸರನ್ನು ಕಳುಹಿಸಿ ಆಶ್ರಯ ಮನೆ ಖಾಲಿ ಮಾಡಿಸಿದರು ಎಂದು ಆರೋಪಿಸುತ್ತಾರೆ. ತಮ್ಮ ಒಡವೆ, ಬಟ್ಟೆ ಎಲ್ಲವನ್ನೂ ಕಿತ್ತುಕೊಂಡರು ಎಂದು ಹೇಳುತ್ತಾರೆ. ಹಾಗಾದರೆ ನಾಲ್ಕೂವರೆ ವರ್ಷದ ಹಿಂದೆ ಅವರ ಮನೆಯಲ್ಲಿದ್ದಾಗ ನಡೆದ ಅತ್ಯಾಚಾರ, ಲೈಂಗಿಕ ದೌರ್ಜನ್ಯವು ಅವರಿಗೆ ಗೊತ್ತಾಗಲಿಲ್ಲವೇ? ಮನೆ ಖಾಲಿ ಮಾಡಿಸಿದ ಮೇಲೆ ಯಾಕೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆದಿದೆ ಅಂತ ಗೊತ್ತಾಯ್ತಾ ಎಂದು ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

Continue Reading
Advertisement
Phone Tapping
ಕರ್ನಾಟಕ5 mins ago

Phone Tapping: ಎಚ್‌ಡಿಕೆ ಫೋನ್‌ ಟ್ಯಾಪ್‌ ಮಾಡೋಕೆ, ಅವರೇನು ಟೆರರಿಸ್ಟಾ? ಎಂದ ಡಿಕೆಶಿ

Star Fashion
ಫ್ಯಾಷನ್7 mins ago

Star Fashion: ಮಾಲಾಶ್ರೀ ಮಗಳ ಬಿಗ್‌ ಬ್ಲ್ಯಾಕ್‌ ಜುಮ್ಕಾ ಲವ್‌!

Benjamin Netanyhu
ವಿದೇಶ8 mins ago

ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

Legislative Council Election dates fixedVoting on June 13
ರಾಜಕೀಯ12 mins ago

Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Covaxin Safety
ದೇಶ51 mins ago

Covaxin Safety: ಕೊವ್ಯಾಕ್ಸಿನ್‌ನಿಂದ ಅಡ್ಡ ಪರಿಣಾಮ ಎಂದು ಬನಾರಸ್‌ ವಿವಿ ವರದಿ; ವೈದ್ಯ ಸಂಶೋಧನಾ ಸಂಸ್ಥೆ ಆಕ್ಷೇಪ

Food department deletes name from ration card list even though it is alive
ವಿಜಯನಗರ54 mins ago

Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

History Of Ice Cream
ಆಹಾರ/ಅಡುಗೆ56 mins ago

History Of Ice Cream: ಎಲ್ಲರ ನೆಚ್ಚಿನ ಐಸ್‌ಕ್ರೀಮ್‌ ಹುಟ್ಟಿದ್ದು ಹೇಗೆ?

IPL 2024
ಕ್ರೀಡೆ57 mins ago

IPL 2024: ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್​ ಪ್ಲೇ ಆಫ್​ ಪಂದ್ಯಕ್ಕೆ ಐಸಿಸ್‌ ಉಗ್ರರ ಕಾಟ; ಪಂದ್ಯಕ್ಕೂ ಮುನ್ನ ನಾಲ್ವರ ಬಂಧನ

Silver Jewel Trend
ಫ್ಯಾಷನ್1 hour ago

Silver Jewel Trend: ಬಂಗಾರದ ಆಭರಣಗಳಿಗೆ ಸೆಡ್ಡು ಹೊಡೆದ ಸಿಲ್ವರ್‌ ಜ್ಯುವೆಲರಿಗಳು!

Prajwal Revanna Case
ಪ್ರಮುಖ ಸುದ್ದಿ1 hour ago

Prajwal Revanna Case: ನಾನು ಸೇರಿ ಸುಮಾರು 30 ಜನರ ಫೋನ್ ಟ್ಯಾಪ್: ಸರ್ಕಾರದ ವಿರುದ್ಧ ಎಚ್‌ಡಿಕೆ ಬಾಂಬ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌