Isha Gramotsavam: ಸೆ.23ರಂದು ಕೊಯಮತ್ತೂರಿನಲ್ಲಿ ʼಈಶ ಗ್ರಾಮೋತ್ಸವʼದ ಫೈನಲ್ಸ್‌ Vistara News

ಕ್ರೀಡೆ

Isha Gramotsavam: ಸೆ.23ರಂದು ಕೊಯಮತ್ತೂರಿನಲ್ಲಿ ʼಈಶ ಗ್ರಾಮೋತ್ಸವʼದ ಫೈನಲ್ಸ್‌

Isha Gramotsavam: ಈಶ ಗ್ರಾಮೋತ್ಸವದ 15ನೇ ಆವೃತ್ತಿಯಲ್ಲಿ 194 ಗ್ರಾಮೀಣ ಸ್ಥಳಗಳಲ್ಲಿ ಕ್ಲಸ್ಟರ್ ಮತ್ತು ವಿಭಾಗೀಯ ಮಟ್ಟದ ಸ್ಪರ್ಧೆಗಳನ್ನು ನಡೆಸಿದ್ದು, ದಕ್ಷಿಣ ಭಾರತದ ಐದು ರಾಜ್ಯಗಳಿಂದ 60,000ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿದ್ದಾರೆ. ಫೈನಲ್ಸ್‌ ಪಂದ್ಯಗಳು ಕೊಯಮತ್ತೂರಿನಲ್ಲಿ ಸೆ.23ರಂದು ನಡೆಯಲಿವೆ.

VISTARANEWS.COM


on

kabaddi in Isha Gramotsavam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಯಮತ್ತೂರು: ಈಶ ಫೌಂಡೇಶನ್‌ನಿಂದ ಆಯೋಜಿರುವ ಈಶ ಗ್ರಾಮೋತ್ಸವ (Isha Gramotsavam) ಭಾರತದ ಗ್ರಾಮೀಣ ಕ್ರೀಡೆಗಳನ್ನು ವಿಶ್ವಕ್ಕೆ ಪರಿಚಯಿಸಿದೆ. ಈಶ ಗ್ರಾಮೋತ್ಸವ ಅಂತಿಮ ಹಂತಕ್ಕೆ ತಲುಪಿದ್ದು, ಗ್ರಾಮೀಣ ಭಾರತದ ಅತಿದೊಡ್ಡ ಕ್ರೀಡಾಕೂಟದ ಫೈನಲ್ಸ್‌ ಪಂದ್ಯಗಳನ್ನು ಸೆ.23ರಂದು ತಮಿಳುನಾಡಿನ ಕೊಯಮತ್ತೂರಿನ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಬಳಿ ಆಯೋಜಿಸಲಾಗಿದೆ.

ಸದ್ಗುರು ಜಗ್ಗಿ ವಾಸುದೇವ್‌ ಅವರ ಸಾಮಾಜಿಕ ಉಪಕ್ರಮವಾದ ಈಶ ಗ್ರಾಮೋತ್ಸವವು, ಗ್ರಾಮೀಣ ಜನರ ಜೀವನದಲ್ಲಿ ಕ್ರೀಡೋತ್ಸಾಹ ಮತ್ತು ವಿನೋದಶೀಲತೆಯನ್ನು ತರುವ ಗುರಿಯನ್ನು ಹೊಂದಿದ್ದು, ಸೆಪ್ಟೆಂಬರ್ 23 ರಂದು ಕೊಯಮತ್ತೂರಿನಲ್ಲಿ ನಡೆಯುವ ಫೈನಲ್‌ನಲ್ಲಿ ಸದ್ಗುರು ಜಗ್ಗಿ ವಾಸುದೇವ್‌ ಅವರ ಜತೆ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಭಾಗವಹಿಸಿ ಭಾರತದ ಗ್ರಾಮೀಣ ಕ್ರೀಡಾ ಕೌಶಲದ ಪ್ರದರ್ಶನಕ್ಕೆ ಸಾಕ್ಷಿಯಾಗಲಿದ್ದಾರೆ.

womens playing kabaddi

ಗ್ರಾಮೀಣ ಜನರು ಒಟ್ಟಾಗಿ ಸೇರಲು, ಭಾಗವಹಿಸಲು ಮತ್ತು ಅವರ ಜೀವನದಲ್ಲಿ ಕ್ರೀಡೋತ್ಸಾಹ ಮತ್ತು ವಿನೋದಶೀಲತೆಯನ್ನು ತರಲು ಈಶ ಗ್ರಾಮೋತ್ಸವ ಆಯೋಜಿಸಲಾಗಿದೆ. ಆದ್ದರಿಂದ ಇದರಲ್ಲಿ ವೃತ್ತಿಪರರಿಗೆ ಭಾಗವಹಿಸಲು ಅವಕಾಶವಿಲ್ಲ. ದಕ್ಷಿಣ ಭಾರತದ 5 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದಿಂದ 60,000ಕ್ಕೂ ಹೆಚ್ಚು ಆಟಗಾರರು ಈಶ ಗ್ರಾಮೋತ್ಸವದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ | Asian Games 2023 : ಏಷ್ಯನ್​ ಗೇಮ್ಸ್​​​ನಲ್ಲಿ ಭಾರತದ ಸ್ಪರ್ಧಿಗಳ ವೇಳಾಪಟ್ಟಿ ಇಲ್ಲಿದೆ, ಕೆಲವು ಸ್ಪರ್ಧೆಗಳನ್ನು ನೀವು ತಪ್ಪಿಸಿಕೊಳ್ಳಲೇಬಾರದು

ಈಶ ಗ್ರಾಮೋತ್ಸವದ 15ನೇ ಆವೃತ್ತಿಯು, 194 ಗ್ರಾಮೀಣ ಸ್ಥಳಗಳಲ್ಲಿ ಕ್ಲಸ್ಟರ್ ಮತ್ತು ವಿಭಾಗೀಯ ಮಟ್ಟದ ಸ್ಪರ್ಧೆಗಳನ್ನು ನಡೆಸುವ ಮೂಲಕ, ದಕ್ಷಿಣ ಭಾರತದ ಐದು ರಾಜ್ಯಗಳಿಂದ (ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಪುದುಚೇರಿ) 60,000ಕ್ಕೂ ಹೆಚ್ಚು ಆಟಗಾರರ ಭಾಗವಹಿಸುವಿಕೆಗೆ ಸಾಕ್ಷಿಯಾಗಿದೆ. 10,000ಕ್ಕೂ ಹೆಚ್ಚು ಗ್ರಾಮೀಣ ಮಹಿಳೆಯರು – ಬಹುತೇಕ ಗೃಹಿಣಿಯರು ಕಬಡ್ಡಿ ಮತ್ತು ಥ್ರೋಬಾಲ್ನಂತಹ ಆಟಗಳಲ್ಲಿ ಭಾಗವಹಿಸಿದ್ದಾರೆ. ಈ ಮೂಲಕ ಈಶ ಗ್ರಾಮೋತ್ಸವವು ಭಾರತದ ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸುವ ಒಂದು ಶಾಂತ ಕ್ರಾಂತಿಗೆ ಸಾಕ್ಷಿಯಾಗಿದೆ.

ಈಶ ಗ್ರಾಮೋತ್ಸವದ ಹಿಂದಿನ ಸಂಭ್ರಮದ ಮನೋಭಾವದ ಬಗ್ಗೆ ಸದ್ಗುರು ಜಗ್ಗಿ ವಾಸುದೇವ್‌ ಅವರು ಪ್ರತಿಕ್ರಿಯಿಸಿ, “ಈಶ ಗ್ರಾಮೋತ್ಸವವು ಕ್ರೀಡೆಯ ಮೂಲಕ ಆಚರಿಸುವ ಒಂದು ಜೀವನದ ಆಚರಣೆಯಾಗಿದೆ. ಒಂದು ಆಟವು ಎಲ್ಲಾ ಸಾಮಾಜಿಕ ಭಿನ್ನತೆಗಳನ್ನು ಮೀರಿ ಜನರನ್ನು ಒಂದುಗೂಡಿಸಬಹುದು; ಇದು ಕ್ರೀಡೆಯ ಶಕ್ತಿಯಾಗಿದೆ – ಇದು ಆಚರಣೆಯ ಉತ್ಸಾಹದ ಮೂಲಕ ಜಾತಿ, ಧರ್ಮ ಮತ್ತು ಇತರ ಗುರುತುಗಳನ್ನು ಅಳಿಸಬಹುದು” ಎಂದು ತಿಳಿಸಿದ್ದಾರೆ.

“ಇದು ಸ್ಪರ್ಧಾತ್ಮಕ ಕ್ರೀಡಾಪಟುವಾಗುವುದರ ಬಗ್ಗೆ ಅಲ್ಲ, ಜೀವನಕ್ಕಾಗಿ ವಿನೋದಶೀಲರಾಗುವುದರ ಬಗ್ಗೆ. ನೀವು ಸಂಪೂರ್ಣ ಭಾಗವಹಿಸುವಿಕೆ ಮತ್ತು ಒಳಗೊಳ್ಳುವಿಕೆಯೊಂದಿಗೆ ಚೆಂಡನ್ನು ಎಸೆಯಲು ಸಾಧ್ಯವಾದರೆ, ಒಂದು ಚೆಂಡು ಜಗತ್ತನ್ನು ಬದಲಾಯಿಸಬಹುದು. ಸಂಪೂರ್ಣ ಒಳಗೊಳ್ಳುವಿಕೆಯಿಂದ ಆಡುವ ಸಂತೋಷವನ್ನು ನೀವು ತಿಳಿದುಕೊಳ್ಳುವಂತಾಗಲಿ” ಎಂದು ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ವಿಜೇತ ತಂಡಗಳಿಗೆ ಬೃಹತ್‌ ಬಹುಮಾನ

2004ರಿಂದ ನಡೆಸಿಕೊಂಡು ಬರುತ್ತಿರುವ ಈಶ ಗ್ರಾಮೋತ್ಸವದಲ್ಲಿ ಈ ವರ್ಷ, ಪುರುಷರಿಗೆ ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್ ಮತ್ತು ತಮಿಳುನಾಡಿನೊಂದಿಗೆ ಗ್ರಾಮೀಣ ಆಟಗಳನ್ನು ಮತ್ತು ಹೆಚ್ಚುವರಿಯಾಗಿ ಪುರುಷರು ಮತ್ತು ಮಹಿಳೆಯರಿಗಾಗಿ ಕಬಡ್ಡಿಯನ್ನು ಒಳಗೂಡಿಸಲಾಗಿದೆ. ವಾಲಿಬಾಲ್ ಮತ್ತು ಥ್ರೋಬಾಲ್ ವಿಜೇತರು ಕ್ರಮವಾಗಿ 5 ಲಕ್ಷ ಮತ್ತು 2 ಲಕ್ಷ ಮತ್ತು ಕಬಡ್ಡಿಯಲ್ಲಿ ವಿಜೇತರಾದ ಪುರುಷ ಮತ್ತು ಮಹಿಳಾ ತಂಡಗಳು ಕ್ರಮವಾಗಿ 5 ಲಕ್ಷ ಮತ್ತು 2 ಲಕ್ಷ ರೂಪಾಯಿ ಬಹುಮಾನವನ್ನು ಪಡೆಯುತ್ತವೆ. ಸ್ಪರ್ಧಾತ್ಮಕ ಆಟಗಾರರು 55 ಲಕ್ಷ ಮೌಲ್ಯದ ಬೃಹತ್ ಬಹುಮಾನದ ಮೊತ್ತದಿಂದ ಗೆಲ್ಲುವ ಅವಕಾಶವನ್ನೂ ಹೊಂದಿದ್ದಾರೆ.

ಈಶ ಗ್ರಾಮೋತ್ಸವದ ಸಂಘಟನಾ ತಂಡದ ಭಾಗವಾದ ಸ್ವಾಮಿ ನಕುಜ ಪ್ರತಿಕ್ರಿಯಿಸಿ, “ಈಶ ಗ್ರಾಮೋತ್ಸವದ ಒಂದು ವಿಶೇಷ ಅಂಶವೆಂದರೆ ತಂಡದ ಎಲ್ಲಾ ಆಟಗಾರರು ಒಂದೇ ಗ್ರಾಮದವರು. ಇದು ವೃತ್ತಿಪರ ಆಟಗಾರರ ಪಂದ್ಯಾವಳಿಯಲ್ಲ ಆದರೆ, ಪ್ರತಿಯೊಬ್ಬರನ್ನು ಆಡಲು ಪ್ರೋತ್ಸಾಹಿಸುವ ವೇದಿಕೆಯಾಗಿದೆ. ಪ್ರತಿಯೊಬ್ಬರನ್ನೂ ಯಾವುದಾದರೊಂದು ಆಟದಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವುದರಿಂದ ಹಿಡಿದು, ಗ್ರಾಮೀಣ ಆಟಗಳ ಮೋಜನ್ನು ಪುನರುಜ್ಜೀವನಗೊಳಿಸುವುದು ಮತ್ತು ನಶಿಸುತ್ತಿರುವ ಸಾಂಪ್ರದಾಯಿಕ ಕಲಾ ಪ್ರಕಾರಗಳನ್ನು ಪುನರುಜ್ಜೀವನಗೊಳಿಸುವವರೆಗೆ, ಈ ಸಂಪೂರ್ಣ ಉಪಕ್ರಮವನ್ನು ಎಚ್ಚರಿಕೆಯಿಂದ ರಚಿಸಲಾಗಿದೆ. ಇದರಿಂದಾಗಿ ಇಡೀ ಹಳ್ಳಿಯು ಒಂದು ಸಂಭ್ರಮಾಚರಣೆಯಾಗಿ ಒಟ್ಟುಗೂಡುತ್ತದೆ ಮತ್ತು ಗ್ರಾಮೀಣ ಜೀವನದ ಹುರುಪನ್ನು ಮರಳಿ ತರುತ್ತದೆ.” ಎಂದು ಹೇಳಿದ್ದಾರೆ.

mens playing volleyball

ಈಶ ಔಟ್ರೀಚ್‌ನಿಂದ ಆಯೋಜನೆ

ಈಶ ಗ್ರಾಮೋತ್ಸವದ ಹಿಂದಿನ ಆವೃತ್ತಿಗಳು, 8,412 ತಂಡಗಳು ಮತ್ತು ಒಟ್ಟು 1,00,167 ಆಟಗಾರರ ಭಾಗವಹಿಸುವಿಕೆಗೆ ಸಾಕ್ಷಿಯಾಗಿವೆ. ಈಶ ಗ್ರಾಮೋತ್ಸವವನ್ನು ಆಯೋಜಿಸುತ್ತಿರುವ “ಈಶ ಔಟ್ರೀಚ್”, ಕ್ರೀಡೆ ಮತ್ತು ಯುವ ವ್ಯವಹಾರಗಳ ಸಚಿವಾಲಯದಿಂದ, ರಾಷ್ಟ್ರೀಯ ಕ್ರೀಡಾ ಪ್ರಚಾರ ಸಂಸ್ಥೆ (NSPO) ಎಂದು ಗುರುತಿಸಲ್ಪಟ್ಟಿದೆ. ಈಶ ಔಟ್ರೀಚ್ 2018 ರಲ್ಲಿ, ಕ್ರೀಡಾ ಅಭಿವೃದ್ಧಿಗಾಗಿ ರಾಷ್ಟ್ರಪತಿಗಳಿಂದ “ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರ್” ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಇದನ್ನೂ ಓದಿ | Asian Games 2023 : ಏಷ್ಯನ್ ಗೇಮ್ಸ್​ನ ಮೊದಲ ಪಂದ್ಯದಲ್ಲಿಯೇ ದಾಖಲೆ ಬರೆದ ಭಾರತ ಮಹಿಳಾ ಕ್ರಿಕೆಟ್​​ ತಂಡ

womens playing throw ball

ಕ್ರಿಕೆಟ್‌ ದಂತಕಥೆ ಸಚಿನ್ ತೆಂಡೂಲ್ಕರ್, ಒಲಿಂಪಿಕ್ ಪದಕ ವಿಜೇತರಾದ ರಾಜವರ್ಧನ್ ಸಿಂಗ್ ರಾಥೋಡ್ ಮತ್ತು ಕರ್ಣಂ ಮಲ್ಲೇಶ್ವರಿ ಅವರಂತಹ ಕ್ರೀಡಾ ಗಣ್ಯರು ಈ ಹಿಂದೆ ಕ್ರೀಡಾ ಉತ್ಸವದ ಫೈನಲ್‌ನಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು. ಮಿಥಾಲಿ ರಾಜ್, ಪಿವಿ ಸಿಂಧು, ವೀರೇಂದ್ರ ಸೆಹ್ವಾಗ್, ಶಿಖರ್ ಧವನ್ ಈಶ ಗ್ರಾಮೋತ್ಸವಕ್ಕೆ ಬೆಂಬಲ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

IND vs SA: ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ವಿಳಂಬ

ದಕ್ಷಿಣ ಆಫ್ರಿಕಾ(IND vs SA) ಮತ್ತು ಭಾರತ ನಡುವಣ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ್ದು ಟಾಸ್​ ಮತ್ತು ಪಂದ್ಯ ಆರಂಭ ವಿಳಂಬಗೊಳ್ಳಲಿದೆ.

VISTARANEWS.COM


on

South Africa vs India 1
Koo

ಡರ್ಬಾನ್​: ದಕ್ಷಿಣ ಆಫ್ರಿಕಾ(IND vs SA) ಮತ್ತು ಭಾರತ ನಡುವಣ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ್ದು ಟಾಸ್​(Toss delayed due to rain) ಮತ್ತು ಪಂದ್ಯ ಆರಂಭ ವಿಳಂಬಗೊಳ್ಳಲಿದೆ. ಸದ್ಯಕ್ಕೆ ಡರ್ಬಾನ್​ನಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ತಿಳಿದುಬಂದಿದೆ. ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್​ ಹಿನ್ನಲೆ ಇತ್ತಂಡಗಳಿಗೂ ಈ ಸರಣಿ ಪ್ರಮುಖವಾಗಿದೆ.

ಕವರ್​ನಿಂದ ಮುಚ್ಚಿದ ಮೈದಾನ

ಸದ್ಯ ಡರ್ಬಾನ್​ನ ಕಿಂಗ್ಸ್‌ಮೀಡ್ ಮೈದಾನವನ್ನು ಕವರ್​ನಿಂದ ಸಂಪೂರ್ಣವಾಗಿ ಮುಚ್ಚಲಾಗಿದೆ. ಆಟಗಾರರೆಲ್ಲ ಡ್ರೆಸಿಂಗ್​ ರೂಮ್​ನಲ್ಲಿ ಮಳೆ ಯಾವಾಗ ಬಿಡುತ್ತದೆ ಎಂದು ಕಾದು ಕುಳಿತಿದ್ದಾರೆ. ಇದು ಐಸಿಸಿ ಅಡ್ಡಿಯಲ್ಲಿ ನಡೆಯುವ ಟೂರ್ನಿಯಾದ ಕಾರಣ ನಿಗದಿತ ಸಮಯಕ್ಕೆ ಮಳೆ ನಿಂತು ಆಟ ಪ್ರಾರಂಭವಾಗದಿದ್ದರೆ ಪಂದ್ಯವನ್ನು ರದ್ದು ಎಂದು ಘೋಷಿಸಲಾಗುತ್ತದೆ.

ಟಿ20 ಮುಖಾಮುಖಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ಇದುವರೆಗೆ 24 ಟಿ20 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ಭಾರತವು 13 ಪಂದ್ಯಗಳನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ 10 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಒಂದು ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ದಕ್ಷಿಣ ಆಫ್ರಿಕಾದಲ್ಲಿ, ‘ಮೆನ್ ಇನ್ ಬ್ಲೂ’ ಏಳು ಪಂದ್ಯಗಳನ್ನು ಆಡಿ ಐದರಲ್ಲಿ ಗೆದ್ದಿದ್ದರೆ, ಆತಿಥೇಯರು ಎರಡರಲ್ಲಿ ಗೆದ್ದಿದ್ದಾರೆ. ಬಲಾಬಲದ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿದೆ.

ಪಿಚ್​ ರಿಪೋರ್ಟ್

ಡರ್ಬಾನ್​ನ ಕಿಂಗ್ಸ್‌ಮೀಡ್ ಪಿಚ್ ಮೈದಾನದಲ್ಲಿ ಆಡಿದ 18 ಪಂದ್ಯಗಳಲ್ಲಿ, ವೇಗದ ಬೌಲರ್‌ಗಳು 23.84 ಸರಾಸರಿಯಲ್ಲಿ 162 ವಿಕೆಟ್‌ಗಳನ್ನು ಪಡೆದರೆ, ಸ್ಪಿನ್ನರ್‌ಗಳು 18 ಪಂದ್ಯಗಳಲ್ಲಿ 26.80 ಸರಾಸರಿಯಲ್ಲಿ 42 ವಿಕೆಟ್‌ಗಳನ್ನು ಪಡೆದಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ತಂಡ ಒಂಬತ್ತು ಗೆಲುವು ಸಾಧಿಸಿದರೆ, ಎರಡನೇ ಬ್ಯಾಟಿಂಗ್ ನಡೆಸಿದ ತಂಡ ಎಂಟು ಗೆಲುವುಗಳನ್ನು ಸಾಧಿಸಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಡರ್ಬನ್‌ನಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 143 ಆಗಿದೆ.

ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಮೊದಲ ಬಾರಿ ಆಡಿದ ತಂಡವೆಂದರೆ ಅದು ಭಾರತ ಮತ್ತು ದಕ್ಷಿಣ ಆಫ್ರಿಕಾ. 2007ರಲ್ಲಿ ನಡೆದ ಚೊಚ್ಚಲ ಅಂತಾರಾಷ್ಟೀಯ ಟಿ20 ಪಂದ್ಯದಲ್ಲಿ ವೀರೇಂದ್ರ ಸೆಹವಾಗ್​ ಸಾರಥ್ಯದ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 82 ರನ್​ಗಳಿಂದ ಮಣಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ್ದ ಭಾರತ 6 ವಿಕೆಟ್​ಗೆ 169 ರನ್​ ಬಾರಿಸಿತ್ತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಕೇವಲ 87 ರನ್​ಗೆ ಸರ್ವಪತನ ಕಂಡಿತ್ತು.

ಸಿಕ್ಕ ಅವಕಾಶ ಬಳಿಸಿಕೊಳ್ಳಿ

ಈಗಾಗಲೇ ಬಿಸಿಸಿಐ ಆಯ್ಕೆ ಸಮಿತಿಯ ಇಬ್ಬರು ಅಧಿಕಾರಿಗಳನ್ನು ದಕ್ಷಿಣ ಆಫ್ರಿಕಾಗೆ ಕಳುಹಿಸಿದ್ದು ಆಟಗಾರರ ಎಲ್ಲ ಪ್ರದರ್ಶನದ ಬಗ್ಗೆ ಮಾಹಿತಿ ಸಂಗ್ರಹಿಸಲು ಸೂಚಿಸಿದೆ. ಹೀಗಾಗಿ ವಿಶ್ವಕಪ್​ನಲ್ಲಿ ಸ್ಥಾನ ಪಡೆಯಬೇಕಿದ್ದರೆ. ಯುವ ಆಟಗಾರರು ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ. ವಿಶ್ವಕಪ್​ಗೂ ಮುನ್ನ ಐಪಿಎಲ್​ ಕೂಡ ನಡೆಯುದರಿಂದ ಇಲ್ಲಿಯೂ ಕೆಲ ಉದಯೋನ್ಮುಖ ಆಟಗಾರು ಬೆಳಕಿಗೆ ಬರುತ್ತಾರೆ. ಆದ್ದರಿಂದ ಈಗ ತಂಡದಲ್ಲಿ ಇದ್ದ ಆಟಗಾರರು ತಮ್ಮ ಶ್ರೇಷ್ಠ ಪ್ರದರ್ಶನ ತೋರಿ ಆಯ್ಕೆ ಸಮಿತಿಯ ಗಮನಸೆಳೆಯಬೇಕಿದೆ.

Continue Reading

ಕ್ರಿಕೆಟ್

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

ಇಂಗ್ಲೆಂಡ್ ಆಟಗಾರ್ತಿ ಕೇಟ್ ಕ್ರಾಸ್ (Kate Cross) ಅವರನ್ನು ಆರ್​ಸಿಬಿ ತಂಡ ಖರೀದಿ ಮಾಡಿದ್ದು ಆರ್​ಸಿಬಿ ಅಭಿಮಾನಿಗಳಿಗೆ ಬೇಸರ ತಂದಿದೆ.

VISTARANEWS.COM


on

Kate Cross reveals ‘soft spot for RCB’ after bagging deal
Koo

ಬೆಂಗಳೂರು: ಮುಂದಿನ ವರ್ಷ ನಡೆಯುವ ಮಹಿಳಾ ಪ್ರೀಮಿಯರ್ ಲೀಗ್(Women’s Premier League) 2024ರ ಆಟಗಾರ್ತಿಯರ ಹರಾಜು(WPL Auction 2024) ಪ್ರಕ್ರಿಯೆ ಈಗಾಗಲೇ ಮುಕ್ತಾಯ ಕಂಡಿದೆ. ಶನಿವಾರ (ಡಿ.9) ಮುಂಬೈಯಲ್ಲಿ ಹರಾಜು ಪ್ರಕ್ರಿಯೆ ನಡೆದಿತ್ತು. ಎಲ್ಲ 5 ಫ್ರಾಂಚೈಸಿಗಳು ಕೂಡ ತಮಗೆ ಬೇಕಿದ್ದ ಆಟಗಾರ್ತಿಯನ್ನು ಹರಾಜಿನಲ್ಲಿ ಕೊಂಡುಕೊಂಡಿದೆ. ಆದರೆ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಕಟ್ಟರ್‌ ಅಭಿಮಾನಿಯಾಗಿರುವ(CSK fan Kate Cross) ಇಂಗ್ಲೆಂಡ್ ಆಟಗಾರ್ತಿ ಕೇಟ್ ಕ್ರಾಸ್ (Kate Cross) ಅವರನ್ನು ಆರ್​ಸಿಬಿ ತಂಡ ಖರೀದಿ ಮಾಡಿದ್ದು ಆರ್​ಸಿಬಿ ಅಭಿಮಾನಿಗಳಿಗೆ ಬೇಸರ ತಂದಿದೆ.

ಮಿನಿ ಹರಾಜಿನಲ್ಲಿ ಇಂಗ್ಲೆಂಡ್​ ತಂಡದ ಆಲ್​ರೌಂಡರ್​ ಆಗಿರುವ ಕೇಟ್​ ಕ್ರಾಸ್​ ಅವರನ್ನು ಆರ್​ಸಿಬಿ 30 ಲಕ್ಷ ರೂ. ಖರೀದಿ ಮಾಡಿದೆ. ಇದರ ಬೆನ್ನಲ್ಲೇ ಅವರು ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಆರ್​ಸಿಬಿ ಸೇರಿದಕ್ಕೆ ಸಂತಸಗೊಂಡಿದ್ದೇನೆ. ಆದರೂ ನಾನು ಚೆನ್ನೈ ಸೂಪರ್ ಕಿಂಗ್ಸ್​ನ ಅಪ್ಪಟ್ಟ ಅಭಿಮಾನಿಯಾಗಿಯೇ ಮುಂದುವರಿಯುತ್ತೇನೆ ಎಂದು ಬರೆದಿದ್ದಾರೆ. ಇದು ಆರ್​ಸಿಬಿ ಅಭಿಮಾನಿಗಳಿಗೆ ಕೆರಳಿಸುವಂತೆ ಮಾಡಿದೆ.

​ಐಪಿಎಲ್​ನ ಬದ್ಧ ಎದುರಾಳಿ ತಂಡಗಳೆಂದರೆ ಅದು ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ರಾಯಲ್​ ಚಾಲೆಂಜರ್ಸ್ ಬೆಂಗಳೂರು. ಇತ್ತಂಡಗಳ ಪಂದ್ಯ ಬಂತೆಂದರೆ ಸಾಕು ಇಂಡೋ-ಪಾಕ್​ ಪಂದ್ಯದಂತೆ ಅಭಿಮಾನಿಗಳು ಈ ಪಂದ್ಯವನ್ನು ನೋಡಲು ಕಾತರಗೊಳ್ಳುತ್ತಾರೆ. ಅಲ್ಲದೆ ಪಂದ್ಯದ ಬಳಿಕ ಅಭಿಮಾನಿಗಳು ಹಲವು ಬಾರಿ ಹೊಡೆದಾಟ ಕೂಟ ನಡೆಸಿದ ಹಲವು ನಿದರ್ಶನಗಳಿಗೆ. ಹೀಗಿರುವಾಗ ಆರ್​ಸಿಬಿ ಸೇರಿಯೂ ಚೆನ್ನೈ ತಂಡದ ಅಭಿಮಾನಿ ಎಂದು ಕೇಟ್ ಕ್ರಾಸ್ ಹೇಳಿರುವುದು ಆರ್​ಸಿಬಿ ಫ್ಯಾನ್ಸ್​ ಪಿತ್ತ ನೆತ್ತಿಗೇರುವಂತೆ ಮಾಡಿದೆ.

ಬೆಂಚ್​​ ಕಾಯಿಸಿ ಎಂದ ನೆಟ್ಟಿಗರು

ಚೆನ್ನೈ ಅಭಿಮಾನಿಯಾಗಿರುವ ಕೇಟ್ ಕ್ರಾಸ್ ಅವರನ್ನು ಆಡುವ ಬಳಗದಲ್ಲಿ ಅವಕಾಶ ನೀಡದೆ ಅವರನ್ನು ಟೂರ್ನಿಯುದ್ದಕ್ಕೂ ಬೆಂಚ್​ ಕಾಯಿಸಿ ಎಂದು ನೆಟ್ಟಿಗರೊಬ್ಬರು ಆರ್​ಸಿಬಿ ಫ್ರಾಂಚೈಸಿಗೆ ಸಲಹೆ ನೀಡಿದ್ದಾರೆ. ಇನ್ನು ಕೆಲ ಅಭಿಮಾನಿಗಳು ಆರ್​ಸಿಬಿ ಫ್ರಾಂಚೈಸಿ ಮೇಲೆಯ ಕಿಡಿಕಾರಿದ್ದಾರೆ. ಈ ಹಿಂದೆಯೇ ಕೇಟ್ ಕ್ರಾಸ್ ಅವರು ಚೆನ್ನೈ ಸೂಪರ್​ ಕಿಂಗ್ಸ್​ ಅಭಿಮಾನಿ ಎನ್ನುವುದನ್ನು ತಿಳಿದಿದ್ದರೂ ಕೂಡ ಅವರನ್ನು ಖರೀದಿ ಮಾಡಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಟ್ ಕ್ರಾಸ್ ಕಳದ ಕೆಲ ವರ್ಷಗಳಿಂದ ಐಪಿಎಲ್​ ಟೂರ್ನಿ ಆರಂಭವಾಗುವ ಸಂದರ್ಭದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಜರ್ಸಿ ಧರಿಸಿ ತಂಡಕ್ಕೆ ಬೆಂಬಲ ಸೂಚಿಸುತ್ತಲೇ ಬಂದಿದ್ದರು. ಇದರ ಫೋಟೊಗಳು ಕೂಡ ವೈರಲ್​ ಆಗಿತ್ತು.

ಇದನ್ನೂ ಓದಿ RCB WPL 2024: ಬಲಿಷ್ಠ ತಂಡ ಕಟ್ಟಿದ ಮಹಿಳಾ ಆರ್​ಸಿಬಿ; ಆಟಗಾರ್ತಿಯರ ಫುಲ್​ ಲೀಸ್ಟ್​ ಇಲ್ಲಿದೆ 

ಆರ್​ಸಿಬಿ ತಂಡ

ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರಿ, ಹೀದರ್ ನೈಟ್, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ, ಸೋಫಿ ಡಿವೈನ್, ಜಾರ್ಜಿಯಾ ವೇರ್ಹ್ಯಾಮ್, ಕೇಟ್ ಕ್ರಾಸ್, ಏಕ್ತಾ ಬಿಶ್ತ್, ಶುಭಾ ಸತೀಶ್, ಎಸ್ ಮೇಘನಾ, ಸಿಮ್ರಾನ್ ಬಹದ್ದೂರ್, ಸೋಫಿ ಮೊಲಿನೆಕ್ಸ್.

Continue Reading

ಕ್ರಿಕೆಟ್

IPL 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​; ಐಪಿಎಲ್​ ಆರಂಭಕ್ಕೆ ಡೇಟ್​ ಫಿಕ್ಸ್!​

ಶನಿವಾರ ಮುಂಬೈಯಲ್ಲಿ ನಡೆದಿದ್ದ ಮಹಿಳಾ ಪ್ರೀಮಿಯರ್​ ಲೀಗ್​ನ ಮಿನಿ ಹರಾಜು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಯ್​ ಶಾ ಅವರು ಪುರುಷರ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ.​

VISTARANEWS.COM


on

ipl fans
Koo

ಮುಂಬಯಿ: ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024)ರ ಆಟಗಾರರ ಮಿನಿ ಹರಾಜು(IPL Auction 2024) ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಆದರೆ ಟೂರ್ನಿ ಯಾವಾಗ ಆರಂಭವಾಗಲಿದೆ ಎನ್ನುವುದು ಕ್ರಿಕೆಟ್​ ಅಭಿಮಾನಗಳ ಚಿಂತೆಯಾಗಿತ್ತು. ಇದಕ್ಕೆ ಈ ಉತ್ತರ ಸಿಕ್ಕಿದೆ. ಟೂರ್ನಿ ಆರಂಭದ ಸುಳಿವನ್ನು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(jay shah) ಬಿಟ್ಟುಕೊಟ್ಟಿದ್ದಾರೆ.

ಹೌದು, ಶನಿವಾರ ಮುಂಬೈಯಲ್ಲಿ ನಡೆದಿದ್ದ ಮಹಿಳಾ ಪ್ರೀಮಿಯರ್​ ಲೀಗ್​ನ ಮಿನಿ ಹರಾಜು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಯ್​ ಶಾ ಅವರು ಪುರುಷರ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ.​

ಪ್ರತಿ ವರ್ಷ ಐಪಿಎಲ್​ ಆರಂಭವಾಗುವುದು ಮಾರ್ಚ್​ ಅಂತಿಮ ವಾರದಲ್ಲಿ. ಮೇ ತನಕ ಪಂದ್ಯಾವಳಿಗಳು ಸಾಗುತ್ತದೆ. ಆದರೆ ಈ ಬಾರಿ 2024 ಲೋಕಸಭಾ ಚುನಾವಣೆ ಇದೇ ಸಮಯದಲ್ಲಿ ಇರುವುದರಿಂದ ಟೂರ್ನಿಯನ್ನು ಭಾರತದಲ್ಲಿ ನಡೆಸುವುದು ಕಷ್ಟ. ಹೀಗಾಗಿ ಐಪಿಎಲ್​ ಅಭಿಮಾನಿಗಳಿಗೆ ಟೂರ್ನಿ ಆರಂಭದ ಬಗ್ಗೆ ಹಲವು ಗೊಂದಲ ಕಾಡಿತ್ತು. ಇದೀಗ ಜಯ್​ ಶಾ ಅವರು ಮಾರ್ಚ್ ಕೊನೆಯ ವಾರದಲ್ಲಿ ಐಪಿಎಲ್ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆದರೆ ದಿನಾಂಕ ಮತ್ತು ಈ ಟೂರ್ನಿಯನ್ನು ಎಲ್ಲಿ ನಡೆಸಲಾಗುವುದು ಎನ್ನುವ ಅಧಿಕೃತ ಮಾಹಿತಿಯನ್ನು ನೀಡಿಲ್ಲ.

ಈ ಹಿಂದೆಯೂ ವಿದೇಶದಲ್ಲಿ ನಡೆದಿತ್ತು ಟೂರ್ನಿ

2009ರಲ್ಲಿ ಮಹಾಚುನಾವಣೆಯ ಕಾರಣದಿಂದ ಇಡೀ ಕೂಟವನ್ನು ದಕ್ಷಿಣ ಆಫ್ರಿಕಾದಲ್ಲಿ ನಡೆಸಲಾಗಿತ್ತು. ಹಾಗೆಯೇ 2014ರಲ್ಲಿಯೂ ಒಂದು ಹಂತದ ಪಂದ್ಯಗಳು ಯುಎಇಯಲ್ಲಿ ನಡೆದಿದ್ದವು. ಆದರೆ ಈ ಬಾರಿ ಬಿಸಿಸಿಐ ಸಂಪೂರ್ಣವಾಗಿ ಟೂರ್ನಿಯನ್ನು ವಿದೇಶದಲ್ಲಿ ನಡೆಸುವುದು ಕಷ್ಟ ಸಾಧ್ಯ. ಚುನಾವಣೆಯ ದಿನಾಂಕ ಘೋಷಣೆಯಾದ ಬಳಿಕ ವೇಳಾಪಟ್ಟಿಯನ್ನು ಸಿದ್ಧಪಡಿಸಿ ಒಂದು ಹಂತದ ಪಂದ್ಯಗಳನ್ನು ವಿದೇಶದಲ್ಲಿ ನಡೆಸುವ ಸಾಧ್ಯತೆ ಇದೆ. ಆದರೆ ಈ ತಾಣ ಯಾವುದೆಂಬುದು ಕುತೂಹಲ. ಸದ್ಯದ ಪ್ರಕಾರ ಬಿಸಿಸಿಐ ಯುಎಇಯಲ್ಲಿ ನಡೆಸುವ ಸಾಧ್ಯತೆ ಅಧಿಕ. ಏಕೆಂದರೆ ಪ್ರಯಾಣದ ದೃಷ್ಟಿಯಲ್ಲಿ ಹತ್ತಿರವಿರುವುದರಿಂದ ಯುಎಇಯನ್ನು ಮೊದಲ ಆಧ್ಯತೆಯಾಗಿ ಆಯ್ಕೆ ಮಾಡಿಕೊಳ್ಳಬಹುದು.

ಇದನ್ನೂ ಓದಿ IPL 2024 : ಹರಾಜಿನಲ್ಲಿ ಬೇಡಿಕೆ ಪಡೆಯಲಿರುವ ಆರ್​ಸಿಬಿಯ ಮೂವರು ಮಾಜಿ ಆಟಗಾರರು ಇವರು

1166 ಆಟಗಾರರು ಹೆಸರು ನೋಂದಣಿ

ಈ ಬಾರಿಯ ಐಪಿಎಲ್​ ಮಿನಿ ಹರಾಜಿಗೆ 1,166 ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ ಎಂದು ವರದಿಗಳು ಸೂಚಿಸಿವೆ. ಈ ಪಟ್ಟಿಯಲ್ಲಿ 212 ಅಂತಾರಾಷ್ಟ್ರೀಯ ಪಂದ್ಯವಾಡಿದವರು , 909 ಅಂತಾರಾಷ್ಟ್ರೀಯ ಕ್ರಿಕೆಟ್ ಆಡದವರು ಮತ್ತು 45 ಅಸೋಸಿಯೇಟ್ ಆಟಗಾರರು ಇದ್ದಾರೆ. ಈ ಪೈಕಿ ವಿದೇಶಿ ಆಟಗಾರರ ಸಂಖ್ಯೆ 336 ಎಂದು ತಿಳಿದುಬಂದಿದೆ.

ಫ್ರಾಂಚೈಸಿಗಳಿಗೆ ಸೂಚನೆ

ಹರಾಜು ರಿಜಿಸ್ಟರ್​ನಲ್ಲಿ ಪಟ್ಟಿ ಮಾಡದ ಹೆಚ್ಚುವರಿ ಆಟಗಾರರ ವಿನಂತಿಗಳೊಂದಿಗೆ ಪ್ರತಿಕ್ರಿಯಿಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಫ್ರಾಂಚೈಸಿಗಳನ್ನು ವಿನಂತಿಸಿದೆ. ವಿನಂತಿಸಿದ ಆಟಗಾರರು ಅರ್ಹರಾಗಿದ್ದರೆ ಮತ್ತು ಆಸಕ್ತಿ ಹೊಂದಿದ್ದರೆ ಸ್ವಯಂಚಾಲಿತವಾಗಿ ಹರಾಜಿನಲ್ಲಿ ಸೇರಿಕೊಳ್ಳಲಿದ್ದಾರೆ. ಹರಾಜಿನಲ್ಲಿ ಸೇರಿಸಲು ಬಯಸುವ ಆಟಗಾರರ ಪಟ್ಟಿಯೊಂದಿಗೆ ಪ್ರತಿಕ್ರಿಯಿಸಲು ಫ್ರಾಂಚೈಸಿಗಳಿಗೆ ಸೂಚನೆ ನೀಡಲಾಗಿದೆ. ಕೇವಲ 77 ಸ್ಲಾಟ್​ಗಳನ್ನು ಮಾತ್ರ ಭರ್ತಿ ಮಾಡಬೇಕಾಗಿದೆ, ಅದರಲ್ಲಿ ಗರಿಷ್ಠ 30 ವಿದೇಶಿ ಆಟಗಾರರು ಇರಬಹುದು. ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ ಕನಿಷ್ಠ 18 ಹಾಗೂ ಗರಿಷ್ಠ 25 ಆಟಗಾರರಿಗೆ ಮಾತ್ರ ಅವಕಾಶ ಇರಲಿದೆ.

Continue Reading

ಕ್ರಿಕೆಟ್

Rohit Sharma: ಜಯ್​ ಶಾ ಕೈಯಲ್ಲಿದೆ ರೋಹಿತ್​ ಟಿ20 ವಿಶ್ವಕಪ್ ಭವಿಷ್ಯ!

ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮ ಅವರ ಸ್ಥಾನದ ಬಗ್ಗೆ ಈಗಲೇ ಭರವಸೆ ನೀಡಲಾಗುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಖಚಿತಪಡಿಸಿದ್ದಾರೆ.

VISTARANEWS.COM


on

rohit sharma jay shah
Koo

ಮುಂಬಯಿ: ಭಾರತ ಕ್ರಿಕೆಟ್​ ತಂಡ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಸೋಲು ಕಂಡ ಬಳಿಕ ಎಲ್ಲಡೆ ಚರ್ಚೆಯಾಗುತ್ತಿರುವ ವಿಚಾರವೆಂದರೆ, ವಿರಾಟ್​ ಕೊಹ್ಲಿ(virat kohli) ಮತ್ತು ರೋಹಿತ್​ ಶರ್ಮ(Rohit Sharma) ಅವರು 2024ರ ಟಿ20 ವಿಶ್ವಕಪ್​ನಲ್ಲಿ(T20 World Cup 2024) ಆಡಲಿದ್ದಾರಾ ಎನ್ನುವುದು. ಇದೀಗ ರೋಹಿತ್​ ಶರ್ಮ ಅವರ ಟಿ20 ಭವಿಷ್ಯದ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಹೇಳಿಕೆಯೊಂದನ್ನು ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಬಿಸಿಸಿಐ(BCCI) ಮುಂದಿನ ವಾರ ಕೊಹ್ಲಿ ಮತ್ತು ರೋಹಿತ್(Virat Kohli-Rohit Sharma)​ ಜತೆ ತಮ್ಮ ಟಿ20 ಕ್ರಿಕೆಟ್​ ಭವಿಷ್ಯದ ಬಗ್ಗೆ ಚರ್ಚಿಸಿ ಸ್ಪಷ್ಟ ನಿರ್ಧಾರವೊಂದನ್ನು ಕೈಗೊಳ್ಳಲಿದೆ ಎಂದು ವರದಿಯಾಗಿತ್ತು. ಆದರೆ ಇದೀಗ ಹೇಳಿಕೆ ನೀಡಿರುವ ಜಯ್​ ಶಾ, ‘ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮ ಅವರ ಸ್ಥಾನದ ಬಗ್ಗೆ ಈಗಲೇ ಭರವಸೆ ನೀಡಲಾಗುವುದಿಲ್ಲ’ ಎಂದು ಖಚಿತಪಡಿಸಿದ್ದಾರೆ. ಪಿಟಿಐ ಜತೆಗಿನ ಸಂದರ್ಶನದಲ್ಲಿ ಅವರು ಈ ವಿಚಾರವನ್ನು ತಿಳಿಸಿದ್ದಾರೆ.

ಟಿ20 ವಿಶ್ವಕಪ್​ ಮುಂದಿನ ವರ್ಷ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎ ಆತಿಥ್ಯದಲ್ಲಿ ನಡೆಯಲಿದೆ. ಸದ್ಯದ ಪ್ರಕಾರ ಈ ಟೂರ್ನಿ ಜೂನ್​ನಲ್ಲಿ ನಡೆಯುವ ಸಾಧ್ಯತೆ ಇದೆ. “ಟಿ20 ವಿಶ್ವಕಪ್​ಗೂ ಮುನ್ನ ನಮ್ಮ ತಂಡ ಐಪಿಎಲ್ ಮತ್ತು ಅಫಘಾನಿಸ್ತಾನ ವಿರುದ್ಧ ಸರಣಿ ಟಿ20 ಸರಣಿಯನ್ನಾಡಲಿದೆ. ಹೀಗಾಗಿ ಇಲ್ಲಿ ಆಟಗಾರರು ನೀಡುವ ಪ್ರದರ್ಶನದ ಮೇಲೆ ವಿಶ್ವಕಪ್​ ಭವಿಷ್ಯ ನಿರ್ಧಾರವಾಗಲಿದೆ” ಎಂದು ಹೇಳುವ ಮೂಲಕ ಜಯ್​ ಶಾ ಅವರು ಹಿರಿಯ ಆಟಗಾರರಿಗೆ ವಿಶ್ವಕಪ್​ ಆಯ್ಕೆಯ ಸ್ಪಷ್ಟ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ ದ್ರಾವಿಡ್​ ಕೋಚಿಂಗ್​ ನಿರ್ಧಾರದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಜಯ್ ಶಾ

ವಿಶ್ವಕಪ್​ ಬಳಿಕ ಟಿ20 ಆಡಿಲ್ಲ

2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸೆಮಿಫೈನಲ್​ನಲ್ಲಿ ನಿರ್ಗಮಿಸಿತ್ತು. ರೋಹಿತ್​ ಶರ್ಮ ಸಾರಥ್ಯದಲ್ಲಿ ಭಾರತ ತಂಡ ಕಣಕ್ಕಿಳಿದಿತ್ತು. ಆದರೆ ಈ ಸೋಲಿನ ಬಳಿಕ ರೋಹಿತ್ ಇದುವರೆಗೂ ಒಂದೇ ಒಂದು ಟಿ20 ಪಂದ್ಯವನ್ನು ಕೂಡ ಆಡಿಲ್ಲ. ಅಂದಿನಿಂದಲೂ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಜತೆಗೆ ಯುವ ಆಟಗಾರರೇ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಮುಂದಿನ ಟಿ20 ವಿಶ್ವಕಪ್​ ಟೂರ್ನಿಯಲ್ಲೂ ರೋಹಿತ್ ಸೇರಿ ಕೆಲ ಹಿರಿಯ ಆಟಗಾರರು ಆಡುವುದು ಬಹುತೇಕ ಅನುಮಾನ ಎನ್ನಲಾಗಿದೆ.

ರೋಹಿತ್​ಗೂ ಮನಸ್ಸಿಲ್ಲ

ಇನ್ನೊಂದು ಮೂಲಗಳ ಪ್ರಕಾರ ರೋಹಿತ್​ ಶರ್ಮ ಮತ್ತು ವಿರಾಟ್​ ಕೊಹ್ಲಿ ಟಿ20 ಕ್ರಿಕೆಟ್​ನಿಂದ ಈಗಾಗಲೇ ದೂರ ಉಳಿಯಲು ನಿರ್ಧರಿಸಿದ್ದು ಕೇವಲ ಟೆಸ್ಟ್​ ಮತ್ತು ಏಕದಿನ ಕ್ರಿಕೆಟ್​ಗೆ ಮಾತ್ರ ಗಮನ ನೀಡಲು ನಿರ್ಧರಿಸಿರುವುದಾಗಿ ವರದಿಯೊಂದು ತಿಳಿಸಿದೆ. ಏಕದಿನ ವಿಶ್ವಕಪ್​ ಸೋಲಿನ ಬಳಿಕವೇ ಉಭಯ ಆಟಗಾರರು ಈ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಉಭಯ ಆಟಗಾರರು ಈ ವಿಚಾರವನ್ನು ಅಧಿಕೃತವಾಗಿ ಎಲ್ಲಿಯೂ ಇದುವರೆಗೆ ಹೇಳಿಲ್ಲ. ಕೆಲ ದಿನಗಳಲ್ಲಿ ಈ ನಿರ್ಧಾರ ಪ್ರಕಟಿಸಿದರೂ ಅಚ್ಚರಿಯಿಲ್ಲ.

Continue Reading
Advertisement
Reliance Retail launches beauty retail store 'Tira' in Bengaluru
ದೇಶ1 min ago

Reliance Retail: ಯಲಹಂಕದಲ್ಲಿ ರಿಲಯನ್ಸ್ ರೀಟೇಲ್‌ನ ‘ಟಿರಾ’ ಮಳಿಗೆ ಆರಂಭ

South Africa vs India 1
ಕ್ರಿಕೆಟ್20 mins ago

IND vs SA: ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ವಿಳಂಬ

Shri Ram Janmabhoomi Mandir carvings are wonderful
ದೇಶ25 mins ago

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಅದ್ಭುತ ಕಲಾಕೃತಿಗಳು!

Bus-jeep accident
ಉಡುಪಿ31 mins ago

Road Accident: ಕಾರ್ಕಳ ಬಳಿ ಖಾಸಗಿ ಬಸ್‌-ಜೀಪ್ ನಡುವೆ ಭೀಕರ ಅಪಘಾತ; 12 ಮಂದಿಗೆ ಗಂಭೀರ ಗಾಯ

Killers who killed lawyer for property in kalaburagi
ಕರ್ನಾಟಕ55 mins ago

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!

air india
ಉದ್ಯೋಗ56 mins ago

Job Alert: ಏರ್‌ ಇಂಡಿಯಾದಲ್ಲಿದೆ ಉದ್ಯೋಗಾವಕಾಶ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

man accused of murder wins acquittal after studying law and fighting own Case
ದೇಶ60 mins ago

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Kate Cross reveals ‘soft spot for RCB’ after bagging deal
ಕ್ರಿಕೆಟ್1 hour ago

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

Mysore people
ಕರ್ನಾಟಕ1 hour ago

Congress Guarantee: ಸಿಎಂ ಸಿದ್ದರಾಮಯ್ಯ ತವರಲ್ಲೇ ಸಿಗದ ಗ್ಯಾರಂಟಿ ಯೋಜನೆಗಳು; ಸ್ಲಂ ನಿವಾಸಿಗಳ ಪರದಾಟ

Winter Food Tips
ಆಹಾರ/ಅಡುಗೆ1 hour ago

Winter Food Tips: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವ ದೇಸೀ ಸಿಹಿತಿಂಡಿಗಳಿವು!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ4 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ6 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ14 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌